ಅಥವಾ

ಒಟ್ಟು 110 ಕಡೆಗಳಲ್ಲಿ , 3 ವಚನಕಾರರು , 110 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಕ್ಷೆ ಭಕ್ತನ ಸೋಂಕು. ಮುಖಸಜ್ಜೆ ಮಾಹೇಶ್ವರನ ಸೋಂಕು. ಕರಸ್ಥಲ ಪ್ರಾಣಲಿಂಗಿಯ ಸೋಂಕು. ಉತ್ತಮಾಂಗ ಶರಣನ ಸೋಂಕು. ಅಮಳೋಕ್ಯ ಐಕ್ಯನ ಸೋಂಕು. ಭಕ್ತಂಗೆ ಆಚಾರಲಿಂಗ, ಮಾಹೇಶ್ವರಂಗೆ ಸದಾಚಾರಲಿಂಗ, ಪ್ರಸಾದಿಗೆ ವಿಚಾರಲಿಂಗ, ಪ್ರಾಣಲಿಂಗಿಗೆ ಸರ್ವವ್ಯವಧಾನ ಸನ್ನದ್ಧಲಿಂಗ, ಶರಣಂಗೆ ಅವಿರಳ ಸಂಪೂರ್ಣಲಿಂಗ, ಐಕ್ಯಂಗೆ ಪರಮ ಪರಿಪೂರ್ಣಲಿಂಗ ಇಂತೀ ಆರುಸ್ಥಲ ಷಟ್ಕರ್ಮ ಷಡ್ವಿಧಲಿಂಗ ಭೇದಂಗಳಲ್ಲಿ ಮುಂದಣ ವಸ್ತುವೊಂದುಂಟೆಂದು ಸಂಗವ ಮಾಡುವುದಕ್ಕೆ ಆರಂಗದ ಪಥಗೂಡಿ ಕಾಬಲ್ಲಿ ವಸ್ತುವನೊಡಗೂಡುವುದೊಂದೆ ಭೇದ. ಇಂತೀ ಸ್ಥಲವಿವರ ಕೂಟಸಂಬಂಧ. ಏಕಮೂರ್ತಿ ತ್ರಿವಿಧಸ್ಥಲವಾಗಿ, ತ್ರಿವಿಧಮೂರ್ತಿ ಷಡುಸ್ಥಲವಾಗಿ ಮಿಶ್ರಕ್ಕೆ ಮಿಶ್ರ ತತ್ವಕ್ಕೆ ತತ್ವ ಬೊಮ್ಮಕ್ಕೆ ಪರಬ್ರಹ್ಮವನರಿತಡೂ, ಹಲವು ಹೊಲಬಿನ ಪಥದಲ್ಲಿ ಬಂದಡೂ ಪಥ ಹಲವಲ್ಲದೆ ನಗರಕ್ಕೆ ಒಂದೆ ಒಲಬು. ಇಂತೀ ಸ್ಥಲವಸ್ತುನಿರ್ವಾಹ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.
--------------
ದಾಸೋಹದ ಸಂಗಣ್ಣ
ಲಿಂಗ ಸಹಿತವಾಗಿ ಸರ್ವಗುಣಂಗಳ ಭೋಗಿಸಬೇಕೆಂಬಲ್ಲಿ ಲಿಂಗಕ್ಕೆ ಕೊಟ್ಟು ತಾ ಕೊಂಬ ತೆರನಾವುದು? ಹೆಣ್ಣ ಕೊಡುವಲ್ಲಿ ತನ್ನಯ ವಿಕಾರವೊ ಲಿಂಗದ ಸುಖವೊ? ಹೊನ್ನ ಹಿಡಿವಲ್ಲಿ ತನ್ನಯ ಬಯಕೆಯೊ ಲಿಂಗದ ಭೋಗವೊ? ಮಣ್ಣ ಹಿಡಿವಲ್ಲಿ ತನ್ನಯ ಬೆಳೆಯೊ ಲಿಂಗದ ಇರವೊ? ಇಂತೀ ತ್ರಿವಿಧದ ಬಿಡುಮುಡಿಯನರಿತು, ಹೆಣ್ಣ ಬೆರಸಿದಲ್ಲಿ ಹೆಣ್ಣಿಗೆ ವಿಷಯಸುಖ ತೋರಿ ತನಗೆ ಆ ವ್ಯಾಪಾರ ಹಿಂಗಿ ನಿಂದ ನಿಜದುಳುಮೆ ಲಿಂಗಸುಖಿ. ಹೊನ್ನು ತನ್ನ ತಾ ಬಂದಲ್ಲಿ ಮುಟ್ಟಿ ಕೊಟ್ಟೆನೆಂಬುದನರಿಯದೆ ಅದು ದೃಷ್ಟದಿಂದ ಬಂದುದ, ತನ್ನಷ್ಟವೆಂಬುದನರಿದಿಪ್ಪಾತನೆ ನಿಸ್ಪ ೃಹ. ಮಣ್ಣ ಅಡಿವಿಡಿದು ಹಿಡಿದಲ್ಲಿ ಕರ್ಮರುಗಳಂತೆ ಕಾದರೆ ಅವು ಮುನ್ನಿನಂತೆ ಇರಲಿ ಎಂಬುದು ಪರಮ ನಿರ್ವಾಣ. ಇಂತೀ ತ್ರಿವಿಧ ಮಲಂಗಳಲ್ಲಿ ಅಮಲನಾಗಿ ಸರ್ವಗುಣ ಸಂಪನ್ನನಾದುದು ಲಿಂಗ ಭೋಗೋಪಭೋಗಿಯ ಅಂಗನಿರತ, ಸ್ವಯಾನುಭಾವಿಯ ಲಿಂಗಾಂಗ ಯೋಗ ಸಂಬಂಧ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 81 ||
--------------
ದಾಸೋಹದ ಸಂಗಣ್ಣ
ಕಾಲು ಮೂರು, ಬಸುರು ನಾಲ್ಕು, ಕೈ ಐದು, ತಲೆ ಎಂಟು, ಬಾಯಿ ಒಂಬತ್ತು, ಕಿವಿ ಆರು, ಕಣ್ಣು ಮೂವತ್ತೆರಡು. ಇಂತೀ ಪಿಂಡಕ್ಕೆ ಐವತ್ತೊಂದು ಕಳೆ. ಆ ಜೀವಕ್ಕೆ ಪರಮನೊಂದೆ ಕಳೆ. ಈ ಗುಣ ಜಾÕನಪಿಂಡದ ಭೇದ. ಶಂಭುವಿನಿಂದಿತ್ತ ಸ್ವಯಂಭವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.
--------------
ದಾಸೋಹದ ಸಂಗಣ್ಣ
ಅರಿಕೆ ಉಳ್ಳನ್ನಕ್ಕ ಅರಿವು, ಅರಿವು ಉಳ್ಳನ್ನಕ್ಕ ಕುರುಹು, ಕುರುಹು ಉಳ್ಳನಕ್ಕ ಸತ್ಕಿೃೀ ಮಾರ್ಗಂಗಳು. ಆ ದೆಸೆಯಿಂದ ತ್ರಿವಿಧಸ್ಥಲ ರೂಪಾದವು. ಇಂತೀ ತ್ರಿವಿಧ ತ್ರಿವಿಧದಿಂದ ಷಡುಸ್ಥಲ ರೂಪಾಗಿ ಮೂಲ ಮೊಳೆಯೊಂದರಲ್ಲಿ ಹಲವು ಶಾಖೆ ಹೊಲಬಾದಂತೆ, ಇದು ನಿಜವಸ್ತುವಿನ ವಸ್ತುಕ. ಈ ಗುಣ ನಿರ್ಭಾವ ಭಾವವಾದ ಸಂಬಂಧ. ಇದು ವರ್ತಕ ಭಕ್ತಿಯ ಬ್ಥಿತ್ತಿ. ಉತ್ತರ ಪೂರ್ವದಲ್ಲಿ ಬೆರಸಿ ನಿರುತ್ತರವಾದ ಸಂಬಂಧ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.
--------------
ದಾಸೋಹದ ಸಂಗಣ್ಣ
ತಮದ ಗುರಿಯ ಜ್ಯೋತಿಯ ಕುಡಿವೆಳಗಿನ ಸರದಲ್ಲಿಎಸಲಿಕ್ಕಾಗಿ, ಗುರಿಯಲ್ಲಿಯೆ ಸರ ಪರಿಹರಿಸಿ, ಆ ಸರದಲ್ಲಿಯೇ ತಮ ಪರಿಹರಿಸಿತ್ತು. ಲಕ್ಷ ್ಯದಲ್ಲಿಯೆ ಚಿತ್ತ, ಚಿತ್ತದಲ್ಲಿಯೆ ಲಕ್ಷ ್ಯ ಅಲಕ್ಷ ್ಯವಾಯಿತ್ತು. ಶಂಭುವಿನಿಂದಿತ್ತ ಸ್ವಯಂಭವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.
--------------
ತುರುಗಾಹಿ ರಾಮಣ್ಣ
ದೃಕ್ಕು ಸಕಲವನವಗವಿಸುವನ್ನಕ್ಕ, ಶ್ರೋತ್ರ ಶಬ್ದವ ವೇದ್ಥಿಸುವನ್ನಕ್ಕ, ಕ್ರೀ ಶೂನ್ಯವೆನಲೇತಕ್ಕೆ? ಭಾವಿಸಿಹೆನೆಂಬನ್ನಕ್ಕ ಕ್ರೀ ಅರಿದೆಹೆನೆಂಬನ್ನಕ್ಕ ಸೂತಕ. ಕುಕ್ಕಳಗುದಿವುದ ಹುಟ್ಟಿನಲ್ಲಿ ತೆಗೆದಿಕ್ಕುವಂತೆ, ಅದು ದೃಷ್ಟಕ್ಕ ದೃಷ್ಟ, ನಿಶ್ಚಯಕ್ಕೆ ನಿಜ. ಈ ಗುಣ ಉಭಯಸ್ಥಲ ನಿರ್ವಾಹ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 49 ||
--------------
ದಾಸೋಹದ ಸಂಗಣ್ಣ
ಹರಿದ ನೀರಿನ ಅಡಿಯ ಕಾಣಬಹುದಲ್ಲದೆ ನಿಂದ ಇಂಗಡಲಿನ ಅಡಿಯ ಕಂಡವರುಂಟೆ? ಚಲನೆಯಿಂದ ತೋರುವ ತೋರಿಕೆಯ ಕಾಣಬಹುದಲ್ಲದೆ ಶಬ್ದ ಮುಗ್ಧವಾದ ಶರಣನ ಚಿತ್ತವ ಭೇದಿಸಬಹುದೆ? ಅದು ಸರಿಹರಿದ ಸಂಬಂಧ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 99 ||
--------------
ದಾಸೋಹದ ಸಂಗಣ್ಣ
ನಸುಗಾಯವಡೆದವನಂತೆ ನೋವುಣ್ಣದೆ, ಸತ್ಕಿ ್ರೀವಂತನಂತೆ ಸಂದೇಹವಿಲ್ಲದೆ, ಖಳನಿಚ್ಚಟನಂತೆ ಆತ್ಮಕ್ಕೆ ಸಂದು ಸಂಶಯವಿಲ್ಲದೆ, ನೆರೆ ಅರಿದವನಂತೆ ಮರವೆಯ ಕುರುಹಿಗೆ ಬಾರೆದ, ಲಿಂಗದಲ್ಲಿ ಕರಿಗೊಂಡವನಂತೆ ಕೊಟ್ಟಿಹೆ ಕೊಂಡೆಹೆನೆಂಬ ಸೂತಕವಿಲ್ಲದೆ, ಬೊಮ್ಮವನರಿದವನಂತೆ ಅವರಿವರಲ್ಲಿ ಸುಮ್ಮಾನದ ಸುಖವ ನುಡಿಯದೆ, ಘಟಕರ್ಮ ಯೋಗಿಯಂತೆ ಆ ದೇಹ ಇಂದ್ರಿಯಂಗಳಿಲ್ಲದೆ, ಲಿಂಗಸಂಗಿಯಂತೆ ಬಾವಸರ್ವರ ಸಂಗ ಮಾಡದೆ ಇಂತೀ ಸರ್ವಗುಣಸಂಪನ್ನ ನವಬ್ರಹ್ಮಿ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 52 ||
--------------
ದಾಸೋಹದ ಸಂಗಣ್ಣ
ಬರಡು ಕರೆವಾಗ ಈಯಿತ್ತೆ? ಆ ಕೊರಡು ಚಿಗುರುವಲ್ಲಿ ಹುಟ್ಟಿತ್ತೆ? ಆಗ ತೃಣ ನುಡಿವಲ್ಲಿ ಆತ್ಮ ಜೀವಿಸಿತ್ತೆ? ಆಗ ಕಾಷ್ಠವೇಷವೆದ್ದು ನಡೆವಲ್ಲಿ ಅರಿವು ಕರಿಗೊಂಡಿತ್ತೆ? ಇಂತಿವು ವಿಶ್ವಾಸದ ಹಾಹೆ. ಗುರುಚರದಲ್ಲಿ ಗುಣ, ಶಿವಲಿಂಗ ರೂಪಿನಲ್ಲಿ ಸಲಕ್ಷಣವನರಸಿದಲ್ಲಿಯೆ ಹೋಯಿತ್ತು ಭಕ್ತಿ. ಈ ಗುಣ ತಪ್ಪದೆಂದು ಸಾರಿತ್ತು ಡಂಗುರ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 61 ||
--------------
ದಾಸೋಹದ ಸಂಗಣ್ಣ
ದೃಷ್ಟದ ಜ್ಯೋತಿಯ ನಂದಿಸಬೇಕಲ್ಲದೆ ಪರಂಜ್ಯೋತಿಯ ಬಂದ್ಥಿಸಿ ನಂದಿಸಿ ಕೆಡಿಸಿಹೆನೆಂದಡೆ ಕೆಟ್ಟುದುಂಟೆ ಆ ಬೆಳಗು? ಈ ಗುಣ ಇಷ್ಟಲಿಂಗವನರಿವುದಕ್ಕೆ ದೃಷ್ಟ ಮನ ಇಷ್ಟದಲ್ಲಿ ವಿಶ್ರಮಿಸಿದ ಲಕ್ಷ ್ಯ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 50 ||
--------------
ದಾಸೋಹದ ಸಂಗಣ್ಣ
ತನಗೆ ಉಂಟಾಗಿ ಶಿಷ್ಯನ ಮನೆಗೆ ಹೋಗಿ ಕಟ್ಟಳೆಯ ವರುಷಕ್ಕೆ ತಪ್ಪದೆ ಅಂಗವಸ್ತ್ರವೆಂದು ಲಿಂಗವಸ್ತ್ರವೆಂದು ಕನಕ ಪರಿಮಳವೆಂದು ಅಂದಣ ಛತ್ರ ಚಾಮರ ಕರಿ ತುರಗಂಗಳೆಂದು ಇವು ಬಂದುದಿಲ್ಲ ಎಂದು ಸಂದಣಿ ಲಂದಣಗಾರರ ಕೈಯಲ್ಲಿಹೇಳಿಸಿ ಅವು ಬಾರದಿರೆ ತಾ ಸಂದ್ಥಿಸಿ ಸೂಚಿಸುವ ಲಿಂಗ ಲಿಂಗಮಾರಿಗೆ ಗುರುಸ್ಥಲ ಎಂದಿಗೂ ಇಲ್ಲ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 39 ||
--------------
ದಾಸೋಹದ ಸಂಗಣ್ಣ
ದೀಕ್ಷಾಗುರುವಾಗಿ ಬಂದು ಬ್ರಹ್ಮನ ಉತ್ಪತ್ಯವ ತೊಡೆದೆ, ಶಿಕ್ಷಾಗುರುವಾಗಿ ಬಂದು ಆತ್ಮನ ಪ್ರಕೃತಿಯ ಕೆಡಿಸಿದೆ; ಮೋಕ್ಷಗುರುವಾಗಿ ಬಂದು ತ್ರಿವಿಧ ಮಲದ ಕೆಡಿಸಿ ಮುಕ್ತನಮಾಡಿದೆ. ಎನ್ನ ಲೀಲೆಗೆ ಗುರು ರೂಪಾಗಿ, ಸುಲೀಲೆಗೆ ಲಿಂಗರೂಪಾಗಿ, ನಿಜಲೀಲೆಗೆ ಜಂಗಮರೂಪಾಗಿ, ಇಂತೀ ತ್ರಿವಿಧ ರೂಪಾಗಿ ಬ್ಥಿನ್ನನಾದೆಯಲ್ಲಾ ಭಕ್ತಿ ಕಾರಣನಾಗಿ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.
--------------
ತುರುಗಾಹಿ ರಾಮಣ್ಣ
ಉಪೇಕ್ಷೆಯುಳ್ಳನ್ನಕ್ಕ ಭಕ್ತನಲ್ಲ, ಹಿತಶುತ್ರುವಾಗಿಹನ್ನಕ್ಕ ಮಾಹೇಶ್ವರನಲ್ಲ. ಪರದ್ರವ್ಯಭಕ್ಷಿತ ಪ್ರಸಾದಿಯಲ್ಲ. ಪ್ರಜ್ಞಾಹೀನ ಪ್ರಾಣಲಿಂಗಿಯಲ್ಲ. ಕುಚಿತ್ತ ಅಪಸರೆಯ ಕ್ಷಣಿಕ ಶರಣನಲ್ಲ. ಉಪಮಾ ಭೇದ ಗುಪ್ತಪಾತಕ ಐಕ್ಯನಲ್ಲ. ಇಂತೀ ಷಡುಸ್ಥಲಂಗಳ ಸ್ಥಾನ ವಿವರಂಗಳನರಿತು ಸ್ಥಲನಿರ್ವಾಹಿಯಾಗಿ ತತ್ವದ ಮುಖದಿಂದ ನಿತ್ಯ ಅನಿತ್ಯವತಿಳಿದು ಪರತತ್ವದ ಗೊತ್ತಿನಲ್ಲಿ ನಿಜ ನಿರವಯವಪ್ಪ ಆತ್ಮನಬೆಚ್ಚಂತೆ ಬೈಚಿಟ್ಟು ತತ್ಕಾಲ ಉಚಿತವನರಿದು ಕಾಂತಿ ನಷ್ಟವಾಗಿ ಕಳವಳಿಸಿ ಕಂಗೆಡದೆ ಕುರುಹಿನ ಲಕ್ಷ ್ಯದಲ್ಲಿ ಚಿತ್ತ ಸಮೂಹದಲ್ಲಿ ಎಚ್ಚರಿಕೆ ನಿಜವಸ್ತುವಿನಲ್ಲಿ ಚಿತ್ತು ಲೇಪವಾದುದು ಸಾವಧಾನ ಸಂಬಂದ್ಥಿಯ ಸಂಬಂಧ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.
--------------
ದಾಸೋಹದ ಸಂಗಣ್ಣ
ತಮದ ಗುರಿಯ ಜ್ಯೋತಿಯ ಕುಡಿವೆಳಗಿನ ಸರದಲ್ಲಿಎಸಲಿಕ್ಕಾಗಿ, ಗುರಿಯಲ್ಲಿಯೆ ಸರ ಪರಿಹರಿಸಿ, ಆ ಸರದಲ್ಲಿಯೇ ತಮ ಪರಿಹರಿಸಿತ್ತು. ಲಕ್ಷ ್ಯದಲ್ಲಿಯೆ ಚಿತ್ತ, ಚಿತ್ತದಲ್ಲಿಯೆ ಲಕ್ಷ ್ಯ ಅಲಕ್ಷ ್ಯವಾಯಿತ್ತು. ಶಂಭುವಿನಿಂದಿತ್ತ ಸ್ವಯಂಭವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.
--------------
ದಾಸೋಹದ ಸಂಗಣ್ಣ
ತೊಟ್ಟುಬಿಡುವ ವೇಳೆಯನರಿದ ಮತ್ತೆ ದೋಟಿಯನಿಕ್ಕಲೇತಕ್ಕೆ? ತನ್ನ ಕೃತ್ಯದ ಭಕ್ತಿಯ ಮಾಡುತ್ತಿದ್ದ ಮತ್ತೆ ಒಂದು ದಿನ ತಪ್ಪಲಿಕ್ಕಾಗಿ ಕುಪ್ಪಳಿಸಿ ಬೇಯಲೇತಕ್ಕೆ? ಇದು ಗುರುಸ್ಥಲಕೆ ನಿಶ್ಚಯವಲ್ಲ; ಇದು ಶಿಲೆಯ ಮಾರಿಯ ಹದಹು; ವ್ಯಾಧನ ವೇಷ, ಮೂಷಕನ ವಾಸದ ತಪ್ಪಿನ ಪಥ ಆತ ಸದ್ಗುರುಜಾತನಲ್ಲ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ. ಮಾತುಳಂಗ ಮಧುಕೇಶ್ವರನು.
--------------
ತುರುಗಾಹಿ ರಾಮಣ್ಣ
ಇನ್ನಷ್ಟು ... -->