ಅಥವಾ

ಒಟ್ಟು 48 ಕಡೆಗಳಲ್ಲಿ , 22 ವಚನಕಾರರು , 47 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೃಷ್ಟಿ ಕಷ್ಟವ ಮುಟ್ಟುವಲ್ಲಿ ಮೂವರ ಸಂಚವಿಲ್ಲಾಗಿ ಅಟ್ಟಿ ಹರಿದು ಹರಿಯ ಹಿಮ್ಮಡಿಯ ಹಿಡಿದುಕೊಂಡು ಬಿಟ್ಟೆನು. ಕಟ್ಟಿಯಾಳಿದ ರುದ್ರನೆಂಬನ, ಗೌರಿ ಸರಸ್ವತಿ ಲಕ್ಷ್ಮಿಯ ಹೋಗೆಂದೆ, ಬ್ರಹ್ಮನ ಕಳುಹಿದೆ. ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ ಎಂದೆ.
--------------
ಘಟ್ಟಿವಾಳಯ್ಯ
ಎಲೆ ಅಯ್ಯಾ, ಎಲೆ ನಲ್ಲ, ನಿನ್ನ ಕೈಯ ಬಿಲ್ಲ ಗುಣವ ಕಂಡೆ ನಾನಯ್ಯ. ಗುರಿ ಎರಡ ಕೊಂದಂಬನೆಸುವ ಅದ ಒಂದೆಡೆಗೆ ಬರ ಹರಿಯ ಹುಟ್ಟ ಹರಿಯಲೆಸುವ ವಿರಿಂಚನ ಬಿಡ! ಅ್ಕನ್ನದಲೆಸುವ! ಎನ್ನ ಕಪಿಲಸಿದ್ಧಮಲ್ಲಿನಾಥಯ್ಯನು!
--------------
ಸಿದ್ಧರಾಮೇಶ್ವರ
ಮನವಿಕಾರ ಸುಟ್ಟದನು ಮನವಿಕಾರದ ಭ್ರಮೆಯ ಹೋರಟೆಯಾಗದೆಂ ಬನುವಿನಿಂ ತ್ರಿಲೋಕಯೆಲ್ಲ ಭಂಗಿತರಾಗಿ ಜನನ ಮರಣಕೆ ಬರುವ ಮನವು ನಿರ್ಮನವಾಗಲವ ಸತ್ಯ ನಿತ್ಯ ಶರಣ. ಪದ :ಹರಿದು ಮರ್ಕಟನ ವಿಕಾರಕಿಂದಲಿ ಮೇಣು ಸುರೆ ಸವಿದವನ ವಿಕಾರವದರಿಂದ ಧ ತ್ತುರಿಯ ಸೇವಿಸಿದವನ ವಿಕಾರಯಿವು ತ್ರಿವಿಧಕೆ ಗೌರವಂ ಮನವಿಕಾರ ಚರಿಯ ಮದದ ಅಮಲು ತಲೆಗೇರಿ ತಾಮಸದಲಿಂ ಗಿರಿಯಂಧಕನವೋಲಿನಂತೆ ದೇವತಾ ಸತ್ಯ ಪುರುಷರುಂ ಶಿವಜ್ಞಾನ ಹೊಲಬನರಿಯದೆ ಕೆಟ್ಟುದನೇನ ಹೊಗಳ್ವೆ ನಾನು | 1 | ಹರಿಯ ಮುಂದುಗೆಡಿಸಿ ಅಜನ ಶಿರವ ಕಳೆಸಿ ಸುರನ ಮೈಯೋನಿಯಂ ಮಾಡಿ ದೇವರ್ಕಳಂ ನೆರೆ ಕೆಡಿಸಿ ಯತಿ ಸಿದ್ಧಸಾಧ್ಯರೆಲ್ಲರ ಸೆರೆಯ ಹಿಡಿದು ಭಂಗಿತರ ಮಾಡಿ ಧರೆಯ ಮನುಜರ ತಿಂದು ತೇಗಿ ಕಾಡುವ ಮನವ ನಿರಸನಮಾಡಿ ನಿರ್ಮೋಹಿಯಾಗಿಹ ಸತ್ಯ ಶರಣರಡಿಧೂಳಿಯ ಚಮ್ಮಾವುಗೆಯ ಪೊರೆವೆನೆನಗಿದೆ ಸತ್ಯ ಮುಕ್ತಿ ಕಂಡಾ |2| ಇಳೆಪತಿಗೆ ಮಂತ್ರಿ ತಾ ಮುಖ್ಯವಾದಂತೆ ಕಾಯ ದೊಳು ಚರಿಸುವ ಜೀವ ಪ್ರಾಣದ್ವಯ ದಶವಾಯು ಗಳು ಅಷ್ಟಮದ ಸಪ್ತವ್ಯಸನ ಅರಿವರ್ಗ ಚತುರಂತಃಕರಣವಿಷ್ಟೆಲ್ಲಕೆ ಸಲೆ ಮನಂ ಮುಖ್ಯವಾಗಿಯೂ ಪಾಪ ಅನ್ಯಾಯವ ಗಳಿಸಿ ಯಮನಿಂಗೆ ಗುರಿಮಾಡಿ ಬಂಧಿಸಿ ಜನರ ಕೊಲ್ಲಿಸುತಿಹ ವಿಧಿಗಂಜಿ ನಿಮ್ಮ ಮೊರೆಹೊಕ್ಕೆನೆಲೆ ಕಾಯೋ ಶಂಭುವೆ. | 3 | ಚಣಚಣಕ್ಕೆ ಪಾತಾಳಲೋಕಕೈದುವ ಮನಂ ಚಣಚಣಕ್ಕೆ ಆಕಾಶದತ್ತ ಹಾರುವ ಮನಂ ಚಣಚಣಕ್ಕೆ ಸಪ್ತಸಮುದ್ರವ ಚರಿಸಿಬರುವುದೀ ಮನಮರುತ ಸರ್ವಾಂಗದಿ ಚಣಕೊಂದು ಬುದ್ಧಿಯ ನೆನದು ಕಾಡುವ ಮನದ ಗುಣದಿಂದ ನಾ ಕರ್ಮಶರಧಿಯೊಳು ಮುಣಗಿದೆನು ತ್ರಿಣಯ ನೀ ಕೈವಿಡಿದು ತೆಗೆದು ರಕ್ಷಿಸು ಎನ್ನ ಕರುಣಾಳು ದುರಿತಹರನೆ |4 | ಮನದಿಂದೆ ನೊಂದೆ ನಾ ಮನದಿಂದೆ ಬೆಂದೆ ನಾ ಮನದಿಂದ ಕಂದಿ ಕುಂದಿಯೆ ಕುಸಿದು ಭವಗಿರಿಯ ನನುದಿನಂ ಸುತ್ತುತಿರ್ದೆನು ಅಂಧಕನ ತೆರದಿ ಮನದ ನಸು ಗುನ್ನಿ ಚುರಿಚಿತನವು ಸರ್ವಾಂಗವೆಲ್ಲವ ಕೊಂಡು ತಿನಿಸೆದ್ದು ಮನದ ಗಂಧೆಯ ತುರಿಸಿ ತುರಿಸನೇ ಹಂಬಲಿಸಿ ಕನಲುತಿರ್ದೆನು ಎನ್ನ ಗುಣವ ನೋಡದೆ ಕಾಯೋ ಕಾಯೋ ಕರುಣಾಳುವೆ |5| ಪಾಪಿಮನ ಠಕ್ಕಮನ ಸರ್ವರೊಳು ಕೋಪಿಮನ ಕುಕ್ಕಮನ ಕಾಕುಮನ ಜಾಪಿಮನ ಹೇವಮನ ಹೆಬಗಮನ ಗುಣಧರ್ಮಕರ್ಮದಿಂದ ತಾಪಸಬಡುತಿರ್ದೆ ಗಾಯವಡೆದ ಉರಗ ನಾಪರಿಯಲೆನ್ನ ನೆರಳಿಸಿ ಒರಲಿಸುವ ಮನದ ರೂಪನಳಿದು ಜ್ಞಾನವಿತ್ತು ಸಲವಯ್ಯಾ ಚಿದ್ರೂಪ ಚಿನ್ಮಯ ಶಂಭುವೆ. | 6 | ಕೂಳಮನ ಕುರಿಮನ ಸರ್ವಚಾಂ ಡಾಲಿಮನ ಪರಧನ ಪರಸ್ತ್ರೀಯರನ್ಯಕ್ಕೆ ಕೋಳುಗೊಂಬುವ ಹೆಡ್ಡಮನ ಜಿಡ್ಡುಮನ ಜಾಳುಮನ ಹಾಳುಮನದ ಪಾಳೆಯವು ಹಲವು ಪರಿಯ ಮನದ ಗಾಡಿಗೆ ಸಿಲ್ಕಿ ಕಾಲಕರ್ಮಕ್ಕೆ ಗುರಿಯಾದೆನಿದ ಪರಿಹರಿಸಿ ಶೂಲಿ ಸರಸಿಜನ ಕಪಾಲಿ ಶಿರಮಾಲಿ ರಕ್ಷಿಸು ಕರುಣಾಂಬುನಿಧಿ ಗಿರಿಜೇಶನೆ |7| ಅಂಗಗೂಡಿನೊಳು ಮನಪಕ್ಷಿ ಹೊರಗಿರುವ ಪ ಕ್ಕಂಗಳೆರಡರೊಳು ಉಡುಪತಿ ಭಾನುವಂ ಪಿಡಿದು ಜಂಗಿಟ್ಟು ಭೂಯ್ಯೋಮ ಮಧ್ಯದೊಳು ಚರಿಸುತಿರಲೆತಿ ಸಿದ್ಧ ಸಾಧ್ಯರೆಲ್ಲ ಭಂಗಬಡುವರು ಮನವೆಂಬ ಪಕ್ಷಿಯ ಮುರಿದು ನುಂಗಬಲ್ಲಡೆ ಸತ್ಯಶಿವಯೋಗಿ ಶರಣ ನಿ ರ್ಭಂಗ ನಿರ್ಲೇಪ ನಿರ್ಮನ ನಿರಾಭಾರಿಯಾಗಿಹರೆನ್ನ ಪ್ರಾಣಲಿಂಗ. | 8 | ಹರನ ಶ್ರೀಪಾದದೊಳು ಮನವನಿಟ್ಟಿಹ ಸತ್ಯ ಶರಣಬಸವೇಶ ಪ್ರಭುರಾಯ ಮೋಳಿಗೆ ಮಾರ ಗುರುಭಕ್ತ ನೆಂಬಣ್ಣ ದಾಸಿ ಕೇಶಯ್ಯನೋಹಿಲದೇವನುದುಟಯ್ಯ ಮರುಳಶಂಕರ ಮುಖ್ಯವಾದ ಪ್ರಮಥರ ದಿವ್ಯ ಚರಣದಲಿ ಮನವ ಮಗ್ನಿಸಿದ ದಾಸೋಹಿಗಳ ವರಪ್ರಸಾದಕ್ಕೆ ಯೋಗ್ಯನ ಮಾಡು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ. | 9 |
--------------
ಹೇಮಗಲ್ಲ ಹಂಪ
ಭೃಗುಮುನೀಶ್ವರನ ಶಾಪದಿಂದ ವಿಷ್ಣು ದಶಾವತಾರವಾಗಿ ಬಂದಲ್ಲಿ, ಶಿವಭಕ್ತಿಯನೆ ಮಾಡಿದನೆಂಬುದಕ್ಕೆ ಶಿವಧರ್ಮಪುರಾಣ ಪ್ರಸಿದ್ಧ ನೋಡಿ. ಅದೆಂತೆಂದಡೆ : ಮತ್ಸ್ಯ ಕೂರ್ಮೋ ವರಾಹಶ್ಚ ನಾರಸಿಂಹಶ್ಚ ವಾಮನಃ | ರಾಮೋ ರಾಮಶ್ಚ ರಾಮಶ್ಚ ಬೌದ್ಧಶ್ಚ ಕಲಿ ಕಾಹ್ವಯಃ || ಎಂದುದಾಗಿ, ಶಿವಲಿಂಗವ ಹರಿ ಪ್ರತಿಷೆ*ಯ ಮಾಡಿದ. ಮತ್ಸ್ಯಾವತಾರದಲ್ಲಿ ಮತ್ಸ್ಯಕೇಶ್ವರದೇವರ ಲಂಕಾಪುರಿಯಲ್ಲಿ ಶಿವಲಿಂಗವ ಹರಿ ಪ್ರತಿಷೆ*ಯ ಮಾಡಿದ. ಕೂರ್ಮಾವತಾರದಲ್ಲಿ ಕೂರ್ಮೇಶ್ವರದೇವರ ಧಾರಾವತಿಯಲ್ಲಿ ಶಿವಲಿಂಗವ ಹರಿ ಪ್ರತಿಷೆ*ಯ ಮಾಡಿದ. ವರಾಹವತಾರದಲ್ಲಿ ವರಾಹೇಶ್ವರದೇವರ ವೃಂದಗಿರಿಯಲ್ಲಿ ಶಿವಲಿಂಗವ ಹರಿ ಪ್ರತಿಷೆ*ಯ ಮಾಡಿದ. ವಾಮನಾವತಾರದಲ್ಲಿ ವಾಮೇಶ್ವರದೇವರ ವಾರಣಾಸಿಯಲ್ಲಿ ಶಿವಲಿಂಗವ ಹರಿ ಪ್ರತಿಷೆ*ಯ ಮಾಡಿದ. ರಾಮಾವತಾರದಲ್ಲಿ ರಾಮೇಶ್ವರದೇವರ ಸೇತುವಿನಲ್ಲಿ ಶಿವಲಿಂಗವ ಹರಿ ಪ್ರತಿಷೆ*ಯ ಮಾಡಿದ. ನಾರಸಿಂಹಾವತಾರದಲ್ಲಿ ನರಸಿಂಹೇಶ್ವರದೇವರ ಆವು [ಅಹೋ]ಬಳದಲ್ಲಿ ಶಿವಲಿಂಗವ ಹರಿ ಪ್ರತಿಷೆ*ಯ ಮಾಡಿದ ಬೌದ್ಧಾವತಾರದಲ್ಲಿ ಬೌದ್ಧಕಲಿಕೆಯೆಂಬ ಹೆಸರ ದೇವರ ಕಾಶಿಯಲ್ಲಿ ಶಿವಲಿಂಗವ ಹರಿ ಪ್ರತಿಷೆ*ಯ ಮಾಡಿದ. ಪರಶುರಾಮಾವತಾರದಲ್ಲಿ ಪರಶುರಾಮೇಶ್ವರದೇವರ ಕಪಿಲೆಯ ತೀರದಲ್ಲಿ ಶಿವಲಿಂಗವ ಹರಿ ಪ್ರತಿಷೆ*ಯ ಮಾಡಿದ. ಕೃಷ್ಣಾವತಾರದಲ್ಲಿ ಕೃಷ್ಣೇಶ್ವರದೇವರ ಹಿಮವತ್ಪರ್ವತದಲ್ಲಿ ಶಿವಲಿಂಗವ ಹರಿ ಪ್ರತಿಷೆ*ಯ ಮಾಡಿದ. ಕಲಿಯುಗದಲ್ಲಿ ಸ್ತ್ರೀ ರೂಪಿಂದ ಅಗಲಕ್ಕೆ ನಿಂದ. ಇಂತೀ ದಶಾವತಾರದಲ್ಲಿಯೂ ಹರಿಯೆ ಭಕ್ತ. ಹರಿಯ ಬಿಟ್ಟು ಭಕ್ತರಿಲ್ಲ. ಸೊಡ್ಡಳದೇವರಿಂದ ಬಿಟ್ಟು ಕರ್ತರಿಲ್ಲ ಕೇಳಿರಣ್ಣಾ.
--------------
ಸೊಡ್ಡಳ ಬಾಚರಸ
ಹರಿಯ ನುಂಗಿತ್ತು ಮಾಯೆ, ಅಜನ ನುಂಗಿತ್ತು ಮಾಯೆ ಇಂದ್ರನ ನುಂಗಿತ್ತು ಮಾಯೆ, ಚಂದ್ರನ ನುಂಗಿತ್ತು ಮಾಯೆ ಬಲ್ಲೆನೆಂಬ ಬಲುಗೈಯರ ನುಂಗಿತ್ತು ಮಾಯೆ, ಅರಿಯೆನೆಂಬ ಅಜ್ಞಾನಿಗಳ ನುಂಗಿತ್ತು ಮಾಯೆ, ಈರೇಳುಭುವನವನಾರಡಿಗೊಂಡಿತ್ತು ಮಾಯೆ, ಚೆನ್ನಮಲ್ಲಿಕಾರ್ಜುನಯ್ಯಾ, ಎನ್ನ ಮಾಯವ ಮಾಣಿಸಾ ಕರುಣಿ.
--------------
ಅಕ್ಕಮಹಾದೇವಿ
ಇದು ಅರಿಬಿರಿದು ಇದಾರಿಗೂ ಅಸಂಗ. ಹಾವು ಹದ್ದಿನಂತೆ ಹುಲಿ ಹುಲ್ಲೆಯಂತೆ ಹಾವು ಹರಿಯ ಕೂಟದಂತೆ ಅರಿ ಬಿರಿದಿನ ಸಂಗ. ತೆರಹಿಲ್ಲದ ಆಲಯ, ಭಟರಿಲ್ಲದ ಕಟಕ, ದಿಟಪುಟವಿಲ್ಲದ ಜಾವಟಿ, ಎಸಕವಿಲ್ಲದ ಒಲುಮೆ, ರಸಿಕರಿಲ್ಲದ ರಾಜನಗರ ಇಂತಿವರ ಉಪಸಾಕ್ಷಿ ಸಂತೈಸುವದಕ್ಕೆ, ಭ್ರಾಂತನಳಿವುದಕ್ಕೆ ಶ್ರುತದಲ್ಲಿ ಕೇಳಿ ದೃಷ್ಟದಲ್ಲಿ ಕಂಡು ಆಮ್ನೆಯ ಅನುಮಾನದಲ್ಲಿ ಅರಿದು ಅಭಿನ್ನವಿಲ್ಲದೆ ಅವಿರಳನಾಗಾ, ಮನಸಿಜಪಿತಪ್ರಿಯ ಶ್ರುತಿ ನಾಮ ದೂರ ಗತಿ ಮತಿ ಈವ ರಾಮೇಶ್ವರ ಲಿಂಗದಲ್ಲಿ ಪ್ರತಿಭಿನ್ನವಿಲ್ಲದ ಶರಣಂಗೆ.
--------------
ಗುಪ್ತ ಮಂಚಣ್ಣ
ಉರಗನ ಫಣಾಮಣಿಯ ಬೆಳಗಿನಲ್ಲಿ ನಿಂದ ಪ್ರಸದಿ ಕರಿಯ ಕೊಂದು ಹರಿಯ ಬೆಳಗಿನಲ್ಲಿ ನಿಂದ ಪ್ರಸಾದಿ. ಶಿರದ ಮೇಲೆ ನಿಂದ ಗಂಗೆಯ ಬೆಳಗಿನಲ್ಲಿ ನಿಂದ ಪ್ರಸಾದಿ. ಉರಮಧ್ಯದಲ್ಲಿಪ್ಪ ಪರಂಜ್ಯೋತಿಯ ಬೆಳಗಿನಲ್ಲಿ ನಿಂದ ಪ್ರಸಾದಿ. ಪೂರ್ವಪಶ್ಚಿಮ ಏಕವಾದ ಬೆಳಗಿನಲ್ಲಿ ನಿಂದ ಪ್ರಸಾದಿ. ಇಂತೀ ಘನವನೆಲ್ಲ ಒಳಕೊಂಡ ಮಹಾಬೆಳಗಿನಲ್ಲಿ ನಿಂದ ಪ್ರಸಾದಿ. ಅಯ್ಯಾ ಚೆನ್ನಮಲ್ಲೇಶ್ವರಾ, ಆ ಪ್ರಸಾದಿಯ ಪ್ರಸಾದವ ಕೊಂಡು ನಾ ಉರಿಯುಂಡ ಕರ್ಪುರದಂತಾದೆನಯ್ಯಾ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಹರಿಯ ಹೇಳಿಗೆಯಲ್ಲಿ ಮಾರ್ಜಾಲ ಮೂಷಕನ ಹಡೆದುದ ಕಂಡೆನಯ್ಯ. ಕರಿಯ ಬೇಡನ ಕೈವಿಡಿದು, ರಾಹುಕೇತುಗಳಾಗಿ ಚಂದ್ರಸೂರ್ಯರ ಕೊರೆಕೂಳನುಂಡು ಧರೆಯಾಕಾಶಕ್ಕೆ ಶರೀರವಿಲ್ಲದೆ ಎಡೆಯಾಡುವುದ ಕಂಡೆ. ಸಿರಿವರ ವಾಣಿಪತಿಯೆಂಬವರ ತನ್ನ ಹೊರೆಯಲ್ಲಿಕ್ಕಿ ಆಳಿ ಮನುಮುನೀಶ್ವರರ ಮರೆದೊರಗಿಸಿದ್ದ ಕಂಡೆ. ಇದರ ನೆಲೆಯನರಿದು, ಹೊಲಬ ತಿಳಿದುಕೊಳಬಲ್ಲಾತನಲ್ಲದೆ ಲಿಂಗೈಕ್ಯನಲ್ಲ ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಪಕ್ಕವಿಲ್ಲದ ಹಕ್ಕಿ ಮಿಕ್ಕು ಮೀರಿ ಹಾರಿಯಾಡುತ್ತಿರಲು, ಹಿಡಿದವರ ಹಿಡಿಯನೊಡೆದು, ಹರಿಯ ಹೃದಯವನೊಡೆದು, ಬ್ರಹ್ಮನ ಬ್ರಹ್ಮಾಂಡವನೊಡೆದು, ರುದ್ರನ gõ್ಞದ್ರವ ಭಸ್ಮವ ಮಾಡಿ, ದ್ವೈತಾದ್ವೈತವೆಂಬ ಮೇಹಕೊಂಡು, ಘನಕ್ಕೆ ಘನವೆಂಬ ಘುಟಿಕೆಯನೆ ನುಂಗಿ, ಇದ್ದುದೆಲ್ಲವಂ ನಿರ್ದೋಷವಂ ಮಾಡಿ ಮಿಕ್ಕಿನ ಘನವ ಹೇಳಲೊಲ್ಲದೆ ಇದಕ್ಕಿನ್ನಾರೆಂದಡೆ: ಕೂಡಲಚೆನ್ನಸಂಗಯ್ಯನ ಶರಣರಲ್ಲದೆ ಮತ್ತಾರು ಮತ್ತಾರು ಇಲ್ಲವೆಂದು ಘೂ ಘೂ ಘೂಕೆಂದಿತ್ತು !
--------------
ಚನ್ನಬಸವಣ್ಣ
ಬಿಸಿಲ ಮುಂದಣ ಮಂಜಿನಂತಾಯಿತ್ತು. ದಿಟದ ಮುಂದಣ ಸಟೆಯಂತಾಯಿತ್ತು. ಪುಣ್ಯದ ಮುಂದಣ ಪಾಪದಂತಾಯಿತ್ತು. ಯೋಗಿಯ ಮುಂದಣ ಸಂಸಾರದಂತಾಯಿತ್ತು. ಧೀರನ ಮುಂದಣ ಹೇಡಿಯಂತಾಯಿತ್ತು. ಉರಗನ ಮುಂದಣ ಭೇಕನಂತಾಯಿತ್ತು. ಹರಿಯ ಮುಂದಣ ಕರಿಯಂತಾಯಿತ್ತು. ವಿವೇಕದ ಮುಂದಣ ದುಃಖದಂತಾಯಿತ್ತು. ಪುಣ್ಯಾರಣ್ಯದಹನ ಭೀಮೇಶ್ವರನೆಂಬ ಸದ್ಗುರು ಕಾರುಣ್ಯವಾಗಲೊಡನೆ ಎನ್ನ ಸುತ್ತಿಹ ಪ್ರಪಂಚು ಸರ್ವವೂ ಓಡಿದವಯ್ಯಾ!
--------------
ಕೋಲ ಶಾಂತಯ್ಯ
ಎಲ್ಲರಾಟದಂತಲ್ಲ ಎನ್ನಾಟ, ಕರದಾಧಾರದಲಪ್ಪಿ, ಪಂಚಾಮೃತ ಮಂತ್ರವನುಂಡಾಡಿದೆ. ಆ ದೇಶ ಈ ದೇಶವೆಂತೆನ್ನದೆ ಪರದೇಶದಲಾಡಿ ಪರದೇಶಿಯಾದೆನು. ಕಾಲನ ಮೇಲೆ ನಿಂದು, ಕಪಾಲದ ಭಿಕ್ಷವ ಹಿಡಿದು ಹರಿಯ ಶೂಲದಲೆತ್ತಿಯಾಡಿದೆ. ಹರಶರಣರಾಧಾರದ ಬಸವನ ಶಿಶು ನಾನು ಕಾಣಾ ರೇಕಣ್ಣಪ್ರಿಯ ನಾಗಿನಾಥಾ.
--------------
ಬಹುರೂಪಿ ಚೌಡಯ್ಯ
ಭಕ್ತಿಭಾಂಡದ ಶಿವಭಕ್ತರ ನಿಷೇಧವ ಮಾಡುವ ಕರ್ಮಭಾಂಡದ ದ್ವಿಜರು ನೀವು ಕೇಳಿಭೋ : `ಸತ್ಯಂ ಭೋ ಬ್ರೂತ ಪಂಚಪ್ರಾಣ ಇಂದ್ರಿಯನಿಗ್ರಹಮೆಂದೋದಿ ಗುದ್ದಿ ಗುದ್ದಿ ಹೋತನ ತಿಂಬುದಾವಾಚಾರವೊ ? `ಪಿತಾಮಹಶ್ಚ ವೈಶ್ಯಸ್ತು ಕ್ಷತ್ರಿಯೋ ಪರಯೋ ಹರಿಃ ಬ್ರಾಹ್ಮಣೋ ಭಗವಾನ್ ರುದ್ರಃ ಸರ್ವೇಷ್ವ್ಯುತ್ತಮೋತ್ತಮಃ ಎಂಬ ಶ್ರುತಿಯ ನೋಡಿ, ತಮ್ಮ ಕುಲದೈವವಹ ಬ್ರಾಹ್ಮಣನಹ ರುದ್ರನ ನಿಂದಿಸಿ, ತಮಗಿಂದ ಕೀಳುಜಾತಿಯಹ ಕ್ಷತ್ರಿಯ ಹರಿಯ ಆರಾಧಿಸುವ ಕುಲಹೀನರು ನೀವು ಕೇಳಿಭೋ : `ಜನ್ಮನಾ ಜಾಯತೇ ಶೂದ್ರಃ ಕರ್ಮಣಾ ದ್ವಿಜ ಉಚ್ಯತೇ `ವೇದಾಭ್ಯಾಸೇನ ವಿಪ್ರಸ್ತು ಬ್ರಹ್ಮಣಾ ಚರಂತೀತಿ ಬ್ರಾಹ್ಮಣಃ ಎಂಬ ಶ್ರುತಿಯನೋದಿ, ಪರಬ್ರಹ್ಮನಂತಹ ಶಿವಲಿಂಗಪೂಜೆಯನಾಚರಿಸಿ ಬ್ರಾಹ್ಮಣತ್ವವನೈ[ದದೆ] ಶತಯಾಗಂಗಳ ಮಾಡಿ ಶೂದ್ರನಹ ಇಂದ್ರತ್ವವ ಬಯಸುವ ಅಧಮರು ನಿವು ಕೇಳಿಭೋ : `ಜನ್ಮನಾ ಜಾಯತೇ ಶೂದ್ರಃ ಮಾತಾ ಸಾ ಪ್ರಥಮಂ ಶೂದ್ರಾಣಿ ನಚೋಪದೇಶಃ ಗಾಯತ್ರೀ ನ ಚ ಮೌಂಜೀ ನ ಚ ಕ್ರಿಯಾ ಎಂದುದಾಗಿ, ದೀಕ್ಷೆಯಿಲ್ಲದೆ ಸತಿಶೂದ್ರಗಿತ್ತಿಗೆ ಹುಟ್ಟಿದವನೊಡನುಂಬ ಅನಾಚಾರಿಗೆ ಎಲ್ಲಿಯದೊ ಬ್ರಾಹ್ಮಣತ್ವ ? ಆವ ಜಾತಿಯವನಾದರೇನು ಶಿವಭಕ್ತನೆ ಬ್ರಾಹ್ಮಣ. ಅದಕ್ಕೆ ಸಾಕ್ಷಿ : . `ತಪಸಾ ಬ್ರಾಹ್ಮಣೋ[s]ಭವತ್ ಸಾಂಖ್ಯಾಯನ ಮಹಾಮುನಿಃ ತಪಸಾ ಬ್ರಾಹ್ಮಣೋ[s]ಭವತ್ ಗೌತಮಸ್ತು ಮಹಾಮುನಿಃ ಜಾತಿಂ ನ ಕಾರಯೇತ್ತೇಷು ಶ್ರೇಷಾ*ಃ ಸಮಭವಂಸ್ತತಃ ತಜ್ಜಾತಿರಭವತ್ತೇನ' ಎಂದುದಾಗಿ, ತಮ್ಮ ತಮ್ಮ ಗೋತ್ರಂಗಳೆ ಸಾಕ್ಷಿಯಾಗಿ ಸಾರುತ್ತಿರಲು ಕುಭ್ರಮೆಯಾತಕ್ಕೆ ? ಶ್ವಪಚೋ[s]ಪಿ ಮುನಿಶ್ರೇಷ*ಃ ಶಿವಭಕ್ತಿಸಮನ್ವಿತಃ ಶಿವಭಕ್ತಿವಿಹೀನಸ್ತು ಶ್ವಪಚೋ[s]ಪಿ ದ್ವಿಜಾಧಮಃ ಎಂದುದಾಗಿ ಶಿವಭಕ್ತನೆ ಕುಲಜ, ಶಿವಭಕ್ತಿ ಇಲ್ಲದವನೆ ಶ್ವಪಚನೆಂದರಿಯದ ಅಜ್ಞಾನಿಗಳು ನೀವು ಕೇಳಿಭೋ ! `ಏಕ ಏವ ರುದ್ರೋ ನ ದ್ವಿತೀಯಾಯತಸ್ಥೇ' ಎಂದು ವೇದವನೋದಿ `ಪಶುಪತಯೇ ನಮಃ' ಎಂದಾ ರುದ್ರವನೋದಿ ಶಿವನೆ ಪತಿ ಮಿಕ್ಕಿನ ದೈವಂಗಳೆಲ್ಲ ಪಶುಗಳೆಂಬುದ ತಿಳಿದು ಮತ್ತೆಯೂ ಈ ದ್ವಿಜರು ಕಾಣಲರಿಯರು. ಹರಹರನೊಂದೆಯೆಂಬ ನರಗುರಿಗಳು ನೀವು ಕೇಳಿಭೋ ! ಪಾರಾಶ[ರ] ಪುರಾಣೇ : ಆದೌ ರುದ್ರಾಂಗಮುತ್ಪತ್ತಿಃ ಮುಖೇ ಬ್ರಾಹ್ಮಣವೀಶ್ವರಃ ವಿಷ್ಣುಂ ಕ್ಷತ್ರಿಯಮಿತ್ಯಾಹುರ್ಬಾಹುನಾ ಚ ಅವಸ್ಥಿತಃ ವೈಶ್ಯಶ್ಚ ಬ್ರಹ್ಮಾ ಇತ್ಯಾಹುಃ ಲಿಂಗಾದೇವ ಅವಸ್ಥಿತಃ ಸುರಪೋ ಶೂದ್ರಯಿತ್ಯಾಹುಃ ದೇವಪಾದಾದವಿಸ್ಥಿತಃ ಎಂದುದಾಗಿ, ರುದ್ರನ ಮುಖದಲ್ಲಿ ಹುಟ್ಟಿದವನೆ ಬ್ರಾಹ್ಮಣ, ಮಿಕ್ಕಾದ ವಿಪ್ರರೆಲ್ಲರು ಋಷಿಗೋತ್ರದಲ್ಲಿ ಹುಟ್ಟಿದರು. ಆ ಋಷಿಮೂಲದ ವಿಪ್ರರೆಲ್ಲರು ಅಧಮಜಾತಿ ಅಧಮಜಾತಿಯಾದರೇನು ? ರುದ್ರಭಕ್ತರಾದ ಕಾರಣ ಬ್ರಾಹ್ಮಣರಾದರು. ಈ ವರ್ಮವನರಿಯದ ಚಾಂಡಾಲ ವಿಪ್ರರ್ಗೇನೂ ಸಂಬಂಧವಿಲ್ಲ. ಕಾಕ ರುದ್ರನ ಮುಖದಲ್ಲಿ ಉದ್ಭವವೆಂಬುದಕ್ಕೆ ಶ್ವಾನಸೂಕರರೂಪೇ ಪ್ರೇತಪಿಂಡ ಪ್ರದಾನತಃ ಪ್ರೇತತ್ವಂ ಚ ಸದಾ ಸ್ಯಾತ್ ತಥಾ ಧರ್ಮೇಣ ಲುಪ್ಯತೇ ಎಂದುದಾಗಿ ಆಗಮಾರ್ಥವನರಿಯದೆ, ಪ್ರೇತಪಿಂಡವನಿಕ್ಕುವ ಪಾತಕರು, [ಪ್ರಾಣಾಯಸ್ವಾಹಾ]ಅಪಾನಾಯ ಸ್ವಾಹಾ, ವ್ಯಾನಾಯ ಸ್ವಾಹಾ ಉದಾನಾಯ ಸ್ವಾಹಾ, ಸಮಾನಾಯ ಸ್ವಾಹಾ' ಎಂದು ಭೂತಬಲಿಯ ಬೆಕ್ಕು ನಾಯಿಗೆ ಹಾಕಿ ಮಿಕ್ಕ ಭೂತಶೇಷವ ಕೊಂಬ ಅಕುಲಜರು, ನೀವು ಕೇಳಿಭೋ ! `ವಸುರೂಪೋ ಮಧ್ಯಪಿಂಡಃ ಪುತ್ರ¥õ್ಞತ್ರಪ್ರವರ್ಧನಃ' ಎಂದು, ರುದ್ರಪ್ರಸಾದವನೆ ಕೊಂಡು ರುದ್ರಪಿಂಡದಿಂದ ಹುಟ್ಟಿ, ದೀಕ್ಷಾಕಾಲದಲ್ಲಿ ಭಸಿತವ ಧರಿಸಿ, ಬ್ರಹ್ಮಕಪಾಲಪಾತ್ರೆಯಂ ಪಿಡಿದು, ಪಲಾಶಕಂಕಾಳದಂಡಮಂ ಪಿಡಿದು, `ಭವತೀ ಭಿಕ್ಷಾಂ ದೇಹಿ'ಯೆಂದು ಭಿಕ್ಷಮಂ ಬೇಡಿ ಪಿತೃಕಾರ್ಯದಲ್ಲಿ `ವಿಶ್ವೇ ದೇವಾಂಸ್ತರ್ಪಯಾಮಿ'ಯೆಂದರ್ಚಿಸಿ, ಮರಣಕಾಲದಲ್ಲಿ ರುದ್ರಭೂಮಿಯಲ್ಲಿ ರುದ್ರಾಗ್ನಿಯಿಂದ ದಹನ ರುದ್ರವಾಹನದ ಬಾಲವಿಡಿದು ಸ್ವರ್ಗವನೆಯ್ದಿದರು, ರುದ್ರಭಕ್ತಿವಿರುದ್ಧ ವಿಚಾರಹೀನರು. `ತ್ರ್ಯಾಯುಕ್ಷಂ ಜಮದಗ್ನೇಃ ಕಶ್ಯಪಸ್ಯ ತ್ರಿಯಾಯುಷಂ, ಅಗಸ್ತ್ಯಸ್ಯ ತ್ರಿಯಾಯುಷಂನತನ್ಮೇಡಿಸ್ತುಫತ್ರಿಯಾ ಶತಸಯುಷಂ ಎಂದು ಸಕಲಋಷಿಗಳು ಶ್ರೀ ವಿಭೂತಿಯನು ಧರಿಸಿ, ಬಹಳಾಯುಷ್ಯಮಂ ಪಡೆದರೆಂದು ಮತ್ತೆಯು ಯಜುಸ್ಸಿನಲ್ಲಿ ದೀಕ್ಷೆಯನೈದಲ್ಲಿ, `ಭೂತಿವಾಂಶ್ಚ ಪ್ರಿಯಂ ಹೋತವ್ಯಂ'ಯೆಂದು, ಶ್ರೀವಿಭೂತಿಯನೆ ಧರಿಸಹೇಳಿತ್ತು ವೇದವು. `ಗೋಪೀ ಮಲಿನಧಾರೀ ತು ಶಿವಂ ಸ್ಪೃಶತಿ ಯೋ ದ್ವಿಜಃ ತದೈಕವಿಂಶತಿಕುಲಂ ಸಾಕ್ಷಾತ್ತು ನರಕಂ ವ್ರಜೇತ್ ' ಎಂದು, ಗೋಪಿ ಮಲಿನ ಚಂದನವನಿಟ್ಟು, ಪಾತಕರು[ವ] ಶಿವಲಿಂಗ ಮುಟ್ಟಿದರೆ ತಮ್ಮಿಪ್ಪತ್ತೊಂದು ಕುಲಸಹಿತ ಕೇಡಿಲ್ಲದ ನರಕದಲ್ಲಿ ಬೀಳುವರೆಂದರಿಯದೆ ಮುಟ್ಟಿಯನಿಟ್ಟ ಭ್ರಷ್ಟರು, ಮತ್ಸ್ಯ ಕೂರ್ಮ ವರಾಹ ನಾರಸಿಂಹ ಈ ನಾಲ್ಕೂ ಅವತಾರದಲ್ಲಿ ನೀರಿಂದ ಬಲಿ ಧಾರೆಯನೆರೆದನೆಂಬುದನರಿದು, ವಿಷ್ಣುವಿನ ಪಾದದಲ್ಲಿ ಗಂಗೆ ಹುಟ್ಟಿತೆಂಬ ವಿಚಾರಹೀನರು `ವಿಯದ್ವಿಷ್ಣುಪದಂ ಪ್ರೋಕ್ತಂ ಪುಂಸ್ಯಾಕಾಶವಿಹಾಯಸೀ ವಿಹಾಯಸೋ[s]ಪಿನಾಕೋ[s]ಪಿ ದ್ಯುರಪಿ ಸ್ಯಾತ್ತಿದವ್ಯಯಂ' ಎಂದು ನಿಘಂಟಿನಲ್ಲಿ ಆಕಾಶದ ಹೆಸರು ವಿಷ್ಣುಪದಿ, ಆಕಾಶಗಂಗೆ ಮುನ್ನಲುಂಟೆಂಬುದನರಿತು, ವಿಷ್ಣುವಿನ ಕಾಲಲ್ಲಿ ಗಂಗೆ ಹುಟ್ಟಿತೆಂಬ ದುಷ್ಟರು, ವೇದಕ್ಕೆ ನೆಲೆಗಟ್ಟು ಓಂಕಾರ, ಬ್ರಾಹ್ಮಣಕ್ಕೆ ನೆಲೆಗಟ್ಟು ಗಾಯತ್ರಿಯಲ್ಲಿ ಶಿವನೆ ದೈವವೆಂದಿತ್ತು. `ಓಂ ಭೂಃ ಓಂ ಭುವಃ ಓಂ ಸುವಃ ಓಂ ಮಹಃ ಓಂ ಜನಃ ಓಂ ತಪಃ ಓಂ ಸತ್ಯಂ ಓಂ ತತ್ಸವಿತುರ್ವರೇಣ್ಯಂ ಭರ್ಗೋ ದೇವಸ್ಯ ಧೀಮಹಿ ಧಿಯೋ ಯೋ ನಃ ಪ್ರಚೋದಯಾತ್ ಹರ ಹರಿಭಕ್ತನೆಂದನಿಸುವ ವಿಚಾರಹೀನರು ನೀವು ಕೇಳಿಭೋ ! ಹರಿ ಶಿವನ ಭಕ್ತನೆಂಬುವದಕ್ಕೆ ಸಾವಿರಕಮಲ ಕೊರತೆಗೆ ತನ್ನ ನಯನ ಕಮಲಮಂ ಕಳೆದು ಶಿವನಂಘ್ರಿಗರ್ಪಿಸಿ, ಚಕ್ರಮಂ ಪಡೆದನೆಂದು ಮಹಿಮದಲ್ಲಿ ಹರಿಸ್ತೇ ಸಾಹಸ್ರಂ ಕಮಲಬಲಿಯಾಧಾಯ ಪದಯೋಃ' ಎಂದೋದಿ ಮರೆದ ಮತಿಭ್ರಷ್ಟರು ನೀವು ಕೇಳಿಭೋ ! ಹರನೆ ಕರ್ತ, ಹರಿಯೆ ಭೃತ್ಯನೆಂಬುದಕ್ಕೆ ರಾಮಪ್ರತಿಷೆ* ಶಿವಲಿಂಗ[ದ] ಮೂರ್ತಿಗಳಿಂ ಕಾಣಿರೆ, ಕಂಡು ತಿಳಿಯಲರಿಯದ ಹುಲಮನುಜರು ಶ್ರೀರಾಮನ ಗುರು ವಶಿಷ* ಹಂಪೆಯಲ್ಲಿ ವಿರೂಪಾಕ್ಷಲಿಂಗನ ಭಕ್ತನೆಂದರಿದು, ಕೃಷ್ಣಾವಿಷ್ಣುವಿನ ಗುರು ಉಪಮನ್ಯು ಅಹಿಪುರದಲ್ಲಿ ಸೋಮೇಶ್ವರಲಿಂಗನ ಭೃತ್ಯನೆಂಬುದನರಿದು, ಇಂತು ಭೃತ್ಯನ ಶಿಷ್ಯಂಗೆ ಕರ್ತನ ಸರಿಯೆಂಬ ಕರ್ಮಚಂಡಾಲರು ನೀವು ಕೇಳಿಭೋ ! `ಅಸಂಖ್ಯಕೋಟಿಬ್ರಹ್ಮಾಣಾಂ ಕೋಟಿವಿಷ್ಣುಗಣಂ ತತಃ ಗಂಗಾವಾಲುಕ ಸಮೌ ಹೇvõ್ಞ ಕಿಂಚಿದಜ್ಞಾಃ ನ ಮಹೇಶ್ವರಾತ್ ಎಂದು ರುದ್ರನ ಎವೆಯಾಡುವನಿತಕ್ಕೆ ಲೆಕ್ಕವಿಲ್ಲದ ಕೋಟಿ ಬ್ರಹ್ಮವಿಷ್ಣುರು ಸತ್ತುಹೋದರೆಂದು ಓದಿ ತಿಳಿದು ಇಂಥ ಹುಲುದೈವಂಗಳ `ಮೃತ್ಯುಂಜಯಃ ನಿತ್ಯಃ ಏಕೋ ದೇವಃ ನ ದ್ವಿತೀಯಃ' ಎಂದೆನಿಸುವ ಶಿವಗೆ ಸರಿಯಂದೆನಿಸುವ ಭವಿವಿಪ್ರರಿಗೆ ತಾವು ಓದುವ, ವೇದಾಗಮಂಗಳು ತಮಗೆ ಹಗೆಯಾಗಿ ನಡೆಯೊಂದು ಪರಿ ನುಡಿಯೊಂದು ಪರಿ ಆಗಿಹುದು. ಅದೆಂತೆಂದರೆ:ಗೌತಮ ದಧೀಚಿ ಭೃಗುವಾದಿಯಾಗಿ ಹಿರಿಯರುಗಳೇ ಶಾಪದಿಂದ ಶಾಪಹತರಾಗಿ ಶಿವದ್ರೋಹಿಗಳಾಗಿ ನರಕಕ್ಕಿಳಿವ ಚಾಂಡಾಲರಿಂದ ವಿಪ್ರರ ಸತ್ಪಾತ್ರರೆಂದಾರಾಧಿಸುವರ ನರಕದ ಕುಳಿಯೊಳು ಮೆಟ್ಟಿ ನರಕಾಗ್ನಿಯಿಂದ ಸುಡುತಿರ್ಪ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಅಯ್ಯಾ ನಿಮ್ಮ ಶರಣರ ಇರವು, ಹರಿಯ ಕೈಯ ದೀವಿಗೆಯಂತೆ ಇದ್ದಿತ್ತಯ್ಯಾ. ನಿಮ್ಮ ಶರಣರ ಸುಳುಹು, ಪವನನ ಕೈಯ ಪರಿಮಳದಂತೆ ಇದ್ದಿತ್ತಯ್ಯಾ. ಹುತಾಸನವೆಂಬ ಗದ್ದುಗೆಯ ಮೇಲೆ ಕರ್ಪುರದರಸುವಂ ಕುಳ್ಳಿರಿಸಲು, ಅರಸು ಗದ್ದುಗೆಯ ನುಂಗಿದನೊ ? ಗದ್ದುಗೆ ಅರಸನ ನುಂಗಿತ್ತೊ? ಎಂಬ ನ್ಯಾಯದಲ್ಲಿ ಕಂಗಳ ಗದ್ದುಗೆಯ ಮೇಲೆ ಸದ್ಗುರು ಲಿಂಗವೆಂಬ ಅರಸನಂ ಕುಳ್ಳಿರಿಸಲು, ಆ ಲಿಂಗ ಕಂಗಳ ನುಂಗಿದನೊ ? ಕಂಗಳು ಲಿಂಗವ ನುಂಗಿ[ದವೊ]? ಈ ಉಭಯವ ನುಂಗಿದ ಬೆಡಗು ಬಿನ್ನಾಣವ, ನಿಜಗುರು ಭೋಗೇಶ್ವರಾ, ನಿಮ್ಮ ಶರಣರಲ್ಲಿ ಕಾಣಬಹುದು.
--------------
ಭೋಗಣ್ಣ
ಹರಿಯ ಬಾಯ ಹಾಲು, ಉರಿಯ ಕೈಯ ಬೆಣ್ಣೆ ಗಿರಿಯ ಮೇಲಣ ಶಿಶು ಹರಿದಾಡುತ್ತಿದೆ, ಕರೆಯಿಂ ಭೋ ಹಾಲುಗುಡಿ[ಯೆ]. ಸುರಪತಿಯ ಗಜವೇರಿ ಮರಳಿ ಹೋಹನ ಕಂಡು ಕರೆಯಿಂ ಭೋ. ಹರನ ಮಂತಣಿಯ ಶೂಲದಲ್ಲಿ, ಶಿರದಲುಂಗುಟ ಊರಿ, ನೆರೆವುತ್ತಿರ್ದುದ ನಾನೇನೆಂಬೆ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಭಾವನೇಕೆ ಬಾರನೆನ್ನ ಮನೆಗೆ ? ಹರಿಯಮಗನನುರುಹಿದ ಗರುವದ ಭಾವನೇಕೆ ಬಾರನೆನ್ನ ಮನೆಗೆ ? ಅಸುರರ ಪುರವ ಸುಟ್ಟ ವೀರಭಾವನೇಕೆ ಬಾರನೆನ್ನ ಮನೆಗೆ ? ದಕ್ಷನ ಶಿರವನರಿದು, ಯಾಗವ ಕೆಡಿಸಿ ಕುರಿದಲೆಯ ಹತ್ತಿಸಿ ಬಿನ್ನಾಣದ ಬಲುಹ ಮೆರೆವ ಏಕೋಭಾವನೇಕೆ ಬಾರನೆನ್ನ ಮನೆಗೆ ? ಹರಿಯ ನಯನದ ಪೂಜೆ ಚರಣದಲೊಪ್ಪಿತ್ತೆಂಬ ದುರುಳತನವು ತನಗೆ ಬೇಡವ್ವಾ. ಪರವಧುವಿಂಗಳುಪಿ ಇಲ್ಲವೆಂಬ ವಿಗಡತನದ ದುರುಳತನ ಬೇಡವ್ವಾ. ಆತನ ಕರೆದು ತಾರವ್ವಾ, ಶಂಭುಜಕ್ಕೇಶ್ವರನ ನೆರೆದು ನೋಡುವೆನು.
--------------
ಸತ್ಯಕ್ಕ
ಇನ್ನಷ್ಟು ... -->