ಅಥವಾ

ಒಟ್ಟು 370 ಕಡೆಗಳಲ್ಲಿ , 63 ವಚನಕಾರರು , 349 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕುರುವ ಹಿಡಿವರೆ ಗುರು ಕರಜಾತ. ಅರುಹಿನ ಪಿಂಡಕ್ಕೆ ಮರವೆ ಸೋಂಕುವುದೇನಯ್ಯ ? ವರಲಿಂಗ ಕರುಣದಿಂದ ವ್ಯರ್ಥವೆ ಅರ್ಥವಾಯಿತು. ಪರಮ ತೃಪ್ತ ತಾನು ತಾನಾದ ಬಳಿಕ ಪರಿಕ್ಷುಪ್ತವುಂಟೆ ? ವರಕೃಪೆಯುಳ್ಳ ವಸ್ತುವಿನ ವಚನವಂತಗೆ ಸಲ್ಲದು ಕಾಣಾ ಎಲೆ ನಮ್ಮ ಕೂಡಲಚೆನ್ನಸಂಗಮದೇವಯ್ಯ.
--------------
ವೀರಸಂಗಯ್ಯ
ಇನ್ನುಂ, ಸೋವರಿಜಮಾದಾಗಸದ ಮಂಡಲತ್ರಯದ, ತದ್ಗಗನ ಧೂಮವರ್ಣದ ಷೋಡಶ ಸ್ವರಾನ್ವಿತದ, ಪದಿನಾರೆಸಳ ನಿ[ೀ]ರಲ ಕರ್ಣಿಕೆಯ, ಸೂಕ್ಷ ್ಮರಂಧ್ರಗತ ಪ್ರಣವದ ದರ್ಪಣಾಕೃತಿಯಾದ, ಯಕಾರವೆ ನಿನ್ನೀಶಾನ ಸ್ವರೂಪಮಾದುದಯ್ಯಾ, ಪರಮ ಶಿವಲಿಂಗ ಪ್ರಮಥಗಣಾಂತರಂಗಾ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಕನಕಗಿರಿನಿವಾಸಂ ಕಾಮನಾಶಂ ಕಮಲವೈರಿಭೂಷಂ ವಿನುತನಾಮಧೇಯಂ ಅನುಪಮಾವತಾರಸಾರಂ ಪರಮ ವೀರಶೈವಭಕ್ತಿಭಾವಂ ಜನಿತಪುಣ್ಯಕಾಯಂ ಭವರೋಗವೈದ್ಯಂ ಭವಹರಂ ಹರ ಹರಾ ಶಿವಶಿವಾ ಜಯ ಜಯ ಜಯತು ಶರಣ ಕರುಣಾಕರ ತ್ರಾಹಿ ಮಾಂ ಭಕ್ತವತ್ಸಲ ಮತ್ಪ್ರಾಣನಾಥ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಮತ್ತಂ ತಮ್ಮ ತಮ್ಮ ಹಸ್ತದ ತೊಂಬತ್ತಾರಂಗುಲ ಪ್ರಮಾಣದ ದೇಹದ ಗುದದಿಂ ಮೇಲೆರಡಂಗುಲ ವೃಷಣದಿಂ ಕೆಳಗೆರಡಂಗುಲ- ಮುಭಯ ಮಧ್ಯದ ಚತುರಸ್ರದ ಭೂಮಿಯ ನಡುವಣ ತ್ರಿಕೋಣೆಯಂತರಾಳದ ಮಂಡಲತ್ರಯ ಧರಣಿಯ ಪೀತವರ್ಣದ ವಾದಿಸಾಂತಯುಕ್ತಮಾದ ಚೌದಳ ಕಮಲಕರ್ಣಿಕೆಯ ಸೂಕ್ಷ ್ಮರಂಧ್ರಗತ ಪ್ರಣವ ತಾರಕಾಕೃತಿಯ ನಕಾರಮೆ ಆಚಾರಲಿಂಗಮದು ನಿನ್ನ ಸದ್ಯೋಜಾತ ಸ್ವರೂಪಮಾದುದಯ್ಯಾ, ಪರಮ ಶಿವಲಿಂಗ ಪಟುತರ ಕೃಪಾರಸ ತರಂಗಾ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಮತ್ತಮಾ ಶಕ್ತಿಬೀಜವಾದ ಸಕಾರವೆ ಚತುರ್ಥಸ್ವರದೊಡನೆ ಕೂಡಿ ನಾದ ಬಿಂದು ಸಂಜ್ಞಿತವಾದ ಸೊನ್ನಯೊಡಗಲಸೆ ಸೀಂ ಎಂಬ ವರ್ಣವಾದುದೀ ವರ್ಣವೆ ಎರಡನೆಯ ಶಕ್ತಿಬೀಜವೆಂದು ನಿರವಿಸಿದೆಯಯ್ಯಾ, ಪರಮ ಶಿವಲಿಂಗ ಪವಿತ್ರಾಂತರಂಗ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ನಾನು ನೀನೆಂಬ ಉಭಯ ತನುಗುಣ ನಾಸ್ತಿಯಾಗಿ ಅರುಹು ಮರಹೆಂಬುಭಯದ ಮರೆಹು ಅಳಿಯಿತ್ತಯ್ಯ. ಮರೆಹು ಅಳಿಯಿತ್ತಾಗಿ, ಮಹದರುಹಿನ ಆಚರಣೆ ಕರಿಗೊಂಡಿತ್ತಯ್ಯ. ಮಹದರುಹಿನ ಆಚರಣೆ ಕರಿಗೊಂಡಿತ್ತಾಗಿ, ಮಹಾಲಿಂಗದ ಬೆಳಗು ಒಳಕೊಂಡಿತ್ತಯ್ಯ. ಮಹಾಲಿಂಗದ ಬೆಳಗು ಒಳಕೊಂಡಿತ್ತಾಗಿ, ಮಂಗಳಮಯ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವಿನಲ್ಲಿ, ಪರಮ ಪರಿಣಾಮ ನೆಲೆಗೊಂಡಿತ್ತಯ್ಯಾ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ನಿಶ್ಚಿಂತ ನಿರಾಕಾರ ಪರಂಜ್ಯೋತಿ ಪರಮಪ್ರಕಾಶ ಆನಂದ ಸ್ವರೂಪನೆ ಜಂಗಮಲಿಂಗ. ಚೈತ್ಯರೂಪವೆ ಲಿಂಗಜಂಗಮ, ಸತ್ವರೂಪವೆ ಗುರುಲಿಂಗ. ಸತ್ತು ಚಿತ್ತಾನಂದವೆ ಸದ್ಭಕ್ತನಲ್ಲಿ ಉದಯ ಇಂತಿವರ ನೆಲೆಯ ವೇದಾಗಮ ಶಾಸ್ತ್ರ ಪುರಾಣಗಳು ಕಾಯದೆ ವಾಗತೀತಃ ಮನೋತೀತಃ ಭಾವಾತೀತಃ ಪರಃ ಶಿವಃ ಸರ್ವಶೂನ್ಯ ನಿರಾಕಾರಂ ನಿತ್ಯತ್ವಂ ಪರಮಂ ಪದಂ || ಎಂದುದಾಗಿ, ಇಂತಪ್ಪ ಶ್ರುತಿ ಒಳ ಹೊರಗಿಪ್ಪ ಜಂಗಮಲಿಂಗವೆ ಜಗತ್ಪಾವನ ಜಂತು ಜಯ ಶರಣಾಗು. ಬಸವಪ್ರಿಯ ಕೂಡಲಸಂಗಮದೇವಾ ಮಾಂ ತ್ರಾಹಿ ತ್ರಾಹಿ ಕರುಣಾಕರನೆ.
--------------
ಹಡಪದ ಅಪ್ಪಣ್ಣ
ಅಯ್ಯ, ಪರಮ ಪತಿವ್ರತೆಗೆ ಹರಗಣ ಸಾಕ್ಷಿಯಾಗಿ ಕಂಕಣದ ಕಟ್ಟಿದ ಪುರುಷಂಗೆ ತನ್ನ ತನುಮನವ ಮೀಸಲ ಮಾಡಿ, ತನ್ನ ಪಿತ-ಮಾತೆ-ಪುತ್ರ-ಮಿತ್ರರ ಸಂಗವ ಸೋಂಕದೆ, ಅವರೊಡವೆಗಿಚ್ಛೈಸಿ ನಡೆನುಡಿಗಳಾಲಿಸದೆ, ತನ್ನ ರಮಣನ ದ್ರವ್ಯಾಭರಣವ ಹಾರೈಸಿ, ಆತನ ನುಡಿಯೆ ಮಹಾಪ್ರಸಾದವೆಂದು ಪ್ರತಿನುಡಿಯ ನುಡಿಯದೆ, ಸರ್ವಾವಸ್ಥೆಯಲ್ಲಿ ಆ ರಮಣನ ರತಿಸಂಯೋಗಾನುಸಂಧಾನದಿಂದ ಎರಡಳಿದಿರುವ ಸತ್ಯಾಂಗನೆಯಂತೆ ಶ್ರೀ ಗುರುವಿನ ಕರಗರ್ಭಮಧ್ಯದಲ್ಲಿ ಜನಿತವಾದ ಲಿಂಗಭಕ್ತಗಣ ಸತಿ ಸುತ ಪಿತ ಮಾತೆ ಬಂಧು ಬಳಗ ಒಡಹುಟ್ಟಿದವರು ಮೊದಲಾಗಿ ಪರಶಿವಲಿಂಗ ಜಂಗಮತೀರ್ಥಪ್ರಸಾದ ಮಂತ್ರದಲ್ಲಿ ಮುಳುಗಿ, ಲೋಕದ ಶೈವಮಾರ್ಗಿಗಳಂತೆ ಹಲವು ಕ್ಷೇತ್ರ, ಹಲವು ತೀರ್ಥ, ಹಲವು ನೇಮ ವ್ರತಗಳಿಗೆ ಅಡಿಯಿಡದೆ ವಾಚಕ-ಮಾನಸ-ಕಾಯಕ ಮೊದಲಾದ ಸಮಸ್ತತತ್ವಂಗಳ ಸ್ವಪಾಕವ ಮಾಡಿ ನಿಷ್ಕಳಂಕ ಪರಶಿವಲಿಂಗಜಂಗಮಕ್ಕೆ ಸಮರ್ಪಿಸಿ, ಅವರೊಕ್ಕುಮಿಕ್ಕ ಹರುಷಾನಂದ ಮಹಾಪ್ರಸಾದದಲ್ಲಿ ಸಂತೃಪ್ತನಾಗಿ, ಇಷ್ಟಲಿಂಗಬಾಹ್ಯವಾದ ಜಡಶೈವ ನಡೆನುಡಿಗಳ ಆಲಿಸದಿಪ್ಪುದೆ ಏಕಾಗ್ರಚಿತ್ತದೀಕ್ಷೆ. ಇಂತುಟೆಂದು ಶ್ರೀಗುರು ನಿಷ್ಕಳಂಕ ಟ್ಸ್ಥಲನಾಯಕ ಚನ್ನಬಸವರಾಜೇಂದ್ರನು ನಿರ್ಲಜ್ಜಶಾಂತಲಿಂಗದೇಶಿಕೋತ್ತಮಂಗೆ ನಿರೂಪಮಂ ಕೊಡುತಿರ್ದರು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಹರಬೀಜ ನಾನಾದಡೆ ಹದನವರಿಯದಿರ್ಪೆನೆ ಗುರುವೆ? ಪರಮ ಭೃತ್ಯ ನಾನಾದಡೆ ಪ್ರಾಣದಿಂದಿರ್ಪೆನೆ ಗುರುವೆ? ನರಬೀಜ ನಾನಾದೆ, ಗುರುದ್ರೋಹಿ ನಾನಾದೆ, ಇನ್ನೆಂತು ಶ್ರೀಗುರು ಕಪಿಲಸಿದ್ಧಮಲ್ಲಿಕಾರ್ಜುನಾ?
--------------
ಸಿದ್ಧರಾಮೇಶ್ವರ
ಕಪಿ ಕಳ್ಳ ಕುಡಿದು, ಕಡಲ ದಾಂಟುವೆನೆಂದು ಲಂಘಿಸಿ ನಡುನೀರಿನಲ್ಲಿ ಬಿದ್ದು, ಮೀನು ಮೊಸಳೆಗೆ ಆಹಾರವಾದಂತಾಯಿತಯ್ಯ ಎನ್ನ ಬಾಳು. ಆದಿಯಲ್ಲಿ ನಿನ್ನ ಗರ್ಭಾಂಬುದ್ಥಿಯಲ್ಲಿ ಜನಿಸಿ, ನಿನ್ನ ನೆನಹಿಲ್ಲದೆ, ಇಷ್ಟಲಿಂಗವನರಿಯದ ಪರಮ ಕಷ್ಟಜೀವಿಗಳ, ಪ್ರಾಣಲಿಂಗವನರಿಯದ ಪರಮಪಾತಕರ, ಭಾವಲಿಂಗವನರಿಯದ ಭವಕ್ಕೊಳಗಾದ ಹುಲುಮಾನವರ, ತಂದೆ-ತಾಯಿ ಬಂಧು-ಬಳಗವೆಂದು, ಭಾವಿಸಿದ ಬಲು ಪಾತಕವೆನ್ನನಂಡಲೆದು, ಅಮರ್ದಪ್ಪಿ ಅಗಲದ ಕಾರಣ, ನಿಂದ ಠಾವಿಂಗೆ ನೀರ್ದಳಿವರಯ್ಯ. ಕುಳಿತ ಠಾವಿಂಗೆ ಹೋಮವನಿಕ್ಕಿಸುವರಯ್ಯ. ನಾನು ಬಂದ ಬಟ್ಟೆಯೊಳಗೋರ್ವರು ಬಾರರಯ್ಯ. ಕಾಲನಾಳಿಂಗೆ ಕಾಲ್ದುಳಿಯಾದೆನಯ್ಯ. ಶುನಕ ಸೂಕರಾದಿಗಳ ಬಸಿರಲ್ಲಿ ಬರುವಂತೆ, ಮಾಡಿತಯ್ಯ ಎನ್ನ ಮಾಯೆ. ಒರ್ವರಿಗೆ ಹುಟ್ಟಿ ಮತ್ತೋರ್ವರಿಗೆ ಅಪ್ಪಾ ಎಂಬ ನಾಣ್ಣುಡಿಯ ದೃಷ್ಟವೆನಗಾಯಿತಯ್ಯ ಗುರುವೆ. ಈ ದೋಷಮಂ ಕರುಣದಿಂ ಕಳೆದು ಶುದ್ಧನಂ ಮಾಡಿ. ನಿನ್ನನೇ ಜನನೀ ಜನಕರೆಂಬ, ನಿನ್ನ ಭಕ್ತರು ಬಂಧು ಬಳಗವೆಂಬ ಸುಜ್ಞಾನಮಂ ಕೊಟ್ಟು, ಜಾಗ್ರತ್ಸ ್ವಪ್ನ ಸುಷುಪ್ತಿಯಲ್ಲಿ ನಿನ್ನತ್ತಲೆನ್ನ ಮುಖವ ಮಾಡಿ, ಅಕ್ಕರಿಂದ ರಕ್ಷಿಪುದಯ್ಯಾ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ಮರಲ್ದುಂ, ರಕ್ತವರ್ನಮಾದ ರಜೋಗುಣದಿಂ, ಸೂತ್ರಮಂ ರಚಿಪುದಾ ಶ್ವೇತಮಾದ ಸತ್ವಗುಣದಿಂ ದಳಂಗಳಂ ನಿಮಿರ್ಚುವುದು. ಕಪ್ಪುವಣ್ಣದ ತಮೋಗುಣದಿಂದಕ್ಕರಂಗಳ ಬರೆವುದು. ಪಳದಿವಣ್ಣದಿಂ ಕರ್ಣಿಕೆಯನೆಸಗುವದೆಂದು ಬೋದ್ಥಿಸಿದೆಯಯ್ಯಾ, ಪರಮ ಶಿವಲಿಂಗ ಪಾರ್ವತಿಯಂತರಂಗ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
‍ಋಣ ತಪ್ಪಿದ ಹೆಂಡಿರಲ್ಲಿ ಗುಣ ತಪ್ಪಿದ ನಂಟರಲ್ಲಿ ಜೀವವಿಲ್ಲದ ದೇಹದಲ್ಲಿ ಫಲವೇನೋ? ಆಳ್ದನೊಲ್ಲದಾಳಿನಲ್ಲಿ ಸಿರಿತೊಲಗಿದರಸಿನಲ್ಲಿ ವರವಿಲ್ಲದ ದೈವದಲ್ಲಿ ಫಲವೇನೋ? ಕಳಿದ ಹೂವಿನಲ್ಲಿ ಕಂಪನು ಉಳಿದ ಸೊಳೆಯಲ್ಲಿ ಪೆಂಪನು ಕೊಳೆಚೆನೀರಿನಲ್ಲಿ ಗುಣವನರಸುವಿರಿ! ಮರುಳೆ ವರಗುರು ವಿಶ್ವಕ್ಕೆಲ್ಲ ಗಿರಿಜಾಮನೋವಲ್ಲಭ ಪರಮ ಕಾರುಣಿಕ ನಮ್ಮ ಕೂಡಲಸಂಗಮದೇವ
--------------
ಬಸವಣ್ಣ
ಮತ್ರಮಾ ಶಿವಾತ್ಮಕ ಪ್ರಸಾದಮಂತ್ರವಾದೊಡೈದು ತೆರದಿಂ ಪೇಳಲ್ಪಟ್ಟುದೆಂತೆನೆ- ಮೊದಲ್ತಾನೆ ಶುದ್ಧಪ್ರಸಾದವೆರಡನೆಯದೆ ಮೂಲಪ್ರಸಾದಂ. ಮೂರನೆಯದೆ ತತ್ವಪ್ರಸಾದಂ. ನಾಲ್ಕನೆಯದೆ ಆದಿಪ್ರಸಾದ- ಮೈದನೆಯದೆ ಆತ್ಮಪ್ರಸಾದಮಿಂತಿವರೊಳ್ಮೊದಲ ಶುದ್ಧಪ್ರಸಾದಮೆಂತೆನೆ- ನಿರ್ದೋಷಮಾಗಿ ಶಿವನೆಂದುಕ್ತಮಾದ ನಾದ ಗುಹ್ಯ ಪರ ಜೀವ ದೇಹಿ ಭೂತ ಪಂಚಮ ಸಾಂತ ತತ್ವಾಂತ ಭೂತತಾಂತ ಶಿವಾರ್ಣ ಶೂನ್ಯಾವ್ಯಯಂಗಳೆಂಬ ತ್ರಯೋದಶ ನಾಮಪರ್ಯಾಯಾಂಕಿತವಾಗಿ ಸಮಸ್ತ ಪ್ರಾಣಿಗಳಂತಸ್ಥಿತಮಾದ ಶಿವಬೀಜವೆ ಸರ್ವ ಕಾರಣ ಕಾರಣವೆನಿಸಿದ ಶುದ್ಧಪ್ರಸಾದವೆನಿಸುಗು- ಮದೆ ಗುರುಮುಖದಿಂ ತನ್ನನರಿದಾತಂಗೆ ಭೋಗ ಮೋಕ್ಷಾದಿ ಸಕಲೈಶ್ವರ್ಯ ಸಿದ್ಧಿಗಳನೀವುದೆಂದೆಯಯ್ಯಾ, ಪರಮ ಶಿವಲಿಂಗ ನಿರಂತರ ಕೃಪಾಪಾಂಗಾ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಅಂಗದೊಳಗೆ ಲಿಂಗವಿದೆ, ಲಿಂಗದೊಳಗೆ ಅಂಗವಿದೆ. ಅಂಗ ಲಿಂಗ ಸಂಗದೊಳಗೆ ಪರಮ ಸುಖವಿದೆ. ಪರಮ ಸುಖದೊಳಗೆ ಪ್ರಸಾದವಿದೆ. ಪ್ರಸಾದದೊಳಗೆ ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ. ನಿಮ್ಮ ಶರಣನ ನಿಲವಿದೆ.
--------------
ಸ್ವತಂತ್ರ ಸಿದ್ಧಲಿಂಗ
ಸಕಲವೇದಶಾಸ್ತ್ರಾಗಮ ಪುರಾಣಂಗಳೆಲ್ಲ ಶಿವಮಂತ್ರದಲ್ಲಿ ಜನಿಸಿದುವಯ್ಯ. ಸಕಲತತ್ವಶಕ್ತಿಮೂರ್ತಿಗಳೆಲ್ಲ ಶಿವಮಂತ್ರದಲ್ಲಿ ಜನಿಸಿದುವಯ್ಯ. ಸಕಲಭುವನ ಬ್ರಹ್ಮಾಂಡ ಸಚರಾಚರಂಗಳೆಲ್ಲ ಶಿವಮಂತ್ರದಲ್ಲಿಯೇ ಜನಿಸಿದುವಯ್ಯ. ವೃಕ್ಷಬೀಜನ್ಯಾಯದಂತೆ ಸಕಲವಿಸ್ತಾರವನೊಳಗೊಂಡಿರ್ಪ ಪರಮ ಶಿವಮಂತ್ರವ ನೆನೆನೆನೆದು ಎನ್ನ ಮನದ ಮುಂದಣ ಮರವೆಯ ಹರಿದು ಭವಸಾಗರವ ದಾಂಟಿದೆನಯ್ಯ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಇನ್ನಷ್ಟು ... -->