ಅಥವಾ

ಒಟ್ಟು 14 ಕಡೆಗಳಲ್ಲಿ , 6 ವಚನಕಾರರು , 13 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕ್ರೀ ಆಚರಣೆ ಶುದ್ಧವಾದಲ್ಲಿ ಇಷ್ಟಲಿಂಗಪೂಜೆ. ರೂಪು ರುಚಿ ಏಕವಾದಲ್ಲಿ ಪ್ರಾಣಲಿಂಗಪೂಜೆ. ರೂಪು ನಿರೂಪೆಂಬ ಉಭಯವಳಿದಲ್ಲಿ ಐಕ್ಯನ ಅನುಭವ ತೃಪ್ತಿ. ಕೂಡುನ್ನಬರ ನೋಟ ಸುಖಿಯಾಗಿ, ಬೇಟದ ನೋಟ ಕೂಟದಲ್ಲಿ ಅಳಿದ ಮತ್ತೆ, ಉಭಯದೃಷ್ಟ ಏಕವಾಯಿತ್ತು. ಚರ ಅಚರವಾದಲ್ಲಿ ಉಭಯನಾಮರೂಪು ನೀನೆ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಶರಣನ ಸಂಭ್ರಮ ಂಗಪೂಜೆ, ಜಂಗಮದಾಸೋಹ ನೋಡಯ್ಯಾ. ಶರಣನ ಸಂಭ್ರಮ ಅನುಭವ ಓ ಭವ ಗೆಯುವುದು. ಅದೆ ಸಂಭ್ರಮಕಾರ್ಯ ನೋಡಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಯಾ
--------------
ಸಿದ್ಧರಾಮೇಶ್ವರ
ಅಯ್ಯಾ ಮಹಾರಾಜನನೆಲ್ಲರೂ ಬಲ್ಲರು, ಆ ರಾಜನಾರನೂ ಅರಿಯನು. ಅರಿಯನಾಗಿ ಪದವಿಲ್ಲ, ಫಲವಿಲ್ಲ, ಭೋಗವಿಲ್ಲ, ಪರಿಣಾಮವಿಲ್ಲ. ಶಿವಶಿವಾ ! ಮಹಾರಾಜಾಧಿರಾಜ ಶಿವನನೆಲ್ಲರೂ ಬಲ್ಲರು, ಆ ಶಿವನು ಆರನೂ ಅರಿಯನು, ಅರಿಯನಾಗಿ ನಿಜಸುಖವಿಲ್ಲ. ಇದು ಕಾರಣ ಶಿವನರಿಯದ ಸದ್ಭಕ್ತರ, ಅನುಭವ ಸಂಪನ್ನರ ಸಂಗದಿಂದ ಆ ಶಿವನು ತನ್ನನರಿವಂತೆ ಮಾಡಿಕೊಂಡಡೆ ಪರಮಸುಖವ ಕೊಡುವನಯ್ಯ, ನಮ್ಮ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರನು.
--------------
ಉರಿಲಿಂಗಪೆದ್ದಿ
ಲಿಂಗವಂತರು ತಾವಾದ ಬಳಿಕ, ಅಂಗನೆಯರ ನಡೆನುಡಿಗೊಮ್ಮೆ ಲಿಂಗದ ರಾಣಿಯರೆಂದು ಭಾವಿಸಬೇಕು. ಲಿಂಗವಂತರು ತಾವಾದ ಬಳಿಕ, ಅನುಭವ ವಚನಗಳ ಹಾಡಿ ಸುಖದುಃಖಗಳಿಗಭೇದ್ಯವಾಗಿರಬೇಕು. ಲಿಂಗವಂತರು ತಾವಾದ ಬಳಿಕ, ಜಂಗಮವ ಪೂಜಿಸಿ ಸದಾ ಲಿಂಗೈಕ್ಯಸುಖಿಗಳಾಗಿರಬೇಕು ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಒಂದು ಮರವ ಕೊರೆದು ನೂರೆಂಟು ಬೊಂಬೆಯ ಮಾಡಿ ಮರವೇ ಬೊಂಬೆಯಲ್ಲದೆ ಮರ ಬ್ಯಾರೆ ತಾನಿಲ್ಲಾ. ಇದರಂತೆ ತಾನೇ ಹಲವು ಆಗಲು ತಾನೇ ಹಲವಲ್ಲದೆ ತಾ ಬ್ಯಾರೆಲ್ಲಿಹನೋ ಇದೇ ಅನುಭವ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಮಹಿಮೆಯದತಿಶಯ ನಿಮಿತ್ತ ನಿಮ್ಮ ಇಷ್ಟಧಾರಣಾರ್ಹವಲ್ಲದೆ, ಅನುಭವ ತೊಡಕಿನ ಖಂಡನೆಯಿಂದಲ್ಲ; ಆದರಾಗಬಹುದು. ಂಗವಂತನು ಪುರಾತನ ಮೆಚ್ಚುಗೆಯಲ್ಲದೆ ಪರಬ್ರಹ್ಮದ ಮೆಚ್ಚಲ್ಲ, ಕಪಿಲಸಿದ್ಧಮಲ್ಲಿಕಾರ್ಜುನಾ
--------------
ಸಿದ್ಧರಾಮೇಶ್ವರ
ಅನುಭವ ಪ್ರಾಣಲಿಂಗ ಪರಾತ್ಪರವೆಂದರಿದು, ``ಅಣೋರಣೀಯಾನ್ ಮಹತೋ ಮಹೀಯಾನ್'' ಎಂದು ಅಣುರೇಣು ತೃಣಕಾಷ*ದೊಳ್ಕೂಡಿ, ``ತೇನ ವಿನಾ ತೃಣಾಗ್ರಮಪಿ ನ ಚಲತಿ''_ ಎಂದು ಪರಿಪೂರ್ಣ ಸದಾಶಿವನೆಂದರಿದು_ ಇಂತು ಕ್ಷಣವೇದಿ ಅಂತರಂಗವ ವೇದಿಸಲ್ಕೆ, ಅಗಣಿತ ಅಕ್ಷೇಶ್ವರ ತಾನೆಂದು ಪ್ರಣಮಪ್ರಭೆಯ ಮೇಲಣ ಪರಂಜ್ಯೋತಿ ತಾನೆಂದರಿದ ಕಾರಣ ಗುಹೇಶ್ವರಾ ನಿಮ್ಮ ಶರಣನುಪಾಮಾತೀತನು.
--------------
ಅಲ್ಲಮಪ್ರಭುದೇವರು
ಗುರುವಿನಿಂದಾಯಿತ್ತೆನ್ನ ಗುರುಸಂಬಂಧ; ಲಿಂಗದಿಂದಾಯಿತ್ತೆನ್ನ ಲಿಂಗಸಂಬಂಧ; ಜಂಗಮದಿಂದಾಯಿತ್ತೆನ್ನ ಜಂಗಮಸಂಬಂಧ. ಅದೆಂತೆಂದಡೆ: ತನುವಿಕಾರವಳಿದೆನಾಗಿ ಗುರುಸಂಬಂಧ; ಮನವಿಕಾರವಳಿದೆನಾಗಿ ಲಿಂಗಸಂಬಂಧ; ಧನವಿಕಾರವಳಿದೆನಾಗಿ ಜಂಗಮಸಂಬಂಧ. ಇಂತೀ ತ್ರಿವಿಧವಿಕಾರವಳಿದೆನಾಗಿ, ಗುರುವಾಗಿ ಗುರುಭಕ್ತಿಸಂಪನ್ನ; ಲಿಂಗವಾಗಿ ಲಿಂಗಭಕ್ತಿಸಂಪನ್ನ; ಜಂಗಮವಾಗಿ ಜಂಗಮಭಕ್ತಿ ಸಂಪನ್ನ. ಇದು ಕಾರಣ, ಅರಿವೆ ಗುರು, ಅನುಭಾವವೆ ಲಿಂಗ, ಆನಂದವೆ ಜಂಗಮ. ಅದು ಹೇಗೆಂದಡೆ: ಅರಿವೆಂಬ ಗುರುವಿನಿಂದ ಇಷ್ಟಲಿಂಗಸಾಹಿತ್ಯ; ಅನುಭಾವವೆಂಬ ಲಿಂಗದಿಂದ ಪ್ರಾಣಲಿಂಗಸಾಹಿತ್ಯ ಆನಂದವೆಂಬ ಜಂಗಮದಿಂದ ತೃಪ್ತಿಲಿಂಗಸಾಹಿತ್ಯ. ಅರಿವಿನಿಂದ ಅನುಭವ; ಅನುಭವದಿಂದ ಅರಿವು. ಅರಿವು ಅನುಭವ ಸಮರಸವಾದುದೆ ಆನಂದ. ಆನಂದಕ್ಕೆ ಅರಿವೆ ಸಾಧನ. ಇಷ್ಟದಿಂದ ಪ್ರಾಣ, ಪ್ರಾಣದಿಂದ ಇಷ್ಟ; ಇಷ್ಟಪ್ರಾಣಸಂಯೋಗವಾದುದೆ ತೃಪ್ತಿ. ಆ ತೃಪ್ತಿಗೆ ಇಷ್ಟಲಿಂಗದರಿವೆ ಸಾಧನ. ಅದೆಂತೆಂದಡೆ: ಆ ಇಷ್ಟಲಿಂಗದಲ್ಲಿ ವಿನಯ ಮೋಹ ಭಯ ಭಕ್ತಿ ಕರುಣ ಕಿಂಕುರ್ವಾಣ ಸಮರಸವಾದುದೆ ಆಚಾರಲಿಂಗ. ಮತ್ತಾ ಇಷ್ಟಲಿಂಗದಲ್ಲಿ ದೃಢಸ್ನೇಹ ನಿಶ್ಚಯ ನಿಶ್ಚಲವಿಶ್ವಾಸ ಸಮರಸವಾದುದೆ ಗುರುಲಿಂಗ. ಮತ್ತಾ ಇಷ್ಟಲಿಂಗದಲ್ಲಿ ಎಚ್ಚರಿಕೆ ಸುಜನತ್ವ ಸಾವಧಾನ ಸನ್ನಹಿತ ಪ್ರಸನ್ನತ್ವ ಸಮರಸವಾದುದೆ ಶಿವಲಿಂಗ. ಮತ್ತಾ ಇಷ್ಟಲಿಂಗದಲ್ಲಿ ನಿಸ್ತರಂಗ ದೃಕ್ಕಿರಣೋದಯ ಹೃದಯಕುಹರ ಸ್ವಯಾನುಭಾವಾಂತರ್ಮುಖ ಸಮರಸವಾದುದೆ ಜಂಗಮಲಿಂಗ. ಮತ್ತಾ ಇಷ್ಟಲಿಂಗದಲ್ಲಿ ಪರವಶ ಗೂಢ ಏಕಾಗ್ರಚಿತ್ತ ಉತ್ತರಯೋಗ ಪರಿಪೂರ್ಣಭಾವ ಸಚ್ಚಿದಾನಂದ ಸಮರಸವಾದುದೆ ಪ್ರಸಾದಲಿಂಗ. ಮತ್ತಾ ಇಷ್ಟಲಿಂಗದಲ್ಲಿ ಮನೋಲಯ ಭಾವಾದ್ವೈತ ಅನುಪಮ ಚಿತ್ತಾತ್ಮಿಕದೃಷ್ಟಿ ಸುನಾದ ಭೋಜ್ಯ ಸಮರಸವಾದುದೆ ಮಹಾಲಿಂಗ. ಇಂತಪ್ಪ ಮಹಾಲಿಂಗದಿಂದ ಪ್ರಸಾದಲಿಂಗ, ಪ್ರಸಾದಲಿಂಗದಿಂದ ಜಂಗಮಲಿಂಗ, ಜಂಗಮಲಿಂಗದಿಂದ ಶಿವಲಿಂಗ, ಶಿವಲಿಂಗದಿಂದ ಗುರುಲಿಂಗ, ಗುರುಲಿಂಗದಿಂದ ಆಚಾರಲಿಂಗ. ಆಚಾರಲಿಂಗದಲ್ಲಿ ಅನುಭಾವಿಯಾದಡೆ, ಇಪ್ಪತ್ತೈದು ಕರಣಂಗಳನರಿದಾಚರಿಸಬೇಕು. ಗುರುಲಿಂಗದಲ್ಲಿ ಅನುಭಾವಿಯಾದಡೆ, ಇಪ್ಪತ್ತು ಕರಣಂಗಳನರಿದಾಚರಿಸಬೇಕು. ಶಿವಲಿಂಗದಲ್ಲಿ ಅನುಭಾವಿಯಾದಡೆ, ಹದಿನೈದು ಕರಣಂಗಳನರಿದಾಚರಿಸಬೇಕು. ಜಂಗಮದಲ್ಲಿ ಅನುಭಾವಿಯಾದಡೆ, ಹತ್ತು ಕರಣಂಗಳನರಿದಾಚರಿಸಬೇಕು. ಪ್ರಸಾದಲಿಂಗದಲ್ಲಿ ಅನುಭಾವಿಯಾದಡೆ, ಐದು ಕರಣಂಗಳನರಿದಾಚರಿಸಬೇಕು. ಮಹಾಲಿಂಗದಲ್ಲಿ ಅನುಭಾವಿಯಾದಡೆ, ಎಲ್ಲಾ ಕರಣಂಗ?ನರಿದಾಚರಿಸಬೇಕು. ಇಂತಪ್ಪ ಮಹಾಲಿಂಗವೆ ಇಷ್ಟಲಿಂಗವಾಗಿ, ಆ ಇಷ್ಟಲಿಂಗದ ಗಂಧಂಗಳಾರು ಮುಖಂಗಳಾಗಿ, ಆ ಮುಖಂಗಳ ತತ್ತತ್‍ಸ್ಥಾನದ್ರವ್ಯಂಗಳನರಿದರ್ಪಿಸಿಕೊಳಬಲ್ಲನಾಗಿ ಆಚಾರಲಿಂಗಭೋಗಿ. ಮತ್ತಾ ಇಷ್ಟಲಿಂಗದ ರಸಂಗಳಾರು ಮುಖಂಗಳಾಗಿ, ಆ ಮುಖಂಗಳ ತತ್ತತ್‍ಸ್ಥಾನದ್ರವ್ಯಂಗಳನರಿದರ್ಪಿಸಿಕೊಳಬಲ್ಲನಾಗಿ ಗುರುಲಿಂಗಭೋಗಿ. ಮತ್ತಾ ಇಷ್ಟಲಿಂಗದ ರೂಪುಗಳಾರು ಮುಖಂಗಳಾಗಿ, ಆ ಮುಖಂಗಳ ತತ್ತತ್‍ಸ್ಥಾನದ್ರವ್ಯಂಗಳನರಿದರ್ಪಿಸಿಕೊಳಬಲ್ಲನಾಗಿ ಶಿವಲಿಂಗಭೋಗಿ. ಮತ್ತಾ ಇಷ್ಟಲಿಂಗದ ಸ್ಪರ್ಶನಂಗಳಾರು ಮುಖಂಗಳಾಗಿ ಆ ಮುಖಂಗಳ ತತ್ತತ್‍ಸ್ಥಾನದ್ರವ್ಯಂಗಳನರಿದರ್ಪಿಸಿಕೊಳಬಲ್ಲನಾಗಿ ಜಂಗಮಲಿಂಗಭೋಗಿ. ಮತ್ತಾ ಇಷ್ಟಲಿಂಗದ ಶಬ್ದಂಗಳಾರು ಮುಖಂಗಳಾಗಿ, ಆ ಮುಖಂಗಳ ತತ್ತತ್‍ಸ್ಥಾನದ್ರವ್ಯಂಗಳನರಿದರ್ಪಿಸಿಕೊಳ್ಳಬಲ್ಲನಾಗಿ ಪ್ರಸಾದಲಿಂಗಭೋಗಿ. ಮತ್ತಾ ಇಷ್ಟಲಿಂಗದ ಪರಿಣಾಮಂಗಳಾರು ಮುಖಂಗಳಾಗಿ, ಆ ಮುಖಂಗಳ ತತ್ತತ್‍ಸ್ಥಾನದ್ರವ್ಯಂಗಳನರಿದರ್ಪಿಸಿಕೊಳಬಲ್ಲನಾಗಿ ಮಹಾಲಿಂಗಭೋಗಿ. ಇಂತಪ್ಪ ಮಹಾಲಿಂಗವೆ ಇಷ್ಟಲಿಂಗವಾಗಿ, ಆ ಇಷ್ಟಲಿಂಗದ ಸದ್ಯೋಜಾತಮುಖವಪ್ಪ ಪ್ರಾಣಂಗಳಾರು ದ್ರವ್ಯಂಗಳಲ್ಲಿ ಷಟ್‍ತ್ರಿಂಶಲ್ಲಿಂಗಾವಧಾನಿಯಾಗಿ, ಮತ್ತಾ ಇಷ್ಟಲಿಂಗದ ವಾಮದೇವಮುಖವಪ್ಪ ಜಿಹ್ವೆಗಳಾರು ದ್ರವ್ಯಂಗಳಲ್ಲಿ ಷಟ್‍ತ್ರಿಂಶಲ್ಲಿಂಗಾವಧಾನಿಯಾಗಿ, ಮತ್ತಾ ಇಷ್ಟಲಿಂಗದ ಅಘೋರಮುಖವಪ್ಪ ನೇತ್ರಂಗಳಾರು ದ್ರವ್ಯಂಗಳಲ್ಲಿ ಷಟ್‍ತ್ರಿಂಶಲ್ಲಿಂಗಾವಧಾನಿಯಾಗಿ, ಮತ್ತಾ ಇಷ್ಟಲಿಂಗದ ತತ್ಪುರುಷಮುಖವಪ್ಪ ತ್ವಕ್ಕುಗಳಾರು ದ್ರವ್ಯಂಗಳಲ್ಲಿ ಷಟ್‍ತ್ರಿಂಶಲ್ಲಿಂಗಾವಧಾನಿಯಾಗಿ, ಮತ್ತಾ ಇಷ್ಟಲಿಂಗದ ಈಶಾನಮುಖವಪ್ಪ ಶ್ರೋತ್ರಂಗಳಾರು ದ್ರವ್ಯಂಗಳಲ್ಲಿ ಷಟ್‍ತ್ರಿಂಶಲ್ಲಿಂಗಾವಧಾನಿಯಾಗಿ, ಮತ್ತಾ ಇಷ್ಟಲಿಂಗದ ಗೋಪ್ಯಮುಖವಪ್ಪ ಹೃದಯಂಗಳಾರು ದ್ರವ್ಯಂಗಳಲ್ಲಿ ಷಟ್‍ತ್ರಿಂಶಲ್ಲಿಂಗಾವಧಾನಿಯಾಗಿ. ಇಂತಪ್ಪ ತೃಪ್ತಿಪದಾರ್ಥಂಗಳಾರು, ಶಬ್ದಪದಾರ್ಥಂಗಳಾರು, ಸ್ಪರ್ಶನಪದಾರ್ಥಂಗಳಾರು, ರೂಪುಪದಾರ್ಥಂಗಳಾರು, ರಸಪದಾರ್ಥಂಗಳಾರು, ಗಂಧಪದಾರ್ಥಂಗಳಾರು. ಇಂತೀ ಗಂಧಪದಾರ್ಥಂಗಳಾರನು ಘ್ರಾಣಿಸುವಲ್ಲಿ ಅಷ್ಟಾದಶಲಿಂಗಶೇಷಭುಕ್ತನಾಗಿ, ರಸಪದಾರ್ಥಂಗಳಾರನು ರುಚಿಸುವಲ್ಲಿ ಅಷ್ಟಾದಶಲಿಂಗಶೇಷಭುಕ್ತನಾಗಿ, ರೂಪುಪದಾರ್ಥಂಗಳಾರನು ನಿರೀಕ್ಷಿಸುವಲ್ಲಿ ಅಷ್ಟಾದಶಲಿಂಗಶೇಷಭುಕ್ತನಾಗಿ, ಸ್ಪರ್ಶನ ಪದಾರ್ಥಂಗಳಾರನು ಸೋಂಕಿಸುವಲ್ಲಿ ಅಷ್ಟಾದಶಲಿಂಗಶೇಷ ಭುಕ್ತನಾಗಿ, ಶಬ್ದಪದಾರ್ಥಂಗಳಾರನು ಲಾಲಿಸುವಲ್ಲಿ ಅಷ್ಟಾದಶಲಿಂಗಶೇಷಭುಕ್ತನಾಗಿ, ತೃಪ್ತಿಪದಾರ್ಥಂಗಳಾರನು ಪರಿಣಾಮಿಸುವಲ್ಲಿ ಅಷ್ಟಾದಶಲಿಂಗಶೇಷಭುಕ್ತನಾಗಿ, ಅರ್ಪಿತ ಪ್ರಸಾದ ಅವಧಾನ ಸ್ಥಳಕು? ಅನುಭಾವ ಆಚರಣೆ ಇಂತಿವೆಲ್ಲವನು ಇಷ್ಟಲಿಂಗದಲ್ಲಿಯೆ ಕಂಡು ಸುಖಿಸುತ್ತಿರ್ಪ ಮಹಾಮಹಿಮನ ನಾನೇನೆಂಬೆನಯ್ಯಾ ! ಇಂತಪ್ಪ ಮಹಾಮಹಿಮನೊಳಕೊಂಡಿಪ್ಪ ಇಷ್ಟಬ್ರಹ್ಮವ ನಾನೇನೆಂಬೆನಯ್ಯಾ ! ಫಲ ಪತ್ರ ಕುಸುಮ ರಸ ಗಂಧ ಕಾರ ಒಗರು ಹುಳಿ ಮಧುರ ಇಂತಿವೆಲ್ಲಕ್ಕೂ ಜಲವೊಂದೆ ಹಲವು ತೆರನಾದಂತೆ, ಮಸೆದ ಕೂರಲಗು ಮೊನೆ ಮೊನೆಗೆ ಬಂದಾನುವಂತೆ, ರಸಘುಟಿಕೆಯೊಂದೆ ಸಹಸ್ರ ಮೋಹಿಸುವಂತೆ, ಬಂಗಾರವೊಂದೆ ಹಲವಾಭರಣವಾದಂತೆ, ಹತ್ತೆಂಟುಬಾಯ ಹುತ್ತದೊಳಗೆ ಸರ್ಪನೊಂದೆ ತಲೆದೋರುವಂತೆ ಹಲವು ಕರಣಂಗಳ ಕೊನೆಯ ಮೊನೆಯ ಮೇಲೆ ತೊ?ಗಿ ಬೆಳಗುವ ಪರಂಜ್ಯೋತಿರ್ಲಿಂಗವು ! ಅನುಪಮ ಅದ್ವಯ ವಾಙ್ಮನೋತೀತ ಅವಿರಳ ಅಪ್ರಮೇಯ ಚಿನ್ಮಯ ನಿರಾವರಣ ನಿರುತ ನಿರ್ಗುಣ ನಿರ್ಭೇದ್ಯ, ಕೂಡಲಚೆನ್ನಸಂಗಮದೇವಾ, ನಿಮ್ಮ ಶರಣ ಸರ್ವಾಂಗಲಿಂಗಿ.
--------------
ಚನ್ನಬಸವಣ್ಣ
ವೇದಮಾರ್ಗವ ಮೀರಿದರು ಮಹಾವೇದಿಗಳು ಲಿಂಗವಂತರು, ಆ ಲಿಂಗವಂತರ ಮಹಾವೇದಮಾರ್ಗವ ಲಿಂಗವೇ ಬಲ್ಲನಯ್ಯಾ. ಶಾಸ್ತ್ರಮಾರ್ಗವ ಮೀರಿದರು ಮಹಾಶಾಸ್ತ್ರಜ್ಞರು ಲಿಂಗವಂತರು. ಆ ಲಿಂಗವಂತರ ಮಹಾಶಾಸ್ತ್ರಮಾರ್ಗವ ಲಿಂಗವೇ ಬಲ್ಲನಯ್ಯಾ. ಆಗಮಕ್ರೀಯ ಮೀರಿದರು ಮಹಾ ಆಗಮಿಕರು ಲಿಂಗವಂತರು, ಲಿಂಗವಂತರ ಮಹಾ ಆಗಮಕ್ರೀಯ ಲಿಂಗವೇ ಬಲ್ಲನಯ್ಯಾ. ಪುರಾಣದ ಪರಿಯ ಮೀರಿದರು ಮಹಾಪುರಾಣಿಕರು ಲಿಂಗವಂತರು, ಆ ಲಿಂಗವಂತರ ಪುರಾಣದ ಪರಿಯ ಆ ಲಿಂಗವೇ ಬಲ್ಲನಯ್ಯಾ. ದೇವ ದಾನವಮಾನವರಿಗೆಯೂ ಅರಿಯಬಾರದು. ವೇದಶಾಸ್ತ್ರಪುರಾಣಾನಿ ಸ್ಪಷ್ಟಂ ವೇಶ್ಯಾಂಗನಾ ಇವ ಯಾ ಪುನಶ್ಶಾಂಕರೀ ವಿದ್ಯಾ ಗುಪ್ತಾ ಕುಲವಧೂರಿವ ಎಂದುದಾಗಿ, ಆರಿಗೆಯೂ ಅರಿಯಬಾರದು. ಲಿಂಗವಂತರು ಉಪಮಾತೀತರು, ವಾಙ್ಮನೋತೀತರು, ಆರ ಪರಿಯೂ ಇಲ್ಲ. ಸ್ವೇಚ್ಛಾವಿಗ್ರಹೇಣೈವ ಸ್ವೇಚ್ಛಾಚಾರಗಣೇಶ್ವರಾಃ ಶಿವೇನ ಸಹ ತೇ ಭುಙõïತ್ವಾ ಭಕ್ತಾ ಯಾಂತಿ ಶಿವಂ ಪದಂ ಲೋಕಾಚಾರನಿಬಂಧೇನ ಲೋಕಾಲೋಕವಿವರ್ಜಿತಾಃ ಲೋಕಾಚಾರಂ ಪರಿತ್ಯಜ್ಯ ಪ್ರಾಣಲಿಂಗಪ್ರಸಾದಿನಃ ಎಂದುದಾಗಿ, ಈ ಲೋಕದ ಮಾರ್ಗವ ನಡೆಯರು, ಲೋಕದ ಮಾರ್ಗವ ನುಡಿಯರು. ಲಿಂಗವಂತರ ನಡೆ ನುಡಿ ಆಚಾರ ಅನುಭವ ಆಯತ ಬೇರೆ ಕಾಣಿರಣ್ಣಾ. ಶ್ರೀಗುರುಲಿಂಗದಿಂದಲುದಯಿಸಿ ಪ್ರಾಣಲಿಂಗಸಂಬಂಧಿಗಳಾದ ಮಹಾಲಿಂಗವಂತರಿಗೆ ಪ್ರಾಣಲಿಂಗ, ಕಾಯಲಿಂಗ ಭಕ್ತಕಾಯ ಮಮಕಾಯವಾಗಿ ದೇಹಾದಿ ತತ್ತ್ವವೆಲ್ಲಾ ಶಿವತತ್ತ್ವ. ಇದು ಕಾರಣ, ಸರ್ವಾಂಗಲಿಂಗಮಹಾಮಹಿಮ ಲಿಂಗವಂತರ ಕ್ರೀಯೆಲ್ಲವೂ ಲಿಂಗಕ್ರೀ. ಮುಟ್ಟಿದುದೆಲ್ಲಾ ಅರ್ಪಿತ, ಕೊಂಡುದೆಲ್ಲಾ ಪ್ರಸಾದ. ಸದ್ಯೋನ್ಮುಕ್ತರು, ಸರ್ವಾಂಗಲಿಂಗವಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ತನುಗುಣ ಸಂಕರದಿಂದ ಪ್ರಸಾದಸಂಗ ಕೆಟ್ಟಿತ್ತು. ಮನಗುಣ ಸಂಕರದಿಂದ ಲಿಂಗಸಂಗ ಕೆಟ್ಟಿತ್ತು. ಲೋಭಗುಣ ಸಂಕರದಿಂದ ಜಂಗಮಸಂಗ ಕೆಟ್ಟಿತ್ತು. ಈ ತ್ರಿವಿಧದ ಆಗುಚೇಗೆಯನರಿಯದ ಕಾರಣ ಭವಘೋರ ನರಕಕ್ಕೊಳಗಾದರು,_ ಇದು ಕಾರಣ ಕೂಡಲಚೆನ್ನಸಂಗಯ್ಯಾ, ಈ ತ್ರಿವಿಧದ ಅನುಭವ ಬಲ್ಲ ಬಸವಣ್ಣಂಗೆ ನಮೋ ನಮೋ ನಎಂಬೆಫ
--------------
ಚನ್ನಬಸವಣ್ಣ
ರುಚಿಯನತಿ ರುಚಿಸಿದಲ್ಲಿ ವಿಷವಾಯಿತ್ತು ; ರುಚಿಯು ನಿಜಶಕ್ತಿಯಂತಿರಲು ಅಮೃತವಾಯಿತ್ತು. ಇದು ಕಾರಣ, ಗುರುಭಕ್ತರಿಗೆ ಗುರುಕರುಣವೆ ಸಾಕು; ಅನ್ಯರ ಅನುಭವ, ಅನ್ಯರ ಸಮರಸ ಕಪಿಲಸಿದ್ಧಮಲ್ಲಿಕಾರ್ಜುನನ ಶರಣನಿಗನಿಷ್ಟ ಕೇಳಾ, ಮಡಿವಾಳಯ್ಯಾ.
--------------
ಸಿದ್ಧರಾಮೇಶ್ವರ
ಆಚಾರವಿಚಾರ, ಗುರುವಿಚಾರ, ಲಿಂಗವಿಚಾರ, ಸರ್ವವಿಚಾರ ತಿಳುಹಿದವರು ನೀವೆ. ನುಡಿದಂತೆ ನಡೆವಲ್ಲಿ ಭೇದದ ಅನುಭವ ಮಾಡಿ ಹೇಳುವವರು ನೀವೆ. ಈ ನುಡಿಗಡಣವು ಕಪಿಲಸಿದ್ಧಮಲ್ಲಿಕಾರ್ಜುಲಿಂಗಕ್ಕೆ ಸೊಗಸದು, ಕೇಳಾ ಪ್ರಭುವೆ.
--------------
ಸಿದ್ಧರಾಮೇಶ್ವರ
ಅನುಭವ ಅನುಭವವೆಂಬ ಅಣ್ಣಗಳು ನೀವು ಕೇಳಿರೆ, ಅನುಭವವೆಂಬುದೊಂದು ಎತ್ತು, ಕೆಟ್ಟಿತ್ತು. ಎತ್ತು ಗೇಣುದ್ದ, ಕೊಂಬು ಮೊಳದುದ್ದ. ಕೆಟ್ಟೆಂಟು ದಿನ, ಕಂಡು ಹದಿನಾರುದಿನ ನಿನ್ನೆ ಮೆಟ್ಟಿದ ನಾಟಿಯ ಮೊನ್ನೆ ಮೇವುದ ಕಂಡೆ ಗುಹೇಶ್ವರನೆಂಬ ಎತ್ತು ನಿಮ್ಮೊಳಗೈದಾನೆ; ಅರಸಿಕೊಳ್ಳಿರೊ.
--------------
ಅಲ್ಲಮಪ್ರಭುದೇವರು
-->