ಅಥವಾ

ಒಟ್ಟು 116 ಕಡೆಗಳಲ್ಲಿ , 12 ವಚನಕಾರರು , 21 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಂಗಮಕೆ ಜನನ ಮರಣವುಂಟೆ ? ಸಂಗಯ್ಯ ಸಂಗದೋಷವು. ನಾನು ಎಂದ ಕಾರಣದಿಂದ ನರಕಪ್ರಾಪ್ತಿ. ಭೃಂಗ ಪುಷ್ಪದ ಕುಸುಮಕ್ಕೆರಗುವುದಲ್ಲದೆ ಕೇಸರಿಗೆರಗುವುದೆ ? ಬಂಗಾರ ಮಣ್ಣಿಂದ ಪುಟ್ಟಿತ್ತು ಮಣ್ಣ ಕೂಡುವುದೆ ? ಹಿಂಗಡಿಸಬಹುದೆ ತ್ರಿವಿಧವ ? ವಿಷ ಪಾತಕವ ಶೃಂಗಾರಕ್ಕೆ ಕಟ್ಟಿಬಿಡುವ ಸಂಬಂಧಿಗಳಿಗೆ ಕಷ್ಟವೆಯಟ್ಟಿತು ಕಾಣಾ ಎಲೆ ನಮ್ಮ ಕೂಡಲಚೆನ್ನಸಂಗಮದೇವಯ್ಯ.
--------------
ವೀರಸಂಗಯ್ಯ
ಆ ಅಖಂಡ ಜ್ಯೋತಿರ್ಮಯವಾಗಿಹ ಪರಮೋಂಕಾರ ಪ್ರಣಮದ ಜ್ಯೋತಿಸ್ವರೂಪದಲ್ಲಿ ಮನಸ್ಸು ಪುಟ್ಟಿತ್ತು. ಆ ಪ್ರಣವದ ದರ್ಪಣಾಕಾರದಲ್ಲಿ ಶ್ರೋತ್ರ ಪುಟ್ಟಿತ್ತು. ಆ ಪ್ರಣವದ ಅರ್ಧಚಂದ್ರಕದಲ್ಲಿ ತ್ವಕ್ಕು ಪುಟ್ಟಿತ್ತು. ಆ ಪ್ರಣವದ ಕುಂಡಲಾಕಾರದಲ್ಲಿ ನೇತ್ರ ಪುಟ್ಟಿತ್ತು. ಆ ಪ್ರಣವದ ದಂಡಕಸ್ವರೂಪದಲ್ಲಿ ಜಿಹ್ವೆ ಪುಟ್ಟಿತ್ತು. ಆ ಪ್ರಣವದ ತಾರಕಸ್ವರೂಪದಲ್ಲಿ ಘ್ರಾಣ ಪುಟ್ಟಿತ್ತು ನೋಡಾ. ಇದಕ್ಕೆ ಚಕ್ರಾತೀತಾಗಮೇ : ಓಂಕಾರ ಜ್ಯೋತಿರೂಪೇ ಚ ಮಾನಸಂ ಚ ಸಮುದ್ಭವಂ | ಓಂಕಾರ ದರ್ಪಣಾಕಾರೇ ಶ್ರೋತ್ರಂ ಚೈವ ಸಮುದ್ಭವಂ || ಓಂಕಾರರಾರ್ಧಚಂದ್ರೇ ಚ ತ್ವಕ್ ಚೈವ ಸಮುದ್ಭವಂ | ಓಂಕಾರ ಕುಂಡಲಾಕಾರೇ ನೇತ್ರಂ ಚೈವ ಸಮುದ್ಭವಂ || ಓಂಕಾರ ದಂಡಕರೂಪೇ ಚ ಜಿಹ್ವಾ ಚೈವ ಸಮುದ್ಭವಂ | ಓಂಕಾರ ತಾರಕರೂಪೇ ಘ್ರಾಣಂ ಚೈವ ಸಮುದ್ಭವಂ | ಇತಿ ಷಷ*ಮುಖಂ ದೇವಿ ಸ್ಥಾನಸ್ಥಾನೇಷು ಜಾಯತೇ || ಎಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಬೇರಿಲ್ಲದೆ ಭೂಮಿಗೆ ಹೊಂದದೆ ಒಂದು ಮಾವಿನ ವೃಕ್ಷವು ಪುಟ್ಟಿತ್ತು. ಆ ವೃಕ್ಷ ನೀರಿಲ್ಲದೆ ಗಾಳಿ ಸೋಂಕದೆ ಪಲ್ಲವಿಸಿತ್ತು. ಮೂರಾರು ಗಂಟಾಗಿರ್ಪವು. ತುದಿಗಂಟಿನಲ್ಲಿ ಮೊಳೆದೋರಿ ಎರಡು ಶಾಖೆ ಪುಟ್ಟಿದವು. ಎರಡು ಶಾಖೆಗೆ ಮೂರು ಕವಲು, ಮೂರು ಕವಲಿಗೆ ಆರು ಬಗಲು, ಆರು ಬಗಲಿಗೆ ಮೂವತ್ತಾರು ಪರ್ಣಂಗಳು, ಇನ್ನೂರಾಹದಿನಾರು ಕುಡಿಗಳು, ಅನೇಕ ಕುಸುಮಂಗಳು. ಅದರೊಳಗೆ ಅಗ್ನಿವರ್ಣದ ಕುಸುಮ ಮೂರುಗಂಟಿನ ಮೇಲೆ ಪುಟ್ಟಿ, ತುದಿಯಲ್ಲಿ ಅರಳಿ ಫಲವಾಗಿ, ಐದು ಗಂಟಿನ ಮೇಲೆ ಹಣ್ಣಾಗಿ, ಅಮೃತಜೇವಣಿಯೆಂಬ ಹಣ್ಣನು ಕಮಲದಲ್ಲಿ ಕಂಡು ಸೇವಿಸಿ ವ್ಯಾಧಿಯ ಪರಿಹರಿಸಬಲ್ಲಡೆ ಅಸುಲಿಂಗಸಂಬಂಧಿಯೆಂದನಯ್ಯಾ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಸಚ್ಚಿದಾನಂದ ಪರಶಿವನ ಸದ್ಯೋಜಾತಮುಖದಿಂದ ಪೃಥ್ವಿತತ್ತ್ವ ಪುಟ್ಟಿತ್ತು. ಆ ತತ್ವದಿಂದೆ ನಿವೃತ್ತಿ ಎಂಬ ಕಲೆ ಪುಟ್ಟಿತ್ತು. ಆ ಕಲೆಯಿಂದೆ ಕಪಿಲವರ್ಣದ ನಂದಿನಿಯೆಂಬ ಗೋವು ಪುಟ್ಟಿತ್ತು. ಆ ಗೋವಿನ ಗೋಮಯದಿಂದೆ ಮಹದೈಶ್ವರ್ಯವನ್ನುಂಟುಮಾಡುವಂಥ ಭೂತಿ ಎಂಬ ವಿಭೂತಿ ಪುಟ್ಟಿತ್ತು. ಮತ್ತಂ, ಸಚ್ಚಿದಾನಂದ ಪರಶಿವನ ವಾಮದೇವಮುಖದಿಂದೆ ಅಪ್ಪುತತ್ವ ಪುಟ್ಟಿತ್ತು. ಆ ತತ್ವದಿಂದೆ ಪ್ರತಿಷೆ*ಯೆಂಬ ಕಲೆ ಪುಟ್ಟಿತ್ತು. ಆ ಕಲೆಯಿಂದೆ ಕೃಷ್ಣವರ್ಣದ ಭದ್ರೆಯೆಂಬ ಗೋವು ಪುಟ್ಟಿತ್ತು. ಆ ಗೋವಿನ ಗೋಮಯದಿಂದೆ ದಿವ್ಯಪ್ರಕಾಶದಿಂ ಬೆಳಗುವಂಥ ಭಸಿತವೆಂಬ ವಿಭೂತಿ ಪುಟ್ಟಿತ್ತು. ಮತ್ತಂ, ಸಚ್ಚಿದಾನಂದ ಪರಶಿವನ ಅಘೋರಮುಖದಿಂದೆ ಅಗ್ನಿತತ್ವ ಪುಟ್ಟಿತ್ತು. ಆ ತತ್ವದಿಂದೆ ವಿದ್ಯೆಯೆಂಬ ಕಲೆ ಪುಟ್ಟಿತ್ತು. ಆ ಕಲೆಯಿಂದೆ ರಕ್ತವರ್ಣದ ಸುರಭಿಯೆಂಬ ಗೋವು ಪುಟ್ಟಿತ್ತು. ಆ ಗೋವಿನ ಗೋಮಯದಿಂದೆ ಸಮಸ್ತ ಪಾತಕಂಗಳ ಭಕ್ಷಿಸುವಂಥ ಭಸ್ಮವೆಂಬ ವಿಭೂತಿ ಪುಟ್ಟಿತ್ತು. ಮತ್ತಂ, ಸಚ್ಚಿದಾನಂದ ಪರಶಿವನ ತತ್ಪುರುಷಮುಖದಿಂದೆ ವಾಯುತತ್ವ ಪುಟ್ಟಿತ್ತು. ಆ ತತ್ವದಿಂದೆ ಶಾಂತಿಯೆಂಬ ಕಲೆ ಪುಟ್ಟಿತ್ತು. ಆ ಕಲೆಯಿಂದೆ ಶ್ವೇತವರ್ಣದ ಸುಶೀಲೆಯೆಂಬ ಗೋವು ಪುಟ್ಟಿತ್ತು. ಆ ಗೋವಿನ ಗೋಮಯದಿಂದೆ ಸಕಲ ವ್ಯಾಧಿಗಳ ಕೆಡಿಸುವಂಥ ಕ್ಷಾರವೆಂಬ ವಿಭೂತಿ ಪುಟ್ಟಿತ್ತು. ಮತ್ತಂ, ಸಚ್ಚಿದಾನಂದ ಪರಶಿವನ ಈಶಾನ್ಯಮುಖದಿಂದೆ ಆಕಾಶತತ್ವ ಪುಟ್ಟಿತ್ತು. ಆ ತತ್ವದಿಂದೆ ಶಾಂತ್ಯತೀತವೆಂಬ ಕಲೆ ಪುಟ್ಟಿತ್ತು. ಆ ಕಲೆಯಿಂದೆ ಚಿತ್ರವರ್ಣದ ಸುಮನೆಯೆಂಬ ಗೋವು ಪುಟ್ಟಿತ್ತು. ಆ ಗೋವಿನ ಗೋಮಯದಿಂದೆ ಭೂತ ಪ್ರೇತ ಪಿಶಾಚಿ ಬ್ರಹ್ಮರಾಕ್ಷಸ ಚೋರ ಸರ್ವವ್ಯಾಘ್ರಾದಿಗಳ ಭಯವ ಕೆಡಿಸುವ ರಕ್ಷೆಯೆಂಬ ವಿಭೂತಿ ಪುಟ್ಟಿತ್ತು. ಅದೆಂತೆಂದೊಡೆ :ಜಾಬಾಲೋಪನಿಷದಿ : `` ಸದ್ಯೋಜಾತಾತ್ ಪೃಥಿವೀ ತಸ್ಯಾಃ ನಿವೃತ್ತಿಃ ತಸ್ಯಾಃ ಗೋಮಯೇನ ವಿಭೂತಿರ್ಜಾತಾ || ವಾಮದೇವಾದುದಕಂ ತಸ್ಮಾತ್ ಪ್ರತಿಷಾ* ತಸ್ಯಾಃ ಕೃಷ್ಣವರ್ಣಾ ಭದ್ರಾ ತಸ್ಯಾಃ ಗೋಮಯೇನ ಭಸಿತಂ ಜಾತಂ || ಅಘೋರಾದ್ ವಹ್ನಿಃ ತಸ್ಮಾತ್ ವಿದ್ಯಾ ತಸ್ಯಾಃ ರಕ್ತವರ್ಣಾ ಸುರಭೀ ತಸ್ಯಾಃ ಗೋಮಯೇನ ಭಸ್ಮ ಜಾತಂ|| ತತ್ಪುರುಷಾದ್ ವಾಯುಃ ತಸ್ಮಾತ್ ಶಾಂತಿಃ ತಸ್ಯಾಃ ಶ್ವೇತವರ್ಣಾ ಸುಶೀಲಾ ತಸ್ಯಾಃ ಗೋಮಯೇನ ಕ್ಷಾರಂ ಜಾತಂ|| ಈಶಾನಾದಾಕಾಶಃ ತಸ್ಮಾತ್ ಶಾಂತ್ಯತೀತಾ ತಸ್ಯಾಶ್ಚಿತ್ರವರ್ಣಾ ಸುಮನಾ ತಸ್ಯಾಃ ಗೋಮಯೇನ ರಕ್ಷಾ ಜಾತಾ||'' `` ವಿಭೂತಿರ್ಭಸಿತಂ ಭಸ್ಮ | ಕ್ಷಾರಂ ರಕ್ಷೇತಿ ಭಸ್ಮನಃ| ಭವಂತಿ ಪಂಚನಾಮಾನಿ| ಪಂಚಭಿರ್ನಾಮಭಿರ್ಭೃಶಮ್||'' `` ಐಶ್ವರ್ಯಕಾರಣಾದ್ಭೂತಿರ್ಭಾಸನಾದ್ಭಸಿತಂ ತಥಾ ಸರ್ವಾಘಭಕ್ಷಣಾದ್ಭಸ್ಮ ಆಪದಾಂ ಕ್ಷಾರಣಾತ್ ಕ್ಷಾರಂ ಭೂತ-ಪ್ರೇತ-ಪಿಶಾಚ ಬ್ರಹ್ಮರಾಕ್ಷಸಾಪಸ್ಮಾರ ಭವಭೀತಿಭ್ಯೋýಭಿರಕ್ಷಣಾತ್ ರಕ್ಷೇತಿ'' ಎಂದುದಾಗಿ, ಇಂತಪ್ಪ ಶ್ರೀ ವಿಭೂತಿಯ ನಿರಂತರ ಸಾವಧಾನಭಕ್ತಿಯಿಂದ ನಾನು ಸರ್ವಾಂಗದಲ್ಲಿ ಧರಸಿ ಶುದ್ಧನಿರ್ಮಲ ಪರಮಪವಿತ್ರ ಕಾಯನಾದೆನಯ್ಯ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಆಕಾರನಿರಾಕಾರವಿಲ್ಲದಂದು, ಋತುವಡಗಿದ ಲಿಂಗವು, ನೆನವಂ ಬೆರೆಸಲು ಝೇಂಕಾರ ಪುಟ್ಟಿತ್ತು. ಆ ನೆನವೆ ಆತ್ಮನಂ ಬೆರೆಸಲು ಆಕಾಶ ಪುಟ್ಟಿತ್ತು. ಆ ನೆನವೆ ಮನವಂ ಬೆರೆಸಲು ವಾಯು ಪುಟ್ಟಿತ್ತು. ಆ ನೆನವೆ ಬುದ್ಭಿಯಂ ಬೆರೆಸಲು ತೇಜ ಪುಟ್ಟಿತ್ತು. ಆ ನೆನವೆ ಚಿತ್ತವಂ ಬೆರೆಸಲು ಅಪ್ಪು ಪುಟ್ಟಿತ್ತು. ಆ ನೆನವೆ ಪೃಥ್ವಿಯಂ ಬೆರೆಸಲು ಅಹಂಕಾರ ಪುಟ್ಟಿತ್ತು. ಆ ಅಹಂಕಾರವೇ ನಿವೃತ್ತಿ ಎನಿಸಿತ್ತು, ಚಿತ್ತವೆ ಪ್ರತಿಷೆ* ಎನಿಸಿತ್ತು, ಬುದ್ಧಿಯೇ ವಿದ್ಯೆಯೆನಿಸಿತ್ತು, ಮನವೇ ಶಾಂತಿಯೆನಿಸಿತ್ತು, ಆತ್ಮವೇ ಶಾಂತ್ಯತೀತವೆನಿಸಿತ್ತು. ಶಬ್ದದಲ್ಲಿ ಶರಣನಾದ, ಸ್ಪರುಶನದಲ್ಲಿ ಪ್ರಾಣಲಿಂಗಿಯಾದ, ರೂಪಿನಲ್ಲಿ ಪ್ರಸಾದಿಯಾದ, ರಸದಲ್ಲಿ ಮಹೇಶ್ವರನಾದ, ಗಂಧದಲ್ಲಿ ಭಕ್ತನಾದ-ಇದು ಅಂಗಸಂಬಂಧ. ಇನ್ನು ಇದಕ್ಕೆ ಲಿಂಗಸಂಬಂಧವು : ಶ್ರೋತ್ರದಲ್ಲಿ ಪ್ರಸಾದಲಿಂಗ, ತ್ವಕ್ಕಿನಲ್ಲಿ ಜಂಗಲಿಂಗ, ನೇತ್ರದಲ್ಲಿ ಶಿವಲಿಂಗ, ಜಿಹ್ವೆಯಲ್ಲಿ ಗುರುಲಿಂಗ, ಘ್ರಾಣದಲ್ಲಿ ಆಚಾರಲಿಂಗ. ಇಂತಪ್ಪ ಶರಣನು ಅಂಗಲಿಂಗಸಂಬಂಧವನೊಳಕೊಂಡು, ಚಿತ್ತ ಆಶ್ರಯದೊಳು ಕೂಡಿ ನಿಃಪ್ರಿಯವೆನಿಸಿತ್ತು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಅಯ್ಯಾ ತತ್ವ ವಿತತ್ವ ಶೂನ್ಯ ಮಹಾಶೂನ್ಯವಿಲ್ಲದಂದು, ಬ್ರಹ್ಮ ವಿಷ್ಣು ರುದ್ರ ಇನ ಶಶಿ ವ್ಯೋಮ ಸಮೀರ ಅಗ್ನಿ ಅಂಬು ಪೃಥ್ವಿ ನವಗ್ರಹ ದಶದಿಕ್ಕು ಛತ್ತೀಸ ತತ್ವಂಗಳೇನೂ ಇಲ್ಲದಂದು, ತಾರಜ ತಂಡಜ ಬಿಂದುಜ ಭಿನ್ನಾಯುಕ್ತ ಅವ್ಯ[ಕ್ತ] ಅಮದಾಯುಕ್ತ ಮಣಿರಣ ಮಾನ್ಯರಣ್ವ ವಿಶ್ವರಣ ವಿಶ್ವಾವಸು ಅಲಂಕೃತ ಕೃತಯುಗ ತ್ರೇತಾಯುಗ ದ್ವಾಪರ ಕಲಿಯುಗ ಇಂತಿವು ಯಾವವೂ ಇಲ್ಲದಂದು, ನಾದ ಬಿಂದು ಕಳೆಗಳಿಲ್ಲದಂದು, ಪಶುಪಾಶ ಪತಿ ಕುಂಡಲಿ ಕಾರಕ ಇವೇನೂ ಇಲ್ಲದಂದು, ವಿಜ್ಞಾನಾಲಕರು ಸಕಲಾಕಲರು ಪ್ರಳಯಾಕಲರು ಇವೇನೂ ಇಲ್ಲದಂದು, ದನುಜ ಮನುಜ ದಿವಿಜ ಮನು ಮುನಿ ನಕ್ಷತ್ರಮಂಡಲ ಇವೇನೂ ಇಲ್ಲದಂದು, ಅಂದು ನೀನು ನಿಷ್ಕಲ ನಿರವಯ ನಿಃಶೂನ್ಯನಾಗಿರ್ದೆಯಯ್ಯ ಬಸವಣ್ಣ. ನೀವೊಂದು ಅನಂತಕಾಲ ಅನಂತಯುಗ ನಿಮ್ಮ ಲೀಲಾ ವಿಚಿಂತನೆ ನೆನೆದ ನೆನಹೇ ಸುನಾದ. ಆ ಸುನಾದದ ಪ್ರಕಾಶ ತೇಜೋಪುಂಜವೇ ಬಿಂದು. ನಾದವೇ ನಿರಂಜನ. ಬಿಂದುವೇ ನಿರಾಲಂಬ..... ಕೂಟವೇ ನಿರಾಮಯ. ಇಂತೀ ನಾದ ಬಿಂದು ಕಳೆ ಮೂರು ಕೂಡೆ ಅಖಂಡ ತೇಜೋಮಯವಾಗಿ ಷಡ್‍ಬ್ರಹ್ಮಸ್ವರೂಪವನೈದಿದೆಯಲ್ಲ ಬಸವಣ್ಣ. ನಿನ್ನ ವಿನೋದದಿಂದ ಆ ಷಡ್‍ಬ್ರಹ್ಮದಿಂದ ಷಡ್ವಿಧ ಭೂತಂಗಳು ಪುಟ್ಟಿ ಆ ಷಡ್ವಿಧಭೂತಂಗಳೇ ಎನಗಂಗವಾದಲ್ಲಿ ಆ ಷಡ್‍ಬ್ರಹ್ಮವೇ ಷಡಕ್ಷರಿಮಯವಾಗಿ ಆ ಷಡ್ವಿಧಭೂತಂಗಳೊಳಗೆ ಸಮೇತವಾಗಿ ಕೂಡಿ ಛತ್ತೀಸತತ್ವ ಮಂತ್ರಸ್ವರೂಪವಾದ ಭೇದ ಹೇಗೆಂದಡೆ ಅದಕ್ಕೆ ವಿವರ: ಓಂಕಾರವೇ ಆತ್ಮನು. ಓಂಕಾರ ಯಕಾರ ಸಂಯೋಗವಾದಲ್ಲಿ ಆಕಾಶ ಪುಟ್ಟಿತ್ತು. ಓಂಕಾರ ವಾಕಾರ ಸಂಯೋಗವಾದಲ್ಲಿ ವಾಯು ಪುಟ್ಟಿತ್ತು. ಓಂಕಾರ ಶಿಕಾರ ಸಂಯೋಗದಲ್ಲಿ ಅಗ್ನಿ ಪುಟ್ಟಿತ್ತು. ಓಂಕಾರ ಮಃಕಾರ ಸಂಯೋಗದಲ್ಲಿ ಅಪ್ಪು ಪುಟ್ಟಿತ್ತು. ಓಂಕಾರ ನಕಾರ ಸಂಯೋಗವಾದಲ್ಲಿ ಪೃಥ್ವಿ ಪುಟ್ಟಿತ್ತು. ಇನ್ನ ಯಕಾರ ಓಂಕಾರ ಸಂಯೋಗವಾದಲ್ಲಿ ಭಾವ ಪುಟ್ಟಿತ್ತು. ಯಕಾರವೇ ಜ್ಞಾನ. ಯಕಾರ ವಾಕಾರ ಸಂಯೋಗವಾದಲ್ಲಿ ಮನ ಪುಟ್ಟಿತ್ತು. ಯಕಾರ ಶಿಕಾರ ಸಂಯೋಗವಾದಲ್ಲಿ ಅಹಂಕಾರ ಪುಟ್ಟಿತ್ತು. ಯಕಾರ ಮಃಕಾರ ಸಂಯೋಗವಾದಲ್ಲಿ ಬುದ್ಧಿ ಪುಟ್ಟಿತ್ತು. ಯಕಾರ ನಕಾರ ಸಂಯೋಗವಾದಲ್ಲಿ ಚಿತ್ತು ಪುಟ್ಟಿತ್ತು. ಇನ್ನು ವಕಾರ ಓಂಕಾರ ಸಂಯೋಗವಾದಲ್ಲಿ ಪಂಚವಾಯು ಪುಟ್ಟಿದವು. ವಕಾರ ಯಕಾರ ಸಂಯೋಗವಾದಲ್ಲಿ ಸಮಾನವಾಯು ಪುಟ್ಟಿತ್ತು. ವಾಕಾರ ತಾನೇ ಉದಾನವಾಯು. ವಕಾರ ಶಿಕಾರ ಸಂಯೋಗವಾದಲ್ಲಿ ವ್ಯಾನವಾಯು ಪುಟ್ಟಿತ್ತು. ವಕಾರ ಮಃಕಾರ ಸಂಯೋಗವಾದಲ್ಲಿ ಅಪಾನವಾಯು ಪುಟ್ಟಿತ್ತು. ವಕಾರ ನಕಾರ ಸಂಯೋಗವಾದಲ್ಲಿ ಪ್ರಾಣವಾಯು ಪುಟ್ಟಿತ್ತು. ಇನ್ನು ಶಿಕಾರ ಓಂಕಾರ ಸಂಯೋಗವಾದಲ್ಲಿ ಹೃದಯ ಪುಟ್ಟಿತ್ತು. ಶಿಕಾರ ಯಕಾರ ಸಂಯೋಗವಾದಲ್ಲಿ ಶ್ರೋತ್ರ ಪುಟ್ಟಿತ್ತು. ಶಿಕಾರಾ ವಾಕಾರ ಸಂಯೋಗವಾದಲ್ಲಿ ತ್ವಕ್ಕು ಪುಟ್ಟಿತ್ತು. ಶಿಕಾರ ತಾನೇ ನೇತ್ರ ಶಿಕಾರ ಮಃಕಾರ ಸಂಯೋಗವಾದಲ್ಲಿ ಜಿಹ್ವೆ ಪುಟ್ಟಿತ್ತು. ಶಿಕಾರ ನಕಾರ ಸಂಯೋಗವಾದಲ್ಲಿ ಘ್ರಾಣ ಪುಟ್ಟಿತ್ತು. ಇನ್ನು ಮಃಕಾರ ಓಂಕಾರ ಸಂಯೋಗವಾದಲ್ಲಿ ತೃಪ್ತಿ ಪುಟ್ಟಿತ್ತು. ಮಕಾರ ಯಕಾರ ಸಂಯೋಗವಾದಲ್ಲಿ ಶಬ್ದ ಪುಟ್ಟಿತ್ತು. ಮಕಾರ ವಾಕಾರ ಸಂಯೋಗವಾದಲ್ಲಿ ಸ್ಪರ್ಶನ ಪುಟ್ಟಿತ್ತು. ಮಕಾರ ಶಿಕಾರ ಸಂಯೋಗವಾದಲ್ಲಿ ರೂಪು ಪುಟ್ಟಿತ್ತು. ಮಃಕಾರ ತಾನೇ ರಸ. ಮಕಾರ ನಕಾರ ಸಂಯೋಗವಾದಲ್ಲಿ ಗಂಧ ಪುಟ್ಟಿತ್ತು. ಇನ್ನು ನಕಾರ ಓಂಕಾರ ಸಂಯೋಗವಾದಲ್ಲಿ ಅಂತರ್ವಾಕ್ಕು ಪುಟ್ಟಿತ್ತು. ನಕಾರ ಯಕಾರ ಸಂಯೋಗವಾದಲ್ಲಿ ವಾಕ್ಕು ಪುಟ್ಟಿತ್ತು. ನಕಾರ ವಾಕಾರ ಸಂಯೋಗವಾದಲ್ಲಿ ಪಾಣಿ ಪುಟ್ಟಿತ್ತು. ನಕಾರ ಶಿಕಾರ ಸಂಯೋಗವಾದಲ್ಲಿ ಪಾದ ಪುಟ್ಟಿತ್ತು. ನಕಾರ ಮಃಕಾರ ಸಂಯೋಗವಾದಲ್ಲಿ ಗುಹ್ಯ ಪುಟ್ಟಿತ್ತು. ನಕಾರ ತಾನೇ ವಾಯು. ಇಂತೀ ಛತ್ತೀಸತತ್ವವೆಲ್ಲ ಮಂತ್ರಸ್ವರೂಪವಾದ ಬಸವಣ್ಣನೇ. ಎನಗೆ ಅಂಗ ಲಿಂಗ ಹಸ್ತ ಮುಖ ಶಕ್ತಿ ಭಕ್ತಿ ಪದಾರ್ಥ ಪ್ರಸಾದ ಇಂತಿವೆಲ್ಲವನರಿದು ಅರ್ಪಿಸುವ ಭೇದ ಹೇಗೆಂದಡೆ ಪ್ರಮಥದಲ್ಲಿ ಷಟ್‍ಸ್ಥಲದ ವಿವರ: ಭಕ್ತ ಮಾಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯ. ಇನ್ನು ಭಕ್ತನ ಷಡ್ವಿಧಲಿಂಗದ ವಿವರ: ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗ. ಇನ್ನು ಭಕ್ತನ ಷಡ್ವಿಧಹಸ್ತದ ವಿವರ: ಸುಚಿತ್ತ ಸುಬುದ್ಧಿ ನಿರಹಂಕಾರ ಸುಮನ ಸುಜ್ಞಾನ ಸದ್ಭಾವ. ಇನ್ನು ಭಕ್ತನ ಷಡ್ವಿಧಮುಖದ ವಿವರ: ಘ್ರಾಣ ಜಿಹ್ವೆ ನೇತ್ರ ತ್ವಕ್ಕು ಶ್ರೋತ್ರ ಹೃದಯ. ಇನ್ನು ಭಕ್ತನ ಷಡ್ವಿಧಶಕ್ತಿಯ ವಿವರ: ಶ್ರದ್ಧೆ ನೈಷೆ* ಸಾವಧಾನ ಅನುಭಾವ ಆನಂದ ಸಮರಸ. ಇನ್ನು ಭಕ್ತನ ಷಡ್ವಿಧಪದಾರ್ಥದ ವಿವರ: ಗಂಧ ರಸ ರೂಪು ಸ್ಪರ್ಶನ ಶಬ್ದ ಪರಿಣಾಮ. ಇನ್ನು ಭಕ್ತನ ಷಡ್ವಿಧಪ್ರಸಾದದ ವಿವರ: ಗಂಧಪ್ರಸಾದ ರಸಪ್ರಸಾದ ರೂಪುಪ್ರಸಾದ ಸ್ಪರ್ಶಪ್ರಸಾದ ಶಬ್ದಪ್ರಸಾದ ಪರಿಣಾಮಪ್ರಸಾದ. ಇನ್ನು ದ್ವಿತೀಯದಲ್ಲಿ ಮಾಹೇಶ್ವರನ ಷಟ್‍ಸ್ಥಲ ವಿವರ: ಮಾಹೇಶ್ವರ ಭಕ್ತ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯ. ಇನ್ನು ಮಾಹೇಶ್ವರನ ಷಡ್ವಿಧಲಿಂಗದ ವಿವರ: ಗುರುಲಿಂಗ ಆಚಾರಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗ. ಇನ್ನು ಮಾಹೇಶ್ವರನ ಷಡ್ವಿಧಹಸ್ತದ ವಿವರ: ಸುಬುದ್ಧಿ ಸುಚಿತ್ತ ನಿರಹಂಕಾರ ಸುಮನ ಸುಜ್ಞಾನ ಸದ್ಭಾವ. ಇನ್ನು ಮಾಹೇಶ್ವರನ ಷಡ್ವಿಧಮುಖದ ವಿವರ: ಜಿಹ್ವೆ ಘ್ರಾಣ ನೇತ್ರ ತ್ವಕ್ಕು ಶ್ರೋತ್ರ ಹೃದಯ. ಇನ್ನು ಮಾಹೇಶ್ವರನ ಷಡ್ವಿಧಶಕ್ತಿಯ ವಿವರ: ಜ್ಞಾನಶಕ್ತಿ ಕ್ರಿಯಾಶಕ್ತಿ ಇಚ್ಛಾಶಕ್ತಿ ಆದಿಶಕ್ತಿ ಪರಾಶಕ್ತಿ ಚಿತ್ಯಕ್ತಿ. ಇನ್ನು ಮಾಹೇಶ್ವರನ ಷಡ್ವಿಧಭಕ್ತಿಯ ವಿವರ: ನೈಷೆ* ಶ್ರದ್ಧೆ ಸಾವಧಾನ ಅನುಭಾವ ಆನಂದ ಸಮರಸ. ಇನ್ನು ಮಾಹೇಶ್ವರನ ಷಡ್ವಿಧಪದಾರ್ಥದ ವಿವರ: ರಸ ಗಂಧ ರೂಪು ಸ್ಪರುಶನ ಶಬ್ದ ಪರಿಣಾಮ ಇನ್ನು ಮಾಹೇಶ್ವರನ ಷಡ್ವಿಧಪ್ರಸಾದದ ವಿವರ: ರಸಪ್ರಸಾದ ಗಂಧಪ್ರಸಾದ ರೂಪುಪ್ರಸಾದ ಸ್ಪರುಶನಪ್ರಸಾದ ಶಬ್ದಪ್ರಸಾದ ಪರಿಣಾಮಪ್ರಸಾದ. ಇನ್ನು ತೃತೀಯದಲ್ಲಿ ಪ್ರಸಾದಿಯ ಷಟ್‍ಸ್ಥಲದ ವಿವರ: ಪ್ರಸಾದಿ ಭಕ್ತ ಮಾಹೇಶ್ವರ ಪ್ರಾಣಲಿಂಗಿ ಶರಣ ಐಕ್ಯ. ಇನ್ನು ಪ್ರಸಾದಿಯ ಷಡ್ವಿಧಲಿಂಗದ ವಿವರ: ಶಿವಲಿಂಗ ಆಚಾರಲಿಂಗ ಗುರುಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗ. ಇನ್ನು ಪ್ರಸಾದಿಯ ಷಡ್ವಿದಹಸ್ತದ ವಿವರ: ನಿರಹಂಕಾರ ಸುಚಿತ್ತ ಸುಬುದ್ಧಿ ಸುಮನ ಸುಜ್ಞಾನ ಸದ್ಭಾವ. ಇನ್ನು ಪ್ರಸಾದಿಯ ಷಡ್ವಿಧಮುಖದ ವಿವರ: ನೇತ್ರ ಘ್ರಾಣ ಜಿಹ್ವೆ ತ್ವಕ್ಕು ಶ್ರೋತ್ರ ಹೃದಯ. ಇನ್ನು ಪ್ರಸಾದಿಯ ಷಡ್ವಿಧಶಕ್ತಿಯ ವಿವರ: ಇಚ್ಛಾಶಕ್ತಿ ಕ್ರಿಯಾಶಕ್ತಿ ಜ್ಞಾನಶಕ್ತಿ ಆದಿಶಕ್ತಿ ಪರಾಶಕ್ತಿ ಚಿತ್ಯಕ್ತಿ. ಇನ್ನು ಪ್ರಸಾದಿಯ ಷಡ್ವಿಧಭಕ್ತಿಯ ವಿವರ: ಸಾವಧಾನ ಶ್ರದ್ಧೆ ನೈಷೆ* ಅನುಭಾವ ಆನಂದ ಸಮರಸ. ಇನ್ನು ಪ್ರಸಾದಿಯ ಷಡ್ವಿಧಪದಾರ್ಥದ ವಿವರ: ರೂಪು ಗಂಧ ರಸ ಸ್ಪರುಶನ ಶಬ್ದ ಪರಿಣಾಮ. ಇನ್ನು ಪ್ರಸಾದಿಯ ಷಡ್ವಿಧಪ್ರಸಾದದ ವಿವರ: ರೂಪುಪ್ರಸಾದ ಗಂಧಪ್ರಸಾದ ರಸಪ್ರಸಾದ ಸ್ಪರುಶನ ಪ್ರಸಾದ ಶಬ್ದಪ್ರಸಾದ ಪರಿಣಾಮಪ್ರಸಾದ. ಇಂತೀ ಮಾರ್ಗಕ್ರಿ ಅಂಗ ಲಿಂಗವಾದಲ್ಲಿ ಮುಂದೆ ಮೀರಿದ ಕ್ರಿಯೆ ಅಂಗ ಲಿಂಗ ತೃತೀಯಸ್ಥಲ. ಇನ್ನು ಚತುರ್ಥದಲ್ಲಿ ಪ್ರಾಣಲಿಂಗಿಯ ಷಡ್ವಿಧ ವಿವರ: ಪ್ರಾಣಲಿಂಗಿ ಭಕ್ತ ಮಾಹೇಶ್ವರ ಪ್ರಸಾದಿ ಶರಣ ಐಕ್ಯ. ಇನ್ನು ಪ್ರಾಣಲಿಂಗಿಯ ಷಡ್ವಿಧಲಿಂಗದ ವಿವರ: ಜಂಗಮಲಿಂಗ ಆಚಾರಲಿಂಗ ಗುರುಲಿಂಗ ಶಿವಲಿಂಗ ಪ್ರಸಾದಲಿಂಗ ಮಹಾಲಿಂಗ. ಇನ್ನು ಪ್ರಾಣಲಿಂಗಿಯ ಷಡ್ವಿಧಹಸ್ತದ ವಿವರ: ಸುಮನ ಸುಚಿತ್ತ ಸುಬುದ್ಧಿ ನಿರಹಂಕಾರ ಸುಜ್ಞಾನ ಸದ್ಭಾವ. ಇನ್ನು ಪ್ರಾಣಲಿಂಗಿಯ ಷಡ್ವಿಧಶಕ್ತಿಯ ವಿವರ: ಆದಿಶಕ್ತಿ ಕ್ರಿಯಾಶಕ್ತಿ ಜ್ಞಾನಶಕ್ತಿ ಇಚ್ಛಾಶಕ್ತಿ ಪರಶಕ್ತಿ ಚಿತ್ಯಕ್ತಿ. ಇನ್ನು ಪ್ರಾಣಲಿಂಗಿಯ ಷಡ್ವಿಧಭಕ್ತಿಯ ವಿವರ: ಅನುಭಾವ ಶ್ರದ್ಧೆ ನೈಷೆ* ಸಾವಧಾನ ಆನಂದ ಸಮರಸ. ಇನ್ನು ಪ್ರಾಣಲಿಂಗಿಯ ಷಡ್ವಿಧಪದಾರ್ಥದ ವಿವರ: ಸ್ಪರುಶನ ಗಂಧ ರಸ ರೂಪು ಶಬ್ದ ಪರಿಣಾಮ. ಇನ್ನು ಪ್ರಾಣಲಿಂಗಿಯ ಷಡ್ವಿಧಪ್ರಸಾದದ ವಿವರ: ಸ್ಫರುಶನಪ್ರಸಾದ ಗಂಧಪ್ರಸಾದ ರಸಪ್ರಸಾದ ರೂಪುಪ್ರಸಾದ ಶಬ್ದಪ್ರಸಾದ ಪರಿಣಾಮಪ್ರಸಾದ. ಇನ್ನು ಪಂಚಮದಲ್ಲಿ ಶರಣನ ಷಟ್‍ಸ್ಥಲದ ವಿವರ: ಶರಣ ಭಕ್ತ ಮಾಹೇಶ್ವರ ಪ್ರಸಾದಿ ಪ್ರಾಣಲಿಂಗಿ ಐಕ್ಯ. ಇನ್ನು ಶರಣನ ಷಡ್ವಿಧಲಿಂಗದ ವಿವರ: ಪ್ರಸಾದಲಿಂಗ ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಮಹಾಲಿಂಗ. ಶರಣನ ಷಡ್ವಿಧಹಸ್ತದ ವಿವರ: ಸುಜ್ಞಾನ ಸುಚಿತ್ತ ಸುಬುದ್ಧಿ ನಿರಂಕಾರ ಸುಮನ ಸದ್ಭಾವ ಇನ್ನು ಶರಣನ ಷಡ್ವಿಧಶಕ್ತಿಯ ವಿವರ: ಪರಾಶಕ್ತಿ ಕ್ರಿಯಾಶಕ್ತಿ ಜ್ಞಾನಶಕ್ತಿ ಇಚ್ಛಾಶಕ್ತಿ ಆದಿಶಕ್ತಿ ಚಿತ್ಯಕ್ತಿ. ಇನ್ನು ಶರಣನ ಷಡ್ವಿಧಭಕ್ತಿಯ ವಿವರ: ಆನಂದ ಶ್ರದ್ಧೆ ನೈಷೆ* ಸಾವಧಾನ ಅನುಭಾವ ಸಮರಸ. ಇನ್ನು ಶರಣನ ಷಡ್ವಿಧ ಪ್ರಸಾದದ ವಿವರ: ಶಬ್ದಪ್ರಸಾದ ಗಂಧಪ್ರಸಾದ ರಸಪ್ರಸಾದ ರೂಪುಪ್ರಸಾದ ಸ್ಪರುಶನಪ್ರಸಾದ ಪರಿಣಾಮಪ್ರಸಾದ. ಇನ್ನು ಷಷ*ಮದಲ್ಲಿ ಆ ಐಕ್ಯನ ಷಟ್‍ಸ್ಥಲದ ವಿವರ: ಐಕ್ಯ ಭಕ್ತ ಮಾಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣ. ಇನ್ನು ಐಕ್ಯನ ಷಡ್ವಿಧಲಿಂಗದ ವಿವರ: ಮಹಾಲಿಂಗ ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ. ಇನ್ನು ಐಕ್ಯನ ಷಡ್ವಿಧಹಸ್ತದ ವಿವರ: ಸದ್ಭಾವ ಸುಚಿತ್ತ ಸುಬುದ್ಧಿ ನಿರಹಂಕಾರ ಸುಮನ ಸುಜ್ಞಾನ. ಇನ್ನು ಐಕ್ಯನ ಷಡ್ವಿಧಮುಖದ ವಿವರ: ಹೃದಯ ಪ್ರಾಣ ಜಿಹ್ವೆ ನೇತ್ರ ತ್ವಕ್ಕು ಶ್ರೋತ್ರ. ಇನ್ನು ಐಕ್ಯನ ಷಡ್ವಿಧಶಕ್ತಿಯ ವಿವರ: ಚಿತ್ಯಕ್ತಿ ಕ್ರಿಯಾಶಕ್ತಿ ಜ್ಞಾನಶಕ್ತಿ ಇಚ್ಛಾಶಕ್ತಿ ಆದಿಶಕ್ತಿ ಪರಾಶಕ್ತಿ. ಇನ್ನು ಐಕ್ಯನ ಷಡ್ವಿಧಭಕ್ತಿಯ ವಿವರ: ಸಮರಸ ಶ್ರದ್ಧೆ ನೈಷೆ* ಸಾವಧಾನ ಅನುಭಾವ ಆನಂದ. ಇನ್ನು ಐಕ್ಯನ ಷಡ್ವಿಧಪದಾರ್ಥದ ವಿವರ: ಪರಿಣಾಮ ಗಂಧ ರಸ ರೂಪು ಸ್ಪರುಶನ ಶಬ್ದ. ಇನ್ನು ಐಕ್ಯನ ಷಡ್ವಿಧಪ್ರಸಾದದ ವಿವರ: ಪರಿಣಾಮಪ್ರಸಾದ ಗಂಧಪ್ರಸಾದ ರಸಪ್ರಸಾದ ರೂಪುಪ್ರಸಾದ ಸ್ಪರುಶನಪ್ರಸಾದ ಶಬ್ದಪ್ರಸಾದ. ಇಂತಿವೆಲ್ಲವೂ ಅರ್ಪಿತವಾಗಲೊಡನೆ ಏಕಮೇವ ಪರಬ್ರಹ್ಮ ತಾನೆಯಾಗಿ ಉಳಿದ ಉಳುಮೆಯೇ ಬಸವಣ್ಣ. ಆ ಬಸವಣ್ಣನೇ ಎನಗೆ ಇಷ್ಟಬ್ರಹ್ಮವು. ಆ ಇಷ್ಟಬ್ರಹ್ಮದಲ್ಲಿ ಎನ್ನ ಅಂಗ ಮನ ಪ್ರಾಣ ಇಂದ್ರಿಯ ಕರಣಂಗಳೆಲ್ಲವು ನಿರವಯಲಾದ ಭೇದ ಹೇಗೆಂದಡೆ ವಾರಿ[ಬಲಿ]ದು ವಾರಿಕಲ್ಲಾಗಿ ವಾರಿಯಾದ ಹಾಗೆ ಉಪ್ಪಿನ ಪೊಟ್ಟಣವಪ್ಪುವಿನೊಳು ಬಯಚಿಟ್ಟ ಹಾಗೆ ಉರಿ ಕರ್ಪುರ ಸಂಯೋಗವಾದ ಹಾಗೆ ಎನ್ನ ಅಂಗ ಮನ ಅಂಗ ಏಕರಸವಾದ ಭೇದವನು ಸಿದ್ಧೇಶ್ವರನು ತೋರಿ[ದ ಕಾ]ರಣ ಪರಂಜ್ಯೋತಿ ಮಹಾಲಿಂಗಗುರು ಸಿದ್ಧಲಿಂಗಪ್ರಭುವಿನಲ್ಲಿ ಬಸವೇಶ್ವರನ ಶ್ರೀಪಾದದಲ್ಲಿ ಮನಮಗ್ನ ಯೋಗವೆನಗಾಯಿತಯ್ಯಾ, ಬೋಳಬಸವೇಶ್ವರ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಗುಮ್ಮಳಾಪುರದ ಸಿದ್ಧಲಿಂಗ
-->