ರಂಜನಿಪುರದಲ್ಲಿ ಕಪಿ ಉಡವ ಕಚ್ಚಿ
ತಿರುಗಾಡುವದ ಕಂಡೆನಯ್ಯ.
ಆ ಉಡುವಿನ ಬಾಯೊಳಗೆ ಮೂರುಲೋಕವೆಲ್ಲ
ಏಳುತ್ತ ಬೀಳುತ್ತ ಇರ್ಪುದ ಕಂಡೆ.
ಆ ಕೋಡಗದಾಟವ ಕಂಡು ಈರೇಳುಲೋಕದ ಪ್ರಾಣಿಗಳು
ಬೆರಗಾದುದ ಕಂಡೆ.
ಅದಾರಿಗೂ ಸಾಧ್ಯವಲ್ಲ.
ಅಷ್ಟರಲ್ಲಿಯೇ ಅರಸನ ಮನೆಯಲ್ಲಿ ಒಂದು ಎಳೆ ಶಿಶು ಹುಟ್ಟಿ,
ಕಸ ನೀರು ಹೊರುವ ಗಾಡಿಯ ಕೊಂದು, ಕೋತಿಯ ತಿಂದು,
ಉಡವ ನುಂಗಿ, ತ್ರೈಲೋಕದ ಬಂಧನವ ಬಿಡಿಸಿ,
ತಂಗಿಯನೊಡಗೂಡಿ, ಅಕ್ಕನ ಸಂಗವ ಮಾಡಿ,
ಅರಸಿನ ಅರಮನೆಯಲ್ಲಿ ಆರು ಕಾಣದೆ ಅಡಗಿಹೋಯಿತ್ತು.
ಇದರಂದಚಂದವ ನಿಮ್ಮ ಶರಣ ಬಲ್ಲ.
ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ
ನಿರ್ಮಾಯಪ್ರಭುವೆ.