ಅಥವಾ

ಒಟ್ಟು 11 ಕಡೆಗಳಲ್ಲಿ , 8 ವಚನಕಾರರು , 10 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅರ್ಚಿಸಲರಿಯೆ, ಪೂಜಿಸಲರಿಯೆ, ನಿಚ್ಚ ಶಿವರಾತ್ರಿಯ ನಾ ಮಾಡಲರಿಯೆ. ಕಪ್ಪಡಿವೇಷದಿಂದಾನು ಬಂದಾಡುವೆ, ಕಪ್ಪಡಿವೇಷದಿಂದ. ಈಶ ನಾ ನಿಮ್ಮ ದಾಸರ ದಾಸಿಯ ದಾಸನಯ್ಯಾ, ನಿಮ್ಮ ವೇಷಧಾರಿಯ ಮನೆಯ ಪಂಗುಳ ನಾನಯ್ಯಾ, ಕೂಡಲಸಂಗಮದೇವಾ ನಿಮ್ಮ ಲಾಂಛನ ಧರಿಸಿಪ್ಪ ಉದರಪೋಷಕ ನಾನಯ್ಯಾ. 342
--------------
ಬಸವಣ್ಣ
ಗುರುವೆಂದರಿಯರು, ಲಿಂಗವೆಂದರಿಯರು, ಜಂಗಮವೆಂದರಿಯರು. ಹಿಂದೊಂದನಾಡುವರು, ಮುಂದೊಂದನಾಡುವರು. ಮತ್ತೆ, ನಂಬದೆ, ಭಕ್ತರಂತೆ, ಪಾದೋದಕ ಪ್ರಸಾದಕ್ಕೆ ಕೈಯ್ಯನಾನುವರು. ಈಶ ವೇಷವ ತೊಟ್ಟ, ವೇಷಧಾರಕರು, ತಾವೆ, ಭಕ್ತರೆಂಬರು. ಇವರು, ಮಾಯಾಪಾಶದಲ್ಲಿ, ಘಾಸಿಯಾಗದೆ ಮಾಣ್ಬರೇ ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನನರಿಯದ ಜಾತ್ಯಂಧಕರು.
--------------
ಸ್ವತಂತ್ರ ಸಿದ್ಧಲಿಂಗ
ಸೂತೆಯಲ್ಲಿ ಬೀಜ ಹುಟ್ಟಿದಡೆ ಅದೇತಕ್ಕೆ ಬಾತೆ? ಪಾಷಾಣದ ಕೈಯಲ್ಲಿ ಈಶ ರೂಪ ಧರಿಸಿದಡೆ ಅದು ನೆಲೆಗಳೆದ ತಟಾಕದ ತೂಬು. ಆ ಪಥವ ನಿನ್ನ ನೀನರಿ, ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ದ್ವಿಜರಿಗೆ ಕೊಟ್ಟು ಹಲಬರು ಕೆಟ್ಟರು, ಉದ್ಧರಿಸುವನೊಬ್ಬ, ಶಿವಶರಣ ಸಾಲದೆ ನಾರಾಯಣ ವೃದ್ಧಬ್ರಾಹ್ಮಣನಾಗಿ ಬಂದು ಬಲಿಯ ಭೂಮಿಯ ಬೇಡಿದ, ಕೊಟ್ಟ ಬಲಿ ಬಂಧನಕ್ಕೆ ಸಿಕ್ಕಿದ. ಈಶ ಭಕ್ತನಾಗಿ ಬಂದು ದಾಸನ ವಸ್ತ್ರವ ಬೇಡಿದ, ಕೊಟ್ಟ ದಾಸ ತವನಿಧಿಯ ಪಡೆದ. ಕಪಟದಿಂದ ನಾರಾಯಣ ಹಾರುವನಾಗಿ ಬಂದು ಕರ್ಣನ ಕವಚವ ಬೇಡಿದ, ಕೊಟ್ಟ ಕರ್ಣ ಕಳದಲ್ಲಿ ಮಡಿದ. ಕಾಮಾರಿ ಜಂಗಮವಾಗಿ ಬಂದು ಸಿರಿಯಾಳನ ಮಗನ ಬೇಡಿದ, ಕೊಟ್ಟ ಸಿರಿಯಾಳಸೆಟ್ಟಿ ಕಂಚಿಯಪುರ ಕೈಲಾಸಕ್ಕೊಯ್ದ. ನಾರಾಯಣ ಹಾರುವನಾಗಿ ಬಂದು ನಾಗಾರ್ಜುನನ ಶಿರವ ಬೇಡಿದ, ಕೊಟ್ಟ ನಾಗಾರ್ಜುನನ ಶಿರಹೋಯಿತ್ತು. ಶಿವನು ಜಂಗಮವಾಗಿ ಬಂದು ಸಿಂಧುಬಲ್ಲಾಳ ವಧುವ ಬೇಡಿದ, ಕೊಟ್ಟ ಸಿಂಧುಬಲ್ಲಾಳ ಸ್ವಯಲಿಂಗವಾದ. ಇದು ಕಾರಣ ಇಲ್ಲಿಯೂ ಲೇಸು, ಅಲ್ಲಿಯೂ ಲೇಸು; ಕೊಡಿರೇ, ನಮ್ಮ ಕೂಡಲಸಂಗನ ಶರಣರಿಗೆ.
--------------
ಬಸವಣ್ಣ
ಸ್ವಸ್ತಿ ಸಮಸ್ತವಿದ್ಯಾದಿ ಮೂಲವಹ ಋಕ್‍ಯಜುಸ್ಸಾಮಾಥರ್ವಣದಲ್ಲಿ ಅಂತರ್ಗತವಾಗಿಹ ಶ್ರೀರುದ್ರ, ಪಂಚಬ್ರಹ್ಮ, ಶ್ವೇತಾಶ್ವತರ, ಬ್ರಹದಾರಣ್ಯಕ, ಕೇನ, ಈಶ, ಜಾಬಾಲ, ಗರ್ಭ, ಕಾಲಾಗ್ನಿರುದ್ರ, ವಾಜಸನೇಯ, ಶಿವಸಂಕಲ್ಪ, ಬ್ರಹ್ಮಬಿಂದು, ಕಾತ್ಯಾಯನ, ಕಣ್ವ ಇತ್ಯಾದಿ ನಿಖಿಲೋಪನಿಷತ್ತುಗಳನ್ನು ಪ್ರತಿಪಾದಿಸಿ ನೋಡಲು, ನಿತ್ಯಶುದ್ಧ ನಿರ್ಮಲಪರಶಿವನನ್ನು ಸತ್ಯಶುದ್ಧ ಶಿವಾಚಾರಸಂಪನ್ನಭಕ್ತರನಲ್ಲದೆ ವಿಸ್ತರಿಸಿ ಸ್ತುತಿಗೈದುದಿಲ್ಲ. ಅದಕ್ಕೆ ಶಪಥ, ಆ ವೇದಪುರಷರ ಚಿತ್ತವೇ ಸಾಕ್ಷಿ. ಶಿವನ ಶರಣರು ವಾಙõïಮಾನಸಾಗೋಚರರು ಎಂದು ಹೇಳುತ್ತಲಿದೆ ಶ್ರುತಿ. ಅಖಿಲಬ್ರಹ್ಮಾಂಡಂಗಳಿಗೆ ಪಿತಮಾತೆಯಹ ಶಿವನಲ್ಲಿ ಶಿವನ ಶರಣನು ಅವಿರಳನೆಂಬುದಕ್ಕೆ `ಯಥಾ ಶಿವಸ್ತಥಾ ಭಕ್ತಃ' ಎಂಬ ವೇದವಾಕ್ಯವೇ ಪ್ರಮಾಣ. `ನಾಭ್ಯಾ ಅಸೀದಂತರಿಕ್ಷಂ ಶೀಷ್ರ್ಣೋzõ್ಞ್ಯಃ ಸಮವರ್ತತ' ಎಂಬ ಶ್ರುತಿ, ಸಕಲ ಬ್ರಹ್ಮಾಂಡಕೋಟಿಗಳು ಶಿವನ ನಾಭಿಕೂಪದಲ್ಲಿ ಅಡಗಿಹವೆಂದು ಹೇಳಿತ್ತು. `ಭಕ್ತಸ್ಯ ಹೃತ್ಕಮಲಕರ್ಣಿಕಾಮಧ್ಯಸ್ಥಿತೋ[s]ಹಂ ನ ಸಂಶಯಃ ಎಂಬ ಶ್ರುತಿ, ಅಂತಹ ಶಿವನು ಸದ್ಭಕ್ತನೊಳಗಡಗಿಹನೆಂದು ಹೇಳಿತ್ತು. `ಅಘೋರೇಭ್ಯೋ[s]ಥ ಘೋರೇಭ್ಯೋ ಘೋರಘೋರತರೇಭ್ಯಃ ಸರ್ವೇಭ್ಯಃ ಸರ್ವಶರ್ವೆರಭ್ಯೋ ನಮಸ್ತೆ ಅಸ್ತು ರುದ್ರರೂಪೇಭ್ಯಃ ಎಂಬ ಶ್ರುತಿ, ಶಿವನ ಅಘೋರಮೂರ್ತಿಯ ನಿತ್ಯತೇಜೋಮೂರ್ತಿಯೆಂದು ಹೇಳಿತ್ತು. ಜ್ಯೋತಿರ್ಲಿಂಗತ್ವಮೇವಾರ್ಯೇ ಲಿಂಗೀ ಚಾಹಂ ಮಹೇಶ್ವರಿ ತದೇತದವಿಮುಕ್ತಾಖ್ಯಂ ಜ್ಯೋತಿರಾಲೋಕ್ಯತಾಂ ಪ್ರಿಯೇ ಎಂಬ ವಾಕ್ಯ, ಶರಣಸತಿ ಲಿಂಗಪತಿಯಹ ಶಿವನ ಶರಣನೇ ಜ್ಯೋತಿರ್ಲಿಂಗವೆಂದು ಹೇಳಿತ್ತು. ತ್ರ್ಯಂಬಕಂ ಯಜಾಮಹೇ ಸುಗಂಧಿಂ ಪುಷ್ಟಿವರ್ಧನಂ ಉರ್ವಾರುಕಮಿವ ಬಂಧನಾನ್ಮೃತ್ಯೋರ್ಮುಕ್ಷೀಯ ಮಾಮೃತಾತ್ ಎಂಬ ಶ್ರುತಿ, ಶಿವಧ್ಯಾನ ಸ್ತುತಿ ನಿರೀಕ್ಷಣೆ ಪೂಜೆಯಿಂದಲ್ಲದೆ ಜನ್ಮ ಮೃತ್ಯು ಜರಾ ವ್ಯಾಧಿ ಹಿಂಗಿ ಪರಮಸುಖ ಪರಮನಿರ್ವಾಣವಾಗದೆಂದು ಹೇಳಿತ್ತು. `ಅಪವರ್ಗಪದಂ ಯಾತಿ ಶಿವಭಕ್ತೋ ನ ಚಾಪರಃ' ಎಂಬ ವಾಕ್ಯ, ಮುಕ್ತಿ ಶಿವಭಕ್ತಂಗಲ್ಲದೆ ಮತ್ತೊಬ್ಬರಿಗಿಲ್ಲವೆಂದು ಹೇಳಿತ್ತು. `ಋತಂ ಸತ್ಯಂ ಪರಂ ಬ್ರಹ್ಮ ಪುರುಷಂ ಕೃಷ್ಣಪಿಂಗಲಂ ಊಧ್ರ್ವರೇತಂ ವಿರೂಪಾಕ್ಷಂ ವಿಶ್ವರೂಪಾಯ ತೇ ನಮಃ' ಎಂಬ ಶ್ರುತಿ, ಪರಬ್ರಹ್ಮವೆಂಬುದು ಶಿವನಲ್ಲದೆ ಬೇರೆ ಬೇರೆ ಮತ್ತೊಂದು ವಸ್ತುವಿಲ್ಲವೆಂದು ಹೇಳಿತ್ತು. `ಬ್ರಹ್ಮಣಿ ಚರತಿ ಬ್ರಾಹ್ಮಣಃ' ಎಂಬ ವಾಕ್ಯ, ಅಂತಹ ಬ್ರಹ್ಮವ ಚಿಂತಿಸಿ ನಿರೀಕ್ಷಿಸಿ ಸ್ತುತಿಸಿ ಪೂಜಿಸಿ ಪ್ರಸನ್ನಪ್ರಸಾದವ ಪಡೆವ ಸದ್ಭಕ್ತನೇ ಮಹಾಬ್ರಾಹ್ಮಣನೆಂದು ಹೇಳಿತ್ತು. `ವಿಶ್ವತಶ್ಚಕ್ಷುರುತ ವಿಶ್ವತೋ ಮುಖೋ ವಿಶ್ವತಃ ಪಾತ್ ವಿಶ್ವಾಧಿಕೋ ರುದ್ರೋ ಮಹಾಋಷಿಸ್ಸರ್ವೋ ಹಿ ರುದ್ರಃ' ಎಂಬ ಶ್ರುತಿ, ಸಕಲ ಜೀವರ ಶಿವನೆಂದು ಹೇಳಿತ್ತು. `ಭಕ್ತಸ್ಯ ಚೇತನೋ ಹ್ಯಹಂ' ಎಂಬ ವಾಕ್ಯ, ಶಿವಭಕ್ತಂಗೆ ನಾನೇ ಚೈತನ್ಯನೆಂದು ಹೇಳಿತ್ತು. ಇಂತಪ್ಪ ಶಿವಲಿಂಗಾರ್ಚನೆಯ ಮಾಡುವ ಶಿವಭಕ್ತನ ಶ್ರೀಮೂರ್ತಿಗಿನ್ನು ಸರಿಯುಂಟೆರಿ `ವಾಚೋತೀತಂ ಮನೋತೀತಂ ಭಾವಾತೀತಂ ಪರಂ ಶಿವಂ ಸರ್ವಶೂನ್ಯಂ ನಿರಾಕಾರಂ ನಿತ್ಯತ್ವಂ ಪರಮಂ ಪದಂ' ಇಂತಪ್ಪ ಶಿವನಲ್ಲಿ ಅವಿನಾಭಾವರಪ್ಪ ಶರಣರ ಕಂಡಡೆ ಕರ್ಮಕ್ಷಯ, ನೋಡಿದಡೆ ಕಣ್ಗೆ ಮಂಗಳತರ ನಿರುಪಮಸುಖ, ನುಡಿಸಿದಡೆ ಶಿವರಾತ್ರಿ, ಸಂಭಾಷಣೆ ಮಾಡಿದಡೆ ಜನ್ಮಕರ್ಮಬಂಧನನಿವೃತ್ತಿ, ಜೀವನ್ಮುಕ್ತನಹ, ಇದು ನಿತ್ಯ ಕೇಳಿರಣ್ಣಾ. ದರ್ಶನಾತ್ ಶಿವಭಕ್ತನಾಂ ಸಕೃತ್ಸಂಭಾಷಣಾದಪಿ ಅತಿರಾತ್ರಸ್ಯ ಯಜ್ಞಸ್ಯ ಫಲಂ ಭವತಿ ನಾರದ ಎಂದು ನಾರದಬೋಧೆಯಲ್ಲಿ ಈಶ್ವರ ಹೇಳಿದನು. ಇಂತಪ್ಪ ಈಶ್ವರನ ಕಾಣವು ವೇದಂಗಳು. `ಯಜ್ಞೇನ ಯಜ್ಞಮಯಜಂತ ದೇವಾಸ್ತಾನಿ ಧರ್ಮಾಣಿ ಪ್ರಥಮಾನ್ಯಾಸನ್' ಎಂದುದಾಗಿ, ಇಂತು ವೇದಕ್ಕತೀತನಹಂತಹ ಶಿವನ ಶರಣರ ಮಾಹಾತ್ಮೆಯ ಹೊಗಳಲ್ಕೆ ವೇದಕ್ಕೆ ವಶವಲ್ಲ, ಮಂದಮತಿಮಾನವರ ಮಾತಂತಿರಲಿ. ಶಿವಶರಣರ ಮಹಾಮಹಿಮೆಗೆ ನಮೋ ನಮೋ ಎಂಬೆ ಕಾಣಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಕಣ್ಣಿನಲ್ಲಿ ಕಂಡು ಮನದಲ್ಲಿ ಬಯಸಿ ಬಣ್ಣಗುಂದಿ ಬಳಲುವರಯ್ಯ. ಬಂದರೆ ಹೆಚ್ಚಿ, ಬಾರದಿದ್ದರೆ ಕುಂದಲೇತಕೆ? ಕುಂದಿದರೆ ಬಪ್ಪುದೆ? ಹಿರಿದು ಜರಿದು ಹೇಡಿಗೊಂಡು ಕರಗಿ ಕೊರಗಿ ಕೋಡಿವರಿದು[ದೆಂದು] ನಿಂದುರಿದು ಕಡುನೊಂದು ಭವಬಡುತ್ತಿಪ್ಪರಯ್ಯ. ಒಂದು ನಿಮಿಷ ನಿಮಿಷಾರ್ಧ ನಿಮ್ಮ ನೆನಹಿಲ್ಲ ನೋಡಾ! ಆಶೆಯೆಂಬ ಮಾಯಾಪಾಶದೊಳಗೆ ಸಿಕ್ಕಿ ದೋಷ ದುರ್ಗುಣದಿಂದ ಬಿದ್ದುರುಳುವ ಪಾಶಬದ್ಧರ ಈಶ ಲಾಂಛನಧಾರಿಗಳೆಂತೆಂಬೆನಯ್ಯಾ?, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಅರಿದೊಡೆ ಶರಣ, ಮರೆದೊಡೆ ಮಾನವ. ಪಾತಕನು, ಹೊಲೆಯನು, ನಾನೇತಕ್ಕೆ ಬಾತೇ ? ಹೊತ್ತಿಂಗೊಂದೊಂದು ಪರಿಯ ಗೋಸುಂಬೆಯಂತೆ ಈಶನ ಶರಣರ ಕಂಡುದಾಸೀನವ ಮಾಡುವ ದಾಸೋಹವನರಿಯದ ದೂಷಕನು ನಾನಯ್ಯ. ಏಸು ಬುದ್ಧಿಯ ಹೇಳಿ ಬೇಸತ್ತೆನೀ ಮನಕೆ, ಈಶ ನೀ ಸಲಹಯ್ಯಾ, ಉರಿಲಿಂಗತಂದೆ.
--------------
ಉರಿಲಿಂಗದೇವ
ಎಲಾ, ಪರಮ ಪಾವನಚರಿತ ಪಾರ್ವತೀಶ ಪಾಪನಾಶ ಪರಮೇಶ ಈಶ. ಇಂತಪ್ಪ ಈಶನು ಭಕ್ತನಾ ಕರಸ್ಥಲದಲ್ಲಿ ಬಂದ ಬಳಿಕ ಭಕ್ತನೇ ದೊಡ್ಡಿತ್ತು ಕಾಣೆಲಾ ! ಇಂತಪ್ಪ ಭಕ್ತನಾ ಶರೀರಕ್ಕೆ ರೋಗ ಬಂದರೆ, ಬಳಿಕ ವೈದ್ಯನಾ ಕರೆಸಿ, ಮಹಾವೈದ್ಯವಾ ಮಾಡಿಸಿ, ವೈದ್ಯ ಭಾಗವ ತೆಗೆದು, ವೈದ್ಯ ಸೇವಿಸಿ, ಮಿಕ್ಕ ಎಂಜಲ ತಿಂದು ಬದುಕೇನೆಂಬೋ ಮೂಳ ಹೊಲೆಯರ ಮುಖವ ನೋಡಲಾಗದು ಕಾಣೋ ಕೂಡಲಾದಿ ಚನ್ನಸಂಗಮದೇವಾ !
--------------
ಕೂಡಲಸಂಗಮೇಶ್ವರ
ಆಶೆಯುಳ್ಳನ್ನಬರ ಆಶ್ರಯಿಸುವ ಆಶ್ರಯವು ದಾಸಿಯಿಂದ ಕರಕಷ್ಟ ಕಾಣಿರೊ ! ಆಸೆಯೆ ದಾಸಿ ಕಾಣಿರೊ, ಅಯ್ಯಾ ! ಆ ನಿರಾಶೆಯೆ ಈಶ ಪದ, ಕಾಣಿರಣ್ಣಾ ! ದಾಸತ್ವದ ಈಶತ್ವದ ಅನುವನು ವಿಚಾರಿಸಿ, ಆಶೆ ಅಡಗಿದಡೆ ಅದೆ ಈಶ ಪದ, ತಪ್ಪದಯ್ಯಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಅಷ್ಟತನುವಿನೊಳಗೊಂದು ತನುವಾಗಿ, ಜೀವಾತ್ಮನು ಪಾಶಬದ್ಧನು ಪಶುಪಾಗತಂತ್ರನು ಸ್ವತಂತ್ರವೆಲ್ಲಿಯದೊ ? ಸ್ವತಂತ್ರ ಶಿವನೊಬ್ಬನೆ ತನ್ನ ಇಚ್ಛಾಲೀಲೆಯಿಂದಾಡಿಸುವ ಘೋರಸಂಸಾರ ಭವವಾರಿಧಿಯೊಳಗೆ ರಾಟಾಳದ ಗುಂಡಿಗೆಯೊಳಗಣ ಜಲದ ತೆರದಿ ತುಂಬುತ್ತ ಕೆಡಹುತ್ತವಿರುಹವೈಸಲ್ಲದೆ ತೆರಹಿಲ್ಲ. ಪುಣ್ಯಪಾಪಂಗಳ ಮಾಡಿ ಸ್ವರ್ಗನರಕಂಗಳ ಭೋಗಿಸಿ ಪರತಂತ್ರವಲ್ಲದೆ ಸ್ವತಂತ್ರವೆಲ್ಲಿಯದೊ ? ಪುನರ್ಜನ್ಮ ಪುನರ್ಮೃತ್ಯುಃ ಪುನಃ ಕ್ಲೇಶಃ ಪುನಃ ಪುನಃ | ಸಗರಸ್ಥಘಟನ್ಯಾಯೋ ನ ಕದಾಚಿದವೈದೃಶಃ || ಎಂದುದಾಗಿ, ಜೀವಾತ್ಮಂಗೆ ಪರಮಾತ್ಮತ್ವ ಸಲ್ಲದಾಗಿ, ಅಷ್ಟತನುವಿನೊಳಗೊಂದು ತನು ಕಾಣಿಭೋ, ಎಲೆ ಅದ್ವೈತಿಗಳಿರಾ. ಹುಟ್ಟುಕುರುಡನು ತನ್ನ ಹಿರಿಯಯ್ಯ ಹೆತ್ತಪ್ಪಂಗೆ ಮುಖವೆಲ್ಲ ಕಣ್ಣೆಂದಡೆ, ತನಗಾದ ಸಿದ್ಧಿ ಯಾವುದು ? ಆದಿ ಸಿದ್ಧಾಂತ ವೇದಾಂತ ಶಾಸ್ತ್ರವನೋದಿ ಕೇಳಿ ಹೇಳಿದಡೆ, ತನಗೇನು ಸಿದ್ಧಿಯಾದುದೆಲೆ ಆತ್ಮತತ್ತ್ವವಾದಿಗಳಿರಾ ಹೇಳಿರೆ ? ಅಷ್ಟತನುಗಳೆಲ್ಲ ಪರತಂತ್ರವೆಂಬುದ ಶ್ರುತದೃಷ್ಟಾನುಮಾನಂಗಳಿಂ ನಿಮ್ಮ ತಿಳುಪುವದೆ ? ಆತ್ಮಾಂತರಾಣಿ ಪಶವಃ ಪರತಂತ್ರಭಾವಾತ್ಸತಸ್ವತಂತ್ರಃ ಪಶುಪತೇ ಪಸುಧೇಶ್ವರಸ್ವಂ | ಆತ್ಮಾನಮಾಷನಿಷದಾ ಪ್ರವದಂತ್ಯನೀಶ ಈಶಂ ಭವಂತ ಮುಖಯೋರುಭಯಂ ಸ್ವಭಾವಃ || ಇಂತೆಂದುದಾಗಿ, ಆತ್ಮಂಗೆ ಪಶುತ್ವವೆ ಸ್ವಭಾವ, ಶಿವಂಗೆ ಪತಿತ್ವವೆ ಸ್ವಭಾವ, ಇದು ಶ್ರುತ. ಇನ್ನು ದೃಷ್ಟವೆಂತೆನಲು, `ಜೀವಶ್ಶಿವಶಿವೋ ಜೀವಸ್ಯ ಜೀವಃ', ಜೀವನೆ ಶಿವನು, ಶಿವನೆ ಜೀವನು. ಬರಿದೆ ಶಿವನೆಂದು ನುಡಿವರು, ಮೇಲಣ ಪದಾರ್ಥವ ನುಡಿಯರು. `ಪಾಶಬದ್ಧೋ ಪಶುಪ್ರೋಕ್ತಃ ಪಾಶಮುಕ್ತಃ ಪರಶ್ಶಿವಃ' ಎಂಬ ಪದಾರ್ಥವ ನುಡಿಯರು. ಪಾಶಬದ್ಧ ಜೀವನರಾಗಿ ಪಶುವೆನಿಸುವನು ಪಾಶಮುಕ್ತನು. ಶಿವನಾಗಿ ಆ ಪಶುವಿಂಗೆ ಪರನಾದ ಶಿವನು ಪತಿಯೆನಿಸುವನು. `ಬ್ರಹ್ಮದ ಸರ್ವದೇವಃ ವೇಷವಃ'ಯೆಂಬ ಶ್ರುತ್ಯಾರ್ಥವನು ಪ್ರಮಾಣಿಸಿ, ಪಶುವೆ ಪತಿಯೆಂದು ನುಡಿವರು ಅನಭಿಜ್ಞರು. || ಶ್ರುತಿ || `ರುದ್ರಃ ಪಶುನಾಮಧಿಪತಿರಿತಃ' ಪಶುಗಳಿಗೆ ಶಿವನೆ ಒಡೆತನವುಳ್ಳ ತನ್ನಾಧೀನವುಳ್ಳ ಮಾಯಾಪಾಶದಿಂ ಕಟ್ಟಲು ಬಿಡಲು, ಶಿವನೆ ಪತಿಯೆಂಬ ತಾತ್ಪರ್ಯಾರ್ಥವ ನುಡಿಯರು. ಇದು ದೃಷ್ಟಾಂತ, ಇನ್ನು ಅನುಮಾನವೆಂತೆನಲು ಕೇಳಿರೆ. ಮಾನುಷಂಗೆ ಪ್ರಸನ್ನಭಕ್ತಿ ಪ್ರಸಾದವ ಕೃಪೆ ಮಾಡಲು, ಮಾನುಷ್ಯಂಗೆ ಕಾಮಿತ ನಿಃಕಾಮಿತ ಭಕ್ತಿಯಿಂದ ಭೋಗಮೋಕ್ಷವನೀವನಾ ಶಿವನು. ನರನೊಳಗಾಗಿ ನರಪತಿಯ ಸೇವೆಯ ಮಾಡುವಲ್ಲಿ, ನಿರುಪಾಧಿಕಸೇವೆಯಿಂದ ಅತಿಶಯ ಪದವನೀವನು. ಉಪಾಧಿಕಸೇವೆಯಿಂದ ಸಾಧಾರಣಪದವನೀವನು. ಇದೀಗ ಅನುಮಾನ ಕಂಡಿರೆ. ಇಂತೀ ಅಷ್ಟತನುಗಳೊಳಗಾದ ಸಮಸ್ತರು ಪಶುಗಳು. ಇವಕ್ಕೆ ಪತಿ ಶಿವನೆಂಬುದಕ್ಕೆ ಕೇಳಿರೆ. ಪೃಥಿವ್ಯಾಭವ ಅಪಾಂ ಶರ್ವ ಆಜ್ಞೇ ರುದ್ರಃ ವಾಯೋರ್ಭೀಮಃ | ಆಕಾಶ್ಶಾತ್ಯ ಮಹಾದೇವ ಸೂರ್ಯಸ್ಯೋಗ್ರಃ ಚಂದ್ರಸ್ಯ ಸೋಮಃ | ಆತ್ಮನಃ ಪಶುಪತಿರಿತಃ | ಎಂದೆನಲು, ಅಷ್ಟತನುಗಳು ಪಶುಗಳು, ಪತಿ ಶಿವನು ಕೇಳಿರೆ. ಇಂತೀ ಅಷ್ಟತನುಗಳು ಶಿವನಾಜ್ಞೆಯ ಮೀರಲರಿಯವೆಂಬುದಕ್ಕೆ ದೃಷ್ಟಾವಾರುಣಿಚೋಪನಿಷತ್ಸುಭೀಸ್ಮಾದ್ವಾತಃ ಪವತೇಶ್ಚಾಗ್ನಿಶ್ಚಭಿಷೋದೇತಿ ಸೂರ್ಯಃ ಭೀಷಾಂದ್ರರ ಮೃತ್ಯುರ್ಧಾವತಿ ಪಂಚಮಃ | ಇಂತಾಗಿ, ಆಕಾಶಃ ಪರಪರಮೇಶಸ್ಯ ಶಾಸನಾದೇವ ಸರ್ವದಾ ಪ್ರಾಣಾಪಾನಾದಿಭಿಶ್ಚಯ ಭೇದ್ಯದಂತಯಿರ್ಲಹಿರ್ಜಗತ್ ಭಿಬರ್ತಿ ಸರ್ವರೀ ಸರ್ವರೀ ಸರ್ವಸ್ಯ ಶಾಸನೇವ ಪ್ರಭಾಜನಾ || ಎಂದುದಾಗಿ, ಹವ್ಯಂ ವಹತಿ ದೇವಾನಾಂ ತವ್ಯಂ ತವ್ಯಾಶ ತಾಮಪಿ | ಪಾಕಾದ್ಯಂ ಚ ಕರೋತ್ಯಗ್ನಿಃ ಪರಮೇಶ್ವರ ಶಾಸನಾತ್ || ಸಂಜೀವನಾದ್ಯಂ ಸರ್ವಸ್ಯ ಕುರ್ವಂತ್ಯಾಪಸ್ತದಾಜ್ಞಯಾ | ವಿಶ್ವಂ ವಿಶ್ವಂಭರಾನ್ನಿತಂ ದತ್ತೇ ವಿಶ್ವೇಶ್ವರಾಜ್ಞಯಾ | ತ್ರಿಭಿಕಿ ತ್ರೈಜಗಭಿಬ್ರತೇಜೋಬಿರ್ವಿಷಮಾದದೇ | ವಿವಿಸ್ಸರ್ವಸ್ಯ ಸಭಾನು ದೇವದೇವಸ್ಯ ಶಾಸನಾತ್ | ಪುಷ್ಯತ್ಯೇಷದಿಜತಾನಿ ಭೂತಾ ನಿಹ್ಲಾದಯಂತ್ಯಪಿ | ದೇವೈಶ್ಯಪಿಯತೇ ಚಂದ್ರಶ್ಚಂದ್ರ ಭೂಷಣಂ ಶಾಸನಾತ್ | ತೇಸ್ಯಾಜ್ಞಾಂ ವಿನಾ ತೃಣಾಗ್ರಮಪಿ ನಚಲತಿ || ಇಂತೆಂದುದಾಗಿ, ಇದು ಕಾರಣ, ಆತ್ಮಸ್ವರ ಬಸವಪ್ರಿಯ ಕೂಡಲಚೆನ್ನಸಂಗಯ್ಯನೆಂದರಿಯರೆಲ್ಲರು. ಪಶುಗಳು ಪಾಶಬದ್ಧರೆಂದು ಎತ್ತಿ ತರ್ಜನಿಯವ ಉತ್ತರ ಕೊಡುವರುಳ್ಳರೆ ನುಡಿ ಭೋ.
--------------
ಸಂಗಮೇಶ್ವರದ ಅಪ್ಪಣ್ಣ
-->