ಅಥವಾ

ಒಟ್ಟು 32 ಕಡೆಗಳಲ್ಲಿ , 19 ವಚನಕಾರರು , 27 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಜ್ಞಾನದಿಂದ ಹುಟ್ಟಿತ್ತು ಅಹಂ ಮಮತೆ, ಅಜ್ಞಾನದಿಂದ ಹುಟ್ಟಿತ್ತು ಮನಸ್ಸಂಚಲ, ಅಜ್ಞಾನದಿಂದ ಹುಟ್ಟಿತ್ತು ಇಂದ್ರಿಯೋದ್ರೇಕ, ಅಜ್ಞಾನದಿಂದ ಹುಟ್ಟಿತ್ತು ದೇಹಮೋಹ, ಅಜ್ಞಾನದಿಂದ ಹುಟ್ಟಿತ್ತು ಅತಿಕಾಂಕ್ಷೆ, ಅಜ್ಞಾನದಿಂದ ಹುಟ್ಟಿತ್ತು ತ್ರಿವಿಧಮಲ, ಅಜ್ಞಾನದಿಂದ ಹುಟ್ಟಿತ್ತು ಸಂಸಾರ, ಅಜ್ಞಾನದಿಂದ ಹುಟ್ಟಿತ್ತು ರಾಗದ್ವೇಷ, ಅಜ್ಞಾನದಿಂದ ಹುಟ್ಟಿತ್ತು ಸರ್ವಪ್ರಪಂಚು, ಅಜ್ಞಾನದಿಂದ ಹುಟ್ಟಿತ್ತು ಸರ್ವದುಃಖ, ಕೂಡಲಸಂಗಮದೇವಾ, ಈ ಅಜ್ಞಾನಭ್ರಮೆಯ ಕೆಡಿಸಿದಲ್ಲದೆ ನಿಮ್ಮನೊಡಗೂಡಬಾರದಯ್ಯಾ.
--------------
ಬಸವಣ್ಣ
ಶುದ್ಧ ಮಿಶ್ರ ಸಂಕೀರ್ಣ ಪೂರ್ವ ಮಾರ್ಗಶೈವಂಗಳಲ್ಲಿ ಕರ್ಮಭಕ್ತಿಯಲ್ಲದೆ ನಿರ್ಮಳಸದ್ಭಕ್ತಿಯೆಲ್ಲಿಯದೊ ? ಒಮ್ಮೆ ಧರಿಸಿ ಒಮ್ಮೆ ಇರಿಸಿ, ಶುಚಿಯಾದೆನೆಂದು ಅಶುಚಿಯಾದೆನೆಂದು ಭವಿಯಾಗುತ್ತೊಮ್ಮೆ, ಭಕ್ತನಾಗುತ್ತೊಮ್ಮೆ ಒಪ್ಪಚ್ಚಿ ಹೊಲೆ, ಒಪ್ಪಚ್ಚಿ ಕುಲವೆಂದು ತೆರನರಿಯದಿಪ್ಪ ಬರಿಯ ಶುದ್ಧಶೈವವಂ ಬಿಟ್ಟು, ಬ್ರಹ್ಮ ವಿಷ್ಣು ರುದ್ರ ಮಾಹೇಶ್ವರರು ಒಂದೆಂದು ನುಡಿವ ದುಃಕರ್ಮ ಮಿಶ್ರವಂ ಬಿಟ್ಟು, ಹರನೆ ಹಿರಿಯನೆಂದು ಕಿರಿಯರೆಲ್ಲಾ ದೇವರೆಂದು ನುಡಿದು ಕಂಡ ಕಂಡವರ್ಗೆ ಹೊಡೆಗೆಡವ ವೇಶಿಯ ಸುತನಂತೆ ಸಂಕೀರ್ಣಕ್ಕೊಳಗಾದ ಸಂಕೀರ್ಣಶೈವಮಂ ನೋಡದೆ, ದೂರದಿಂ ನಮಿಸಿ ಅರ್ಪಿಸಿ ಶೇಷವರುಣಕರ್ತನಲ್ಲವೆಂದು ದೂರಸ್ತನಹ ಪೂರ್ವಶೈವಮಂ ತೊಲಗಿ, ಅಂಗದಲನವರತ ಲಿಂಗಮಂ ಧರಿಸಿರ್ದು ದೇಹೇಂದ್ರಿಯ ಮನಃ ಪ್ರಾಣ ಜ್ಞಾನ ಭಾವ ಒಮ್ಮುಖಮಂ ಮಾಡಿ, ಸದ್ಗುರುಕಾರುಣ್ಯಮಂ ಪಡೆದು, ಲಿಂಗವೇ ಪತಿ, ಗುರುವೆ ತಂದೆ, ಜಂಗಮವೇ ಲಿಂಗವೆಂದರಿದು, ದ್ರವ್ಯವೆಂಬುದು ಭೂತರೂಪು, ಪ್ರಸಾದವೆಂಬುದು ಲಿಂಗರೂಪವೆಂದು ತಿಳಿದು, ಲಿಂಗದ ಪಾದೋದಕವೇ ಲಿಂಗಕ್ಕೆ ಮಜ್ಜನವಾಗಿ ಲಿಂಗದ ಪ್ರಸಾದವೇ ಲಿಂಗಕ್ಕೆ ಆರೋಗಣೆಯಾಗಿ ಲಿಂಗದಿಂದ ನೋಡುತ್ತ ಕೇಳುತ್ತ ರುಚಿಸುತ್ತ ಮುಟ್ಟುತ್ತ ವಾಸಿಸುತ್ತ ಕೊಡುತ್ತ ಆನಂದಿಸುತ್ತ ಅಹಂ ಮಮತೆಗೆಟ್ಟು ಸಂದು ಸಂಶಯವರಿತು ಹಿಂದು ಮುಂದ ಹಾರದಿಪ್ಪುದೆ ವೀರಶೈವ. ಅದೆಂತೆಂದಡೆ: ಪಿತಾ ಗುರುಃ ಪತಿರ್ಲಿಂಗಂ, ಸ್ವಲಿಂಗಂ ಜಂಗಮಪ್ರಭುಃ ತಸ್ಮಾತ್ಸರ್ವಪ್ರಯತ್ನೇನ ತಸ್ಯೈವಾರಾಧನಂ ಕ ರು ಸ ಏವ ಸ್ಯಾತ್ಪ್ರಸಾದಸ್ತೇ ಭಕ್ತಿವಿತ್ತಸಮರ್ಪಿತಃ ತತ್ಪ್ರಸಾದಸ್ತು ಭೋಕ್ತವ್ಯಃ ಭಕ್ತೋವಿಗತಕಲ್ಮಷಃ ಎಂದುದಾಗಿ, ಇಂತಲ್ಲದಿರ್ದುದೆ ಇತರ ಶೈವ ಕಾಣಾ, ಸೌರಾಷ್ಟ್ರ ಸೋಮೇಶ್ವರಾ.
--------------
ಆದಯ್ಯ
ಅಗ್ನಿಯಾಧಾರದಲ್ಲಿ ಕಬ್ಬುನ ನೀರುಂಬುದಯ್ಯಾ, ಭೂಮಿಯಾಧಾರದಲ್ಲಿ ವೃಕ್ಷ ನೀರುಂಬುದಯ್ಯಾ, ಜಂಗಮವಾಪ್ಯಾಯನವಾದಡೆ ಲಿಂಗ ಸಂತ್ಟುಯಹುದಯ್ಯಾ. ವೃಕ್ಷಸ್ಯ ವದನಂ ಭೂಮಿಃ ಸ್ಥಾವರಸ್ಯ ಚ ಜಂಗಮಃ ಅಹಂ ತುಷ್ಟೋsಡಿಸ್ಮ್ಯುಮಾದೇವಿ ಉಭಯೋರ್ಲಿಂಗಜಂಗಮಾತ್ ಇದು ಕಾರಣ ಕೂಡಲಸಂಗಮದೇವರಲ್ಲಿ ಜಂಗಮವಾಪ್ಯಾಯನವಾದಡೆ ಲಿಂಗಸಂತ್ಟು. 197
--------------
ಬಸವಣ್ಣ
ಹೋಗುವ ಬನ್ನಿರಯ್ಯ ; ಶಕ್ತಿಪಾತವಾದ ಶಿವಯೋಗೀಶ್ವರರು ಶಿವಭಕ್ತರು ಹೋಗುವ ಬನ್ನಿರಯ್ಯ. ಸುಕ್ಷೇತ್ರದಲ್ಲಿರ್ಪ ಮಹಲಿಂಗದರುಶನಕೆ ಹೋಗುವ ಬನ್ನಿರಯ್ಯ. ಜೀವಸಂಚಾರವೆಂಬ ಪ್ರಾಕೃತವೆನಿಸುವ ಅಧೋಕುಂಡಲಿಸ್ವರೂಪಮಾದ ಅಹಂ ಎಂಬ ಹೆಬ್ಬಟ್ಟೆಯಂ ಬಿಟ್ಟು, ಸಜ್ಜೀವವೆಂಬ ವೈಕೃತವೆನಿಸುವ ಮಧ್ಯಕುಂಡಲಿಸ್ವರೂಪಮಾದ ಸೋಹಮೆಂಬ ಸಣ್ಣಬಟ್ಟೆಯ ಹಿಡಿದು ಹೋಗುವ ಬನ್ನಿರಯ್ಯ ಮಹಲಿಂಗದರುಶನಕೆ. ಕೇವಲ ಶಿವಯೋಗವೆಂಬ ಏಕವೆನಿಸುವ ಊಧ್ರ್ವಕುಂಡಲಿಸ್ವರೂಪಮಾದ ಓಂ ಎಂಬ ನುಸುಳುಗಂಡಿಯಂ ನುಸಿದು ಹೋಗುವ ಬನ್ನಿರಯ್ಯ ಮಹಲಿಂಗದರುಶನಕೆ. ದ್ವಯಮಂಡಲವ ಭ್ರೂಮಧ್ಯವೆಂಬ ಮಹಾಮೇರುವ ಮಧ್ಯದಲ್ಲಿ ಏಕಮಂಡಲಾಕಾರ ಮಾಡಿ, ಆ ಕಮಲಮಧ್ಯದಲ್ಲಿ ಮೂರ್ತಿಗೊಂಡಿಪ್ಪ ಮಹಾಲಿಂಗದಲ್ಲಿ ಜೀವಪರಮರಿಬ್ಬರನೇಕಾರ್ಥವಂ ಮಾಡಿ, ಶಾಂಭವೀಮುದ್ರಾನುಸಂಧಾನದಿಂದೆ ಅಧೋಮುಖಕಮಲವೆಲ್ಲ ಊಧ್ರ್ವಮುಖವಾಗಿ, ಆ ಮಹಾಲಿಂಗವ ನೋಡುತಿರಲು ಆ ಕಮಲಸೂತ್ರವಿಡಿದಿಹ ಷಡಾಧಾರಚಕ್ರಂಗಳ ಊಧ್ರ್ವಮುಖವಾಗಿ ಆ ಕಮಲದಲ್ಲಿ ಅಡಗಿ, ಆ ಕಮಲದ ಎಸಳು ಐವತ್ತೆರಡಾಗಿ ಎಸೆವುತಿರ್ಪವು. ಪರಿಪೂರ್ಣ ಜ್ಞಾನದೃಷ್ಟಿಯಿಂ ಆ ಮಹಾಲಿಂಗಮಂ ನಿರೀಕ್ಷಿಸಲು ಆ ಕಮಲದಲ್ಲಿ ಮಹಾಲಿಂಗಸ್ವರೂಪಮಾಗಿ ಸಕಲ ಕರಣೇಂದ್ರಿಯಂಗಳು ಆ ಮಹಾಲಿಂಗದಲ್ಲಿಯೆ ಅಡಗಿ, ಸುನಾದಬ್ರಹ್ಮವೆಂಬ ಇಷ್ಟವೆ ಮಹಾಲಿಂಗವೆಂದರಿದು ನೋಡುತ್ತಿರಲು, ಜ್ಯೋತಿರ್ಮಯವಾಗಿ ಕಾಣಿಸುತಿಪ್ಪುದು. ಅದೇ ಜೀವಪರಮರೈಕ್ಯವು ; ಅದೇ ಲಿಂಗಾಂಗಸಂಬಂಧವು. ಆ ಮಹಾಲಿಂಗದ ಕಿರಣಂಗಳೆ ಕರಣಂಗಳಾಗಿ ಆ ಕಮಲವು ಅಧೋಮುಖವಾಗಿ ಆ ಮಹಾಲಿಂಗವು ತನ್ನ ನಿಜನಿವಾಸವೆನಿಸುವ `ಅಂತರೇಣ ತಾಲುಕೇ' ಎಂಬ ಶ್ರುತಿ ಪ್ರಮಾಣದಿ ತಾಲುಮೂಲದ್ವಾದಶಾಂತವೆಂಬ ಬ್ರಹ್ಮರಂಧ್ರದ ಮಧ್ಯದಲ್ಲಿ ಪ್ರಕಾಶಿಸುತ್ತಿರ್ಪುದೊಂದು ಶಿವಚಕ್ರವು. ಆ ಶಿವಚಕ್ರವೆ ಶಿವಲೋಕವೆನಿಸುವುದು. ಆ ಶಿವಲೋಕವೆ ಶಾಂಭವಲೋಕವೆನಿಸುವುದು. ಶಾಂಭವಲೋಕವೆ ಶಾಂಭವಚಕ್ರವೆನಿಸುವುದು. ಆ ಶಾಂಭವಚಕ್ರದಲ್ಲಿ ಆಧಾರವಾದಿ ಪಶ್ಚಿಮಾಂತ್ಯವಾದ ನವಚಕ್ರಂಗಳು ಸಂಬಂಧವಾಗಿರುತಿರ್ಪವು. ಅದು ಹೇಗೆಂದೊಡೆ ; ಆ ಶಾಂಭವಚಕ್ರಮಧ್ಯದ ಚತುರ್ದಳಾಗ್ರದಲ್ಲಿ ಅಗ್ನಿಮಂಡಲದಲ್ಲಿ ಅಷ್ಟದಳ ಇರ್ಪುವು. ಆ ಅಷ್ಟದಳ ಚತುರ್ದಳದಲ್ಲಿ `ವಶಷಸ' ಎಂಬ ನಾಲ್ಕಕ್ಷರಯುಕ್ತವಾದ ಆಧಾರಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿ `ನ' ಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ತಾರಕಾಕೃತಿಯಲ್ಲಿ ಸಂಬಂಧವಾಗಿರ್ಪುದು. ಆ ಅಗ್ನಿಮಂಡಲದ ಚತುರ್ದಳದ ಈಶಾನ್ಯ ದಳದಲ್ಲಿ `ಬ ಭ ಮ ಯ ರ ಲ' ಎಂಬ ಆರಕ್ಷರಯುಕ್ತವಾದ ಸ್ವಾದ್ಥಿಷ್ಠಾನಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ `ಮ'ಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ದಂಡಕಾಕೃತಿಯಲ್ಲಿ ಸಂಬಂಧವಾಗಿರ್ಪುದು. ಆ ಅಷ್ಟದಳಾಗ್ರದಲ್ಲಿ ಸೂರ್ಯಮಂಡಲವಿರ್ಪುದು. ಆ ಸೂರ್ಯಮಂಡಲದಲ್ಲಿ `ಡಢಣ ತಥದಧನ ಪಫ' ಎಂಬ ದಶಾಕ್ಷರಯುಕ್ತವಾದ ಮಣಿಪೂರಕಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ `ಶಿ'ಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ಕುಂಡಲಾಕೃತಿಯಲ್ಲಿ ಸಂಬಂಧವಾಗಿರ್ಪುದು. `ಕಖಗಘಙ ಚಛಜಝಞ ಟಠ' ಎಂಬ ದ್ವಾದಶಾಕ್ಷರಯುಕ್ತವಾದ ಅನಾಹತಚಕ್ರವು ಸೂರ್ಯಮಂಡಲದಲ್ಲಿ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ `ವ'ಕಾರವು ಆ ಮಹಾಲಿಂಗಸ್ವರೂಪವಾದಪ್ರಣವದ ಅರ್ಧಚಂದ್ರಾಕೃತಿಯಲ್ಲಿ ಸಂಬಂಧವಾಗಿರ್ಪುದು. ಆ ಅಷ್ಟದಳದಮಧ್ಯದಲ್ಲಿ ಚಂದ್ರಮಂಡಲವಿರ್ಪುದು. ಆ ಚಂದ್ರಮಂಡಲದಲ್ಲಿ- `ಅ ಆ ಇ ಈ ಉ ಊ ಋ Iೂ ಲೃ ಲೂೃ ಏ ಐ ಓ ಔ ಅಂ ಅಃ' ಎಂಬ ಷೋಡಶಾಕ್ಷರಯುಕ್ತವಾದ ವಿಶುದ್ಧಿಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ `ಯ'ಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ದರ್ಪಣಾಕೃತಿಯಲ್ಲಿ ಸಂಬಂಧವಾಗಿರ್ಪುದು. ಆ ಮಹಾಲಿಂಗಕ್ಕೆ ಪೀಠಮಾಗಿರ್ದ ಬಿಂದುಯುಕ್ತಮಾದ ಪ್ರಣವವು ಆ ಮಹಾಲಿಂಗದ ಮುಂದಿರ್ದ `ಹಂ ಳಂ ಹಂ ಕ್ಷಂ' ಎಂಬ ಚುತವರ್ಣಾಕ್ಷರಯುಕ್ತವಾದ ಆಜ್ಞಾಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ ಓಂಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ಜ್ಯೋತಿರಾಕೃತಿಯಲ್ಲಿ ಸಂಬಂಧವಾಗಿರ್ಪುದು. ಚತುರ್ದಳವು ತ್ರಿದಳದಲ್ಲಿ ಕ್ಷ ಉ ಸ ಎಂಬ ತ್ರಯಕ್ಷರಯುಕ್ತವಾದ ಶಿಖಾಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿ `ಕ್ಷ' ಕಾರವು ಆ ಮಹಾಲಿಂಗಸ್ವರೂಪವಾದ ಕುಂಡಲಾಕೃತಿ ಅರ್ಧಚಂದ್ರಾಕೃತಿಗಳಲ್ಲಿ ಸಂಬಂಧವಾಗಿರ್ಪುದು. ಆ ಚತುರ್ದಳದ ಮಧ್ಯದಲ್ಲಿ ಬಟುವೆ ಏಕದಳವೆನಿಸಿಕೊಂಬುದು. ಆ ಏಕದಳದಲ್ಲಿ ಪಶ್ಚಿಮಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ `ಹ್ರಾಂ'ಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ದರ್ಪಣಾಕೃತಿ ಜ್ಯೋತಿರಾಕೃತಿಗಳಲ್ಲಿ ಸಂಬಂಧವಾಗಿರ್ಪುದು. ಹೀಂಗೆ ಅಷ್ಟಚಕ್ರಂಗಳ ತನ್ನೊಳಗೆ ಗಬ್ರ್ಥೀಕರಿಸಿಕೊಂಡು ಬೆಳಗುತ್ತಿರ್ಪುದೊಂದು ಬ್ರಹ್ಮರಂಧ್ರಚಕ್ರವು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ ಹ್ರೀಂ ಕಾರಗಳು. ಆ ಹರದನಹಳ್ಳಿಯ ಪ್ರಭುಲಿಂಗಗುರುಸ್ವಾಮಿಯ ಶಿಷ್ಯರು ನಿಜಾನಂದ ಗುರುಚೆನ್ನಯ್ಯನವರು. ಆ ನಿಜಾನಂದ ಗುರುವಿನ [ಶಿಷ್ಯರು] ಗುರುಸಿದ್ಧವೀರೇಶ್ವರದೇವರು. ಆ ಸಿದ್ಧವೀರೇಶ್ವರದೇವರ ಕರಕಮಲದಲ್ಲಿ ಉದಯವಾದ ಬಾಲಸಂಗಯ್ಯನು ನಾನು. ಆ ನಿರಂಜನ ಗುರುವೆ ತಮ್ಮ ಕೃಪೆಯಿಂದ ತಮ್ಮಂತರಂಗದಲ್ಲಿರ್ದ ಅತಿರಹಸ್ಯವಾದ ಶಾಂಭವಶಿವಯೋಗವೆಂಬ ಮಹಾಜ್ಞಾನೋಪದೇಶಮಂ ಹರಗುರು ವಾಕ್ಯಪ್ರಮಾಣಿನಿಂ ಎನ್ನ ಹೃದಯಕಮಲದಲ್ಲಿ ಕರತಳಾಮಳಕದಂತೆ ತೋರಿ, ಆ ಹೃದಯಕಮಲಕರ್ಣಿಕಾಮಧ್ಯದಲ್ಲಿರ್ಪ ನಿರಂಜನಗುರುವೆ ನಿರಂಜನಮಹಾಲಿಂಗವೆಂದರಿದು ಆ ನಿರಂಜನಮಹಾಲಿಂಗವೆ ಕರಸ್ಥಲದಲ್ಲಿರ್ಪ ಸುನಾದಬ್ರಹ್ಮವೆಂಬ ಇಷ್ಟಲಿಂಗವೆಂದರಿದು, ಆ ಕರಸ್ಥಲದಲ್ಲಿರ್ಪ ಇಷ್ಟಲಿಂಗವೆ ತಾನೆಂದರಿದು ``ಮಂತ್ರಮಧ್ಯೇ ಭವೇತ್‍ಲಿಂಗಂ ಲಿಂಗಮಧ್ಯೇ ಭವೇತ್‍ಮಂತ್ರಂ | ಮಂತ್ರಲಿಂಗದ್ವಯಾದೇಕಂ ಇಷ್ಟಲಿಂಗಂತು ಶಾಂಕರಿ ||' ಎಂದುದಾಗಿ, ಎನ್ನ ಹೃತ್ಕಮಲಕರ್ಣಿಕಾಮಧ್ಯದಲ್ಲಿ ಶಾಂಭವೀಮುದ್ರಾನುಸಂಧಾನದಿಂದ ಆ ಲಿಂಗವೆ ಮಂತ್ರ, ಮಂತ್ರವೆ ಲಿಂಗವೆಂದರಿದು ಓಂ ಓಂ ಎಂದು ಶಿವಸಮಾದ್ಥಿಯ ಜಪಮಂ ಜಪಿಸುತ್ತ ಜ್ಯೋತಿರ್ಲಿಂಗಮಂ ಕೇಳುತ, ಜ್ಯೋತಿರ್ಲಿಂಗದೊಳು ಮುಳುಗಾಡುತ್ತಿರ್ದೆನಯ್ಯಾ ಬಸವಣ್ಣಪ್ರಿಯ ಚೆನ್ನಸಂಗಯ್ಯನೆಂಬ ಗುರುವಿನ ಕೃಪೆಯಿಂದ, ನಿಮ್ಮ ಶರಣರ ಪಡುಗ ಪಾದರಕ್ಷೆಯ ಹಿಡಿವುದಕ್ಕೆ ಯೋಗ್ಯನಾದೆನಯ್ಯ ನಿಮ್ಮ ಕೃಪೆಯಿಂದ.
--------------
ಭಿಕ್ಷದ ಸಂಗಯ್ಯ
ಮರಹು ಅರಿವಿನಲ್ಲಡಗಿ, ಅರಿವು ಮರಹ ನುಂಗಿ ತೆರಹಿಲ್ಲದಿರ್ದೆನೆಂಬ ಅಹಂ ಇದೇನೊರಿ ಬ್ರಹ್ಮವನೊಳಕೊಂಡ ಬ್ರಹ್ಮವು ತಾನಾಗಿ ಮತ್ತೆ ಬ್ರಹ್ಮದ ನುಡಿ ಇದೇನೊರಿ ಆದಿಶೂನ್ಯ ಮಧ್ಯಶೂನ್ಯ ಅಂತ್ಯಶೂನ್ಯ ಉಧ್ರ್ವಶೂನ್ಯದಿಂದತ್ತತ್ತ ನಿಂದ [ಘನದ]ನಿಲವ ಕಾಬರಾರೊರಿ ಇದು ಕಾರಣ-ಕೂಡಲಚೆನ್ನಸಂಗನ [ಸಹಜದ] ನಿಲವು ಬಯಲು ಚಿತ್ರಿಸಿದ ರೂಪ, ಬಯಲರಿಯದಂತೆ!
--------------
ಚನ್ನಬಸವಣ್ಣ
ಜಗದ ಕರ್ತ ಜಗದ ಸ್ಥಿತಿ-ಗತಿಯ ನಡೆಸುವ ಪರಿಯನು ಆವಂಗೆ ಆವಂಗೆಯೂ ಅರಿಯಬಾರದು. ಅಕಟಕಟಾ ದೇವದಾನವ ಮಾನವರೆಲ್ಲ ಅಹಂ ಎಂದು ಅಹಂಕಾರದಿ ಕೆಟ್ಟರಲ್ಲ. ಆ ಮಹಾಕರ್ತನು ತನ್ನ ಶಕ್ತಿಯ ವಿನೋದಕ್ಕೆ ರಚಿಸಿದ ರಚನೆ: ಮೂವರು ಪ್ರಧಾನರು, ಒಂಬತ್ತು ಪ್ರಜೆ ಪಸಾಯಿತರು, ಪದಿನಾಲ್ಕು ನಿಯೋಗಿಗಳು, ಇಪ್ಪತ್ತೇಳು ಅನುಚರರು, ಅಷ್ಟತನುಗಳಿಂದಾದ ಜಗಸ್ಥಿತಿಯ ನಡೆಸುವರು. ಆ ಮಹಾಕರ್ತನು ಕಟ್ಟಿದ ಕಟ್ಟಳೆಯಲು, ಆಯುಷ್ಯ ನಿಮಿಷ ಮಾತ್ರ ಹೆಚ್ಚಿಸ ಬಾರದು, ಕುಂದಿಸಬಾರದು ನೋಡಾ. ಭಾಷೆಯಲಿ ಅಣು ಮಾತ್ರ ಹೆಚ್ಚಿಸಬಾರದು, ಕುಂದಿಸಬಾರದು ನೋಡಾ. ಇದನಾವಂಗೆಯೂ ಅರಿಯಬಾರದು. ಇದ ಬಲ್ಲರೆ ಎಮ್ಮ ಶರಣರೆ ಬಲ್ಲರು. ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಕೂತಾಗ ಭಕ್ತ ಮುನಿದಾಗ ಮಾನವನಾದ ಪಾತಕರ ನುಡಿಯ ಕೇಳಲಾಗದು. ಅಂಥ ಪಾತಕರ ಉಲುಹೆಂಬುದು, ಉಲಿವ ಕಬ್ಬಕ್ಕಿಯ ಉಲುಹಿನಂತೆ. ಅದನು ಮಹಂತರು ಕೇಳಲಾಗದು. ಅದಕ್ಕದು ಸ್ವಭಾವವೆಂಬುದ ಬಲ್ಲರಾಗಿ, ಮತಿಗೆಟ್ಟು ನುಡಿವ ಮತ್ತರಹ ಮತ್ರ್ಯರ ನುಡಿಯ ಗಡಣೆ, ಭ್ರಾಂತಿವಿಡಿದ ಭ್ರಮಿತರಿಗೆ ಯೋಗ್ಯವಲ್ಲದೆ, ಸಜ್ಜನ ಸಾತ್ವಿಕ ಜ್ಞಾನವೇದ್ಯರಹ ಸದ್ಭಕ್ತರು ಮೆಚ್ಚವರೆ ? ಅಸತ್ಯವೆ ರೂಪಾಗಿಪ್ಪ ಶೂನ್ಯವಾದಿಗಳೆತ್ತಲೂ ಸಲ್ಲರಾಗಿ ಅವರುಗಳು ಪ್ರೇತಗಾಮಿಗಳು. ಅಮೇಧ್ಯ ಕೂಪದಲ್ಲಿ ಉತ್ಪನ್ನವಾದ ಕ್ರಿಮಿಗಳಂತಪ್ಪ ಜೀವಿಗಳು ತಾವಾರೆಂದರಿಯರು. ಇಂದು ನಿಂದ ಗತಿಯ ತಿಳಿಯರು, ಮುಂದಣ ಗತಿಯನೆಂತೂ ಎಯ್ದಲರಿಯರು. ಆತ್ಮನು ಶ್ವೇತ ಪೀತ ಹರಿತ ಕಪೋತ ಮಾಂಡಿಷ್ಟ ಕೃಷ್ಣರೆಂಬ ಷಡ್ವರ್ಣದೊಳಗಾವ ವರ್ಣವೆಂದೂ ವಿಚಾರಿಸಲರಿಯರಾಗಿ, ಭ್ರಾಂತುವಿಡಿದು ಆತ್ಮೋಹಮೆಂದು ಅಹಂಕರಿಸಿ, ಅಜ್ಞಾನ ತಲೆಗೇರಿ, ಮತ್ತತನದಿಂದಜಾತ ಶಿವಶರಣರ ದೂಷಿಸಿ, ಮಿಥ್ಯವಾದದಿಂದ ನುಡಿವರು ತಾವೆ ಘನವೆಂದು, ಬಯಲಬೊಮ್ಮದ ಹಮ್ಮಿನ ನೆಮ್ಮುಗೆವಿಡಿದು, ಸಹಜ ಸಮಾಧಾನ ಶಿವೈಕ್ಯರ ಹಳಿದು ನುಡಿವರು. ಆದಿಯಲ್ಲಿ ಅಹಂ ಬ್ರಹ್ಮವೆಂದು ಬ್ರಹ್ಮನೆ ವಿಧಿಯಾದನು. ಹರಗಣಂಗಳೊಳಗೆ ಅಗ್ರಗಣ್ಯ ಗಣೇಶ್ವರನಹ ನಂದಿಕೇಶ್ವರನ ಉದಾಸೀನಂ ಮಾಡಿ, ಆ ನಂದಿಕೇರ್ಶವರನ ಶಾಪದಿಂದ ಸನುತ್ಕುಮಾರನೆ ವಿಧಿಯಾದನು. ಕರ್ಮವೆ ಅಧಿಕವೆಂದು ಕೆಮ್ಮನೆ ಕೆಟ್ಟ ಹೆಮ್ಮೆಯಲ್ಲಿ, ದ್ವಿಜ ಮುನಿಗಳ ನೆರಹಿ ಕ್ರತುವ ಮಾಡಿ, ಆ ದೇವ ಮುನಿಗಳೊಳಗಾಗಿ, ದಕ್ಷಂಗೆ ಬಂದ ಅಪಾಯವನರಿದು ಮರೆದರಲ್ಲಾ. ಕುಬೇರನಿಂದಧಿಕವಹ ಧನ, ದೇವೇಂದ್ರನಿಂದಧಿಕವಹ ಐಶ್ವರ್ಯ, ಸೂರ್ಯನಿಂದಧಿಕವಹ ತೇಜಸ್ಸು, ಗಜ ಪಟೌಳಿ ಸೀತಾಂಗನೆಗತ್ಯಧಿಕವಹ ರೂಪು ಲಾವಣ್ಯ ಸೌಂದರ್ಯವನುಳ್ಳ ಸ್ತ್ರೀಯರುಂಟು. ಕೋಟಿವಿದ್ಯದಲ್ಲಿ ನೋಡುವಡೆ ಸಹಸ್ರವೇದಿಯೆನಿಸುವ ರಾವಣನು ಪಾರದ್ವಾರಕಿಚ್ಛೈಸಿ ಪರವಧುವಿನ ದೆಸೆಯಿಂದಲೇನಾದನರಿಯರೆ ! ತನು ಕೊಬ್ಬಿನ ಮನ, ಮನ ವಿಕಾರದ ಇಂದ್ರಿಯ ವಿಷಯಂಗಳ ಅಂದವಿಡಿದ ವಿಕಳತೆಯಲ್ಲಿ ನುಡಿವ ಸಟೆಗರ ಕಾಯಲರಿವವೆ ? ನಿಮ್ಮಯ ಮನ ಸನ್ನಿಧಿಯಲ್ಲಿ, ಇಂತಿವೆಲ್ಲವ ಕಂಡೂ ಕೇಳಿಯೂ ಅರಿಯರು. ಹರನ ಸದ್ಭಕ್ತರ ಕೂಡೆ ವಿರೋಧಿಸಿ, ನರಕವನು ಮುಂದೆ ಅನುಭವಿಸಿ, ಇಂದು ಅಪಖ್ಯಾತಿಗೊಳಗಾಗಿ ಕೆಟ್ಟುಹೋಗಬೇಡ. ಅತ್ಯಧಿಕ ಶಿವನೆ ಸತ್ಸದಾಚಾರವಿಡಿದು, ನಿತ್ಯಪದವ ಪಡೆಯಿರೆ ಘಾಸಿ ಮಾಡುವನು ನಿಮ್ಮ ಸೋಜಿಗ. ಸದಾಶಿವ ಬಲ್ಲಿದನೆನ್ನ ದೇವ ಮಹಾಲಿಂಗ ಕಲ್ಲೇಶ್ವರನು ತನ್ನ ಭಕ್ತರೆ ಕೆಡೆನುಡಿದವರ ಬಿಡದೆ ದಂಡಿಸುವನು.
--------------
ಹಾವಿನಹಾಳ ಕಲ್ಲಯ್ಯ
ಕಾಷ*ದಲ್ಲಿ ಅಗ್ನಿ ಉಂಟೆಂದಡೆ, ಆ ಕಾಷ*ದ ರೂಪ ಸುಡಲರಿಯದು ನೋಡಾ ! ದೇಹಮಧ್ಯದಲ್ಲಿ ಪರವಸ್ತು ಉಂಟೆಂದಡೆ, ಹರಿಯದು ನೋಡಾ ಆ ದೇಹದ ಜಡಭಾವ ! ಅದೆಂತೆಂದೊಡೆ : ಕಾಷ*ದ ಮಧ್ಯದಲ್ಲಿ ಅಡಗಿರ್ದ ಮಂದಾಗ್ನಿ ಮಥನದಿಂದೆ ಬಹಿಷ್ಕರಿಸಿ ಆ ಕಾಷ*ವ ಸುಡುವಂತೆ, ದೇಹದ ಮಧ್ಯದಲ್ಲಿ ಅಡಗಿರ್ದ ಪರವಸ್ತುವನು ಶ್ರೀಗುರುಸ್ವಾಮಿ ತನ್ನ ಕ್ರಿಯಾಶಕ್ತಿಯ ಮಥನದಿಂದೆ ಬಹಿಷ್ಕರಿಸಿ ಬಹಿರಂಗದ ಮೇಲೆ ಇಷ್ಟಲಿಂಗವಾಗಿ ಧರಿಸಲು, ಆ ಲಿಂಗದ ಸತ್‍ಕ್ರಿಯಾ ಪೂಜೆಯಿಂದೆ ಸ್ಥೂಲಾಂಗದ ಕಾಷ*ಗುಣಧರ್ಮಂಗಳೆಲ್ಲ ನಷ್ಟವಾಗಿ ಆ ಲಿಂಗದ ಚಿತ್ಕಳೆಯು ಸರ್ವಾಂಗಕ್ಕೆ ವೇಧಿಸಿ ಅಂತರಂಗ ಬಹಿರಂಗವೊಂದಾಗಿ ಆತ್ಮನ ಅಹಂಮಮತೆ ಕೆಟ್ಟು, ಶಿಖಿಕರ್ಪುರ ಸಂಯೋಗದಂತೆ ಪರತತ್ವವನೊಡಗೂಡಿದ ಮಹಾತ್ಮನ ಕಾಯ ನಿರವಯಲಪ್ಪುದಲ್ಲದೆ ಬರಿಯ ಒಣ ವಾಗದ್ವೈತದಿಂದೆ ಅಹಂ ಬ್ರಹ್ಮವೆಂದು ನುಡಿದು ದೇಹ ಪ್ರಾಣಂಗಳ ಪ್ರಕೃತಿವರ್ತನೆಯಲ್ಲಿ ನಡೆದು ನಿತ್ಯರಾದೇವೆಂಬುವರೆಲ್ಲ ಭವಾಂಬುಧಿಯಲ್ಲಿ ಬಿದ್ದು ಮುಳುಗುತ್ತೇಳುತ್ತ ತಡಿಯ ಸೇರಲರಿಯದೆ ಕೆಟ್ಟುಹೋದರು ನೋಡಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ನೆನೆವೆನಯ್ಯಾ ಬಸವಣ್ಣ, ನಿಮ್ಮ ಚರಣವೆನ್ನ ಮನದಲ್ಲಿ ಸಾಹಿತ್ಯವಹನ್ನಕ್ಕ. ನೋಡುವೆನಯ್ಯಾ ಬಸವಣ್ಣ, ನಿಮ್ಮ ಮೂರ್ತಿ ಎನ್ನನವಗವಿಸುವನ್ನಕ್ಕ. ಪೂಜಿಸುವೆನಯ್ಯಾ ಬಸವಣ್ಣ, ನಿಮ್ಮ ಪ್ರಸಾದವೆನ್ನ ತನುವಹನ್ನಕ್ಕ. ನಿಮ್ಮ ಆಹ್ವಾನಿಸುವೆನಯ್ಯಾ ಬಸವಣ್ಣ, ಅನಿಮಿಷ ನಿಮಿಷ ನಿಮಿಷಗಳಿಲ್ಲವೆಂದೆನಿಸುವನ್ನಕ್ಕ. ನಿಮ್ಮ ಧ್ಯಾನಿಸುವೆನಯ್ಯಾ ಬಸವಣ್ಣ, ಜ್ಞಾನಜ್ಞಾನವಿಲ್ಲವೆನಿಸುವನ್ನಕ್ಕ. ನಿಮ್ಮ ಮೂರ್ತಿಗೊಳಿಸುವೆನಯ್ಯಾ ಬಸವಣ್ಣ, ಅಹಂ ಸೋಹಂ ಎಂಬ ಶಬ್ದವುಳ್ಳನ್ನಕ್ಕ. ಬಸವಣ್ಣಾ ಎಂದು ಹಾಡುವೆನಯ್ಯ,
--------------
ಮಡಿವಾಳ ಮಾಚಿದೇವ
ವಾಚಾತೀತವೂ ಮನೋತೀತವೂ ಭಾವಾತೀತವೂ ಆದ ಮಹಾಲಿಂಗವು ಸತ್ಯಜ್ಞಾನಾನಂದ ಸ್ವರೂಪಮಾದಲ್ಲಿ, ಸತ್ಯವೇ ಭಕ್ತ, ಜ್ಞಾನವೇ ಗುರು, ಆನಂದವೇ ಜಂಗಮಸ್ವರೂಪವಾಗಿ ನಟಿಸುತಿರ್ಪ ಮಹಾಲಿಂಗವು ತನ್ನ ಲೀಲೆಗೋಸುಗ ಆನಂದವನ್ನು ಮರೆವಿಡಿದು, ಅದರಲ್ಲಿಯೇ ದುಃಖಸ್ವರೂಪಮಾಗಿ ಮಹಾರುದ್ರನಂ ಸೃಜಿಸಿ, ಜ್ಞಾನಮಂ ಮರೆವಿಡಿದು, ಅದರಲ್ಲಿಯೇ ಅಜ್ಞಾನವೆಂಬ ವಿಷ್ಣುವಂ ಕಲ್ಪಸಿ, ಸತ್ಯವಂ ಮರೆವಿಡಿದು, ಅದರಲ್ಲಿ ಮಿಥ್ಯೆಯೆಂಬ ಬ್ರಹ್ಮನು ಕಲ್ಪಿಸಲು, ಸರ್ಗಸ್ಥಿತಿ ಸಂಹಾರಂಗಳಿಗಿದೇ ಕಾರಣಮಾಗಿ, ಆ ರುದ್ರನಲ್ಲಿ ಜಾಗ್ರವೂ, ವಿಷ್ಣುವಿನಲ್ಲಿ ಸುಷುಪ್ತಿಯೂ, ಬ್ರಹ್ಮನಲ್ಲಿ ಸ್ವಪ್ನವೂ ಉತ್ಪನ್ನವಾಗಿ, ಆ ಜಾಗ್ರದಲ್ಲಿ ತೇಜವೂ, ಸುಷುಪ್ತಿಯಲ್ಲಿ ವಾಯ್ವಾಕಾಶಂಗಳೂ, ಸ್ವಪ್ನದಲ್ಲಿ ಪೃಥ್ವಿಯಪ್ಪುಗಳೂ ಆಗಿ, ಅವುಗಳೇ ಒಂದಕ್ಕೊಂದಾವರಣಂಗಳಾಗಿರ್ಪ ಈ ಪ್ರಪಂಚದಲ್ಲಿ ಕ್ರೀಡಾನಿಮಿತ್ತವಾಗಿ ಜೀವಪರಮರೂಪುಗಳಂ ಧರಿಸಿ, ಇದಕ್ಕೆ ಹೊರಗಾಗಿ, ತಾನು ಪರಮರೂಪದಲ್ಲಿ ನಿಂದು, ತನ್ನೊಳ್ತಾನೆ ಕಲ್ಪಿಸಿದ ಜೀವಕೋಟಿಗಳನ್ನು ಇದಕ್ಕೊಳಗುಮಾಡಲು, ಅವೆಲ್ಲವೂ ಒಂದಕ್ಕೊಂದು ಸುತ್ತಿಮುತ್ತಿ ಮಿಥ್ಯೆಯೇ ಸ್ಥೂಲಮಾಗಿ, ಅಜ್ಞಾನವೇ ಸೂಕ್ಷ್ಮವಾಗಿ, ದುಃಖವೇ ಕಾರಣಮಾಗಿ, ಜಾಗ್ರತ್ಸ್ವಪ್ನಸುಷುಪ್ತ್ಯವಸ್ಥೆಗಳನನುಭವಿಸುತ್ತಾ. ನಿಜವಂ ಮರತು ನಿಜಾವಸ್ಥೆಯಂ ತೊರೆದು, ತ್ರಿಮೂರ್ತಿಗಳ ಬಲೆಗೆ ಸಿಕ್ಕಿ ದಾಂಟಲಾರದೆ, ಕೋಟಲೆಗೊಳುತತಿಪ್ರ್ಮದಂ ನೋಡಿ ನೋಡಿ, ಆನಂದಿಸುತ್ತಿರ್ಪನೆಂತೆಂದೊಡೆ: ಮದ್ದಂ ಮೆಲುವಾತಂಗದೇ ಸಾಧಕಮಾಗಿ, ಆ ಲಹರಿಯೊಳಗೆ ಕೂಡಿ, ನಿಜಾವಸ್ಥೆಯಂ ತೊರೆದು, ತದವಸ್ಥೆಯೊಳು ಬದ್ಧನಾಗಿ, ಆ ಲಹರಿಯಳಿದಲ್ಲಿ ಮರಣವೇ ಕಾರಣಮಾಗಿ, ತಿರಿಗಿ ಶರೀರಮಂಪೊಂದಿ, ಅವಸ್ಥಾತ್ರಯಂಗಳನನುಭವಿಸುತ್ತಿಪ್ರ್ಮದಂ ನೋಡಿ, ಪರಮಾನಂದಿಸುತ್ತಿಪುನು. ಇಂತಪ್ಪ ಭ್ರಮೆಯಂ ಕಳೆದು, ತನ್ನ ನಿಜಸ್ವರೂಪಮಪ್ಪ ತೂರ್ಯಾವಸ್ಥೆಯಂ ಹೊಂದುವನೆಂದೊಡೆ, ಹೊಂದತೀರದೆ ಸ್ವಲ್ಪಕಾಲವೇ ಮಹಾತ್ಕಾಲಮಾಗಿ, ಪೃಥ್ವಿವ್ಯಪ್ತೇಜೋವಾಯ್ವಾಕಾಶಾದಿ ಪಂಚಭೂತಂಗಳು ದಾಂಟಲಾರದೆ, ಆ ಪಂಚಭೂತಗುಣಗಂಗಳಂ ಪಂಚೇಂದ್ರಿಯಮುಖಗಳಿಂದ ತನ್ನತಃಕರಣದಿಂ ಕೊಂಡುಂಡು, ಭಾವವಂ ಮುಟ್ಟಲೊಲ್ಲದೆ, ಪಂಚೇದ್ರಿಯಂಗಳಲ್ಲಿರ್ಪ ಬ್ರಹ್ಮನ, ಅಂತಃಕರಣದಲ್ಲಿರ್ಪ ವಿಷ್ಣುವಿನ, ಭಾವದಲ್ಲಿರ್ಪ ರುದ್ರನ ಕಾಟದಲ್ಲಿ ಕೋಟಲೆಗೊಳುತ್ತಿರ್ಪುದಂ ತಪ್ಪಿಸುವುದಕ್ಕುಪಾಯಮಂ ಕಾಣದಿರ್ಪ ಜೀವನಿಗೆ ತಾನೇ ದಯೆಯಿಂ ಗುರುರೂಪನಾಗಿ ಬಂದು, ತನ್ನ ನಿಜವನ್ನೇ ಇದಿರಿಟ್ಟು ತೋರಿದಲ್ಲಿ, ಆ ವಸ್ತುವಂ ನೋಡಿ ನೋಡಿ, ತನ್ನ ಅಂತರಂಗದಲ್ಲಿರ್ಪ ಅಜ್ಞಾನವು ಹರಿದು, ಅಲ್ಲೊಂದು ಸೂಕ್ಷ್ಮದ್ವಾರವು ಕಾಣಿಸಲಲ್ಲಿ ಪ್ರವೇಶಿಸಲೆಸದಿರ್ಪ ಅನೇಕ ದುರ್ಗುಣಗಳಿಗಂಜದೆ ಆತ್ಮಾನಮಾತ್ಮನಾವೇತ್ತಿ ಎಂಬ ಶ್ರುತಿವಚನದಿಂ ತನ್ನಿಂದುತ್ಪನ್ನಮಾದ ಪಂಚಭೂತಗಳಲ್ಲಿ ತಾನೇ ಕಾರಣಭೂತಮಾಗಿ ಕೂಡಲು, ಆ ಗುಣಂಗಳು ಆತ್ಮಸ್ವರೂಪಮಾಗಿ, ಆತ್ಮನಿಂದಲೇ ಉಧ್ಭವಿಸಿ, ಆತ್ಮನಿಗೆ ಸುಖವನ್ನೂ ವಾಯುರೂಪಮಾದ ಜೀವನಿಗೆ ದುಃಖವನ್ನೂ ಉಂಟುಮಾಡುತ್ತಿರ್ಪವೆಂತೆಂದೊಡೆ: ಅರಸಿನಲ್ಲಿ ಹುಟ್ಟಿದ ಗ್ರಹವು ಅರಸಿಂಗೆ ಸುಖಮಂ ಪರರಿಗೆ ದುಃಖಮಂ ಮಾಡುವಂದದಿ, ಆಧಿಯಲ್ಲಾಕಾಶಾತ್ಮಸಂಗದಿಂ ಜ್ಞಾನವು ಹುಟ್ಟಿ, ಅದು ಅಭೇದಮಾಗಿರ್ಪ ಆಕಾಶಾತ್ಮಂಗಳಲ್ಲಿ ಇದಾಕಾಶವಿದಾತ್ಮವೆಂಬ ಭೇದಮಂ ಪುಟ್ಟಿಸಿ, ಜೀವರ ಸೃಷ್ಟಿ ಸ್ಥಿತಿ ಸಂಹಾರಂಗಳಿಗೆ ಕಾರಣಮಾಯಿತ್ತು. ಉಳಿದ ನಾಲ್ಕು ಭೂತಂಗಳಲ್ಲಂತಃಕರಣಚತುಷ್ಟಯಂಗಳು ಹುಟ್ಟಿ, ಅವೇ ನಾಲ್ಕುಮುಖಂಗಳಾಗಿ, ಜ್ಞಾನವು ಮಧ್ಯಮುಖಮಾಗಿ, ತದ್ಬಲದಿಂ ಅಹಂ ಬ್ರಹ್ಮವೆಂದಹಂಕರಿಸುತ್ತಿರ್ಪ ಬ್ರಹ್ಮನಂ ನೋಡಿ, ಆತ್ಮರೂಪಮಾದ ಶಿವನು ಭಾವಹಸ್ತದಲ್ಲಿ ಅಂತಃಕರಣಮಧ್ಯದಲ್ಲಿರ್ಪ ಜ್ಞಾನವೆಂಬ ಬ್ರಹ್ಮಕಪಾಲವಂ ಪರಿಗ್ರಹಿಸಲು, ಉಳಿದ ನಾಲ್ಕು ಶಿರಸ್ಸುಗಳಿಂ ಸೃಷ್ಟಿಕರ್ತನಾದ ಬ್ರಹ್ಮನು ಸಂಹಾರರೂಪಮಾದ ಜ್ಞಾನಮುಖದಲ್ಲಿ ಸಕಲ ಪದಾರ್ಥಗಳನ್ನು ಪರಿಗ್ರಹಿಸುತ್ತಿರ್ಪನು. ಅಂತಪ್ಪ ಆತ್ಮರೂಪಮಾದ ಶಿವನೊಳಗೆ ಆಕಾಶಮೆಂತೈಕ್ಯಮಪ್ಪುದೆಂದೊಂಡೆ : ಆಕಾಶವೂ ವಾಯುರೂಪು. ಭಸ್ತ್ರಿಯಲ್ಲಿ ಪ್ರವೇಶಿಸಿರ್ಪ ವಾಯುವಿನಿಂದ ಆಕಾಶಮಧಿಕಮಾಗಲು. ವಾಯುವಡಗಲಾಕಾಶವೂ ಕೂಡ ಅಡಗುವಂದದಿ, ಅಂತಪ್ಪ ವಾಯುವೇ ಜೀವನು, ಆ ಜೀವನಿಗವಸಾನಸ್ಥಾನವೇ ಆತ್ಮನು, ಆ ಆತ್ಮನಲ್ಲಿ ಕೂಡಿ ತನ್ನ ಮುನ್ನಿನ ವಾಯುರೂಪಮಳಿದಲ್ಲಿ ಅದಕಿಂತ ಮೊದಲೇ ಆಕಾಶವಳಿವುತ್ತಿರ್ಪುದು. ಅಂತಪ್ಪ ಆತ್ಮಸ್ವರೂಪವೆಂತೆಂದೊಂಡೆ : ಆತ್ಮವಂ ವಿಚಾರಿಸಿ ಆತ್ಮಸ್ವರೂಪವನರಿಸಿದ ಜೀವನು ತಾನಾತ್ಮನಾಗುತ್ತಿರಲು ಆತ್ಮಸ್ವರೂಪಮಿತೆಂದು ಮರಳಿಯೋರ್ವರೊಳುಸುರುವುದೆಂತಯ್ಯಾ! ಸತ್ತವನು ಬಂದು ತನ್ನ ವೃತ್ತಾಂತವಂ ಹೇಳಬಲ್ಲನೆ? ಉರಿಯೊಳ್ಕೂಡಿದ ಕರ್ಪುರವು ಉರಿಯಪ್ಪುದಲ್ಲದೆ ಕರ್ಪುರವಪ್ಪುದೆ? ಅಂತಪ್ಪ ಅಭೇದಾನಂದ ಪರಮಾತ್ಮಸಂಗದೊಳೇಕಮಾಗಿರ್ಪಂತೆ ಮಾಡಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ತನು ನಷ್ಟವಾದಡೇನಯ್ಯಾ, ಮನನಷ್ಟವಾಗದನ್ನಕ್ಕ ? ವಾಕ್ಕು ನಷ್ಟವಾದಡೇನಯ್ಯಾ, ಬೇಕುಬೇಡೆಂಬುದಳಿಯದನ್ನಕ್ಕ ? ಅಂಗಸುಖ ನಷ್ಟವಾದಡೇನಯ್ಯಾ, ಕಂಗಳಪಟಲಹರಿಯದನ್ನಕ್ಕ ? ಮನ ಮುಗ್ಧವಾದಡೇನಯ್ಯಾ, ಅಹಂ ಎಂಬುದ ಬಿಡದನ್ನಕ್ಕ ? ಇವೆಲ್ಲರೊಳಗಿದ್ದು ವಲ್ಲಭನೆನಿಸಿಕೊಂಬವರ ನುಡಿಯ ಬಲ್ಲರು ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಜಾತಿ ಶೈವರು ಅಜಾತಿ ಶೈವರೆಂದು ಎರಡು ಪ್ರಕಾರವಾಗಿಹರಯ್ಯಾ. ಜಾತಿ ಶೈವರೆಂಬವರು ಶಿವಂಗೆ ಭೋಗಸ್ತ್ರೀಯರಯ್ಯಾ. ಅಜಾತಿ ಶೈವರೆಂಬವರು ಶಿವಂಗೆ ಕುಲಸ್ತ್ರೀಯರಯ್ಯಾ. ಜಾತಿ ಶೈವರೆಂಬವರು ಸರ್ವಭೋಗಂಗಳ ಬಯಸಿ ಮಾಡುವರಾಗಿ, ದ್ವಾರೇ ಯಸ್ಸ ಚ ಮಾತಂಗೋ ವಾಯುವೇಗ ತುರಂಗಮಃ | ಪೂರ್ಣೆಂದು ವದನಾ ನಾರೀ ಶಿವಪೂಜಾ ವಿಧೇಃ ಫಲಂಃ || ಎಂದುದಾಗಿ, ಇವು ಜಾತಿಶೈವರಿಗೆ ಕೊಟ್ಟ ಭೋಗಂಗಳಯ್ಯಾ. ಅಜಾತಿಶೈವರು ಗುರುಲಿಂಗಜಂಗಮಕ್ಕೆ ತನುಮನಧನವ ನಿವೇದಿಸಿ, ಸರ್ವಸೂತಕರಹಿತರಾಗಿಹರಯ್ಯಾ. ಅಹಂ ಮಾಹೇಶ್ವರ ಪ್ರಾಣೇ ಮಾಹೇಶ್ವರೋ ಮಮ ಪ್ರಾಣಃ | ತಥೈಕಂ ನಿಷ್ಕ್ರೀಯಂ ಭೂಯಾದನ್ಯಲ್ಲಿಂಗೈಕ್ಯಮೇವ ಚ || ಇದು ಕಾರಣ, ಸರ್ವೇಶ್ವರ ಚೆನ್ನಮಲ್ಲಿಕಾರ್ಜುನಯ್ಯನು ಭಕ್ತಿಕಾಯನೆಂಬೈಕ್ಯಪದವನು ಅಜಾತಿಶೈವರಿಗೆ ಕೊಡುವನಯ್ಯಾ.
--------------
ರೇಚದ ಬಂಕಣ್ಣ
ಅಹಂ ಬ್ರಹ್ಮವೆಂದೆಂಬ ಜ್ಞಾನಹೀನನಾದ ವಾಗದ್ವೆ ೈತಿಯಲ್ಲ. ಅಹಂ ಭಿನ್ನವೆಂದೆಂಬ ದ್ವೆ ೈತ ಪಶುಮತವಲ್ಲ. ಸ್ವರ್ಗ ಮತ್ರ್ಯ ಪಾತಾಳದೊಳಗೆ ಶರಣ ಲಿಂಗ ಮತ ಬೇರೆ. ಈ ಶರಣ ಲಿಂಗದ ನಿಲುಕಡೆಯನು ಪರಶಿವಜ್ಞಾನಿಗಳು ಬಲ್ಲರಲ್ಲದೆ ಪ್ರಪಂಚ ಜೀವಿಗಳೆಂದೂ ಅರಿಯರು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಹೂ ಮಿಡಿಯ ಹರಿದು ಒತ್ತಿ ಹಣ್ಣ ಮಾಡಿಹೆನೆಂದಡೆ ಹಣ್ಣಾಗಬಲ್ಲುದೆ ? ಪರಿಮಳವಿಲ್ಲದ ನನೆಯನರಳಿಸಿ ಮುಡಿದಹೆನೆಂದಡೆ ಸೌರಭ ಉಂಟೆ ? ಶಿವಶರಣರ ನಿಲವು ಕಾಂಬ ಕಾಲಕ್ಕೆ ಕಾಣಬಹುದಲ್ಲದೆ ಎಲ್ಲಾ ಹೊತ್ತು ಕಾಣಬಹುದೆ ? ಅಹ ಕಾಲಕ್ಕೆ ತಾನೆ ಅಪ್ಪುದು. ಗುಹೇಶ್ವರನ ಶರಣರ ನಿಲವ ಕಂಡ ಬಳಿಕ ಮರಹು, ಬೆಳಗ ಕಂಡ ಕತ್ತಲೆಯಂತೆ ನೋಡ ನೋಡ ಹರೆವುದು ನೋಡಾ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
ತಾನು ಸಾವ ಕನಸ ಕಂಡಡೆ ಎದ್ದು ಕುಳ್ಳಿರಿ ಎಂಬ ಲೋಕದ ನಾಣ್ನುಡಿ ದಿಟ ಲೇಸು. ಸಾಯಬಹುದೆ ಸತಿಯ ಬಿಟ್ಟು, ಸುತರ ಬಿಟ್ಟು, ಸಕಲಭೋಗಾಕ್ರೀಗಳಂ ಬಿಟ್ಟು? ಇನ್ನು ದಿಟ ದಿಟ ಕೃತಯುಗ ತ್ರೇತಾಯುಗ ದ್ವಾಪರಯುಗದಲ್ಲಿ ಹರಿಶ್ಚಂದ್ರ, ರಾಮ, ರಾವಣಾದಿಗಳು ಸತ್ತರು. ಕಲಿಯುಗದಲ್ಲಿ ಅನಂತರು ಸತ್ತರು. ನಿನ್ನ ಪಿತೃಪಿತಾಮಹರೂ ಸತ್ತರು. ನಿನ್ನ ಜೇಷ*ಕನಿಷ*ರುಗಳೂ ಸತ್ತರು ಕಾಣಾ. ಹೀಗೆ ಕಂಡು ಕೇಳಿಯೂ ಮರುಳು ಮಾನವಾ, ಸಾವು ದಿಟವೆಂದರಿ, ಸಂದೇಹ ಬೇಡ. ಸಾಯಲ್ಕೆ ಮುನ್ನ ಧನ ಕೆಡದ ಹಾಗೆ ಸತ್ಪಾತ್ರಕ್ಕೆ ಮಾಡಿ, ಮನ ಕೆಡದ ಹಾಗೆ ಶಿವನನ್ನೇ ಧ್ಯಾನಿಸಿ, ತನು ಕೆಡದ ಹಾಗೆ ಶಿವನನ್ನೇ ಪೂಜಿಸು. ಬಾಲಂ ವೃದ್ಧಂ ಮೃತಂ ದೃಷ್ಟ್ವಾ ಮೃತಂ ವಿಷ್ಣ್ವಾದಿದೈವತಂ ಅಹಂ ಮೃತೋ ನ ಸಂದೇಹೋ ಶೀಘ್ರಂ ತು ಶಿವಪೂಜನಂ ಎಂಬುದನರಿದು, ಮರೆಯಬೇಡ. ಹೆಣ್ಣ ನಚ್ಚಿ, ಅಶುಭವ ಮಚ್ಚಿ, ಮರೆಯಬೇಡ, ಅವಳು ನಿನ್ನ ನಂಬಳು. ನೀನು ತನು ಮನ ಧನವನಿತ್ತಡೆಯೂ ಪರಪುರುಷರ ನೆನೆವುದ ಮಾಣಳು. ಅದನು ನೀನೇ ಬಲ್ಲೆ. ಹೊನ್ನ ನಚ್ಚಿ ಕೆಡದಿರು ಸತಿಸುತದಾಯಾದ್ಯರಿಂದಂ ರಾಜಾದಿಗಳಿಂದಂ ಕೆಡುವುದು. ಅಲ್ಲಿ ನೀನು ಸುಯಿಧಾನದಿಂ ರಕ್ಷಿಸಲು ಧರ್ಮಹೀನನ ಸಾರೆ, ನಿಲ್ಲೆನೆಂದು ನೆಲದಲಡಗಿ ಹೋಗುತ್ತಲಿದೆ, ನೋಡ ನೋಡಲು, ಹೋಗದ ಮುನ್ನ ಅರಿವನೆ ಅರಿದು, ಮರೆವನೆ ಮರೆದು ಮಾಡಿರಯ್ಯಾ, ಶಿವಮಹೇಶ್ವರರಿಗೆ ತನು ಮನ ಧನವುಳ್ಳಲ್ಲಿ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.
--------------
ಉರಿಲಿಂಗಪೆದ್ದಿ
ಇನ್ನಷ್ಟು ... -->