ಅಥವಾ

ಒಟ್ಟು 66 ಕಡೆಗಳಲ್ಲಿ , 36 ವಚನಕಾರರು , 62 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರಡಿ ತಾನಾಗಿಹ ಆಶ್ರಯವ ಮಾಡುವಲ್ಲಿ ಬೇರೆ ಬಾಯಿಲ್ಲ. ಕುಸುಮದ ಕಂಪಿತವನುಂಬುದಕ್ಕೆ ಬೇರೆ ಬಾಯಿಲ್ಲ. ಇಂತಿದು ಬಿಡುಮುಡಿಯ ಭೇದ. ಕರ್ತು ಭೃತ್ಯನ ವಶಗತವಾಗಿರ್ದ ತ್ರಿವಿಧಮಲವ ಮುಟ್ಟುವಲ್ಲಿ. ತನಗೆ ಬಿಟ್ಟು ಬಹ ಸಮರ್ಪಣೆಯನರಿತು, ಅವ ತೊಟ್ಟಿರ್ದುದ ತಾ ತೊಡದೆ, ಅವ ಬಿಟ್ಟುದ ತಾ ಮುಟ್ಟದೆ, ಅವ ಬಿಟ್ಟುದನರಿತು, ಅವಗೇನು ಪಾಶವ ಕಟ್ಟಿದೆ. ತೊಟ್ಟ ಬಿಟ್ಟ ಹಣ್ಣಿನಂತೆ, ನಿಜನಿಶ್ಚಯವಾದ ಭಕ್ತಿಮೂರ್ತಿ. ಮಹಾಮಹಿಮ ಕಲ್ಲೇಶ್ವರಲಿಂಗ ತಾನಾದ ಶರಣ.
--------------
ಹಾವಿನಹಾಳ ಕಲ್ಲಯ್ಯ
ತ್ರಿವಿಧವ ಮಲವೆಂದರಿತು ತನ್ನ ಸುಖಕ್ಕೋಸ್ಕರವಾಗಿ ವಸ್ತುವಿನಿಂದ ನಿರ್ಮಲವಾಯಿತ್ತೆಂದು ಮುಟ್ಟಬಹುದೆ ? ಲಿಂಗಭೋಗೋಪಭೋಗಂಗಳೆಂದು ಬಿಟ್ಟ ನಿರ್ಮಾಲ್ಯವನರ್ಪಿಸಬಹುದೆ ? ಇಂತಿವನರಿದು ಅರ್ಪಿಸುವಲ್ಲಿ ಸಲ್ಲದೆಂಬುದ ತಾನರಿತು ಮತ್ತೆ ಸಲುವುದೆಂಬಲ್ಲಿ ಅನರ್ಪಿತ ಅರ್ಪಿತವುಂಟೆ ? ಇಂತಿವ ದೃಷ್ಟದಿಂದ ಲಕ್ಷಿತನಾಗಿ ಮುಟ್ಟುವ ತೆರನ ನೀವೆ ಬಲ್ಲಿರಿ ನಾವರಿಯೆವು. ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವೆ ಬಲ್ಲ.
--------------
ಪ್ರಸಾದಿ ಭೋಗಣ್ಣ
ಚಿತ್ತುವಿನ ವರ್ತನೆಯ ಬಿಟ್ಟ ಶರಣ ನಿತ್ಯನೇಮವನರಿಯ, ಕರ್ತೃಭೃತ್ಯತ್ವವನೇನೆಂದು ಅರಿಯ, ಎಂತೆಂದು ಅರಿಯ, ಎಂತಿದ್ದುದಂತೆಯೆಂಬುದ ಮುನ್ನವೆ ಅರಿಯ. ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ, ನಿಲ್ಲು ಮಾಣು.
--------------
ಘಟ್ಟಿವಾಳಯ್ಯ
ಇದನಾರಯ್ಯ ಬಲ್ಲರು ಹಮ್ಮಳಿದ ಶರಣರ ಮೇಲಿಹ ಪರವ ಬಲ್ಲ ಶರಣ. ಪಂಚೇಂದ್ರಿಯದ ಇಂಗಿತವ ಬಲ್ಲ ಶರಣ. ಒಡಲ ಬಿಟ್ಟ ಶರಣನಲ್ಲದೆ, ಉಳಿದ ಪ್ರಾಣಘಾತಕ ಪಾತಕರಿವರೆತ್ತಲು, ಶ್ರೀಶೈಲ ಚೆನ್ನಮಲ್ಲಿಕಾರ್ಜುನಯ್ಯ, ನಿಮ್ಮ ಶರಣ ಬಸವಣ್ಣಂಗಲ್ಲದೆ.
--------------
ಅಕ್ಕಮಹಾದೇವಿ
ಅಯ್ಯಾ, ನಾವು ಪರಮವಿರಕ್ತರು, ಪಟ್ಟದ ಅಯ್ಯನವರು, ಚರಮೂರ್ತಿಗಳು, ಪರದೇಶಿಗಳು ಎಂದು ಶಂಖ ಗಿಳಿಲು ದಂಡಾಗ್ರ ಎಂಬ ಬಿರುದು ಪಿಡಿದು, ಕಾವಿ ಕಾಷಾಯಾಂಬರವ ಹೊತ್ತು, ಸರ್ವಕಾರ್ಯದಲ್ಲಿ ಶ್ರೇೀಷ*ರೆಂದು ಗರ್ವದಲ್ಲಿ ಕೊಬ್ಬಿ, ಕಾಮನಾಟದಲ್ಲಿ ಕಲಕಿ, ಮನಸ್ಸಿನಲ್ಲಿ ದುರ್ಗುಣವನ್ನಿಟ್ಟುಕೊಂಡು ಮಾತಿನಲ್ಲಿ ನೀತಿಯ ಸೇರಿಸುತ್ತ ಕಪಟದಲ್ಲಿ ಚರಿಸುವಂತಹ ತೊನ್ನ ಹೊಲೆಮಾದಿಗರ ಸಂಗಮಾಡಲಾಗದು, ಅವರ ಪ್ರಸಂಗವ ಕೇಳಲಾಗದು. ಅದೇನು ಕಾರಣವೆಂದಡೆ: ಗುರುಲಿಂಗಜಂಗಮವಾದ ಬಳಿಕ ಅಷ್ಟಾವರಣದಲ್ಲಿ ನಿಷಾ*ಪರವಾಗಿರಬೇಕು. ಪರಧನ ಪರಸತಿಯರ ಹಿಡಿಯೆನೆಂಬ ನೇಮದಲ್ಲಿ ಬಲ್ಲಿದರಾಗಿರಬೇಕು. ಶಿವಭಕ್ತರಾದವರ ಭವವ ಗೆಲಿಸಿ ಮೋಕ್ಷವ ಹೊಂದಿಸಬೇಕು. ಶಿವಲಾಂಛನವ ಹೊತ್ತ ಬಳಿಕ ಶಿವನಂತಿರಬೇಕು ಬರಿದೆ, ನಾನು ಮಾಹೇಶ್ವರನೆಂದು, ನಾನು ಶಿವಭಕ್ತನೆಂದು ತನ್ನ ಹೃನ್ಮಂದಿರದಲ್ಲಿ ನೆಲಸಿದ ಚಿನ್ಮಯಜಂಗಮಲಿಂಗಕ್ಕೆ ತನು-ಮನ-ಧನವೆಂಬ ತ್ರಿವಿಧಪದಾರ್ಥವನರ್ಪಿಸಿ, ತ್ರಿವಿಧಪ್ರಸಾದವ ಗರ್ಭೀಕರಿಸಿಕೊಂಡು, ಪ್ರಸನ್ನಪ್ರಸಾದವ ಸ್ವೀಕರಿಸಿ ಪರತತ್ವಪ್ರಸಾದದಲ್ಲಿ ತಾನು ತಾನಾಗಲರಿಯದೆ ಉಚ್ಚಂಗಿದುರ್ಗಿಗೆ ಬಿಟ್ಟ ಪೋತರಾಜನಂತೆ ಮೂರು ಮೂರು ಜಡೆಗಳ ಬಿಟ್ಟು, ಆಡಿನೊಳಗಿರುವ ಹಿರಿಯ ಹೋತಿನಂತೆ ಮೊಳ ಮೊಳ ಗಡ್ಡವ ಬಿಟ್ಟು, [ಡಂ]ಬ ಜಾತಿಗಾರನಂತೆ ವೇಷವ ತೊಟ್ಟು, ಮೀಸೆಯ ಬೋಳಿಸಿಕೊಂಡು, ಕೈಪವ ಧರಿಸಿ, ಸಂಸ್ಕೃತ ಗೀರ್ವಾಣಭಾಷೆಯ ಕಲಿತು, ಕಾಕ ಕುಟಿಲ ಕುಹಕದ ಗಾಳಿಪೂಜೆಯಿಂದ ಬಂದ ಸುಡಗಾಡು ಸಿದ್ಧಯ್ಯಗಳಂತೆ, ಗಿಡಮೂಲಿಕೆಗಳು ತಂತ್ರ ಮಂತ್ರ ಯಂತ್ರದ ಭಾಷೆಗಳ ಕಲಿತುಕೊಂಡು ಪುರಜನರ ಮೆಚ್ಚಿಸಬೇಕೆಂದು ಅಯ್ಯಾ, ನಾವು ಕೆರೆ ಭಾವಿಯನಗೆಸಬೇಕೆಂದು, ಮಠ ಗುಡಿಯ ಕಟ್ಟಿಸಬೇಕೆಂದು, ಮಾನ್ಯದಲಿ ಬಿಲ್ವಗಿಡಗಳ ಹಚ್ಚಬೇಕೆಂದು, ಮದುವೆ ಅಯ್ಯಾಚಾರವ ಮಾಡಬೇಕೆಂದು, ಅನ್ನಕ್ಷೇತ್ರ ಅರವಟ್ಟಿಗೆಯ ಇಡಿಸಬೇಕೆಂದು, ಪುರಾಣಗಳ ಹಚ್ಚಿಸಬೇಕೆಂದು, ಇಂತಪ್ಪ ದುರಾಸೆಯ ಮುಂದುಗೊಂಡು ನಾನಾ ದೇಶವ ತಿರುಗಿ, ಅರಸರ ಮದದಂತೆ ಗರ್ವದಿಂದ ಹೆಚ್ಚಿ, ಹೇಸಿ ಹೊಲೆ ಮಾದಿಗರ ಕಾಡಿ ಬೇಡಿ, ಹುಸಿಯನೆ ಬೊಗಳಿ ಒಬ್ಬನ ಒಲವ ಮಾಡಿ[ಕೊಂ]ಡು, ವ್ಯಾಪಾರ ಮರ್ಯಾದೆಯಲ್ಲಿ ಪೇಟೆಯಲ್ಲಿ ಕುಳಿತು ಅನಂತ ಮಾತುಗಳನಾಡುತ್ತ, ಸೆಟ್ಟಿ ಮುಂತಾದ ಅನಂತ ಕಳ್ಳ ಹಾದರಗಿತ್ತಿಯ ಮಕ್ಕಳ ಮಾತಿನಿಂದೊಲಿಸಿ, ಅವರು ಕೊಟ್ಟಡೆ ಹೊಗಳಿ, ಕೊಡದಿರ್ದಡೆ ಬೊಗಳಿ, ಆ ಭ್ರಷ್ಟ ಹೊಲೆಮಾದಿಗರು ಕೊಟ್ಟ ದ್ರವ್ಯಗಳ ತೆಗೆದುಕೊಂಡು ಬಂದು ಕಡೆಗೆ ಚೋರರು ಒಯ್ದರೆಂದು ಮಠದೊಳಗೆ ಮಡಗಿಕೊಂಡು ಪರಸ್ತ್ರೀಯರ ಹಡಕಿ ಯೋನಿಯೊಳಗೆ ಇಂದ್ರಿಯ ಬಿಟ್ಟು, ಕಾಮಕ್ರೋಧದಲ್ಲಿ ಮುಳುಗಿ ಮತಿಗೆಟ್ಟು, ಶಿವಪಥಕ್ಕೆ ದೂರಾಗಿ, ದುರಾಚಾರವ ಆಚರಿಸಿ, ನಡೆನುಡಿಗಳ ಹೊರತಾಗಿ, ವ್ಯರ್ಥ ಹೊತ್ತುಗಳೆದು, ಸತ್ತುಹೋಗುವ ಜಡದೇಹಿ ಕಡುಪಾತಕ ಕತ್ತೆ ಹಡಿಕರಿಗೆ ಪರಮ ನಿರಂಜನ ಜಂಗಮಲಿಂಗದೇವರೆಂದು ಕರೆತಂದು, ಪಾದತೀರ್ಥ ಪ್ರಸಾದವ ತೆಗೆದುಕೊಂಬುವರಿಗೆ ಇಪ್ಪತ್ತೊಂದು ಯುಗಪರಿಯಂತರ ನರಕಕೊಂಡದಲ್ಲಿಕ್ಕುವ. ಇಂತಪ್ಪ ಜಂಗಮವನು ಪೂಜೆ ಮಾಡುವಂತಹ ಶಿವಭಕ್ತನ ಉಭಯತರ ಮೂಗ ಸೀಳಿ ಮೆಣಸಿನ ಹಿಟ್ಟು ತುಪ್ಪವ ತುಂಬಿ, ಪಡಿಹಾರಿ [ಉತ್ತಣ]ಗಳೆಡದ ಪಾದುಕೆಯಿಂದ ಪಡಪಡನೆ ಹೊಡಿ ಎಂದಾತ ನಮ್ಮ ಅಂಬಿಗರ ಚೌಡಯ್ಯ ನಿಜಶರಣನು.
--------------
ಅಂಬಿಗರ ಚೌಡಯ್ಯ
ಬಹಿರಂಗದದಲ್ಲಿ ಬಿಟ್ಟ ಮಹೇಶರು ಬ್ರಹ್ಮನ ವಂಶದವರು. ಅಂತರಂಗದ್ಲ ಬಿಟ್ಟ ಮಹೇಶರು ವಿಷ್ಣುವಿನ ವಂಶದವರು. ಎರಡರಲ್ಲಿ ಬಿಟ್ಟ ಮಹೇಶರು ಕಪಿಲಸಿದ್ಧಮಲ್ಲಿಕಾರ್ಜುನ-ಮಹಾದೇವಿಯ ಸಂಗದಿಂದ ಹುಟ್ಟಿದವರು ಕಾಣಾ, ಯೋಗಿನಾಥಾ.
--------------
ಸಿದ್ಧರಾಮೇಶ್ವರ
ಶ್ರೀವಿಭೂತಿಯ ಬಿಟ್ಟು ತಪಸ್ಸು ಮಾಡಿದಡೆ, ಆ ತಪಸ್ಸಿನ ಸಿದ್ಧಿ ಬಯಲು. ಶ್ರೀವಿಭೂತಿಯ ಬಿಟ್ಟು ದೀಕ್ಷೆಯ ಕೊಂಡಡೆ, ಆ ದೀಕ್ಷೆಯೆಲ್ಲ ಬಯಲು. ಶ್ರೀವಿಭೂತಿಯ ಬಿಟ್ಟು ಮಂತ್ರಂಗಳ ಸಾಧಿಸಿದೆಡೆ, ಆ ಮಂತ್ರಸಿದ್ಧಿಯು ಬಯಲು. ಶ್ರೀವಿಭೂತಿಯ ಬಿಟ್ಟು ಯಜ್ಞಂಗಳ ಸಾಧಿಸಿದಡೆ, ಆ ಯಜ್ಞಸಿದ್ಧಿಯು ಬಯಲು. ಶ್ರೀವಿಭೂತಿಯ ಬಿಟ್ಟು ದೇವತಾರ್ಚನೆಯ ಮಾಡಿದಡೆ, ಆ ದೇವತಾರ್ಚನಾಸಿದ್ಧಿಯೂ ಬಯಲು. ಶ್ರೀವಿಭೂತಿಯ ಬಿಟ್ಟು ವಿದ್ಯವ ಸಾಧಿಸಿದಡೆ, ಆ ವಿದ್ಯಾಸಿದ್ಧಿಯು ಬಯಲು. ಶ್ರೀವಿಭೂತಿಯ ಬಿಟ್ಟು ವೇದವ ಪಠಿಸಿದಡೆ, ಆ ವೇದಸಿದ್ಧಿಯು ಬಯಲು. ಅದೆಂತೆಂದಡೆ:ಲೈಂಗೇ- ನ ದೀಕ್ಷಾ ನ ತಪೋ ಮಂತ್ರಂ ನ ಯಜ್ಞೋ ದೇವತಾ ನ ಚ | ವಿದ್ಯಾ ನೈವಾಗಮಜ್ಞಾನಂ ಭಸ್ಮಮಾಹಾತ್ಮ್ಯವರ್ಜಿತಂ || ಎಂದುದಾಗಿ, ಬಸವಪ್ರಿಯ ಕೂಡಲಚೆನ್ನಸಂಗಮದೇವಾ, ನಿಮ್ಮ ದಿವ್ಯಾಲಂಕಾರಮಪ್ಪ ದಿವ್ಯಭಸಿತವ ಬಿಟ್ಟ ಪಂಚಮಹಾಪಾತಕಂಗೆ ಆವ ಕಾರ್ಯವೂ ಸಿದ್ಧಿಯಿಲ್ಲ.
--------------
ಸಂಗಮೇಶ್ವರದ ಅಪ್ಪಣ್ಣ
ಮಾಳಿಗೆಯ ಮಣ್ಣು ಮಂಟಪಕ್ಕೆ ಸರಿಯೆ ? ಆಳಿಂಗೆ ಅರಸು ಸರಿಯೆ ? ಸೂಳೆಗೆ ಪತಿವ್ರತೆ ಸರಿಯೆ ? ನಿವಾಳಿಸಿ ಬಿಟ್ಟ ವಾಳಿಮಾನವರಿಗೆ ಮೇಳವಾಡಿ ಮುಕರಿದರೆ ಭಕ್ತಿಬೆಳವಿಗೆ ಸರಿಯೆ ? ಅಗ್ಗ ಕೂಗಳಿಗೂಳರ ಮುಖವ ನೋಡಲಾಗದು ಅಖಂಡ ಪರಿಪೂರ್ಣ ಘನಲಿಂಗಗುರು ಚೆನ್ನಬಸವೇಶ್ವರ ಶಿವಸಾಕ್ಷಿಯಾಗಿ.
--------------
ಕುಷ್ಟಗಿ ಕರಿಬಸವೇಶ್ವರ
ಬಿಟ್ಟ ಪದವಿಯ ಬಟ್ಟೆಗೆ ಪೋಪಾತನಲ್ಲ ನೋಡಾ, ಶರಣನು. ಬಿಟ್ಟು ಬಿಟ್ಟು ಬಯಟ್ಟು ಅಟ್ಟೆಬಟ್ಟೆಗೊಂಡರು ಭವಕ್ಕೆ. ಹಿಡಿದು ಹಿಡಿದು ಭವಕ್ಕೆ ಬಾರದೆ ಭವವಿರಹಿತರಾದರು ಕಂಡೆಯಾ, ಕಪಿಲಸಿದ್ಧಮಲ್ಲಿಕಾರ್ಜುನ, ನಿಮ್ಮ ಮಹಾಮಹಿಮ ಶರಣರು.
--------------
ಸಿದ್ಧರಾಮೇಶ್ವರ
ಅಚ್ಚಪ್ರಸಾದಿಗಳೆಂದು ಹೆಸರಿಟ್ಟುಕೊಂಡು ಪ್ರಸಾದಿಗಳ ಕಂಡರೆ ಅಗಲನೆಲ್ಲವ ನೀರಿನಿಂದ ತೊಳೆತೊಳೆದು ಮುಸುರಿಗೆ ಬಿಟ್ಟ ಎಮ್ಮಿಯಂತೆ ಕುಡಿದು, ಆಯತಮಾಡಿ ಅಗಲನೆಲ್ಲವ ನೆಕ್ಕಿ ನೀರ ತೊಂಬಲವೆಲ್ಲ ತೆಗೆವರು. ಆರೂ ಇಲ್ಲದ ವೇಳೆಯಲ್ಲಿ ರಣಬೀರರಂತೆ ಕೂಳ ತಿಂದು ಚಲ್ಲಾಡಿ, ತುದಿಹಸ್ತವ ತೊಳೆದು ಹೋಗುವವರಿಗೆ ಅಚ್ಚಪ್ರಸಾದವೆಲ್ಲಿಹುದಯ್ಯ ? ದೇಹಕ್ಕೆ ವ್ಯಾಧಿ ಸಂಘಟಿಸಿದಲ್ಲಿ ತನ್ನ ಖಬರು ತನಗೆ ವಿಸ್ಮøತಿಯಾಗಲು ಆ ವೇಳೆಯಲ್ಲಿ ಅನ್ನ ಉದಕವ ಆರು ನೀಡಿದಡೆಯೂ ಜೀವನ ಕಕಲಾತಿಗೆ ತಾ ಮಲಗಿರ್ದ ಹಾಸಿಗೆಯಲ್ಲಿ ಏಳದೆ ಮಲಗಿರ್ದಲ್ಲಿ ಅನ್ನ ಉದಕವ ತಿಂಬುವವರಿಗೆ ಎಲ್ಲಿಹುದಯ್ಯ ಅಚ್ಚಪ್ರಸಾದ ? ಇಂತಪ್ಪ ವ್ರತಭ್ರಷ್ಟ ಸೂಳೆಯಮಕ್ಕಳು ನುಚ್ಚಬಡಕರಲ್ಲದೆ ಇವರು ಅಚ್ಚಪ್ರಸಾದಿಗಳಾಗಬಲ್ಲರೆ ? ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಹಿಡಿದು ಬಿಟ್ಟ ಬಳಿಕ ಅಂತಿರಬೇಕಲ್ಲದೆ, ಇನ್ನು ಹಿಡಿದು ತಪ್ಪಿದ ವಸ್ತುವ ಅರಸಿ ಹಿಡಿಯಲುಂಟೆ ? ಮುನಿದು ಹಾವಿನೊಳಿಟ್ಟು ಒಸೆದು ಆನೆಯನೇರಿಸಿಹೆನೆಂದಡೆ, ಶಿವಶರಣರ ಮುನಿಸು ತಿಳಿಯದು ನೋಡಾ. ಒಡೆದ ಮುತ್ತು ನಾಣ್ಯಕ್ಕೆ ಸಲ್ಲದು, ಒಡೆದ ಹಾಲು ಅಮೃತಕ್ಕೆ ಸಲ್ಲದು. ನಾವೇತಕಯ್ಯಾ, ನಿನಗಂದು ಸೊಡ್ಡಳನ ಶರಣರು ನಿರೂಪವ ಕೊಡಲು, ಎನ್ನ ಪರಮಾರಾಧ್ಯರು ಸಂಗನಬಸವಣ್ಣನ ತಿಳುಹುತಿರ್ದರು.
--------------
ಸೊಡ್ಡಳ ಬಾಚರಸ
ಸತ್ತ ಶವ ಕಿಚ್ಚ ಬಲ್ಲುದೆ? ನಿಷೆ* ನಿಬ್ಬೆರಗಾದ ಕರ್ತೃ ಮತ್ರ್ಯರ ಬಲ್ಲನೆ? ತೊಟ್ಟು ಬಿಟ್ಟ ಹಣ್ಣು ಮತ್ತೆ ಹತ್ತುವದೆ? ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ ನಿಲ್ಲು ಮಾಣು.
--------------
ಘಟ್ಟಿವಾಳಯ್ಯ
ರಾಜಯೋಗದಲ್ಲಿ ನಿಶ್ಚಿಂತನಾದ ಯೋಗೀಶ್ವರನ ಸಹಜವರ್ತನಧರ್ಮವೆಂತೆನೆ : ಅರ್ಧಾವಲೋಚನವೆನಿಸುವ ಅರೆಮುಗಿದ ನೇತ್ರವುಳ್ಳಾತನಾಗಿ, ಸಕಲ ಸಂಶಯಂಗಳ ಬಿಟ್ಟ ಮನವುಳ್ಳಾತನಾಗಿ, ಮತ್ತಾ ಮನವು ಸುಷುಪ್ತಿಯಲ್ಲಿ ಮರೆಯದಂತೆ ಜಾಗ್ರದಲ್ಲಿ ಕೆದರದಂತೆ ನಿಶ್ಚಲಮಂ ಮಾಡಿ, ಭ್ರೂಮಧ್ಯಲಕ್ಷ್ಯದಲ್ಲಿರಲದೇ ಉನ್ಮನಿಯ ಸ್ವರೂಪವು. ಅದೇ ಪರಮಪದವು; ಅದೇ ಜ್ಞಾನವು; ಅದೇ ಮೋಕ್ಷವು; ಅದೇ ಪರಮರಹಸ್ಯಮಾದ ಶಿವಯೋಗವು. ಅದರಿಂದೆ ಅನ್ಯಮಾದ ಅರ್ಥಮಂ ಪೇಳ್ವ ಗ್ರಂಥವಿಸ್ತಾರವೆಲ್ಲವು ವ್ಯರ್ಥಮಪ್ಪುದಾಗಿ ಈ ಉನ್ಮನಿಯ ಸಾಧಿಸುವಾತನೆ ಜೀವನ್ಮುಕ್ತ ನೋಡಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಅವಸ್ಥೆಗಳಿಪ್ಪತ್ತುನಾಲ್ಕನು ಹೀಂಗೆ ದರ್ಶನವ ಮಾಡಿದಾತನು ಶಿವಮುಕ್ತನು, ಆತನು ಶಿವಯೋಗಿ ಲಿಂಗಾನುಭಾವಿ. ಆ ಶಿವಮುಕ್ತನಿಗೆ ಪಂಚಮಲಂಗಳು ಪಂಚಶಕ್ತಿಗಳು ಬಿಟ್ಟ ಪ್ರಕಾರ ದರ್ಶನವದೆಂತೆಂದಡೆ : ಮುಂದೆ ಇದ್ದ ಮಾಯಾಭೋಗದ ಇಚ್ಛೆಯಿಲ್ಲದಿಹುದೆ ತಿರೋಧಾನಮಲ ನಷ್ಟ, ಕರ್ಮವ ತೊರೆದು ಸುಖದುಃಖಗಳು ಸಮವಾಗಿ ಪಂಚಕೃತ್ಯಂಗಳು ಕೆಟ್ಟುದಾಗಿ, ಮಹಾಮಾಯೆ ನಷ್ಟ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ತಟ್ಟು ಗೋಣಿಸೊಪ್ಪು ಸಕಲಾತಿ ಅಲ್ಲ[ವು], ತೊತ್ತಿನ ಮಗ ಭಕ್ತನಲ್ಲವಯ್ಯಾ, ಹಿರಿಯ ದೇವತೆಗೆ ಬಿಟ್ಟ ಕೋಣ ಗೂಳಿಯಲ್ಲವಯ್ಯಾ. ಕಂಡ ತೊತ್ತಿಗೆ ಹುಟ್ಟಿದವ ಜಂಗಮವಲ್ಲವಯ್ಯಾ. ಹಣತಿ ನೆಕ್ಕುವ ಮಠಪತಿ ಪಂಚಮಠಕ್ಕೆ ಸಲ್ಲ. ಈ ಮೂ[ಳ]ರಿಗೆ ಆದಿಯಲ್ಲಿ ಗುರುಉಪದೇಶ[ವ] ತುಂಬಿಲ್ಲ. ಈ ಮೂ[ಳ]ರ ಮೂಗು ಕೊಯ್ದು ಉಪ್ಪು ಸಾರು ತುಂಬಿ, ನೆತ್ತಿಯ ಬೋಳಿಸಿ ಕತ್ತೆಯನೇರಿಸಿ, ಮೇಲೆ ನಿಂಬೆಯ ಹುಳಿಯ ಬಿಟ್ಟು, ಪಡುವ ದಾರಿಗೆ ಹೊಡೆಯೆಂದಾತ ನಮ್ಮ ಅಂಬಿಗರ ಚೌಡಯ್ಯ
--------------
ಅಂಬಿಗರ ಚೌಡಯ್ಯ
ಇನ್ನಷ್ಟು ... -->