ಅಥವಾ

ಒಟ್ಟು 16 ಕಡೆಗಳಲ್ಲಿ , 11 ವಚನಕಾರರು , 16 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರಾತ್ಪರ ಚಿದ್ಬ್ರಹ್ಮಪರಶಿವಮೂರ್ತಿಯು ಮನು-ಮುನಿ, ಸಿದ್ಧ-ಸಾಧಕ, ಯಕ್ಷ-ರಾಕ್ಷಸ, ಯತಿ-ವ್ರತಿ, ಶೀಲ-ನೇಮಗಳ ಭಾವಾಭಾವಕ್ಕೆ ಮೆಚ್ಚಿ, ಅವರವರ ಕಾಂಕ್ಷೆಗಳಂತೆ ಫಲಪದದಾಯುಷ್ಯಕ್ಕೆ ಯೋಗ್ಯರಾಗಿ, ಅಷ್ಟಮಹದೈಶ್ವರ್ಯದಿಂದ ಬ್ರಹ್ಮನ ಉತ್ಪತ್ತಿ, ವಿಷ್ಣುವಿನ ಸ್ಥಿತಿ, ರುದ್ರನ ಲಯ, ಈಶ್ವರನ ತಿರೋಧಾನ, ಸದಾಶಿವನ ಅನುಗ್ರಹಕ್ಕೆ ಕಾರಣರಾಗಿ, ಶೈವಮಾರ್ಗದಿಂದೆ ನಿಜಮೋಕ್ಷವ ಕಾಣದೆ, ಅಷ್ಟಾವರಣದ ಚಿದ್ಬೆಳಗ ಸೇರಿದ ಸದ್ಭಕ್ತಿ-ಜ್ಞಾನ-ವೈರಾಗ್ಯ, ಸತ್ಯ-ಸದಾಚಾರವನರಿಯದೆ, ಇಹಲೋಕದ ಭೋಗವ ಪರಲೋಕದ ಮೋಕ್ಷಾಪೇಕ್ಷೆಯಿಂದ ಎಡೆಯಾಡುತ್ತ, ಪುಣ್ಯ-ಪಾಪ, ಸುಖ-ದುಃಖ, ಸ್ತುತಿ-ನಿಂದೆ, ಸಿರಿ-ದರಿದ್ರ. ಆಶೆ-ಆಮಿಷ, ರೋಗ-ರುಜಿನಗಳಿಂದ, ಶಿವನೆ ಹರನೆ ಭವನೆಯೆಂದು ಗೋಳಿಡುವವರಿಗೆ, ನಿರಾಕಾರಪರಿಪೂರ್ಣ ಪರಶಿವನು ಆಗಳು ಹಿಂದಾಗಿ, ಶಿವಗಣವ ಸೇರುವಂತೆ ಯೋಗಾಭ್ಯಾಸವ ತೋರಿ, ಅನಂತಮಣಿಮಾಲೆ ಜಪಕ್ರಿಯಾನುಷ್ಠಾನ ಮಂತ್ರ-ತಂತ್ರ-ಯಂತ್ರ-ಯಜ್ಞಾದಿಗಳ ಹೇಳಿ, ಪರಮಾರಾಧ್ಯ ನಿರವಯಪ್ರಭು ಮಹಾಂತನ ಗಣಾಚಾರಕ್ಕೆ ಅಯೋಗ್ಯರೆನಿಸಿರ್ಪರು ಕಾಣಾ ಸಿದ್ಧಮಲ್ಲಿಕಾರ್ಜುಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಶಿವಶರಣಗಣಾರಾಧ್ಯರು ನಿರಾಕಾರ ಚಿತ್ಪಾದೋದಕದಾಚರಣೆಯ ಮಾರ್ಗಕ್ರಿಯೆ ಮುಗಿದ ಮೇಲೆ, ಸಾಕಾರಚಿತ್ಪ್ರಸಾದವ ಆ ಪಾದತೀರ್ಥದಾಚರಣೆಯಂತೆ ತಟ್ಟಿ, ಬಟ್ಟಲಗಳೊಳ್ ಪರಿಪೂರ್ಣತೃಪ್ತಿಯನೈದುವುದು. ಆ ನಿಲುಕಡೆಯೆಂತೆಂದೊಡೆ : ನಿರಾಭಾರಿವೀರಶೈವಸಂಪನ್ನ ಸದ್ಭಕ್ತ ಜಂಗಮಮೂರ್ತಿಗಳು ಪಾದೋದಕದಿಂದ ಅವರ ಭಾಂಡಕ್ಕೆ ಹಸ್ತಸ್ಪರಿಶನವ ಮಾಡುವುದು. ಉಳಿದ ವಿಶೇಷ ವೀರಶೈವಸನ್ಮಾರ್ಗಿ ಭಕ್ತಜಂಗಮವು ತಮ್ಮ ತಮ್ಮ ತಂಬಿಗೆ ತಟ್ಟೆ ಬಟ್ಟಲಿಗೆ ಪಾದೋದಕ ಹಸ್ತಸ್ಪರಿಶನವ ಮಾಡಿ, ಕೇವಲಪರಮಾನಂದದ ಚಿದ್ಗರ್ಭೋದಯ ಶುದ್ಧಪ್ರಸಾದವೆಂದು ಭಾವಿಸಿ, ಅತಿವಿಶೇಷ ಮಹಾಸುಯ್ದಾನದಿಂದ ಸಮಸ್ತ ಜಂಗಮ ಭಕ್ತ ಮಹೇಶ್ವರ ಶರಣಗಣಾರಾಧ್ಯರಿಗೆ ಎಡೆಮಾಡಿ, ಅಷ್ಟಾಂಗ ಹೊಂದಿ, ಎಡಬಲ ಗಣತಿಂತಿಣಿಯ ಪೂರ್ಣಾನಂದದ ನಿಜದೃಷ್ಟಿಯಿಂ ನೋಡಿ, ನಿರೀಕ್ಷಿಸಿ, ಶರಣಾರ್ಥಿ ಸ್ವಾಮಿ, ನಿಮ್ಮ ದಯದಿಂದುದಯವಾದ ಪರಿಪೂರ್ಣರಸಾಮೃತವ ಮಹಾಲಿಂಗಾರ್ಪಣವ ಮಾಡಬೇಕೆಂದು ಅಭಿವಂದಿಸಿ, ಪರಮಪತಿವ್ರತತ್ವದಿಂದ ಗುರುಚರವರಸ್ಥಲಕ್ಕೆ ತನುಮನಧನಂಗಳ ಸಮರ್ಪಿಸುವಲ್ಲಿ ನಿರ್ವಂಚಕವಾಗಿ, ಭಕ್ತಲಿಂಗಜಂಗಮವೆಂದು ಉಭಯ ನಾಮರೂಪ ಕ್ರಿಯಾಕಾಯವಳಿದು, ಕ್ಷೀರ ಕ್ಷೀರವ ಕೂಡಿದಂತೆ ಪರುಷ ಮುಟ್ಟಿ ಪರುಷವಾದಂತೆ, ಪರಮಾನಂದಾಬ್ಧಿ ಚಿದ್ರಸಾಮೃತ ಅಷ್ಟಾವರಣದ ಸತ್ಕ್ರಿಯಾಜ್ಞಾನಾಚಾರಂಗಳ ಅನುಭಾವದೊಳ್ ಕೂಟಸ್ಥದಿಂದೊಡಲಾಗಿ, ನಿರಾಕಾರ ನಿಃಶಬ್ದಲೀಲೆಪರ್ಯಂತರವು ಆ ಗುರುಲಿಂಗಜಂಗಮ ಚಿತ್ಪ್ರಭಾಂಗ ಭಸ್ಮಮಂತ್ರಾದಿಗಳೆ ಮುಂದಾಗಿ, ಸತ್ಯಶುದ್ಧ ನಡೆನುಡಿ ಕ್ರಿಯಾಜ್ಞಾನಾನುಭಾವ ಪಾದೋದಕ ಪ್ರಸಾದಸೇವನೆಯೆ ಹಿಂದಾಗಿ, ಸಮಸ್ತ ಕಾರಣಕ್ಕೂ ಸಾವಧಾನ ಸಪ್ತವಿಧ ಸದ್ಭಕ್ತಿಗಳಿಂದ ಮಾರ್ಗಾಚಾರವುಳ್ಳ ಕ್ರಿಯಾರ್ಪಣ, ದ್ರವ್ಯಮೀರಿದಾಚಾರವುಳ್ಳ ಜ್ಞಾನಾರ್ಪಣದ್ರವ್ಯಂಗಳಂ ಪರಿಪೂರ್ಣಾನುಭಾವದಿಂದ ನಿಜನೈಷಾ*ನುಭಾವಸಂಬಂಧಿಗಳೆ ಅಚ್ಚಪ್ರಸಾದಿ ನಿಚ್ಚಪ್ರಸಾದಿ ಸಮಯಪ್ರಸಾದಿ ಚಿತ್ಕಲಾಪ್ರಸಾದಿ ಸೇವಿತಕ್ಕೆ ಯೋಗ್ಯರಾದ ಘನಕ್ಕೆ ಘನವೆಂದವರಾಳಿನಾಳಾಗಿರ್ಪೆ ಕಾಣಾ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಅಯ್ಯ ಬಸವ ಮೊದಲಾದ ಪ್ರಮಥಗಣಾರಾಧ್ಯರ ಸನ್ಮಾರ್ಗಾಚಾರಕ್ಕೆ ದೃಢಚಿತ್ತದಿಂದ ನಿಂದು, ನೀರಾಭಾರಿವೀರಶೈವ ಷಚಟ್ಸ್ಥಲಮಾರ್ಗದಲ್ಲಿ ಆಚರಿಸುವ ಶರಣಗಣಂಗಳಲ್ಲಿ ಪಂಷಸೂತಕಂಗಳ ಕಲ್ಪಿಸಿದೆ, ಭೃತ್ಯಾಚಾರ ಮುಂದುಗೊಂಡು, ಅವರೊಕ್ಕುಮಿಕ್ಕುದ ಹಾರೈಸಿ, ನಿಜಭಕ್ತಿಯಲ್ಲಿ ನಿಂದು, ದೃಢಚಿತ್ತನಾಗಿ, ಸನ್ಮಾರ್ಗಾಚಾರಕ್ಕೆ ಬಾರದಂಥ ಗುರು-ಚರ-ಪರ-ಭಕ್ತ-ಗಣ ಬಂಧು-ಬಳಗ, ತಂದೆ-ತಾಯಿ, ಪಯತ್ರ, ಮಿತ್ರ, ಕಳತ್ರ, ಶಿಷ್ಯ ಮೊದಲಾಗಿ, ತೃಣಕ್ಕೆ ಸಮಮಾಡಿ ತ್ಯಜಿಸಿ, ಮನದ ಮಧ್ಯದಲ್ಲಿ ಹುಟ್ಟಿದ ಕಾಮ, ಕ್ರೋಧ, [ಲೋಭ] ಮೋಹ, ಮದ, ಮತ್ಸರಂಗಳ ಬಲೆಗೆ ಸಿಲ್ಕದೆ, ತ್ರಿಕರಣದ ಪವಿತ್ರತೆಯಿಂದ ಅಷ್ಟಾವರಣದ ಸ್ತೋತ್ರವ ಮಾಡುವಂಥಾದೆ ಸಮಯದೀಕ್ಷೆ. ಇಂತುಟೆಂದು ಶ್ರೀಗುರು ನಿಷ್ಕಳಂಕ ನಿರಾಲಂಬ ಚೆನ್ನಬಸವರಾಜೇಂದ್ರನು ನಿರ್ಲಜ್ಜಶಾಂತಲಿಂಗದೇಶಿಕೋತ್ತಮಂಗೆ ನಿರೂಪಮಂ ಕೊಡುತಿರ್ದರು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಯ್ಯ ! ಪೂರ್ವವನಳಿದು ಪುನರ್ಜಾತನಾದ ಸತ್ಯಸದ್ಧರ್ಮಸ್ವರೂಪ ತಚ್ಛಿಷ್ಯನು ಶ್ರೀಗುರುಲಿಂಗಜಂಗಮದ ವೇಧಾ_ಮಂತ್ರ_ಕ್ರಿಯಾದೀಕ್ಷೆಯ ಪಡೆದು, ಅಷ್ಟಾವರಣದ ನೆಲೆಕಲೆಗಳ ತಿಳಿದು, ಪಂಚಾಚಾರ ಮೊದಲಾಗಿ ಸರ್ವಾಚಾರ ಸಂಪತ್ತಿನ ವಿವರ ತಿಳಿದು, ನೂರೊಂದು ಸ್ಥಲದ ಆಚರಣೆ_ಇನ್ನೂರಹದಿನಾರು ಸ್ಥಲದ ಸಂಬಂಧವನರಿದು, ಷಟ್ಸ್ಥಲ ಮಾರ್ಗವಿಡಿದು, ಶ್ರೀಗುರುಲಿಂಗ ಜಂಗಮಕ್ಕೆ ತನು_ಮನ_ಧನವಂಚನೆಯಿಲ್ಲದೆ ನಿರ್ವಂಚಕನಾಗಿ, ಭಕ್ತಸ್ಥಲದಲ್ಲಿ ನಿಂದಡೆ ಸತ್ಯಶುದ್ಧ ಕಾಯಕ[ವ ಮಾಡಿ] ಮಹೇಶ್ವರಸ್ಥಲದಲ್ಲಿ ನಿಂದಡೆ ಸತ್ಯಶುದ್ಧ ಭಿಕ್ಷವ ಮಾಡಿ, (ಬೇಡಿ?) ಬಂದ ಪದಾರ್ಥವ ಸಮರ್ಪಿಸಿ, ಪರದ್ರವ್ಯದಲ್ಲಿ ರಿಣಭಾರನಾಗದೆ, ಸತ್ಯಶುದ್ಧ ನಡೆನುಡಿಯಿಂದಾಚರಿಸಿ, ಶ್ರದ್ಧಾದಿ ಸಮರಸಾಂತ್ಯಮಾದ ಸದ್ಭಕ್ತಿಯ ತಿಳಿದು ಅನಾದಿಕುಳ ಸನ್ಮತವಾದ ದಶವಿಧ ಪಾದೋದಕ, ಏಕಾದಶ ಪ್ರಸಾದದ ವಿಚಾರ ಮೊದಲಾದ ಅರ್ಪಿತಾವಧಾನವ, ಪರಿಪೂರ್ಣಮಯ ಶ್ರೀಗುರುಲಿಂಗಜಂಗಮಕರುಣಕಟಾಕ್ಷೆಯಿಂದ, ಅಚ್ಚ ಪ್ರಸಾದಿಸ್ಥಲದ ಶರಣತ್ವವ ಪಡೆದು, ಸತ್ಯಸದಾಚಾರವುಳ್ಳ ಸದ್ಗುರುಲಿಂಗಜಂಗಮದ ನಿಜನಿಷ*ತ್ವಮಂ ತಿಳಿದು, ದಂತಧಾವನಕಡ್ಡಿ ಮೊದಲು Põ್ಞಪ ಕಟಿಸೂತ್ರ ಕಡೆಯಾದ ಸಮಸ್ತ ಪದಾರ್ಥವ ಗುರು_ಲಿಂಗ_ಜಂಗಮಕ್ಕೆ ಸಮರ್ಪಿಸಿ, ಅವರೊಕ್ಕುದ ಹಾರೈಸಿ, ಕೊಂಡು ಇಂತು ಅಂತರಂಗ ಪರಿಪೂರ್ಣವಾಗಿ ನಿಂದ ಸಮಯದಲ್ಲಿ, ಸ್ವಯ_ಚರ_ಪರಲೀಲೆಯ ಧರಿಸಿ ಜಂಗಮಾಕೃತಿಯಿಂದ ಬಂದ ಗುರುಲಿಂಗಜಂಗಮದ ವೃತ್ತಸ್ಥಾನವಾದ ಮೊಳಪಾದ ಪರಿಯಂತರವು ತೊಳದು ಬಹುಗುಣಿಯಲ್ಲಿ ಮಡಗಿಕೊಂಡು, ಹೊಸಮನೆ, ಹೊಸಧನ, ಧಾನ್ಯ ಭಾಂಡಭಾಜನ, ಹೊಸ ಅರುವೆ_ಆಭರಣ, ಜನನಿಜಠರದಿಂದಾದ ಅಂಗಾಂಗ, ಕಾಯಿಪಲ್ಯ, ಉಚಿತಕ್ರಿಯೆ ಮೊದಲಾಗಿ ಅರಿದಾಚರಿಸುವದು ನೋಡ ! ಆ ಮೇಲೆ ಗುರುಲಿಂಗಜಂಗಮದ ಪ್ರಕ್ಷಾಲನೆ ಮಾಡಿದ ಪಾದವನ್ನು ಮೂರು ವೇಳೆ ಅಡಿಪಾದವ ಸ್ಪರ್ಶನವ ಮಾಡಿ, ನಾಲ್ಕನೆಯ ವೇಳ್ಯಕ್ಕೆ ದಶಾಂಗುಲಿಗಳ ಒಂದು ವೇಳೆ ಸ್ಪರ್ಶನವ ಮಾಡಿದ ಉದಕವನ್ನು ಭಾಂಡಭಾಜನದಲ್ಲಿ ತುಂಬಿ ಸ್ವಪಾಕವ ಮಾಡುವುದು. ಆ ಸಮಯದಲ್ಲಿ ಬಿಂದುಮಾತ್ರ [ವಾದರೂ] ಇಷ್ಟಲಿಂಗ ಬಾಹ್ಯವಾದ ಭವಿಜನ್ಮಾತ್ಮರಿಗೆ ಹಾಕಲಾಗದು. ಇನ್ನು ಜಂಗಮದ ಅಂಗುಷ* ಎರಡು_ಅಂಗುಲಿ ಎಂಟರಲ್ಲಿ ತನ್ನ ತರ್ಜನಿ ಬೆರಳಿಂದ ಮೊದಲಂತೆ ಪಾದೋದಕವ ಮಾಡಿ, ಬಟ್ಟಲಲ್ಲಿ ಮಡಗಿ, ಪೂರ್ವದಲ್ಲಿ ಭಾಂಡದೊಳಗೆ ತುಂಬಿದ ಗುರುಪಾದೋದಕದಿಂದ ವಿಭೂತಿ ಘಟ್ಟಿಯ ಅಭಿಷೇಕವ ಮಾಡಿ, ಈ ಬಟ್ಟಲಲ್ಲಿ ಮಡಗಿದ ಲಿಂಗಪಾದೋದಕದಲ್ಲಿ ಮಿಶ್ರವ ಮಾಡಿ, ಇಪ್ಪತ್ತೊಂದು ಪ್ರಣಮವ ಲಿಖಿಸಿ ಶ್ರೀಗುರುಲಿಂಗಜಂಗಮವು ತಾನು ಮಂತ್ರಸ್ಮರಣೆಯಿಂದ ಸ್ನಾನ_ಧೂಳನ_ಧಾರಣವ ಮಾಡಿ, ಲಿಂಗಾರ್ಚನೆ ಕ್ರಿಯೆಗಳ ಮುಗಿಸಿಕೊಂಡು, ಆ ಮೇಲೆ ತೀರ್ಥವ ಪಡಕೊಂಬುವಂಥ ಲಿಂಗಭಕ್ತನು ಆ ಜಂಗಮಲಿಂಗಮೂರ್ತಿಯ ಸಮ್ಮುಖದಲ್ಲಿ ಗರ್ದುಗೆಯ ರಚಿಸಿಕೊಂಡು, ಅಷ್ಟಾಂಗಯುಕ್ತನಾಗಿ ಶರಣಾರ್ಥಿ ಸ್ವಾಮಿ ! ಜಂಗಮಲಿಂಗಾರ್ಚನೆಗೆ ಅಪ್ಪಣೆಯ ಪಾಲಿಸಬೇಕೆಂದು ಬೆಸಗೊಂಡು, ಆ ಗರ್ದುಗೆಯ ಮೇಲೆ ಮೂರ್ತವ ಮಾಡಿಕೊಂಡು ಆ ಕ್ರಿಯಾಜಂಗಮಮೂರ್ತಿಯ ಕರಕಮಲದಲ್ಲಿ ನೆಲಸಿರುವ ಪರಾತ್ಪರ ಜ್ಞಾನಜಂಗಮ ಲಿಂಗಮೂರ್ತಿಗೆ ಅಷ್ಟವಿಧಾರ್ಚನೆ_ಷೋಡಶೋಪಚಾರಂಗಳ ಸಮರ್ಪಿಸಿ, ಆ ಮೇಲೆ, ತನ್ನ ವಾಮಕರದಂಗುಲಿ ಮಧ್ಯದಲ್ಲಿ ಷಡಕ್ಷರಂಗಳ ಲಿಖಿಸಿಕೊಂಡು ಅರ್ಚಿಸಿ, ತನ್ನ ಹೃನ್ಮಂದಿರಾಲಯದಲ್ಲಿ ನೆಲಸಿರುವ ಜ್ಯೋತಿರ್ಮಯ ಇಷ್ಟಮಹಾಲಿಂಗವ ನಿರೀಕ್ಷಿಸಿ ಆ ಪರಶಿವಜಂಗಮಲಿಂಗದೇವನ ಚರಣಾಂಗುಷ*ವ, ತನ್ನ ವಾಮಕರಸ್ಥಲದಲ್ಲಿ ಸುತ್ತು ಚಿತ್ತಾನಂದ ನಿತ್ಯಪರಿಪೂರ್ಣ ಅವಿರಳ ಪರಂಜ್ಯೋತಿ ಸ್ವರೂಪವಾದ ಪ್ರಾಣಲಿಂಗವೆಂದು ಭಾವಿಸಿ ಅಷ್ಟವಿಧಾರ್ಚನೆ ಷೋಡಶೋಪಚಾರ ಕ್ರಿಯಗಳ ಮಾಡಿ, ಆಮೇಲೆ ಇಷ್ಟಲಿಂಗಜಪಪ್ರಣಮ ಒಂದು ವೇಳೆ ಪ್ರಾಣಲಿಂಗ ಜಪಪ್ರಣಮ ಒಂದು ವೇಳೆ ಭಾವಲಿಂಗ ಜಪಪ್ರಣಮ ಒಂದು ವೇಳೆ ಪ್ರದಕ್ಷಿಣವ ಮಾಡಿ ಜಂಗಮಸ್ತೋತ್ರದಿಂದ ಶರಣು ಮಾಡಿ ಪೂಜೆಯನಿಳುಹಿ, ಪಾತ್ರೆಯಲ್ಲಿರುವ ಗುರುಪಾದೋದಕದಲ್ಲಿ ಬಿಂದುಯುಕ್ತವಾಗಿ ಮೂಲ ಪ್ರಣಮವ ಲಿಖಿಸಿ ಬಲದಂಗುಷ*ದಲ್ಲಿ ನೀಡುವಾಗ ಷಡಕ್ಷರಿಮಂತ್ರವ ಆರು ವೇಳೆ ಸ್ಮರಿಸಿ, ನೀಡುವಾಗ ಅಲ್ಲಿ ಅನಾದಿಗುರುವೆಂದು ಭಾವಿಸುವುದು. ಎಡದಂಗುಷ*ದ ಮೇಲೆ ನೀಡುವಾಗ ಪಂಚಾಕ್ಷರವ ಐದು ವೇಳೆ ಸ್ಮರಿಸಿ, ನೀಡುವಾಗ ಅಲ್ಲಿ ಅನಾದಿಲಿಂಗವೆಂದು ಭಾವಿಸುವುದು. ಎರಡಂಗುಷ*ದ ಮಧ್ಯದಲ್ಲಿ ನೀಡುವಾಗ ಒಂಬತ್ತಕ್ಷರವ ಒಂದು ವೇಳೆ ಸ್ಮರಿಸಿ, ನೀಡುವಾಗ ಅಲ್ಲಿ ತ್ರಿಕೂಟಸಂಗಮ ಅನಾದಿಜಂಗಮವೆಂದು ಭಾವಿಸುವುದು. ಈ ಪ್ರಕಾರದಲ್ಲಿ ನೀಡಿದ ಮೇಲೆ ದ್ರವವನಾರಿಸಿ, ಭಸ್ಮಧಾರಣವ ಮಾಡಿ, ಒಂದೆ ಪುಷ್ಪವ ಧರಿಸಿ, ನಿರಂಜನ ಪೂಜೆಯಿಂದ ಪ್ರದಕ್ಷಣವ ಮಾಡಿ, ನಮಸ್ಕರಿಸಿ, ಆ ತೀರ್ಥದ ಬಟ್ಟಲೆತ್ತಿ ಆ ಜಂಗಮಲಿಂಗಕ್ಕೆ ಶರಣಾರ್ಥಿಯೆಂದು ಅಭಿವಂದಿಸಿ. ಅವರು ಸಲಿಸಿದ ಮೇಲೆ ತಾನು ಗರ್ದುಗೆಯ ಬಿಟ್ಟೆದ್ದು, ಪರಾತ್ಪರ ಬ್ರಹ್ಮಸ್ವರೂಪ ಜಂಗಮ ತೀರ್ಥದ ಸ್ತೋತ್ರವ ಮಾಡಿ, ಅಷ್ಟಾಂಗ ಹೊಂದಿ ಶರಣುಹೊಕ್ಕು, ನಿಮ್ಮ ಪ್ರಸಾದೋದಕಕ್ಕೆ ನಿರೂಪವ ಪಾಲಿಸಬೇಕು ಸ್ವಾಮಿ ! ಎಂದು ಬೇಡಿಕೊಂಡು ಬಂದು ಮೊದಲ ಹಾಂಗೆ ಗರ್ದುಗೆಯ ಮೇಲೆ ಮೂರ್ತವ ಮಾಡಿಕೊಂಡು ಆ ಜಂಗಮ ಮೂರ್ತಿಗಳು ಸಲಿಸಿದೋಪಾದಿಯಲ್ಲಿ ತಾನು ಸಲಿಸುವುದು. ಆಮೇಲೆ ಷಟ್ಸ್ಥಲಭಕ್ತ ಮಹೇಶ್ವರರು ಅದೇ ರೀತಿಯಲ್ಲಿ ಸಲಿಸುವುದು. ಉಳಿದ ಷಟ್ಸ್ಥಲಮಾರ್ಗವರಿಯದ ಲಿಂಗಧಾರಕಶಿಶುವಾಗಿಲಿ, ಶಕ್ತಿಯಾಗಲಿ, ದೊಡ್ಡವರಾಗಲಿ ಆ ಗರ್ದುಗೆಯ ತೆಗೆದು ಲಿಂಗಕ್ಕೆ ಅರ್ಪಿಸಿಕೊಳ್ಳಬೇಕಲ್ಲದೆ ಬಟ್ಟಲೆತ್ತಲಾಗದು. ಅದೇನು ಕಾರಣವೆಂದಡೆ, ಅವರಿಗೆ ಇಪ್ಪತ್ತೊಂದು ದೀಕ್ಷೆ, ಷಟ್ಸ್ಥಲಮಾರ್ಗ, ಸರ್ವಾಚಾರ ಸಂಪತ್ತಿನಾಚರಣೆ ಮುಂದಿದ್ದರಿಂದ ಅವರು ಬಟ್ಟಲೆತ್ತಲಾಗದು. ಹೀಂಗೆ ಸಮಸ್ತರು ಸಲಿಸಿದ ಮೇಲೆ ಕೊಟ್ಟು_ಕೊಂಡ, ಭಕ್ತ_ಜಂಗಮವು ಇರ್ವರು ಕೂಡಿ ಮುಕ್ತಾಯವ ಮಾಡಿದಲ್ಲಿಗೆ ದಶವಿಧ ಪಾದೋದಕವಾಗುವುದು. ಆ ಮೇಲೆ ಗುರುಪಾದೋದಕದಿಂದ ಪಾಕವ ಮಾಡಿದ ಭಾಂಡಭಾಜನಂಗಳು ತಾಂಬೂಲ ಪದಾರ್ಥ ಮುಂತಾಗಿ ಇರ್ವರು ಕೂಡಿ ಮೌನಮಂತ್ರ ಧ್ಯಾನದಿಂದ ಹಸ್ತಸ್ಪರ್ಶನವ ಮಾಡಿ. ಶುದ್ಧ ಪ್ರಸಾದವೆಂದು ಭಾವಿಸಿ, ಬಹುಸುಯಿದಾನದಿಂದ ಸಮಸ್ತ ಜಂಗಮಭಕ್ತ ಮಹೇಶ್ವರ ಶರಣಗಣಾರಾಧ್ಯರಿಗೆ ಎಡೆಮಾಡಿ, ಅಷ್ಟಾಂಗ ಹೊಂದಿ, ಎಡಬಲ ಗಣತಿಂಥಿಣಿಯ ನೋಡಿ, ನಿರೀಕ್ಷಿಸಿ, ಶರಣಾರ್ಥಿ ! ಸ್ವಾಮಿ ! ಮಹಾಲಿಂಗಾರ್ಪಿತವ ಮಾಡಬೇಕೆಂದು ಅಭಿವಂದಿಸಿ, ಪತಿವ್ರತತ್ವದಿಂದ ಜಂಗಮಕ್ಕೆ ನಿರ್ವಂಚಕನಾಗಿ, ಭಕ್ತ_ಜಂಗಮವೆಂಬ ಉಭಯನಾಮವಳಿದು ಕ್ಷೀರ ಕ್ಷೀರ ಬೆರೆತಂತೆ ನಿರಾಕಾರ_ ನಿಶ್ಯಬ್ಧಲೀಲೆ ಪರಿಯಂತರವು ಶ್ರೀಗುರುಲಿಂಗಜಂಗಮಪಾದೋದಕಪ್ರಸಾದವ ಸಪ್ತವಿಧಭಕ್ತಿಯಿಂದ ಸಾವಧಾನಿಯಾಗಿ ಆಚರಿಸುವಾತನೆ ಜಂಗಮಭಕ್ತನಾದ ಅಚ್ಚಪ್ರಸಾದಿಯೆಂಬೆ ಕಾಣಾ ! ಗುಹೇಶ್ವರಲಿಂಗದಲ್ಲಿ ಚೆನ್ನಬಸವಣ್ಣ.
--------------
ಅಲ್ಲಮಪ್ರಭುದೇವರು
ಸದ್‍ಭಕ್ತನ ಸತ್ಕ್ರಿಯವೆ ಗುರುವೆನಿಸಿ, ಮಂಗಳ ಅಂಗಪೀಠದ ಮುಹೂರ್ತಗೊಂಡ ಹರರೂಪವೇ ಲಿಂಗವೆನಿಸಿ, ಲಿಂಗನ ಪೂಜಿಸುವ ಸದಾಚಾರವೇ ಜಂಗಮವೆನಿಸಿ, ಪಾದ್ಯದಲ್ಲಿ ಪಾದೋದಕವಾಗಿ, ಜಿಹ್ವೆಯಲ್ಲಿ ಪ್ರಸಾದವಾಗಿ, ಲಲಾಟದಲ್ಲಿ ವಿಭೂತಿಧಾರಣವಾಗಿ, ಉರ, ಸಿರ, ಕಂಠದಲ್ಲಿ ಶಿವಾಕ್ಷಿಮಣಿಯೆನಿಸಿ, ಶ್ರೋತ್ರದಲ್ಲಿ ಮಂತ್ರವಾಗಿ ಇಂತು ಇವು ಬಾಹ್ಯ ಅಷ್ಟಾವರಣದ ಕ್ರಮವೆನಿಸಿತ್ತು. ಇನ್ನು ಅಂತರಂಗದಿ ಆತ್ಮನ ಅರುವೆ ಗುರುವೆನಿಸಿತ್ತು. ಪ್ರಾಣವೆ ಲಿಂಗವಾಗಿ ತೋರಿತ್ತು. ಪರಿಪೂರ್ಣ ಪರವಸ್ತುವಿನ ಜ್ಞಾನವೆ ಜಂಗಮವೆನಿಸಿತ್ತು. ಜಿಹ್ವಾಗ್ರವೇ ಪಾದೋದಕವಾಗಿ, ನಾಶಿಕವೆ ಪ್ರಸಾದವಾಗಿ, ತ್ವಕ್ಕಿನಲ್ಲಿ ಶ್ರೀವಿಭೂತಿ, ನೇತ್ರದಲ್ಲಿ ಪರಾಕ್ಷಮಣಿ, ಕರ್ಣದ್ವಾರದೊಳು ಮೊಳಗುವ ಮಂತ್ರದಿಂದೆ ಕೂಡಿಕೊಂಡ ಈ ಪರಿಯೇ ಅಂತರಾತ್ಮಷ್ಟಾವರಣವೆನಿಸಿತು. ನೀನೊಂದು ಇದ್ದು ಇಂತುಪರಿಯಲ್ಲಿ ಪೂಜೆ ಪೂಜಕ ಪೂಜ್ಯನೆನಿಸಿ ಮೆರೆದಿಯಲ್ಲಾ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಮದವಳಿದು ಗುರುಭಕ್ತಿಗೂಡಿ ಬಂದನಯ್ಯಾ ನಿಮ್ಮ ಶ್ರದ್ಧಾಭಕ್ತ. ಕಾಮವಳಿದು ಲಿಂಗಭಕ್ತಿಗೂಡಿ ಬಂದನಯ್ಯಾ ನಿಮ್ಮ ನಿಷಾ*ಭಕ್ತ. ಮತ್ಸರವಳಿದು ಜಂಗಮಭಕ್ತಿಗೂಡಿ ಬಂದನಯ್ಯಾ ನಿಮ್ಮ ಸಾವಧಾನಭಕ್ತ. ಮೋಹವನಳಿದು ಪಾದೋದಕಪ್ರಸಾದ ಭಕ್ತಿಯಗೂಡಿ ಬಂದನಯ್ಯಾ ನಿಮ್ಮ ಅನುಭಾವಭಕ್ತ. ಕ್ರೋಧವನಳಿದು ವಿಭೂತಿ ರುದ್ರಾಕ್ಷಿಭಕ್ತಿಗೂಡಿ ಬಂದನಯ್ಯಾ ನಿಮ್ಮ ಆನಂದಭಕ್ತ. ಲೋಭವನಳಿದು ಪಂಚಾಕ್ಷರಿಭಕ್ತಿಗೂಡಿ ಬಂದನಯ್ಯಾ ನಿಮ್ಮ ಸಮರಸಭಕ್ತ. ಇಂತು ಅಷ್ಟಾವರಣದ ಭಕ್ತಿಸಂಯುಕ್ತವಾಗಿ ಗುರುನಿರಂಜನ ಚನ್ನಬಸವಲಿಂಗಕ್ಕೆ ಅಂಗವಾಗಿ ಬಂದನಯ್ಯಾ ನಿಮ್ಮ ನಿಜಭಕ್ತ.
--------------
ದೇಶಿಕೇಂದ್ರ ಸಂಗನಬಸವಯ್ಯ
ಸತ್ಯವೇ ಗುರುವಾಗಿ ತೋರಿತು, ಚಿತ್ತವೆ ಲಿಂಗವಾಗಿ ತೋರಿತು, ಆನಂದವೆ ಜಂಗಮವಾಗಿ ತೋರಿತು, ನಿತ್ಯವೆ ಪಾದೋದಕವಾಗಿ ತೋರಿತು, ಪರಿಪೂರ್ಣವೆ ಪ್ರಸಾದವಾಗಿ ತೋರಿತು, ಅಖಂಡತ್ವವೇ ಶಿವಾಕ್ಷಮಣಿ ಎನಿಸಿ ತೋರಿತು. ಆ ಪರಬ್ರಹ್ಮವೇ ತಾನಾದ ವಿನೋದವು ಮಂತ್ರವೆನಿಸಿತ್ತು. ಮತ್ತೆ ತನ್ನ ನಾಮವೆ ಪಂಚಾಕ್ಷರಿ, ತನ್ನ ಸ್ಥಲವೇ ಷಡಕ್ಷರಿ, ತನ್ನ ರೂಪ ದೇಹ ನೋಟ ನೆನಹು ಸರ್ವವೂ ಪರಶಿವರೂಪ. ಆನಿ ಬೆಳವಲಹಣ್ಣು ನುಂಗಿದಾ ಪರಿಯಂತೆ, ಒಡೆದರೆ ಏನೂ ಇಲ್ಲ ಬೈಲೇ ಬೈಲು, ಅದರಂತೆ ಕೇಳೋದು ಬೈಲು, ಹೇಳೋದು, ಬೈಲು, ಹೌದು ಎಂಬುವದದು ಬೈಲು, ಅಲ್ಲವೆಂಬುದದು ಬೈಲು; ಬೈಲಿಗೆ ಬೈಲು ನಿರ್ಬೈಲು. ಕಾಡಕಿಚ್ಚಿನ ಕೈಯ ಮೆದಿಯ ಕೊಯಿಸಿದರೆ ಹಿಂದೆ ಮೆದಿ ಇಲ್ಲಾ, ಮುಂದೆ ನಿಲುವು ಇಲ್ಲಾ. ವಾಯದ ರಾಸಿಗೆ ಮರಣದ ಕೊಳಗ, ಅಳ್ಯೋದು ನೆರಳುವದು ಬೈಲು. ಅಳತೆಗೆ ಹೋಗದು, ಹೊಯ್ತಕ್ಕೆ ಸಿಗದು. ರವಿಯಂತೆ ಬದ್ಧವಿಲ್ಲಾ, ಪರಿಪೂರ್ಣ ಪರಂಜ್ಯೋತಿ ಬೈಲು. ಇಂತು ಪರಿಯಲ್ಲಿ ನೂರೆಂಟು ಪರಿಪರಿಯ ಅಷ್ಟಾವರಣದ ವಚನವಾಗಿ ಸುಳ್ಳೆ ಸುಳ್ಳೆನಿಸಿ ಸಾರಿದಿ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಅಯ್ಯ ! ಮುಂದೆ ಮರ್ತ್ಯಲೋಕದ ಮಹಾಗಣಂಗಳು ಸದ್ಭಕ್ತಿ, ಸದಾಚಾರ, ಸತ್ಕ್ರಿಯಾ, ಸಮ್ಯಜ್ಞಾನ, ಆಜ್ಞಾದೀಕ್ಷೆ ಮೊದಲಾದ ಇಪ್ಪತ್ತೊಂದು ದೀಕ್ಷೆಯ ವಿಚಾರ, ತ್ರಿವಿಧ ಸ್ಥಲ_ಷಟ್ಸ್ಥಲ ದಶವಿಧಪಾದೋದಕ, ಏಕಾದಶಪ್ರಸಾದ, ಷೋಡಶಾವರಣ, ನೂರೆಂಟುಸಕೀಲು ಮೊದಲಾದ ಸಮಸ್ತಸಕೀಲದ ಅರ್ಪಿತ_ಅವಧಾನಂಗಳು, ಮೂಲಪ್ರಣಮ ಮೊದಲಾಗಿ ಮಹಾಮಂತ್ರಗಳು, ಸರ್ವಾಚಾರ ಸಂಪತ್ತಿನ ಲಿಂಗಾನುಭಾವದ ನಡೆ_ನುಡಿಯ ವಿಚಾರವು ಷಡ್ವಿಧಶೀಲ, ಷಡ್ವಿಧವ್ರತ, ಷಡ್ವಿಧನೇಮದ ಕಲೆನೆಲೆಯ ಸನ್ಮಾರ್ಗವು, ಇಂತೀ ಸ್ವಸ್ವರೂಪುನಿಲುಕಡೆಯ ನಿಷ್ಕಲಂಕ ಪರಶಿವಮೂರ್ತಿ ಸದ್ಗುರು ಲಿಂಗಜಂಗಮದಿಂ ಪಡೆದು ಪರುಷಮುಟ್ಟಿದ ಲೋಹ ಬಂಗಾರವಾಗಿ ಮರಳಿ ಲೋಹವಾಗದಂತೆ, ಪಾವನಾರ್ಥವಾಗಿ ಸ್ವಯ_ಚರ_ಪರ, ಆದಿ_ಅಂತ್ಯ_ಸೇವ್ಯಸ್ಥಲ ಮೊದಲಾದ ಷಟ್ಸ್ಥಲಮಾರ್ಗವಿಡಿದಾಚರಿಸುವಲ್ಲಿ ಭಕ್ತಮಾಹೇಶ್ವರ ಶರಣಗಣಂಗಳು ಸಮಪಙô್ತಯಲ್ಲಿ ಸುಗಂಧ, ಸುರಸ, ಸುರೂಪು, ಸುಸ್ಪರ್ಶನ ಸುಶಬ್ದ, [ಸುಪರಿಣಾಮ], ಮಧುರ, ಒಗರು, ಕಾರ, ಹುಳಿ, ಕಹಿ, ಲವಣ, ಪಂಚಾಮೃತ ಮೊದಲಾದ ಪದಾರ್ಥದ ಪೂರ್ವಾಶ್ರಯವ ಕಳೆದು, ಮಹಾಘನಲಿಂಗಮುಖದಲ್ಲಿ ಶುದ್ಧ_ಸಿದ್ಧ_ಪ್ರಸಿದ್ಧ, ರೂಪು_ರುಚಿ_ತೃಪ್ತಿಗಳು ಮಹಾಮಂತ್ರ ಧ್ಯಾನದಿಂದ ಸಮರ್ಪಿಸಿ ಆ ಲಿಂಗದ ಗರ್ಭದಿ ನೆಲಸಿರ್ಪ ನಿರಂಜನಜಂಗಮದಿಂ ಮಹಾಪ್ರಸಾದವ ಪಡೆದು ತಾನೆ ಪ್ರಾಣಲಿಂಗವೆಂದು ಎರಡಳಿದು, ಪರಿಶಿವಲಿಂಗಲೀಲೆಯಿಂ ಭೋಗಿಸುವ ಸಮಪಙô್ತಯ ಮಧ್ಯದಲ್ಲಿ ಆವ ಗಣಂಗಳಾದರು ಸರಿಯೆ, ಪ್ರಸಾದ ನಮಗೆ ಹೆಚ್ಚಾಯಿತ್ತೆಂದು ತ್ರಿವಿಧದೀಕ್ಷಾಹೀನವಾದ ಉಪಾಧಿಲಿಂಗಭಕ್ತಂಗೆ ಒಲ್ಮೆಯಿಂದ ಶರಣಾಗೆಂದು ಕೊಡುವವನೊಬ್ಬ ಅಯೋಗ್ಯನು ! ಅಥವಾ ಗುರುಮಾರ್ಗದಾಚರಣೆಯ ತಿಳಿಯದೆ ಕೊಟ್ಟಲ್ಲಿ, ಇಂತು ಕೊಂಡ ಭಕ್ತನು ಬಹುನಿಜದಿಂದ ಆ ಪ್ರಸಾದವೆ_ -ಪ್ರಾಣವಾಗಿದ್ದುದ ನೋಡಿ ಮುಂದೆ ಷಟ್ಸ್ಥಲಲಿಂಗಾನುಭಾವ ಸದ್ಭಕ್ತ ಶರಣಗಣಂಗಳು ಕೊಟ್ಟಾತಂಗೆ ಇಂತು ಕೊಡದಂತೆ ಆಜ್ಞೆಯ ಮಾಡಿ, ಕೊಂಡಂಥವರ ದುರ್ಗುಣಗಳ ಬಿಡಿಸಿ ವೇಧಾಮಂತ್ರಕ್ರಿಯೆ ಹಸ್ತಮಸ್ತಕಸಂಯೋಗ ಮೊದಲಾದ ಇಪ್ಪತ್ತೊಂದು ದೀಕ್ಷೆಯ ಸದ್ಗುರುವಿನಿಂ ಮಾಡಿಸಿ ಸದಾಚಾರವ ಬೋಧಿಸಿ, ಅಷ್ಟಾವರಣದ ಗೊತ್ತ ಸರ್ವಾಂಗಲಿಂಗದಿ ತೋರಿ, ಅನಾದಿಜಂಗಮಪ್ರಸಿದ್ಧ ಪ್ರಸಾದ ಪಾದೋದಕವ ಕೊಟ್ಟುಕೊಂಬುದೆ ಸದಾಚಾರ_ಸನ್ಮಾರ್ಗ ನೋಡ ! ಗುಹೇಶ್ವರಲಿಂಗಕ್ಕೆ ಚೆನ್ನಬಸವಣ್ಣ.
--------------
ಅಲ್ಲಮಪ್ರಭುದೇವರು
ಅಯ್ಯ! ಶ್ರೀಗುರುಲಿಂಗಜಂಗಮದ ವೇಧಾಮಂತ್ರಕ್ರಿಯಾದೀಕ್ಷೆಗೆ ಹೊರಗಾದ ಭುವನದ ಶೈವದೈವದಾರ್ಚನೆ ಪೂಜೆಯ ಮಾಡಿ, ಅದರುಚ್ಛಿಷ್ಟವ ಭುಂಜಿಸುವದಂಗಾಚಾರ. ಅದನುಳಿದು ಶುದ್ಧಸಿದ್ಧಪ್ರಸಿದ್ಧಪ್ರಸಾದಸ್ವರೂಪವಾದ ಅನಾದಿಗುರುಲಿಂಗಜಂಗಮದ ಅರ್ಚನೆ ಪೂಜೆಯ ಮಾಡಿ ಕಿಂಕರ್ವಾಣದಿಂದ ಅವರ ಒಕ್ಕುಮಿಕ್ಕ ಪ್ರಸಾದವ ಹಾರೈಸುವುದೆ ಲಿಂಗಾಚಾರ. ಈ ಭೇದವ ತಿಳಿದು ಪಂಚಾಚಾರ ಆಚರಣೆಗೆ ತಂದು, ಸಪ್ತಾಚಾರವ ಸಂಬಂಧವಿಟ್ಟು, ಅಷ್ಟಾವರಣದ ಕಲೆನೆಲೆಗಳ ಒಳಗು-ಹೊರಗು ಎನ್ನದೆ, ಸದ್ಗುರುಮುಖದಿಂದ ಆಚರಣೆ-ಸಂಬಂಧವ ತಿಳಿದು, ಸದ್ಭಕ್ತಿ-ಸಮ್ಯಜ್ಞಾನ-ವೈರಾಗ್ಯ-ಷಟ್ಸ್ಥಲಮಾರ್ಗವ ಹಿಡಿದು, ನಿಜಾಚರಣೆಯಲ್ಲಿ ಆಚರಿಸುವರೆ ಶಿವಶಕ್ತಿ, ಶಿವಭಕ್ತ, ಶಿವಜಂಗಮವಲ್ಲದೆ, ಉಳಿದ ವೇಷಧಾರಿಗಳೆಲ್ಲ ಎನ್ನೊಡೆಯ ಪ್ರಮಥಗಣಾಚಾರಕ್ಕೆ ಹೊರಗೆಂದಾತನಂಬಿಗರ ಚೌಡಯ್ಯನು.
--------------
ಅಂಬಿಗರ ಚೌಡಯ್ಯ
ಒಂದೇ ಆಗಿರ್ದ ಪರಶಿವನು ಮೂರಾಗಿ ಮೂರರಿಂದೆ ಪೂಜೆಗೊಂಡು ಎರಡಾಗಿ ಮೂರು ಎರಡು ಭೇದವಿಲ್ಲದೆ ಒಂದಾಗಿ ತೋರಿದಿರಿ. ಅದೆಂತೆಂದೊಡೆ :ಅಖಂಡ ಪರಶಿವನ ಭೇದಿಸಿ ಕಾಂಬಲು ತೋರಿದ ನಾದವೇ ಗುರುವಾಗಿ, ಬಿಂದುವೆ ಲಿಂಗವಾಗಿ, ಕಳೆಯೇ ಜಂಗಮವಾಗಿ, ಸುಜಲವೆ ಪಾದೋದಕವಾಗಿ, ತಿಳಿಯೇ ಪ್ರಸಾದವಾಗಿ, ಕಾಣಿಸುವ ಸುಪ್ರಕಾಶದ ತೇಜಪುಂಜವೆ ಶ್ರೀವಿಭೂತಿಯಾಗಿ, ಸೂರ್ಯ ಚಂದ್ರಾದಿಗಳೆ ರುದ್ರಾಕ್ಷಿಮಣಿಯಾಗಿ, ಪಿಂಡಬ್ರಹ್ಮಾಂಡಕೊಂದೆ ಎನಿಸಿದ ಓಂಕಾರವೆ ಸರ್ವಮಂತ್ರಗಳ ಶ್ರೇಷ* ಆದಿಮಂತ್ರವೆನಿಸಿ, ಬ್ರಹ್ಮಾಂಡ ಅಷ್ಟಾವರಣದ ಇನ್ನೊಂದು ಪರಿಯಾಗಿ ತೋರಿ, ಹಲವು ಪರಿಯಲಿ ಲೀಲೆಯಾಗಿ ಮೆರೆದ ಹಲವು ಹಲವಲ್ಲದೆ ಹಲವು ಒಂದಾಗಿ, ಒಂದೆ ತಾನಾದ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ವಿಷಯಾಭಿಲಾಷೆಯಲ್ಲಿ ವಿರಾಗವು ನೆಲೆಯಾಗಿ, ಅಷ್ಟಾವರಣದ ಆಚಾರವೆ ಅಂಗವಾದಡೆ; ಮರುಳುಗೊಳಿಪ ಮಾರನ ಮಾಟವು ದೂರವಾಗುವುದಯ್ಯಾ. ಅನಾಹತಶಬ್ದದ ಅನುಸಂಧಾನದಿಂದ, ಅವಸ್ಥಾತ್ರಯದಲ್ಲಿ ತೋರುವ ತನು ಮೂರರ ವಾಸನೆಯು ನಾಶವಾಗುವುದಯ್ಯಾ. ಇಷ್ಟಲಿಂಗದಲ್ಲಿಟ್ಟ ದೃಷ್ಟಿ, ಬಿಂದುವಿನ ಪರಿಪರಿಯ ಬಣ್ಣವ ನೋಡಿ ನೋಡಿ ದಣಿದು, ಶಿವಕಲಾರೂಪದಲ್ಲಿ ವ್ಯಾಪಿಸಿ, ಕಂಗಳ ಎವೆ ಮಾಟವಿಲ್ಲದೆ ಲಿಂಗಲಕ್ಷ್ಯವು ಕದಲಂತಿದ್ದಡೆ ಕಾಲನ ಕಾಟವು ತೊಲಗಿ ಹೋಗುವುದಯ್ಯಾ. ಇಂತೀ ಸಾಧನತ್ರಯವು ಸಾಧ್ಯವಾದ ಶರಣಂಗೆ ಕಾಲ_ಕಾಮ_ಪುರವೈರಿಯಾದ ನಮ್ಮ ಕೂಡಲಚೆನ್ನಸಂಗಯ್ಯನು ಮನ್ನಣೆಯ ಮುಕ್ತಿಯನೀವನು
--------------
ಚನ್ನಬಸವಣ್ಣ
ಆದ್ಯರ ವಚನಕ್ಕೆ, ಅಷ್ಟಾವರಣದ ಸಂಗನಬಸವಯ್ಯನ ವಚನವ ಕೇಳಿ ಪದ್ಮಿನಿಯಲ್ಲಿ ಬೆರಗಾದ ಕಾಮಿಯಂತೆ, ಎರೆದು ನಿದ್ರಿ ಬಾಲನಂತೆ, ಕಾಯವ ದಣಿಸಿದ ಕೃಷೀವಲನ ನಿದ್ರೆಯಂತೆ ಪರವಶನಾದೆ ಕಾಣಾ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಮಹಾಂತನ ಕೂಡಿದ ದೇವರುಗಳೆಂಬ ಭ್ರಾಂತಿಗುಣದ ಭ್ರಷ್ಟರನೇನೆಂಬೆನಯ್ಯಾ. ಮಹಾಂತೆಂದಡೆ, ಗುರುಮಹಾತ್ಮೆ, ಲಿಂಗಮಹಾತ್ಮೆ , ಜಂಗಮಮಹಾತ್ಮೆ , ಪಾದೋದಕಮಹಾತ್ಮೆ , ಪ್ರಸಾದಮಹಾತ್ಮೆ, ವಿಭೂತಿಮಹಾತ್ಮೆ , ರುದ್ರಾಕ್ಷಿಮಹಾತ್ಮೆ, ಮಂತ್ರಮಹಾತ್ಮೆ , ಎಂಬ ಅಷ್ಟಾವರಣದ ಘನಮಹಾತ್ಮೆಯನರಿದು, ಅಷ್ಟಾವರಣವೆ ಅಂಗವಾಗಿ, ಪಂಚಾಚಾರವೆ ಪ್ರಾಣವಾಗಿ, ಅನಂತ ಸ್ಥಳಕುಳಂಗಳನೊಳಕೊಂಡು ಪರಬ್ರಹ್ಮವ ಕೂಡುವ ಸಮರಸಭಾವ ಸಕೀಲದ ಭೇದವನರಿಯದೆ, ಆಶಾಕ್ಲೇಶಂಗಳಲ್ಲಿ ಕಟ್ಟುವಡೆದು ಕಾಸು ವಿಷಯ ಮಠ ಮನೆಗೆ ಬಡಿದಾಡುವ ಭಾಷೆಭ್ರಷ್ಟರಿಗೆ ಮಹಾಂತಿನ ಘನವಿನ್ನೆಲ್ಲಿಯದೊ ? ಇಂತಪ್ಪ ಮಹಾಂತಿನ ಅರುಹು ಕುರುಹಿನ ಘನವನರಿಯದೆ ನಾನು ಮಹಾಂತಿನ ಕೂಡಿದ ದೇವರೆಂದು ಹೊರಗೆ ಆಡಂಬರ ವೇಷವ ತಾಳಿ ಜಡೆಯ ಬಿಟ್ಟಡೇನು ? ಆಲದ ಮರಕ್ಕೆ ಬೇರಿಳಿದಂತೆ. ಸರ್ವಾಂಗಕ್ಕೆ ಭಸ್ಮವ ಹೂಸಿದಡೇನು ? ಚಪ್ಪರದ ಮೇಲೆ ಕಗ್ಗುಂಬಳಕಾಯಿ ಬಿದ್ದಂತೆ. ಸ್ಥಾನ ಸ್ಥಾನಕ್ಕೆ ರುದ್ರಾಕ್ಷಿಯನಲಂಕರಿಸಿದಡೇನು ? ಹೇರಂಡಲಗಿಡ ಗೊನೆಯ ಬಿಟ್ಟಂತೆ ಕಾಣಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಅಜ್ಞಾನ ಕುಕರ್ಮದಿಂದ ಮುಸುಕಿದ ಕತ್ತಲೆಗೆ ಸುಜ್ಞಾನಜ್ಯೋತಿ ಎರೆಯಲ್ಪಟ್ಟ ಪರಮಗುರುವೆಂದಿತ್ತು ರಹಸ್ಯ. ಸಾಕ್ಷಿ : ``ಅಜ್ಞಾನತಿಮಿರಾಂಧಸ್ಯ ಜ್ಞಾನಾಂಜನಶಲಾಕಯಾ | ಚಕ್ಷುರುನ್ಮೀಲಿತಂ ಯೇನ ತಸ್ಮೆ ೈ ಶ್ರೀಗುರವೇ ನಮಃ ||'' ಎಂದೆಂಬ ಗುರು. ``ಆಕಾಶೋ ಲಿಂಗಮೂಲಂ ಚ ಪೃಥ್ವೀ ತಸ್ಯಾದಿ ಪೀಠಕಂ | ಆಲಯಂ ಸರ್ವಭೂತಾನಾಂ ಲಯಂ ಚ ಲಿಂಗಮುಚ್ಯತೇ ||'' ಎಂದೆಂಬ ಲಿಂಗವು. ``ಜಕಾರಂ ಹಂಸವಾಹಸ್ಯ ಗಕಾರಂ ಗರುಢಧ್ವಜಂ | ಮಕಾರಂ ರುದ್ರರೂಪಂ ಚ ತ್ರಿಮೂತ್ರ್ಯಾತ್ಮಕಜಂಗಮಃ ||'' ಎಂದೆಂಬ ಜಂಗಮವು. ``ಶ್ರಾದ್ಧಂ ಯಜ್ಞಂ ಜಪಂ ಹೋಮಂ ವೈಶ್ವದೇವಸುರಾರ್ಚನಂ | ಧೃತತ್ರಿಪುಂಡ್ರಪೂತಾತ್ಮಾ ಮೃತ್ಯುಂ ಜಯತಿ ಮಾನವಃ ||'' ಎಂದೆಂಬ ವಿಭೂತಿ. ``ರುದ್ರಾಕ್ಷಿಧಾರಣಂ ಸರ್ವಂ ಜಟಾಮಂಡಲಧಾರಿಣಿ | ಅಕ್ಷಮಾಲಾರ್ಪಿತಕರ ಕಮಂಡಲಕರಾನ್ವಿತಂ || ತ್ರಿಪುಂಡ್ರಾವಲಿಯುಕ್ತಾಂ | ಆಷಾಡೇನ ವಿರಾಜಿತಂ ಋಗ್ಯಜುಃಸಾಮ ರೂಪೇಣ | ಸೇವ ತಸ್ಮೆ ೈ ಸ್ವರಃ ಇತಿ | ತ್ರೈವ ಗಾಯಿತ್ರೇವ ವರಾನನೇ ||'' (?) ಎಂದೆಂಬ ವಿಭೂತಿ ರುದ್ರಾಕ್ಷಿ. ``ಜ್ಞಾನ ಪ್ರಾಣ ಬೀಜಂ ಚ ನಕಾರಂ ಚ ಆಚಾರಕಂ | ಮಕಾರಂ ಚ ಗುರೋರ್ಬೀಜಂ ಶಿಕಾರಂ ಲಿಂಗಮತ್ರ್ಯಕಂ || ವಕಾರಂ ಚ ಬೀಜಂ ಚ ಯಕಾರಂ ಪ್ರಾಸಕಂ | ಏವಂ ಬೀಜಾಕ್ಷರಂ ಜ್ಞಾತುಂ ದುರ್ಲಭಂ ಕಮಲಾನನೆ ||'' ಎಂದೆಂಬ ಷಡಕ್ಷರಿಮಂತ್ರವು. ``ಶೋಷಣಂ ಪಾಪಪಂಕಸ್ಯ ದೀಪನಂ ಜ್ಞಾನತೇಜಸಃ | ಗುರುಪಾದೋದಕಂ ಪೀತ್ವಾ ಸಂಸಾರದ್ರುಮನಾಶನಂ ||'' ಎಂದೆಂಬ ಪಾದೋದಕವು. ``ಪ್ರಸಾದಂ ಗಿರಿಜಾದೇವಿ ಸಿದ್ಧಕಿನ್ನರಗುಹ್ಯಕಃ | ವಿಷ್ಣು ಮುಖ್ಯಾದಿದೇವಾನಾಮಗ್ರಾಹ್ಯೋýಯಮಗೋಚರಃ ||'' ಎಂದೆಂಬ ಪ್ರಸಾದವು. ಇನಿತು ತೆರದ ಅಷ್ಟಾವರಣದ ಶ್ರುತ ದೃಷ್ಟವ ಕಂಡು ಘನವೆಂದು ನಂಬಿದಾತನೆ ಸತ್ಯಸದಾಚಾರಿ ಕಾಣಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ನಾವು ಶಿವಭಕ್ತರೆಂದು ಹೇಳುವ ಅಣ್ಣಗಳಿರಾ ನೀವು ಶಿವಭಕ್ತರೆಂತಾದಿರಣ್ಣ. ಅರಿಯದಿರ್ದಡೆ ಕೇಳಿರಣ್ಣ, ಶಿವಭಕ್ತನಾದ ನೆಲೆಕಲೆಯ. ಆರುವೈರಿಗಳ ಮುರಿಗಟ್ಟಿ, ಅಷ್ಟಮದವ ಜಳ್ಳು ಮಾಡಿ ತೂರಿ, ಸಪ್ತವ್ಯಸನಂಗಳ ಕಂಕಣವ ಮುರಿದು, ಸದ್ಭಕ್ತಿ ನೆಲೆಕಲೆಯ ತಿಳಿದು, ಅಷ್ಟಾವರಣದ ಗೊತ್ತು ಮುಟ್ಟಿನೋಡಿ, ಪಂಚಾಚಾರ ಭೇದವ ತಿಳಿದು, ಷಡ್ವಿಧಲಿಂಗಾಂಗದ ಮೂಲವನರಿದು, ಷಡ್ವಿಧ ಅರ್ಪಿತಾವಧಾನವನಾಚರಿಸಿ, ಷಟ್ಸ್ಥಲಮಾರ್ಗವಿಡಿದು ಆಚರಿಸುವ ಸದ್ಭಕ್ತರಿಗೆ ಅತಿಭೃತ್ಯರಾಗಿ, ಹಮ್ಮುಬಿಮ್ಮುಗಳಿಲ್ಲದೆ, ನಡೆನುಡಿಸಂಪನ್ನರಾದವರೆ ಶಿವಭಕ್ತರು ನೋಡಾ, ಕಲಿದೇವರದೇವ.
--------------
ಮಡಿವಾಳ ಮಾಚಿದೇವ
ಇನ್ನಷ್ಟು ... -->