ಅಥವಾ

ಒಟ್ಟು 39 ಕಡೆಗಳಲ್ಲಿ , 16 ವಚನಕಾರರು , 29 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕ್ರೀವಿಡಿದು ಗುರುಸಂಬಂದ್ಥಿಯಾಗಿ, ಜಾÕನವಿಡಿದು ಲಿಂಗಸಂಬಂದ್ಥಿಯಾಗಿ. ಘನವಿಡಿದು ಮಹಾಜಾÕನಿಯಾಗಿ, ಅರಿವು ಆಚರಣೆಯ ಕಂಡು, ಜಾÕನ ಮುಕುರವೆಂಬ ಮುಂದಣ ಶ್ರೀಸಂಬಂದ್ಥಿಯಾಗಿ, ಆಚಾರದಲ್ಲಿ ಸಂಪನ್ನನಾಗಿ, ಮಹೇಶ್ವರಸ್ಥಲವನರಿದು, ಅದೇ ಜಂಗಮವಾದ ಬಳಿಕ ನಿರಾಕುಳನಾಗಿ ಆಚರಿಸಿದರೆ ಅನಾದಿ ಜಂಗಮವೆಂಬೆ. ಸಾಮವೇದೇ- ವಿವಚಾಸೋವಿಚಾ ಲಿಂಗಾಲಿಂಗಿ ಚ ಫಲಾದಿ ಬ್ರಹ್ಮರಾಕ್ಷಸ ಸೋವಿಸಂಗಶ್ಚ | ಸೂಕರ ಶತಕೋಟಿ ಜನ್ಮ ಚ ಸೋಪಿ ಕ್ರೀಡಾಲಿಂಗ ಮಲಮೂತ್ರ ಮಾಂಸ ಭುಂಜಿತಃ | ಬ್ರಹ್ಮೇನ ಕೋಟಿ ರಾಕ್ಷಸಃ ಸೋಸಂಗೇನ ಶತಕೋಟಿಗಾರ್ದಭ ಜನ್ಮ ಚ | ಅದೇ ದಾಸಿ ದಾಸೇ ಸೂಕರ ಸಂಗಶಃ ಚ ನಾಃ | ಸೋವ ಮಾತ್ರವೆಂದು ತಂದ ಸ್ತ್ರೀಗಳನು ಶಿಷ್ಯಾದಿ ಪುತ್ರರ ಕೈಯ ಗುರು ತಾಯಿ ಎಂಬ ನಾಮಕರಣಂಗಳನುಂಟುಮಾಡಿ, ತನ್ನ ಅಂಗವಿಕಾರಕ್ಕೆ ತಂದ ಸಂತೆಯ ಡೊಂಬಿತಿಯ ತಂದು, ಹಿರಿಯರಲ್ಲಿ ಸರಿಮಾಡುವ ಜಂಗಮವೆ ಗುರುವೆ? ಅಜಾÕನ ಪುರುಷನಲ್ಲ, ಅವ ಹಿರಿಯತನಕ್ಕೆ ಸಲ್ಲ, ಅವಂಗೆ ಗುರುವಿಲ್ಲ ಲಿಂಗವಿಲ್ಲ, ಜಂಗಮ ಮುನ್ನವೆಯಿಲ್ಲ. ಅವ ಘಟಾತ್ಮನು ಸೋವಿಯ ಸಂಗ ಬೇಡ ಬಿಡಿರಣ್ಣಾ, ಸೋವಿಯ ಸಂಗವ ಮಾಡಿದರೆ ಶತಕೋಟಿ ದಾಸಿಯ ಬಸುರಲ್ಲಿ ಬಂದು, ಹೇಸಿಕೆಯಿಲ್ಲದೆ ಮಲಮೂತ್ರವನು ಹೇಗೆ ಸೂಕರ ಭುಂಜಿಸುವುದೊ ಹಾಂಗೆ ಭುಂಜಿಪನು. ನಾನಾ ಯೋನಿಯ ನರಕುವದು. ಸೋವಿ ಮಾತ್ರೇಣ ಆ ಲಿಂಗನಂ ಗುರು ತಾಯ ಅಪಮಾನ ಸಾಮಾನ್ಯವೆಂದು ಸೋವಿಯ ಸಂಗವ ಮಾಡಿದಡೆ ಎಪ್ಪತ್ತೇಳುಕೋಟಿ ಶ್ವಪಚಯೋನಿ ತಪ್ಪದಯ್ಯ. ಹನ್ನೆರಡು ಕಂಬ ಸಾಕ್ಷಿಯಾಗಿ, ಕಳಕನ್ನಡಿ ಸಾಕ್ಷಿಯಾಗಿ, ತೆಳೆಮಲು ಕಟ್ಟಿ ಸಾಕ್ಷಿಯಾಗಿ, ಆಯಿರಣೆಕೋಲು ಸಾಕ್ಷಿಯಾಗಿ, ಮುತ್ತೈದೆತನದಲ್ಲಿ ಶ್ರೇಷ್ಠಯಾಗಿ, ಜಾÕನ ದೃಕ್ಕಿನಿಂ ತಿಳಿದು, ಅನುಭಾವದ ಮುಖವನರಿದಂತೆ, ಆ ಜಾÕನನೇತ್ರವ ಅರಿದು ಧಾರೆಯನೆರೆಸಿಕೊಂಡು, ಅರಿವಿನಲ್ಲಿ ಇರದೆ ಕುರಿಯ ಹೇಲ ತಿಂಬಂತೆ, ಬಾಯಿಗೆ ಬಂದಂತೆ ಸೋವಿಯ ಸಂಗವ ಮಾಡುವವರ ಸರ್ವಾಂಗವೆಲ್ಲ ಗಣಿಕೆಯ ಯೋನಿಯ ಬಸುರ ನೋಡಾ. ಧಾರೆಯನೆರೆಸಿಕೊಂಡು ಕ್ರೀವಿಡಿದು ನಡೆಯದೆ, ತೊತ್ತಿನ ಮಗನಿಗೆ ಪಟ್ಟ ಕಟ್ಟಿದರೆ ಹಾದಿಯ ಎಲುವ ಕಂಡು ಓಡಿಹೋಗಿ ಗಡಗಡನೆ ಕಡಿವಂತೆ, ಸೋವಿಯ ಎಂಜಲ ತಿಂದವಂಗೆ ಗುರುವಿಲ್ಲ. ಅವ ದೇವಲೋಕ ಮತ್ರ್ಯಲೋಕ ಎರಡಕ್ಕೆ ಸಲ್ಲ. ಆವಾಗಮದಲ್ಲಿ ಉಂಟು, ಗಳಹಿ ಹೇಳಿರೊ, ಮಕ್ಕಳಿರಾ. ನೀವು ಬಲ್ಲರೆ ಕಾಳನಾಯ ಹೇಲ ತಿಂಬಂಗೆ ಹಿರಿಯನೆಂದು, ಹೋತನಂತೆ ಗಡ್ಡವ ಬೆಳಸಿಕೊಂಡು ಗುಡರಗುಮ್ಮನಂತೆ ಸುಮ್ಮನಿರುವಿರಿ. ಗರ್ವತನಕ್ಕೆ ಬಂದು ಹಿರಿಯರೆಂದು ಆಚರಣೆ ನ್ಯಾಯವ ಬಗಳುವಿರಿ. ಸೋವಿಸಂಗದಿಂದ ಕನಿಷ್ಠ ನರಕ ಕಾಣಿರಣ್ಣಾ. ಸೋವಿಯ ಸಂಗವ ಬಿಟ್ಟು ಧಾರೆಯ ಸ್ತ್ರೀಯಳ ನೆರದರೆ, ಆಚಾರವಿಡಿದು ನಡೆದು ಆಚರಣೆಯ ನುಡಿದರೆ ಶುದ್ಧವಾಗುವದಲ್ಲದೆ ತೊತ್ತಿನ ಮಗನಾಗಿ ಎಡೆಯ ಸಮಗಡಣವ ಬೇಡುವ ಪಾತಕರ, ಅವರ ಜಂಗಮವೆಂಬೆನೆ? ಸೋವಿಯ ಸಂಗದಿಂದ ಬಂದುದು ಬ್ರಹ್ಮೇತಿ. ಅಥರ್ವಣ ಸಾಮವೇದ ಯಜುರ್ವೇದ ಋಗ್ವೇದ ಇಂತಪ್ಪ ನಾಲ್ಕು ವೇದದಲ್ಲಿ ಶ್ರುತಿ ಸ್ಮøತಿಗಳಲ್ಲಿ ಆಗಮ ಪುರಾಣಂಗಳಲ್ಲಿ ಸೋವಿಯ ವಾಚ್ಯವೆಂಬುದುಂಟೆ ಪರಮಪಾತಕರಿರಾ? ನೂತನವ ಗಂಟಿಕ್ಕಿ ಜಗಲಿಯೆನ್ನದೆ ಪಟ್ಟಶಾಲೆಯೆಂಬಿಂ ತೊಂಡರಿರಾ. ತೊತ್ತನೊಯ್ದು ತೊತ್ತೆದಾಸಿ ಬಾಯೆನ್ನದೆ ಹೋವಿಯೆಂದು ಬಗಳುವಿರಿ. ಕಲಿಯುಗದಲ್ಲಿ ನೂತನದ ಸೂಳೆಯ ಮಕ್ಕಳು ನೀವು. ಸೋವಿಯ ಸಂಗವ ಮಾಡಿದವನು ಅರಿವುಳ್ಳ ಪುರುಷನಾದರೂ ಆಗಲಿ, ಅರಿದು ಮತ್ತೆ ಅರೆಮರುಳಾದ ಹಿರಿಯರನೇನೆಂಬೆನಯ್ಯಾ. ಅವನು ಪಾತಕನಘೋರಿಗಳು. ಅವರು ಇವರುವನರಿಯದ ಅಘೋರಿಗಳೆಂಬ ಇಂತಪ್ಪ ಸೋವಿಯ ಸಂಗವ ಮಾಡುವ ಬ್ರಹ್ಮೇತಿಕಾರ ಪಂಚಮಹಾಪಾತಕರು ಇಹಪರಕ್ಕೆ ಸಲ್ಲರೆಂದುದು. ನಿಮ್ಮಾಣೆ ನಿಮ್ಮ ಪ್ರಮಥರಾಣೆ, ಇಹವಿಲ್ಲ ಪರವಿಲ್ಲ, ಮುಕ್ತಿಯ ಫಲವಿಲ್ಲ, ಅಘೋರವಲ್ಲದೆ ಮತ್ತೇನೂ ಇಲ್ಲ. ನಿಮ್ಮಾಣೆ ಬ್ಥೀಮಬಂಕೇಶ್ವರಾ.
--------------
ಭೀಮಬಂಕೇಶ್ವರ
ಎಲೆ ತಂಗಿ, ಶರಣಸತಿ ಲಿಂಗಪತಿಯಾದ ಪತಿವ್ರತಾಭಾವದ ಚಿಹ್ನೆ, ನಿನ್ನ ನಡೆ ನುಡಿಯಲ್ಲಿ, ಹೊಗರುದೋರುತ್ತಿದೆ, ನಿನ್ನ ಪೂರ್ವಾಪರವಾವುದಮ್ಮ?. ಸುತ್ತೂರು ಸಿಂಹಾಸನದ ಪರ್ವತದೇವರ ಶಿಷ್ಯರು, ಭಂಡಾರಿ ಬಸವಪ್ಪೊಡೆಯದೇವರು. ಆ ಭಂಡಾರಿ ಬಸವಪ್ಪೊಡೆಯದೇವರ ಶಿಷ್ಯರು. ಕೂಗಲೂರು ನಂಜಯ್ಯದೇವರು. ಆ ನಂಜಯ್ಯದೇವರ ಕರಕಮಲದಲ್ಲಿ, ಉದಯವಾದ ಶರಣವೆಣ್ಣಯ್ಯಾ ನಾನು. ಎನ್ನ ಗುರುವಿನ ಗುರು ಪರಮಗುರು, ಪರಮಾರಾಧ್ಯ ತೋಂಟದಾರ್ಯನಿಗೆ ಗುರುಭಕ್ತಿಯಿಂದೆನ್ನ ಶರಣುಮಾಡಿದರು. ಆ ತೋಂಟದಾರ್ಯನು, ತನ್ನ ಕೃಪೆಯೆಂಬ ತೊಟ್ಟಿಲೊಳಗೆನ್ನಂ ಮಲಗಿಸಿ, ಪ್ರಮಥಗಣಂಗಳ ವಚನಸ್ವರೂಪತತ್ವಾರ್ಥವೆಂಬ, ಹಾಲು ತುಪ್ಪಮಂ ಸದಾ ದಣಿಯಲೆರೆದು, ಅಕ್ಕರಿಂದ ರಕ್ಷಣೆಯಂ ಮಾಡಿ, ``ಘನಲಿಂಗಿ' ಎಂಬ ನಾಮಕರಣಮಂ ಕೊಟ್ಟು, ಪ್ರಾಯಸಮರ್ಥೆಯಂ ಮಾಡಿ, ಸತ್ಯಸದಾಚಾರ, ಜ್ಞಾನಕ್ರಿಯೆಗಳೆಂಬ, ದಿವ್ಯಾಭರಣಂಗಳಂ ತೊಡಿಸಿ, ಅರುಹೆಂಬ ಬಣ್ಣವ ನಿರಿವಿಡಿದುಡಿಸಿ, ಅರ್ತಿಯ ಮಾಡುತ್ತಿಪ್ಪ ಸಮಯದಲ್ಲಿ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನ, ತನಗೆ ನಾನಾಗಬೇಕೆಂದು ಬೇಡಿಕಳುಹಲು, ಎಮ್ಮವರು ಅವಂಗೆ ಮಾತನಿಕ್ಕಿದರಮ್ಮಾ.
--------------
ಘನಲಿಂಗಿದೇವ
ಸೋಮವಾರ ಮಂಗಳವಾರ ಹುಣ್ಣಿಮೆ ಸಂಕ್ರಾಂತಿ ಶಿವರಾತ್ರಿ_ ಮೊದಲಾದ ತಿಥಿವಾರಂಗಳಲ್ಲಿ ಏಕಭುಕ್ತೋಪವಾಸಿಯಾಗಿ ಆ ಕ್ಷುದ್ರ ತಿಥಿಗಳಲ್ಲಿ, ಮಾಡಿದ ನೀಚೋಚ್ಛಿಷ್ಟವಂ ತಂದು ತನ್ನ ಕರಸ್ಥಲದ ಇಷ್ಟಲಿಂಗಕ್ಕೆ ಕೊಟ್ಟು ಕೊಂಡು ಭಕ್ತನೆನಿಸಿಕೊಂಡೆನೆಂಬ ಅನಾಚಾರಿಯ ಮುಖವ ನೋಡಲಾಗದು ನೋಡಲಾಗದು. ಅದೇನು ಕಾರಣವೆಂದಡೆ: ದಿನ ಶ್ರೇಷ್ಠವೊ ? ಲಿಂಗ ಶ್ರೇಷ್ಠವೊ ? ದಿನ ಶ್ರೇಷ್ಠವೆಂದು ಮಾಡುವ ದುರಾಚಾರಿಯ ಮುಖವ ನೋಡಲಾಗದು, ನೋಡಲಾಗದು, ಅದೆಂತೆಂದಡೆ: ಆವ ದಿನ ಶ್ರೇಷ್ಠವೆಂದು ದಿನವೆ ದೈವವೆಂದು ಮಾಡುವನಾಗಿ, ಅವನು ದಿನದ ಭಕ್ತನು. ಅವನಂತಲ್ಲ ಕೇಳಿರಣ್ಣ ಸದ್ಭಕ್ತನು_ಲಿಂಗವೆ ಘನವೆಂದು ಜಂಗಮವೆ ಶ್ರೇಷ್ಠವೆಂದು ಆ ಲಿಂಗಜಂಗಮವೆ ಶ್ರೇಷ್ಠವೆಂದು ಆ ಲಿಂಗಜಂಗಮವೆ ದೈವವೆಂದು ಮಾಡುವನಾಗಿ ಆತ ಲಿಂಗಭಕ್ತನು. ಈ ಲಿಂಗಭಕ್ತಂಗೆ ದಿನದ ಭಕ್ತನ ತಂದು ಸರಿಯೆಂದು ಹೋಲಿಸಿ ನುಡಿವಂಗೆ, ಗುರುವಿಲ್ಲ ಲಿಂಗವಿಲ್ಲ ಜಂಗಮವಿಲ್ಲ ಪಾದೋದಕವಿಲ್ಲ ಪ್ರಸಾದವಿಲ್ಲ, ಅವ ಭಕ್ತನಲ್ಲ, ಅವಂಗೆ ಅಘೋರನರಕ. ಭವಿದಿನ_ತಿಥಿ_ವಾರಂಗಳಲ್ಲಿ ಕೂರ್ತುಮಾಡುವಾತ ಭಕ್ತನಲ್ಲ. ಅಲ್ಲಿ ಹೊಕ್ಕು ಲಿಂಗಾರ್ಚನೆಯ ಮಾಡುವಾತ ಜಂಗಮವಲ್ಲ. ಈ ಉಭಯರನು ಕೂಡಲಚೆನ್ನಸಂಗಯ್ಯ ಕುಂಭೀಪಾತಕ ನಾಯಕನರಕದಲ್ಲಿಕ್ಕುವನು
--------------
ಚನ್ನಬಸವಣ್ಣ
ಜಗತ್ತಿನ ಹೊಲೆಯನೆಲ್ಲವನು ಉದಕ ಕೊಳುವುದು, ಆ ಉದಕದ ಹೊಲೆಯ ಕಳೆದಲ್ಲದೆ ಲಿಂಗಕ್ಕೆ ಮಜ್ಜನಕ್ಕೆರೆವ ಲಿಂಗದ್ರೋಹಿಗಳ ಮಾತಕೇಳಲಾಗದು. ಮೇಘಬಿಂದುವಿನಿಂದಾದ ಉದಕ, ಸೂರ್ಯನ ಮುಖದಿಂದಾಗಿ ದ್ರವ್ಯ, ಅಗ್ನಿಯ ಮುಖದಿಂದಾದ ಪಾಕ_ಇಂತಿವರ ಪೂರ್ವಾಶ್ರಯವ ಕಳೆದಲ್ಲದೆ ಭಕ್ತ ಮಾಹೇಶ್ವರರೂ ಶೀಲಪರರೂ ಮೊದಲಾದ ನಾನಾ ವ್ರತಿಗಳು ಲಿಂಗಕ್ಕೆ ಮಜ್ಜನವ ಮಾಡಲಾಗದು, ಅರ್ಪಿಸಲಾಗದು, ಅದೆಂತೆಂದಡೆ: ಉದಕದ ಪೂರ್ವಾಶ್ರಯವನು, ದ್ರವ್ಯದ ಪೂರ್ವಾಶ್ರಯವನು, ಕಳೆದಲ್ಲದೆ ಲಿಂಗಕ್ಕೆ ಅರ್ಪಿಸಬಾರದು. ಇಂತೀ ತ್ರಿವಿಧದ ಪೂರ್ವಾಶ್ರಯವ ಕಳೆವ ಪರಿಯೆಂತೆಂದಡೆ: ಉದಕದ ಪೂರ್ವಾಶ್ರಯವ ಮಂತ್ರಯುಕ್ತವಾಗಿ ಜಂಗಮದ ಪಾದೋದಕದಿಂದ ಕಳೆದು ಪಾಕಪ್ರಯತ್ನವ ಮಾಡುವುದು. ದ್ರವ್ಯದ ಪೂರ್ವಾಶ್ರಯ ಜಂಗಮದ ಹಸ್ತ ಪರುಷದಿಂದ ಹೋದುದಾಗಿ ಅಗ್ನಿಯಲಾದ ಪಾಕದ ಪೂರ್ವಾಶ್ರಯವು ಜಂಗಮದ ಪ್ರಸಾದದಿಂದ ಹೋಯಿತ್ತು. ಈ ಶಿವನ ವಾಕ್ಯಗಳನರಿದು, ಮತ್ತೆ ಜಂಗಮದ ಪಾದೋದಕದಿಂದ ಪಾಕಪ್ರಯತ್ನವ ಮಾಡಲಾಗದು, ಲಿಂಗಕ್ಕೆ ಮಜ್ಜನಕ್ಕೆರೆಯಲಾಗದೆಂಬ ಶೈವ ಬೌದ್ಧ ಚಾರ್ವಾಕ ಚಾಂಡಾಲ ಶಿವದ್ರೋಹಿಯ ಮಾತಕೇಳಿ, ಬಿಟ್ಟನಾದರೆ,_ಅವ ವ್ರತಭ್ರಷ್ಟ ಅವನ ಮುಖವ ನೋಡಲಾಗದು. ಸಾಕ್ಷಿ:``ಸರ್ವಾಚಾರಪರಿಭ್ರಷ್ಟಃ ಶಿವಾಚಾರೇನ ಶುಧ್ಯತಿ ಶಿವಾಚಾರ ಪರಿಭ್ರಷ್ಟಃ ರೌರವಂ ನರಕಂ ವ್ರಜೇತ್''_ ಇಂತೆಂದುದಾಗಿ, ಸಮಸ್ತವಾದ ವ್ರತಂಗಳಲ್ಲಿ ಭ್ರಷ್ಟರಾದವರ ಶಿವಾಚಾರದಲ್ಲಿ ಶುದ್ಧನ ಮಾಡಬಹುದು, ಶಿವಾಚಾರದಲ್ಲಿ ಭ್ರಷ್ಟರಾದವರಿಗೆ ರೌರವ ನರಕ ತಪ್ಪದು. ಅವಗೆ ಪ್ರಾಯಶ್ಚಿತ್ತವಿಲ್ಲಾಗಿ ಅವನ ಮುಖವ ನೋಡಲಾಗದು, ಮತ್ತಂ ``ವ್ರತಭ್ರಷ್ಟಮುಖಂ ದೃಷ್ಟ್ವಾಶ್ವಾನಸೂಕರವಾಯಸಂ ಅಶುದ್ಧಸ್ಯ ತಥಾದೃಷ್ಟಂ ದೂರತಃ ಪರಿವರ್ಜಯೇತ್''_ಇಂತೆಂದುದಾಗಿ, ವ್ರತಶೀಲಗಳಲ್ಲಿ ನಿರುತನಾದ ಶಿವಶರಣನು ಪಥದಲ್ಲಿ ಆಚಾರಭ್ರಷ್ಟನ ಕಂಡಡೆ ಮುಖವ ನೋಡಿದಡೆ ನಾಯ ಕಂಡಂತೆ ಸೂತಕನ ಕಂಡಂತೆ ಕಾಗೆಯ ಕಂಡಂತೆ ಹೇಸಿಗೆಯ ಕಂಡಂತೆ ತೊಲಗುವುದು. ಆ ವ್ರತವ ಬಿಡಿಸಿದವನು, ಅವನ ಮಾತ ಕೇಳಿ ಬಿಟ್ಟವನು ಇಬ್ಬರಿಗೂ ಗುರುಲಿಂಗಜಂಗಮ ಪಾದೋದಕ ಪ್ರಸಾದಕ್ಕೆ ಹೊರಗಾಗಿ ಅನಂತಕಾಲ ನರಕವನೈದುವರು. ಆ ಪಾಪಿಗಳ ಮುಖವ ನೋಡಲಾಗದು, ನುಡಿಸಲಾಗದು ವ್ರತನಿಷ್ಠೆಯುಳ್ಳವರು ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಗುರುಹಸ್ತದಲ್ಲಿ ಉತ್ಪತ್ಯವಾಗಿ, ಜಂಗಮಾನುಭವ ಶರಣರ ಸಂಗದಲ್ಲಿ ಬೆಳೆದು, ನಿಜಲಿಂಗದಲ್ಲಿ ಲೀಯವಾದ ಗುರುಚರ ಭಕ್ತರು ತಮ್ಮ ಸ್ಥೂಲಕಾಯವೆಂಬ ನರಕಂಥೆಯ ಕಳೆದರೆ, ಭಕ್ತ ಬಂಧುಗಳಾದ ಆಪ್ತ ಗಣಂಗಳು ಬಂದು ಸಮಾಧಿಯಂ ತೆಗೆದು, ಆ ಕಾಯವೆಂಬ ಕಂಥೆಯ ನಿಕ್ಷೇಪವಂ ಮಾಡುವುದೆ ಸದಾಚಾರ. ಇಂತಲ್ಲದೆ ಮೃತವಾದನೆಂದು ಗೂಟವಂ ಬಲಿದು, ಗುಂಟಿಕೆಯನಿಕ್ಕಿ, ಶೋಕಂಗೆಯ್ದು, ಪ್ರೇತಸೂತಕ ಕರ್ಮವಿಡಿದು, ತದ್ದಿನವಂ ಮಾಡುವದನಾಚಾರ, ಪಂಚಮಹಾಪಾತಕ. ಅವಂಗೆ ಗುರು ಲಿಂಗ ಜಂಗಮ ಪ್ರಸಾದವಿಲ್ಲ ಅದೆಂತೆಂದೊಡೆ: ``ಯೋ ಗುರುಂ ಮೃತಭಾವೇನ ತದ್ದಿನಂ ಯಸ್ಯ ಶೋಚ್ಯತೇ ಗುರುಲಿಂಗಪ್ರಸಾದಂ ಚ ನಾಸ್ತಿ ನಾಸ್ತಿ ವರಾನನೇ ಎಂದುದಾಗಿ, ಪ್ರೇತಸೂತಕದ ಪಾತಕರಿಗೆ ಅಘೋರನರಕ ತಪ್ಪದು. ಇಂತಪ್ಪ ಅಘೋರನರಕಿಗಳ ಮುಖವ ನೋಡಲಾಗದು ಕಾಣಾ ಕೂಡಲಚೆನ್ನಸಂಗಯ್ಯ.
--------------
ಚನ್ನಬಸವಣ್ಣ
ಸತ್ಯಸಹಜ ನಿತ್ಯ ಉತ್ತಮ ವಸ್ತು, ನಿಜತತ್ವವೆನಿಸುವ ಶಿವನು ಒಂದೇ ವಸ್ತು. ವೇದ, ಶಾಸ್ತ್ರ, ಪುರಾಣ, ಆಗಮ, ಅಷ್ಟಾದಶ ವಿದ್ಯೆಂಗಳು ವಾದಿಸಲು, ಅಂದೂ ಇಂದೂ ಶಿವತತ್ವ ಒಂದೇ ವಸ್ತುವೆಂದು ನಿರ್ಧರಿಸುವವು. ಸಕಲ ನಿಃಕಲದೊಳಗೆ ಉತ್ತಮೋತ್ತಮ ವಸ್ತುವೊಂದೇ. ಇದನರಿದು ನಿಶ್ಚೈಸುವ ವಿವೇಕವುಳ್ಳ ಮನ ಅಂದೂ ಇಂದೂ ಒಂದೇ. ಇದನೆಂತೂ ನೀವೇ ಬಲ್ಲರಿ. ಈ ಒಂದೊಂದರಲ್ಲೆ ಒಂದೊಂದ ಮಾಡಲು ಒಂದಲ್ಲದೆ ಮತ್ತೊಂದಿಲ್ಲ. ಇದಲ್ಲದೆ ಇನ್ನೊಂದುಂಟೆಂಬವಂಗೆ ಎರಡಲ್ಲದೆ ಒಂದಿಲ್ಲ. ಅವಂಗೆ ಅಧೋಗತಿ, ಅವನಜ್ಞಾನಿ. ಒಂದೆಂದರಿದವಂಗೆ ಜ್ಞಾನವಿದೆ, ಭಕ್ತಿಯಿದೆ, ಮುಕ್ತಿಯಿದೆ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.
--------------
ಉರಿಲಿಂಗಪೆದ್ದಿ
ಲಿಂಗಾಂಗಿಗಳಲ್ಲಿ ಹೊಲೆಸೂತಕವ ಕಲ್ಪಿಸುವನ್ನಕ್ಕ ಪ್ರಾಣಲಿಂಗಸಂಬಂಧಿಯಲ್ಲ. ಜಂಗಮದಲ್ಲಿ ಕುಲಸೂತಕವ ಹಿಡಿವನ್ನಕ್ಕ ಶಿವಚಾರಯುಕ್ತನಾದ ಭಕ್ತಾನುಭಾವಿಯಲ್ಲ. ಪ್ರಸಾದದಲ್ಲಿ ಎಂಜಲಸೂತಕವ ಭಾವಿಸುವನ್ನಕ್ಕ, ಪ್ರಸಾದಿಯಲ್ಲ, ಭಕ್ತನಲ್ಲ, ಶರಣನಲ್ಲ, ಲಿಂಗೈಕ್ಯನಲ್ಲ, ಅವಂಗೆ ಲಿಂಗವಿಲ್ಲ ಕಾಣಾ ಕೂಡಲಚೆನ್ನಸಂಗಯ್ಯಾ.
--------------
ಚನ್ನಬಸವಣ್ಣ
ಈಶ! ನಿಮ್ಮ ಪೂಜಿಸಿದ ಬಳಿಕ ಅನ್ಯ ದೈವಂಗಳಿಗೆ ಹೇಸಲೇ ಬೇಕು. ಹೇಸದೆ ಅನ್ಯದೈವಕ್ಕೆ ಆಸೆ ಮಾಡಿದಡೆ ಅವ ನಮ್ಮ ಈಶ್ವರಂಗೆ ಹೊರಗು. ದೋಷರಹಿತ ಭಕ್ತರು ಅವಂಗೆ ಕುಲವೆಂದು ಕೂಸ ಕೊಟ್ಟು ಕೂಡುಂಡಡೆ ಮೀಸಲ ಬೋನವ ನಾಯಿ ಮುಟ್ಟಿದಂತೆ ಕಾಣಾ!ರಾಮನಾಥ.
--------------
ಜೇಡರ ದಾಸಿಮಯ್ಯ
ಆದಿಯನಾದಿ ಆಚಾರವ ಕಾಣದೆ, ಸಮಮಾನದ ಲಿಂಗದ ಘನವ ತಿಳಿಯದೆ, ದಾಸಿಯ ಸಂಗಂಗೆಯ್ವ ಜಂಗಮಾಚಾರ್ಯಜ್ಞಾನಪುರುಷರು ಚಿತ್ತೈಸಿ, ಶೈವಾರಾದನೆಯ ಸ್ಥಲದಂತೆ ನಡೆದು, ಗಳಹಿಕೊಂಡು ಇಪ್ಪಿರಿ. ಅಂಗದನಿತ ದಾಸೆಗೆ, ಪಂತಿಯ ಗಡಣದ ಹಸುವಿನಾಸೆಗೆ, ಕಾಂಚಾಣದ ಪಂತಿಯಾಸೆಗೆ, ಸ್ಥಲ ಜಂಗಮಸ್ಥಲವಾಸಿಯ ಗಡಣದಾಸೆಗೆ, ಪಂತಿ ಪಾದಾರ್ಚನೆಯ ಹಿರಿಯತನದ ಗಡಣ ಗಮಕದಾಸೆಗೆ, ಕೃತಿಯ ದ್ವೆ ೈತವ ನಟಿಸುವ ಪಂಚಮಹಾಪಾತಕದೇವರ ದೇವತ್ವದ ಬಲ್ಲರು ಕೇಳಿರಣ್ಣ. ನಾ ದೇವತಾದೇವನೆಂಬುದೊಂದು ಸಮದೇವತ್ವದ ಗಳಹುವಿರಿ. ಅಂಗದಲ್ಲಿ ಸೋವಿ ಮಾತ್ರವೆಂಬ ಸ್ತ್ರೀಯ ಆಲಿಂಗನಂಗೈದು ಗಳಹುವಿರಿ. ಶ್ರುತಿಃ ಅರ್ಧವಣಿ ಕಥಃ ಸೋವಿ ವಚಃ ಬಾದಿನಿ ಪರ್ವಣಃ | ಪಾಪಿಷ್ಟಾ ದುಷ್ಟದ್ರೋಹಿ ಚಾ ಪಾಪಿಷ್ಟ ಗುರುದ್ರೋಹಿ ಚಾ | ಗುರುಶಿವಚ್ಚೇದನ ತತ್ ಗುರುಷಾಮಾ ಚಿ ಅಪಹಿನ್ | ಗುರುಬಂಧನ ಗ್ರಾಹಿ ಚಃ | ಇಂತೆಂದುದಾಗಿ, ಸೋವಿಮಾತ್ರವೆಂದು ವಾಗದ್ವೈತವನುಂಟುಮಾಡಿ ಕಂಡು, ತಮ್ಮ ಸ್ವಯ ಇಚ್ಛೆಯ ಭಾವಕ್ಕೆ ಗಳಹಿಕೊಂಡು, ಹಿರಿಯರ ಮರೆಯಲ್ಲಿ ಕುಳಿತು, ಒಡಲ ಹೊರೆವ ಶೂಕರನಂತೆ, ತುಡುಗುಣಿತನಕ್ಕೆ ಗಡಣಿಸಿಕೊಂಡು ಹಿರಿಯರೆಂಬಿರಿ. ಶಿವಾಚಾರ ಃ ಗಿರಿಜಾನಾಥಂಗೆ ಗೌರಿ ತ್ರಿವಿಧವಿಧಮೇಕಾರ್ಥಕಲ್ಯಾಣ, ಗಿರಿಜಾಧಾರಿಯಲ್ಲಿ ಶಿವನ ದೇವತ್ವ ಕೆಟ್ಟಿತ್ತೆ ಪಾತಕರಿರಾ? ಸೋವಿಯ ಆಲಿಂಗನಂಗೈದು, ಚುಂಬನ ಕರ ಉರ ಜಘನ ಯೋನಿಚಕ್ರವ ಕೂಡಿ ನೆರೆದ ಬಳಿಕ, ಪ್ರಾತಃಕಾಲದಲ್ಲಿ ಹನ್ನೆರಡು ಜಂಗಮದೇವರಿಗೆ ಹನ್ನೆರಡು ಸುವರ್ಣಗಾಣಿಕೆಯನಿಕ್ಕಿ, ಹನ್ನೆರಡು ದ್ವಿವಸ್ತ್ರ, ಹನ್ನೆರಡು ತೆಂಗಿನಕಾಯಿಂದ ಹನ್ನೆರಡು ಜಂಗಮದೇವರಿಗೆ ಈ ಪರಿಯಾರ್ಥ ಅರ್ಚನೆಯ ಮಾಡಿದರೆ, ನವಭೋಗದೊಳಗಣ ತ್ರಿವಿಧ ಭಾಗೆಯ ಕಲೆಯಿರಣ್ಣ. ಅರಿದು ಮಾಡಿ ಮರದಂತೆ, ಬೆಬ್ಬನೆ ಬೆರೆತುಕೊಂಡಿರುವಾತ ಹಿರಿಯನಲ್ಲ. ಆತ ಗುರುವಲ್ಲ ಲಿಂಗವಲ್ಲ ಜಂಗಮವಲ್ಲ ಪಾದೋದಕ ಪ್ರಸಾದದೊಳಗಲ್ಲ. ಅವ ಅಮೇಧ್ಯ ಸುರ ಭುಂಜಕನು. ಇಂತೆಂಬ ಶ್ರುತಿಯ ಮೀರಿ ಆಚರಿಸುವ, ಬ್ರಹ್ಮರಾಕ್ಷಸ. ನವಕೋಟಿ ಯೋನಿಚಕ್ರದಲ್ಲಿ ರಾಟಾಳದ ಘಟದಂತೆ ತಿರುಗುವನು. ಆದಿಯ ವಚನದ ಸಮ್ಮತವಿದು, ಸೋವಿಯ ಸಂಗ ಆಲಿಂಗನಂಗೈವಿರಿ. ಸೋವಿಯ ಸಂಗ ಆಲಿಂಗನಂಗೈದವ, ಶತಕೋಟಿ ಶೂಕರಯೋನಿಯಲ್ಲಿ ಬಪ್ಪನು. ನವಕೋಟಿ ಗಾರ್ಧಭಯೋನಿಯಲ್ಲಿ ಬಪ್ಪನು. ಶತಕೋಟಿ ಕುಕ್ಕುಟಯೋನಿಯಲ್ಲಿ ಬಪ್ಪನು. ಸಚರಾಚರಯೋನಿ ಯೋನಿನವಕೋಟಿ ತಪ್ಪದು. ಅವಂಗೆ ಜನ್ಮ ಜನ್ಮಾಂತರದಲ್ಲಿ ಬಪ್ಪುದು ತಪ್ಪದು. ಇಂತಿದನರಿದು ಮರೆದೆಡೆ, ದೇವ ಮತ್ರ್ಯ ತಪರ್ಲೋಕಕ್ಕೆ ಸಲ್ಲಸಲ್ಲ, ಅಲ್ಲ ನಿಲ್ಲು, ಮಾಣು, ಹೊರಗಯ್ಯ. ನಿಮ್ಮಾಣೆ, ನಿಮ್ಮ ಪ್ರಮಥರಾಣೆ, ಹೊಯ್ಯೋ ಡಂಗುರವ, ದೇವರಾಯ ಸೊಡ್ಡಳಾ.
--------------
ಸೊಡ್ಡಳ ಬಾಚರಸ
ತಾನು ಭವಿತನಕ್ಕೆ ಹೇಸಿ ಭಕ್ತನಾದ ಬಳಿಕ ಮರಳಿ, ಭವಿಯಾಗಿದ್ದ ತಾಯಿ ತಂದೆ ಒಡಹುಟ್ಟಿದವರ ಬಂಧುಬಳಗವೆಂದು ಬೆರಸಿದರೆ ಕೊಂಡ ಮಾರಿಂಗೆ ಹೋಹುದು ತಪ್ಪದು. ಹಸಿಯ ಮಣ್ಣಿನಲ್ಲಿ ಮಾಡಿದ ಮಡಕೆ, ಅಗ್ನಿಯ ಮುಖದಲ್ಲಿ ಶುದ್ಧವಾದ ಬಳಿಕ ಅದು ತನ್ನ ಪೂರ್ವಕುಲವ ಕೂಡದು ನೋಡಾ, ಅದೆಂತೆಂದಡೆ: ಅಗ್ನಿದಗ್ಧಘಟಃ ಪ್ರಾಹುರ್ನ ಭೂಯೋ ಮೃತ್ತಿಕಾಯತೇ ತಚ್ಛಿವಾಚಾರಸಂಗೇನ ನ ಪುನರ್ಮಾನುಷೋ ಭವೇತ್ ಎಂದುದಾಗಿ, ಭಕ್ತನಾಗಿ, ಭವಿಯ ನಂಟನೆಂದು ಪಂತಿಯಲ್ಲಿ ಕುಳ್ಳಿರಿಸಿಕೊಂಡು ಉಂಡನಾದರೆ; ಪಂಚಮಹಾಪಾತಕ, ಅವಂಗೆ ನಾಯಕನರಕ ತಪ್ಪದು ಕಾಣಾ ಕೂಡಲಚೆನ್ನಸಂಗಯ್ಯಾ.
--------------
ಚನ್ನಬಸವಣ್ಣ
ನಮ್ಮ ನಲ್ಲನೂ ನಾವೂ ನೆರೆವಲ್ಲಿ ಅವ ಬಂದು ರುsುಳಪಿಸುವ ಹಾಹಾ ಯ್ಯಾ ಯ್ಯಾ ಯ್ಯಾ. ಅವಗೆ ನಿಮಗೆ ಮತ್ಸರವುಂಟು. ಆತನ ಕೈಕಾಲ ಛೇಸಿ ನಾವು ನಿಶ್ಚಿಂತ ಮನೆಗೆ ಹೋಹ ಬಾರಾ ಬಾರಾ ಎಂದಳು ಕಪಿಲಸಿದ್ಧಮಲ್ಲಿನಾಥಯ್ಯನ.
--------------
ಸಿದ್ಧರಾಮೇಶ್ವರ
ಕಾಯದ ನುಂಪನೊಬ್ಬ ಕಂಡು ಬಯಸಿದನು. ಅವಂಗೆ ಮಾಂಸವ ಬೆಲೆಮಾಡಿಕೊಡುವೆನು. ಎನ್ನ ಪ್ರಾಣದೊಡೆಯಂಗೆ ಎನ್ನ ಹೃದಯವ ಸೂರೆಗೊಡುವೆನು ಚೆನ್ನಮಲ್ಲಿಕಾರ್ಜುನದೇವಯ್ಯನು ಮುನಿದು ಭವಿಗೆ ಮಾರಿದಡೆ ಹೊಲಬುಗೆಡದಿರಾ ಮನವೆ.
--------------
ಅಕ್ಕಮಹಾದೇವಿ
ಅವುದಾನೊಂದು ಪದಾರ್ಥವ ಲಿಂಗಾರ್ಪಿತವ ಮಾಡಿದ ಬಳಿಕ ಪದಾರ್ಥದ ಪೂರ್ವಾಶ್ರಯವಳಿದು ಪ್ರಸಾದವಾಯಿತ್ತು ನೋಡಾ. ಆ ಪ್ರಸಾದವ ಮುಟ್ಟುವ ಹಸ್ತವು ಪ್ರಸಾದ ಹಸ್ತ. ಆ ಪ್ರಸಾದವ ಕೊಂಬ ಜಿಹ್ವೆಯು ಪ್ರಸಾದ ಜಿಹ್ವೆ. ಆ ಪ್ರಸಾದಕ್ಕೆ ಭಾಜನವಾಗಿಪ್ಪ ಸರ್ವಾಂಗವು ಪ್ರಸಾದ ಕಾಯ ನೋಡ. ಪ್ರಸಾದವೆಂದರೆ ಪರಶಿವಸ್ವರೂಪು ತಾನೆ ನೋಡಾ. ಈ ಪರಮ ಪ್ರಸಾದಗ್ರಾಹಕನಾದ ಪ್ರಸಾದಿಯ ಬಾಹ್ಯಾಭ್ಯಂತರವೆಲ್ಲ ಪ್ರಸಾದಮಯ ನೋಡಾ. ಪ್ರಸಾದ ಸದ್ಭಾವದಲ್ಲಿ ಎಂಜಲೆಂಬ ಸಂಶಯ ಸುಳಿಯಲಾಗದು. ಎಂಜಲೆಂಬ ಸಂಶಯ ಸುಳಿದರೆ ಅದು ಅಜ್ಞಾನ ನೋಡಾ. ಅವಂಗೆ ಪ್ರಮಥ ಪ್ರಸಾದವಿಲ್ಲ ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ವ್ಯಾಸಾದಿಗಳಂತೆ ಶ್ವಾನಜ್ಞಾನಿಗಳಪ್ಪರೆ ಸತ್ಯಶುದ್ಧಶರಣರು ? `ನ ದೇವಃ ಕೇಶವಾತ್ಪರಂ' ಎಂದ ವ್ಯಾಸ, ತನ್ನ ತೋಳುಗಳನೆರಡನು ಹೋಗಲಾಡನೆ ? ಹಿಡಿಯರೆ ಅಂದು ಆಕಾಶಗಣಂಗಳು ? ಮರಳಿ ಈಶ್ವರನಲ್ಲದೆ ದೈವವಿಲ್ಲೆಂದು ಶ್ರುತ್ಯರ್ಥವನರಿದು ದೇವಾರ್ಚನೆಯಂ ಮಾಡಲಾಗಿ ಆ ವ್ಯಾಸನ ಎರಡು ಕರಂಗಳು ಬಂದು, ಅಶೇಷವಹಂತಹ ಚರ್ಮ ಈಶ್ವರನ ಆಲಯದ ಮುಂದೆ ಧ್ವಜಪತಾಕೆಗಳಾಗದೆ ? ಈರೇಳು ಲೋಕವು ಅರಿಯೆ. ಅನಂತಪುರಾಣಾಗಮಗಳಲ್ಲಿ ಕೇಳಿರೆ: ಈಶ್ವರಾರ್ಚನೆಯ ಮಾಡಿ ಮರಳಿ ವಿತಥವಾಗಿ ಪರದಾರಕಿಚ್ಚೈಸಿದಡೆ ಇವಂಗಿದೆ ಪ್ರಿಯವೆಂದು ಆ ಇಂದ್ರನ ಮೈಯೆಲ್ಲಾ ಅನಂಗನಹಂತಹ ಅಂಗವಾಗದೆ ? ಈರೇಳು ಭುವನವರಿಯೆ. ಮರಳಿ ಈಶ್ವರಾರ್ಚನೆಯ ಮಾಡಲು ಆ ಅಂಗದ ಯೋನಿ[ಕೂ]ಪೆಲ್ಲಾ ನಯನಂಗಳಾಗವೆ ಇಂದ್ರಂಗೆ ? ಇದನರಿದು ಶಿವಾರ್ಚನೆಯಂ ಮಾಡಿ ಶಿವನವರಿಗೆ ಧನಸಹಿತ ತ್ರಿವಿಧವ ನಿವೇದಿಸುವುದು ಶಿವಾಚಾರ ಕೇಳಿರಣ್ಣಾ. ಅರಿದರಿದು ಬರಿದೊರೆ ಹೋಗಬೇಡ. ಋಷಿಗಳ ಶಿವಾರ್ಚನೆಯ ವಿಶೇಷವಹಂತಹ ಫಲವ ಕೇಳಿರಣ್ಣಾ: ಕೀಳುಗುಲದ ಋಷಿಗಳ ಕುಲನಾಮಂಗಳ ತೊಡೆದು ಮೇಲುಗುಲನಾಮವ ಕೇಳಿರಣ್ಣಾ. ಅದು ಹೇಗೆಂದಡೆ: ಮುಖದಿಂದುತ್ಪತ್ಯವಾದ ಬ್ರಾಹ್ಮಣನು ಆ ಋಷಿಗಳ ಶಾಖೆಯಾದನು, ಅವರ ಗೋತ್ರವಾದನು. ಶಿವಾಚಾರ ವಿಶೇಷವೊ ? ಕುಲ ವಿಶೇಷವೊ ? ಹೇಳಿರಣ್ಣಾ. `ವರ್ಣಾನಾಂ ಬ್ರಾಹ್ಮಣೋ ಗುರುಃ' ಎಂಬ ಕ್ರೂರಹೃದಯರ ಮಾತ ಕೇಳಲಾಗದು. ಹೋಹೋ ಶಿವನ ಮುಖದಿಂದ ಹುಟ್ಟಿ ಉತ್ತಮವಹಂತಹ ಬ್ರಾಹ್ಮಣಧರ್ಮದಲ್ಲಿ ಜನಿಸಿದಂತಹ ವರ್ಣಿಗಳು ಕ್ಷತ್ರಿಯನ ಭಜಿಸ ಹೇಳಿತ್ತೆ ಈ ವೇದ ? `ಶಿವ ಏಕೋ ಧ್ಯೇಯಃ ಶಿವಂಕರಃ ಸರ್ವಮನ್ಯತ್ಪರಿತ್ಯಜೇತ್' ಎಂದುದಾಗಿ_ ಶಿವನನೆ ಧ್ಯಾನಿಸಿ, ಇತರ ದೇವತೆಗಳ ಬಿಡಹೇಳಿತ್ತಲ್ಲವೆ ? ಅದಂತಿರಲಿ, ಬಡಗಿ ಮಾಚಲದೇವಿಯ ಕುಲಜೆಯ ಮಾಡಿಹೆವೆಂದು ಸತ್ತ ಕಪಿಲೆಯ ಕಡಿದು ಹಂಚಿ ತಿನ್ನ ಹೇಳಿತ್ತೆ ವೇದ ? ಆಗದು ಅವದಿರ ಸಂಗ. ಅಧಮರ ವರ್ಣಾಶ್ರಮಹೀನರ ಕರ್ಮವ ಕಳೆದೆಹೆವೆಂದು ದತ್ತಪುತ್ರರಾಗಿ ಹೊರಸಿ[ನಡಿ]ಯಲಿ ನುಸುಳ ಹೇಳಿತ್ತೇ ಆ ವೇದ ? ಭುಂಜಿಸಿ ಮುಕ್ತಿಯನಿತ್ತಿಹೆವೆಂದಡೆ ಅದಂತಿರಲಿ, ಹಲ ಕೆಲ ಕಾಲ ವಂದಿಸಿದ ಗೌತಮಂಗೆ ಬಾರದೆ ಅಂದು ಗೋವಧೆ ? ಅದಂತಿರಲಿ, ಬ್ರಾಹ್ಮಣರೆ ದೈವವೆಂದು ದಾನಾದಿಗಳ ಮಾಡಿದ ಕರ್ಣನ ಶಿರಕವಚ ಹೋಗದೆ ಜಗವರಿಯೆ ? ವಿಷ್ಣುದೈವವೆಂದರ್ಚಿಸಿದ ಬಲಿ ಬಂಧನಕ್ಕೆ ಬಾರನೆ ಮೂಜಗವರಿಯೆ ? ಶಿಬಿಯ ಮಾಂಸವ ಕೊಂಡು ಇತ್ತ ಮುಕ್ತಿಯ ಕೇಳಿರಣ್ಣಾ. ಅವಂಗೆ ಬಂದ ವಿಧಿಯ ಹೇಳಲಾಗದು. ಅದಂತಿರಲಿ, ಶಿವನ ಭಕ್ತರಿಗೆ ಪರಮಾಣುವಿನಷ್ಟು ಕಾಂಚನವನೀಯೆ ಅಣಿಮಾದ್ಯಷ್ಟಮಹದೈಶ್ವರ್ಯವನೀವರು, ಮೇಲೆ ಮುಕ್ತಿಯಹುದು. ಸಕೃತ್ ಲಿಂಗಾರ್ಚಕೇ ದತ್ವಾ ಸುವರ್ಣಂ ಚಾಣುಮಾತ್ರಕಂ ಭೂಲೋಕಾಧಿಪತಿರ್ಭೂತ್ವಾ ಶಿವ ಸಾಯುಜ್ಯಮಾಪ್ನುಯಾತ್ ಎಂದುದಾಗಿ, ಅದಲ್ಲದೆ ಮತ್ತೆ ದಾನಪರಿಗ್ರಹಂಗಳಂ ಕೊಂಡ ಕೆಲಬರ ಮುಕ್ತರ ಮಾಡಿ ಶಿವಲೋಕಕ್ಕೆ ಕೊಂಡೊಯ್ದುದುಂಟಾದಡೆ ಹೇಳಿರಣ್ಣಾ ? ನಿತ್ಯಂ ಲಿಂಗಾರ್ಚನಂ ಯಸ್ಯ ನಿತ್ಯಂ ಜಂಗಮಪೂಜನಂ ನಿತ್ಯಂ ಗುರುಪದಧ್ಯಾನಂ ನಿತ್ಯಂ ನಿತ್ಯಂ ನ ಸಂಶಯಃ ಇದು ಕಾರಣ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಯ್ಯನ ಶರಣಮಹಾತ್ಮೆಯನ್ನು ಯಜುರ್ವೇದ ಸಾಕ್ಷಿಯಾಗಿ ಪೇಳುವೆ ಕಾಶಿಯ ಕಾಂಡದಲ್ಲಿ.
--------------
ಉರಿಲಿಂಗಪೆದ್ದಿ
`ಏಕೋ ದೇವೋ ನ ದ್ವಿತೀಯಃ' ಎಂದೆನಿಸುವ ಶಿವನೊಬ್ಬನೆ, ಜಗಕ್ಕೆ ಗುರುವೆಂಬುದನರಿಯದೆ, ವಿಶ್ವಕರ್ಮ ಜಗದ ಗುರುವೆಂದು ನುಡಿವ ದುರಾಚಾರಿಯ ಮುಖವ ನೋಡಲಾಗದು. ಪ್ರಥಮದಲ್ಲಿ ಹುಟ್ಟಿದಾಗ ವಿಶ್ವಕರ್ಮಂಗೆ ತಾಯಿತಂದೆಗಳಾರು ? ಅವನು ಹುಟ್ಟಿದಾಗ ಹೊಕ್ಕಳನಾಳವ ಕೊಯ್ವ ಕತ್ತಿಯ ಮಾಡಿದರಾರು ? ಅವಂಗೆ ತೊಟ್ಟಿಲವ ಕಟ್ಟಿದರಾರು ? ಅವಂಗೆ ಹಾಲು ಬೆಣ್ಣೆ ಬಿಸಿನೀರು ಇಡುವುದಕೆ ಮಡಕೆಯ ಮಾಡಿದರಾರು ? ಅವಂಗೆ ವಿದ್ಯಾಬುದ್ಧಿಯ ಕಲಿಸಿದರಾರು ? ಅವಂಗೆ ಅರುಹು ಮರಹು ಹುಟ್ಟಿಸಿದರಾರು ? ಅವಂಗೆ ಇಕ್ಕುಳ, ಅಡಿಗಲ್ಲು, ಚಿಮ್ಮಟಿಗೆ, ಮೊದಲಾದ ಸಂಪಾದನೆಗಳ ಕೊಟ್ಟವರಾರು ? ಇನಿತನು ವಿಚಾರಿಸದೆ ತಾನು ವೆಗ್ಗಳವೆಂದು ಗಳಹುವನ ದುರಾಚಾರಿಯೆಂದು ಭಾವಿಸುವುದು. ಸರ್ವಜಗದ ಜೀವದ ಪ್ರವರ್ತನೆಯ ಚಾರಿತ್ರಂಗಳ ನೆನಹು ಮಾತ್ರದಿಂದ ಶಿವನು ಒಂದೇ ವೇಳೆಯಲ್ಲಿ ನಿರ್ಮಿಸಿದನು. ಅದೆಂತೆಂದಡೆ; ಅರಣ್ಯಗಿರಿಯ ಕನ್ನಡಿಯೊಳು ನೋಡಿದಂತೆ, ಗಿಡವೃಕ್ಷಂಗಳು ಎಳೆಯದು ಹಳೆಯದು ಒಂದೆ ವೇಳೆ ಕಾಣಿಸಿದಂತೆ, ಒಂದೆ ವೇಳೆಯಲಿ ಬೀಜವೃಕ್ಷನ್ಯಾಯದಲ್ಲಿ, ದಿವಾರಾತ್ರಿನ್ಯಾಯದಲ್ಲಿ ಹಿಂಚು ಮುಂಚು ಕಾಣಲೀಯದೆ, ಸರ್ವಜೀವವ ಹುಟ್ಟಿಸಿ, ರಕ್ಷಿಸಿ, ಸಂಹರಿಸಿ, ಲೀಲಾವಿನೋದದಿಂದಿಪ್ಪ ಶಿವನೊಬ್ಬನೆ ಸಕಲ ಜಗಕ್ಕೆ ಗುರುಸ್ವಾಮಿ. ``ಮನ್ನಾಥಸ್ತ್ರಿಜಗನ್ನಾಥೋ ಮದ್ಗುರುಸ್ತ್ರಿಜಗದ್ಗುರುಃ ಸರ್ವಮಮಾತ್ಮಾ ಭೂತಾತ್ಮಾ ತಸ್ಮೈ ಶ್ರೀಗುರವೇ ನಮಃ ಎಂದುದಾಗಿ ಅರಿತರಿತು ಅನಾಚಾರವ ಗಳಹಿ, ಗುರುಲಿಂಗಜಂಗಮವೆ ಘನವೆಂದು ಅರಿಯದ ಶಿವಭಕ್ತಿಶೂನ್ಯ ಪಾತಕನ ಹಿರಿಯನೆಂದು ಸಂಭಾಷಣೆಯ ಮಾಡಿ ಅವನ ಚಾಂಡಾಲ ಬೋಧೆಯ ಕೇಳ್ವ ಪಂಚಮಹಾಪಾತಕನ ರೌರವನರಕದಲ್ಲಿ ಹಾಕಿ ಮೆಟ್ಟಿಸುತಿಪ್ಪ, ಕೂಡಲಚೆನ್ನಸಂಗಮದೇವ.
--------------
ಚನ್ನಬಸವಣ್ಣ
ಇನ್ನಷ್ಟು ... -->