ಅಥವಾ

ಒಟ್ಟು 405 ಕಡೆಗಳಲ್ಲಿ , 47 ವಚನಕಾರರು , 310 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶಿಷ್ಯನ ಪೂರ್ವಾಶ್ರಯವ ಗುರು ಕಳೆದನೆಂಬರು, ಆ ನುಡಿಯ ಕೇಳಲಾಗದು. ಗುರುವಿನ ಪೂರ್ವಾಶ್ರಯವ ಶಿಷ್ಯ ಕಳೆವನಲ್ಲದೆ, ಶಿಷ್ಯನ ಪೂರ್ವಾಶ್ರಯವ ಗುರು ಕಳೆಯಲರಿಯ. ಶರಣನ ಪೂರ್ವಾಶ್ರಯವ ಲಿಂಗ ಕಳೆಯಿತ್ತೆಂಬರು ಆ ನುಡಿಯ ಕೇಳಲಾಗದು, ಲಿಂಗದ ಪೂರ್ವಾಶ್ರಯವ ಶರಣ ಕಳೆವನಲ್ಲದೆ, ಆ ಶರಣನ ಪೂರ್ವಾಶ್ರಯವ ಲಿಂಗವು ಕಳೆಯಲರಿಯದು. ಭಕ್ತನ ಪೂರ್ವಾಶ್ರಯವ ಜಂಗಮ ಕಳೆಯಿತ್ತೆಂಬರು ಆ ನುಡಿಯ ಕೇಳಲಾಗದು, ಜಂಗಮದ ಪೂರ್ವಾಶ್ರಯವ ಭಕ್ತ ಕಳೆವನಲ್ಲದೆ, ಆ ಭಕ್ತನ ಪೂರ್ವಾಶ್ರಯವ ಜಂಗಮ ಕಳೆಯಲರಿಯ. ಪ್ರಸಾದಿಯ ಪೂರ್ವಾಶ್ರಯವ ಪ್ರಸಾದ ಕಳೆಯಿತ್ತೆಂಬರು ಆ ನುಡಿಯ ಕೇಳಲಾಗದು, ಪ್ರಸಾದದ ಪೂರ್ವಾಶ್ರಯವ ಪ್ರಸಾದಿ ಕಳೆವನಲ್ಲದೆ ಆ ಪ್ರಸಾದಿಯ ಪೂರ್ವಾಶ್ರಯವ ಪ್ರಸಾದ ಕಳೆಯಲರಿಯದು. ಆ ಪ್ರಸಾದದ ಪೂರ್ವಾಶ್ರಯವ ಕಳೆಯಲಿಕಾಗಿ ಮಹಾಪ್ರಸಾದಿಯಾದ ಕೂಡಲಚೆನ್ನಸಂಗಾ ನಿಮ್ಮ ಶರಣ.
--------------
ಚನ್ನಬಸವಣ್ಣ
ಅಧರ ತಾಗಿದ ರುಚಿಯ, ಉದರ ತಾಗಿದ ಸುಖವ, ಲಿಂಗಾರ್ಪಿತವ ಮಾಡಿದಡೆ ಕಿಲ್ಬಿಷ ನೋಡಿರೆ. ಓಗರ ಪ್ರಸಾದವಲ್ಲ; ಪ್ರಸಾದ ಅರ್ಪಿತವಲ್ಲ. ಇದನರಿದ ಶರಣಂಗೆ ಆಚಾರವಿಲ್ಲ, ಆಚಾರವಿಲ್ಲದ ಶರಣಂಗೆ ಲಿಂಗವಿಲ್ಲ. ಲಿಂಗವಿಲ್ಲದ ಶರಣನ ನಿಲವು; ಶಿವಸಂಪತ್ತಿನಲಾದ ಉದಯ, ವಿಪರೀತ ಸುಳುಹು ! ಪ್ರಕಟಸಂಸಾರದ ಬಳಕೆಯ ಹೊಡಕಟ್ಟಿ ಹಾಯ್ದು ನಿಬ್ಬೆರಗು ಎಸೆವುದು ಅರಿವಿನ (ಎರವಿನ?) ಘಟದಲ್ಲಿ ! ಅರ್ಪಿಸಿದ ಪ್ರಸಾದವನು ಭೇದದಿಂದ ರುಚಿಸುವನಲ್ಲ ಕೇಳಿರಯ್ಯಾ. ದಿಟವ ಬಿಟ್ಟು ಸಟೆಯಲ್ಲಿ ನಡೆಯ ನೋಡಾ. ಇಲ್ಲದ ಲಿಂಗವನುಂಟುಮಾಡಿ ಪೂಜಿಸುವ, ಬರಿಯ ಬಣ್ಣಕರೆಲ್ಲ ನೀವು ಕೇಳಿರೆ. ನೀವು ಪೂಜಕರಪ್ಪಿರಲ್ಲದೆ, ಗುಹೇಶ್ವರಲಿಂಗವಿಲ್ಲೆಂಬ ಶಬುದ ಸತ್ತು ಹುಟ್ಟುವರಿಗೆಲ್ಲಿಯದೊ ?
--------------
ಅಲ್ಲಮಪ್ರಭುದೇವರು
ಷಡಕ್ಷರ ಶಕ್ತಿ ಯುಕ್ತವಾಗಿ ಷಡುಸಾದಾಖ್ಯಮೂರ್ತಿ ಸಂಪೂರ್ಣವಾಗಿ ಶರಣನ ಷಡಂಗದಲ್ಲಿ ಸದಾ ಸನ್ನಹಿತನಾಗಿ ಸರ್ವ ಸರ್ವಜ್ಞ ಸರ್ವೇಶ ಸರ್ವಾನಂದಮಯ ಷಟ್‍ಸ್ಥಲಬ್ರಹ್ಮಮೂರ್ತಿ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಖಂಡಿತವಳಿದು ಇಂದ್ರಿಯಂಗಳು ಅಖಂಡಿತವಾದವಯ್ಯಾ. ಖಂಡಿತವಳಿದು ತನ್ಮಾತ್ರೆಗಳು ಅಖಂಡಿತವಾದವಯ್ಯಾ. ಖಂಡಿತವಳಿದು ¨sõ್ಞತಿಕಂಗಳು ಅಖಂಡಿತವಾದವಯ್ಯಾ. ಪಂಚಭೂತಮಯವಾದ ಬ್ರಹ್ಮಾಂಡ ಶರಣನ ಅಂಗದಲ್ಲಿ ಪಂಚಬ್ರಹ್ಮವಾಯಿತ್ತಾಗಿ, ಇಷ್ಟ ಅಖಂಡಿತವಾಗಿ ಸೌರಾಷ್ಟ್ರ ಸೋಮೇಶ್ವರನ ಶರಣರು ಅಖಂಡಿತರಯ್ಯಾ.
--------------
ಆದಯ್ಯ
ಇಂತು ಭಕ್ತನ ಪದಿನೈದುಂ ಮಾಹೇಶ್ವರನೊಂಬತ್ತುಂ ಪ್ರಸಾದಿ ಏಳುಂ ಪ್ರಾಣಲಿಂಗಿಯೈದುಂ ಶರಣನ ನಾಲ್ಕುಮೈಕ್ಯನ ನಾಲ್ಕುಮಿದುಂ ನಿನ್ನ ತೂರ್ಯಕಳೇವರಮಯ್ಯ, ಸಮಷ್ಟಿ ಯಿಂತೀಯಂಗಸ್ಥಲಂಗಳು ನಾಲ್ವತ್ತನಾಲ್ಕುಂ ಕೂಡಿ ನಿನ್ನ ಪೂರ್ಣಾಂಗಮಾದುದಯ್ಯಾ, ನಿರಂತರ ಪರಬ್ರಹ್ಮ ಪರಮ ಶಿವಲಿಂಗೇಶ್ವರಾ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಅಂಡಾಭರಣರು ಘನವೆಂಬೆನೆ ? ಅಂಡಾಭರಣರು ಘನವಲ್ಲ. ರುಂಡಾಭರಣರು ಘನವೆಂಬೆನೆ ? ರುಂಡಾಭರಣರು ಘನವಲ್ಲ. ಗಂಗಾಧರರು ಘನವೆಂಬೆನೆ ? ಗಂಗಾಧರರು ಘನವಲ್ಲ. ಗೌರೀವಲ್ಲಭರು ಘನವೆಂಬೆನೆ ? ಗೌರೀವಲ್ಲಭರು ಘನವಲ್ಲ. ಚಂದ್ರಶೇಖರರು ಘನವೆಂಬೆನೆ ? ಚಂದ್ರಶೇಖರರು ಘನವಲ್ಲ. ನಂದಿವಾಹನರು ಘನವೆಂಬೆನೆ ? ನಂದಿವಾಹನರು ಘನವಲ್ಲ. ತ್ರಿಯಂಬಕರು ಘನವೆಂಬೆನೆ ? ತ್ರಿಯಂಬಕರು ಘನವಲ್ಲ. ತ್ರಿಪುರವೈರಿ ಘನವೆಂಬೆನೆ ? ತ್ರಿಪುರವೈರಿ ಘನವಲ್ಲ. ಪಂಚಮುಖರು ಘನವೆಂಬೆನೆ ? ಪಂಚಮುಖರು ಘನವಲ್ಲ. ಫಣಿಕುಂಡಲರು ಘನವೆಂಬೆನೆ ? ಫಣಿಕುಂಡಲರು ಘನವಲ್ಲ. ಶೂಲಪಾಣಿಗಳು ಘನವೆಂಬೆನೆ ? ಶೂಲಪಾಣಿಗಳು ಘನವಲ್ಲ. ನೀಲಲೋಹಿತರು ಘನವೆಂಬೆನೆ ? ನೀಲಲೋಹಿತರು ಘನವಲ್ಲ. ಅದೇನು ಕಾರಣವೆಂದೊಡೆ, ಇಂತಿವರಾದಿಯಾಗಿ ಅನಂತಕೋಟಿ ರುದ್ರಗಣಂಗಳು ಶರಣನ ಸರ್ವಾಂಗದಲ್ಲಿ ಅಡಗಿಹರಾಗಿ ಅಖಂಡೇಶ್ವರಾ, ನಿಮ್ಮ ಶರಣ ಘನಕ್ಕೆ ಘನವೆಂಬೆನಯ್ಯಾ.
--------------
ಷಣ್ಮುಖಸ್ವಾಮಿ
ಜಲದಲ್ಲಿ ಹುಟ್ಟಿದ ಕೆಸರು ಕ್ಷೀರದಲ್ಲಿ ತೊಳೆದರೆ ಹೋಹುದೆ ? ಜಲದಲ್ಲಿ ತೊಳೆದಡಲ್ಲದೆ. ಜೀವನಲ್ಲಿ ಹುಟ್ಟಿದ ಪ್ರಪಂಚು ಪಾಪಂಗಳು ಬ್ರಹ್ಮದಂಡ ಪ್ರಾಯಶ್ಚಿತ್ತದಲ್ಲಿ ಹೋಹವೆ ? ಶಿವಸಂಸ್ಕಾರಿಯಾಗಿ `ಅಕ್ಷರೋ[s]ಸಿ ಎಂಬ ಮಂತ್ರದಿಂದ ಜೀವನ ಪಾಪವು ಜೀವನಲ್ಲಿಯೇ ಕಳೆವುದು ಜೀವಾತ್ಮಾ ಪರಮಾತ್ಮಾ ಚೇನ್ಮುಕ್ತಾನಾಂ ಪರಮಾ ಗತಿಃ ಅವ್ಯಯಃ ಪುರುಷಃ ಸರ್ವಕ್ಷೇತ್ರಜ್ಞೋ[s]ಕ್ಷಯ ಏವ ಚ ಎಂದುದಾಗಿ,_ ಇದು ಕಾರಣ ಕೂಡಲಚೆನ್ನಸಂಗಯ್ಯಾ. ನಿಮ್ಮ ಶರಣನ ಕಾಯವು ಸುಕ್ಷೇತ್ರವೆಂದೆನಿಸೂದು.
--------------
ಚನ್ನಬಸವಣ್ಣ
ಪ್ರಸಾದವ ಕೊಂಡ ಶರಣನ ಸರ್ವಾಂಗವೆಲ್ಲ ಪ್ರಸಾದ ತಾನಾಯಿತ್ತು. ಕಾರಣ ಅಸ್ಥಿ ಸೌಮ್ಯವಾಯಿತ್ತು. ಮಾಂಸ[ಪಿಂಡ] ಮಂತ್ರರೂಪವಾಯಿತ್ತು. ಚರ್ಮ ಚಿದ್ರೂಪವಾಯಿತ್ತು, ನಾಡಿ ನಿರಂಜನವಾಯಿತ್ತು, ರೋಮ ಓಂ ರೂಪವಾಯಿತ್ತು. ಇಂತೀ ಪಂಚಭೂತಕಾಯ ಪ್ರಸಾದ[ಕಾಯ]ವಾಯಿತ್ತು. ಮಾಂಸಪಿಂಡ ಮಂತ್ರಪಿಂಡವಾಯಿತ್ತು. ವಾಯು ಪ್ರಾಣಲಿಂಗ ಪ್ರಾಣವಾಯಿತ್ತು. ನರರೂಪ ಹರರೂಪವಾಯಿತ್ತು. ಹರರೂಪ ಗುರು ಚರ ಪರಮ ಪ್ರಸಾದವಾಯಿತ್ತು. ದೇವಭಕ್ತನ ಪ್ರಸಾದವೆ ಭಕ್ತಿ ಮುಕ್ತಿಪ್ರಸಾದ ತಾನೆ, ನಿಮ್ಮ ಶರಣ ಚೆನ್ನಯ್ಯಪ್ರಿಯ ನಿರ್ಮಾಯಪ್ರಭುವೆ.
--------------
ಚೆನ್ನಯ್ಯ
ಕರ್ಮದ ಗುಣವನಳಿದು ಅಸಮಾಯಲಿಂಗದೊಳು ಕೂಡಿ ಸೀಮೆಯ ದಾಂಟಿ ನಿಸ್ಸೀಮನಾದ ಶರಣನ ಎನಗೊಮ್ಮೆ ತೋರಿಸಯ್ಯ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಉರಿಯೊಳಗಣ ಪ್ರಕಾಶದಂತೆ ಮೊಗ್ಗೆಯೊಳಗಣ ಪರಿಮಳದಂತೆ ಕ್ಷೀರದೊಳಗಣ ಘೃತದಂತೆ ಭಾವದೊಳಗಣ ನಿರ್ಭಾವದಂತೆ ಶಬ್ದದೊಳಗಣ ನಿಶ್ಶಬ್ದದಂತೆ ಝೇಂಕಾರ ನಿಜಲಿಂಗಪ್ರಭುವೆ ನಿಮ್ಮ ಶರಣನ ಅನಾದಿಯ ಅರಿವು.
--------------
ಜಕ್ಕಣಯ್ಯ
ಲಿಂಗವಂತ ಲಿಂಗಭಕ್ತ ಲಿಂಗಾಚಾರಿಯೆನಿಸಿಕೊಂಡ ಬಳಿಕ, ಲಿಂಗದ ನಚ್ಚು, ಲಿಂಗದ ಮಚ್ಚು, ಲಿಂಗವೇ ಪ್ರಾಣವಾಗಿರಬೇಕಲ್ಲದೆ, ಮತ್ತೆ ತಪ್ಪಿ ನಡೆದು, ತಪ್ಪಿ ನುಡಿದು, ಪರಧನ ಪರಸ್ತ್ರೀಯರ ಸಂಗವ ಮಾಡಿ, ದುರ್ಗುಣ ದುರಾಚಾರದಲ್ಲಿ ನಡೆದು, ಮತ್ತೆ ತಾವು ಲಿಂಗವಂತರೆನಿಸಿಕೊಂಬ ಪರಿಯ ನೋಡಾ. ಇದು ಲಿಂಗದ ನಡೆಯಲ್ಲ, ಲಿಂಗದ ನುಡಿಯಲ್ಲ. ಇದ ನಮ್ಮ ಶಿವಶರಣರು ಮೆಚ್ಚರು. ಲಿಂಗವಂತನ ಪರಿ ಬೇರೆ ಕಾಣಿರೆ. ಲಿಂಗಕ್ಕೆ ಲಿಂಗವೆ ಪ್ರಾಣವಾಗಿರಲು ಬಲ್ಲ. ಲಿಂಗಕ್ಕೆ ಲಿಂಗವೆ ಭೋಗವಾಗಿರಲು ಬಲ್ಲ. ಲಿಂಗಕ್ಕೆ ಲಿಂಗವೆ ಸಂಗವಾಗಿ[ರಲು]ಬಲ್ಲ, ಇಂತಪ್ಪ ಲಿಂಗವಂತನ ಸದಾಚಾರಿಯೆಂಬೆನು. ಇಂತಪ್ಪ ಲಿಂಗವಂತನ ಸರ್ವಾಂಗಲಿಂಗಿಯೆಂಬೆನು. ಇಂತಪ್ಪ ಲಿಂಗವಂತನ ಸರ್ವಕರಣ ನಿರ್ಮುಕ್ತನ ಸರ್ವನಿರ್ವಾಣಿಕಾಯೆಂಬೆನು. ಇಂತಪ್ಪ ಮಹಾಮಹಿಮನ ನಿಲವು ಎಲಗಳೆದ ವೃಕ್ಷದಂತೆ, ಉಲುಹಡಗಿಪ್ಪ ಶರಣನ ಪರಿಯ ನೀವೇ ಬಲ್ಲಿರಲ್ಲದೆ, ಮತ್ತೆ ಉಳಿದಾದ ಅಜ್ಞಾನ ಸಂದೇಹಿಮಾನವರೆತ್ತ ಬಲ್ಲರಯ್ಯಾ. ಶುದ್ಧ ಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುನದೇವಯ್ಯಾ ನಿಮ್ಮ ಲಿಂಗಾವಧಾನಿಯ ಪರಿಯ ನೀವೇ ಬಲ್ಲಿರಲ್ಲದೆ ನಾನೆತ್ತ ಬಲ್ಲೆನಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಮರುಳಶಂಕರದೇವ
ಸರ್ವಾಂಗಲಿಂಗವಾದ ಶರಣನ ಕಾಯ ಆವ ದೇಶದಲ್ಲಿ ಆಳಿದಡೇನು? ಎಲ್ಲಿ ಆಳಿದಡೇನುರಿ ಉಳಿದಡೇನು? ಕಾಯ ಉಳಿಯದೆ ಬಯಲಾದಡೇನು? ಅದೇತರಲ್ಲಿ ಹೋದಡು ಲಿಂಗೈಕ್ಯಪದಕ್ಕೆ [ಕುತ್ತ] ಕೊಡಲಿಲ್ಲವೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಇಕ್ಷುವಿನೊಳಗೆ ಶರ್ಕರವ ಕಾಣಬಹುದಲ್ಲದೆ, ಶರ್ಕರದೊಳಗೆ ಇಕ್ಷುವಿನ ಕಂಡವರುಂಟೆ ? ಕ್ಷೀರದೊಳಗೆ ಘೃತವ ಕಾಣಬಹುದಲ್ಲದೆ, ಘೃತದೊಳಗೆ ಕ್ಷೀರವ ಕಂಡವರುಂಟೆ ? ಶುಕ್ತಿಯೊಳಗೆ ಮೌಕ್ತಿಕವ ಕಾಣಬಹುದಲ್ಲದೆ, ಮೌಕ್ತಿಕದೊಳಗೆ ಶುಕ್ತಿಯ ಕಂಡವರುಂಟೆ ? ಸಂಸಾರದೊಳಗೆ ಶರಣನ ಕಾಣಬಹುದಲ್ಲದೆ, ಶರಣನೊಳಗೆ ಸಂಸಾರವ ಕಂಡವರುಂಟೆ? ಮೂರು ಲೋಕದೊಳಗೆ ಇಲ್ಲ ಇಲ್ಲ ಕಾಣಾ ಗುರುನಿರಂಜನ ಚನ್ನಬಸವಲಿಂಗ ಸಂಸಾರ ಶರಣ.
--------------
ದೇಶಿಕೇಂದ್ರ ಸಂಗನಬಸವಯ್ಯ
ಕಾಯಪಲ್ಲಟದ ಹೆಸರಲ್ಲಿ ಅನುಮಿಷನಲ್ಲಮನಾಗಿ ತನ್ನ ಲಿಂಗವ ತಾನೆ ಮತ್ರ್ಯಕ್ಕೆ ತಂದ. ಕಾಯಪಲ್ಲಟದ ಹೆಸರಲ್ಲದೆ ನಹೆಸರಲ್ಲಿಳಫ ¥õ್ಞಲಸ್ತ್ಯನು ಸಕಳೇಶ್ವರ ಮಾದಿರಾಜನಾಗಿ ತನ್ನ ಲಿಂಗವ ತಾನೆ ಮತ್ರ್ಯಕ್ಕೆ ತಂದ. ಕಾಯಪಲ್ಲಟದ ಹೆಸರಲ್ಲದೆನಹೆಸರಲ್ಲಿಳಫ ವಿಷ್ಣು ದಶಾವತಾರಕ್ಕೆ ಬಂದು ಸಿಕ್ಕಿದ ಸಿದ್ಧರಾಮಯ್ಯನಾಗಿ ತನ್ನ ದಿವ್ಯದೇಹವ ತಾನೆ ಮತ್ರ್ಯಕ್ಕೆ ತಂದ. ಇದು ಕಾರಣ_ ಕೂಡಲಚೆನ್ನಸಂಗಯ್ಯನಲ್ಲಿ ಶರಣನ ಉಪಮಿಸಬಾರದು, ಉಪಮಾತೀತನು
--------------
ಚನ್ನಬಸವಣ್ಣ
ಅಂಗುಷ್ಠದಲ್ಲಿ ಸರ್ಪದಷ್ಟವಾಗಲು ಸರ್ವಾಂಗವೆಲ್ಲವು ವಿಷಮಯವಾಗಿಪ್ಪುದು ನೋಡಾ. ಶರಣನೆಂಬಂಗದ ಮೇಲೆ ಲಿಂಗದಷ್ಟವಾಗಲು ಆ ಶರಣನ ಸರ್ವಾಂಗವೆಲ್ಲವು ಲಿಂಗವಪ್ಪುದು ತಪ್ಪದು ನೋಡಾ. ಲಿಂಗವನಪ್ಪಿ ಲಿಂಗಸಂಗಿಯಾದ ಅಭಂಗ ಶರಣಂಗೆ ಅನಂಗಸಂಗವುಂಟೆ? ಬಿಡಾ ಮರುಳೇ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಇನ್ನಷ್ಟು ... -->