ಅಥವಾ

ಒಟ್ಟು 6 ಕಡೆಗಳಲ್ಲಿ , 3 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತತ್ವಮಸಿಯೆಂಬ ವೃಕ್ಷದ ಕೆಳಗೆ ದ್ವಯವಿಲ್ಲವೆಂದು ಏಕಏಕವೆಂದು ಆಡುತ್ತೈದಾನೆ. ಅದು ನಿತ್ಯಮುಕ್ತಿ, ಅದೆ ವಿಸ್ತಾರವೆಂದು ಆಡುತ್ತೈದಾನೆ. ಈಡ ದ್ವಾರಕ್ಕೆ ಹೋದಿರಾದಡೆ ನಾಲ್ವರ ಮೂಲ ನಾಶವ ಮಾಡಿ, ಅವ್ವೆಯ ಸರ್ವಾಂಗಮಂ ಸೂರೆಗೊಂಡು ಕಪಿಲಸಿದ್ಧಮಲ್ಲಿಕಾರ್ಜುನಯ್ಯನೊಡಗೂಡಿದರೆ ಗಿರಿಯ ಮೇಲಣ ದುರ್ಗವಂ ಬಲ್ಲೆ.
--------------
ಸಿದ್ಧರಾಮೇಶ್ವರ
ನುಡಿಹಿಡಿದು ತಾರ್ಕಿಕರಂತೆ ತರ್ಕಿಸುವಾತ ನಾನಲ್ಲ. ಆಡುವ ಮಾತಿಗೆ ಈಡ ಮಾಡುವ ನುಡಿಯಲ್ಲಿ ವಾಕ್ಪಟುತನವು ನಿಜವಲ್ಲ. ನಡೆಯುವ ನಂದಿ ಕುಂಟುವುದುಂಟು, ಹೋಗುವ ಮನುಜ ಎಡಹುವುದುಂಟು, ಮಾತಾಡುವ ಶರಣ ಕಪಿಲಸಿದ್ಧಮಲ್ಲಿಕಾರ್ಜುನನಲ್ಲಿ ತಪ್ಪಿದಡೆ ತಪ್ಪಲ್ಲ ಕೇಳಾ ಪ್ರಭುವೆ.
--------------
ಸಿದ್ಧರಾಮೇಶ್ವರ
ರಸ ಗಂಧ ರೂಪ ಸ್ಪರ್ಶವೆಂಬ ಪಂಚೇಂದ್ರಿಯಂಗಳಲ್ಲಿ, ಲಿಂಗಕರ್ಪಿತವ ಮಾಡಬೇಕೆಂಬ ಭಂಗಿತರ ನೋಡಾ. ಅಂಗುಷ*ದಲ್ಲಿ ಸರ್ಪದಷ್ಟವಾದಡೆ, ಸರ್ವಾಂಗದಲ್ಲಿ ವಿಷಾವರ್ತಿಸುವುದಲ್ಲದೆ, ಖಂಡಿತವಾಗಿ ನಿಂದುದಿಲ್ಲ. ಸರ್ವಾಂಗಲಿಂಗಿಗೆ ಬೇರೆ ಐದು ಸ್ಥಾನದಲ್ಲಿ, ಅರ್ಪಿತವ ಮಾಡಬೇಕೆಂಬುದಿಲ್ಲ. ಇಷ್ಟಕ್ಕೂ ಪ್ರಾಣಕ್ಕೂ ಕಟ್ಟಿದ ಈಡ ನೋಡಾ ಅಯ್ಯಾ, ಪರುಷಸರ ಕೈಯಲ್ಲಿದ್ದು ಹೇಮವನರಸಿ ತಿರುಗುವನಂತೆ. ಖೇಚರತ್ವದಲ್ಲಿ ಬಹ ಸಾಮಥ್ರ್ಯವಿದ್ದಡೇನೊ, ಅಂಬಿಗನ ಹಂಗನರಸುವನಂತೆ. ನಿತ್ಯನಿತ್ಯ ತೃಪ್ತಂಗೆ ಉಂಡೆಹೆನೆಂದು ತಳಿಗೆ ಕಂಕುಳೊಳಗಿನ ತೆರನಂತೆ. ಸ್ವಯಂಜ್ಯೋತಿಯ ಬೆಳಗುಳ್ಳವಂಗೆ, ಜ್ಯೋತಿಯ ಹಂಗಿನಲ್ಲಿ ಕಂಡೆಹೆನೆಂಬ ಭ್ರಾಂತನಂತೆ. ವಾಯುಗಮನವುಳ್ಳವಂಗೆ ತೇಜಿಯನರಸುವಂತೆ. ಅಮೃತದ ಸೇವನೆಯುಳ್ಳವಂಗೆ ಆಕಳನರಸಿ ಬಳಲಿ ಬಪ್ಪವನಂತೆ. ತಾ ಬೈಚಿಟ್ಟ ನಿಕ್ಷೇಪದ ಹೊಲಬುದಪ್ಪಿ ಬಳಲುವನಂತೆ. ಇದು ಕಾರಣ, ಐದರ ಗುಣದಲ್ಲಿ ಅರ್ಪಿತವೆಂಬ, ಮೂರರ ಗುಣದಲ್ಲಿ ಮುಕ್ತಿಯೆಂಬ, ಆರರ ಗುಣದಲ್ಲಿ ಆಧಾರವೆಂಬ, ಎಂಟರ ಗುಣದಲ್ಲಿ ಸಂತೋಷವೆಂಬ, ಭ್ರಾಂತ ಹರಿದು ಕಾಳಿಕೆಯೊಳಗಿಪ್ಪ ಕರಿಯ ಬಣ್ಣವ ಕಳೆದು, ಬೆಳಗಿನೊಳಗಿಪ್ಪ ಜ್ವಲಿತಮಂ ಕಡಿದು ತಾನು ತಾನಾಗಬಲ್ಲಡೆ, ಆತನೆ ನಿರ್ಮುಕ್ತ, ನಿಃಕಳಕಂ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಪೃಥ್ವಿಯನೆತ್ತಿತ್ತು ಬಿಂದು, ಬಿಂದುವನೆತ್ತಿತ್ತು ಶಬ್ದ. ಶಬ್ದವನೆತ್ತಿತ್ತು ರೇಚಕ ಪೂರಕ ಕುಂಭಕ. ಈ ರೇಚಕ ಪೂರಕ ಕುಂಭಕ, ಈಡ ಪಿಂಗಳ ಸುಷುಮ್ನವನೆತ್ತಿತ್ತು. ಈ ಈಡ ಪಿಂಗಳ ಸುಷುಮ್ನಯನೆತ್ತಿತ್ತು ರಜ್ಜು. ರಜ್ಜುವನೆತ್ತಿತ್ತು ರೇಣು. ಸಾಕಾರ ನಿರಾಕಾರ ಮೂರು ಲೋಕವ ನಿಲಿಸಿ ನೋಡೆ, ಕಂಡೆನೆಂದಾತನಂಬಿಗರ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಶಬ್ದ ಸ್ಪರ್ಶ ರೂಪು ರಸ ಗಂಧಂಗಳೆಂಬ ಪಂಚೇಂದ್ರಿಯಂಗಳಲ್ಲಿ ಲಿಂಗಾರ್ಪಿತವ ಮಾಡಬೇಕೆಂಬ ಭಂಗಿತರ ನೋಡಾ. ಅಂಗುಷ*ದಲ್ಲಿ ಸರ್ಪದಷ್ಟವಾದಡೆ, ಸರ್ವಾಂಗಲಿಂಗಿಗೆ ಬೇರೆ ಐದುಸ್ಥಾನದಲ್ಲಿ ಅರ್ಪಿತವ ಮಾಡಬೇಕೆಂಬ ಜಡಸಂಕಲ್ಪವಿಲ್ಲ. ಇಷ್ಟಕ್ಕೂ ಭಾವಕ್ಕೂ ಪ್ರಾಣಕ್ಕೂ ಕಟ್ಟಿದ ಈಡ ನೋಡಯ್ಯಾ. ಪರುಷದ ರಸ ಕೈಯಲ್ಲಿರ್ದು ಹೇಮವನರಸಿ ತಿರುಗುವವನಂತೆ, ಖೇಚರತ್ವದಲ್ಲಿ ಹೋಹ ಸಾಮಥ್ರ್ಯವಿರ್ದು, ಅಂಬಿಗನ ಹಂಗನರಸುವ ಅವಿಚಾರಿಯಂತೆ, ನಿತ್ಯತೃಪ್ತನಾಗಿರ್ದು ಅಂಬಲಿಯ ಬಯಸುವ ಕಾಳ್ವಿಚಾರಿಯಂತೆ, ಸ್ವಯಂಜ್ಯೋತಿ ಪ್ರಕಾಶದೊಳಗಿರ್ದು, ಜ್ಯೋತಿಯ ಹಂಗಿನಲ್ಲಿ ಕಂಡೆಹೆನೆಂಬ ಭ್ರಾಂತನಂತೆ, ವಾಯುಗಮನವುಳ್ಳಾತ ತೇಜಿಯನರಸುವಂತೆ, ಅಮೃತ ಸೇವನೆಯ ಮಾಡುವಾತ ಆಕಳನರಸಿ ಬಳಲುವಂತೆ, ತಾ ಬೈಚಿಟ್ಟ ನಿಕ್ಷೇಪವ ಹೊಲಬುದಪ್ಪಿ ಅರಸುವನಂತೆ ಆಗಬೇಡ. ಇದು ಕಾರಣ, ವೇದಗುಣದಲ್ಲಿ ಅರ್ಪಿತವೆಂಬ, ಮೂರರ ಗುಣದಲ್ಲಿ ತೃಪ್ತಿಯೆಂಬ, ಆರರ ಗುಣದಲ್ಲಿ ಆಧಾರವೆಂಬ, ಎಂಟರ ಗುಣದಲ್ಲಿ ಸಂತೋಷವೆಂಬ ಭ್ರಾಂತು ಹರಿದು, ಬೆಳಗಿನೊಳಗಿಪ್ಪ ಜ್ವಲಿತವಂ ಕಡಿದು, ತಾನು ತಾನಾಗಬಲ್ಲಡೆ, ಆತನೆ ನಿರ್ಮುಕ್ತ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
-->