ಅಥವಾ

ಒಟ್ಟು 15 ಕಡೆಗಳಲ್ಲಿ , 12 ವಚನಕಾರರು , 15 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮತ್ತೆಯು ಸಮಸ್ತವಾದ ಕರ್ಮಕೃತ ಶರೀರಿಗಳಿಗೆ ಭೋಗವುಳ್ಳುದೆ ತಪ್ಪದೆಂಬೆಯಾದಡೆ, ಶರೀರಗಳಿಗಾಗಲಿ ಪ್ರೇರಕಹರ್ತುದಿಂದಲ್ಲವೆಂಬುದೆ ಪ್ರಮಾಣ. ಶಿವ ಪ್ರೀತ್ಯರ್ಥವಾದಗ......ಳು ಕರ್ತವನೆಯ್ದುವವೆಂಬುದಕ್ಕೆ ಪ್ರಮಾಣವು ಎನಲು, ಪಿತೃವಧೆಯಿಂದ ಚಂಡೇಶ್ವರನು ಅನುಪಮ ಗಣಪದವನೈದಿದನು. ಸಿರಿಯಾಳನು ತನ್ನ ಮಗನನೆ ಹತಿಸಿ ಪುರಜನ ಬಾಂಧವರುಸಹಿತ ಶಿವಲೋಕವನೈದನೆ ? ಕಾಲಾಂತರದಲ್ಲಿ ಮನುಚೋಳನು ಪುತ್ರವಧೆ ಭ್ರೋಣಹತ್ಯವನು ಮಾ ಎಸಗಿ, ತನುವರಸಿ ಶಿವಲೋಕವೆಯ್ದನೆ ? ಅಯ್ಯೋಮ ರಾಜನು ವಿಪ್ರೋತ್ತಮನನೆ ವದ್ಥಿಸಿ ಲಿಂಗ ಗರ್ಭಾಂತರವನೆಯ್ದಿದನೆ ? ಅಂದು ಜಗವರಿಯಲದಂತಿರಲಿ. `ಸ್ವರ್ಗಕಾಮೋ ಯಜೇತ'ಯೆಂಬ ಶ್ರುತಿಪ್ರಮಾಣಿಂ ದಕ್ಷ ಪ್ರಜಾಪತಿ ಕ್ರಿಯೆಗಳಿಗೆ ಅಧ್ವರ ಕರ್ಮದಿಂದ ಶಿರಚ್ಛೇದಿಯಾಗಿ ಕುರಿದಲೆ ಪಡೆಯನೆ ? ಬರೀ ಅಚೇತನ ಕರ್ಮಂಗಳು ಕೊಡಬಲ್ಲವೆ ಸದ್ಗತಿ ದುರ್ಗತಿಗಳನು ? ಕರ್ತು ಪ್ರೇರಕ ಶಿವನಲ್ಲದೆ, `ಮನ್ನಿಮಿತ್ತಕೃತಂ ಪಾಪಮಪೀಡಾವಚಯೈ ಕಲ್ಪ್ಯತೇ' ಎನಲು, ಇಂತೀ ಚಿಟಿಮಿಟಿವಾದವೆಂಬುದು ಕೊಳ್ಳವು ಕೇಳಾ. ಶಿವಭಕ್ತಿಯೆಂಬ ಪ್ರಚಂಡ ರವಿಕಿರಣದ ಮುಂದೆ ಸಾಮಾನ್ಯಕರ್ಮವೆಂಬ ತಮ ನಿಲುವುದೆ ? ಮರುಳೆ ಆ `ವೋರಾಜಾನಮಧ್ವರಸ್ಯ ರುದ್ರಗಂ' ಎನಲು, `ಇಂದ್ರ ಉಪೇಂದ್ರಾಯ ಸ್ವಾಹಾ' ಎನಬಹುದೆ ? ಪ್ರಥಮಾಹುತಿಯಲ್ಲಿಯೆಂದು ಬೆಳಲು ಭಸ್ಮವಹವಾ ಆಹುತಿ ಫಲಂಗಳು. ಆದಡೆ ಕೆಳೆಯಾ ಶಿವಭಕ್ತಿಬಾಹ್ಯವಾದ ಪಾಪಕರ್ಮಕೆ ಬಂದ ವಿಪರೀತ ಪ್ರಾಪ್ತಿಗಳು, ವಿಷ್ಣು ಸುರರಿಗೆ ಹಿತವಾಗಿ ಭೃಗು ಸತಿಯ ಶಿರವನರಿದಡೆ, ಕರ್ಮ ದಶಜನ್ಮಂಗಳಿಗೆ ತಂದು, ಹೀನಪ್ರಾಣಿಗಳ ಯೋನಿಯಲ್ಲಿ ಬರಸಿದುದನರಿಯಿರೆ. ಮತ್ತೆಯೂ ಬಾಲೆಯ ಕೊಂದ ಕರ್ಮ ಕೃಷ್ಣಾವತಾರದಲ್ಲಿ ವ್ಯಾಧನಿಂದ ತನ್ನ ಕೊಲ್ಲಿಸಿತ್ತು. ಮತ್ತೆಯೂ ಬಲಿಯ ಬಂದ್ಥಿಸಿದ ಕರ್ಮ ಮುಂದೆ ನಾಗಾರ್ಜುನನಿಂದ ಕಟ್ಟಿಸಿತ್ತು, ಕೌರವಕುಲದ ಕೊಲಿಸಿದ ಕರ್ಮಫಲ ತನ್ನ ಯಾದವ ಕುಲವ ಕೊಲಿಸಿತ್ತು. ಮತ್ತಾ ಲೀಲೆಯಿಂದ ಮತ್ತೆಯೂ ಪರ್ವತನಾರಂದರ ಸತಿಯ ಬಲುಮೆ, ಇಂತೆ ಕೊಂಡ ಕರ್ಮಫಲ ರಾವಣಗೊಪ್ಪಿಸಿತ್ತು. ತನ್ನ ಪ್ರಿಯತಮೆಯೆನಿಸುವ ಸೀತಾಂಗನೆಯ ಇನ್ನು ಮಿಕ್ಕಿನ ದೇವದಾನವಮಾನವರನೊಕ್ಕಲಿಕ್ಕಿಯಾಡದಿಹುದೆಯಾ ಕರ್ಮವು. ಆದಡಾ ಕರ್ಮವು ಸ್ವತಂತ್ರವೋ, ಪರತಂತ್ರವೋ ಎಂಬೆಯಾದಡೆ, ಆ ಕರ್ಮ ಈಶ್ವರಾಜೆÕಯಲ್ಲದ ಕರ್ಮಿ ತಾನಾದಂತೆ, ಇದಂ ಗುರು ಕನಿಷ್ಠಾಧಮಮಧ್ಯಮ ಕ್ರಿಯೆಗಳಿಂ ವಿದ್ಥಿಸಿದ ವಿದ್ಥಿಗಳಿಂ, ವಿದ್ಥಿನಿಷೇಧ ಕರ್ಮಂಗಳೆಂಬ ಸಮೂಹಕರ್ಮಗಳಿಗೆ ತಾರತಮ್ಯವಿಡಿದು, ಪುಣ್ಯಪಾಪಂಗಳ ನಿರ್ಮಿಸಿ, ಅಜಾÕನಿಪಿತವ ಮಾಡಿದನೀಶ್ವರನು. ನಾಕನರಕಾದಿಗಳೆ ಸಾಧನವಾಗಿ, ಕರ್ಮಕರ್ತನನೆಯ್ದುವರೆ, ಕರ್ಮ ಕರ್ತನು ಈಶ್ವರನಾದಡೆ ಕರ್ಮನಿ ಶ್ವರಾಜೆÕಯಿಂದೈದುವಡೆ, ಆ ಕರ್ಮ ಕರ್ತನಹ ಈಶ್ವರನನು ಬ್ರಹ್ಮನ ಮೇಲ್ದಲೆಯನರಿದುದಲಾ. ಆ ಕರ್ಮ ಆತನನೆಯ್ದುದುಮೆನಲು, ಅಹಂಗಾಗದು. ವಿರಿಂಚನು ರಜೋಗುಣಹಂಕಾರದಿಂ ಸುರ ಕಿನ್ನರ ಗರುಡ ಗಾಂಧರ್ವ ಸಿದ್ಧ ವಿದ್ಯಾಧರರು ತಮ್ಮೊಳು ಬ್ರಹ್ಮವಾದದಿಂ ಸಂಪಾದಿಸಿ ತಿಳಿಯಲರಿಯದೆ, ಬ್ರಹ್ಮನಂ ಬೆಸಗೊಳಲು, ಬೊಮ್ಮವಾನೆನಲು, ಆ ಕ್ಷಣಂ ಗಗನದೊಳು ತೋರ್ಪ ಅತ್ಯನುಪಮ ದೇದೀಪ್ಯಮಾನ ತೇಜಃಪುಂಜ ಜ್ಯೋತಿರ್ಲಿಂಗಾಕಾರಮಂ ತೋರಲಾ ಬ್ರಹ್ಮೇಶ್ವರರು ಆ ವಸ್ತುನಿರ್ದೇಶಮಂ ಮಾಳ್ಪೆನೆಂದು ಪಿತಾಮಹನು ಚತುಸ್ಶಿರ ಮಧ್ಯದಲ್ಲಿ ಮೇಲ್ದಲೆಯಂ ಪುಟ್ಟಿಸಿ, ||ಶ್ರುತಿ|| `ಋತಂ ಸತ್ಯಂ ಪರಂ ಬ್ರಹ್ಮ'ಯೆಂದು ಋಗ್ಯಜುಸ್ಸಿನಲ್ಲಿ ನುತಿಸುತ್ತಂ ಇರಲು, ಬ್ರಹ್ಮಾದ್ಥಿಪತಿ ತತ್ಪರ ಬ್ರಹ್ಮಶಿವ ಇತಿ ಒಂ, ಇತಿ ಬ್ರಹ್ಮಾ ಇತಿ. ಇಂತೀ ಶ್ರುತಿ ಸಮೂಹವೆಲ್ಲವು ಶಿವನನೆ ಪರಬ್ರಹ್ಮವೆಂದು ಲಕ್ಷಿಸಿ, ಮತ್ತತನದಿಂ ಮರದೂ ಅಬ್ರಹ್ಮವೆನಲುಂ ದ್ರುಹಿಣನ ಮೇಲ್ದಲೆಯಂ ಅಪ್ರತಿಮ ತೇಜೋಮಯ ಲೀಲಾಲೋಲಾ ಶೀಲ ದುಷ್ಟನಿಗ್ರಹಿ ಶಿಷ್ಟ ಪ್ರತಿಪಾಲಕನನೆಯಾಕ್ಷಣಂ, ಘನರೌದ್ರ ಕೋಪಾಟೋಪಿಯೆನಿಸುವ ಕಾಲರುದ್ರಂ ಸಮೀಪಸ್ಥನಾಗಿರ್ದು, ಜ್ಯೇಷ್ಠಾ ತರ್ಜನಾಂಗುಲಿ ನಖಮುಖದಿಂ ಛೇದಿಸಲು, ವಿದ್ಥಿ ಭಯಾತುರನಾಗಿ `ಒಂ ನಮೋ ದೇವಾಯ ದೇವ್ಯೈ ನಮಃ, ಸೋಮಾಯ ಉಮಾಯೈ ನಮಃ' ಎಂದು ಸೋಮಾಷ್ಟಕದಿಂ ಸ್ತುತಿಸಿ, ನಮಿಸಿಯಜಿಸಿ ಮೆಚ್ಚಿಸಿ, ಸ್ವಾಮಿ ಸರ್ವೇಶ್ವರ, ಯ್ಯೋಮಕೇಶ, ದೇವದೇವ ಮಹಾಪ್ರಸಾದ. ಈ ಶಿರಮಂ ಬಿಸಾಟದಿರಿ, ಬಿಸಾಟಲು ಪುರತ್ರಯ ಜಗಮಳಿಗುತ್ತಂ ನಿಮಿತ್ತಂ ಪರಮ ಕೃಪಾನಿದ್ಥಿ ಪರಬ್ರಹ್ಮ ಪರಂಜ್ಯೋತಿ ಪರಮೇಶ್ವರ ಪರಮಭಟ್ಟಾರಕ ಪರಾತ್ಪರತರಸದಕ್ಷರ ಚಿನ್ಮೂರ್ತಿ ಸ್ವಯಂಭೋ ಸ್ವಾತಂತ್ರೇಶ್ವರಾಯೆನುತ ಕೀರ್ತಿಸುತ್ತಿರಲು, ಪರಬ್ರಹ್ಮ ನಿರೂಪದಿಂ ಕಾಲರುದ್ರನ ಕಪಾಲಮಂ ಧರಿಸಿದನಂದು. ಇನ್ನೆಮಗಿದೆ ಮತವೆಂದು ಸರ್ವದೆ ತಾ ಗರ್ವ ಕಂಡೂಷಮಂ ಉರ್ವಿಯೊಳೀಗಮೆ ತೀರ್ಚಿಪೆನೆಂದು ಪಿಡಿದು ನಡೆದಂ ಬ್ಥಿP್ಷ್ಞಟನಕಂದು. ಅಹಲ್ಯೆ ಸಾಯಿತ್ತಿದು, ಕರ ಹೊಸತು ಇನಿತರಿಂದ ಕಾಲರುದ್ರಂಗೆ ಬ್ರಹ್ಮೇತಿಯಾಯಿತ್ತೆಂಬ ಕರ್ಮವಾದಿ ಕೇಳಾದಡೆ. ||ಶಾಮಶ್ರುತಿ|| `ತ್ವಂ ದೇವೇಷು ಬ್ರಾಹ್ಮಣಾಹ್ವಯಃದುನುಷ್ಯೋಮನುಷ್ಯೇಮ ಬ್ರಾಹ್ಮಣಾಮುಪದಾವತ್ಯುಪದಾರತ್ಯಾ' ಎನಲು, `ಬ್ರಾಹ್ಮಣೋ ಭಗವಾನ್ ರುದ್ರಃ' ಎನಲು, `ಕ್ಷತ್ರಿಯಃ ಪರಮೋ ಹರಿಃ' ಎನುತಿರಲು, `ಪಿತಾಮಹಸ್ತು ವೈಶ್ಯಸಾತ್' ಎನಲು, ಬ್ರಾಹ್ಮಣೋತ್ತಮ ಬ್ರಾಹ್ಮಣಾದಿ ಪತಿ ಪರಬ್ರಹ್ಮವಿದ್ದಂತೆ. ತಾನೆ ಪರಬ್ರಹ್ಮಮೆನಲಾ ವಿದ್ಥಿಯ ಶಿಕ್ಷಿಪದು ವಿದಿತವಲ್ಲದೆ ನಿಷೇಧವಲ್ಲ. ಅದೆಂತೆನಲು, ಭೂಚಕ್ರವಳಯದೊಳು ಭೂಮೀಶನು ಅನ್ಯಾಯಗಳ ಶಿಕ್ಷಿಸಿದ ಭೂರಕ್ಷಣ್ಯವು, ಲೋಕಹಿತವಲ್ಲದೆ ದೋಷ ಸಾಧನಮೆಯೆಲ್ಲಾ, ಪಾಪಿಗೆ ತಕ್ಕ ಪ್ರಾಯಶ್ಚಿತ್ತಮೆಂದುಂಟಾಗಿ. ಇದು ಕಾರಣ, ಶಿಕ್ಷಯೋಗ್ಯನ ಶಿಕ್ಷಿಸಿದವದ ದೋಷವಿಲ್ಲೆಂದು ಭಾಟ್ಠ(?) ದೊಳೊಂದು ಪಕ್ಷಮಿರೆ, ಮತ್ತಮದಲ್ಲದೆ, ಅದೊಮ್ಮೆ ಹತ್ತುತಲೆಯವನಂ ಅತ್ಯುಗ್ರದಿಂ ವಂದಿಸಿದ ಶ್ರೀರಾಮಂಗೆ ಬ್ರಹ್ಮಹತ್ಯಾ ಬ್ರಹ್ಮಕರ್ಮ ವಿದ್ಯಾಬ್ರಹ್ಮರಿಂದಾವಾವ ಪ್ರಾಯಶ್ಚಿತ್ತದಿಂತೆಮ್ಮನೆ ಕೆಡದಿರಲು, ಆ ರಾಮಂ ಆ ರಾವಣಹತ ದೋಷನಿರುಹರಣಕ್ಕಾವುದು ಕಾಣದಿರಲು, ಶಂಭುಪೌರಾಣಿಕನೆಂಬ ನಾಮವಂ ತಾಳ್ದು, ಶಿವಂ ರಾಮಂಗೆ ಪ್ರತ್ಯಕ್ಷಮಾಗಿ, ಈ ದೋಷಕ್ಕೆ ಲಿಂಗಪ್ರತಿಷ್ಠೆಯ ನಿರೋಹರಣಮೆಂದರುಪಿ, ಅರಿದಾ ರಾಮಂಗಂ ಗಂಧಮಾದ ಪರ್ವತವೇ ಆದಿಯಾಗಿ, ಅದನು ಕೋಟೆಯ ಅವದ್ಥಿಯಾಗಿ ಶಿವಲಿಂಗಪ್ರತಿಷ್ಠೆಯಂ ಮಾಡೆ, ರಾಮೇಶ್ವರಲಿಂಗಮೆನಿಪ್ಪ ನಾಮಾಂಕಿತದಿಂ ತಕವಕ ಮಿಗೆವರಿದು ಸ್ವಾತ್ವಿಕಭಕ್ತಿಭಾವದಿಂದರ್ಚಿಸಿ ಸ್ತುತಿಸಿ, ಭೂವಳಯದೊಳೆಲ್ಲಂ ಪ್ರದಕ್ಷಿಣ ಮುಖದಿಂ ಶಿವಲಿಂಗಾಲಯಮನೆತ್ತಿಸಿ, ಅಂತಾ ಸಹಸ್ರಾವದ್ಥಿಯೆನಿಸುವ ದಶಗ್ರೀವ ವಧೆಯಂ ಪರಿಹರಿಸಿದ ಹಾಗೆ, ಶ್ರೀಮನ್ಮಹಾದೇವನೂ ದೇವಾದಿದೇವನೂ ದೇವಚಕ್ರವರ್ತಿ ದೇವಭಟ್ಟಾರಕನೂ ದೇವವೇಶ್ಯಾಭುಜಂಗನೂ ಸರ್ವದೇವತಾ ನಿಸ್ತಾರಕನೂ ಸರ್ವದೇವತಾ ಯಂತ್ರವಾಹಕನೂ ಒಂದಾನೊಂದೆಡೆಯಲ್ಲಿ ಮಹಾದೇವೇಶ್ವರನು ರುದ್ರೇಶ್ವರನು ಈಶ್ವರೇಶ್ವರನು ಶಂಕರೇಶ್ವರನೆನಿಪ ನಾಮಂಗಳಿಂ, ಭೂವಳಯದೊಳು ಲಿಂಗಪ್ರತಿಷ್ಠೆಯಂ ಬ್ರಹ್ಮಶಿರಚ್ಛೇದನ ನಿಮಿತ್ಯನಂ ಮಾಡಿದುದುಳ್ಳಡೆ, ಹೇಳಿರೆ ಕರ್ಮವಾದಿಗಳು. ಅಂತುಮದಲ್ಲದೆಯುಂ ಆ ಉಗ್ರನಿಂದಂ ಪಿತಾಮಹಂ ಅವದ್ಥಿಗಡಿಗೆ ಮಡಿವುದಂ ಕೇಳರಿಯಿರೆ. ಅದಲ್ಲದೆಯುಂ, ದP್ಷ್ಞಧ್ವರದೊಳಾ ದಕ್ಷ ಪ್ರಜಾಪತಿಯ ಶಿರವನರಿದು, ಕರಿಯದಲೆಯನೆತ್ತಿಸಿದ. ಅದಲ್ಲದೆಯುಂ ಸುತೆಗಳುಪಿದ ವಿರಂಚಿ ಹತಿಸಿದಂದು, ಅದಲ್ಲದೆಯುಂ ಸಮಸ್ತದೇವತೆಗಳ ಆಹಾರ ತೃಪ್ತಿಗೆ ಬೇಹ ಅಮೃತತರನಂ ಚರಣಾಂಗುಷ್ಠದಿಂದೊರಸಿದಂದು, ಅದಲ್ಲದೆಯುಂ ವಿಷ್ಣು ತಾನೆಯೆನಿಪ ವಿಶ್ವಕ್ಸೇನನ ತ್ರಿಶೂಲದಿಂದಿರಿದೆತ್ತಿ ಹೆಗಲೊಳಿಟ್ಟಂದು, ಅದಲ್ಲದೆಯುಂ ಮತ್ಸ್ಯ ಕೂರ್ಮ ವರಾಹ ನಾರಸಿಂಹ ತ್ರಿವಿಕ್ರಮಾದಿಗಳಂ ಮುಂದುವರಿದು ಕೊಂದಂದು ಅದಲ್ಲದೆಯುಂ ದೇವಿದ್ವಿಜರಿಗೆ ಗುರುವೆನಿಸುವ ಪಾವಕನ ಏಳು ನಾರಿಗೆಗಳ ಕೀಳುವಂದು, ಅದಲ್ಲದೆಯುಂ ಯಜÕವಾಟದೊಳು ಪ್ರಾಜÕನೆನಿಸುವ ಪೂಶಾದಿತ್ಯನ ಹಲ್ಲ ಕಳದು, ಭಾಗಾದಿತ್ಯನಂ ಮೀಂಟಿ ವಾಣಿಯ ಮೂಗಂ ಮಾಣದೆ ಕೊಯ, ದೇವಮಾತೃಕೆಯರ ದೊಲೆ ನಾಶಿಕವ ಚಿವುಟಿದಂದು, ಅದಲ್ಲದೆಯುಂ ಬ್ರಹ್ಮಾಂಡಕೋಟಿಗಳನೊಮ್ಮೆ ನಿಟಿಲತಟನಯನಂ ಲಟಲಟಿಸಿ ಶೀಘ್ರದಿಂದ ಸುಡಲು, ಸುರಾಸುರ ಮುನಿನಿವಹ ಹರಿಹಿರಣ್ಯಗರ್ಭರು ಶತಕೋಟಿ ಹತವಾದಂದು, ಪ್ರೊರ್ದದಾ ಬ್ರಹ್ಮಹತ್ಯಂ ನಿರ್ಧರಮಾಗಿ ಬೊಮ್ಮನ ಮೇಲ್ದಲೆಯೊಂದ ಚಿವುಟಿದುದರಿಂದಂ ಒಮ್ಮೆಯ ಶೂಲಪಾಣಿಗೆ ಬ್ರಹ್ಮೇತಿಯಾದುದತಿಚೋದ್ಯ ಚೋದ್ಯ. ಅವಲ್ಲದೆಯೂ ಬ್ರಹ್ಮ ಸಾಯನು. ಅಂಗಹೀನಮಾದುದಲ್ಲದೆ ಹೋಗಲಾ ಸಾಮಾನ್ಯ ಚರ್ಚೆ ಕರ್ಮಗತ ಕರ್ಮಿಯೆನಿಸುವ ನಿನ್ನ ಕರ್ಮವಾದವೆಲ್ಲಿಗೂ ಸಲ್ಲದು. ಬ್ರಹ್ಮಮಸ್ತಧಾರಣ ಲೀಲಾಲೋಲ ಶೀಲಬ್ರಹ್ಮೇಶ್ವರ ಪರಬ್ರಹ್ಮ ಶ್ರೀಮನ್ಮಹಾದೇವನ ನಾಮಕೀರ್ತನ ಮುತ್ರದಿಂದು ಬ್ರಹ್ಮಹತ್ಯಕೋಟಿಗಳುಂ ಮಹಾಪಾತಕವಗಣಿತಂ ನಿರಿಗೆಣೆಯಾದಕೂಲಮಂ ಭರದೊಳನಲ ಗ್ರಹಿಸಿದಂತಾಗುಮೆನೆ. ಬ್ರಹ್ಮ ಪಂಚಬ್ರಹ್ಮಮೆನಲು ಬ್ರಹ್ಮಪಾಪಕಾಶಿಯೆನಲು, ಶಿವಲಿಂಗ ದರ್ಶನ ಮಾತ್ರ ಬ್ರಹ್ಮಹತ್ಯವಳಿವವೆನಲು, ಆ ಶಿವನೆ ಬ್ರಹ್ಮಹತ್ಯವೆ ಇದುಯೆಂಬುದು ಮೊಲನ ಕೋಡಿನಂತೆ. ಇದು ಕಾರಣ, ಕರ್ಮ ಶಿವನಾಜೆÕವಿಡಿದು ಕರ್ಮಿಯ ಗ್ರಹಿಸೂದು. ಕರ್ಮಸಾರಿಯಲಿ ಕರ್ಮ ನಿರ್ಮಲಕರ್ಮ ಕಾರಣ ಕರ್ತೃವೆಂದರಿಯದಡೆ, ಎಲೆ ಕರ್ಮವಾದಿ, ನಿನಗೆ ಗತಿ ಉಂಟೆಂದುದು, ಬಸವಪ್ರಿಯ ಕೂಡಲಚೆನ್ನಸಂಗನ ವಚನ. || 65 ||
--------------
ಸಂಗಮೇಶ್ವರದ ಅಪ್ಪಣ್ಣ
ಪಿಂಡವಾಯಿತ್ತು ನಾದಬಿಂದು ಕಳೆಗಳ ಕೂಡಿ ಕೊಂಡು ಸ್ವರೂಪ ತತ್ವವಿಡಿದು ಚೆನ್ನಾಗಿ ಧರೆಯಿಂದಲೆದು ಕರ್ಮೇಂದ್ರಿಯಂಗಳ ಜನನ ಸರಸದಿಂದ ಪಂಚವಿಷಯಂಗಳುತ್ಪತ್ಯ ಮೇಣ್ ಉರಿಯಿಂದ ಬುದ್ಧೀಂದ್ರಿಯಂಗಳಾದವು ನೋಡಿರೆ. ಮರುತನಿಂದೈದು ಪ್ರಾಣವಾಯುಗಳ ಜನನ ಹಿರಿದಪ್ಪ ಗಗನದಲ್ಲಿ ಚತುರ ಕರಣವು ಆತ್ಮ ನೆರೆ ಕೂಡಿ ಪಂಚವಿಂಶತಿತತ್ವವಿಡಿದು. | 1 | ಆರೂರ್ಮೆ ಏಳುಧಾತೈದುವಿಂಶತಿ ಅಂಶ ಈ ಮೂರು ತನುಗುಣವು ಇಪ್ಪತ್ತೈದು ಎರಡಂಗ ಆರು ಚಕ್ರವು ಕಮಲದೈವತ್ತೊಂದರಕ್ಷರಗಳಿಂ ವಾರಿಜ ದಾಕ್ಷಾಯಣಿ ಹರಿ ರುದ್ರ ಈಶ್ವರ ಮೀರಿದ ಸದಾಶಿವನದ್ಥಿದೈವಂಗಳು, ನವದ್ವಾರ ಚೆನ್ನಾಗಿ ಸಕಲಾರಂಭತತ್ವವಿಡಿದು. | 2 | ಮೂರು ಕರ್ಮಗಳು ಏಳ್ನೂರು ಎಪ್ಪುತ್ತು ಲೊ ಓರಣದ ಕರಣದ ಕರಣ ಅರುವತ್ತಾರು ಕೋಟಿಯಂ ಮೂ [ರಾ]ರು ಗುಣ ಅಂತರಂಗದಷ್ಟವೇದವು ಸಹಿತದ ಮೂರು ಮಲ ದಶವಾಯು ಅಂಗದೊಳು ಚರಿಸುತಿಹ ಮಾರುತ ಮನ ಮಂತ್ರಿ ಪ್ರಾಣ ನಾಯಕನರಸು ಶ ರೀರ ಜಗದೊಳುತ್ಪತ್ಯವಾಗಿದೆ ದೇವ. | 3 | ನೆಲ ನೀರು ಶಿಲೆಯಿಂದ ಬಿತ್ತಿಗಟ್ಟಿಯೆ ಅದನು ಸಲೆ ಗೋಮಯದಿ ಶುದ್ಧಮಾಡಿ ಸಾರಿಸುವಂತೆ ಎಲು ಚರ್ಮ ನರ ತೊಗಲು ಮಾಂಸ ಮಜ್ಜೆಯ ಕೂಡಿಯೆ ಚೆಲುವಾಗಿ ಈ ಕಾಯ ಗಾಳಿ ತುಂಬಿ ವೃಕ್ಷ ಉಲಿವಂತೆ ಶಿವಬೀಜವ ಚೈತನ್ಯದಿಂದಲಿ ಇಳೆಗೆ ತೋರುತಿರೆ ನೋಡಿದ ತಿಳಿಯಿರಣ್ಣ. | 4 | ಆದಿ ಮಧ್ಯ ಅಂತ್ಯ ಭಾಂಡದೊಳು ಶಿವ ತಾನೆ ಆದಿಯಾಗಿಯೆ ನೆಲದ ಮರೆಯಲ್ಲಿಹ ಧನದಂತೆ ಭೇದಿಸದೆಯಿಪ್ಪ ಭೇದವನಾರು ಅರಿಯರಲ್ಲ ಅಭೇದ್ಯಗುರು ಪಡುವಿಡಿ ಸಿದ್ಧಮಲ್ಲಿನಾಥನ ಪಾದವಿಡಿದ ತನುವು ಸುಕೃತದೇಹಿಯಾಗಿ ಮೇದಿನಿಗೆ ತೋರುತಿದೆ ಶಿವಶರಣರಿದ ತಿಳಿಯರೆ. | 5 |
--------------
ಹೇಮಗಲ್ಲ ಹಂಪ
ಆರು ನೆಲೆ ಮಂಟಪದ ಕೋಣೆಯಲ್ಲಿ ಆರು ಜ್ಯೋತಿಯ ಮುಟ್ಟಿಸಿ ಆ ಜ್ಯೋತಿಯ ಬೆಳಗಿನಲ್ಲಿ ಆರು ಲಿಂಗವ ನಿರ್ಮಿಸಿ ಆರು ಲಿಂಗದ ಪ್ರತುಮೆಯಲ್ಲಿ ಆರು ಹಂತದ ಸೋಪಾನದಲ್ಲಿ ಮಹಾ ನಿರ್ಮಳವೆಂಬ ದುರ್ಗಮಂ ನಿರ್ಮಿಸಿ ಆ ದುರ್ಗದಲ್ಲಿ ಅರಸಂಗೆ ಕಾಲಿಲ್ಲದಾಕೆಯ ಮದುವೆಯ ಮಾಡಿ ತೂತಿಲ್ಲದ ಭೋಗಕ್ಕೆ ಕೂಡಿ ಬಿಂದುವಿಲ್ಲದೆ ಮಕ್ಕಳಾದ ಪರಿಯ ನೋಡಾ. ತೊಟ್ಟಿಲಿಲ್ಲದೆ ಹಾಸಿ ಮಲಗಿಸಿ ನಿದ್ರೆಗೆಯ್ಸಿದ ಶರಣನಾಚರಣೆಯನೆಂತೆಂಬೆನು. ಇದ ಕಂಡು ನಡೆಯಲರಿಯದೆ, ತಮ್ಮ ಮನ ಬಂದಂತೆ ನಡೆವರು. ಶಿವಯೋಗಕ್ಕೆ ದೂರವಾದರು ನೋಡಾ. ಹೊನ್ನ ಕಟ್ಟಿ ವಿರಕ್ತನು ಬ್ಥಿಕ್ಷೆಯೆನಲಾಗದು. ಭಕ್ತನ ಗೃಹವೆಂದು ಜಂಗಮವು ಹೋದಲ್ಲಿ ಆ ಭಕ್ತನು ಎದ್ದು ನಮಸ್ಕರಿಸಿ ತನ್ನಲ್ಲಿರ್ದ ಪದಾರ್ಥವಂ ತಾನು ಸಹವಾಗಿ ಶಿವಾರ್ಪಣವ ಮಾಡ[ಬ]ಹುದಲ್ಲದೆ. ಇದಲ್ಲದೆ, ಜಂಗಮವ ಬೇರೆ ಕುಳ್ಳಿರಿಸಿ ಉಂಡನಾದರೆ ಅವನಿಗೆ ದೀಕ್ಷೆಯ ಕೊಟ್ಟ ಗುರುವಿಗೆ ತನ್ನ ಮಾರ್ಗವ ಬಿಟ್ಟು ಶಿವಭಕ್ತನಾದರೆ ಮೋಕ್ಷವಿಲ್ಲವಾಗಿ. ಕೋಳಿ ಒಂದು ಕುಟುಕ ಕಂಡರೆ ತನ್ನ ಮರಿಗೆ ತೋರದುಳಿವುದೆ? ಕಾಗೆ ಒಂದಗುಳ ಕಂಡರೆ ತನ್ನ ಬಳಗವ ಕರೆಯದುಳಿವುದೆ? ಶಿವಭಕ್ತನಾಗಿ ತನ್ನ ಲಿಂಗವ ಪೂಜಿಸಿ ಜಂಗಮವ ಮರೆದವನಾದರೆ ಸತ್ತ ದನವಿಗೆ ನರಿ ಹೋದಂತಾಯಿತ್ತು. ಆ ನರಿ ಹೋದ ನೆನಹಿನಲ್ಲಿ ನಾಯಿ ಹೋದಂತಾಯಿತ್ತು. ಇಷ್ಟಕ್ಕಿಂದ ಕರಕಷ್ಟವೆ ಶಿವಭಕ್ತರು? ಷಟ್ಚಕ್ರದ ಭಾವದಲ್ಲಿವೊಪ್ಪಿರುವ ಶಿವಶರಣರು ತಮ್ಮ ನಡೆ ನುಡಿಗಳ ಬಿಡದೆ ನಡೆವುದು. ಅದ ಕಂಡು ಕಣ್ದೆರೆದು ನೋಡಿದೆನಯ್ಯ. ಆವ ವರ್ತನೆಯಲ್ಲಿ ತಾನಿದ್ದರೇನು? ಆವ ಭಾವ ಹೇಂಗಿದ್ದರೇನು? ನಮ್ಮಾಚರಣೆ ನಮಗೆ ಶುದ್ಧ. ಗುರು ಕಲ್ಪಿತನಾದರು ಅವನು ಹಿಂದೆ ಸಂಬಂಧವಾದ ಕಾರಣ, ಅವನಿಗೆ ಬಂಧ ದೊರಕುವದಲ್ಲದೆ ನನಗೆ ದೊರಕದೆಂದು ತಾನು ನಿಶ್ಚೆಸಿದರೆ ತನಗೆ ದೊರಕಬಲ್ಲದೆ? ತಾನು ಪೂರ್ವದಲ್ಲಿ ತಾ ಪಡದುದು ತನಗೆ ತಪ್ಪುವದೆ? ಪ್ರಾಣಿಹಿಂಸೆಯ ಮಾಡುವಾತನಾದರೆಯು ಅವನಿಗೆ ಕಲ್ಪಿತವೇತಕ್ಕೆ? ಹಿಂದೆ ಅವನು ಶಿವನಪ್ಪಣೆವಿಡಿದು ಬಂದ ಕಾರಣ ಅವನಿಗೆ ಬಂದಿತಲ್ಲದೆ ಗಗನದ ಮಂಟಪದ ಮೇಲೆ ಊಧ್ರ್ವಮುಖದ ಗದ್ದುಗೆಯ ಮಾಡಿ ಮಹಾಪ್ರಕಾಶವೆಂಬ ಬೆಳಗಂ ತೋರಿ ಓಂಕಾರವೆಂಬ ಲಿಂಗವ ಮೂರ್ತಮಾಡಿಸಿ ಅದಕ್ಕೆ ಸದ್ಭಾವವೆಂಬ ಪುಷ್ಪವ ತಂದು ಜ್ಞಾನಪ್ರಕಾಶವೆಂಬ ಜ್ಯೋತಿಯಂ ಪೊತ್ತಿಸಿ ಸದ್ಭಕ್ತಿಯೆಂಬ ನೈವೇದ್ಯಮಂ ಮಾಡಿ ನಿರ್ಮಳವೆಂಬ ಪೂಜಾರಿಯಾಗಿರ್ಪನು. ಇದನರಿಯದೆ ತಮ್ಮ ಮನ ಬಂದಂತೆ ಇಪ್ಪವರ ಲಿಂಗಹೋದವನಾದರು ಅವನ ಕಣ್ಣಲ್ಲಿ ಕಂಡು ಅವನಷ್ಟಕ್ಕಲ್ಲದೆ ಅನ್ಯರ ಗೃಹವ ಬಿಡಲೇತಕ್ಕೇ? ಪಾಪವ ಮಾಡಿದನಾರು ಅವನ ಗೃಹಕ್ಕಲ್ಲದೆ ಅವನೊಂದಿಗೆ ಬೆರಸಿದವನಾದರು ಅವನಿಗೆ ಪಾಪ ಸಂಭವಿಸುವುದುಂಟೇ? ಇದ ಸಂಕಲ್ಪವ ಮಾಡಿ ಬಿಡಲೇತಕ್ಕೆ? ಒರ್ವಾನೊಬ್ಬನು ಭವಿಯ ಒಡನಾಡಲು ಅವನ ಪಾಪವು ಅವನಲ್ಲಿಪ್ಪುದಲ್ಲದೆ ಮಿಕ್ಕಿನ ಗೃಹಕ್ಕೆ ಸಂಬಂಧವೇನು? `ಮಾಡಿದವರನಲ್ಲದೆ ಮಿಕ್ಕಿನವರ ಸಂಕಲ್ಪವ ಮಾಡಲಾಗದು'ಯೆಂಬುದು ಗುರುವಚನ. ಹೆಣ್ಣು ಬಿಂದು ಸಂಬಂಧವಾಗಲು ಆ ಭೋಗಕ್ಕೆ ಶರಣನು ಅದನು ಮನದಲ್ಲಿ ಕಂಡು ಸಂತೋಷವಾಗಿಪ್ಪ. ಇಂತೀ ಭಾವಶುದ್ಧವುಳ್ಳಾತನು ಮತ್ರ್ಯಲೋಕಕ್ಕೆ ಮರಳಿ ಬಾರನೆಂಬುದು. ಶರಣ ಸಕಲವಿದ್ಯವ ಕಲಿತು ಫಲವೇನು? ನಿಂದ್ಯನೆ ದೊರಕೊಂಡಮೇಲೆ? ಹುಣ್ಣು ಹುಗಳು ಕೋಷ್ಠವಾಗಿರಲು, ಅವರ ಕಂಡು ಜರಿಯಲಾರದೆಂಬುದೆನ್ನ ಭಾಷೆ. ಇಂದ್ರಿಯಸುಖಕ್ಕೆ ಹೋಗಿ ಬಿದ್ದು ಶಿವಮಾಡಿದರಾಯಿತ್ತೆಂಬ ಅವಿಚಾರದ ನುಡಿಯ ಕೇಳಲಾಗದು. ತನ್ನ ಮನವು ಶುದ್ಧವಾದ ಮೇಲೆ, ಸಕಲ ಸುಖಂಗಳು ತನಗುಂಟಲ್ಲದೆ, ಜ್ಞಾನಿಗೆ ಕತ್ತಲೆಯಿಲ್ಲ. ಅಜ್ಞಾನಿಗೆ ಪಾಪವಿಲ್ಲ. ಇದನರಿದು, ಮುಂದುಗೊಂಡು ತಿರುಗುವ, ಅಣ್ಣಗಳ ಕಂಡು, ನಗುತಿರ್ಪರು ನಿಮ್ಮ ಶರಣರು, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ತನು ನಾಗವತ್ತಿಗೆಯಾದಡೆ ಅರ್ಪಿತವ ಮಾಡಬೇಕು, ತನು ಸೆಜ್ಜೆಯಾದಡೆ ಅರ್ಪಿಸಲಿಲ್ಲ ಕಂಡಯ್ಯಾ. ತನು ಸಿಂಹಾಸನವಾದಡೆ ಸುಳಿವುದೆ ಭಂಗ. ಪ್ರಾಣಲಿಂಗ ಸಂಬಂಧಿಯಾದಡೆ, ಅದನು ಎರಡು ಮಾಡಿಕೊಂಡು ನುಡಿಯಲೇಕಯ್ಯಾ ? ಒಂದೆಯೆಂದು ನುಡಿವ ಸೋಹದವನಲ್ಲ, ಬಹ ಪದಾರ್ಥದ ಲಾಭದವನಲ್ಲ, ಹೋಹ ಪದಾರ್ಥದ ಚೇಗೆಯವನಲ್ಲ, ಪ್ರಪಂಚವ ಹೊತ್ತುಕೊಂಬ ಭಾರದವ ತಾನಲ್ಲ. ಕೂಡಲಚೆನ್ನಸಂಗನ ಶರಣನುಪಮಾತೀತನು.
--------------
ಚನ್ನಬಸವಣ್ಣ
ಸ್ಥೂಲತನುವೆಂಬ ಭಾಂಡದಲ್ಲಿ ಸರ್ವಾಚಾರವೆಂಬ ಸಯದಾನವ ತುಂಬಿದೆ ತುಂಬಲೊಡನೆ ಅಗ್ನಿಯಿಲ್ಲದ ಮುನ್ನ ಪಾಕವಾಯಿತ್ತು, ಮೇಲು ಸಾಧನವಿಲ್ಲದ ಮುನ್ನ ರುಚಿ ಪಕ್ವವಾಯಿತ್ತು. ಅದನು ಸೂಕ್ಷ್ಮತನುವೆಂಬ ಭಾಂಡದಲ್ಲಿ ಬರಿಕೆಯ್ದು, ಕಾರಣತನುವಿನಲ್ಲಿ ಕುಳ್ಳಿರ್ದು ಊಡೆಹೆನೆಂದನುಮಾಡಲು, ಪ್ರಕೃತಿಯಳಿದು ಒಂದೆ ಭಾಂಡವಾದುದ ಕಂಡು ಉಣಲೊಲ್ಲದೆ ಅನ್ಯರಿಗಿಕ್ಕದೆ, ಎನ್ನದೆನ್ನದೆ, ಸಯದಾನಂಗಳ ತೆಗೆದುಕೊಳ್ಳದೆ, ಬೀಸರವೋಗದೆ, ಒಂದರೊಳಗೊಂದಿತ್ತೆನ್ನದೆ ಉಂಡು ಸುಖಿಯಾದೆನಯ್ಯಾ, ಕೂಡಲಸಂಗಮದೇವಾ.
--------------
ಬಸವಣ್ಣ
ಮುಖದಿಂದ ಹುಟ್ಟಿಪ್ಪ ಮೂರರ್ಪಿತೋದಕದ ಒಳಗೆ, ಹುಟ್ಟಿತ್ತು ಶುದ್ಧ ಪ್ರಸಾದೋದಕ. ಸದಮಲ ಜಾÐನದಂಘ್ರಿಯಲ್ಲಿ ಹುಟ್ಟಿತ್ತೊಂದುದಕ. ಅದನು ಒಯ್ದೆರೆದಲ್ಲಿ ಉದ್ಭವಿಸಿತ್ತು ತಾ ಕರಣೇಂದ್ರಿಯವನತಿಗಳೆದು ಹತ್ತನೆಯ ಪಾದೋದಕ ಕ್ರಮವಿಂತುಟಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಬಹಿರಂಗದಲ್ಲಿ ದುರಾಚಾರ ಅಂತರಂಗದಲ್ಲಿ ದುಃಸಂಕಲ್ಪ ಉಭಯಗೂಡಿದ ವರ್ತಕದಲ್ಲಿ ಷಡ್ಗುಣ ಸಾರಸಂಬಂಧ ದುರ್ಭಾವತ್ರಯಗೂಡಿ ಜೀವಿಸುವ ಪ್ರಾಣಿಯು ಕಂಡಾಡುವ ಕಟ್ಟಳೆಯ ಸೋಗುಹೊತ್ತು ನಡೆದರೇನು, ಅದನು ನುಡಿದರೇನು? ಆ ನಡೆನುಡಿಯ ವಾಸನೆಯನರಿಯದಿರ್ಪ ಸಜದ್ಭಕ್ತಿಚರಿತೆಯ ಸುಖದೊಳಗೆ ಸದ್ಗುರು ಚನ್ನವೃಷಭೇಂದ್ರಲಿಂಗವು.
--------------
ದೇಶಿಕೇಂದ್ರ ಸಂಗನಬಸವಯ್ಯ
ಒಬ್ಬ ತಂದೆಯ ಬಸಿರಿನಲ್ಲಿ ಒಂಬತ್ತು ಮಕ್ಕಳು ಹುಟ್ಟಿದಡೇನಯ್ಯ ? ಅವರೊಳಗೊಬ್ಬಾತಂಗೆ ಸೆರಗ ಕಟ್ಟಿ ಮದುವೆಯ ಮಾಡಿದ ಬಳಿಕ, ಆತಂಗೆ ತನ್ನಂಗದ ಸುಖವನೊಪ್ಪಿಸಬೇಕಲ್ಲದೆ, ಉಳಿದಿರ್ದವರೆಲ್ಲ ತನ್ನ ಮಾವನ ಮಕ್ಕಳೆಂದು ಅವರಿಗೆ ಸೆರಗು ಹಾಸುವವಳನು ಒಪ್ಪುವರೆ ಲೋಕದೊಳು ? ಪರಮಾತ್ಮನೆಂಬ ಶಿವನಿಗೆ ಆಶ್ರಯವಾಗಿ ಹುಟ್ಟಿತ್ತು ಲಿಂಗ, ಆತಂಗೆ ವಾಹನವಾಗಿ ಹುಟ್ಟಿದಾತ ವೃಷಭ, ಆತಂಗೆ ಯೋಗವಾಗಿ ಹುಟ್ಟಿದಾತ ವಿನಾಯಕ, ಆತಂಗೆ ಯುದ್ಧಕ್ಕೆ ಸರಿಯಾಗಿ ಹುಟ್ಟಿದಾತ ವೀರಭದ್ರ. ಇಂತಿವರೆಲ್ಲ ಶಿವನ ಮಕ್ಕಳಾದರೆ, ತನಗೊಂದು ಪ್ರಾಣಲಿಂಗವೆಂದು ಕಂಕಣ ಕಟ್ಟಿ, ಕರಸ್ಥಲಕ್ಕೆ ಬಂದ ಬಳಿಕ ಅದನು ನಂಬಲರಿಯದೆ ಮತ್ತನ್ಯದೈವಕ್ಕೆರಗಿದಡೆ ನಾಯಕನರಕವೆಂದಾತ ನಮ್ಮ ಅಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಕೂರ್ಮನ ಗತಿಯ ಕುವಾಡ ಯೋಗವು ಕುಹಕವಾದಿಗಳಿಗಳವಡದು. ಉತ್ತಮಾಂಗವನು ಉರಸ್ಥಲದಲ್ಲಿ ಬೈಚಿಡುವ ಬಯಕೆಯನಾರೈದು ನೋಡಾ! ಅದನು ಆರಯ್ಯಲಚಲ ನೀನೇ, ಸಿಮ್ಮಲಿಗೆಯ ಚೆನ್ನರಾಮನೆಂಬ ಲಿಂಗವು ಎಂದೂ ಎನಲಿಲ್ಲ!
--------------
ಚಂದಿಮರಸ
ಕೂತಾಗ ಭಕ್ತ ಮುನಿದಾಗ ಮಾನವನಾದ ಪಾತಕರ ನುಡಿಯ ಕೇಳಲಾಗದು. ಅಂಥ ಪಾತಕರ ಉಲುಹೆಂಬುದು, ಉಲಿವ ಕಬ್ಬಕ್ಕಿಯ ಉಲುಹಿನಂತೆ. ಅದನು ಮಹಂತರು ಕೇಳಲಾಗದು. ಅದಕ್ಕದು ಸ್ವಭಾವವೆಂಬುದ ಬಲ್ಲರಾಗಿ, ಮತಿಗೆಟ್ಟು ನುಡಿವ ಮತ್ತರಹ ಮತ್ರ್ಯರ ನುಡಿಯ ಗಡಣೆ, ಭ್ರಾಂತಿವಿಡಿದ ಭ್ರಮಿತರಿಗೆ ಯೋಗ್ಯವಲ್ಲದೆ, ಸಜ್ಜನ ಸಾತ್ವಿಕ ಜ್ಞಾನವೇದ್ಯರಹ ಸದ್ಭಕ್ತರು ಮೆಚ್ಚವರೆ ? ಅಸತ್ಯವೆ ರೂಪಾಗಿಪ್ಪ ಶೂನ್ಯವಾದಿಗಳೆತ್ತಲೂ ಸಲ್ಲರಾಗಿ ಅವರುಗಳು ಪ್ರೇತಗಾಮಿಗಳು. ಅಮೇಧ್ಯ ಕೂಪದಲ್ಲಿ ಉತ್ಪನ್ನವಾದ ಕ್ರಿಮಿಗಳಂತಪ್ಪ ಜೀವಿಗಳು ತಾವಾರೆಂದರಿಯರು. ಇಂದು ನಿಂದ ಗತಿಯ ತಿಳಿಯರು, ಮುಂದಣ ಗತಿಯನೆಂತೂ ಎಯ್ದಲರಿಯರು. ಆತ್ಮನು ಶ್ವೇತ ಪೀತ ಹರಿತ ಕಪೋತ ಮಾಂಡಿಷ್ಟ ಕೃಷ್ಣರೆಂಬ ಷಡ್ವರ್ಣದೊಳಗಾವ ವರ್ಣವೆಂದೂ ವಿಚಾರಿಸಲರಿಯರಾಗಿ, ಭ್ರಾಂತುವಿಡಿದು ಆತ್ಮೋಹಮೆಂದು ಅಹಂಕರಿಸಿ, ಅಜ್ಞಾನ ತಲೆಗೇರಿ, ಮತ್ತತನದಿಂದಜಾತ ಶಿವಶರಣರ ದೂಷಿಸಿ, ಮಿಥ್ಯವಾದದಿಂದ ನುಡಿವರು ತಾವೆ ಘನವೆಂದು, ಬಯಲಬೊಮ್ಮದ ಹಮ್ಮಿನ ನೆಮ್ಮುಗೆವಿಡಿದು, ಸಹಜ ಸಮಾಧಾನ ಶಿವೈಕ್ಯರ ಹಳಿದು ನುಡಿವರು. ಆದಿಯಲ್ಲಿ ಅಹಂ ಬ್ರಹ್ಮವೆಂದು ಬ್ರಹ್ಮನೆ ವಿಧಿಯಾದನು. ಹರಗಣಂಗಳೊಳಗೆ ಅಗ್ರಗಣ್ಯ ಗಣೇಶ್ವರನಹ ನಂದಿಕೇಶ್ವರನ ಉದಾಸೀನಂ ಮಾಡಿ, ಆ ನಂದಿಕೇರ್ಶವರನ ಶಾಪದಿಂದ ಸನುತ್ಕುಮಾರನೆ ವಿಧಿಯಾದನು. ಕರ್ಮವೆ ಅಧಿಕವೆಂದು ಕೆಮ್ಮನೆ ಕೆಟ್ಟ ಹೆಮ್ಮೆಯಲ್ಲಿ, ದ್ವಿಜ ಮುನಿಗಳ ನೆರಹಿ ಕ್ರತುವ ಮಾಡಿ, ಆ ದೇವ ಮುನಿಗಳೊಳಗಾಗಿ, ದಕ್ಷಂಗೆ ಬಂದ ಅಪಾಯವನರಿದು ಮರೆದರಲ್ಲಾ. ಕುಬೇರನಿಂದಧಿಕವಹ ಧನ, ದೇವೇಂದ್ರನಿಂದಧಿಕವಹ ಐಶ್ವರ್ಯ, ಸೂರ್ಯನಿಂದಧಿಕವಹ ತೇಜಸ್ಸು, ಗಜ ಪಟೌಳಿ ಸೀತಾಂಗನೆಗತ್ಯಧಿಕವಹ ರೂಪು ಲಾವಣ್ಯ ಸೌಂದರ್ಯವನುಳ್ಳ ಸ್ತ್ರೀಯರುಂಟು. ಕೋಟಿವಿದ್ಯದಲ್ಲಿ ನೋಡುವಡೆ ಸಹಸ್ರವೇದಿಯೆನಿಸುವ ರಾವಣನು ಪಾರದ್ವಾರಕಿಚ್ಛೈಸಿ ಪರವಧುವಿನ ದೆಸೆಯಿಂದಲೇನಾದನರಿಯರೆ ! ತನು ಕೊಬ್ಬಿನ ಮನ, ಮನ ವಿಕಾರದ ಇಂದ್ರಿಯ ವಿಷಯಂಗಳ ಅಂದವಿಡಿದ ವಿಕಳತೆಯಲ್ಲಿ ನುಡಿವ ಸಟೆಗರ ಕಾಯಲರಿವವೆ ? ನಿಮ್ಮಯ ಮನ ಸನ್ನಿಧಿಯಲ್ಲಿ, ಇಂತಿವೆಲ್ಲವ ಕಂಡೂ ಕೇಳಿಯೂ ಅರಿಯರು. ಹರನ ಸದ್ಭಕ್ತರ ಕೂಡೆ ವಿರೋಧಿಸಿ, ನರಕವನು ಮುಂದೆ ಅನುಭವಿಸಿ, ಇಂದು ಅಪಖ್ಯಾತಿಗೊಳಗಾಗಿ ಕೆಟ್ಟುಹೋಗಬೇಡ. ಅತ್ಯಧಿಕ ಶಿವನೆ ಸತ್ಸದಾಚಾರವಿಡಿದು, ನಿತ್ಯಪದವ ಪಡೆಯಿರೆ ಘಾಸಿ ಮಾಡುವನು ನಿಮ್ಮ ಸೋಜಿಗ. ಸದಾಶಿವ ಬಲ್ಲಿದನೆನ್ನ ದೇವ ಮಹಾಲಿಂಗ ಕಲ್ಲೇಶ್ವರನು ತನ್ನ ಭಕ್ತರೆ ಕೆಡೆನುಡಿದವರ ಬಿಡದೆ ದಂಡಿಸುವನು.
--------------
ಹಾವಿನಹಾಳ ಕಲ್ಲಯ್ಯ
ತಾನು ಸಾವ ಕನಸ ಕಂಡಡೆ ಎದ್ದು ಕುಳ್ಳಿರಿ ಎಂಬ ಲೋಕದ ನಾಣ್ನುಡಿ ದಿಟ ಲೇಸು. ಸಾಯಬಹುದೆ ಸತಿಯ ಬಿಟ್ಟು, ಸುತರ ಬಿಟ್ಟು, ಸಕಲಭೋಗಾಕ್ರೀಗಳಂ ಬಿಟ್ಟು? ಇನ್ನು ದಿಟ ದಿಟ ಕೃತಯುಗ ತ್ರೇತಾಯುಗ ದ್ವಾಪರಯುಗದಲ್ಲಿ ಹರಿಶ್ಚಂದ್ರ, ರಾಮ, ರಾವಣಾದಿಗಳು ಸತ್ತರು. ಕಲಿಯುಗದಲ್ಲಿ ಅನಂತರು ಸತ್ತರು. ನಿನ್ನ ಪಿತೃಪಿತಾಮಹರೂ ಸತ್ತರು. ನಿನ್ನ ಜೇಷ*ಕನಿಷ*ರುಗಳೂ ಸತ್ತರು ಕಾಣಾ. ಹೀಗೆ ಕಂಡು ಕೇಳಿಯೂ ಮರುಳು ಮಾನವಾ, ಸಾವು ದಿಟವೆಂದರಿ, ಸಂದೇಹ ಬೇಡ. ಸಾಯಲ್ಕೆ ಮುನ್ನ ಧನ ಕೆಡದ ಹಾಗೆ ಸತ್ಪಾತ್ರಕ್ಕೆ ಮಾಡಿ, ಮನ ಕೆಡದ ಹಾಗೆ ಶಿವನನ್ನೇ ಧ್ಯಾನಿಸಿ, ತನು ಕೆಡದ ಹಾಗೆ ಶಿವನನ್ನೇ ಪೂಜಿಸು. ಬಾಲಂ ವೃದ್ಧಂ ಮೃತಂ ದೃಷ್ಟ್ವಾ ಮೃತಂ ವಿಷ್ಣ್ವಾದಿದೈವತಂ ಅಹಂ ಮೃತೋ ನ ಸಂದೇಹೋ ಶೀಘ್ರಂ ತು ಶಿವಪೂಜನಂ ಎಂಬುದನರಿದು, ಮರೆಯಬೇಡ. ಹೆಣ್ಣ ನಚ್ಚಿ, ಅಶುಭವ ಮಚ್ಚಿ, ಮರೆಯಬೇಡ, ಅವಳು ನಿನ್ನ ನಂಬಳು. ನೀನು ತನು ಮನ ಧನವನಿತ್ತಡೆಯೂ ಪರಪುರುಷರ ನೆನೆವುದ ಮಾಣಳು. ಅದನು ನೀನೇ ಬಲ್ಲೆ. ಹೊನ್ನ ನಚ್ಚಿ ಕೆಡದಿರು ಸತಿಸುತದಾಯಾದ್ಯರಿಂದಂ ರಾಜಾದಿಗಳಿಂದಂ ಕೆಡುವುದು. ಅಲ್ಲಿ ನೀನು ಸುಯಿಧಾನದಿಂ ರಕ್ಷಿಸಲು ಧರ್ಮಹೀನನ ಸಾರೆ, ನಿಲ್ಲೆನೆಂದು ನೆಲದಲಡಗಿ ಹೋಗುತ್ತಲಿದೆ, ನೋಡ ನೋಡಲು, ಹೋಗದ ಮುನ್ನ ಅರಿವನೆ ಅರಿದು, ಮರೆವನೆ ಮರೆದು ಮಾಡಿರಯ್ಯಾ, ಶಿವಮಹೇಶ್ವರರಿಗೆ ತನು ಮನ ಧನವುಳ್ಳಲ್ಲಿ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.
--------------
ಉರಿಲಿಂಗಪೆದ್ದಿ
ಲಂಬಿಕಾಯೋಗಿಗಳ ಡೊಂಬರಿಗೆ ಸರಿಯೆಂಬೆ. ಹಟಯೋಗಿಗಳ ಅಟಮಟಗಾರರೆಂದೆಂಬೆ. ಅಷ್ಟಾಂಗಯೋಗಿಗಳ ಕಷ್ಟ ಕರ್ಮಿಗಳೆಂದೆಂಬೆ. ಪವನಯೋಗಿಗಳ ಪ್ರಪಂಚಿಗಳೆಂದೆಂಬೆ. ಲಯಯೋಗಿಗಳ ನಾಯಿಗಿಂದ ಕಡೆ ಎಂಬೆ. ಅದೇನು ಕಾರಣವೆಂದರೆ; ಲಯಯೋಗವೆಂಬುವದು ನಾನಾ ದರುಶನದಲ್ಲಿ ವರ್ತಿಸುವುದಾಗಿ ಆದ ಶಿವಯೋಗಿಗಳು ಒಲ್ಲರು. ಮಂತ್ರಯೋಗವೆಂಬುವದು ಸರ್ವಸಂದೇಹಕ್ಕಿಕ್ಕಿ ಕೊಲುತಿಪ್ಪುದು. ಅದೇನು ಕಾರಣವೆಂದಡೆ: ಮಂತ್ರವೇ ಲಿಂಗ, ಲಿಂಗವೇ ಮಂತ್ರವೆಂದರಿದು ಲಿಂಗನೆನಹ ಸಂಬಂಧಿಸಿಕೊಳ್ಳಲರಿಯದೆ ಲಿಂಗ ವಿರಹಿತವಾಗಿ ಮಾಡುತಿಪ್ಪರಾಗಿ. ಅದು ಅಂಗ ಲಿಂಗ ಸಂಬಂಧಿಗಳು ಮಚ್ಚರು ನೋಡ. ಅದೇನು ಕಾರಣವೆಂದರೆ: ಕೆಲವು ಶೈವರುಗಳು ಮಾಡುವರಾಗಿ ರಾಜಯೋಗವೆಂಬುವದು ಗಾಜು ಗೋಜು ನೋಡ. ಅದನು ಲಿಂಗವಿರಹಿತವಾಗಿ ಜ್ಞಾತೃ ಜ್ಞಾನ, ಜ್ಞೇಯ ಒಂದಾದಲ್ಲಿಯೆ ಯೋಗವೆನುತಿಪ್ಪರಾಗಿ. ಇವು ಒಂದೂ ಲಿಂಗಾಗಯೋಗದ ಹಜ್ಜೆಯಲ್ಲ ನೋಡ. ಅದು ಕಾರಣ, ಲಿಂಗನಿಷ*ರು ಮಚ್ಚರು. ಅದೇನು ಕಾರಣವೆಂದಡೆ: ಲಿಂಗವ ತೆಗೆದಡೆ ಲಿಂಗದೊಡನೆ ಪ್ರಾಣ ಹೋಗದಾಗಿ, ಅದೆಲ್ಲಿಯ ಯೋಗವಯ್ಯ ಭ್ರಾಂತು ಯೋಗ. ಇದು ಕಾರಣ, ನಿಮ್ಮ ಶರಣರು ಲಿಂಗಪ್ರಾಣಿಗಳು; ಪ್ರಾಣಲಿಂಗಸಂಬಂಧಿಗಳು; ಪ್ರಸಾದಮುಕ್ತರು ಈ ಮೂರು ಪ್ರಕಾರದಲ್ಲಿ ಕೂಡುತ್ತಿಪ್ಪರು ಶಿವಯೋಗಿಗಳು. ಇದು ಕಾರಣ ನಿಮ್ಮ ಶರಣರು ಸ್ವಾನುಭಾವಜ್ಞಾನ ಶುದ್ಧಶಿವಯೋಗದಲ್ಲಿ ಸ್ವರೂಪಜ್ಞಾನಿಗಳು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಆಧಾರದಿಂದಲು ವೇಧೆವರಿಯಿತ್ತಯ್ಯ ಸಾಧಿಸುತೈತೆ ಸಕಲ ನಿಃಕ್ರಿಯವ. ಆ ಅಕ್ಷರವನು ಭೇದಿತ್ತಡೆ ಅದನು ರೂಪು ಮಾಡಿದ ಶಿಷ್ಯ ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಊರ ಮಧ್ಯದಲ್ಲಿ ಹುಟ್ಟಿದ ಕಿಚ್ಚು, ಮೇರುವೆಯ ಸುಟ್ಟಿತ್ತು ನೋಡಾ. ಕೇರಿಕೇರಿಯಲ್ಲಿ ಬೀದಿವರಿದು, ಅರಣ್ಯವನಾವರ್ತಿಸಿತ್ತು ನೋಡಾ. ಅರಣ್ಯದೊಳಗಿರ್ದ ಅಂಗನೆಯ ಮುಡಿ ಬೆಂದು, ಊರ ಹತ್ತಿರ ಕಿಚ್ಚು ಉಮಾಪತಿಯನಪ್ಪಲು ನಾರಿಪುರುಷರಳಿದು ಮಾರಾರಿಯೊಬ್ಬನೆ ಅದನು ನೋಡಿರೇ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ದಯದಿಂದ ನೋಡಿ ಬಹು ವಿಚಾರವುಂಟು. ಷಟ್ಸ ್ಥಲಬ್ರಹ್ಮಚಾರಿ ತಾನು ಸಂಕಲ್ಪವನೇತಕ್ಕೆ ಮಾಡುವದು? ಗುರುವು ಹಿಡಿದು ಲಿಂಗವಾಯಿತ್ತು. ಲಿಂಗ ಹಿಡಿದು ಜಂಗವಾಯಿತ್ತು. ಜಂಗಮವು ಹಿಡಿದು ಪಾದೋದಕ ಪ್ರಸಾದವಾಯಿತ್ತು. ಇದನರಿಯದೆ ಭಿನ್ನಭೇದವ ಮಾಡಲಾಗದು. ಜಂಗಮನ ಕೊಂದವನಾದರು, ಲಿಂಗವ ಭಿನ್ನವ ಮಾಡಿದವನಾದರು, ಅವನ ಕಂಡು ಮನಸ್ಸಿನಲ್ಲಿ ನಿಂದಿಸಿದರೆ ವಿರಕ್ತನೆಂಬ ಭಾವನೆಯಿಲ್ಲ. ಭಕ್ತನ ಮಠವೆಂದು ಹೋದಲ್ಲಿ, ಆ ಭಕ್ತನು ಎದ್ದು ನಮಸ್ಕರಿಸಿ, ತನ್ನ ದಾಸಿಯರ ಕರದು `ಪಾದಾರ್ಚನೆಯ ಮಾಡು' ಎಂದರೆ ಆ ಪಾದಾರ್ಚನೆಯ ಮಾಡಿದ ಫಲವು ಅರಿಗೆ ಮೋಕ್ಷವಾಗುವದು? ಆ ತೊತ್ತಿನ ಬಸುರಲ್ಲಿ ಬಪ್ಪುದು ತಪ್ಪದು. ತಾನು ವಿರಕ್ತನಾದ ಮೇಲೆ, ಲಿಂಗವಿದ್ದವರಲ್ಲಿ ಲಿಂಗಾರ್ಪಿತವ ಬೇಡಲೇತಕ್ಕೆ? ತಾ ಬಿರಿದ ಕಟ್ಟಿ ಆಚರಿಸುವ ಶರಣನು ತನಗೆ ಸಮಾಚಾರ ಸಮನಾಗದಲ್ಲಿ ಹೊನ್ನ ಹಿಡಿದು ಬಡ್ಡಿ ವ್ಯವಹಾರವ ಮಾಡಿದ ಜಂಗಮದಲ್ಲಿ ತೆಗೆದುಕೊಳ್ಳಲಾಗದು. ಆ ಜಂಗಮವು ತ್ರಿವಿಧ ಪದಾರ್ಥದಲ್ಲಿದ್ದರೇನು? ವಂಚನೆಯಿಲ್ಲದೆ ಸವದರೆ ಆತ ಮುಟ್ಟಿದರೊಳಗಿಲ್ಲ. ಆತನ ಅಂತು ಇಂತು ಎನ್ನಲಾಗದು ಶರಣರಾಚರಣೆ. ಶರಣ ತಾ ಬಿರಿದ ಕಟ್ಟಿ ಆಚರಿಸಿದಲ್ಲಿ ತನ್ನಾಚರಣೆಗೆ ಕೊರತೆ ಬಂದರೆ ಬಂದಿತ್ತೆಂಬ ಹೇಹ ಬೇಡ. ಬಂದಾಗ ನರಳಿ, ಬಾರದಾಗ ಸದಾಚಾರದಲ್ಲಿರ್ಪುದೆ ಶರಣನಾಚರಣೆ. ಗುರು ಮೋಕ್ಷವಾಗಿಯಿಪ್ಪಾತನು ಪಾಪಕ್ಕೆ ಸಂಬಂಧವಾಗಲು ಆತನ ಕಂಡು ಮನದಲ್ಲಿವ ದ್ರೋಹಿಯೆಂದರೆ ನನ್ನ ಬಿರಿದಿಂಗೆ ಕೊರತೆಯದಾಗುವುದಲ್ಲದೆ ವಿರಕ್ತನೆಂಬ ಭಾವವೆನಗಿಲ್ಲ ನೋಡಾ. ಮುಂದೆ ಕ್ರಿಯಾಚರಣೆ. ವಿರಕ್ತನ ನಡೆಯೆಂತೆಂದೊಡೆ ಭಕ್ತಿಸ್ಥಲ ಸಂಬಂಧವಾದ ಭಕ್ತಂಗೆ ಕ್ರೀಯವ ಕೊಡುವ ಆಚರಣೆಯೆಂತೆಂದೊಡೆ ಆತ ತೆಗೆದು ಕೊಂಬ ಆಚರಣೆಯೆಂತೆಂದೊಡೆ ಪಾದಾರ್ಚನೆಯ ಮಾಡಿದಲ್ಲಿ ಪಾದತೀರ್ಥ ಕೊಡುವರು. ಅನ್ನವ ನೀಡಿದ ಹಂಗಿನಲ್ಲಿ ಪ್ರಸಾದವಂ ಕೊಡುವವರು. ಮುಯ್ಯಿಂಗೆ ಮುಯ್ಯನಿತ್ತುದಲ್ಲದೆ ಮುಕ್ತಿಯೆಂಬುದು ಅವುದು ಹೇಳ? ಭಕ್ತನಾಚಾರಣೆಯೆಂತೆಂದೊಡೆ- ಆ ಗೃಹಕ್ಕೆ ಹೋದಲ್ಲಿ ತಾ ಲಿಂಗಪೂಜೆಯ ಮಾಡುತ್ತಿರ್ದರಾದರು ತಾಯೆದ್ದು ಬಂದು ನಮಸ್ಕರಿಸುವದೆ ಭಕ್ತನ ಮಾರ್ಗ. ಎನ್ನೊಳಗೆ ಲಿಂಗವು ಜಂಗಮವು ಉಂಟೆಂಬ ಅವಿಚಾರದ ನುಡಿಯ ಕೇಳಲಾಗದು. ಮುಂದೆ ಭಕ್ತನು ಜಂಗಮದ ಪಾದವ ಹಿಡಿದಲ್ಲಿ ಪುಷ್ಪ ವಿಭೂತಿಯಿರಲು ಅಗ್ಛಣಿಯಿಲ್ಲದಿರಲು ಮರ್ಲೆದ್ವು ವ್ರತಸ್ಥಪಾದವ ಬಿಡಲಾಗದು. ಬಿಟ್ಟನಾದರೆ ಪಾದತೀರ್ಥಕ್ಕೆ ದೂರವಾಯಿತ್ತು. ಲೋಕಾಚಾರದ ಭಕ್ತರು ಪಾದವ ಹಿಡಿಯಲು, ಪುಷ್ಪ ವಿಭೂತಿಯಿರಲು ಅಗ್ಘಣಿಯಿಲ್ಲದಿರಲು ಆ ಪಾದಕ್ಕೆ ನಮಸ್ಕಾರವ ಮಾಡಿ ಪಾದವಂ ಬಿಟ್ಟು ಮತ್ತೆ ಹೋಗಿ ಅಗ್ಘಣಿಯಂ ತಂದು ಪಾದತೀರ್ಥವಂ ಪಡೆದು ಸಲಿಸುವುದು ಭಕ್ತನಾಚರಣೆ. ಜಂಗಮದೇವರ ಕರತಂದು ವ್ರತಸ್ಥನ ಪಾದತೀರ್ಥವಂ ಪಡೆದಲ್ಲಿ ಆ ಆ ದೇವರ ಸೆಜ್ಜೆಯಲ್ಲಿ ಲಿಂಗವಿಲ್ಲದಿರಲು ಆ ದೇವರು ಮಜ್ಜನವ ನೀಡಿದ ಸ್ಥಾನ ಅವರು ಮೂರ್ತಿಮಾಡಿರ್ದ ಸ್ಥಾನವ ನೋಡಿ ಆ ವ್ರತಸ್ಥನು ಪ್ರಾಣವ ಕೊಡುವುದು. ಭಕ್ತನು ಜಂಗಮವ ಕರಕೊಂಡು ಬಂದು ಪಾದತೀರ್ಥಮಂ ಪಡೆದು ಆ ಜಂಗಮದೇವನ ಸೆಜ್ಜೆಯಲ್ಲಿ ಲಿಂಗವಿಲ್ಲದಿರಲು ಅವರು ಮಜ್ಜನವ ನೀಡಿದ ಸ್ಥಾನದಲ್ಲಿ ಮೂರ್ತಿಗೊಂಡಿರ್ದ ಸ್ಥಾನದಲ್ಲಿ ಪರಾಂಬರಿಸಿ ಆ ಲಿಂಗವು ಸಿಕ್ಕಿದರೆ ಕ್ರೀಯವ ಜಂಗಮವು ಭಕ್ತರು ಸಲಿಸುವುದು, ಇಲ್ಲದಿದ್ದರೆ ಆ ಭಕ್ತರು ತೆಗೆದು ಕೊಂಬುದು. ಆ ಜಂಗಮವು ತೆಗೆದು ಕೊಳಲಾಗದು. ಇದು ಸಕಲ ಶರಣರಿಗೆ ಸನ್ಮತ. ಸಂಕಲ್ಪವ ಮಾಡಲಾಗದು ಮುಂದೆ ಮಾರ್ಗಕ್ಕೆ ತಾನು ನಡೆದಲ್ಲಿ ತನಗೆ ಮಾರ್ಗ ತಪ್ಪದು. ತನಗೆವೊ[ಂ]ದು ವೇಳೆ ಲಿಂಗವು ಭಿನ್ನ ಭಿನ್ನವಾಗಲು ಅದನು ಸಕಲ ಸಮಸ್ತಮೂರ್ತಿಗಳು ತಿಳಿದು ನೋಡಲು ಅದರಲ್ಲಿ ಭಿನ್ನ ಭಿನ್ನವಾಗದೆಯಿರಲು ಪರಾಂಬರಿಸಿ ಎಲ್ಲಾ ಮಾಹೇಶ್ವರರು ಎದ್ದು ಬಂದು ಅದರೊಳಗೆ ಸಂಕಲ್ಪವಿಲ್ಲವೆಂದು ನಮಸ್ಕಾರವ ಮಾಡುವುದು. ಲಿಂಗವು ಭಿನ್ನವಾಗಲು `ನಿಮ್ಮ ಗುರುಮಠಪೂರ್ವಕ್ಕೆ ಹೋಗಿ'ಯೆಂದು ಹೇಳಲು, `ನಾನೊಲ್ಲೆ, ನಿಮ್ಮ ಪಾದದಲ್ಲಿಯೇಕಾರ್ಥವ ಮಾಡಿಕೊಳ್ಳಿ'ಯೆಂದು ಹೇಳಲು, ಆ ದೇವರ ಅಡ್ಡಬೀಳಿಸಿಕೊಂಡು ವಸ್ತು ಹೋಗುವ ಪರಿಯಂತರದಲ್ಲಿ ಕಾದಿರುವುದು. ಅಥ[ವ] ಒಂದು ವೇಳೆ ಮೋಸ ಬಂದರೆ ಅಲ್ಲಿರ್ಪ ಭಕ್ತ ಮಾಹೇಶ್ವರರ ಬಿಡುವುದು. ಧರ್ಮಾಧರ್ಮದಲ್ಲಿ ವಿಚಾರಿಸದೆ ಆ ಭಕ್ತನು ಜಂಗಮ ಮುಟ್ಟಿದ ಗದ್ದುಗೆಯಲ್ಲಿ ಮೂರ್ತಿಮಾಡಿ `ಪ್ರಸಾದಕ್ಕೆ ಶರಣಾರ್ಥಿ'ಯೆನಲು ನೀಡಲಾಗದೆಂಬುದು ಆಚರಣೆ. ಆದ ನೀಡಿಯಿಟ್ಟರು ಮುಗಿವಲ್ಲಿ ಭಕ್ತನ ಪ್ರಸಾದ ಹೆಚ್ಚಾದರೆ `ಅಯ್ಯೋ ನನ್ನ ಪ್ರಸಾದ ಹೆಚ್ಚಾಯಿ'ತೆಂದು ಹೇಳಿದರೆ ಆ ಪ್ರಸಾದವನು ನೀಡಿಸಿ ಕೊಂಬ ಜಂಗಮಕ್ಕೆ ಆಚರಣೆ ಸಲ್ಲದು. ವ್ಯಾಪಾರವ ಕೊಟ್ಟು ವ್ಯಾಪಾರವನೊಪ್ಪಿಸಿಕೊಂಡರೆ ನಾವು ಪ್ರಸಾದವ ತೆಗೆದುಕೊಂಬುದು ಆಚರಣೆ. ಹೊನ್ನು ಹೆಣ್ಣು ಮಣ್ಣು ತ್ರಿವಿಧದಲ್ಲಿ ವಂಚನೆಯಿಲ್ಲದಿರ್ಪಡೆ ಅವನ ಹೆಣ್ಣು ಮಣ್ಣು ತ್ರಿವಿಧದಲ್ಲಿ ವಂಚನೆಯಿಲ್ಲದಿರ್ಪಡೆ ಅವನ ಪ್ರಸಾದವನು ತೆಗೆದುಕೊಂಬುದು ಇದು ಜಂಗಮದಾಚರಣೆ. ಗುರುದೀಕ್ಷೆಯಿಲ್ಲದವನು ಲಿಂಗಪೂಜೆಯ ಮಾಡಿದರೆ ಪಾದೋದಕ ಪ್ರಸಾದವ ಕೊಂಡರೆ ಸಹಜವಲ್ಲದೆ ಸಾಧ್ಯವಾಗದು. ಬಿಟ್ಟರಾದರೆ ಅವರಿಗೆ ಮೋಕ್ಷವಿಲ್ಲವು. ಜಂಗಮವು ಆವ ವರ್ತನೆಯಲ್ಲಿ ನಡಕೊಂಡರು [ಆಸ]ತ್ತು `ಬೇಡ ಹೋಗಿ'ಯೆಂದರೆ `ನಾನು ಅರಿಯದೆ ಮಾಡಿದೆ'ನೆಂದರೆ ಅವನನೊಪ್ಪಿಕೊಂಬುದು ಇದಕ್ಕೆ ಕಲ್ಪಿತ ಪಾಪಪುಣ್ಯಕ್ಕೆ ಒಳಗಾದವರು ಷಟ್ಸ ್ಥಲಕ್ಕೆ ಮಾತ್ರ ಆಗದು. ಭಕ್ತಂಗೆ ಪ್ರಸಾದವ ಕೊಡುವ ಆಚರಣೆಯೆಂತೆಂದೊಡೆ- ದೀಕ್ಷೆಯಿಲ್ಲದೆ ಶಿವಭಕ್ತನ ಗೃಹಕ್ಕೆ ಹೋಗಿ `ಭಿಕ್ಷೆ'ಯೆಂದೆನಾದರೆ, ಜಿಹ್ವೆಯ ಮುಕ್ಕುಳಿಸಿದರೆ ಪಾತಕ ನೋಡ. ಗುರುವಚನ ಪ್ರಮಾಣದಲ್ಲಿ ನಾನು ಗುರುಮುಖವ ಹಿಡಿದಲ್ಲಿ ಶಿವಮಂತ್ರಸ್ಮರಣೆಯನು ಶಿವಾನುಭಾವಿಗಳ ಸ್ಥಾನದಲ್ಲಿ ಬೆಸಗೊಂಬುದೆ ಶುದ್ಧವಾಯಿತ್ತು. ಇಲ್ಲದಿದ್ದರೆ ಶುದ್ಧವಿಲ್ಲವು. ಶಿವಶರಣನ ಜ್ಞಾನವೆಂತೆಂದೊಡೆ ನೀರಮೇಲಣ ತೆಪ್ಪದಂತಿರಬೇಕು, ಕ್ಷೀರದೊಳಗಣ ಘೃತದಂತಿರಬೇಕು, ಕೆಸರಿನೊಳಗಣ ತಾವರೆ ಪ್ರಜ್ವಲಿಸಿದಂತಿರಬೇಕು. ಲಿಂಗದೊಳಗೊಡವೆರದರೆ ಆರು ಆರಿಗೆಯು ಕಾಣದಂತೆ ನೋಡಾ. ಅಂದಳದೊಳಗೆ ಹೋಗುವನ ಹಜ್ಜೆಯ ಕಂಡವರಾರು ಹೇಳ? ಮಾತಿನಲ್ಲಿ ಮಹಾಜ್ಞಾನಿಗಳೆಂದರೊಪ್ಪುವರೆ? ಮಹಾಲಿಂಗದ ಬೆಳಗಿನಲ್ಲಿ, ತನ್ನ ನಡೆಯನೊಡವೆರದಿಪ್ಪ ಮಹಿಮಂಗೆ ದುಃಖವಿಲ್ಲ ನೋಡ ಭಕ್ತಿಸ್ಥಲವಾದುದು. ಭಕ್ತನ ಮಾರ್ಗವೆಂತೆಂದೊಡೆ- ತನ್ನ ಗೃಹಕ್ಕೆ ಜಂಗಮವು ಹೋದಲ್ಲಿ ಶುದ್ಧವಲ್ಲದೆ ಇದನರಿಯದೆ ಕಾಡದೈವಕ್ಕೆಲ್ಲ ಹರಕೆಯ ಮಾಡಿ ಆ ದೈವದ ಹೆಸರಿನಲ್ಲಿ ಜಂಗಮವ ಕರೆತಂದು ಉಣಲಿಕ್ಕಿದೆನಾದರೆ ಕಾರಿದ ಕೂಳಿಗಿಂದ ಕನಿಷ* ಕಾಣಾ. ಅನ್ಯ ದೈವದ ಪೂಜೆಯಿಲ್ಲದಾತನೆ ಶಿವಭಕ್ತ ನೋಡಾ. ತನ್ನ ಗುರುವು ಹಸ್ತಕ ಸಂಯೋಗವ ಮಾಡಿ, ಲಿಂಗವ ಧರಿಸಿದ ಬಳಿಕ ಲಿಂಗವಲ್ಲದೆ ಅನ್ಯಪೂಜೆಯೇತಕ್ಕೆ? ಇದನ್ಲರ್ವಿದರಿದು ಮಾಡಿದನಾದರೆ ಪಾತಕವಲ್ಲದೆ ಮತ್ತಿಲ್ಲ ನೋಡಾ. ಮೋಕ್ಷವೆಂಬುದೆಂದಿಗೂ ಇಲ್ಲ ನೋಡಾ. ಹುಟ್ಟುಗೆಟ್ಟು ಬಟ್ಟಬಯಲಾದವನಿಗೆ ದುಃಖವುಂಟೆ?. ಲಿಂಗದಲ್ಲಿ ನಿರ್ಭಯಲಾದವಂಗೆ ಸಂಕಲ್ಪವುಂಟೆ?. ಮಹಾಜ್ಞಾನಿಗೆ ಕತ್ತಲೆಯುಂಟೆ?. ಮಹಾಪ್ರಸಾದಿಗೆ ಸಂಕಲ್ಪಮುಂಟೆ?. ಜ್ಞಾನಿಗಳಿಗೆನ್ನವರು ತನ್ನವರೆಂಬ ಭೇದಮುಂಟೆ?. ಸದ್ಭಕ್ತಿಯುಳ್ಳಾತನು ತನ್ನ ಲಿಂಗವ ಪೂಜಿಸಿ ಅನ್ಯರಮನೆಯಲ್ಲಿ ಭೋಗದಲ್ಲಿದ್ದನಾದರೆ ಶ್ವಾನನ ಬಸುರಲ್ಲಿ ಬರುವು[ದು] ತಪ್ಪದು, ಅರೆಭಕ್ತರಾದವರ ಗೃಹದಲ್ಲಿ ಹೋಗಿ ಅನ್ನವ ಮುಟ್ಟಿದರಾದರೆ, ಅವನಿಗೆ ಗುರುವಿಲ್ಲ. ಮುಕ್ತಿಯೆಂಬುದು ಎಂದೆಂದಿಗೂ ಇಲ್ಲ ನೋಡಾ, ನಿಜಗುರು ಸ್ವತಂತ್ರ ಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
-->