ಅಥವಾ

ಒಟ್ಟು 13 ಕಡೆಗಳಲ್ಲಿ , 5 ವಚನಕಾರರು , 13 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇನ್ನು ಮಹೇಶ್ವರನಲ್ಲಿಯ ಷಡ್ವಿಧ ಷಡುಸ್ಥಲಲಿಂಗ ಮಿಶ್ರಾರ್ಪಣವೆಂತೆಂದಡೆ : ಅಪ್ಪುವೆ ಅಂಗವಾದ ಮಾಹೇಶ್ವರನು ಸುಬುದ್ಧಿಯೆಂಬ ಹಸ್ತದಲ್ಲಿ ಗುರುಲಿಂಗಕ್ಕೆ ಜಿಹ್ವೆಯೆಂಬ ಮುಖದಲ್ಲಿ ಓಗರಾದುರು ಚಿದ್ರವ್ಯವ ಸಮರ್ಪಣವಂ ಮಾಡಿ ತೃಪ್ತಿಯನೆ ಭೋಗಿಸುವನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಇನ್ನೊಂದು ಪ್ರಕಾರದ ಷಡ್ಲಿಂಗನ್ಯಾಸಸ್ಥಲವೆಂತೆಂದಡೆ : ಪೃಥ್ವಿಯೇ ಅಂಗವಾದ ಭಕ್ತನ ಸುಚಿತ್ತಹಸ್ತದಲ್ಲಿ ಆಚಾರಲಿಂಗ ನ್ಯಾಸವಾಗಿಹುದು. ಅಪ್ಪುವೆ ಅಂಗವಾದ ಮಹೇಶ್ವರನ ಸುಬುದ್ಧಿಹಸ್ತದಲ್ಲಿ ಗುರುಲಿಂಗ ನ್ಯಾಸವಾಗಿಹುದು. ಅನಲಾಂಗವಾದ ಪ್ರಸಾದಿಯ ನಿರಹಂಕಾರಹಸ್ತದಲ್ಲಿ ಶಿವಲಿಂಗ ನ್ಯಾಸವಾಗಿಹುದು. ವಾಯುವೇ ಅಂಗವಾದ ಪ್ರಾಣಲಿಂಗಿಯ ಸುಮನವೆಂಬ ಹಸ್ತದಲ್ಲಿ ಚರಲಿಂಗ ನ್ಯಾಸವಾಗಿಹುದು. ವ್ಯೋಮಾಂಗವಾದ ಶರಣನ ಸುಜ್ಞಾನಹಸ್ತದಲ್ಲಿ ಪ್ರಸಾದಲಿಂಗ ನ್ಯಾಸವಾಗಿಹುದು. ಆತ್ಮಾಂಗವಾದ ಐಕ್ಯನ ಭಾವಹಸ್ತದಲ್ಲಿ ಮಹಾಲಿಂಗ ನ್ಯಾಸವಾಗಿಹುದು ನೋಡಾ. ಇದಕ್ಕೆ ಈಶ್ವರ್ದೋವಾಚ : ``ಆಚಾರಂ ಚಿತ್ತಹಸ್ತಂ ಚ ಬುದ್ಧಿಹಸ್ತೇ ಗುರುಸ್ತಥಾ | ಶಿವಲಿಂಗಂ ಚ ಅಹಂಕಾರೇ ಚರಲಿಂಗ ಮನೇ ತಥಾ || ಪ್ರಸಾದಂ ಜ್ಞಾನಹಸ್ತೇ ಚ ಭಾವಹಸ್ತೇ ಮಹಸ್ತಥಾ | ಇತಿ ಲಿಂಗಸ್ಥಲಂ ಜ್ಞಾತುಂ ದುರ್ಲಭಂ ಚ ವರಾನನೇ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಪ್ಪುವೆ ಅಂಗವಾದ ಮಹೇಶ್ವರಂಗೆ ಬುದ್ಧಿಯೆ ಹಸ್ತ. ಆ ಹಸ್ತಕ್ಕೆ ಜ್ಞಾನಶಕ್ತಿ , ಆ ಶಕ್ತಿಗೆ ಗುರುಲಿಂಗ, ಆ ಗುರುಲಿಂಗಕ್ಕೆ ಜಿಹ್ವೇಂದ್ರಿಯವೆಂಬ ಮುಖ, ಆ ಮುಖಕ್ಕೆ ಸುರಸವೆ ಪದಾರ್ಥ ; ಆ ಪದಾರ್ಥವನು ಜಿಹ್ವೆಯಲ್ಲಿಹ ಗುರುಲಿಂಗಕ್ಕೆ ನೈಷಿ*ಕಭಕ್ತಿಯಿಂದರ್ಪಿಸಿ, ಆ ಸುರಸ ಪ್ರಸಾದವನು ಪಡೆದು ಸುಖಿಸುವಾತನೇ ಮಹೇಶ್ವರನು ನೋಡಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಶಿಲೆ ಸ್ಥಾವರ ಮುಂತಾದುವಕ್ಕೆ ಅಪ್ಪುವೆ ಬೀಜ. ಸಕಲ ಚೇತನಾದಿ ರೂಪುಗೊಂಡುವಕ್ಕೆ ವಸ್ತುವೆ ಬೀಜ. ಆ ವಸ್ತು ಜಗದ ಹಿತಾರ್ಥ ಪೀಠಸಂಬಂಧಿಯಾಗಿ `ಏಕಮೂರ್ತಿಸ್ತ್ರಯೋ ಭಾಗಾಃ' ಆಗಲಾಗಿ ವರ್ತುಳ ಗುರುವಾಗಿ, ಗೋಮುಖ ಜಂಗಮವಾಗಿ ಗೋಳಕಾಕಾರಮೂರ್ತಿ ಲಿಂಗವಾದ ಕಾರಣ, ಲಿಂಗವಾಯಿತ್ತು. ಇಂತೀ ತ್ರಿವಿಧದೊಳಗೆ ಒಂದ ಮೀರಿ ಒಂದ ಕಂಡೆಹೆನೆಂದಡೆ ಬೀಜವಿಲ್ಲದ ಅಂಕುರ, ಅಂಕುರವಿಲ್ಲದ ಬೀಜ. ಅಂಕುರ ಬೀಜವಿರೆ, ಅಪ್ಪು ಪೃಥ್ವಿ ಸಾಕಾರವಿಲ್ಲದಿರೆ ಅಂಕುರಕ್ಕೆ ದೃಷ್ಟವಿಲ್ಲ. ಕೂಡಲಚೆನ್ನಸಂಗಮದೇವರಿರುತಿರಲಿಕ್ಕೆ ಗುರು-ಲಿಂಗ-ಜಂಗಮವೆಂಬ ಭಾವ ಒಡಲಾಯಿತ್ತು.
--------------
ಚನ್ನಬಸವಣ್ಣ
ಅಪ್ಪುವೆ ಅಂಗವಾದ ಮಹೇಶ್ವರನು ಸುಬುದ್ದಿಯೆಂಬ ಹಸ್ತದಲ್ಲಿ ಗುರುಲಿಂಗಕ್ಕೆ ಜಿಹ್ವೆಯೆಂಬ ಮುಖದಲ್ಲಿ ರಸವ ಸಮರ್ಪಣವ ಮಾಡಿ ತೃಪ್ತಿಯನೆ ಭೋಗಿಸುವನು ನೋಡಾ. ಇದಕ್ಕೆ ಈಶ್ವರೋýವಾಚ : ``ಮಾಹೇಶ್ವರೋ ಜಲಾಂಗಶ್ಚ ಬುದ್ಧಿಹಸ್ತೇನ ಸದ್ಗುರುಃ | ಜಿಹ್ವಾಮುಖೇ ರಸೋ ಭೇದಂ ಅರ್ಪಿತಂ ತೃಪ್ತಿಭೋಕ್ತವಾನ್ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಪ್ಪುವೆ ಅಂಗವಾದ ಮಹೇಶ್ವರನ ಸುಬುದ್ಧಿಹಸ್ತದಲ್ಲಿಹ ಗುರುಲಿಂಗವನು ಕರ್ತೃತ್ವನಾಗಿಯು ತನ್ನ ಜ್ಞಾನಶಕ್ತಿಯ ವೈಭವದಿಂದ ಸಮಸ್ತವಾದ ಉಪದೇಶ ವಿಧಾನ ಶಾಸ್ತ್ರಂಗಳಲ್ಲಿ ಮಾಡಲ್ಪಟ್ಟ ಆಸ್ಪದವನುಳ್ಳುದಾಗಿಯು, ಕಡೆಯಿಲ್ಲದ ಸುಖಸಮುದ್ರವನಾಗಿಯು, ಬುದ್ಧಿತತ್ವದಾಸ್ಥಾನದಲ್ಲಿ ಪ್ರತಿಷಿ*ತನಾಗಿಹ ಗುರುಲಿಂಗವಿಹುದು ನೋಡಾ, ಇದಕ್ಕೆ ಮಹಾವಾತುಲಾಗಮೇ :ವೃತ್ತ - ``ಸ್ವಜ್ಞಾನ ಶಕ್ತಿವಿಭವೋದಿತ ಕರ್ತೃತ್ವಂ | ಸರ್ವೋಪದೇಶವಿದಿತಂ ತತ್ರಕೃತಂ ಪ್ರತಿಷಿ*ತಂ,| ತೇಜೋನಿಧಿಂ ಪರಮಪಾಠ ಸುಖಾಂಬುರಾಸಿ ಬುದ್ಧೇಃ ಪದೇ ವಿನಿಹಿತಂ ಗುರುಲಿಂಗಮಾಹುಃ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಆ ಪ್ರಾಣಲಿಂಗಿಯಲ್ಲಿಯ ಮಾಹೇಶ್ವರಂಗೆ ವಾಯುವಿನಲ್ಲಿಯ ಅಪ್ಪುವೆ ಅಂಗ. ಆ ಅಂಗಕ್ಕೆ ಸುಮನದಲ್ಲಿಯ ಸುಬುದ್ಧಿಯೇ ಹಸ್ತ. ಆ ಹಸ್ತಕ್ಕೆ ಜಂಗಮಲಿಂಗದಲ್ಲಿಯ ಗುರುಲಿಂಗವೆ ಲಿಂಗ. ಆ ಗುರುಲಿಂಗದಮುಖದಲ್ಲಿ ಮೃದುವಾದ ಸ್ಪರ್ಶನದ್ರವ್ಯವನು ಸಮರ್ಪಣವಂ ಮಾಡಿ, ತೃಪ್ತಿಯನೆ ಭೋಗಿಸುವನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಯ್ಯ, ದಂಡಾಕೃತಿ, ಮಕಾರಪ್ರಣಮ, ಘಂಟಾನಾದ, ಸ್ವಾಧಿಷಾ*ನಚಕ್ರ, ಶ್ವೇತವರ್ಣ, ಮಹೇಶ್ವರಸ್ಥಲ, ಸ್ಥೂಲತನು, ಸುಬುದ್ಧಿಹಸ್ತ, ಗುರುಲಿಂಗ, ಜಿಹ್ವೆಮುಖ, ನೈಷಿ*ಕಾಭಕ್ತಿ, ಸುರಸಪದಾರ್ಥ, ಸುರಪ್ರಸಾದ, ವಿಷ್ಣುಪೂಜಾರಿ, ವಿಷ್ಣುವಧಿದೇವತೆ, ಕತೃಸಾದಾಖ್ಯ, ಚಿತ್ತವೆಂಬ ಲಕ್ಷಣ, ಗೂಢವೆಂಬ ಸಂಜ್ಞೆ, ಪಶ್ಚಿಮದಿಕ್ಕು, ಯಜುರ್ವೇದ, ಅಪ್ಪುವೆ ಅಂಗ, ಅಂತರಾತ್ಮ, ಜ್ಞಾನಶಕ್ತಿ, ಪ್ರತಿಷೆ*ಕಲೆ ಇಂತು ಇಪ್ಪತ್ತುನಾಲ್ಕು ಸಕೀಲಂಗಳನೊಳಕೊಂಡು ಎನ್ನ ಸ್ವಾಧಿಷಾ*ನಚಕ್ರವೆಂಬ ಸೇತುಬಂಧಕ್ಷೇತ್ರದಲ್ಲಿ ಮೂರ್ತಿಗೊಂಡಿರ್ದ ಮಂತ್ರಮೂರ್ತಿಸ್ವರೂಪವಾದ ಗುರುಲಿಂಗವೆ ರಾಮೇಶ್ವರಲಿಂಗವೆಂದು ತನುತ್ರಯವ ಮಡಿಮಾಡಿ, ಪರಿಣಾಮವೆಂಬ ಜಲದಿಂ ಮಜ್ಜನಕ್ಕೆರದು, ಅಪ್ಪು ನಿವೃತ್ತಿಯಾದ ಗಂಧವ ಧರಿಸಿ, ಬುದ್ಧಿ ಸುಬುದ್ಧಿಯಾದಕ್ಷತೆಯನಿಟ್ಟು, ಅಲ್ಲಿಹ ಷಡ್ದಳಂಗಳನೆ ಪುಷ್ಪದ ಮಾಲೆಯೆಂದು ಧರಿಸಿ, ಅಲ್ಲಿಹ ಕಮಲಸದ್ವಾಸನೆಯ ಧೂಪವ ಬೀಸಿ, ಅಲ್ಲಿಹ ಶ್ವೇತವರ್ಣವೆ ಕರ್ಪೂರದ ಜ್ಯೋತಿಯೆಂದು ಬೆಳಗಿ, ಅಲ್ಲಿಹ ಸ್ವಪ್ನಾವಸ್ಥೆಯೆಂಬ ನವೀನ ವಸ್ತ್ರವ ಹೊದ್ದಿಸಿ, ನಿಃಕ್ರೋಧವೆಂಬಾಭರಣವ ತೊಡಿಸಿ, ಸುರುಚಿಯೆಂಬ ನೈವೇದ್ಯವನರ್ಪಿಸಿ, ನೈಷೆ*ಯೆಂಬ ತಾಂಬೂಲವನಿತ್ತು. ಇಂತು ಗುರುಲಿಂಗಕ್ಕೆ ಅಷ್ಟವಿಧಾರ್ಚನೆಯಂ ಮಾಡಿ, ಕೋಟಿ ಸೂರ್ಯನ ಪ್ರಭೆಯಂತೆ ಬೆಳಗುವ ಗುರುಲಿಂಗಮೂರ್ತಿಯನ್ನು ಕಂಗಳು ತುಂಬಿ ನೋಡಿ, ಮನದಲ್ಲಿ ಸಂತೋಷಂಗೊಂಡು ಆ ಗುರುಲಿಂಗ ಪೂಜೆಯ ಸಮಾಪ್ತವ ಮಾಡಿ ಓಂ ಮಂ ಮಂ ಮಂ ಮಂ ಮಂ ಮಂ ಎಂಬ ಮಕಾರ ಷಡ್ವಿಧಮಂತ್ರಂಗಳಿಂದೆ ನಮಸ್ಕರಿಸಿ, ಆ ಲಿಂಗವೆ ತಾನೆಂದರಿದು ಕೂಡಿ ಎರಡಳಿದು ನಿಶ್ಚಿಂತದಿಂದ ಬೆರಸಬಲ್ಲಾತನೆ ನೈಷಾ*ಭಕ್ತಿಯನುಳ್ಳ ವೀರಮಾಹೇಶ್ವರ ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಆ ಪ್ರಸಾದಿಯಲ್ಲಿಯ ಮಾಹೇಶ್ವರಂಗೆ ಅಗ್ನಿಯಲ್ಲಿಯ ಅಪ್ಪುವೆ ಅಂಗ. ಆ ಅಂಗಕ್ಕೆ ನಿರಹಂಕಾರದಲ್ಲಿಯ ಸುಬುದ್ಧಿಯೇ ಹಸ್ತ. ಆ ಹಸ್ತಕ್ಕೆ ಶಿವಲಿಂಗದಲ್ಲಿಯ ಗುರುಲಿಂಗವೆ ಲಿಂಗ. ಆ ಗುರುಲಿಂಗಮುಖದಲ್ಲಿ ಶ್ವೇತವರ್ಣವಾದ ರೂಪದ್ರವ್ಯವನು ಸಮರ್ಪಣವಂ ಮಾಡಿ ತೃಪ್ತಿಯನೆ ಭೋಗಿಸುವನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಪೃಥ್ವಿ ಅಡಗುವುದಕ್ಕೆ ಅಪ್ಪುವೆ ಆಶ್ರಯವಾಗಿರ್ಪುದು. ಆ ಅಪ್ಪು ಅಡಗುವುದಕ್ಕೆ ಅಗ್ನಿಯೆ ಆಶ್ರಯವಾಗಿರ್ಪುದು. ಆ ಅಗ್ನಿ ಅಡಗುವುದಕ್ಕೆ ವಾಯುವೆ ಆಶ್ರಯವಾಗಿರ್ಪುದು. ಆ ವಾಯು ಅಡಗುವುದಕ್ಕೆ ಆಕಾಶವೆ ಆಶ್ರಯವಾಗಿರ್ಪುದು. ಆ ಆಕಾಶ ಅಡಗುವುದಕ್ಕೆ ಆತ್ಮವೆ ಆಶ್ರಯವಾಗಿರ್ಪುದು. ಆ ಆತ್ಮ ಅಡಗುವುದಕ್ಕೆ ಆದಿಯೆ ಆಶ್ರಯವಾಗಿರ್ಪುದು. ಆ ಆದಿ ಅಡಗುವುದಕ್ಕೆ ಅನಾದಿಯೆ ಆಶ್ರಯವಾಗಿರ್ಪುದು. ಆ ಅನಾದಿ ಅಡಗುವುದಕ್ಕೆ ಶೂನ್ಯವೆ ಆಶ್ರಯವಾಗಿರ್ಪುದು. ಆ ಶೂನ್ಯ ಅಡಗುವುದಕ್ಕೆ ನಿರವಯವೆ ಆಶ್ರಯವಾಗಿರ್ಪುದು. ಆ ನಿರವಯ ಅಡಗುವುದಕ್ಕೆ ನಿಜವೆ ಆಶ್ರಯವಾಗಿರ್ಪುದು. ಆ ನಿಜ ಅಡಗುವುದಕ್ಕೆ ಅಖಂಡೇಶ್ವರಾ, ನಿಮ್ಮ ಶರಣನ ಪರಮ ಹೃದಯಕಮಲವೆ ಆಶ್ರಯವಾಗಿರ್ಪುದಯ್ಯಾ.
--------------
ಷಣ್ಮುಖಸ್ವಾಮಿ
ಸಕಲ ಗಂಧಕ್ಕೆ ವಾಯುವೆ ಬೀಜ, ಸಕಲ ಉತ್ಪತ್ಯಕ್ಕೆ ಅಪ್ಪುವೆ ಬೀಜ. ಸಕಲ ಪ್ರಕೃತಿಗೆ ಜೀವವೆ ಬೀಜ. ಇಂತೀ ಭೇದವನರಿತಲ್ಲಿ, ಆತ್ಮನ ವಿವರ ಹೆರೆಹಿಂಗಿದಲ್ಲದೆ, ನಿಜತತ್ವ ಪರಮನಲ್ಲ. ಪರಮ ಪರತತ್ವವ ಕೂಡಿ ಬೆರಸಿದಲ್ಲಿ, ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವು ಸ್ವಯಂಭುವಾದ.
--------------
ಶಿವಲೆಂಕ ಮಂಚಣ್ಣ
ಭಕ್ತ ಮಹೇಶ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯ ಎಂದಿಂತು ಷಟ್‍ಸ್ಥಲವಾರು: ಭಕ್ತ ಮಹೇಶ ಈ ಎರಡು ಗುರುಸ್ಥಲ; ಪ್ರಸಾದಿ ಪ್ರಾಣಲಿಂಗಿ ಈ ಎರಡು ಲಿಂಗಸ್ಥಲ; ಶರಣ ಐಕ್ಯ ಈ ಎರಡು ಜಂಗಮಸ್ಥಲ. ಇವಕ್ಕೆ ಅಂಗಂಗಳಾವವೆಂದಡೆ: ಭಕ್ತಂಗೆ ಪೃಥ್ವಿಯೆ ಅಂಗ, ಮಹೇಶ್ವರಂಗೆ ಅಪ್ಪುವೆ ಅಂಗ, ಪ್ರಸಾದಿಗೆ ಅಗ್ನಿಯೆ ಅಂಗ, ಪ್ರಾಣಲಿಂಗಿಗೆ ವಾಯುವೆ ಅಂಗ, ಶರಣಂಗೆ ಆಕಾಶವೆ ಅಂಗ, ಐಕ್ಯಂಗೆ ಆತ್ಮವೆ ಅಂಗ. ಈ ಅಂಗಂಗಳಿಗೆ ಹಸ್ತಂಗಳಾವವೆಂದಡೆ: ಭಕ್ತಂಗೆ ಸುಚಿತ್ತವೆ ಹಸ್ತ, ಮಹೇಶ್ವರಂಗೆ ಸುಬುದ್ಧಿಯೆ ಹಸ್ತ, ಪ್ರಸಾದಿಗೆ ನಿರಹಂಕಾರವೆ ಹಸ್ತ, ಪ್ರಾಣಲಿಂಗಿಗೆ ಸುಮನವೆ ಹಸ್ತ, ಶರಣಂಗೆ ಸುಜ್ಞಾನವೆ ಹಸ್ತ, ಐಕ್ಯಂಗೆ ಸದ್ಭಾವವೆ ಹಸ್ತ. ಈ ಹಸ್ತಂಗಳಿಗೆ ಲಿಂಗಂಗಳಾವವೆಂದಡೆ: ಸುಚಿತ್ತಹಸ್ತಕ್ಕೆ ಆಚಾರಲಿಂಗ ಸುಬುದ್ಧಿಹಸ್ತಕ್ಕೆ ಗುರುಲಿಂಗ, ನಿರಹಂಕಾರಹಸ್ತಕ್ಕೆ ಶಿವಲಿಂಗ, ಸುಮನಹಸ್ತಕ್ಕೆ ಚರಲಿಂಗ, ಸುಜ್ಞಾನ ಹಸ್ತಕ್ಕೆ ಪ್ರಸಾದಲಿಂಗ, ಸದ್ಭಾವಹಸ್ತಕ್ಕೆ ಮಹಾಲಿಂಗ, ಈ ಲಿಂಗಂಗಳಿಗೆ ಮುಖಂಗಳಾವವೆಂದಡೆ: ಆಚಾರಲಿಂಗಕ್ಕೆ ಘ್ರಾಣ, ಗುರುಲಿಂಗಕ್ಕೆ ಜಿಹ್ವೆ, ಶಿವಲಿಂಗಕ್ಕೆ ನೇತ್ರ, ಚರಲಿಂಗಕ್ಕೆ ತ್ವಕ್ಕು, ಪ್ರಸಾದಲಿಂಗಕ್ಕೆ ಶ್ರೋತ್ರ, ಮಹಾಲಿಂಗಕ್ಕೆ ನಿರ್ಭಾವ. ಈ ಮುಖಂಗಳಿಗೆ ಅರ್ಪಿತಂಗಳಾವವೆಂದಡೆ: ಘ್ರಾಣಕ್ಕೆ ಗಂಧ, ಜಿಹ್ವೆಗೆ ರುಚಿ, ನೇತ್ರಕ್ಕೆ ರೂಪು, ತ್ವಕ್ಕಿಗೆ ಸ್ಪರ್ಶನ, ಶ್ರೋತ್ರಕ್ಕೆ ಶಬ್ದ, ನಿರ್ಭಾವಕ್ಕೆ ನಿರ್ವಯಲು. ಇಂತೀ ಸರ್ವೇಂದ್ರಿಯ ಸಮ್ಮತ ನಿರ್ವಿಕಲ್ಪ ಮಹಾಲಿಂಗಾಂಗಭಾವದ ಸುಚಿತ್ತಲೇಪಗ್ರಾಹಕ ಭಕ್ತ ಗುರುಲಿಂಗವಾದ. ಗುರುಲಿಂಗಾಂಗ ಸುಬುದ್ಧಿಲೇಪಗ್ರಾಹಕ ಮಹೇಶ್ವರ ಶಿವಲಿಂಗವಾದ. ಶಿವಲಿಂಗಾಂಗ ನಿರಹಂಕಾರಲೇಪಗ್ರಾಹಕ ಪ್ರಸಾದಿ ಜಂಗಮಲಿಂಗವಾದ. ಜಂಗಮಲಿಂಗಾಂಗ ಸುಮನಲೇಪಗ್ರಾಹಕ ಶರಣ ಮಹಾಲಿಂಗವಾದ. ಪ್ರಸಾದಲಿಂಗಾಂಗ ಸುಜ್ಞಾನಲೇಪಗ್ರಾಹಕ ಐಕ್ಯ ಅಭೇದಾನಂದ ಪರಿಪೂರ್ಣಮಯವಾದ. `ನಿಶ್ಶಬ್ದಂ ಬ್ರಹ್ಮ ಉಚ್ಯತೇ' ಎಂಬ ಶ್ರುತಿಯ ಮೀರಿ ನಿಂದ ಅಖಂಡಮಹಿಮಂಗೆ, ಸುನಾದಯುಕ್ತಂಗೆ ಶಬ್ದ ನಷ್ಟವಾದಲ್ಲಿ_ ಆಚಾರಲಿಂಗವಿಲ್ಲ ಭಕ್ತಂಗೆ, ಗುರುಲಿಂಗವಿಲ್ಲ ಮಹೇಶ್ವರಂಗೆ, ಶಿವಲಿಂಗವಿಲ್ಲ ಪ್ರಸಾದಿಗೆ, ಚರಲಿಂಗವಿಲ್ಲ ಪ್ರಾಣಲಿಂಗಿಗೆ, ಪ್ರಸಾದಲಿಂಗವಿಲ್ಲ ಶರಣಂಗೆ, ಜಡದೇಹ ಧರ್ಮ ಭಾವವಿಲ್ಲ ಐಕ್ಯಂಗೆ. ಇದು ಕಾರಣ, ಕೂಡಲಚೆನ್ನಸಂಗಯ್ಯಾ, ನಿಮ್ಮ ಷಟ್‍ಸ್ಥಲದ ಪರಿಯಾಯವ ನೀವೆ ಬಲ್ಲಿರಿ. ಉಳಿದ ಅಜ್ಞಾನಿಜೀವಿಗಳೆತ್ತ ಬಲ್ಲರು ?
--------------
ಚನ್ನಬಸವಣ್ಣ
ಮಾಹೇಶ್ವರಂಗೆ ಅಪ್ಪುವೆ ಅಂಗ, ಆ ಅಂಗಕ್ಕೆ ಸುಬುದ್ಧಿಯೆ ಹಸ್ತ ಆ ಹಸ್ತಕ್ಕೆ ಕರ್ತೃಸಾದಾಖ್ಯ, ಆ ಸಾದಾಖ್ಯಕ್ಕೆ ಜ್ಞಾನಶಕ್ತಿ, ಆ ಶಕ್ತಿಗೆ ಗುರುಲಿಂಗ, ಆ ಲಿಂಗಕ್ಕೆ ಪ್ರತಿಷೆ*ಯೆ ಕಳೆ, ಆ ಕಳೆಗೆ ಜಿಹ್ವೇಂದ್ರಿಯವೆ ಮುಖವು, ಆ ಮುಖಕ್ಕೆ ಸುರಸದ್ರವ್ಯಂಗಳ ರೂಪು-ರುಚಿ-ತೃಪ್ತಿಯನರಿದು ನೈಷಿ*ಕ ಭಕ್ತಿಯಿಂದರ್ಪಿಸಿ, ಸುಪ್ರಸಾದವ ಭೋಗಿಸಿ ಸುಖಿಸುತ್ತಿಹೆನು ಕೂಡಲಚೆನ್ನಸಂಗಾ ನಿಮ್ಮ ಮಾಹೇಶ್ವರ
--------------
ಚನ್ನಬಸವಣ್ಣ
-->