ಅಷ್ಟೋತ್ತರಶತವ್ಯಾಧಿಗಳ ಧರಿಸಿಕೊಂಡಿಪ್ಪುದು ಆತ್ಮನೊ, ಘಟನೊ ?
ಆತ್ಮನೆಂದಡೆ ಸಾಯದು ಚಿತ್ತ ,
ಘಟವೆಂದಡೆ ಆತ್ಮನಿಲ್ಲದೆ ಅರಿಯದು ದೇಹ.
ಇಂತೀ ಒಂದ ಕಳೆದು, ಒಂದಕ್ಕೆ ಔಷಧಿಯ ಕೊಟ್ಟಿಹನೆಂದಡೆ,
ಆ ಎರಡರ ಸಂಗದಿಂದ ರುಜೆ ಪ್ರಮಾಣು.
ಇಂತೀ ಶರೀರಾತ್ಮ ಆದಿಯಾಗಿ ಬಂದ ವ್ಯಾಧಿಗೆ
ನಾನೊಂದು ಔಷಧಿಯ ಭೇದವ ಹೇಳಿಹೆ.
ಆಧಾರದಲ್ಲಿಪ್ಪ, ಮೂಲಿಕೆಯ ಬೇರನರದು, ಐದಿಂದ್ರಿಯವ ಕೂಡಿಕೊಂಡು.
ಮೂರು ಮುಟ್ಟದ ತಟ್ಟೆಯಲ್ಲಿ ಬೇಗ ತೆಗೆದುಕೊಳ್ಳಿ.
ಆ ಮದು ವಾಂತಿಗೆ ಸಲ್ಲ, ವಿರೋಚನವಿಲ್ಲ.
ನಾನಾ ವೈದ್ಯರ ಭೇದಗಾಹಿನ ಕ್ರಮವಲ್ಲ.
ಇದು ಸಿದ್ಧಾಂತ ಮೂಲಿಕೆ, ಇದ ಸಾಧಿಸಿಕೊಳ್ಳಿ.
ಎಂದೆಂದಿಗೂ ರುಜೆಯಿಲ್ಲ, ಸಂದುಸಂಶಯವಿಲ್ಲ,
ಮರುಳಶಂಕರಪ್ರಿಯ ಸಿದ್ಧರಾಮೇಶ್ವರಲಿಂಗದಲ್ಲಿ.