ಅಥವಾ

ಒಟ್ಟು 26 ಕಡೆಗಳಲ್ಲಿ , 15 ವಚನಕಾರರು , 26 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕ್ರೀವಿಡಿದು ಗುರುಸಂಬಂದ್ಥಿಯಾಗಿ, ಜಾÕನವಿಡಿದು ಲಿಂಗಸಂಬಂದ್ಥಿಯಾಗಿ. ಘನವಿಡಿದು ಮಹಾಜಾÕನಿಯಾಗಿ, ಅರಿವು ಆಚರಣೆಯ ಕಂಡು, ಜಾÕನ ಮುಕುರವೆಂಬ ಮುಂದಣ ಶ್ರೀಸಂಬಂದ್ಥಿಯಾಗಿ, ಆಚಾರದಲ್ಲಿ ಸಂಪನ್ನನಾಗಿ, ಮಹೇಶ್ವರಸ್ಥಲವನರಿದು, ಅದೇ ಜಂಗಮವಾದ ಬಳಿಕ ನಿರಾಕುಳನಾಗಿ ಆಚರಿಸಿದರೆ ಅನಾದಿ ಜಂಗಮವೆಂಬೆ. ಸಾಮವೇದೇ- ವಿವಚಾಸೋವಿಚಾ ಲಿಂಗಾಲಿಂಗಿ ಚ ಫಲಾದಿ ಬ್ರಹ್ಮರಾಕ್ಷಸ ಸೋವಿಸಂಗಶ್ಚ | ಸೂಕರ ಶತಕೋಟಿ ಜನ್ಮ ಚ ಸೋಪಿ ಕ್ರೀಡಾಲಿಂಗ ಮಲಮೂತ್ರ ಮಾಂಸ ಭುಂಜಿತಃ | ಬ್ರಹ್ಮೇನ ಕೋಟಿ ರಾಕ್ಷಸಃ ಸೋಸಂಗೇನ ಶತಕೋಟಿಗಾರ್ದಭ ಜನ್ಮ ಚ | ಅದೇ ದಾಸಿ ದಾಸೇ ಸೂಕರ ಸಂಗಶಃ ಚ ನಾಃ | ಸೋವ ಮಾತ್ರವೆಂದು ತಂದ ಸ್ತ್ರೀಗಳನು ಶಿಷ್ಯಾದಿ ಪುತ್ರರ ಕೈಯ ಗುರು ತಾಯಿ ಎಂಬ ನಾಮಕರಣಂಗಳನುಂಟುಮಾಡಿ, ತನ್ನ ಅಂಗವಿಕಾರಕ್ಕೆ ತಂದ ಸಂತೆಯ ಡೊಂಬಿತಿಯ ತಂದು, ಹಿರಿಯರಲ್ಲಿ ಸರಿಮಾಡುವ ಜಂಗಮವೆ ಗುರುವೆ? ಅಜಾÕನ ಪುರುಷನಲ್ಲ, ಅವ ಹಿರಿಯತನಕ್ಕೆ ಸಲ್ಲ, ಅವಂಗೆ ಗುರುವಿಲ್ಲ ಲಿಂಗವಿಲ್ಲ, ಜಂಗಮ ಮುನ್ನವೆಯಿಲ್ಲ. ಅವ ಘಟಾತ್ಮನು ಸೋವಿಯ ಸಂಗ ಬೇಡ ಬಿಡಿರಣ್ಣಾ, ಸೋವಿಯ ಸಂಗವ ಮಾಡಿದರೆ ಶತಕೋಟಿ ದಾಸಿಯ ಬಸುರಲ್ಲಿ ಬಂದು, ಹೇಸಿಕೆಯಿಲ್ಲದೆ ಮಲಮೂತ್ರವನು ಹೇಗೆ ಸೂಕರ ಭುಂಜಿಸುವುದೊ ಹಾಂಗೆ ಭುಂಜಿಪನು. ನಾನಾ ಯೋನಿಯ ನರಕುವದು. ಸೋವಿ ಮಾತ್ರೇಣ ಆ ಲಿಂಗನಂ ಗುರು ತಾಯ ಅಪಮಾನ ಸಾಮಾನ್ಯವೆಂದು ಸೋವಿಯ ಸಂಗವ ಮಾಡಿದಡೆ ಎಪ್ಪತ್ತೇಳುಕೋಟಿ ಶ್ವಪಚಯೋನಿ ತಪ್ಪದಯ್ಯ. ಹನ್ನೆರಡು ಕಂಬ ಸಾಕ್ಷಿಯಾಗಿ, ಕಳಕನ್ನಡಿ ಸಾಕ್ಷಿಯಾಗಿ, ತೆಳೆಮಲು ಕಟ್ಟಿ ಸಾಕ್ಷಿಯಾಗಿ, ಆಯಿರಣೆಕೋಲು ಸಾಕ್ಷಿಯಾಗಿ, ಮುತ್ತೈದೆತನದಲ್ಲಿ ಶ್ರೇಷ್ಠಯಾಗಿ, ಜಾÕನ ದೃಕ್ಕಿನಿಂ ತಿಳಿದು, ಅನುಭಾವದ ಮುಖವನರಿದಂತೆ, ಆ ಜಾÕನನೇತ್ರವ ಅರಿದು ಧಾರೆಯನೆರೆಸಿಕೊಂಡು, ಅರಿವಿನಲ್ಲಿ ಇರದೆ ಕುರಿಯ ಹೇಲ ತಿಂಬಂತೆ, ಬಾಯಿಗೆ ಬಂದಂತೆ ಸೋವಿಯ ಸಂಗವ ಮಾಡುವವರ ಸರ್ವಾಂಗವೆಲ್ಲ ಗಣಿಕೆಯ ಯೋನಿಯ ಬಸುರ ನೋಡಾ. ಧಾರೆಯನೆರೆಸಿಕೊಂಡು ಕ್ರೀವಿಡಿದು ನಡೆಯದೆ, ತೊತ್ತಿನ ಮಗನಿಗೆ ಪಟ್ಟ ಕಟ್ಟಿದರೆ ಹಾದಿಯ ಎಲುವ ಕಂಡು ಓಡಿಹೋಗಿ ಗಡಗಡನೆ ಕಡಿವಂತೆ, ಸೋವಿಯ ಎಂಜಲ ತಿಂದವಂಗೆ ಗುರುವಿಲ್ಲ. ಅವ ದೇವಲೋಕ ಮತ್ರ್ಯಲೋಕ ಎರಡಕ್ಕೆ ಸಲ್ಲ. ಆವಾಗಮದಲ್ಲಿ ಉಂಟು, ಗಳಹಿ ಹೇಳಿರೊ, ಮಕ್ಕಳಿರಾ. ನೀವು ಬಲ್ಲರೆ ಕಾಳನಾಯ ಹೇಲ ತಿಂಬಂಗೆ ಹಿರಿಯನೆಂದು, ಹೋತನಂತೆ ಗಡ್ಡವ ಬೆಳಸಿಕೊಂಡು ಗುಡರಗುಮ್ಮನಂತೆ ಸುಮ್ಮನಿರುವಿರಿ. ಗರ್ವತನಕ್ಕೆ ಬಂದು ಹಿರಿಯರೆಂದು ಆಚರಣೆ ನ್ಯಾಯವ ಬಗಳುವಿರಿ. ಸೋವಿಸಂಗದಿಂದ ಕನಿಷ್ಠ ನರಕ ಕಾಣಿರಣ್ಣಾ. ಸೋವಿಯ ಸಂಗವ ಬಿಟ್ಟು ಧಾರೆಯ ಸ್ತ್ರೀಯಳ ನೆರದರೆ, ಆಚಾರವಿಡಿದು ನಡೆದು ಆಚರಣೆಯ ನುಡಿದರೆ ಶುದ್ಧವಾಗುವದಲ್ಲದೆ ತೊತ್ತಿನ ಮಗನಾಗಿ ಎಡೆಯ ಸಮಗಡಣವ ಬೇಡುವ ಪಾತಕರ, ಅವರ ಜಂಗಮವೆಂಬೆನೆ? ಸೋವಿಯ ಸಂಗದಿಂದ ಬಂದುದು ಬ್ರಹ್ಮೇತಿ. ಅಥರ್ವಣ ಸಾಮವೇದ ಯಜುರ್ವೇದ ಋಗ್ವೇದ ಇಂತಪ್ಪ ನಾಲ್ಕು ವೇದದಲ್ಲಿ ಶ್ರುತಿ ಸ್ಮøತಿಗಳಲ್ಲಿ ಆಗಮ ಪುರಾಣಂಗಳಲ್ಲಿ ಸೋವಿಯ ವಾಚ್ಯವೆಂಬುದುಂಟೆ ಪರಮಪಾತಕರಿರಾ? ನೂತನವ ಗಂಟಿಕ್ಕಿ ಜಗಲಿಯೆನ್ನದೆ ಪಟ್ಟಶಾಲೆಯೆಂಬಿಂ ತೊಂಡರಿರಾ. ತೊತ್ತನೊಯ್ದು ತೊತ್ತೆದಾಸಿ ಬಾಯೆನ್ನದೆ ಹೋವಿಯೆಂದು ಬಗಳುವಿರಿ. ಕಲಿಯುಗದಲ್ಲಿ ನೂತನದ ಸೂಳೆಯ ಮಕ್ಕಳು ನೀವು. ಸೋವಿಯ ಸಂಗವ ಮಾಡಿದವನು ಅರಿವುಳ್ಳ ಪುರುಷನಾದರೂ ಆಗಲಿ, ಅರಿದು ಮತ್ತೆ ಅರೆಮರುಳಾದ ಹಿರಿಯರನೇನೆಂಬೆನಯ್ಯಾ. ಅವನು ಪಾತಕನಘೋರಿಗಳು. ಅವರು ಇವರುವನರಿಯದ ಅಘೋರಿಗಳೆಂಬ ಇಂತಪ್ಪ ಸೋವಿಯ ಸಂಗವ ಮಾಡುವ ಬ್ರಹ್ಮೇತಿಕಾರ ಪಂಚಮಹಾಪಾತಕರು ಇಹಪರಕ್ಕೆ ಸಲ್ಲರೆಂದುದು. ನಿಮ್ಮಾಣೆ ನಿಮ್ಮ ಪ್ರಮಥರಾಣೆ, ಇಹವಿಲ್ಲ ಪರವಿಲ್ಲ, ಮುಕ್ತಿಯ ಫಲವಿಲ್ಲ, ಅಘೋರವಲ್ಲದೆ ಮತ್ತೇನೂ ಇಲ್ಲ. ನಿಮ್ಮಾಣೆ ಬ್ಥೀಮಬಂಕೇಶ್ವರಾ.
--------------
ಭೀಮಬಂಕೇಶ್ವರ
ಕುರುಹಿನ ಕುರುಹಿನಲ್ಲಿ, ಅರಿವಿನ ಅರಿವಿನಲ್ಲಿ ಜ್ಞಾನದ ಜ್ಞಾನದಲ್ಲಿ ಇಂತೀ ಸಲೆಸಂದ ಭೇದಂಗಳಲ್ಲಿ ನಿಂದು ನೋಡು. ಏಣಾಂಕಧರ ಸೋಮೇಶ್ವರಲಿಂಗದಲ್ಲಿ ಅರಿವಿನ ಅರಿವು, ಬೆಳಗಾಯಿತ್ತು.
--------------
ಬಿಬ್ಬಿ ಬಾಚಯ್ಯ
ಅಯ್ಯಾ, ಎನ್ನ ಕಾಯದಲ್ಲಿ ಮಡಿವಾಳನ ತೋರಿದ, ಎನ್ನ ಮನದಲ್ಲಿ ತನ್ನ ನಿಲವ ತೋರಿದ, ಎನ್ನ ಅರಿವಿನಲ್ಲಿ ನಿಮ್ಮ ತೋರಿದ, ಇಂತೀ ತ್ರಿವಿಧಸ್ವಾಯತವನು ಎನ್ನ ಸರ್ವಾಂಗದಲ್ಲಿ ಪ್ರತಿಷ್ಠಿಸಿ ತೋರಿದ. ಕೂಡಲಸಂಗಮದೇವಯ್ಯಾ, ಚೆನ್ನಬಸವಣ್ಣನ ಕರುಣದಿಂದ ಮಡಿವಾಳನೆಂಬ ಪರುಷ ಸಾಧ್ಯವಾಯಿತ್ತೆನಗೆ.
--------------
ಬಸವಣ್ಣ
ತ್ರಿದೋಷದ ಗುಣದಿಂದ ನಾನಾ ಬಹುತಾಪತ್ರಯದ ವ್ಯಾದ್ಥಿಯ ಚಿಕಿತ್ಸೆಯನಾರು ಅರಿಯರಲ್ಲಾ ! ತನುವಿಂಗೆ ವಾತ, ಪೈತ್ಯ, ಶ್ಲೇಷ್ಮ , ಆತ್ಮಂಗೆ ಆಣವ, ಮಾಯಾ, ಕಾರ್ಮಿಕ. ಇಂತೀ ತ್ರಿವಿಧ ಮಲತ್ರಯದ ರೋಗರುಜೆಯಡಸಿ, ಬಂಧನದಲ್ಲಿ ಸಾವುತ್ತಿದೆ ಅಂಗ. ಈ ರೋಗ ನಿರೋಗವಹುದಕ್ಕೆ ನಾ ಮೂರು ಬೇರ ತಂದೆ. ಒಂದ ಅಂಗದಲ್ಲಿ ಮರ್ದಿಸಿ, ಒಂದು ಆತ್ಮನಲ್ಲಿ ಮಥನಿಸಿ, ಒಂದ ಅರಿವಿನಲ್ಲಿ ಪಾನವ ಮಾಡಿ, ಈ ರೋಗ ಹರಿವುದು. ಇದಕ್ಕನುಪಾನ ಇದಿರೆಡೆಯಿಲ್ಲ , ಮರುಳಶಂಕರಪ್ರಿಯ ಸಿದ್ಧರಾಮೇಶ್ವರಲಿಂಗ ಸಾಕ್ಷಿಯಾಗಿ.
--------------
ವೈದ್ಯ ಸಂಗಣ್ಣ
ಮೊದಲು ಬೀಜ ಬಲಿದು, ಕಡೆಯಲ್ಲಿ ಬೀಜ ಅಳಿದಲ್ಲದೆ ಅಂಕುರವಾಗದು. ಕ್ರೀಯಲ್ಲಿ ಆಚರಿಸಿ, ಅರಿವಿನಲ್ಲಿ ವಿಶ್ರಮಿಸಿ, ತುರೀಯ ಆತುರ ಸಮನವೆಂಬ ತ್ರಿವಿಧ ಲೇಪವಾಗಿ ಕಂಡ ಉಳುಮೆ, ಅರ್ಕೇಶ್ವರಲಿಂಗನ ಅರಿಕೆ.
--------------
ಮಧುವಯ್ಯ
ತನುವಿನಲ್ಲಿ ಹೊರೆಯಿಲ್ಲ, ಮನದಲ್ಲಿ ವ್ಯಾಕುಳವಿಲ್ಲ. ಭಾವದಲ್ಲಿ ಬಯಕೆಯಿಲ್ಲ, ಅರಿವಿನಲ್ಲಿ ವಿಚಾರವಿಲ್ಲ. ನಿಜದಲ್ಲಿ ಅವಧಾನವಿಲ್ಲ. ನಿರ್ಲೇಪಸಂಗದಲ್ಲಿ ಬಿಚ್ಚಿ ಬೇರಾಗಲಿಲ್ಲ. ಕಲಿದೇವರದೇವಾ, ನಿಮ್ಮಲ್ಲಿ ಬೆರೆಸಿ ಬೇರಿಲ್ಲದಿರ್ದೆನು.
--------------
ಮಡಿವಾಳ ಮಾಚಿದೇವ
ಅಂಗದ ಕಳೆ ಲಿಂಗದಲ್ಲಿ ಅರತ ಬಳಿಕ, ಅಂಗವೆಂಬ ಶಂಕೆಯಿಲ್ಲ ನೋಡಾ ಶರಣಂಗೆ. ಪ್ರಾಣದ ಕಳೆ ಅರಿವಿನಲ್ಲಿ ಅರತ ಬಳಿಕ, ಶಬ್ದಸಂದಣಿಗೆ ಹಂಗಿಲ್ಲ ನೋಡಾ. ಶರಣ ನಡೆದಡೆ ನಿರ್ಗಮನಿ ನುಡಿದಡೆ ನಿಶ್ಶಬ್ದಿ ! ಗುಹೇಶ್ವರನ ಶರಣಂಗೆ ಕುರುಹಿಲ್ಲ ಕೇಳಾ ಎಲೆ ಅವ್ವಾ.
--------------
ಅಲ್ಲಮಪ್ರಭುದೇವರು
ಅಂಗಭವಿ, ಭಕ್ತಂಗೆ ಮನಭವಿ ಮಹೇಶ್ವರಂಗೆ. ರುಚಿಭವಿ ಪ್ರಸಾದಿಗೆ, ಕುರುಹುಭವಿ ಪ್ರಾಣಲಿಂಗಿಗೆ. ತ್ರಿವಿಧನಾಮಭವಿ ಶರಣಂಗೆ, ಕೂಟಸ್ಥಭವಿ ಐಕ್ಕಂಗೆ. ಇಂತೀ ಸ್ಥಲಂಗಳಲ್ಲಿ, ಕುರುಹ ಕುರುಹಿನಲ್ಲಿ ಕಂಡು, ಅರಿವ ಅರಿವಿನಲ್ಲಿ ತಿಳಿದು, ಐಕ್ಯ ಐಕ್ಯನಾದ ಮತ್ತೆ, ಅದು ಕಲ್ಲಿನೊಳಗಣ ಬೆಳಗು, ಮುತ್ತಿನೊಳಗಣ ಅಪ್ಪು, ಕರ್ಪುರದೊಳಗಣ ಉರಿಯಂತೆ, ದೃಷ್ಟವಿದ್ದು ನಿಃಪತಿಯಾಗಬೇಕು, ನಿಃಕಳಂಕ ಮಲ್ಲಿಕಾರ್ಜುನಾ
--------------
ಮೋಳಿಗೆ ಮಾರಯ್ಯ
ಅರಿವಿನಲ್ಲಿ ಉದಯಿಸಿ ಮರಹು ನಷ್ಟವಾಗಿರ್ದ ಶರಣನ ಪರಿಯನರಸಲುಂಟೆ ? ಗತಿಯ ಹೇಳಲುಂಟೆ ? ಶಿಶು ಕಂಡ ಕನಸಿನಂತಿಪ್ಪರು ಗುಹೇಶ್ವರಾ ನಿಮ್ಮ ಶರಣರು !
--------------
ಅಲ್ಲಮಪ್ರಭುದೇವರು
ಕಾಯಕರ್ಮವ ಅನುಭವಿಸುತ್ತ ಮತ್ತೆ , ದಿವ್ಯಜ್ಞಾನದ ಮಾತದೇತಕ್ಕೆ ? ವಾಗ್ವಾದಕ್ಕೂ ದಿವ್ಯಜ್ಞಾನಕ್ಕೂ ಅನುಪಾನಉಂಟೆ ? ರಸವಾದದ ಬೇರ ಕದ್ದ ಚೋರನಂತೆ, ಅದರ ಭೇದವನರಿಯ, ಅದ ವೇಧಿಸಿ ಕಾಣ. ಕಳಂಕ ಹೋದ ಹೊಲಬನರಿಯ, ಆ ಚೋರನ ಮಾತ ವೇದಿಗಳೊಪ್ಪುವರೆ ? ಇಂತಿ ಭೇದವ ತಿಳಿದು, ಷಡುಸ್ಥಲವೇದಿಗಳಾಗಬೇಕು. ಮರುಳಶಂಕರಪ್ರಿಯ ಸಿದ್ಧರಾಮೇಶ್ವರಲಿಂಗವ, ಅರಿವಿನಲ್ಲಿ ವೇಧಿಸಿಕೊಳ್ಳಬೇಕು.
--------------
ವೈದ್ಯ ಸಂಗಣ್ಣ
ಅಂಗ ಸರ್ವಾಂಗಭಾವವ ಮುಟ್ಟುವಲ್ಲಿ, ಆ ಭಾವ ತನ್ನಯ ಕ್ರೀಯ ನಿಬದ್ಧಿಸಿ ಹಿಡಿವಲ್ಲಿ, ಬಾಹ್ಯದ ಕ್ರೀ, ಅಂತರಂಗದ ಅರಿವು, ಉಭಯ ಏಕ ಸನ್ಮತವಾಗಿ, ಸರ್ವವ್ಯವಧಾನಂಗಳಲ್ಲಿ ಸರ್ವವ ಹಿಡಿದುಬಿಡುವಲ್ಲಿ, ತನ್ನ ಕ್ರೀಗೆ ಒಳಗಾದುದ ಒಡಗೂಡುವಲ್ಲಿ, ಸಹಭೋಜನದ ಸಮವನರಿತು, ಭರಿತಾರ್ಪಣವ ಅರ್ಪಿತವನರಿತು, ತಾ ಲಕ್ಷಿಸಿದ ವ್ರತದ ಕಟ್ಟಳೆಯ ಕಂಡು ತನು ಕ್ರೀಯಲ್ಲಿ ಶುದ್ಧವಾಗಿ, ಆತ್ಮ ಅರಿವಿನಲ್ಲಿ ಶುದ್ಧವಾಗಿ, ಅರಿವು ಆಚಾರದಲ್ಲಿ ಲೀಯವಾಗಿ, ಆ ಸದ್ಭಾವವೆ ಏಲೇಶ್ವರಲಿಂಗದ ವ್ರತದ ಸಂಬಂಧ.
--------------
ಏಲೇಶ್ವರ ಕೇತಯ್ಯ
ಕಾಯದಲ್ಲಿ ಕಳವಳವೆಡೆಗೊಂಡ ಬಳಿಕ, ಅರಿವಿನಲ್ಲಿ ಮರವೆ ತಾನೆ ನಿಂದಿತ್ತು ನೋಡಾ. ಕಾಯದ ಕಳವಳವ ವಾಯವೆಂದರಿಯ ಬಲ್ಲಡೆ ದೇವ ಗುಹೇಶ್ವರನ ನಿಲುವು ತಾನೆ ನೋಡಾ
--------------
ಅಲ್ಲಮಪ್ರಭುದೇವರು
ಗುರುವಾದಡೆ ಭೃತ್ಯರ ಚಿತ್ತವನರಿಯಬೇಕು. ಲಿಂಗವಾದಡೆ ಅರ್ಚಕನ ಚಿತ್ತದಲ್ಲಿ ಅಚ್ಚೊತ್ತಿದಂತಿರಬೇಕು. ಜಂಗಮವಾದಡೆ ಉತ್ಪತ್ತಿ ಸ್ಥಿತಿ ಲಯದ ಗೊತ್ತ ಮೆಟ್ಟದೆ ನಿಶ್ಚಿಂತನಾಗಿರಬೇಕು. ಇಂತೀ ತ್ರಿವಿಧಲಿಂಗ ತ್ರಿವಿಧಾರ್ಪಣಕ್ಕೆ ಒಳಗಾಗಿ, ತ್ರಿವಿಧಾಂಗ ತ್ರಿವಿಧಾರ್ಪಣಕ್ಕೆ ಒಳಗಾಗಿ, ತ್ರಿವಿಧಾಂಗ ತ್ರಿವಿಧಮಲಕ್ಕೆ ಹೊರಗಾಗಿ, ತ್ರಿವಿಧಾತ್ಮ ತ್ರಿವಿಧ ಅರಿವಿನಲ್ಲಿ ಕರಿಗೊಂಡು, ವಿಶ್ವಾಸಕ್ಕೆ ಎಡದೆರಪಿಲ್ಲದೆ ತನ್ಮಯಮೂರ್ತಿ ತಾನಾದ ನಿಜೈಕ್ಯಂಗೆ ರಾಗ ವಿರಾಗವಿಲ್ಲ, ಪುಣ್ಯ ಪಾಪವಿಲ್ಲ, ಕರ್ಮ ನಿಃಕರ್ಮವಿಲ್ಲ. ಇಂತೀ ಭಿನ್ನಭಾವನಲ್ಲ, ಬಸವಣ್ಣಪ್ರಿಯ ನಾಗರೇಶ್ವರಲಿಂಗವನರಿದ ಶರಣ.
--------------
ಆನಂದಯ್ಯ
ಪೈರಿಗೆ ನೀರು ಬೇಕೆಂಬಲ್ಲಿ ಉಚಿತವನರಿದು ಬಿಡಬೇಕು. ಕ್ರೀಗೆ ಅರಿವು ಬೇಕೆಂಬಲ್ಲಿ ಉಭಯನರಿದು ಘಟಿಸಬೇಕು. ಏರಿ ಹಿಡಿವನ್ನಕ್ಕ ನೀರ ಹಿಡಿದಡೆ ಸುಖವಲ್ಲದೆ ಮೀರಿದರುಂಟೆ? ಕ್ರೀಯ ಬಿಡಲಿಲ್ಲ, ಅರಿವ ಮರೆಯಲಿಲ್ಲ. ಬೆಳೆಯ ಕೊಯಿದ ಮತ್ತೆ, ಹೊಲಕ್ಕೆ ಕಾವಲುಂಟೆ? ಫಲವ ಹೊತ್ತ ಪೈರಿನಂತೆ, ಪೈರನೊಳಕೊಂಡ ಫಲದಂತೆ, ಅರಿವು ಆಚರಣೆಯೆಲ್ಲ ನಿಂದು, ಆಚರಣೆ ಅರಿವಿನಲ್ಲಿ ಲೇಪನಾದ ಮತ್ತೆ ಕಾಮಭೀಮ ಜೀವಧನನೊಡೆಯನೆಂಬುದ ಭಾವಿಸಲಿಲ್ಲ.
--------------
ಒಕ್ಕಲಿಗ ಮುದ್ದಣ್ಣ
ಅಯ್ಯಾ, ನಿಮ್ಮನೆನ್ನ ಕರಸ್ಥಲದಲ್ಲಿ ಧರಿಸಿದಡೆ ನೀವೆನ್ನ ಮನಸ್ಥಲವನೆಡೆಗೊಂಡುದ ನಾನೇನೆಂಬೆನಯ್ಯಾ? ಅಯ್ಯಾ, ನಿಮ್ಮನೆನ್ನ ಪಂಚಮುಖದಲ್ಲಿ ಧರಿಸಿದಡೆ ನೀವೆನ್ನ ಸರ್ವಾಂಗವನವಗ್ರಹಿಸಿಕೊಂಡುದ ನಾನೇನೆಂಬೆನಯ್ಯಾ? ಅಯ್ಯಾ, ನಿಮ್ಮನೆನ್ನ ಅರಿವಿನಲ್ಲಿ ಬೈಚಿಟ್ಟಡೆ ನೀವೆನ್ನ ನಿರ್ಭಾವದಲ್ಲಿ ನೆಲೆಗೊಂಡುದ ನಾನೇಂಬೆನಯ್ಯಾ? ಸೌರಾಷ್ಟ್ರ ಸೋಮೇಶ್ವರಾ, ನಿಮ್ಮ ಮುಟ್ಟಿ ಹಮ್ಮುಗೆಟ್ಟುದ ನಾನೇನೆಂಬೆನಯ್ಯಾ?
--------------
ಆದಯ್ಯ
ಇನ್ನಷ್ಟು ... -->