ಒಟ್ಟು 12 ಕಡೆಗಳಲ್ಲಿ , 3 ವಚನಕಾರರು , 8 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಭವಭವದಲ್ಲಿ ಎನ್ನ ಮನವು ಸಿಲುಕದೆಭವಭವದಲ್ಲಿ ಎನ್ನ ಮನವು ಕಟ್ಟದೆಭವಸಾಗರದಲ್ಲಿ ಮುಳುಗದೆಭವರಾಟಳದೊಳು ತುಂಬದೆ ಕೆಡಹದೆಭವವಿರಹಿತ ನೀನು, ಅವಧಾರುಕರುಣಿಸು ಕೂಡಲಸಂಗಮದೇವಾ. 68
ದೇವ, ದೇವಾ ಬಿನ್ನಹ ಅವಧಾರು;ವಿಪ್ರ ಮೊದಲು, ಅಂತ್ಯಜ ಕಡೆಯಾಗಿಶಿವಭಕ್ತರಾದವರನೆಲ್ಲನೊಂದೆ ಎಂಬೆ.ಹಾರುವ ಮೊದಲು, ಶ್ವಪಚ ಕಡೆಯಾಗಿಭವಿಯಾದವರನೆಲ್ಲರನೊಂಬೆ ಎಂಬೆ.ಹೀಂಗೆಂದು ನಂಬೂದೆನ್ನ ಮನ.ಈ ನುಡಿದ ನುಡಿಯೊಳಗೆ ಎಳ್ಳ ಮೊನೆಯಷ್ಟು ಸಂದೇಹವುಳ್ಳಡೆಹಲುದೋರೆ ಮೂಗ ಕೊಯಿ, ಕೂಡಲಸಂಗಮದೇವಾ.
ಎಲ್ಲರ ನೆನಹಿನ ಆಯುಷ್ಯದ ಪುಂಜವೆ,ಅವಧಾರು ಅವಧಾರು;ಅಯ್ಯಾ ಎನ್ನ ನೆನಹಿನ ಮಂಗಳನೆ,ಅವಧಾರು ಅವಧಾರು,ಕಪಿಲಸಿದ್ಧಮಲ್ಲಿಕಾರ್ಜುನ.
ಕಾಯಸಂಗ ನಿಸ್ಸಂಗವಾಗಿ ಇನ್ನಾವ ಸಂಗವನರಿಯೆನಯ್ಯಾ.ಮಿಗೆ ಒಲಿದೆನಾಗಿ ಅಗಲಲಾರೆ.ನಗೆಮೊಗದರಸ, ಅವಧಾರು.ಕೂಡಲಸಂಗಮದೇವಾ,ಬಗಿದು ಹೊಗುವೆನು ನಾ ನಿಮ್ಮ ಮನವನು. 488
ಅಯ್ಯಾ, ನಿನ್ನ ಆಜ್ಞೆಯಲ್ಲಿ ಇರದವರಾರು?ಬ್ರಹ್ಮೇಂದ್ರಾದಿ ದೇವತೆಗಳೆಲ್ಲ!ಅಯ್ಯಾ, ನಿಮ್ಮಾಜ್ಞೆಯಲ್ಲಿ ಆಗದವರಾರು?ವಿಷ್ಣು ಮೊದಲಾದ ಮನುಜರೆಲ್ಲ!ಸರ್ವ ಚೈತನ್ಯಾತ್ಮ ಮುಖಲಿಂಗವೆ ಅವಧಾರುಕಪಿಲಸಿದ್ಧಮಲ್ಲಿಕಾರ್ಜುನ.
ಘನವಪ್ಪ ಪರಿಯಾಣದಲ್ಲಿ ಒಂದನುವಿನ ಬೋನವನಳವಡಿಸಿ,ಪರಿಪರಿಯ ಪದಾರ್ಥಂಗಳು ಬಗೆಬಗೆಯಿಂದ ಬರಲು,ನೋಡದ ಮುನ್ನವೆ ರೂಪವರ್ಪಿತವಾಯಿತ್ತು.ಮುಟ್ಟದ ಮುನ್ನವೆ ಸೋಂಕರ್ಪಿತವಾಯಿತ್ತು.ರುಚಿಸದ ಮುನ್ನವೆ ಸುಖವರ್ಪಿತವಾಯಿತ್ತು.ಅವಧಾರು ಅವಧಾರು ಲಿಂಗವೆ,ನಿನ್ನ ಮನಕ್ಕೆ ಬಂದ ಪದಾರ್ಥವ ನಿನ್ನ ಘನಕ್ಕೆ ನೀನರ್ಪಿಸಿದಡೆಎನ್ನ ಮನಕ್ಕೆ ಬಂದ ಪದಾರ್ಥವ ನಾ ನಿನಗರ್ಪಿಸುವೆನು.ಗುಹೇಶ್ವರಾ ನಿನಗೆ ಭರಿತ ಬೋನವನಳವಡಿಸಿ ನೀಡಬಲ್ಲವನಾಗಿಎನಗೂ ನಿನಗೂ ಸಂಗನಬಸವಣ್ಣನ ಪ್ರಸಾದ_ಆರೋಗಿಸು ದೇವಾ.
ಕರ್ಮವೆಂಬ ಅಂಕದೊಡನೆ ತೊಡರಿದೆ.ಬಿನ್ನಪ ಅವಧಾರು ! ನಿಮ್ಮಾಳಿನ ಭಾಷೆಯ;ಕಡೆಗಳಕ್ಕೆ ನೂಂಕುವೆ, ಕೆಡಹುವೆನಂಕವ.ಕರೆದಡೋ ಎನಿಸದಡೆ ನಿಮ್ಮಾಳಲ್ಲ.ಶಿವಶರಣೆಂಬ ದಂಡೆಯ ಹೂಡಿಗಣಮೇಳಾಪವೆಂಬ ಅಲಗಿನಿಂದಿರಿವೆ, ಕೂಡಲಸಂಗಮದೇವಾ.
ಕರಮನದಲ್ಲಿ ತನುವಾದೆ ಅಯ್ಯ,ಮನದ ಮಧ್ಯಸ್ಥಾನ ನೀನು.ತನು ಪ್ರಾಣ ಇಷ್ಟವಾದೆ.ಮನದ ಮಂಗಳನೆ ಅವಧಾರುತನುಗುಣದೂರನೆ ನಮೋ, ಕಪಿಲಸಿದ್ಧಮಲ್ಲಿಕಾರ್ಜುನ