ಅಥವಾ

ಒಟ್ಟು 15 ಕಡೆಗಳಲ್ಲಿ , 10 ವಚನಕಾರರು , 15 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕ್ರೀ ಆಚರಣೆ ಶುದ್ಧವಾದಲ್ಲಿ ಇಷ್ಟಲಿಂಗಪೂಜೆ. ರೂಪು ರುಚಿ ಏಕವಾದಲ್ಲಿ ಪ್ರಾಣಲಿಂಗಪೂಜೆ. ರೂಪು ನಿರೂಪೆಂಬ ಉಭಯವಳಿದಲ್ಲಿ ಐಕ್ಯನ ಅನುಭವ ತೃಪ್ತಿ. ಕೂಡುನ್ನಬರ ನೋಟ ಸುಖಿಯಾಗಿ, ಬೇಟದ ನೋಟ ಕೂಟದಲ್ಲಿ ಅಳಿದ ಮತ್ತೆ, ಉಭಯದೃಷ್ಟ ಏಕವಾಯಿತ್ತು. ಚರ ಅಚರವಾದಲ್ಲಿ ಉಭಯನಾಮರೂಪು ನೀನೆ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಇಂದು ನಾಳೆ ಮುಕ್ತಿಯ ಪಡೆವೆನೆಂಬ ಶಿಷ್ಯಂಗೆ ಮುಂದಳ ಮುಕ್ತಿಯ ತೋರಿಹೆನೆಂಬ ಗುರುಗಳ ನೋಡಿರೆ ! ಹೋಮ, ನೇಮ, ಜಪ, ತಪಗಳ ಮಾಡಿ ತಾನುಂಡು ಫಲವುಂಟೆಂದ ಗುರು ಹುಸಿದು ಸತ್ತ, ಶಿಷ್ಯ ಹಸಿದು ಸತ್ತ. ಹಿಂದಣ ಕಥೆಯ ಹೇಳುವಾತ ಹೆಡ್ಡ, ಮುಂದಣ ಕಥೆಯ ಹೇಳುವಾತ ಮೂಢ, ಇಂದಿನ ಘನವ ಹೇಳುವಾತನೆ ಹಿರಿಯನಯ್ಯಾ. ತಾ ಹುಟ್ಟಿದಂದೆ ಯುಗಜುಗಂಗಳು ಹುಟ್ಟಿದವು, ತಾನಳಿದಲ್ಲೆ ಯುಗಜುಗಂಗಳಳಿದವು. ತನ್ನ ನೇತ್ರಕ್ಕಿಂಪಾದುದೆ ಸುವರ್ಣಸುವಸ್ತು, ತನ್ನ ಶ್ರೋತಕ್ಕೆ ಸೊಂಪಾದುದೆ ವೇದಶಾಸ್ತ್ರ, ಪುರಾಣ. ತನ್ನ ಘ್ರಾಣಕ್ಕಿಂಪಾದುದೆ ಪರಿಮಳ, ತನ್ನ ಜಿಹ್ವೆಗಿಂಪಾದುದೆ ರುಚಿ, ತನ್ನ ಮನ ಮುಳುಗಿದುದೆ ಲಿಂಗ. ತನ್ನ ನೆತ್ತಿಯಲ್ಲಿ ಸತ್ಯರ್ಲೋಕ, ಪಾದದಲ್ಲಿ ಪಾತಾಳಲೋಕ, ನಡುವೆ ಹನ್ನೆರಡು ಲೋಕ. ಅಂಡಜ ಪಿಂಡಜ ಉದ್ಭಿಜ ಜರಾಯುಜವೆಂಬ ಎಂಬತ್ತು ನಾಲ್ಕುಲಕ್ಷ ಜೀವರಾಶಿಗಳು. ತನ್ನಲ್ಲಿ ಕಾಯವು, ತನ್ನಲ್ಲಿ ಜೀವವು, ತನ್ನಲ್ಲಿ ಪುಣ್ಯವು, ತನ್ನಲ್ಲಿ ಪಾಪವು, ತನ್ನಲ್ಲಿ ಶಬ್ದವು, ತನ್ನಲ್ಲಿ ನಿಶ್ಯಬ್ದವು. ಒಂದು ಒಡಲೆಂಬ ಊರಲ್ಲಿ ಒಂಬತ್ತು ಶಿವಾಲಯವು ಆ ಶಿವಾಲಯದ ಶಿಖರದ ಮೇಲೆ ಶಿವಲಿಂಗದೇವರು ಪೂರ್ವಭಾಗದಲ್ಲಿ ಚಂದ್ರಾದಿತ್ಯರು, ಪಶ್ಚಿಮ ಭಾಗದಲ್ಲಿ ಪರಶಿವನು ಉತ್ತರ ಭಾಗದಲ್ಲಿ ಮಹೇಶ್ವರನು, ದಕ್ಷಿಣ ಭಾಗದಲ್ಲಿ ರುದ್ರನು ಇಂತೀ ಪಂಚೈವರ ಮನದ ಕೊನೆಯ ಕೀಲಿನ ಸಂಚವನರಿದು ತುರ್ಯಾವಸ್ಥೆಯಲ್ಲಿ ನಿಲಿಸಿ ಒಡಲುವಿಡಿದು ಕಾಂಬುದೆ ಉಪಮೆ. ಈ ಘಟದೇವತೆಯ ಸಟೆಯೆಂದು ಬಿಸುಟು ಮುಂದೆ ತಾ ದಿಟವಪ್ಪುದಿನ್ನೆಲ್ಲಿಯದೊ ? ಪೃಥ್ವಿಯಳಿದಂದೆ ಭೋಗಾದಿ ಭೋಗಂಗಳಳಿದವು. ಅಪ್ಪುವಳಿದಂದೆ ಮಾಯಾಮೋಹಾದಿಗಳಳಿದವು. ತೇಜವಳಿದಂದೆ ಹಸಿವು ತೃಷೆಗಳಳಿದವು. ವಾಯುವಳಿದಂದೆ ನಡೆನುಡಿ ಚೈತನ್ಯಂಗಳಳಿದವು. ಆಕಾಶವಳಿದಂದೆ ಅವು ಅಲ್ಲಿಯೆ ಲೀಯವಾಯಿತ್ತು. ಇದು ಕಾರಣ ಉರಿಕೊಂಡ ಕರ್ಪುರದ ಕರಿ ಕಂಡವರುಂಟೆ ? ಅಪ್ಪುವುಂಡ ಉಪ್ಪಿನ ಹರಳ ಮರಳಿ ಹೊರೆಯ ಕಟ್ಟಿ ಹೊತ್ತವರುಂಟೆ ? ವಾಯುಕೊಂಡ ಜ್ಯೋತಿಯ ಬೆಳಗ ಕಂಡವರುಂಟೆ ? ಹರಿ ಬ್ರಹ್ಮಾದಿಗಳ್ಗೆಯು ಕಾಣಬಾರದಾಗಿ. ಮಣ್ಣಿನ ಸಾರಾಯದಿಂದ ಮರನುತ್ಪತ್ಯ. ಮರದ ಸಾರಾಯದಿಂದ ಎಲೆಯುತ್ಪತ್ಯ ಎಲೆಯ ಸಾರಾಯದಿಂದ ಹೂವ ಉತ್ಪತ್ಯ ಹೂವ ಸಾರಾಯದಿಂದ ಕಾಯಿ ಉತ್ಪತ್ಯ ಕಾಯ ಸಾರಾಯದಿಂದ ಹಣ್ಣು ಉತ್ಪತ್ಯ ಹಣ್ಣಿನ ಸಾರಾಯದಿಂದ ರುಚಿ ಉತ್ಪತ್ಯ ರುಚಿಯಿಂದತ್ತ ಇಲ್ಲವೆಂಬ ತತ್ವ. ಮಣ್ಣು ಮರನು ಅಳಿದ ಬಳಿಕ ಬೇರೆ ರುಚಿಯಿಪ್ಪಠಾವುಂಟೆ ? ದೇಹವಳಿದ ಬಳಿಕ ಪ್ರಾಣವಿಪ್ಪುದಕ್ಕೆ ಠಾವುಂಟೆ ? ಇಲ್ಲವಾಗಿ; ಇದು ಕಾರಣ, ಗುಹೇಶ್ವರನೆಂಬ ಲಿಂಗವ ಒಡಲು ವಿಡಿದು ಕಂಡೆ ಕಾಣಾ. ಸಿದ್ಧರಾಮಯ್ಯ.
--------------
ಅಲ್ಲಮಪ್ರಭುದೇವರು
ಶಿವತತ್ವ ಐದು ಅವಾವೆಂದಡೆ; ಶಿವ, ಶಕ್ತಿ, ಸಾದಾಖ್ಯ, ಈಶ್ವರ, ಶುದ್ಧ ವಿದ್ಯೆ- ಇಂತು ಶಿವತತ್ವ ಐದು. ಇನ್ನು ವಿದ್ಯಾತತ್ತ್ವವೆಂತೆಂದಡೆ: ಕಲೆ, ರಾಗ, ನಿಯತಿ, ವಿದ್ಯೆ, ಪುರುಷ, ಪ್ರಕೃತಿ - ಇಂತು ವಿದ್ಯಾತತ್ತ್ವ ಏಳು. ಇನ್ನು ಕರಣಂಗಳೆಂತೆಂದಡೆ: ಚಿತ್ತ, ಬುದ್ಧಿ, ಅಹಂಕಾರ, ಮನ - ಇವು ಕರಣತತ್ತ್ವ ನಾಲ್ಕು. ಇನ್ನು ಇಂದ್ರಿಯಂಗಳೆಂತೆಂದಡೆ: ಶ್ರೋತ್ರ, ತ್ವಕ್ಕು, ನೇತ್ರ, ಜಿಹ್ವೆ, ಘ್ರಾಣ - ಇಂತು ಬುದ್ಧೀಂದ್ರಯಂಗಳು ಐದು. ಇನ್ನು ಕರ್ಮೇಂ್ರಯಂಗಳೆಂತೆಂದಡೆ: ವಾಕ್ಕು, ಪಾದ, ಪಾಣಿ, ಗುಹ್ಯ, ಪಾಯು - ಇಂತು ಕರ್ಮೇಂ್ರಯಂಗಳು ಐದು. ಇನ್ನು ತನ್ಮಾತ್ರಂಗಳೆಂತೆಂದಡೆ: ಶಬ್ದ, ಸ್ಪರ್ಶ, ರೂಪು, ರಸ ಗಂಧ - ಇಂತು ಜ್ಞಾನೇಂದ್ರಿಯ ವಿಷಯ ಐದು. ಇನ್ನು ಕರ್ಮೇಂ್ರಯ ವಿಷಯವೆಂತೆಂದಡೆ: ವಚನ, ಗಮನ, ಆದಾನ, ಆನಂದ, ವಿಸರ್ಜನ ಇಂತು ಕರ್ಮೇಂ್ರಯ ವಿಷಯ ಐದು. ಇನ್ನು ವಾಕ್ಕುಗಳಾವುವೆಂದಡೆ: ಪರಾ, ಪಶ್ಯಂತಿ, ಮಧ್ಯಮೆ, ವೈಖರಿ - ಇಂತು ವಾಕ್ಕು ನಾಲ್ಕು. ಸಾತ್ಪಿ, ರಾಜಸ, ತಾಮಸ - ಇಂತು ಗುಣ ಮೂರು. ರಾಜಸಹಂಕಾರ, ವೈಖರಿಯಹಂಕಾರ, ಭೂತಾಯಹಂಕಾರ -ಇಂತು ಅಹಂಕಾರ ಮೂರು. ಪೃಥ್ವಿ, ಅಪ್ಪು, ಅಗ್ನಿ, ವಾಯು, ಆಕಾಶ - ಇಂತು ಭೂತಂಗಳು ಐದು. ಭೂತಕಾರ್ಯ ಇಪ್ಪತ್ತೈದು - ಅವಾವೆಂದಡೆ: ಅಸ್ಥಿ, ಮಾಂಸ, ತ್ವಕ್, ನಾಡಿ, ರೋಮ - ಈ ಐದು ಪೃಥ್ವೀಪಂಚಕ. ಲಾಲಾ, ಮೂತ್ರ, ಸ್ವೇದ, ಶುಕ್ಲ, ಶೋಣಿಕ - ಈ ಐದು ಅಪ್ಪುವಿನ ಪಂಚಕ. ಕ್ಷುಧೆ, ತೃಷೆ, ನಿದ್ರೆ, ಆಲಸ್ಯ, ಸ್ತ್ರೀಸಂಗ - ಈ ಐದು ಅಗ್ನಿಪಂಚಕ. ಪರಿವ, ಪಾರುವ, ಸುಳಿವ, ನಿಲುವ, ಅಗಲುವ - ಈ ಐದು ವಾಯುಪಂಚಕ. ರಾಗ, ದ್ವೇಷ, ಭಯ, ಲಜ್ಜೆ, ಮೋಹ - ಈ ಐದು ಆಕಾಶವಂಚಕ. ಇಂತೀ ಇಪ್ಪತ್ತೈದು ಭೂತಕಾರ್ಯ ಪಂಚೀಕೃತಗಳು. ಇನ್ನು ದಶವಾಯುಗಳು: ಪ್ರಾಣ, ಅಪಾನ, ವ್ಯಾನ, ಉದಾನ, ಸಮಾನ, ನಾಗ, ಕೂರ್ಮ, ಕೃಕರ, ದೇವದತ್ತ, ಧನಂಜಯ - ಈ ಹತ್ತು ವಾಯುಗಳು, ಇನ್ನು ದಶನಾಡಿಗಳು: ಇಡಾ, ಪಿಂಗಳಾ, ಸುಷುಮ್ನಾ, ಗಾಂಧಾರಿ, ಹಸ್ತಿ, ಜಿಹ್ವೆ, ಪುಷ್ಕರ, ಪಯಸ್ವಿನಿ, ಆಲಂಬು, ಲಕುಹ, ಶಂಕಿನಿ - ಇಂತೀ ಹತ್ತು ನಾಡಿಗಳು. ಇಂತು ತತ್ವ ತೊಂಬತ್ತಾರು ಕೂಡಿಕೊಂಡು ಆತ್ಮನು ಭೂಮಧ್ಯದಲ್ಲಿರ್ದು ಅವಸ್ಥೆಬಡುವುದನು ಹೇಳಿಹೆನು. ಅದೆಂತೆಂದಡೆ ಅವಸ್ಥೆಯ ಕ್ರಮ: ಪ್ರೇರಕಾವಸ್ಥೆ ಒಂದು, ಅಧೋವಸ್ಥೆ ಐದು, ಊಧ್ರ್ವಾವಸ್ಥೆ ಐದು, ಮಧ್ಯಾವಸ್ಥೆ ಐದು, ಕೇವಲಾವಸ್ಥೆ ಒಂದು, ಸಕಲಾವಸ್ಥೆ ಒಂದು, ಶುದ್ಧಾವಸ್ಥೆ ಒಂದು, ನಿರ್ಮಲಾವಸ್ಥೆ ಐದು, ಅಂತೂ ಅವಸ್ಥೆ ಇಪ್ಪತ್ತನಾಲ್ಕು, ಅವರಲ್ಲಿ ಪ್ರೇರಕಾವಸ್ಥೆಯೆಂತೆಂದಡೆ: ತತ್ತ್ವಸಮೂಹಂಗಳನು ಕೂಡಿಕೊಂಡು ಇರ್ದಲ್ಲಿ ಆ ಪುರುಷನು ಪಂಚೇಂ್ರಯಂಗಳಲ್ಲಿ ವಿಷಯಂಗಳು ಅತಿ ಚಮತ್ಕಾರದಲ್ಲಿ ಅರಿವವೇಳೆ ಪ್ರೇರಕಾವಸ್ಥೆಯೆಂದು. ಅದಕ್ಕೆ ಪ್ರೇರಿಸುವ ತತ್ತ್ವಂಗಳಾವುವೆಂದಡೆ- ಶಿವತತ್ತ್ವ ಐದು, ವಿದ್ಯಾತತ್ತ್ವ ಏಳು, ಕರಣಂಗಳು ನಾಲ್ಕು, ಭೂತಂಗಳಲ್ಲಿ ಒಂದು, ಇಂದ್ರಿಯಂಗಳಲ್ಲಿ ಒಂದು -ಇಂತೀ ಹದಿನೆಂಟು ತತ್ವಂಗಳಲ್ಲಿ ವಿಷಯಂಗಳನರಿವನು. ಅದು ಹೇಗೆಂದಡೆ - ಶಿವತತ್ತ್ವ ಐದು, ವಿದ್ಯಾತತ್ತ್ವ ಏಳು, ಕರಣಂಗಳು ನಾಲ್ಕು - ಇಂತು ಹದಿನಾರು ತತ್ತ್ವ. ಆಕಾಶಭೂತವೂ ಶ್ರೋತ್ರೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಶಬ್ದವನದಲ್ಲಿರಿವ; ವಾಯುಭೂತವೂ ತ್ವಗೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಶಬ್ದವನರಿವ; ವಾಯುಭೂತವೂ ತ್ವಗೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಸೋಂಕನರಿವ; ತೇಜಭೂತವೂ ನಯನೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ರೂಪವನರಿವ; ಅಪ್ಪುಭೂತವೂ ಜಿಹ್ವೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ರಸವನರಿವ; ಪೃಥ್ವಿಭೂತವೂ ಪ್ರಾಣೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಗಂಧವನರಿವ. ಇಂತೀ ವಿಷಯಂಗಳನರಿವುದು. ಇದು ಪ್ರೇರಕಾವಸ್ಥೆಯೆಂದೆನಿಸುವದು. ಇನ್ನು ಅಧೋವಸ್ಥೆ ಐದಕ್ಕೆ ವಿವರ: ಪ್ರಥಮದಲ್ಲಿ ಜಾಗ್ರಾವಸ್ಥೆ ಅದಕ್ಕೆ ಪ್ರೇರಿಸುವ ತತ್ತ್ವಂಗಳು ಬಿಟ್ಟಿಹವಾವುವೆಂದಡೆ: ಶಿವತತ್ತ್ವ ಐದು, ಮಾಯಾತತ್ತ್ವ ಒಂದು, ವಿದ್ಯಾತತ್ತ್ವ ಆರು, ಭೂತಂಗಳು ಐದು ಇಂತು ಹದಿನೇಳು ಬಿಟ್ಟಿಹುದು. ಇನ್ನು ಜಾಗ್ರಾವಸ್ಥೆಯಲ್ಲಿಹ ತತ್ತ್ವಗಳೆಷ್ಟೆಂದಡೆ: ಕರಣ ನಾಲ್ಕು, ಬುದ್ಧೀಂದ್ರಿಯ ಐದು, ಕರ್ಮೇಂದ್ರಿಯ ಐದು, ವಿಷಯ ಹತ್ತು, ವಾಯು ಹತ್ತು. ಇಂತು ಮೂವತ್ತನಾಲ್ಕು ತತ್ತ್ವಂಗಳಲ್ಲಿ ಆ ತನು ಕೇಳದೆ ಕೇಳುವ, ಮಾತಾಡದ ಹಾಂಗೆ ಆಲಸ್ಯದಲ್ಲಿ ಮಾತನಾಡುತ್ತಿಹನು, ಇಂತು ಜಾಗ್ರಾವಸ್ಥೆ. ಇನ್ನು ಸ್ವಪ್ನಾವಸ್ಥೆ. ಅದಕ್ಕೆ ಹತ್ತು ತತ್ತ್ವಂಗಳು ಬಿಟ್ಟಿಹವು. ಅವಾವುವೆಂದಡೆ:ಬುದ್ಧೀಂ್ರಯ ಐದು, ಕರ್ಮೇಂದ್ರಿಯ ಐದು. ಲಲಾಟದಲ್ಲಿ ನಿಲುವು ಕಂಠಸ್ಥಾನದಲ್ಲಿ ಇಪ್ಪತ್ತೈದು ತತ್ತ್ವಂಗಳು ಕೂಡಿಕೊಂಡಿಹುದು. ಅದೆಂತೆಂದಡೆ:ಮಾಯೆ ಒಂದು, ವಾಯು ಹತ್ತು, ವಿಷಯ ಹತ್ತು, ಕರಣ ನಾಲ್ಕು ಇಂತು ಇಪ್ಪತ್ತೈದು ತತ್ತ್ವಂಗಳು ಕೂಡಿಕೊಂಡು ಸ್ವಪ್ನಂಗಳ ಕಾಣುತಿಹನು. ಇದು ಸ್ವಪ್ನಾವಸ್ಥೆ. ಇನ್ನು ಸುಷುಪ್ತಾವಸ್ಥೆಗೆ ಬಹಲ್ಲಿ ಕಂಠಸ್ಥಾನದಲ್ಲಿ ನಿಂದ ತತ್ತ್ವಂಗಳಾವಾವವೆಂದಡೆ- ಮಾಯೆ ಒಂದು, ವಾಯು ಒಂಬತ್ತು ವಿಷಯ ಹತ್ತು, ಕರಣ ಮೂರು- ಇಂತು ಇಪ್ಪತ್ತಮೂರು ತತ್ತ್ವ. ಇನ್ನು ಹೃದಯಸ್ಥಾನದಲ್ಲಿ ಕೂಡಿಹ ತತ್ತ್ವ ಆವಾವೆಂದಡೆ: ಪ್ರಾಣವಾಯು ಒಂದು, ಪ್ರಕೃತಿ ಒಂದು, ಚಿತ್ತ ಒಂದು -ಇಂತು ಸುಷುಪ್ತಾವಸ್ಥೆಯಲ್ಲಿ ತತ್ತ್ವ. ಇನ್ನು ತೂರ್ಯಾವಸ್ಥೆಗೆ ಬಹಾಗ ಹೃದಯದಲ್ಲಿ ನಿಂದ ತತ್ತ್ವ ಚಿತ್ತ ಒಂದು. ನಾಬ್ಥಿಸ್ಥಾನದಲ್ಲಿ ತೂರ್ಯಾವಸ್ಥೆಯಲ್ಲಿಹ ತತ್ತ್ವ ಪ್ರಾಣವಾಯು ಒಂದು, ಪ್ರಕೃತಿ ಒಂದು. ಅತೀತಾವಸ್ಥೆಗೆ ಹೋಹಾಗ ನಾಬ್ಥಿಸ್ಥಾನದಲ್ಲಿ ತೂರ್ಯಾವಸ್ಥೆಯಲ್ಲಿ ಪ್ರಾಣವಾಯುವುಳಿದು ಅತೀತಾವಸ್ಥೆಯಲ್ಲಿ ಪ್ರಕೃತಿಗೂಡಿ ಮೂಲಾಧಾರದಲ್ಲಿ ಆಣವಮಲಯುಕ್ತವಾಗಿ ಏನೆಂದರಿಯದೆ ಇಹುದು, ಇಂತಿದು ಅಧೋವಸ್ಥೆ. ಇನ್ನು ಊಧ್ರ್ವಾವಸ್ಥೆ, ಅತೀತದಲ್ಲಿ ಪ್ರಕೃತಿಕಾರ್ಯಂಗಳೆಲ್ಲವನೂ ಬಿಟ್ಟು, ತತ್ತ್ವಂಗಳೊಂದೂ ಇಲ್ಲದೆ, ಅಣವಮಲಸ್ವರೂಪವಾಗಿ ಮೂಲಾಧಾರದಲ್ಲಿ ಬ್ದಿರ್ದ ಆತ್ಮನಿಗೆ ಪರಮೇಶ್ವರನ ಕರುಣದಿಂದ ಕ್ರಿಯಾಶಕ್ತಿ, ಶಕ್ತಿತತ್ತ್ವಮಂ ಪ್ರೇರಿಸುವುದು. ಆ ಶಕ್ತಿ ಕಲೆ, ಕಾಲ, ನಿಯತಿಗಳಂ ಪ್ರೇರಿಸುವುದು. ಆ ವೇಳೆಯಲ್ಲಿ ಸೂಕ್ಷೆ ್ಮಯೆಂಬ ವಾಕ್ಕು ಕೂಡುವುದು. ಇಂತು ಅತೀತದಲ್ಲಿ ಅರುಹಿಸುವ ತತ್ತ್ವಂಗಳು: ಶಕ್ತಿತತ್ತ್ವ, ಕಲೆ, ಕಾಲ, ನಿಯತಿ, ಸೂಕ್ಷೆ ್ಮ ಇಂತು ತತ್ತ್ವಂಗಳು ಐದು. ಇನ್ನು ತೂರ್ಯಾವಸ್ಥೆಗೆ ಬಹಾಗ ಹಿಂದೆ ಹೇಳಿದ ತತ್ತ್ವ ಐದು, ಪಶ್ಯಂತಿಯೆಂಬ ವಾಕ್ಕು, ಪ್ರಾಣವಾಯು ಕೂಡಿ ತತ್ತ್ವ ಏಳು ತೂರ್ಯಾವಸ್ಥೆಯಲ್ಲಿ ಪ್ರೇರಿಸುವುದು: ಹಿಂದೆ ಹೇಳಿದ ತತ್ತ್ವ ಏಳು ಕೂಡಿ, ಹೃದಯಸ್ಥಾನದಲ್ಲಿ ಮಧ್ಯಮೆ, ಚಿತ್ತ - ಎರಡು ಕೂಡುತ್ತಿಹವು. ಆ ವೇಳೆಯಲ್ಲಿ ಜ್ಞಾನಶಕ್ತಿ ಶುದ್ಧವಿದ್ಯಾತತ್ತ್ವಮಂ ಪ್ರೇರಿಸುವುದು. ಆ ಶುದ್ಧವಿದ್ಯಾತತ್ತ್ವ ಆತ್ಮಂಗೆ ಅರಿವನೆಬ್ಬಿಸುವುದು. ಇಚ್ಛಾಶಕ್ತಿ ಈಶ್ವರತತ್ತ್ವಮಂ ಪ್ರೇರಿಸುವುದು; ಈಶ್ವರತತ್ತ್ವ ರಾಗತತ್ತ್ವಮಂ ಪ್ರೇರಿಸುವುದು; ರಾಗತತ್ತ್ವ ಆತ್ಮಂಗೆ ಇಚ್ಛೆಯನೆಬ್ಬಿಸುವುದು. ಆಶಕ್ತಿ ಸಾದಾಖ್ಯತತ್ತ್ವಮಂ ಪ್ರೇರಿಸುವುದು; ಸಾದಾಖ್ಯತತ್ತ್ವ ಪ್ರಕ್ಕೃತಿತ್ತ್ವಮಂ ಪ್ರೇರಿಸುವುದು; ಪರಾಶಕ್ತಿ ಶಿವತತ್ತ್ವಮಂ ಪ್ರೇರಿಸುವುದು; ಶಿವತತ್ತ್ವ ಗುಣತತ್ತ್ವಮಂ ಪ್ರೇರಿಸುವುದು. ಇಂತು ಹದಿನೆಂಟು ತತ್ತ್ವ ಆವಾವವೆಂದಡೆ: ಪಂಚಶಕ್ತಿ ಹೊರಗಾಗಿ ಶಿವತತ್ತ್ವ ಐದು, ವಿದ್ಯಾತತ್ತ್ವ ಐದು, ಪ್ರಾಣವಾಯು ಒಂದು, ಪ್ರಕೃತಿ ಒಂದು, ಗುಣ ಮೂರು, ಚಿತ್ತ ಒಂದು, ಪುರುಷ ಒಂದು. ಇಂತು ತತ್ತ್ವ ಹದಿನೇಳು ಸುಷುಪ್ತಾವಸ್ಥೆಯಲ್ಲಿ ಅರುಹಿಸುವುವು. ಇನ್ನು ಸ್ವಪ್ನಾವಸ್ಥೆಯ ಕಂಠದಲ್ಲಿಹ ತತ್ತ್ವ: ಜ್ಞಾನೇಂದ್ರಿಯ ವಿಷಯ ಹತ್ತು, ಕರ್ಮೇಂದ್ರಿಯ ವಿಷಯ ಹತ್ತು, ಪ್ರಾಣವಾಯು ಉಳಿಯೆ, ವಾಯುಚಿತ್ತ ಉಳಿಯೆ, ತ್ರಿಕರಣ ಅಹಂಕಾರ ಮೂರು, ವೈಖರಿಯ ವಾಕ್ಕು ಒಂದು ಇಂತು ಇಪ್ಪತ್ತನಾಲ್ಕು ತತ್ತ್ವ. ಸುಷುಪ್ತಾವಸ್ಥೆಯಲ್ಲಿ ಹಿಂದೆ ಹೇಳಿದ ತತ್ತ್ವ ಹದಿನೇಳು ಕೂಡಿ ತತ್ತ್ವ ನಲವತ್ತೊಂದು ಸ್ವಪ್ನಾವಸ್ಥೆಯಲ್ಲಿ ಕೂಡಿಹವು. ಆಗ ತನ್ನೊಳಗೆ ಅರುಹಿಸುವ ಪ್ರಕಾರವೆಂತೆಂದಡೆ: ಚಿತ್ತ, ಬುದ್ಧಿ, ಅಹಂಕಾರ, ಮನ, ಹೃದಯ ಈ ಐದು. ಚಿತ್ತವನು ಆಕಾರ ಪ್ರೇರಿಸುವುದು. ಆ ಅಕಾರವನು ಬ್ರಹ್ಮ ಪ್ರೇರಿಸುವನು, ಬುದ್ಧಿಯನು ಉಕಾರ ಪ್ರೇರಿಸುವುದು; ಉಕಾರವನು ವಿಷ್ಣು ಪ್ರೇರಿಸುವನು, ಅಹಂಕಾರವನು ಮಕಾರ ಪ್ರೇರಿಸುವುದು; ಮಕಾರವನು ರುದ್ರ ಪ್ರೇರಿಸುವನು, ಮನವನು ಬಿಂದು ಪ್ರೇರಿಸುವುದು; ಬಿಂದುವನು ಈಶ್ವರ ಪ್ರೇರಿಸುವನು; ಹೃದಯವನು ನಾದ ಪ್ರೇರಿಸುವುದು; ನಾದವನು ಸದಾಶಿವ ಪ್ರೇರಿಸುವನು. ಈ ಹದಿನೈದು ತನ್ನೊಳಗೆ ಸೂಕ್ಷ ್ಮಶರೀರದಲ್ಲಿಹುದು. ...........ಗೀ(?) ಅಷ್ಟತನುವಿನಿಂದ ಸ್ವರ್ಗನರಕವನರಿವನು. ಮುಂದೆ ಜಾಗ್ರಾವಸ್ಥೆಯಲ್ಲಿ ಅರುಹಿಸುವ ತತ್ತ್ವ ಅವಾವವೆಂದಡೆ- ಭೂತ ಐದು, ಉಭಯೇಂದ್ರಿಯ ಹತ್ತು, ಭೂತಕಾರ್ಯ ಇಪ್ಪತ್ತೈದು, ನಾಡಿ ಹತ್ತು, ಅಂತು ತತ್ತ್ವ ನಲವತ್ತೊಂದು. ಅಂತು ಕೂಡಿ ತತ್ತ್ವ ತೊಂಬತ್ತೊಂದು. ಇಂತಿದು ಊಧ್ರ್ವಾವಸ್ಥೆ. ಇನ್ನು ಸಕಲಾವಸ್ಥೆಯೆಂತೆಂದಡೆ: ತೊಂಬತ್ತೊಂದು ತತ್ತ್ವ ಅವರಲ್ಲಿ ಪ್ರೇರಕತತ್ವವೊಂದು ಪ್ರೇರಿಸುವಲ್ಲಿ ಸಕಲಾವಸ್ಥೆ. ಅದು ಶಿವನನೂ ತನ್ನನೂ ಪಾಶಪಂಚಕವನು ಅರಿಯದೆ ಎಲ್ಲ ವಿಷಯಂಗಳನು ಅರಿವುತ್ತಿಹುದು. ಇನ್ನು ಮಧ್ಯಮಾವಸ್ಥೆಯೆಂತೆಂದಡೆ- ಹಿಂದೆ ಕಂಡವನ ಈಗಲೆಂದು ಅರಿಯಹುದೀಗ ಜಾಗ್ರ ಅತೀತ. ಹಿಂದೆ ಕಂಡವನ ಅರಿದ ಹಾಂಗಿಹುದೀಗ ಜಾಗ್ರ ತುರೀಯ. ಹಿಂದೆ ಕಂಡವನ ಮೆಲ್ಲನೆಚ್ಚತ್ತು ಅರಿವುದು ಜಾಗ್ರದ ಸುಷುಪ್ತಿ. ಹಿಂದೆ ಕಂಡವನ ಕಂಡಾಗಲೆ ಅರಿವುದು ಜಾಗ್ರದ ಸ್ವಪ್ನ. ಹಿಂದೆ ಕಂಡವನ ಹೆಸರು, ಇದ್ದ ಸ್ಥಲ, ಅವನ ಕಾಯಕ ಮುಂತಾಗಿ ಚೆನ್ನಾಗಿ ಅರಿವುದು ಜಾಗ್ರದ ಜಾಗ್ರ. ಅದೆಂತೆಂದಡೆ, ಜಾಗ್ರದಲ್ಲಿ ಪುರುಷತತ್ತ್ವದಲ್ಲಿ ಎಲ್ಲ ತತ್ತ್ವಗಳು ಕೂಡಿದ ಕಾರಣಂದ ತಾನೇನ ನೆನೆದಿದ್ದುದನು ಮರೆವುದು ಜಾಗ್ರ ಅತೀತ. ಆ ಪುರುಷತತ್ತ್ವದಲ್ಲಿ ಪ್ರಾಣವಾಯು ಕೂಡಲು ನೆನೆದುದನು ಹೇಳಿಹೆನೆಂದಡೆ ತೋರುವ ಹಾಂಗೆ ಇಹುದು ತೋರದಿಹುದು ಜಾಗ್ರದ ತುರೀಯ. ಆ ಪುರುಷತತ್ತ್ವದಲ್ಲಿ ಪ್ರಾಣವಾಯು ಚಿತ್ತವು ಕೂಡಲು ನೆನೆದುದನು ಮೆಲ್ಲನೆಚ್ಚತ್ತು ಅರಿದು ಹೇಳುವುದು ಜಾಗ್ರದ ಸುಷುಪ್ತಿ, ಆ ಪುರುಷತತ್ತ್ವದಲ್ಲಿ ಕರಣ ನಾಲ್ಕು, ಇಂದ್ರಿಯ ಹತ್ತು, ವಾಯು ಹತ್ತು, ವಿಷಯ ಹತ್ತು ಅಂತೂ ತತ್ತ್ವ ಮೂವತ್ತನಾಲ್ಕು ಕೂಡಲಾಗಿ, ತಾ ನೆನೆದುದನು ಇದ್ದುದನು ಚೆನ್ನಾಗಿ ಅರಿದು ವಿವರದಿಂದ ಹೇಳುವುದು ಇದು ಜಾಗ್ರದ ಜಾಗ್ರ. ಇಂತಿದು ಮಾಧ್ಯಮಾವಸ್ಥೆ. ಇನ್ನು ಕೇವಲಾವಸ್ಥೆಯೆಂತೆಂದಡೆ: ಶುದ್ಧತತ್ತ್ವ ವಿದ್ಯಾತತ್ತ್ವವನೆಲ್ಲವ ಬಿಟ್ಟು ಆಣವಮಲದಲ್ಲಿ ಆಣವಸ್ವರೂಪಾಗಿ ಕಣ್ಗತ್ತಲೆಯಲ್ಲಿ ಏನೂ ಕಾಣದ ಕಣ್ಣಿನ ಹಾಂಗೆ ಇದ್ದುದೀಗ ಕೇವಲಾವಸ್ಥೆ. ಇನ್ನು ಶುದ್ಧಾವಸ್ಥೆಯೆಂತೆಂದಡೆ: ಕರ್ಮಸಮಾನದಲ್ಲಿ ಶಕ್ತಿಪಾತವಾಗಿ,ತ್ರಿಪದಾರ್ಥಜ್ಞಾನವಾಗಿ, ದಿಟವೆಂಬಂತೆ ತೋರುತ್ತಿಹ ದೇಹಾಪ್ರಪಂಚುವನು ಸಟೆಯೆಂದು ಕಸವ ಕಳೆವ ಹಾಂಗೆ ಕಳೆದು, ತತ್ತ್ವಂಗಳೊಳಗೆ ಇದ್ದು ತತ್ತ್ವಂಗಳಿಗೆ ಅನ್ಯವಾಗಿ, ಆ ತತ್ತ್ವಂಗಳನು ಅರಿದ ಸಕಲಾವಸ್ಥೆಯೆಂಬ ಕೇವಲಾವಸ್ಥೆಯೆಂಬ ಈ ಎರಡು ಅವಸ್ಥೆಗಳೂ ತನ್ನನು ಶಿವನನು ಅರಿವುದಕ್ಕೆ ಪ್ರಯೋಜನವಲ್ಲವೆಂದು ಎರಡವಸ್ಥೆಯನೂ ಬಿಟ್ಟು ಸಕಲವನೂ ಹೊದ್ದದೆ ಕೇವಲವನೂ ಹೊದ್ದದೆ ತ್ರಾಸಿನ ಮುಳ್ಳು ನಿಂದ ಹಾಂಗೆ ನಿಂದುದು ಶುದ್ಧಾವಸ್ಥೆ. ಇದು ಶಿವನ ಶರಣರಿಗಲ್ಲದೆ ಇಲ್ಲ. ಇನ್ನು ನಿರ್ಮಲಾವಸ್ಥೆ ಎಂತೆಂದಡೆ- ಶಿವಜ್ಞಾನದಲ್ಲಿ ಬೋಧವನಳಿದು ಜ್ಞೇಯದೊಳು ಕೂಡಿಹ ಜೀವನ್ಮುಕ್ತರಿಗೆ ಪಂಚಾವಸ್ಥೆಗಳು. ಆ ಅವಸ್ಥೆಗಳಲ್ಲಿ ತತ್ತ್ವಗಳಾವಾವೆಂದಡೆ: ಶಿವತತ್ತ್ವ, ಶಕ್ತಿತತ್ತ್ವ, ಸಾದಾಖ್ಯತತ್ತ್ವ, ಈಶ್ವರತತ್ತ್ವ, ಶುದ್ಧ ವಿದ್ಯಾತತ್ತ್ವ ಈ ಐದು ಮೊದಲಾಗಿ ಪರಾ, ಆದಿ, ಇಚ್ಛೆ, ಜ್ಞಾನ, ಕ್ರಿಯೆಯೆಂಬ ಶಕ್ತಿ ಪಂಚಕಗಳು ಉಸುರಾಗಿ ಜಾಗ್ರಾವಸ್ಥೆಯಲ್ಲಿ ಅರಿವುತ್ತಿಹನು. ಕ್ರಿಯಾಶಕ್ತಿ ಶಕ್ತಿತತ್ತ್ವಮಂ ಬಿಟ್ಟು ಉಳಿದ ಶಕ್ತಿ ನಾಲ್ಕು ಒಡಲುಸುರಾಗಿ ಅರಿಯೆ ಸ್ವಪ್ನಾವಸ್ಥೆ. ಜ್ಞಾನಶಕ್ತಿ ಶುದ್ಧವಿದ್ಯಾತತ್ತ್ವಮಂ ಬಿಟ್ಟು ಕಳೆದು ಉಳಿದ ಶಕ್ತಿ ಮೂರರಲ್ಲಿ ಅರಿಯೆ ಸುಷುಪ್ತಾವಸ್ಥೆ. ಇಚ್ಛಾಶಕ್ತಿ ಈಶ್ವರತತ್ತ್ವಮಂ ಬಿಟ್ಟು ಕಳೆದು ಉಳಿದ ಶಕ್ತಿ ಎರಡರಲ್ಲಿ ಅರಿವುದು ತೂರ್ಯಾವಸ್ಥೆ. ಆಶಕ್ತಿ ಸಾದಾಖ್ಯತತ್ತ್ವವೂ ಬಿಟ್ಟು ಕಳೆದು ಉಳಿದ ಪರಾಶಕ್ತಿ ಒಂದು ಶಿವತತ್ತ್ವ ಒಂದರಲ್ಲಿ ಅರಿಯೆ ನಿರ್ಮಲದ ಅತೀತಾವಸ್ಥೆ. ಇನ್ನು ಈ ಶಕ್ತಿ ಶಿವತತ್ತ್ವಂಗಳೆ ಒಡಲುಸುರಾಗಿ ಇದ್ದಲ್ಲಿ ಶಿವನಲ್ಲದೆ ಮತ್ತೊಂದು ಏನೂ ತೋರದು. ಅಂಥ ಜೀವನ್ಮುಕ್ತರು ನಿರ್ಮಲಜಾಗ್ರದಲ್ಲಿ ಎಂತು ಅರಿವುತ್ತಿಪ್ಪರೆಂದಡೆ ಆ ಪರಮಾವಸ್ಥೆಯನೂ ಅನುಭವದಲ್ಲಿ ಅರಿವುದು, ಮಲಪಂಚಕಗಳನು ಅರುಹಿಸುವ ಸದಮಲ ಶಿವಜ್ಞಾನ ಪರೆ ಮೊದಲಾದ ಪೂರ್ಣ ಬೋಧದಲ್ಲಿ ಕೂಡಿ ತಾನು ಇಲ್ಲದಿರುವಂಧು ಏನೂ ತೋರದ ಪೂರ್ಣ ಬೋಧವಾಗಿ ನಿಂದುದು ನಿರ್ಮಲಜಾಗ್ರ. ಇನ್ನು ಪರಾಶಕ್ತಿಯನೂ ಶಿವತತ್ತ್ವವನೂ ಮೀರಿ, ಪರದಲಿ ಬೆರೆದು, ಅದ್ವೆ ೈತವೂ ಅಲ್ಲದೆ, ದ್ವೆ ೈತವೂ ಅಲ್ಲದೆ, ದ್ವೆ ೈತಾದ್ವೆ ೈತವೂ ಅಲ್ಲದೆ ಇನತೇಜದಲ್ಲಿ ಕಣ್ಣು ತೇಜ ಕೂಡಿದ ಹಾಂಗೆ ಆಣವದ ಅಣುವಿನ ಹಾಂಗೆ ತಾನು ಇಲ್ಲದೆ ಇಹನು. ಇದು ಶಿವಾದ್ವೆ ೈತ. ಇಂತಲ್ಲದೆ ಆತ್ಮ ಆತ್ಮ ಕೆಟ್ಟಡೆ, ಆತ್ಮವರ್ಗ ಮುಕ್ತಿಸುಖವಿಲ್ಲ, ಅಳಿದ ಠಾವಿನಲ್ಲಿ ಹುಟ್ಟುವುದಾಗಿ, ಶಿವ ತಾನೆ ಆತ್ಮನಾಗಿ ಹುಟ್ಟುವನಹುದು: ಶಿವನಲ್ಲಿ ಹುಟ್ಟಿ ಮಲ ಉಳ್ಳದಹುಲ್ಲ. ಶಿವ ತಾನೆ ಹುಟ್ಟಿಸಿ ನರಕ - ಸ್ವರ್ಗದ ಮಾನವನಹನು, ಪಕ್ಷಪ್ಕಾಯಹನು, ನಿಃಕರುಣಿಯಹನು, ವಿಕಾರಿಯಹನು. ಶಿವನ್ಲ ಕೂಡದೆ ಬೇರಾಗಿ ಇಹನೆಂದಡೆ, ಮುಕ್ತಿಯೆಂಬ ಮಾತು ಇಲ್ಲವಹುದು. ಪಂಚಕೃತ್ಯವ ಮಾಡಲು ಕಾರಣವಿಲ್ಲ ಒಂದಾಗೆ! ಎರಡಾಗದೆ ಭೇದಾಭೇದವಾಗಿಹನೆಂದಡೆ ಶಿವಭಕ್ತಿಯನೂ ಶಿವಕ್ರಿಯೆಗಳನೂ ಮಾಡಿ ಶಿವನ ಕೂಡಿಹನೆಂದೆನ್ನಬೇಡ! ಮುನ್ನವೆ ಒಂದಾಗಿ ಇದ್ದನಾಗಿ, ಈ ಭೇದವ ತಿಳಿಯಬಲ್ಲಡೆ ಆತನೆ ಶರಣ ಕಾಣಾ, ಕಪಿಲಸಿದ್ಧಮಲ್ಲಿಕಾರ್ಜುನಾ
--------------
ಸಿದ್ಧರಾಮೇಶ್ವರ
್ಕಳಿದು ್ಕಳಿದು ವಿಷಯಕ್ಕೆ ಮೈಗೊಟ್ಟಡೆ ಅನುಭಾವಿಯೆ, ಅಯ್ಯಾ? ಅಳಿದು ಅಳಿದು ಆನಂದಕ್ಕೆ ಮೈಗೊಟ್ಟಡೆ ಅಜ್ಞಾನಿಯೆ, ಅಯ್ಯಾ? ್ಕಳಿದ ಬಳಿಕ ವಿಷಯಗಳಳಿಯಬೇಕು. ಅಳಿದ ಬಳಿಕ, ಎಳೆಯ ಚಂದ್ರಧರ ಕಪಿಲಸಿದ್ಧಮಲ್ಲಿಕಾರ್ಜುನನಾಗಲೆಬೇಕು.
--------------
ಸಿದ್ಧರಾಮೇಶ್ವರ
ಕಂಗಳು ನುಂಗಿದ ಬಯಲವ, ಕರ್ಣ ಅವಗವಿಸಿದ ನಾದವ, ನಾಸಿಕದಲ್ಲಿ ನಷ್ಟವಾದ ಸುಗಂಧವ, ಜಿಹ್ವೆಯ ಕೊನೆಯಲ್ಲಿ ಅಳಿದ ರಸಾನ್ನವ, ಮುಟ್ಟಿನ ದೆಸೆಯಲ್ಲಿ ನಿಶ್ಚಯವಾದ ಮೃದು ಕಠಿಣಾದಿ, ಇಂತಿವೆಲ್ಲವೂ ನಿಜನೆಲೆಯಲ್ಲಿ ಅಚ್ಚೊತ್ತಿದಂತೆ ಐಕ್ಯವಾದ ಮತ್ತೆ ಅರ್ಪಿತವೆಂಬುದು ಹಿಂಚೋ, ಮುಂಚೋ ಎಂಬುದ ತಿಳಿದು, ಆ ಉಳುಮೆಯಲ್ಲಿ ಕಲೆದೋರದೆ ಅರ್ಪಿತ ನಷ್ಟವಾದುದು. ಕಮಠೇಶ್ವರಲಿಂಗವ ಕೂಡಿ ಕೂಡಿದೆನೆಂದು ಎರಡಳಿದ, ಪ್ರಾಣಲಿಂಗ ಲಿಂಗಪ್ರಾಣವೆಂಬ ಸಂದೇಹವಳಿದ ಶರಣ.
--------------
ಬಾಲಸಂಗಣ್ಣ
ಮರಹು ಬಂದಹುದೆಂದು ಶ್ರೀಗುರು ಕರಸ್ಥಲಕ್ಕೆ ಕುರುಹ ಕೊಟ್ಟಡೆ; ಆ ಕುರುಹು ನೋಟದಲ್ಲಿ ಅಳಿದು, ಆ ನೋಟ ಮನದಲ್ಲಿ ಅಳಿದು, ಆ ಮನ ಭಾವದಲ್ಲಿ ಅಳಿದು, ಆ ಭಾವ ಜ್ಞಾನದಲ್ಲಿ ಅಳಿದು, ಆ ಜ್ಞಾನ ಸಮರಸದಲ್ಲಿ ಅಳಿದ ಬಳಿಕ_ ಇನ್ನು ಅರಿವ ಕುರುಹಾವುದು ಹೇಳಾ ? ನೀನರಸುವ ಕುರುಹು ಎನ್ನ ಕರಸ್ಥಲದ ಲಿಂಗ, ಎನ್ನ ಕರಸ್ಥಲ ಸಹಿತ ನಾನು ನಿನ್ನೊಳಗೆ ನಿರ್ವಯಲಾದೆ. ಎನ್ನ ನಿರ್ವಯಲಲಿಂಗ ನಿನಗೆ ಸಾಧ್ಯವಾಯಿತ್ತಾಗಿ; ನೀನೇ ಪರಿಪೂರ್ಣನಯ್ಯಾ. ನಿನ್ನಲ್ಲಿ ಮಹಾಲಿಂಗವು ಸಾಧ್ಯವಾಗಿ ಅದೆ. ಗುಹೇಶ್ವರ ಸಾಕ್ಷಿಯಾಗಿ, ನೀ ಬಯಸುವ ಬಯಕೆ ಸಂದಿತ್ತು ಕಾಣಾ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
ಎಮ್ಮಾಕೆಯ ಕೈಯ ಮೊಗೆಯ ನೀರಿನಲ್ಲಿ ನಾಮವ ತೇಯಲಾಗಿ ನಾಮವುಳಿದು ನೀರಳಿಯಿತ್ತು. ಅಳಿದ ನೀರ ಹಣೆಗಿಕ್ಕಲಾಗಿ ನಿರ್ನಾಮವಾಯಿತ್ತು; ನಾರಾಯಣಪ್ರಿಯ ರಾಮನಾಥನಲ್ಲಿ ನಿಶ್ಚಯವಾಯಿತ್ತೆನಗೆ.
--------------
ಗುಪ್ತ ಮಂಚಣ್ಣ
ಕಲ್ಲು, ಹೆಂಟೆ ಹೋರಿಯಾಡಿ, ಕಲ್ಲು ಕರಗಿ, ಹೆಂಟೆ ಉಳಿಯಿತ್ತು. ಅಳಿದ ಕಲ್ಲಿಗೆ ಹೆಂಟೆ ಹಿಂಡಿಯ ಕೂಳನಟ್ಟು, ಉಂಬವರಿಲ್ಲದೆ ಅಳುತ್ತಿದ್ದಿತ್ತು. ಎನ್ನ ಗೂಡಿನ ಗುಮ್ಮಟನಾಥನಲ್ಲಿ, ಅಗಮ್ಯೇಶ್ವರಲಿಂಗ ಸತ್ತು ಕಾಣಲರಿಯದೆ.
--------------
ಮನುಮುನಿ ಗುಮ್ಮಟದೇವ
ಮನವೆಂಬುದು ಬೇರಿಲ್ಲ ; ಮಹಾದೇವನ ಮಹಾ ಅರುಹು ನೋಡಾ. ಸಂಕಲ್ಪ ವಿಕಲ್ಪಂಗಳ ಧರಿಸಿದಲ್ಲಿ ಮನವೆನಿಸಿತ್ತು ; ಅದು ಅಳಿದಲ್ಲಿ ಮಹಾಜ್ಞಾನವೆನಿಸಿತ್ತು ; ಅಳಿದ ಭಾವ ತಲೆದೋರಿದಲ್ಲಿ ಕಪಿಲಸಿದ್ಧಮಲ್ಲಿಕಾರ್ಜುನನೆನಿಸಿತ್ತು.
--------------
ಸಿದ್ಧರಾಮೇಶ್ವರ
ಬಂದವನಿವನಾರು, ಕಂಬಳಿಯ ಕಂಥೆಯ ತೊಟ್ಟು, ಆಪ್ಯಾಯನ ಹಿಂಗದ ಕರಕರ್ಪರವ ಹಿಡಿದು, ದೆಸೆವರಿವ ದಶದಂಡವ ಹಿಡಿದು, ಮನೆ ಮನ ಮಂದಿರದ ಬಾಗಿಲಲ್ಲಿ ನಿಂದು, ಇಂದ್ರಿಯಂಗಳೆಂಬ ತೃಷ್ಣೆ ಭಿಕ್ಷವಂ ಬೇಡಿ, ಬೇಡಿದ ದನಿಯ ಕೇಳಿ ಎದ್ದವೈದು ನಾಯಿ. ಹಮ್ಮಿ ಕಚ್ಚಿತ್ತು ಕಾಲ, ಮತ್ತೊಂದಡರಿ ಅಂಗವ ಹಿಡಿಯಿತ್ತು. ಮತ್ತೊಂದು ಒಡಗೂಡಿ ಕೈಯ ಕಚ್ಚಿತ್ತು. ಮತ್ತೊಂದು ಬೆರಸಿ, ನಾಸಿಕವ ಓಸರವಿಲ್ಲದೆ ಹಿಡಿಯಿತ್ತು. ಮತ್ತೊಂದು ಭಿಕ್ಷೆಗೆ ತಪ್ಪದೆ ಬಾಯ ಹಿಡಿಯಿತ್ತು. ಭಿಕ್ಷದಾಟ ತಪ್ಪಿತ್ತು, ಕಂಬಳಿಯಣ್ಣ ಕಂಬಳಿಯಲ್ಲಿ ಅಳಿದ. ಇದಕಿನ್ನು ಬೆಂಬಳಿಯ ಹೇಳಾ, ಗುಡಿಯೊಡೆಯ ಗುಮ್ಮಟನಾಥನ ಅಗಮ್ಯೇಶ್ವರಲಿಂಗವೆ.
--------------
ಮನುಮುನಿ ಗುಮ್ಮಟದೇವ
ಬುದ್ಧಿಯೊಡನೆ ಸಂಬಂಧವಾದ ಪುಣ್ಯಪಾದ ರೂಪವೆ ಸಂಚಿತ ಪ್ರಾರಬ್ಧ ಆಗಾಮಿತನದ ವಾಸನೆ ಆದುಳ್ಳನ್ನಕ್ಕ ಹುಟ್ಟುಹೊಂದು ನಟ್ಟುನಿಂದು ಬಿಟ್ಟು ತೊಲಗದಿಪ್ಪುದು ನೋಡಯ್ಯಾ. ಶಿವಪ್ರಸಾದ ಪ್ರಸಾದಿಸಲೊಡನೆ ಕರ್ಮಕ್ಷಯ. ಆ ಕರ್ಮಕ್ಷಯದೊಡನೆ ಬುದ್ಧಿಯಳಿವು. ಇಂತು ಬುದ್ಧಿ ಕರ್ಮವೆರಡರ ಅಳಿವು ಶಿಖಿಕರ್ಪುರದಳಿವಿನಂತೆ. ಅಳಿದ ಸಮನಂತರದಲ್ಲಿ ಮೋಕ್ಷ ಕಾಣಿಸಿಕೊಂಬುದು. ಇದಕ್ಕೆ ಶ್ರುತಿ: ``ತಸ್ಯ ಕರ್ಮಾಣಿ ತಾವದೇವ ಚಿರಂ ಏವಂ ನ ವಿಮೋಕ್ಷ್ಯ ಅಧಸ್ತ್ವಂ ಪಶ್ಯನ್ ಇಂತೆಂದುದಾಗಿ, ಸೌರಾಷ್ಟ್ರ ಸೋಮೇಶ್ವರಲಿಂಗದ ಪ್ರಸಾದ ಅಪೂರ್ವವಯ್ಯಾ.
--------------
ಆದಯ್ಯ
ಈರೇಳುಲೋಕ, ಹದಿನಾಲ್ಕು ಭುವನವಳಯದಲ್ಲಿ ಜಂಬೂದ್ವೀಪ ನವಖಂಡ ಪೃಥ್ವಿ ಹಿಮಸೇತು ಮಧ್ಯದೊಳಗಾದ ಖಂಡಮಂಡಲ ಯುಗಜುಗಂಗಳು, ಪಂಚಭೌತಿಕ ಪಂಚವಿಂಶತಿತತ್ವ ಸಕಲವಾಸಂಗಳೆಲ್ಲವು ತನ್ನ ಸಾಕಾರದಲ್ಲಿ ತೋರುವುದು. ಉತ್ತಮ ಕನಿಷ* ಮಧ್ಯಮವೆಂಬ ಸುಕ್ಷೇತ್ರವಾಸ, ತನ್ನಂಗದಲ್ಲಿ ಸುಳಿದಾಡುವ ಮಂಗಳಮಯದಿರವ, ಸಕಲೇಂದ್ರಿಯವ ಬಂಧಿಸದೆ ಕೂಡಿ, ಅವರವರ ಅಂಗದ ಮುಖದಲ್ಲಿ ಲಿಂಗಕ್ಕೆ ಕೊಟ್ಟು, ಸುಸಂಗಿಯಾಗಿ ವಸ್ತುವಿನ ಅಂಗದಲ್ಲಿ ಬೆರಸು. ನೀನರಿದನೆಂಬುದಕ್ಕೆ ಬೇರೊಂದು ಕಡೆಯಿಲ್ಲ. ನೀ ಮರೆದನೆಂಬುದಕ್ಕೆ ಬೇರೊಂದು ಮನವಿಲ್ಲ. ವಸ್ತು ದ್ರವ್ಯವ ತೋರಿ ಅಳಿದ ಮತ್ತೆ ವಸ್ತುವ ಕೂಡಿದಂತೆ, ಜಗಕ್ಕೆ ಭಕ್ತಿಯ ತೋರಿ ವಸ್ತು ಲೇಪ, ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರಲಿಂಗವು ಐಕ್ಯಲೇಪವಾದ.
--------------
ಸಗರದ ಬೊಮ್ಮಣ್ಣ
ಕಡೆಯಲ್ಲಿ ಮೊದಲಲ್ಲಿ ಸುವರ್ಣವೊಂದಲ್ಲದೇ ಬೇರಿಲ್ಲ ಕಾಣಿರೋ. ಬಂಗಾರ ಪ್ರಕೃತಿಯಿಂದ ಬೇರಿಟ್ಟು ತೋರಿತ್ತು ಎಂದಡೆ ಬೇರಾಗಬಲ್ಲುದೆ ಅಯ್ಯ ಶುದ್ಧ ಪರಮಾತ್ಮ ತಾನೆ ಒಂದೆರಡಾಗಿ ಜೀವ ಪರಮನೆಂದು ತೋರಿತ್ತೆಂದಡೆ ಆವಾಗ ಜೀವ, ಆವಾಗ ಪರಮನೆಂಬ ಭೇದವನರಿಯದೆ ಅರೆ ಮರುಳಾದಿರಲ್ಲ. ದೇಹಭಾವದ ಉಪಾಧಿವುಳ್ಳನ್ನಕ್ಕರ ಜೀವನು; ದೇಹಭಾವದ ಉಪಾಧಿ ಶಿವಭಾವದಲ್ಲಿ ಅಳಿದ ಬಳಿಕ ಜೀವನೆಂಬವನು ಪರಮನೆಂಬವನು ತೀವಿ ಪರಿಪೂರ್ಣ ಪರವಸ್ತು ತಾನೇ ತಾನೆಂಬಾತ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭು ತಾನೇ ಕಾಣಿರೋ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಸಂಕಲ್ಪವೆಂಬ ಸಂಕಲೆ ಹರಿಯಿತ್ತಲ್ಲಾ! ಕಾಮವೆಂಬ ಕಂಭವ ಕಿತ್ತೀಡಾಡಿತ್ತಲ್ಲಾ! ಮಾಯವೆಂಬ ಮಾವತಿಗನ ಮೀರಿತ್ತು ಆಸೆಯೆಂಬ ಅಂಕುಶಕ್ಕೆ ನಿಲ್ಲದು. ಮಾಯಾಪಾಶವೆಂಬ ಪಾಯದಳ ಅಂಜಿ ಓಡಿತ್ತು. ಮದಗಜವೆಂಬ ಅನೆ ಅಳಿದ ಬಳಿಕ, ಸಿಮ್ಮಲಿಗೆಯ ಚೆನ್ನರಾಮನೆಂಬ ಲಿಂಗದಲ್ಲಿ ಆನೆ ಆನೆ ಎಂಬುದೇನೂ ಇಲ್ಲದೆ ಹೋಯಿತ್ತು.
--------------
ಚಂದಿಮರಸ
ಕರ್ಪುರದ ಘಟ ಬೆಂದಂತೆ, ಭಿತ್ತಿಯ ಮೇಲಣ ಚಿತ್ರಪಟ ನೆನೆದಂತೆ, ಅಪ್ಪುವಿನ ಮೇಲಣ ಬಹುಮಣಿ ಲಕ್ಷಿಸಿದಂತೆ, ದೃಷ್ಟವಾಗಿ ದೃಕ್ಕಿಂಗೆ ಒಡಲಳಿವಂತೆ, ಅರಿತು ಅಳಿದ ಸ್ಥಲಭರಿತಂಗೆ ಕುಳಭೇದವಿಲ್ಲ, ನಿಃಕಳಂಕ ಮಲ್ಲಿಕಾರ್ಜುನ, ಅವಿರಳದ ಹೊಲಬಿಗನಾದ ಕಾರಣ.
--------------
ಮೋಳಿಗೆ ಮಾರಯ್ಯ
-->