ಅಥವಾ

ಒಟ್ಟು 43 ಕಡೆಗಳಲ್ಲಿ , 9 ವಚನಕಾರರು , 40 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಗುರುಕಾರುಣ್ಯವ ಪಡೆದು ಲಿಂಗಸ್ವಾಯತವಾದ ಬಳಿಕ ಸರ್ವಾಂಗಲಿಂಗಮೂರ್ತಿ ಪರಶಿವನು. ಇನ್ನು ಮತ್ತೆ ಸಾಮಾನ್ಯಕ್ರೀಯ ವರ್ತಿಸುವ ಅಜ್ಞಾನಿಗಳನು ಏನೆಂದೆನ್ನಬಹುದಯ್ಯಾ? ಹೃದಯ ಭ್ರೂಮಧ್ಯ ಬ್ರಹ್ಮರಂಧ್ರದಲ್ಲಿ ಶಿವನಿಪ್ಪನು. ಇಡಾ ಪಿಂಗಲಾ ಸುಷುಮ್ನಾ ನಾಡಿಯಲ್ಲಿ ಪ್ರಾಣವಾಯುಗಳಡಸಿಕೊಂಡು ಹೋಗಿ ಕೂಡಿ ಒಂದಪ್ಪ ಆಯಸವ ನೋಡಾ. ಬಹಿರಂಗದಲ್ಲಿ ಮುಕ್ತಿಕ್ಷೇತ್ರಂಗಳ ಹೊಕ್ಕು ಲಿಂಗದರ್ಶನ ಸ್ಪರ್ಶನಯುಕ್ತರ ಆಯಸವ ನೋಡಾ. ಶಿವ ಶಿವ ಶ್ರೀಗುರು ಸಾಮಾನ್ಯವೇ? ಸಾಮಾನ್ಯವಾಗಿ ಕಾಣಲಹುದೆ? ಇಹಿಂಗೆ ಜ್ಞಾನ? ಈ ಪರಿಯ ಕೇಳುವುದೆ? ಅದೃಷ್ಟವ ದೃಷ್ಟಮಾಡಿ ಕೊಟ್ಟನು ಶ್ರೀಗುರು. ಅಪವಿತ್ರೋದಕ, ಗಂಗೆಯ ಕೂಡಿ ಗಂಗೆಯಾಯಿತ್ತು ನೋಡಿರಿ, ಕಾಷ*, ಅಗ್ನಿಯ ಕೂಡಿ ಅಗ್ನಿಯಾಯಿತ್ತು ನೋಡಿರಿ, ಸದ್ಭಕ್ತನು ಲಿಂಗವ ಕೂಡಿ ಲಿಂಗವಾದನು. ನಗರೀನಿರ್ಜರಾದ್ಯಂಬು ಗಂಗಾಂ ಪ್ರಾಪ್ಯ ಯಥಾ ತಥಾ ದೀಕ್ಷಾಯೋಗಾತ್ತಥಾ ಶಿಷ್ಯಃ ಶೂದ್ರೋ[s]ಪಿ ಶಿವತಾಂ ವ್ರಜೇತ್ ಭಕ್ತದೇಹೀ ಮಹಾದೇವೋ ತದ್ದೇಹೋ ಲಿಂಗಮೇವ ಚ ಅಂತರ್ಬಹಿಶ್ಚ ಲಿಂಗಂ ಚ ಸರ್ವಾಂಗಂ ಲಿಂಗಮೇವ ಚ ಇಂತೆಂದುದಾಗಿ, ಇನ್ನು ಸಂದೇಹ ಬೇಡ. ಶ್ರೀಗುರುಕಾರುಣ್ಯದಿಂದ ಲಿಂಗವ ಧರಿಸಿ ಲಿಂಗಾರ್ಚನೆಯ ಮಾಡಿ ಸರ್ವಾಂಗಲಿಂಗವಾಗಿಪ್ಪುದಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಅಂಗದ ಮೇಲೆ ಶಿವಲಿಂಗಸಾಹಿತ್ಯವಿಲ್ಲದ ಅಂಗ ಅನೇಕ ಅಘೋರಪಾಪಕ್ಕೆ ಅವಕಾಶವಾಗಿಪ್ಪುದಯ್ಯಾ. ಇದಕ್ಕೆ ಶ್ರುತಿ: ``ಯಾ ತೇ ರುದ್ರ ಶಿವಾ ತನೂರಘೋರಪಾಪಕಾಶಿನೀ ಇದು ಕಾರಣ ಗುರುಕಾರುಣ್ಯವ ಪಡೆದು ಲಿಂಗಾನುಗ್ರಹಕನಾದ ಪ್ರಾಣಲಿಂಗಸಂಬಂಧಿಯೇ ಶಿವೈಕ್ಯನು. ಅಂತಪ್ಪ ಶಿವೈಕ್ಯಂಗೆ ಅಧರ್ಮವೇ ಧರ್ಮ, ವಿಷವೇ ಪಥ್ಯ, ಅರಿಯೇ ಮಿತ್ರರು. ಅಂದೆಂತೆದಡೆ: ಅರಿರ್ಮಿತ್ರಂ ವಿಷಂ ಪಥ್ಯಂ ಅಧರ್ಮೋ ಧರ್ಮತಾಂ ವ್ರಜೇತ್ ಪೂಜಿತೇ ಪಾರ್ವತೀನಾಥೇ ವಿಪರೀತೇ ವಿಪರ್ಯಯಃ ಇಂತೆಂದುದಾಗಿ, ಸೌರಾಷ್ಟ್ರ ಸೋಮೇಶ್ವರನ ಶರಣರಿಗೆ ಸರಿಯಿಲ್ಲವಾಗಿ ಅಪ್ರತಿಮರು.
--------------
ಆದಯ್ಯ
ಶ್ರಮಿಸಿದುದೆ ಶ್ರಾದ್ಧ, ಪ್ರೇತವಾದುದೆ ಪ್ರೇದ್ಧ. ಇಂತೀ ಪ್ರೇದ್ಧವೆಂಬುದಿಲ್ಲವಾಗಿ ಶ್ರಾದ್ಧವೆಂಬುದಿಲ್ಲ. ಶ್ರಾದ್ಧ ಪ್ರೇದ್ಧಗಳೆಂಬುದಿಲ್ಲವಾಗಿ ತದ್ದಿನಂಗಳೆಂಬುದಿಲ್ಲ. ತದ್ದಿನಂಗಳೆಂಬುದಿಲ್ಲವಾಗಿ ಸಂಕಲ್ಪಭುಂಜನೆ ಇಲ್ಲ. ಅದೇನುಕಾರಣವೆಂದಡೆ, ಪ್ರಾಣಲಿಂಗಸಂಗದಿಂ ಲಿಂಗಪ್ರಾಣವಾಯಿತ್ತಾಗಿ, ಶಿವಪ್ರಸಾದಸೇವ್ಯದಿಂ ಪ್ರಸಾದಕಾಯವಾ[ಯಿ]ತ್ತಾಗಿ, ಇಂತಲ್ಲದೆ, ಅಂಗೋಪಜೀವಿಗಳು ತದ್ದಿನಂಗಳ ಮಾಡುವಲ್ಲಿ ``ಇದಂ ವಿಷ್ಣುರ್ವಿಚಕ್ರಮೇ ತ್ರೇಧಾ ನಿಧದೇ ಪದಂ ಸಮೂಳ್ಹಮಸ್ಯ ಪಾಂಸುರೇಱಱ ಎಂಬ ಮನು ಮಂತ್ರದಿಂ ಸಂಕಲ್ಪಿಸಿಕೊಂಡು, ಸುರೆ ಮಾಂಸವ ಭುಂಜಿಸುವ ತದ್ದಿನವೆ ದೋಷದಿನ. ಇದಕ್ಕೆ ಶ್ರುತಿ: ತದ್ದಿನಂ ದಿನದೋಷೇಣ ಸುರಾಶೋಣಿತಮಾಂಸಯೋಃ ಅತಿಸಂಕಲ್ಪ್ಯ ಭುಂಜೀಯಾತ್ gõ್ಞರವಂ ನರಕಂ ವ್ರಜೇತ್ ಇಂತೆಂದುದಾಗಿ, ತದ್ದಿನ ಸೇವ್ಯ ರೌರವನರಕ ಸೌರಾಷ್ಟ್ರ ಸೋಮೇಶ್ವರಾ.
--------------
ಆದಯ್ಯ
ಸಾಕಾರವಿಡಿದು ಪರಬ್ರಹ್ಮ, ನಿರಾಕಾರವಿಡಿದು ಪರಬ್ರಹ್ಮವೆಂಬಿರಿ. ಪರಬ್ರಹ್ಮವ ನುಡಿವಿರಿ, ಪರಬ್ರಹ್ಮವನರಿದಿಹೆವೆಂಬಿರಿ, ಅರಿಹಿಸಿಹೆವೆಂಬಿರಿ, ಆನೆ ಪರಬ್ರಹ್ಮವೆಂಬಿರಿ, ಪರಬ್ರಹ್ಮವನರಿಯದೆ ನುಡಿವಿರಿ, ಬ್ರಹ್ಮದೊಡಕು ಅರಿದು ಕಂಡಿರಣ್ಣಾ. ಈ ಬ್ರಹ್ಮದೊಡಕಿಂದ ಮುನ್ನೊಮ್ಮೆ ದೇವಜಾತಿಗಳು ಋಷಿಜನಂಗಳು ಬ್ರಹ್ಮನನು, ಪರಬ್ರಹ್ಮವ ಬೆಸಗೊಳಲು ಅಹಂ ಬ್ರಹ್ಮವೆಂದು ತಲೆಯ ಹೋಗಾಡಿಕೊಂಡುದು ಸರ್ವಪುರಾಣಪ್ರಸಿದ್ಧ, ಇನ್ನೂ ತಲೆಯ ಮೋಟು ಕಾಣಬರುತ್ತದೆ. ಬ್ರಹ್ಮನ ಶಿರ ಪರಬ್ರಹ್ಮದ ಕೈಯಲ್ಲಿದೆ. ಆನೆ ಪರಬ್ರಹ್ಮವೆಂದು ಸನತ್ಕುಮಾರ ಒಟ್ಟೆಯಾದುದು ಸ್ಕಂದ ಪುರಾಣಪ್ರಸಿದ್ಧ. ಅವರಂತಾಗದೆ, ಪರಬ್ರಹ್ಮದ ನೆಲೆಯ ಕೇಳಿರಣ್ಣಾ: ಲಿಂಗವೇ ಪರಬ್ರಹ್ಮವೆಂದು ಅಥರ್ವಣ ಹೇಳುತ್ತದೆ, `ಏಕೋ ರುದ್ರಸ್ಸ ಈಶಾನಃ ಸ ಭಗವಾನ್ ಸ ಮಹೇಶ್ವರೋ ಮಹಾದೇವ ಇತಿ ಈ ಪ್ರಕಾರದಲೆ ಯಜುರ್ವೇದ ಹೇಳುತ್ತಿದ್ದಿತ್ತು. ಋತಂ ಸತ್ಯಂ ಪರಂ ಬ್ರಹ್ಮ ಪುರುಷಂ ಕೃಷ್ಣ ಪಿಂಗಲಂ ಊಧ್ರ್ವರೇತಂ ವಿರೂಪಾಕ್ಷಂ ವಿಶ್ವರೂಪಾಯ ವೈ ನಮಃ ಈ ಪ್ರಕಾರದಲ್ಲಿ ಶಿವಸಂಕಲ್ಪೋಪನಿಷತ್ ಹೇಳುತ್ತಿದೆ. ಋತಂ ಸತ್ಯಂ ಪರಂ ಬ್ರಹ್ಮಪುರುಷಂ ಕೃಷ್ಣ ಪಿಂಗಲಂ ಊಧ್ರ್ವರೇತಂ ವಿರೂಪಾಕ್ಷಂ ತನ್ಮೇ ಮನಶ್ಶಿವಸಂಕಲ್ಪಮಸ್ತು ಎಂದುದಾಗಿ ಲಿಂಗವೇ ಪರಬ್ರಹ್ಮ. ಮುನ್ನೊಮ್ಮೆ ಹರಿಬ್ರಹ್ಮರ ಸಂವಾದದಲ್ಲಿ ಉರಿಲಿಂಗ ಉದ್ಭವವಾದಲ್ಲಿ ಹರಿಬ್ರಹ್ಮಾದಿಗಳು ಸ್ತೋತ್ರವ ಮಾಡಿದರು. ಲೈಂಗ್ಯ ಪುರಾಣದಲ್ಲಿ, ಜ್ವಾಲಾಮಾಲಾವೃತಾಂಗಾಯ ಜ್ವಲನಸ್ತಂಭರೂಪಿಣೇ ನಮಶ್ಶಿವಾಯ ಶಾಂತಾಯ ಬ್ರಹ್ಮಣೇ ಲಿಂಗಮೂರ್ತಯೇ ಇದು ಮುನ್ನೊಮ್ಮೆ ಬ್ರಹ್ಮಕಾರಣ ಲಿಂಗವೇ ಪರಬ್ರಹ್ಮ, ಶಿವನೇ ಪರಬ್ರಹ್ಮವೆಂದು ಮತ್ತೆ ಯಜುರ್ವೇದ ನುಡಿಯುತ್ತಿದೆ. ಈಶಾನಸ್ಸರ್ವವಿದ್ಯಾನಾಮೀಶ್ವರಸ್ಸರ್ವಭೂತಾನಾಂ ಬ್ರಹ್ಮಾಧಿಪತಿ ಬ್ರಹ್ಮಣೋ[s]ಧಿಪತಿಬ್ರ್ರಹ್ಮಾ ಶಿವೋ ಮೇ[s]ಸ್ತು ಸದಾಶಿವೋಂ ಆದಿತ್ಯ ಪುರಾಣದಲೂ ಮಹಾಪುರುಷ ಆದಿತ್ಯ ಹೇಳುತ್ತಿದ್ದಾನೆ: ಪರಬ್ರಹ್ಮಾ ಚ ಈಶಾನ ಏಕೋ ರುದ್ರಸ್ಸ ಏವ ಚ ಭಗವಾನ್ ಮಹೇಶ್ವರಸ್ವಾಕ್ಷಾನ್ಮಹಾದೇವೋ ನ ಸಂಶಯಃ ಯಸ್ಯಾಂತಸ್ಥಾನಿ ಭೂತಾನಿ ಯೇನೇದಂ ಧಾರ್ಯತೇ ಜಗತ್ ಬ್ರಹ್ಮೇತಿ ಯಂ ಜಹುರ್ವೇದಾಃ ಸರ್ವೇ ತಂ ಶರಣಂ ವ್ರಜೇತ್ ಕೂರ್ಮ ಈಶ್ವರಗೀತೆಯಲ್ಲಿ, ಆವ್ಯಕ್ತಂ ಕಾರಣಂ ಪ್ರಾಹುರಾನಂದಂ ಜ್ಯೋತಿರಕ್ಷರಂ ಅಹಮೇವ ಪರಬ್ರಹ್ಮ ಮತ್ತೋ[s]ನ್ಯಂ ಹಿ ನ ವಿದ್ಯತೇ ಅಹಂ ತತ್ಪರಮಂ ಬ್ರಹ್ಮ ಪರಮಾತ್ಮಾ ಸನಾತನಃ ಮಹಾಪುರುಷ ಮನು ಮಾನವಪುರಾಣದಲ್ಲೂ ಹೇಳಿದನು: ಋತಂ ಸತ್ಯಂ ಪರಬ್ರಹ್ಮಪುರುಷಂ ಸೋಮವೀಶ್ವರಂ ಊಧ್ರ್ವರೇತಂ ಸಮುತ್ಪತ್ತಿಸ್ಥಿತಿಸಂಹಾರಕಾರಣಂ ವಿಶ್ವರೂಪಂ ವಿರೂಪಾಕ್ಷಂ ಚಂದ್ರಮೌಳಿಂ ಘೃಣಾನಿಧಿಂ ಹರಣ್ಯಬಾಹುಮದ್ವಂದ್ವಂ ಹಿರಣ್ಯಪತಿಮೀಶ್ವರಂ ಅಂಬಿಕಾಯಾಃ ಪತಿಂ ಸಾಕ್ಷಾದುಮಾಯಾಃ ಪತಿಮಕ್ರಿಯಂ ಪರತತ್ವಂ ಸಮಾಖ್ಯಾತಂ ಶಿವಂ ಧ್ಯಾಯಂತಿ ಸಂತತಂ ತೈತ್ತಿರೀಯ ಶ್ರುತಿ, `ಸದ್ವಿಪ್ರಾಹಿ..... ಎಂದುದಾಗಿ, ಬಹಳ ಬಹಳ ಚಕ್ಷು, ಬಹಳ ಬಹಳ ಮುಖನು, ಬಹಳ ಬಹಳ ಬಾಹು, ಬಹಳ ಪಾದನು, ಇಂತಹ ಬಹಳ ಲಿಂಗವೆ, ಬ್ರಹ್ಮ ಕಾಣಿರಣ್ಣಾ. `ಅಣೋರಣೀಯಾನ್ ಮಹತೋ ಮಹೀಯಾನ್' ಎಂದುದಾಗಿ, ಬಹಳಕ್ಕೆ ಬಹಳ, ಮಹಾಬಹಳ ಲಿಂಗವೆ ಬಹಳಬ್ರಹ್ಮ ಕಾಣಿರಣ್ಣಾ. ಯತೋ ವಾಚೋ ನಿವರ್ತಂತೇ ಅಪ್ರಾಪ್ಯ ಮನಸಾ ಸಹ ನಾದಬಿಂದುಕಳಾತೀತಂ ಗುರುಣಾ ಲಿಂಗಮುದ್ಭವಂ ಎಂದುದಾಗಿ, ಮನೋವಾಕ್ಕಾಯ ನಾದಬಿಂದುಕಳೆಗೆ ಅತೀತನಾದ ಮಹಾಬಹಳ ಲಿಂಗವನು ಶ್ರೀಗುರು ನಿರೂಪಿಸಿ ಕೊಟ್ಟನಾಗಿ ಈ ಲಿಂಗವೇ ಪರಬ್ರಹ್ಮ ಕಾಣಿರಣ್ಣಾ. ಇದು ಕಾರಣ, ಪರಬ್ರಹ್ಮಲಿಂಗವೆಂದು ಧ್ಯಾನಿಸಿ ಪೂಜಿಸಿ ಮಹಾನಂದ ಪರಮುಕ್ತಿಯನೈದಿದರು ಪೂರ್ವದಲ್ಲಿ ದೇವಜಾತಿಗಳು ಹಲಬರು, ಇದು ಪುರಾಣ ಪ್ರಸಿದ್ಧ. ಕಲಿಯುಗದಲ್ಲಿ ದೃಷ್ಟ: ಬಸವರಾಜದೇವರು ಮೊದಲಾದ ಅಸಂಖ್ಯಾತ ಮಾಹೇಶ್ವರರು ಇದನರಿದು ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಲಿಂಗವೆ ಪರಬ್ರಹ್ಮವೆಂದು ಅರಿದು ಧ್ಯಾನಿಸಿ ಪೂಜಿಸಿ ಮಹದಾನಂದಮುಕ್ತಿಯನೈದಿದರಣ್ಣಾ.
--------------
ಉರಿಲಿಂಗಪೆದ್ದಿ
ಲಿಂಗವಂತನು ಲಿಂಗವಂತರಲ್ಲಿಯೇ ಸಂಗವ ಮಾಡುವುದು, ಲಿಂಗಬಾಹ್ಯರ ಸಂಗವ ಮಾಡಲಾಗದು. ಸ್ತ್ರೀ ಪುತ್ರರು ಮೊದಲಾದವರ ಕೂಡ ಲಿಂಗವಿಲ್ಲದವರೊಡನೆ ಸಂಗವ ಮಾಡಲಾಗದು. ಅದೆಂತೆಂದೆಡೆ : ಶಿವಲಿಂಗಾಂಗಸಂಪನ್ನೋ ಲಿಂಗಬಾಹ್ಯಸತೀಸುತಾನ್ ಆಲಿಂಗ್ಯ ಚುಂಬನಂ ಕೃತ್ವಾ ರೌರವಂ ನರಕಂ ವ್ರಜೇತ್ ಎಂದುದಾಗಿ ಮತ್ತೆಯೂ_ ಲಿಂಗೀ ಲಿಂಗಿ ಸಹಾವಾಸೀ ಲಿಂಗಿನಾ ಸಹ ವರ್ತಯೇತ್ ಲಿಂಗಿನಾ ಸಹ ಭುಂಜಿತ ಲಿಂಗಯೋಗೋ ನ ಸಂಶಯಃ ಎಂದುದಾಗಿ ಲಿಂಗವಂತನು ಲಿಂಗವಂತರಲ್ಲಿಯೇ ಸಂಗವ ಮಾಡುವುದು ಶಿವಪಥವಯ್ಯಾ. ಲಿಂಗವಿಲ್ಲದವರೊಡನೆ ಸಂಗವ ಮಾಡುವುದು ಮಹಾಪಾತಕವಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.
--------------
ಉರಿಲಿಂಗಪೆದ್ದಿ
ಇನಿಗಬ್ಬಿನೊಳಗಿನ ತನಿರಸವನರಿಯದೆ ಸೋಗೆಯ ಹೊರಗಿನ ರವದಿಯ ಸವಿದು ಸಂತಸಬಡುವ ಮೇಷದಂತೆ, ಅಂತರಂಗದ ಆತ್ಮತೀರ್ಥವನುಳಿದು ಹೊರಗಿನ ಜಡಭೌತಿಕತೀರ್ಥವ ಬೆದಕಿ ಬೆಂಡಾಗಿ ಹಲವೆಡೆಗೆ ಹರಿವ ನರಗುರಿಗಳು ಕೈಸೇರಿದ ರತ್ನವನೊಗೆದು ಕಾಜಿನ ಗುಂಡನು ಕೊಂಡ ಮರುಳನಂತಾಗಿಪ್ಪರು ನೋಡಾ ! ಆತ್ಮತೀರ್ಥಂ ಸಮುತ್ಸೃಜ್ಯ ಬಹಿಸ್ತೀರ್ಥಾಣಿ ಯೋ ವ್ರಜೇತ್ ಕರಸ್ಥಂ ಸುಮಹಾರತ್ನಂ ತ್ಯಕ್ತ್ವಾ ಕಾಚಂ ವಿಮಾರ್ಗತೇ ಎಂದುದಾಗಿ, ಕೂಡಲಚೆನ್ನಸಂಗಮದೇವಾ, ನಿಮ್ಮ ನಿಲವಿನ ಗುರುಲಿಂಗಜಂಗಮವೆ ಎನ್ನ ಸ್ವರೂಪವೆಂದರಿದೆನಾಗಿ ಆ ಗುರುಲಿಂಗಜಂಗಮದ ಪಾದೋದಕವೆ ಆತ್ಮತೀರ್ಥವಾಗಿಪ್ಪುದು ಕಾಣಾ. ಅಂತಪ್ಪ ಆತ್ಮತೀರ್ಥವ ಪಡೆದು ಪರಮಪವಿತ್ರನಾಗಿಪ್ಪೆನು.
--------------
ಚನ್ನಬಸವಣ್ಣ
ಶ್ರೀಗುರುಕರಜಾತರೆನಿಸಿ, ನಿಜಮೋಕ್ಷಾಪೇಕ್ಷನೆನಿಸಿ, ಸ್ವಯಚರಪರ ಭಕ್ತಗಣಾರಾಧ್ಯರ ಅರ್ಚನೆ ಪೂಜನೆ ಮಾಡಿ, ದಾಸೋಹಂಭಾವದಿಂದ ಪರತರಬ್ರಹ್ಮಪರಿಪೂರ್ಣಾನಂದವಸ್ತುವೆಂದು ಸಮರಸಾಚರಣೆಯಿಂದ ಹತ್ತುಹನ್ನೊಂದು ಕೊಟ್ಟು ಕೊಂಡ ಮೇಲೆ, ಸಂಕಲ್ಪಭಾವ ತಥ್ಯಮಿಥ್ಯಗಳಿಂದ ಆಸೆ ಆಮಿಷದ ಪಾಶಬದ್ಧ ಜಡಜೀವಿಗಳ ಹುಸಿಮಾತನಾಲಿಸಿ, ವಿವೇಕತಪ್ಪಿ, ನಸುಗುನ್ನಿಕಾಯಂತೆ ಮೋರೆಯಾಗಿ, ತುಮುರೆಕಾಷ*ದಂತೆ ನುಡಿಯಾಗಿ, ವಾರೆನೋಟಗಳಿಂದ ಸಮರಸವನುಳಿದು, ಭಿನ್ನಭಾವದಿಂದ ಕುಂದುನಿಂದ್ಯವ ನುಡಿವುದೊಂದು ದುರಾಚಾರ. ನುಡಿಸೂಸಿದ ಮೇಲೆ ಒಬ್ಬರೊಬ್ಬರು ಅವಿಚಾರಿಗಳಾಗಿ, ಬಾಜಾರಕ್ಕೆ ನಿಂತು, ತನಗಿಂದ ಸ್ವಲ್ಪ ಮನುಷ್ಯರನಾಶ್ರಯಿಸಿ, ಪಂಥಪರಾಕ್ರಮಿಗಳಿಂದ ತಥ್ಯಮಿಥ್ಯವ ನುಡಿದು, ಅರ್ಚನಾರ್ಪಣಗಳ ತೊರೆದು, ದೋಷಾರ್ಥಿಯಾಗಿ ವರ್ತಿಸುವುದೊಂದು ದುರಾಚಾರ. ಭಕ್ತಗಣಂಗಳು ವಾರಬಡ್ಡಿಗಳ ಕೊಟ್ಟು ಕೊಂಡು ವ್ಯವಹರಿಸಿ, ಈಷಣತ್ರಯದ ಅಂಗವಿಷಯದಿಂದ ದ್ರವ್ಯವ್ಯಾಪಾರಿಯಾಗಿ, ದುರಾತ್ಮರಂತೆ ಬಾಜಾರಕ್ಕೆ ಬಿದ್ದು ಕಠಿಣನುಡಿಗಳ ಬಳಸುವುದೊಂದು ದುರಾಚಾರ. ಹೊನ್ನು ಹೆಣ್ಣು ಮಣ್ಣು ಧಾನ್ಯ ವಸ್ತ್ರಗಳಿಗೆ ಹೊಣೆ ಜಾವಿೂನುಗಳಾಗಿ ಅಸನ ವಸನದಿಚ್ಛೆಗೆ ಮಿತಿದಪ್ಪಿದಲ್ಲಿ , ಸಾಕ್ಷಿ ವಾದಕ್ಕೆ ನಿಂತು, ಆಡಬಾರದ ಮಾತನಾಡುವುದೊಂದು ದುರಾಚಾರ. ಗುರುಹಿರಿಯ ಪಿತ-ಮಾತೆಗಳಿಗೆ ತಾ ಗಳಿಸಿದ ದ್ರವ್ಯವ ವಂಚಿಸಿ, ಇದ್ದೂ ಇಲ್ಲಯೆಂದು ಹುಸಿನುಡಿಯ ನುಡಿವುದೊಂದು ದುರಾಚಾರ. ಗುರುಚರಲಿಂಗಮೂರ್ತಿಗಳು ಹಸಿವಿಗನ್ನ, ಶೀತಕ್ಕೆ ವಸ್ತ್ರ, ಪಾದಕ್ಕೆ ವಾಹನವಾದುದ ಬೇಡಿದಲ್ಲಿ ತನಗೆ ತ್ರಾಣಿದ್ದು ಅವರಿಗೆ ಈಗ ದೊರೆಯದೆಂದು ಪ್ರಪಂಚನುಡಿಯ ನುಡಿವುದೊಂದು ದುರಾಚಾರ. ಈ ದುರಾಚಾರ ಹುಸಿನುಡಿಗಳನಳಿದುಳಿದು, ಭ್ರಾಂತುಭ್ರಮೆಗಳ ನೀಗಿ, ತನ್ನ ನಡೆನುಡಿಗಳು ತನಗೆ ಪ್ರಮಾಣವಾಗಿ, ನಿರ್ವಂಚಕತನದಿಂದ ಶ್ರುತಿಗುರುಸ್ವಾನುಭಾವವಿಡಿದು, ತಥ್ಯಮಿಥ್ಯವನಡಿಮೆಟ್ಟಿ, ಕಿಂಕರಭಾವದೊಳು ಗುರುಹಿರಿಯರ ಪ್ರಮಾದವಶದಿಂದ ಪ್ರಮಥಗಣಮಾರ್ಗವ ಬಿಟ್ಟಾಚರಿಸುವದ ಪರಶಿವಲಿಂಗಮೂರ್ತಿ ಹರಗಣಸಾಕ್ಷಿಯಾಗಿ ತಾನು ಕಂಡಲ್ಲಿ , ಅವರನಾಚರಿಸದಾಚಾರದ ಸ್ಥೂಲಸೂಕ್ಷ್ಮವಾದೊಡೆ ಹರಗಣಂಗಳೊಡನೆ ಅವರಿಗೆ ಶರಣುಹೊಕ್ಕು, ಹರಗುರುವಾಕ್ಯಪ್ರಮಾಣವಾಗಿ ಮೃದುತರ ನುಡಿಗಳಿಂದ ತಾವು ಅವರೊಡನೆ ಏಕಭಾವದಿಂದ ಕ್ರಿಯಾಲೀಲೆಯ ಸಮಾಪ್ತವ ಮಾಡುವುದು. ಇದಕ್ಕೆ ಮೀರಿ ಸ್ಥೂಲವಾದೊಡೆ ಮೌನಧ್ಯಾನದಿಂದ ಪರಶಿವಲಿಂಗಸಾಕ್ಷಿಯಾಗಿ, ಹರಗಣಕ್ಕೊಪ್ಪಿಸಿ, ಹತ್ತು ಹನ್ನೊಂದರ ಸಮರಸಾನುಭಾವವ ತ್ಯಜಿಸಿ, ಆಪ್ಯಾಯನಕ್ಕನ್ನ, ಸೀತಕ್ಕೆ ವಸ್ತ್ರ, ಲಾಂಛನಕ್ಕೆ ಶರಣೆಂದು ಬಯಲಿಗೆ ಬೀಳದೆ ಸುಮ್ಮನಿರ್ಪುದೆ ಪ್ರಮಥಗಣಮಾರ್ಗವು. ಈ ಸನ್ಮಾರ್ಗವನುಳಿದು ಕಿರಾತರಂತೆ ಹುಸಿಶಬ್ದ, ಹೊಲೆಶಬ್ದ , ಹೇಸಿಕೆಶಬ್ದ, ವಾಕರಿಕೆಶಬ್ದ, ಬಾಂಡಿಕಶಬ್ದ, ನೀಚರನುಡಿ, ಷಂಡರಮಾತು, ಕಳ್ಳರನುಡಿ, ಜಾರರನುಡಿ, ಜೂಜುಗಾರರನುಡಿ, ಆಟಕಾರರನುಡಿ, ಬೇಟೆಗಾರರನುಡಿ, ಕುಲಛಲಗಾರರನುಡಿ, ಲಾಹರಿಗಾರರನುಡಿ, ಅಶನಘಾತಕರನುಡಿ, ಲಂಚಗಾರರನುಡಿ, ರಿಣಪಾತಕರನುಡಿ, ಮೋಸಗಾರರನುಡಿ, ಭ್ರಾಂತರನುಡಿ, ಕೋಪಿಗರನುಡಿ, ಆಚಾರಹೀನ ನಡೆಗೆಟ್ಟರನುಡಿ, ಬಳ್ಳದತುದಿಹೀನ ಶಬ್ದದಂತೆ ತುಂಟ ತುಡುಗುಣಿ ಹಲವು ಮಾತುಗಳ ಬಳಕೆಯುಳ್ಳುದೆ ಚತುರ್ಥಪಾತಕವು. ಇದಕ್ಕೆ ಹರವಾಕ್ಯ ಸಾಕ್ಷಿ : ``ಕುಶಬ್ದಂ ಹೀನಶಬ್ದಂ ಚ ಚಾಂಡಾಲಃ ಶ್ವಪಚೋýಪಿ ವಾ | ಹೀನಶಬ್ದಸ್ಯ ಪಾಪಾಚ್ಚ ನರಕೇ ಕಾಲಮಕ್ಷಯಂ || ಅನೃತಂ ಚಾಪಶಬ್ದಂ ಚ ನಿಂದಕೋ ಗುರುತಲ್ಪಗಃ | ಗಣಾದಿವಾದದೂಷ್ಯಶ್ಚ ವೇಶ್ಯಾಪುತ್ರಸ್ತಥೈವ ಚ || ಪರನಿಂದಾವಂದನಾಶ್ಚ ಲಿಂಗಸಂಗಿವಿವರ್ಜಿತಂ | ಪ್ರಮಾದಂ ಕುರುತೇ ವಾಣ್ಯಾ ಮೋಕ್ಷೋ ನಾಸ್ತಿ ಮಹೇಶ್ವರಿ || ಅನ್ಯದೋಷೇಣ ನಿಂದ್ಯಮಾಸ್ತು ಸ್ವದೋಷಗುಪ್ತಪಾತಕಃ | ಗುರುಭ್ರಷ್ಟಸ್ಯ ಚಾಂಡಾಲೋ ರೌರವಂ ನರಕಂ ವ್ರಜೇತ್ ||'' ಇಂತೆಂದುದಾಗಿ, ಪರಮಾರಾಧ್ಯ ಶ್ರೀಗುರುಕಟಾಕ್ಷೆಯಿಂದ ತನ್ನ ತಾನರಿದು, ಈ ಲಿಂಗಾಂಗಸಂಗಸಂಬಂಧದಾಚರಣೆಯ ಸುಖವು ಏನು ತಪಸ್ಸಿನ ಫಲವೋಯೆಂದರಿದು ಮರೆದರೆ ಇನ್ನೀ ನಿಜಮೋಕ್ಷವು ದೊರೆಯದೆಂದು ಗುರುಹಿಯರ ನಡೆನುಡಿಗಳಾಲಿಸಿ, ನಡೆನುಡಿಭಿನ್ನವಾಗದಂತೆ ಚತುರ್ಥಪರಮದ್ರೋಹದ ಪಾತಕಮಂ ನಿರಸನಂಗೈದು ನಿಜಪರಶಿವಘನಕ್ಕೆ ಘನವೆನಿಸಿರ್ಪುದು ಕಾಣಾ ನಿರವಯಪ್ರಭು ಮಹಾಂತ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಭಕ್ತಿಭಾಂಡದ ಶಿವಭಕ್ತರ ನಿಷೇಧವ ಮಾಡುವ ಕರ್ಮಭಾಂಡದ ದ್ವಿಜರು ನೀವು ಕೇಳಿಭೋ : `ಸತ್ಯಂ ಭೋ ಬ್ರೂತ ಪಂಚಪ್ರಾಣ ಇಂದ್ರಿಯನಿಗ್ರಹಮೆಂದೋದಿ ಗುದ್ದಿ ಗುದ್ದಿ ಹೋತನ ತಿಂಬುದಾವಾಚಾರವೊ ? `ಪಿತಾಮಹಶ್ಚ ವೈಶ್ಯಸ್ತು ಕ್ಷತ್ರಿಯೋ ಪರಯೋ ಹರಿಃ ಬ್ರಾಹ್ಮಣೋ ಭಗವಾನ್ ರುದ್ರಃ ಸರ್ವೇಷ್ವ್ಯುತ್ತಮೋತ್ತಮಃ ಎಂಬ ಶ್ರುತಿಯ ನೋಡಿ, ತಮ್ಮ ಕುಲದೈವವಹ ಬ್ರಾಹ್ಮಣನಹ ರುದ್ರನ ನಿಂದಿಸಿ, ತಮಗಿಂದ ಕೀಳುಜಾತಿಯಹ ಕ್ಷತ್ರಿಯ ಹರಿಯ ಆರಾಧಿಸುವ ಕುಲಹೀನರು ನೀವು ಕೇಳಿಭೋ : `ಜನ್ಮನಾ ಜಾಯತೇ ಶೂದ್ರಃ ಕರ್ಮಣಾ ದ್ವಿಜ ಉಚ್ಯತೇ `ವೇದಾಭ್ಯಾಸೇನ ವಿಪ್ರಸ್ತು ಬ್ರಹ್ಮಣಾ ಚರಂತೀತಿ ಬ್ರಾಹ್ಮಣಃ ಎಂಬ ಶ್ರುತಿಯನೋದಿ, ಪರಬ್ರಹ್ಮನಂತಹ ಶಿವಲಿಂಗಪೂಜೆಯನಾಚರಿಸಿ ಬ್ರಾಹ್ಮಣತ್ವವನೈ[ದದೆ] ಶತಯಾಗಂಗಳ ಮಾಡಿ ಶೂದ್ರನಹ ಇಂದ್ರತ್ವವ ಬಯಸುವ ಅಧಮರು ನಿವು ಕೇಳಿಭೋ : `ಜನ್ಮನಾ ಜಾಯತೇ ಶೂದ್ರಃ ಮಾತಾ ಸಾ ಪ್ರಥಮಂ ಶೂದ್ರಾಣಿ ನಚೋಪದೇಶಃ ಗಾಯತ್ರೀ ನ ಚ ಮೌಂಜೀ ನ ಚ ಕ್ರಿಯಾ ಎಂದುದಾಗಿ, ದೀಕ್ಷೆಯಿಲ್ಲದೆ ಸತಿಶೂದ್ರಗಿತ್ತಿಗೆ ಹುಟ್ಟಿದವನೊಡನುಂಬ ಅನಾಚಾರಿಗೆ ಎಲ್ಲಿಯದೊ ಬ್ರಾಹ್ಮಣತ್ವ ? ಆವ ಜಾತಿಯವನಾದರೇನು ಶಿವಭಕ್ತನೆ ಬ್ರಾಹ್ಮಣ. ಅದಕ್ಕೆ ಸಾಕ್ಷಿ : . `ತಪಸಾ ಬ್ರಾಹ್ಮಣೋ[s]ಭವತ್ ಸಾಂಖ್ಯಾಯನ ಮಹಾಮುನಿಃ ತಪಸಾ ಬ್ರಾಹ್ಮಣೋ[s]ಭವತ್ ಗೌತಮಸ್ತು ಮಹಾಮುನಿಃ ಜಾತಿಂ ನ ಕಾರಯೇತ್ತೇಷು ಶ್ರೇಷಾ*ಃ ಸಮಭವಂಸ್ತತಃ ತಜ್ಜಾತಿರಭವತ್ತೇನ' ಎಂದುದಾಗಿ, ತಮ್ಮ ತಮ್ಮ ಗೋತ್ರಂಗಳೆ ಸಾಕ್ಷಿಯಾಗಿ ಸಾರುತ್ತಿರಲು ಕುಭ್ರಮೆಯಾತಕ್ಕೆ ? ಶ್ವಪಚೋ[s]ಪಿ ಮುನಿಶ್ರೇಷ*ಃ ಶಿವಭಕ್ತಿಸಮನ್ವಿತಃ ಶಿವಭಕ್ತಿವಿಹೀನಸ್ತು ಶ್ವಪಚೋ[s]ಪಿ ದ್ವಿಜಾಧಮಃ ಎಂದುದಾಗಿ ಶಿವಭಕ್ತನೆ ಕುಲಜ, ಶಿವಭಕ್ತಿ ಇಲ್ಲದವನೆ ಶ್ವಪಚನೆಂದರಿಯದ ಅಜ್ಞಾನಿಗಳು ನೀವು ಕೇಳಿಭೋ ! `ಏಕ ಏವ ರುದ್ರೋ ನ ದ್ವಿತೀಯಾಯತಸ್ಥೇ' ಎಂದು ವೇದವನೋದಿ `ಪಶುಪತಯೇ ನಮಃ' ಎಂದಾ ರುದ್ರವನೋದಿ ಶಿವನೆ ಪತಿ ಮಿಕ್ಕಿನ ದೈವಂಗಳೆಲ್ಲ ಪಶುಗಳೆಂಬುದ ತಿಳಿದು ಮತ್ತೆಯೂ ಈ ದ್ವಿಜರು ಕಾಣಲರಿಯರು. ಹರಹರನೊಂದೆಯೆಂಬ ನರಗುರಿಗಳು ನೀವು ಕೇಳಿಭೋ ! ಪಾರಾಶ[ರ] ಪುರಾಣೇ : ಆದೌ ರುದ್ರಾಂಗಮುತ್ಪತ್ತಿಃ ಮುಖೇ ಬ್ರಾಹ್ಮಣವೀಶ್ವರಃ ವಿಷ್ಣುಂ ಕ್ಷತ್ರಿಯಮಿತ್ಯಾಹುರ್ಬಾಹುನಾ ಚ ಅವಸ್ಥಿತಃ ವೈಶ್ಯಶ್ಚ ಬ್ರಹ್ಮಾ ಇತ್ಯಾಹುಃ ಲಿಂಗಾದೇವ ಅವಸ್ಥಿತಃ ಸುರಪೋ ಶೂದ್ರಯಿತ್ಯಾಹುಃ ದೇವಪಾದಾದವಿಸ್ಥಿತಃ ಎಂದುದಾಗಿ, ರುದ್ರನ ಮುಖದಲ್ಲಿ ಹುಟ್ಟಿದವನೆ ಬ್ರಾಹ್ಮಣ, ಮಿಕ್ಕಾದ ವಿಪ್ರರೆಲ್ಲರು ಋಷಿಗೋತ್ರದಲ್ಲಿ ಹುಟ್ಟಿದರು. ಆ ಋಷಿಮೂಲದ ವಿಪ್ರರೆಲ್ಲರು ಅಧಮಜಾತಿ ಅಧಮಜಾತಿಯಾದರೇನು ? ರುದ್ರಭಕ್ತರಾದ ಕಾರಣ ಬ್ರಾಹ್ಮಣರಾದರು. ಈ ವರ್ಮವನರಿಯದ ಚಾಂಡಾಲ ವಿಪ್ರರ್ಗೇನೂ ಸಂಬಂಧವಿಲ್ಲ. ಕಾಕ ರುದ್ರನ ಮುಖದಲ್ಲಿ ಉದ್ಭವವೆಂಬುದಕ್ಕೆ ಶ್ವಾನಸೂಕರರೂಪೇ ಪ್ರೇತಪಿಂಡ ಪ್ರದಾನತಃ ಪ್ರೇತತ್ವಂ ಚ ಸದಾ ಸ್ಯಾತ್ ತಥಾ ಧರ್ಮೇಣ ಲುಪ್ಯತೇ ಎಂದುದಾಗಿ ಆಗಮಾರ್ಥವನರಿಯದೆ, ಪ್ರೇತಪಿಂಡವನಿಕ್ಕುವ ಪಾತಕರು, [ಪ್ರಾಣಾಯಸ್ವಾಹಾ]ಅಪಾನಾಯ ಸ್ವಾಹಾ, ವ್ಯಾನಾಯ ಸ್ವಾಹಾ ಉದಾನಾಯ ಸ್ವಾಹಾ, ಸಮಾನಾಯ ಸ್ವಾಹಾ' ಎಂದು ಭೂತಬಲಿಯ ಬೆಕ್ಕು ನಾಯಿಗೆ ಹಾಕಿ ಮಿಕ್ಕ ಭೂತಶೇಷವ ಕೊಂಬ ಅಕುಲಜರು, ನೀವು ಕೇಳಿಭೋ ! `ವಸುರೂಪೋ ಮಧ್ಯಪಿಂಡಃ ಪುತ್ರ¥õ್ಞತ್ರಪ್ರವರ್ಧನಃ' ಎಂದು, ರುದ್ರಪ್ರಸಾದವನೆ ಕೊಂಡು ರುದ್ರಪಿಂಡದಿಂದ ಹುಟ್ಟಿ, ದೀಕ್ಷಾಕಾಲದಲ್ಲಿ ಭಸಿತವ ಧರಿಸಿ, ಬ್ರಹ್ಮಕಪಾಲಪಾತ್ರೆಯಂ ಪಿಡಿದು, ಪಲಾಶಕಂಕಾಳದಂಡಮಂ ಪಿಡಿದು, `ಭವತೀ ಭಿಕ್ಷಾಂ ದೇಹಿ'ಯೆಂದು ಭಿಕ್ಷಮಂ ಬೇಡಿ ಪಿತೃಕಾರ್ಯದಲ್ಲಿ `ವಿಶ್ವೇ ದೇವಾಂಸ್ತರ್ಪಯಾಮಿ'ಯೆಂದರ್ಚಿಸಿ, ಮರಣಕಾಲದಲ್ಲಿ ರುದ್ರಭೂಮಿಯಲ್ಲಿ ರುದ್ರಾಗ್ನಿಯಿಂದ ದಹನ ರುದ್ರವಾಹನದ ಬಾಲವಿಡಿದು ಸ್ವರ್ಗವನೆಯ್ದಿದರು, ರುದ್ರಭಕ್ತಿವಿರುದ್ಧ ವಿಚಾರಹೀನರು. `ತ್ರ್ಯಾಯುಕ್ಷಂ ಜಮದಗ್ನೇಃ ಕಶ್ಯಪಸ್ಯ ತ್ರಿಯಾಯುಷಂ, ಅಗಸ್ತ್ಯಸ್ಯ ತ್ರಿಯಾಯುಷಂನತನ್ಮೇಡಿಸ್ತುಫತ್ರಿಯಾ ಶತಸಯುಷಂ ಎಂದು ಸಕಲಋಷಿಗಳು ಶ್ರೀ ವಿಭೂತಿಯನು ಧರಿಸಿ, ಬಹಳಾಯುಷ್ಯಮಂ ಪಡೆದರೆಂದು ಮತ್ತೆಯು ಯಜುಸ್ಸಿನಲ್ಲಿ ದೀಕ್ಷೆಯನೈದಲ್ಲಿ, `ಭೂತಿವಾಂಶ್ಚ ಪ್ರಿಯಂ ಹೋತವ್ಯಂ'ಯೆಂದು, ಶ್ರೀವಿಭೂತಿಯನೆ ಧರಿಸಹೇಳಿತ್ತು ವೇದವು. `ಗೋಪೀ ಮಲಿನಧಾರೀ ತು ಶಿವಂ ಸ್ಪೃಶತಿ ಯೋ ದ್ವಿಜಃ ತದೈಕವಿಂಶತಿಕುಲಂ ಸಾಕ್ಷಾತ್ತು ನರಕಂ ವ್ರಜೇತ್ ' ಎಂದು, ಗೋಪಿ ಮಲಿನ ಚಂದನವನಿಟ್ಟು, ಪಾತಕರು[ವ] ಶಿವಲಿಂಗ ಮುಟ್ಟಿದರೆ ತಮ್ಮಿಪ್ಪತ್ತೊಂದು ಕುಲಸಹಿತ ಕೇಡಿಲ್ಲದ ನರಕದಲ್ಲಿ ಬೀಳುವರೆಂದರಿಯದೆ ಮುಟ್ಟಿಯನಿಟ್ಟ ಭ್ರಷ್ಟರು, ಮತ್ಸ್ಯ ಕೂರ್ಮ ವರಾಹ ನಾರಸಿಂಹ ಈ ನಾಲ್ಕೂ ಅವತಾರದಲ್ಲಿ ನೀರಿಂದ ಬಲಿ ಧಾರೆಯನೆರೆದನೆಂಬುದನರಿದು, ವಿಷ್ಣುವಿನ ಪಾದದಲ್ಲಿ ಗಂಗೆ ಹುಟ್ಟಿತೆಂಬ ವಿಚಾರಹೀನರು `ವಿಯದ್ವಿಷ್ಣುಪದಂ ಪ್ರೋಕ್ತಂ ಪುಂಸ್ಯಾಕಾಶವಿಹಾಯಸೀ ವಿಹಾಯಸೋ[s]ಪಿನಾಕೋ[s]ಪಿ ದ್ಯುರಪಿ ಸ್ಯಾತ್ತಿದವ್ಯಯಂ' ಎಂದು ನಿಘಂಟಿನಲ್ಲಿ ಆಕಾಶದ ಹೆಸರು ವಿಷ್ಣುಪದಿ, ಆಕಾಶಗಂಗೆ ಮುನ್ನಲುಂಟೆಂಬುದನರಿತು, ವಿಷ್ಣುವಿನ ಕಾಲಲ್ಲಿ ಗಂಗೆ ಹುಟ್ಟಿತೆಂಬ ದುಷ್ಟರು, ವೇದಕ್ಕೆ ನೆಲೆಗಟ್ಟು ಓಂಕಾರ, ಬ್ರಾಹ್ಮಣಕ್ಕೆ ನೆಲೆಗಟ್ಟು ಗಾಯತ್ರಿಯಲ್ಲಿ ಶಿವನೆ ದೈವವೆಂದಿತ್ತು. `ಓಂ ಭೂಃ ಓಂ ಭುವಃ ಓಂ ಸುವಃ ಓಂ ಮಹಃ ಓಂ ಜನಃ ಓಂ ತಪಃ ಓಂ ಸತ್ಯಂ ಓಂ ತತ್ಸವಿತುರ್ವರೇಣ್ಯಂ ಭರ್ಗೋ ದೇವಸ್ಯ ಧೀಮಹಿ ಧಿಯೋ ಯೋ ನಃ ಪ್ರಚೋದಯಾತ್ ಹರ ಹರಿಭಕ್ತನೆಂದನಿಸುವ ವಿಚಾರಹೀನರು ನೀವು ಕೇಳಿಭೋ ! ಹರಿ ಶಿವನ ಭಕ್ತನೆಂಬುವದಕ್ಕೆ ಸಾವಿರಕಮಲ ಕೊರತೆಗೆ ತನ್ನ ನಯನ ಕಮಲಮಂ ಕಳೆದು ಶಿವನಂಘ್ರಿಗರ್ಪಿಸಿ, ಚಕ್ರಮಂ ಪಡೆದನೆಂದು ಮಹಿಮದಲ್ಲಿ ಹರಿಸ್ತೇ ಸಾಹಸ್ರಂ ಕಮಲಬಲಿಯಾಧಾಯ ಪದಯೋಃ' ಎಂದೋದಿ ಮರೆದ ಮತಿಭ್ರಷ್ಟರು ನೀವು ಕೇಳಿಭೋ ! ಹರನೆ ಕರ್ತ, ಹರಿಯೆ ಭೃತ್ಯನೆಂಬುದಕ್ಕೆ ರಾಮಪ್ರತಿಷೆ* ಶಿವಲಿಂಗ[ದ] ಮೂರ್ತಿಗಳಿಂ ಕಾಣಿರೆ, ಕಂಡು ತಿಳಿಯಲರಿಯದ ಹುಲಮನುಜರು ಶ್ರೀರಾಮನ ಗುರು ವಶಿಷ* ಹಂಪೆಯಲ್ಲಿ ವಿರೂಪಾಕ್ಷಲಿಂಗನ ಭಕ್ತನೆಂದರಿದು, ಕೃಷ್ಣಾವಿಷ್ಣುವಿನ ಗುರು ಉಪಮನ್ಯು ಅಹಿಪುರದಲ್ಲಿ ಸೋಮೇಶ್ವರಲಿಂಗನ ಭೃತ್ಯನೆಂಬುದನರಿದು, ಇಂತು ಭೃತ್ಯನ ಶಿಷ್ಯಂಗೆ ಕರ್ತನ ಸರಿಯೆಂಬ ಕರ್ಮಚಂಡಾಲರು ನೀವು ಕೇಳಿಭೋ ! `ಅಸಂಖ್ಯಕೋಟಿಬ್ರಹ್ಮಾಣಾಂ ಕೋಟಿವಿಷ್ಣುಗಣಂ ತತಃ ಗಂಗಾವಾಲುಕ ಸಮೌ ಹೇvõ್ಞ ಕಿಂಚಿದಜ್ಞಾಃ ನ ಮಹೇಶ್ವರಾತ್ ಎಂದು ರುದ್ರನ ಎವೆಯಾಡುವನಿತಕ್ಕೆ ಲೆಕ್ಕವಿಲ್ಲದ ಕೋಟಿ ಬ್ರಹ್ಮವಿಷ್ಣುರು ಸತ್ತುಹೋದರೆಂದು ಓದಿ ತಿಳಿದು ಇಂಥ ಹುಲುದೈವಂಗಳ `ಮೃತ್ಯುಂಜಯಃ ನಿತ್ಯಃ ಏಕೋ ದೇವಃ ನ ದ್ವಿತೀಯಃ' ಎಂದೆನಿಸುವ ಶಿವಗೆ ಸರಿಯಂದೆನಿಸುವ ಭವಿವಿಪ್ರರಿಗೆ ತಾವು ಓದುವ, ವೇದಾಗಮಂಗಳು ತಮಗೆ ಹಗೆಯಾಗಿ ನಡೆಯೊಂದು ಪರಿ ನುಡಿಯೊಂದು ಪರಿ ಆಗಿಹುದು. ಅದೆಂತೆಂದರೆ:ಗೌತಮ ದಧೀಚಿ ಭೃಗುವಾದಿಯಾಗಿ ಹಿರಿಯರುಗಳೇ ಶಾಪದಿಂದ ಶಾಪಹತರಾಗಿ ಶಿವದ್ರೋಹಿಗಳಾಗಿ ನರಕಕ್ಕಿಳಿವ ಚಾಂಡಾಲರಿಂದ ವಿಪ್ರರ ಸತ್ಪಾತ್ರರೆಂದಾರಾಧಿಸುವರ ನರಕದ ಕುಳಿಯೊಳು ಮೆಟ್ಟಿ ನರಕಾಗ್ನಿಯಿಂದ ಸುಡುತಿರ್ಪ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಶ್ರೀಗುರುಕರುಣಕಟಾಕ್ಷದೊಳ್ ಚಿದ್ಘನಲಿಂಗ ಅಂಗಸಂಬಂಧದಾಚರಣೆಯ ಸರ್ವಾಚಾರಸಂಪದವೆಂಬ ಪರಮಾಮೃತಮಂ ಸವಿದುಂಡುಪವಾಸಿ ಬಳಸಿಬ್ರಹ್ಮವಾಗಿ, ಪರಮಪಾತಕವೆಂಬ ಕಾಲ ಕಾಯ ಮಾಯಾಪಾಶ ಭವಸಾಗರವ ದಾಂಟಿ, ದೃಢಚಿತ್ತಿನೊಳ್ ನಿಂದ ನಿತ್ಯಸುಖಿಗಳು, ತಮ್ಮ ನಡೆ ನುಡಿ ತಮಗೆ ಸ್ವಯವಾಗಿ, ಸತ್ಯಶುದ್ಧದಿಂದ ಹಸ್ತಪಾದವ ದುಡಿಸಿ, ಮಾಡುಂಬ ಭಕ್ತನಾಗಲೀ, ಬೇಡುಂಬ ಮಹೇಶನಾಗಲೀ, ಅಂಗವಿಕಾರದ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರವೆಂಬ ಅವಲಕ್ಷಣಮಂ ಜರಿದು ಮರೆದು ನಿರಾಸತ್ವದಿಂದ, ದೇಹಮೋಹಮನ್ನಳಿದುಳಿದು, ಅಪರಾಧ ಪ್ರಾಣಿಗಳಾಗಲಿ, ನಿರಪರಾಧ ಪ್ರಾಣಿಗಳಾಗಲಿ, ಕೊಲ್ಲದಿರ್ಪುದೆ ಧರ್ಮ, ಗಂಧ ರಸ ಮೊದಲಾದ ಪರದ್ರವ್ಯ ಒಲ್ಲದಿಪ್ಪುದೆ ಶೀಲ, ಗುರುಹಿರಿಯರುಗಳಿಗೆ ಪ್ರತಿ ಉತ್ತರವ ಕೊಡದಿಪ್ಪುದೆ ವ್ರತ, ಕ್ಷುತ್ತು ಪಿಪಾಸಾದಿಗಳಿಗೆ ಅಳುಕದಿಪ್ಪುದೆ ನೇಮ, ಕುಲಾದಿ ಅಷ್ಟಮದಗಳಿಗೆಳಸದಿಪ್ಪುದೆ ನಿತ್ಯ. ಇಂತೆಸೆವ ಪಂಚಪರುಷವ ಬಾಹ್ಯಾಂತರಂಗದಲ್ಲಿ ಪರಿಪೂರ್ಣಭಾವದಿಂದ ತುಂಬಿತುಳುಕಾಡುತ, ಶ್ರಿಗುರುಲಿಂಗಜಂಗಮದ ಷಟ್ಸಾ ್ಥನದಲ್ಲಿ ಷಡ್ವಿಧಲಿಂಗ ಮಂತ್ರಪ್ರಣಮಂಗಳು ಸಂಬಂಧವಾಗಿಪ್ಪುದ ಶ್ರುತಿಗುರುಸ್ವಾನುಭಾವದಿಂದರಿದು, ತನ್ನ ಬಳಿವಿಡಿದು ಬಂದ ಸುಪದಾರ್ಥವ ಆ ಗುರುಚರಪರಕ್ಕೆ ಪುಷ್ಪ ಮೊದಲಾದ ಸುಗಂಧವ ಪವಿತ್ರಮುಖದಿಂದ ನಿವೇದಿಸಿದಲ್ಲಿ ಆಚಾರಲಿಂಗಕ್ಕೆ ಸಮರ್ಪಣೆಯಾಗಿಪ್ಪುದು. ಹಣ್ಣು ಮೊದಲಾದ ಸುರಸದ್ರವ್ಯವ ಸುಪವಿತ್ರಗಳಿಂದ ಸುಪವಿತ್ರಮುಖದೊಳ್ ಸಮರ್ಪಿಸಿದಲ್ಲಿ ಗುರುಲಿಂಗಕ್ಕೆ ಸಮರ್ಪಣೆಯಾಗಿಪ್ಪುದು. ಪೀತ ಶ್ವೇತ ಮೊದಲಾದ ಸಮಸ್ತ ಚಿತ್ರವಿಚಿತ್ರಂಗಳ ಸ್ವರೂಪವನು ಮಹಾಜ್ಞಾನಸೂತ್ರವಿಡಿದು ಯೋಗ್ಯವೆನಿಸಿ ನಿವೇದಿಸಿದಲ್ಲಿ ಶಿವಲಿಂಗಕ್ಕೆ ಸಮರ್ಪಣೆಯಾಗಿರ್ಪುದು. ಕೌಪ ಕಟಿಸೂತ್ರ ಮೊದಲಾದ ವಸ್ತ್ರಾಭರಣಗಳ ಯೋಗ್ಯವೆನಿಸಿ ತಟ್ಟುವ ಮುಟ್ಟುವ ಶೀತುಷ್ಣಾದಿ ಸತ್ಕ್ರಿಯವಿಡಿದು ಸಮರ್ಪಿಸಿದಲ್ಲಿ ಚರಲಿಂಗಕ್ಕೆ ಸಮರ್ಪಣೆಯಾಗಿರ್ಪುದು. ಶಿವಾನುಭಾವಪ್ರಸಂಗ ಘಂಟೆ ತಂತಿ ಚರ್ಮ ಮೊದಲಾದ ಸುಶಬ್ದಂಗಳ ಸತ್ಯಶುದ್ಧ ತ್ರಿಕರಣವಿಡಿದು ಪವಿತ್ರತೆಯಿಂದ ನಿವೇದಿಸಿದಲ್ಲಿ ಪ್ರಸಾದಲಿಂಗಕ್ಕೆ ಸಮರ್ಪಣೆಯಾಗಿರ್ಪುದು. ಈ ಸಕಲ ಸಂತೋಷವಾದ ಮತ್ತೆ ಹೊನ್ನು ಹೆಣ್ಣುಗಳ ಗಣಸಾಕ್ಷಿಯಾಗಿ, ಸತ್ಯಸಾವಧಾನದಿಂದೆ ಧಾರೆಯನೆರೆದು, ಶಿವದೀಕ್ಷೋಪದೇಶಗಳಿಂದ ಸುಪವಿತ್ರವೆಂದೆನಿಸಿ ನಿವೇದಿಸಿದಲ್ಲಿ ಮಹಾಲಿಂಗಕ್ಕೆ ಸಮರ್ಪಣೆಯಾಗಿರ್ಪುದು. ಈ ಪ್ರಕಾರದಿಂದ ಸತ್ಯಶುದ್ಧಕಾಯಕದೊಳು ತನಗುಳ್ಳ ಸುಪದಾರ್ಥದ್ರವ್ಯವ ನಿಜೇಷ್ಟಾರ್ಪಣ ಪರದಿಂದೆ ಲಿಂಗಾರ್ಪಣವ ಸಮರ್ಪಿಸಬಲ್ಲಾತನೆ ಷಟ್‍ಸ್ಥಲಭಕ್ತ ಮಹೇಶ್ವರರೆಂಬೆನು. ಈ ಷಡ್ವಿಧ ದ್ರವ್ಯಪದಾರ್ಥಂಗಳು ದೊರೆಯದಿದ್ದರೆ ಮೂಲಚಿತ್ತ ಮೊದಲಾದ ಅಂಗ ಮನ ಪ್ರಾಣ ಇಂದ್ರಿಯ ಕರಣ ವಿಷಯಂಗಳ ಆ ಶ್ರೀಗುರುವಿಂಗೆ ಜಂಗಮದ ಸೊಮ್ಮುಸಂಬಂಧದಲ್ಲಿ ನಿಲಿಸುವುದೆ ಸರ್ವಾಂಗಲಿಂಗಾರ್ಪಣವಾಗಿರ್ಪುದು. ಇದರೊಳಗೆ ತನು ನೋಯದೆ, ಮನ ಕರಗದೆ, ಭಾವ ಬಳಲಿಸದೆ, ಅತಿ ಸುಯಿಧಾನದಿಂದ ನಿಃಕಳಂಕ ಪರಶಿವ ಪಾದೋದಕ ಪ್ರಸಾದ ಮಂತ್ರದ ಪರಶಿವತತ್ವದಲ್ಲಿ ಪರಿಪೂರ್ಣರಾಗಿರ್ಪುದೆ ಅನಾದಿಪ್ರಮಥಗಣಮಾರ್ಗವು. ಇಂತೆಸೆವ ಸಚ್ಚಿದಾನಂದದ ಪರಮಾನುಭಾವ ಸನ್ಮಾರ್ಗವನುಳಿದು ಸರ್ವಾಚಾರಸಂಪನ್ನ ಬಾಹ್ಯರಾದ ಕಿರಾತರಂತೆ, ಭಂಗಿ ಗಾಂಜಿ ಗುಡಾಕು ತಂಬಾಕದ ಚಿಲುಮೆ ಕಡ್ಡಿ ಹುಡಿ ನಾಸಿಬುಕುಣಿಯೆಂದು ಭುಂಜಿಸಿ, ಹುಚ್ಚನಾಯಿ ಎಲುವ ಕಚ್ಚಿದಂತೆ, ದಿವರಾತ್ರಿಗಳಲ್ಲಿ ಪಾದೋದಕಪ್ರಸಾದದ್ವಾರವಾಗಿ ಪರಿಶೋಭಿಸುವಂತೆ ಪರಶಿವ ಪ್ರಾಣಲಿಂಗದ ಭೋಗಾಂಗದಲ್ಲಿಟ್ಟುಕೊಂಡು, ಭ್ರಾಂತು ಭೋಗಿಗಳಾಗಿ, ನಿಜಗೆಟ್ಟು, ತಮ್ಮ ತಾವರಿಯದೆ, ಪಿಶಾಚಿಮಾನವರಂತೆ ಇಂದ್ರಾದಿ ಹರಿಸುರಬ್ರಹ್ಮಾದಿಗಳು ಹೊಡೆದಾಡಿದ ಕರ್ಮದೋಕುಳಿಯಲ್ಲಿ ಬಿದ್ದೊದ್ದಾಡಿ ತೊಳಲುವ, ವನಿತಾದಿ ಆಸೆ, ಭೋಗದ ಆಸೆ ಪಾಶದೋಕುಳಿಯೆಂದರಿದು ಮರೆದು ನರಗುರಿಗಳಾಗಿ, ಬಾಯಿಗೆ ಬಾಯಿ ಹಚ್ಚಿ ಬೊಗಳಾಡುವುದೊಂದು ದುರಾಚಾರ. ರಾಜರಿಗೆ ರೊಕ್ಕವ ಕೊಟ್ಟು, ಯಂತ್ರ ಮಂತ್ರ ತಂತ್ರಗಳಿಂದೋಲೈಸಿ, ಮಲತ್ರಯವಿದೂರರೆಂದು ಪತ್ರ ಉತ್ರಗಳಲ್ಲಿ ಹೆಮ್ಮೆ ಹಿರಿತನಕ್ಕೆ ಬಿದ್ದು, ಅಂದಿನವರೆ ಇಂದಿನವರೆಂದು ಒಪ್ಪವಿಟ್ಟು, ನುಡಿನಡೆಹೀನರಾಗಿ, ಬಿಟ್ಟಿಮಲವನುಸರಿಸಿ, ತಥ್ಯ ಮಿಥ್ಯ ತಾಗುದ್ವೇಷಗಳಿಂದೆ ದಿವರಾತ್ರಿಗಳಲ್ಲಿ ತ್ರಿವಿಧವಸ್ಥೆಗಳ ಕಳೆದು, ಒಬ್ಬರೊಬ್ಬರು ಹೊಡೆದಾಡುವುದೊಂದು ದುರಾಚಾರ. ಇಂತಲ್ಲದೆ, ಮಿಲಂಚರಾಕ್ಷಸರ ಅರವತ್ತುನಾಲ್ಕು ವಿದ್ಯೆ ಬತ್ತೀಸಾಯುಧಗಳ ಕಟ್ಟಿ, ತಳ್ಳಿತಗಾದಿಗಳಿಂದ ಹೊಲ ಗದ್ದೆ ಬಣಮೆಗಳ ಸುಟ್ಟು, ಅನಂತ ಹಿಂಸೆಗಳ ಮಾಡಿ, ಊರು ಕೇರಿ ಪೇಟೆ ಪಟ್ಟಣಗಳ ಸುಲಿದು, ಹಾದಿ ಬೀದಿಯ ಬಡಿದು, ಮತ್ತೆ ನಾಚಿಕೆಯಿಲ್ಲದೆ ನಾವು ವೀರಶೈವಘನದ ಭಕ್ತಮಹೇಶ್ವರರೆಂದು, ನಡೆಗೆಟ್ಟು ನುಡಿಯ ನುಡಿವುದೊಂದು ಅತಿಕಠಿಣವಾದ ದುರಾಚಾರವು. ವಿಭೂತಿ ರುದ್ರಾಕ್ಷಿ ಗುಣತ್ರಯಗಳಳಿದುಳಿದ ಶಿವಲಾಂಛನ ಮುದ್ರಾಧರ್ಮಗಳ ಹೊದೆದು, ಜಡೆ ಮಕುಟಗಳ ಬಿಟ್ಟು, ಕೌಪ ಕಟಿಸೂತ್ರವ ಧರಿಸಿ, ನಿಜಮೋಕ್ಷಪದವನರಿಯದೆ, ಅರ್ಥೇಷಣ ಪುತ್ರೇಷಣ ಧಾರೇಷಣ ಈಷಣತ್ರಯದ ಮೋಹಾಭಿರತಿಯಿಂದ, ಅಂತಜ್ರ್ಞಾನ ಬಹಿಕ್ರ್ರಿಯಾಚಾರವ ಮೆರೆದು, ಕಾಲತ್ರಯ ಕಾಮತ್ರಯ ಕರ್ಮತ್ರಯ ದೋಷತ್ರಯ ಪಾಪತ್ರಯ ರೋಗತ್ರಯ ಅಜ್ಞಾನತ್ರಯ ಅನಾಚಾರತ್ರಯ ಮೊದಲಾದ ಭವಪಾಶದಲ್ಲಿ ಮುಳುಗುಪ್ಪಿಯಾಗಿ ಭರಿಸುವಂಥಾದ್ದೆ ಐದನೆಯ ಪಾತಕವು. ಇದಕ್ಕೆ ಹರನಿರೂಪ ಸಾಕ್ಷಿ : ``ತಸ್ಕರಂ ಪರದಾರಂಚ ಅನ್ಯದೈವಮುಪಾಸನಂ | ಅನೃತಂ ಇಂದಕಶ್ಚೆ ೈವ ತಸ್ಯ ಚಾಂಡಾಲವಂಶಜಃ || ಪರಾರ್ಥಹಿಂಸಕಶ್ಚೈವ ಭಕ್ತದ್ರೋಹೀ ಚ ನಿಂದಕಃ | ಪ್ರಾಣಘಾತಕದೇಹಾನಾಂ ತಸ್ಮಾತ್‍ಚಾಂಡಾಲವಂಶಜಃ || ಅಲ್ಪಜೀವೀ ಭವಪ್ರಾಣೀ ಅಲ್ಪಭೋಗನಿರರ್ಥಕಃ | ಅಲ್ಪಾಶ್ರಯಂ ನ ಕರ್ತವ್ಯಂ ಮಹದಾಶ್ರಯಃ || ಅಜ್ಞಾನಾಚ್ಚ ಕೃತಂ ಪಾಪಂ ಸುಜ್ಞಾನಾಚ್ಚ ವಿನಶ್ಯತಿ | ಸುಜ್ಞಾನಾಚ್ಚ ಕೃತಾತ್ ಪಾಪಾತ್ ರೌರವಂ ನರಕಂ ವ್ರಜೇತ್ ||'' ಎಂದುದಾಗಿ, ಪರಿಪೂರ್ಣ ಶ್ರೀಗುರುಮಾರ್ಗಾಚಾರ ನಡೆನುಡಿಯಿಂದಾಚರಿಸಿ, ನಿಜಮುಕ್ತಿಮಂದಿರವ ಸೇರಬೇಕೆಂಬ ಸದ್ಭಕ್ತಮಹೇಶ್ವರರು ಸತ್ತುಚಿತ್ತಾನಂದ ನಿತ್ಯಪರಿಪೂರ್ಣತ್ವವನೈದಿ, ಪರಮಪಾತಕಂಗಳಿಗೆ ಮಹಾಜ್ಞಾನಾಯುಧವ ಹಿಡಿದು, ನಿತ್ಯ ನಿತ್ಯ ಇತರೇತರ ದುಶ್ಚಾಷ್ಟಿ ಬಿಟ್ಟು ಘನಲಿಂಗಾಂಗಸಮರಸಮನೋಲ್ಲಾಸ ಸದ್ಭಕ್ತಿ ಜ್ಞಾನವೈರಾಗ್ಯ ನಿಜನಿಷಾ*ಪರತ್ವಮಂ ಸಾಧಿಸಿ, ತಮ್ಮ ತಾವರಿತವರೆ ಪರಶಿವಯೋಗಾನಂದಭರಿತರೆಂಬೆ ಕಾಣಾ ನಿರವಯಪ್ರಭು ಮಹಾಂತ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಸದ್‍ಭಕ್ತನಾದಾತನು ಸತ್‍ಪಾತ್ರದಾನಯುಕ್ತನಾಗಿರಬೇಕಲ್ಲದೆ ಅಪಾತ್ರದಾನವ ಮಾಡಲಾಗದು ನೋಡಾ. ಅಪಾತ್ರವೆಂದೊಡೆ :ನಾಲ್ಕು ವೇದವನೋದಿನ ಬ್ರಾಹ್ಮಣನಾದಡಾಗಲಿ, ಶಿವಭಕ್ತಿಯಿಲ್ಲದವಂಗೆ ಗೋದಾನ ಭೂದಾನ ಸುವರ್ಣದಾನ ಕನ್ನಿಕಾದಾನಂಗಳ ಕೊಟ್ಟರೆ ಮುಂದೆ ನರಕ ತಪ್ಪದು ನೋಡಾ. ಅದೆಂತೆಂದೊಡೆ :ಲಿಂಗಪುರಾಣೇ- ``ಚತುರ್ವೇದಧರೋ ವಿಪ್ರಃ ಶಿವಭಕ್ತಿವಿವರ್ಜಿತಃ | ತಸ್ಮೈ ಕಾಂಚನದಾನೇನ ದಾತಾರು ನರಕಂ ವ್ರಜೇತ್ ||'' ಎಂದುದಾಗಿ, ಅಪಾತ್ರದಾನ ನಾಯಕನರಕ ನೋಡಾ ಅಖಂಡೇಶ್ವರಾ
--------------
ಷಣ್ಮುಖಸ್ವಾಮಿ
ಹಸಿಹಂದರದಿ ಪಡೆದ ಗಂಡನ ವಂಚಿಸಿ, ವಿಷಯಾತುರದಿ ಪಿಸುಣಮಾನವರನಪ್ಪುವ ಹಾದರಗಿತ್ತಿಯೆಂತೆ, ಪಂಚಕಳಸವಿಕ್ಕಿ ದೇವಭಕ್ತರ ನಡುವೆ ಹಸ್ತಮಸ್ತಕ ಸಂಯೋಗವ ಮಾಡಿ ಗುರುಕರುಣಿಸಿ ಕೊಟ್ಟ ಪ್ರಾಣಲಿಂಗವನವಿಶ್ವಾಸವ ಮಾಡಿ, ಕ್ಷೇತ್ರ ಜಾತ್ರಿ ಲಿಂಗವ ಕಂಡು, ವಿಶ್ವಾಸವಿಟ್ಟು ಎರಗುವ ಪಂಚಮಹಾಪಾತಕರ ನೋಡಾ ! ಸಾಕ್ಷಿ :``ಪ್ರಾಣಲಿಂಗಮವಿಶ್ವಸ್ಯ ತೀರ್ಥಲಿಂಗಂ ವಿಶೇಷಯೇತ್ | ಪ್ರಸಾದನಿಷ್ಫಲಂ ಚೈವ ರೌರವಂ ನರಕಂ ವ್ರಜೇತ್ || '' ಎಂದುದಾಗಿ, ಮತ್ತೊಮ್ಮೆ ಗ್ರಂಥಸಾಕ್ಷಿಯ ಕೇಳು ಮುಂದರಿಯದ ಮಾನವ. ಸಾಕ್ಷಿ :``ಇದಂ ತೀರ್ಥಮಿದಂ ತೀರ್ಥಂ ಭ್ರಮಂತಿ ತಾಮಸಾ ನರಾಃ| ಶಿವಜ್ಞಾನಂ ನ ಜಾನಂತಿ ಸರ್ವತೀರ್ಥಂ ನಿರರ್ಥಕಂ ||'' ಎಂದುದಾಗಿ. ಇಂತೆಂಬುದನರಿಯದೆ, ಅಜ್ಞಾನದ ಭ್ರಾಂತಿಯಲ್ಲಿ ಅನ್ಯಲಿಂಗವನಾಶ್ರಯಿಸುವ ಕುನ್ನಿಗಳಿಗೆ ಗುರುವಿಲ್ಲ ಜಂಗಮವಿಲ್ಲ ಪಾದೋದಕವಿಲ್ಲ ಪ್ರಸಾದವಿಲ್ಲವಾಗಿ ಮುಕ್ತಿಯೆಂಬುದು ಎಂದಿಗೂ ಇಲ್ಲವಾಗಿ ರೌರವನರಕದಲ್ಲಿಕ್ಕುವ ನಮ್ಮ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಶಿವಾಚಾರಸಂಪನ್ನನಾಗಿ ಶಿವಭಕ್ತನೆನಿಸಿಕೊಂಡು ಶಿವಲಿಂಗವು ಕರಸ್ಥಲ ಉರಸ್ಥಲ ಶಿರಸ್ಥಲದಲ್ಲಿರುತಿರೆ ಅದ ಮರೆದು, ಹಲವು ದೇವರ ಪೂಜೆಮಾಡಿ, ಹಲವು ದೇವರ ಬಳಿಯಲ್ಲಿ ನೀರ ಕುಡಿದು, ಹಲವು ದೇವರ ನೈವೇದ್ಯವ ತಿಂಬ ಹೊಲೆಯನ ಶಿವಭಕ್ತನೆನಬಹುದೆ ? ಎನಲಾಗದು. ಅದೇನು ಕಾರಣವೆಂದಡೆ, ಅದಕ್ಕೆ ಸಾಕ್ಷಿ : ``ಶಿವಾಚಾರೇಣ ಸಂಪನ್ನಃ ಪ್ರಸಾದಂ ಭುಂಜತೇ ಯದಿ | ಅಪ್ರಸಾದೀ ಅನಾಚಾರೀ ಸರ್ವಭಕ್ತಶ್ಚ ವಾಯಸಃ ||'' ಎಂಬುದನರಿಯದೆ, ಮತ್ತೆ ಕೇಳು ಗ್ರಂಥ ಸಾಕ್ಷಿಯ ಮನುಜ : ಸಾಕ್ಷಿ :``ಲಿಂಗಾರ್ಚನೈಕ ಪರಾಣಾಂ ಅನ್ಯದೈವಂತು ಪೂಜನಂ | ಶ್ವಾನಯೋನಿಶತಂ ಗತ್ವಾ ರೌರವಂ ನರಕಂ ವ್ರಜೇತ್ ||'' ಎಂಬುದನರಿಯದೆ, ಮತ್ತೆ ಮೇಣ್, ಸಾಕ್ಷಿ :``ಶಿವಲಿಂಗಂ ಪರಿತ್ಯಜ್ಯ ಅನ್ಯದೈವಮುಪಾಸತೇ | ಪ್ರಸಾದಂ ನಿಷ್ಫಲಂ ಚೈವ ರೌರವಂ ನರಕಂ ವ್ರಜೇತ್ ||'' ಹೀಗೆಂಬುದನರಿಯದೆ, ಲಿಂಗವಿದ್ದು ಅನ್ಯದೈವಂಗಳಿಗೆರಗಿ, ಆಚಾರಭ್ರಷ್ಟನಾಗಿ ಪಾದೋದಕ ಪ್ರಸಾದವ ಕೊಂಡರೆ ಎಂದೆಂದಿಗೂ ಭವಹಿಂಗದು. ಅದೇನುಕಾರಣ ಹಿಂಗದೆಂದರೆ ಹೇಳುವೆ ಕೇಳಿರಣ್ಣಾ : ಹೆಗ್ಗಣವನೊಳ ಹೋಗಿಸಿ ನೆಲಗಟ್ಟ ಹೊರೆದಂತೆ, ಅನ್ಯಕೆ ಹರಿವ ದುರ್ಗುಣವ ಕೆಡೆಮೆಟ್ಟದೆ ಶಿವಭಕ್ತರೆಂದೆಂದು ನುಡಿದುಕೊಂಡು ನಡೆದರೆ, ಹಂದಿ ನಾಯಿ ನರಿ ವಾಯಸನ ಜನ್ಮ ತಪ್ಪದೆಂದಾತ ನಮ್ಮ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಲಿಂಗಕ್ಕೀಯದೆ ಅಂಗಸುಖಕ್ಕಾಗಿ ಅನ್ನೋದಕವ ಕೊಂಡ ಅಜ್ಞಾನಿಯನೇನೆಂದು ನುಡಿವೆನಯ್ಯಾ ? ಆತನು ಪತಿತನಾಗಿ ನರಕದಲ್ಲಿ ಹೊರಳುತ್ತಿರ್ಪನು. ``ಅಸಮಪ್ರ್ಯ ಪ್ರಾಣಲಿಂಗೇ ಜಲಂ ವಾ ಫಲಮೇವ ವಾ ಸ್ವೀಕುರ್ಯಾದ್ಯದಿ ಮೋಹೇನ ಪತಿತೋ ನರಕಂ ವ್ರಜೇತ್ '' ಎಂದುದಾಗಿ ಆವ ಪದಾರ್ಥವನಾದಡೆಯು ಲಿಂಗಕ್ಕೆ ಕೊಡದೆ ಕೊಳಲಾಗದೆಂದುದು ನಮ್ಮ ಕೂಡಲಚೆನ್ನಸಂಗಯ್ಯನ ವಚನ
--------------
ಚನ್ನಬಸವಣ್ಣ
ಬೀರ ಜಟ್ಟಿ ಮೈಲಾರ ಮಾರಿ ಮಸಣೆಯೆಂಬ ಅನ್ಯದೈವವು ಮನೆಯೊಳಿರುತಿರೆ, ಅದ ವಿಚಾರಿಸದೆ, ನಿನ್ನ ಚಿತ್ಕಳೆ ಪರಬ್ರಹ್ಮಲಿಂಗವನವರಿಗೆ ಕೊಟ್ಟು, ಹೊನ್ನು ಹಣವ ಬೇಡಿ ಕೊಂಡು ಒಡಲ ಹೊರೆದು ಗುರುವೆಂದುಕೊಂಬ ಗುರುವೆ ನೀ ಕೇಳಾ. ವಿಚಾರಹೀನರಿಗೆ ಉಪದೇಶವ ಕೊಟ್ಟರೆ ಅವಿಚಾರಿ ನೀನಹುದನರಿಯಾ ? ಸಾಕ್ಷಿ :``ಅನ್ಯದೈವಪೂಜಕಸ್ಯ ಗುರೋರುಪದೇಶಃ ನಾಸ್ತಿ ನಾಸ್ತಿ | ಅವಿಚಾರಂ ತದೀಕ್ಷಣಾತ್ ರೌರವಂ ನರಕಂ ವ್ರಜೇತ್ ||'' ಎಂದುದಾಗಿ, ಮುನ್ನ ಯಮಪಾತಕಕೆ ಗುರಿಯಾಗುವ ಸಂದೇಹಿಗಳ ಗುರು ಶಿಷ್ಯ ಸಂಬಂಧವ ಕಂಡು ನಸುನಗುತ್ತಿದ್ದನಯ್ಯಾ ನಮ್ಮ ಪರುಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಶ್ರೀಗುರು ಪರಮಾರಾಧ್ಯ ಪ್ರಮಥಗಣ ಸಾಕ್ಷಿಯಾಗಿ, ಮನ ಕೊರಗಿ, ಹಸ್ತ ಪಾದ ಬಳಲಿ, ತೃಣಕಾಷ*ವೆ ಮೊದಲು ನವರತ್ನಂಗಳೆ ಕಡೆಯಾದ ಸಮಸ್ತ ವ್ಯವಹಾರದಿಂದ, ಸತ್ಯಶುದ್ಧದಿಂದ ಗುರುಹಿರಿಯರಿಗೆ ಖೊಟ್ಟಿಯಾಗದೆ, ಲಿಂಗನಡೆ ಲಿಂಗನುಡಿ ಲಿಂಗನೋಟ ಲಿಂಗಕೂಟ ಲಿಂಗಬೇಟ ಲಿಂಗರತಿ ಲಿಂಗಭೋಗ ಲಿಂಗಾಭಿಮಾನ ಲಿಂಗಾರಾಧನೆ ಲಿಂಗಾರ್ಪಣ ಲಿಂಗಾನುಭಾವ ಲಿಂಗಾಸನ ಲಿಂಗಸೋಂಕು ಲಿಂಗನಂಟು ಲಿಂಗಗತಿಮತಿ ಲಿಂಗಸತಿಪತಿ ಲಿಂಗಮಾತೆ ಲಿಂಗಪಿತ ಲಿಂಗಬಂಧು ಲಿಂಗಪದಾರ್ಥ ಲಿಂಗದ್ರವ್ಯ ಲಿಂಗಧನಧಾನ್ಯ ಲಿಂಗಾಭರಣ ಲಿಂಗಶಿಶುವು ಲಿಂಗಮೋಹ ಲಿಂಗಾಚಾರ ಲಿಂಗಲಯ ಲಿಂಗಪರೋಪಕಾರಿ ಲಿಂಗದಾಸೋಹ ಲಿಂಗಾಂಗಸಂಗಸಮರತಿಯಿಂದ ಪರಶಿವಯೋಗಸಂಪನ್ನರಾಗಿ, ಗುರುಕೃಪಾನಂದದಲ್ಲಿ ಚಿತ್ತವಚ್ಚೊತ್ತಿದಂತೆ ಕಾಯಕವ ಮಾಡಿ, ಕುಟಿಲ ಕುಹಕಂಗಳಳಿದುಳಿದು, ಅನಾಚಾರಿಗಳನ್ನೋದಕವ ಕೊಳ್ಳದೆ, ಉಪಾಧಿ ನಿರುಪಾಧಿ ಸಹಜಜಂಗಮಸ್ಥಲದ ವರ್ಮಾದಿವರ್ಮವನರಿದು, ಮಾಡಿ ಮಾಟವ ಮರೆದು, ಕೂಡಿ ಕೂಟವ ಕಳೆದುಳಿದು, ಸತ್ಪಾತ್ರ ಅಪಾತ್ರವ ಎಚ್ಚರದಿಂ ನೋಡಿ, ತನುಮನಧನ ವಂಚನೆಯಿಲ್ಲದೆ, ರಿಣಾತುರವೆಂಬ ಹಿಂದಣಮಾರ್ಗವ ಮೆಟ್ಟದೆ, ಸೋಹಂ ಕೋಹಂ ನಾಹಂಭಾವವಳಿದುಳಿದು, ಶಿವಾಚಾರಸಮರತಿ ದಾಸೋಹಂಭಾವದಿಂದಾಚರಿಸುವಾತನೆ ಭವಿಮಾಟಕೂಟವಳಿದುಳಿದು ನಿಜಸದ್ಭಕ್ತ ಆಚಾರಲಿಂಗಪ್ರಸನ್ನಪ್ರಸಾದಿ. ಇಂತಪ್ಪ ಸದ್ಭಕ್ತನಂಗಳವೆ ಕೈಲಾಸವೆಂದು ಹರಗುರುವಾಕ್ಯವರಿದು, ಭಾವಭರಿತವಾಗಿ, ಸತ್ವಗುಣವಳಿದುಳಿದು, ಮಹಾಜ್ಞಾನದಂಡಾಗ್ರಮಂ ಪಿಡಿದು, ಸತ್ಯಶುದ್ಧ ನುಡಿಯೆಂಬ ಪ್ರಣಮನಾದಗಂಟೆಯಂ ಕಟ್ಟಿ, ರಜೋಗುಣವ ಹೊದ್ದದೆ, ಮಹದರುವೆಂಬ ಕಮಂಡಲವ ಧರಿಸಿ, ತಮೋಗುಣ ನಷ್ಟವಾದ ಪರಮಪರುಷರಸದ ಜೋಳಿಗೆಯಂ ಪಿಡಿದು, ಕರಣೇಂದ್ರಿಗಳ ಹಸಿವು ತೃಷೆ ವಿಷಯ ವ್ಯಸನಗಳ ಛೇದಿಸಿದ ಜಂಗಿನ ಗೆಜ್ಜೆಗಳಂ ಧರಿಸಿ, ಪರಮಪಾವನ ನಿಜಮೋಕ್ಷಮಂದಿರವೆಂಬ ಮಂತ್ರಸ್ಮರಣೆಯೊಳ್ `ಶ್ರೀಗುರುಧರ್ಮ ಕೋರಧನಧಾನ್ಯದ ಭೀಕ್ಷಾ'ಯೆಂದು ಭಕ್ತಗಣಂಗಳಿಂಗಿತವರಿತು, ಘನಮನ ಕಲಕದಂತೆ ಸುಯಿಧಾನದಿಂದ ಸುಳಿಗಾಳಿಯಂತೆ ಸುಳಿದು, ಅತಿರತಿಮೋಹದಿಂದ ಪರಮಹರುಷಾನಂದದೊಳ್ ಬೇಡಿತಂದು, ನಿರ್ವಂಚಕನಾಗಿ, ಸತ್ಯಶುದ್ಧ ದೃಢಚಿತ್ತದಿಂದ, ಘನಲಿಂಗಸಂಗಸಮಪತಿಗಳೊಳ್ ಕೂಡೆರಡಳಿದುಳಿದು, ಹಿಗ್ಗು-ಹೆಮ್ಮೆ , ಸಿರಿ-ದರಿದ್ರ, ಸುಖ-ದುಃಖ, ಸ್ತುತಿ-ನಿಂದೆ, ಪುಣ್ಯ-ಪಾಪ, ಭೋಗ-ಯೋಗ, ಕಾಮ-ಕ್ರೋಧ, ಲೋಭ-ಮೋಹ, ಮದ-ಮತ್ಸರ, ಆಸೆ-ಆಮಿಷಗಳ, ಹಸಿವು-ತೃಷೆಗಳ ನೀಗಿ, ಸದ್ಭಕ್ತಗಣಸಮ್ಮೇಳದಿಂದ ಗುರುಚರಪರಕ್ಕೆ ತ್ರಿವಿಧಾರ್ಚನೆಗಳರಿದು, ಒಂದೂಡಲಾಗಿ, ಪರಿಣಾಮವೆ ಭಕ್ತಿ ವಿರಕ್ತಿ ಜ್ಞಾನಾನುಭಾವ, ಪರಿಣಾಮವೆ ಚಿದಂಗಲಿಂಗಮುಖ ಶಕ್ತಿ ಶುಚಿರುಚಿ ಹಸ್ತಪದಾರ್ಥಪ್ರಸಾದ, ಘನಸಮ್ಮತ ವಿಚಾರಮಂ ಅರಿದಾನಂದದಿಂದ ಪರಿಪೂರ್ಣ ನಡೆನುಡಿ ಕೊಟ್ಟುಕೊಂಬುವ ದಾನಿಯೆ ಸದ್ವೀರಮಹೇಶ್ವರನು. ಇಂತೆಸೆವ ಪ್ರಮಥಗಣ ಭಕ್ತಮಹೇಶ್ವರರಾಚರಣೆಯ ಘನಮಾರ್ಗವನರಿಯದೆ, ಆಡಂಬರವೇಷಮಂ ಧರಿಸಿ, ಕುಟಿಲ ಕುಹಕತನದಿಂದ ಅನಾಚಾರ ರಾಜರನೋಲೈಸಿ, ಚಾಡಿಚಿತಾರಿಕೆ ಸಾಕ್ಷಿ ವಾದ ಸಹಜವ ಹುಸಿಮಾಡಿ, ಹುಸಿಯನೆ ಸಹಜವ ಮಾಡಿ, ಕುಂಟಣಿತನದಿಂದ ಧನಧಾನ್ಯಾಭರಣವ ಗಳಿಸಿ, ಈಷಣತ್ರಯಮೋಹದಿಂದ ಒಡಲುಪಾಧಿವಿಡಿದು, ಭಕ್ತಮಹೇಶ್ವರರೆಂದು ಬೊಗಳುವದೊಂದು ದುರಾಚಾರ. ತಳ್ಳಿ ತಗಾದಿ ಜಾರತನ ಪಂಚಪಕ್ಷ ಮೊದಲಾದ ಗಾರುಡವಿದ್ಯೆಗಳಿಂದ ಧನ ಧಾನ್ಯ ವಸ್ತ್ರಾಭರಣವ ಗಳಿಸಿ ಅಕ್ರಿಯೆ ಅನಾಚಾರದಿಂದ ದೇಹವಿಡಿದಿಪ್ಪುದೊಂದು ದುರಾಚಾರ. ಹಲಾಯುಧನ ಹೊಲಮನೆ ಮೊದಲಾದ ಸಮಸ್ತ ವ್ಯವಹಾರಗಳಲ್ಲಿ ಆರೂ ಕಾಣದಂತೆ ಅಣುರೇಣುತೃಣಕಾಷ*ವಾಗಲಿ, ಮೋಸಗಾರಿಕೆಯಿಂದ ಒಡಲುಪಾಧಿವಿಡಿದಾಚರಿಸುವದೊಂದು ದುರಾಚಾರ. ಆಯುಧವ ಕಟ್ಟಿ, ರಣಾಗ್ರಕ್ಕೆ ಹೋಗಿ, ಜೀವಹಿಂಸೆಗಳಿಂದ ಧನಧಾನ್ಯವಸ್ತ್ರಾಭರಣವ ಗಳಿಸಿ, ರೂಪಲಾವಣ್ಯದಿಂದ ಒಡಲುಪಾಧಿಹೊರೆವುದೊಂದು ಅತಿ ಕಠಿಣವಾದೊಂದು ದುರಾಚಾರ. ಸತ್ಯಶುದ್ಧ ವ್ಯವಹಾರಗಳಲ್ಲಿ ಪತ್ರವ ಬರೆದುಕೊಟ್ಟು, ಮೃದುನುಡಿಯಿಂದ ಧನಧಾನ್ಯವ ತಂದು, ಪುತ್ರಮಿತ್ರ ಕಳತ್ರಯಕೆ ಮಾಡಿ, ಮತ್ತವರು ಬೇಡಿದರೆ ತಿರುಗಿ ಹುಸಿನುಡಿಯ ನುಡಿದು, ಅವರ ಪದಾರ್ಥವ ಚಾಗೆಯ ಮಾಡಿ, ನಿಂದೆ ಕುಂದು ಕೊರತೆಗಳಿಂದ ದೂಷಿಸುವುದೊಂದು ದುರಾಚಾರ. ಇಂತು ಪಂಚವಿಧಪಾಶಬದ್ಧರಾಗಿ, ಅವಿಚಾರದಿಂದ ಭಕ್ತಮಹೇಶ್ವರರೆಂದು ನುಡಿದು, ಅನಾಚಾರ ನಡೆಯ ನಡೆವುದು ತೃತೀಯ ಪಾತಕವು. ಇದಕ್ಕೆ ಹರವಾಕ್ಯ ಸಾಕ್ಷಿ : ``ಪರದ್ರವ್ಯಂ ಪರಾರ್ಥಂ ಚ ವರ್ಜಯೇತ್ ಭಾವಶುದ್ಧಿಮಾನ್ | ಪ್ರಮಾದಾತ್ ಸ್ಪರ್ಶನಾಚ್ಚೈವ ರೌರವಂ ನರಕಂ ವ್ರಜೇತ್ || ಅನ್ನಸ್ಯ ಧನಧಾನ್ಯಸ್ಯ ಲಿಂಗಭಕ್ತಿವಿವರ್ಜಿತಃ | ತಸ್ಕರಃ ಅಪಹಾರಾತ್ ಶ್ವಾನಜನ್ಮನಿ ಜಾಯತೇ || ಸತ್ಯಂ ಧರ್ಮೋ ಯಥಾರ್ಥಂ ಚ ಶಿವಧರ್ಮೇಣ ಸುಖಂ ಭವೇತ್ | ಅನ್ಯತ್ರ ಚಿಂತಿತಾತ್ ಕಾರ್ಯಾತ್ ಮೋಕ್ಷೋ ನಾಸ್ತಿ ವರಾನನೇ || ಉತ್ತಮಾರಣ್ಯಪುಷ್ಪಂ ಚ ಮಧ್ಯಮಂ ವನಪುಷ್ಪಯೋಃ | ಕನಿಷ*ಂ ಯಾಚಿತಂ ಪುಷ್ಪಂ ಚೋರಪುಷ್ಪಂತು ನಿಷ್ಫಲಂ ||'' ಇಂತೆಂದುದಾಗಿ, ಶ್ರೀಗುರುಕಟಾಕ್ಷೆಯಿಂದ ತನ್ನ ತಾನರಿದು ಸ್ವಾತ್ಮಾನುಭಾವದೊಳ್ ಸತ್ಯಶುದ್ಧನಾಗಿ, ಪರರೊಡವೆಯೆಂಬುದೆ ಕೇಡು, ಕಾಯಾರ್ಜಿತವೆಂಬುದೆ ನಿಜಮೋಕ್ಷವೆಂದರಿದಾನಂದದಿಂದ ಆ ತೃತೀಯಪಾತಕಮಂ ನಿರಸನಂಗೈದು ದುರಿತಕರ್ಮವಂ ಒರೆದೊರೆದು ಕಂಡ್ರಿಸಿ, ಕಳೆದುಳಿದ ನಿಜಮುಕ್ತನೆ ಶಿವಯೋಗ ಸನ್ಮಾರ್ಗಿ ಸದ್ಭಕ್ತ ಮಹೇಶ ಕಾಣಾ ನಿರವಯಪ್ರಭು ಮಹಾಂತ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಇನ್ನಷ್ಟು ... -->