ಅಥವಾ

ಒಟ್ಟು 13 ಕಡೆಗಳಲ್ಲಿ , 11 ವಚನಕಾರರು , 12 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಯ್ಯ, ಪರಮಸಚ್ಚಿದಾನಂದಮಂತ್ರಮೂರ್ತಿ ಜಂಗಮದೇವನು ಪ್ರಮಥಗಣಾರಾಧ್ಯ ಭಕ್ತಮಾಹೇಶ್ವರರೊಪ್ಪಿಗೆಯಿಂದ ನಿರಂಜನಜಂಗಮಕ್ಕೆ ಉಪರಿಸಿಂಹಾಸನ ಮಾಡಿ, ಮುಹೂರ್ತಮಾಡಿದ ಮೇಲೆ ಷಡಕ್ಷರಮಂತ್ರಸ್ವರೂಪವಾದ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಮಧ್ಯದಲ್ಲಿ ಮೂರ್ತಿಗೊಂಡಿರುವ ಈಶಾನ್ಯಕಲಶ ಮೊದಲಾಗಿ ಪಂಚಕಲಶಂಗಳಿಗೆ ಜಂಗಮದೀಕ್ಷಾಪಾದೋದಕವ ತುಂಬಿ, ಮಂಟಪಷಟ್ಸಮ್ಮಾರ್ಜನೆ, ಷಡ್ವಿಧ ವರ್ಣದ ರಂಗಮಾಲೆ, ನವಧಾನ್ಯ, ನವಸೂತ್ರ, ವಿಭೂತಿವಿಳ್ಯೆ, ಸುವರ್ಣಕಾಣಿಕೆ, ಪಂಚಮುದ್ರೆ, ಅಷ್ಟವಿಧ ಷೋಡಶೋಪಚಾರಂಗಳಿಂದೊಪ್ಪುವ ಸದ್ಯೋಜಾತ, ವಾಮದೇವ, ಅಘೋರ, ತತ್ಪುರುಷ, ಈಶಾನ ಕಲಶಮೂರ್ತಿಗಳ ಪಶ್ಚಿಮಭಾಗದಲ್ಲಿ ಜಂಗಮಪಾದ ಸೋಂಕುವಂತೆ ಗುರುವು ಮುಹೂರ್ತಮಾಡಿ, ಆ ಕಲಶಂಗಳ ಸೂತ್ರವ ತನ್ನ ಪಾದಕ್ಕೆ ಹಾಕಿ, ತನ್ನ ಚಿದ್ಬೆಳಗಿನ ಮುಂದೆ ಮೂರ್ತಿಗೊಂಡಿರುವ ಕಲಶಂಗಳ ಪೂರ್ವಭಾಗದಲ್ಲಿ ಕರಿಯಕಂಬಳಿಯ ಗರ್ದುಗೆಯ ಮಾಡಿಸಿ, ಹಸೆಯ ರಚಿಸಿ, ಆ ಗರ್ದುಗೆಯ ಮೇಲೆ ಶಿಷ್ಯೋತ್ತಮನ ಮುಹೂರ್ತವ ಮಾಡಿಸಿ, ಆತನಂಗಕ್ಕೆ ಗುರುಸೂತ್ರವ ಹಾಕಿ, ಶಿಷ್ಯನಂಗದ ಮೇಲೆ ಮೂರ್ತಿಗೊಂಡಿರುವ ಪರಶಿವಲಿಂಗವ ಗಣಸಾಕ್ಷಿಯಾಗಿ ಶ್ರೀ ಗುರುದೇವನು ತನ್ನ ಕರಸ್ಥಲದಲ್ಲಿ ಮುಹೂರ್ತವ ಮಾಡಿಸಿ, ಆ ಲಿಂಗದ ಮಸ್ತಕದ ಮೇಲೆ ನಿರಂಜನಜಂಗಮದ ಪಾದವಿಡಿಸಿ, ಆ ಪಂಚÀಕಲಶಂಗಳಲ್ಲಿ ಶೋಬ್ಥಿಸುವಂಥ ದೇವಗಂಗಾಜಲಸ್ವರೂಪವಾದ ಗುರುಪಾದೋದಕವನ್ನು ಒಂದು ಪಾತ್ರೆಯಲ್ಲಿ ಆ ಕಲಶಂಗಳೈದರಲ್ಲಿ ತೆಗೆದುಕೊಂಡು ಗುರುವಿನ ದಕ್ಷಿಣಭಾಗದಲ್ಲಿ ಮೂರ್ತಿಗೊಂಡಿರುವ ಪಾದೋದಕ ಕುಂಭದಲ್ಲಿ ಒಂದು ಬಿಂದುವ ತಗೆದುಕೊಂಡು ಆ ಪಾತ್ರೆಯಲ್ಲಿ ಹಾಕಿ, ಇವಾರುತೆರದ ಅರ್ಘೋದಕಂಗಳ ಪ್ರಮಥಗಣರಾಧ್ಯ ಭಕ್ತಮಹೇಶ್ವರರೆಲ್ಲ ಆ ಗುರುವಿನ ಹಸ್ತಕಮಲದಲ್ಲಿರುವಂಥ ಉದಕವನ್ನು ತೆಗೆದುಕೊಂಡು, ಶರಣಸತಿ ಲಿಂಗಪತಿಯಾಗಿ ಒಪ್ಪುವ ಶಿಷ್ಯೋತ್ತಮನ ಮಸ್ತಕದಮೇಲೆ ಮಂತ್ರಧ್ಯಾನದಿಂದ ಸಂಪ್ರೋಕ್ಷಣೆಯ ಮಾಡುವಂಥಾದೆ ಕಲಶಾಬ್ಥಿಷೇಕದೀಕ್ಷೆ. ಇಂತುಟೆಂದು ಶ್ರೀಗುರು ನಿಷ್ಕಳಂಕ ಚನ್ನಬಸವರಾಜೇಂದ್ರನು ನಿರ್ಲಜ್ಜಶಾಂತಲಿಂಗದೇಶಿಕೋತ್ತಮಂಗೆ ನಿರೂಪಮಂ ಕೊಡುತಿರ್ದರು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಕಂಗಳ ಮುಂದಣ ಬಯಲಿನೊಳಗೊಂದು ಪ್ರಕಾಶಾನ್ವಿತವಾದ ಮಹಾಚೋದ್ಯತರವಾದ ಗಗನಕೋಶವುಂಟು. ಅಲ್ಲೊಂದು ದಿವ್ಯತರವಾದ ಕಮಲವುಂಟು. ಆ ಕಮಲದ ಮಧ್ಯದಲ್ಲಿ ಆಣವತ್ರಯಾನ್ವಿತವಾದ ಮಹತ್ಕರ್ಣಿಕೆಯುಂಟು. ಮತ್ತದರಗ್ರದಂತರ್ವರ್ಣತ್ರಯಂಗಳೊಳಗೆ ನೀಲವಿದ್ರುಮರತ್ನ ಚಂದ್ರಪ್ರಕಾಶ ದಿವ್ಯಸಿಂಹಾಸನದ ಮೇಲೆ ಬೆಳಗುತ್ತಿರ್ಪ ಶಿವಲಿಂಗವನನುಸಂಧಾನಿಸಿ ಪೂಜಿಸುವ ಕ್ರಮವೆಂತೆಂದೊಡೆ : ಶ್ರೀಗುರುಕರುಣಕಟಾಕ್ಷವೀಕ್ಷಣಬಲದಿಂದ ಕಲ್ಮಷ ಕಂಟಕಾದಿಗಳಂ ತೊಲಗಿಸಿ, ಶಿವಲೋಕದ ಮಾರ್ಗವಿಡಿದು ಹೋಗಿ, ಆ ಶಿವಲೋಕದ ಸಮೀಪಕ್ಕೆ ಸೇರಿ, ಪರೀಕ್ಷೆಯ ಮಾಡಿ ನೋಡಲು, ಆ ಶಿವಲೋಕದ ಬಹಿರಾವರಣದಲ್ಲಿ ಮೂವತ್ತೆರಡು ಬಹಿರ್ಮುಖರು ಸಂಸ್ಥಿತರಾದ ವಿವರ : ಈಶಾನ್ಯ ಪರ್ಜನ್ಯ ಜಯಂತ ಮಹೇಂದ್ರ ಆದಿತ್ಯ ಸತ್ಯ ಭೃಂಷ ಅಂತರಿಕ್ಷ ಅಗ್ನಿ ವಿಮಾಷ ಥತ ಗ್ರಹಕ್ಷತ ಯಮ ಗಂಧರ್ವ ಭೃಂಗುರಾಜ ಮೃಗ ನಿರುತಿ ದೌವಾರಿಕ ಸುಗ್ರೀವ ಪುಷ್ಪದತ್ತ ವರುಣ ಅಸುರ ಶೇಷ ಋಭು ವಾಯು ನಾಗ ಮುಖ ಪಲಾಟಕ ಸೋಮ ಭೂತ ಅದಿತ ದಿತರೆಂಬುವರೇ ಮೂತ್ತೆರಡು ವಸ್ತುದೇವತೆಯರ ಒಡಂಬಡಿಸಿಕೊಂಡು ಅವರಿಂದೊಳಗಿರ್ಪ ಸೂರ್ಯವೀಥಿಯೆನಿಸುವ ತೃತೀಯವರ್ಣದ ಮೂವತ್ತೆರಡುದಳದಲ್ಲಿ ಎಂಟು ಶೂನ್ಯದಳಗಳನುಳಿದು, ಮಿಕ್ಕ ಇಪ್ಪತ್ತುನಾಲ್ಕುದಳಗಳಲ್ಲಿರುವ ಇಪ್ಪತ್ತುನಾಲ್ಕು ವಿಕಲಾಕ್ಷರಂಗಳೇ ಅಷ್ಟವಿಧೇಶ್ವರರು, ಅಷ್ಟದಿಕ್ಪಾಲಕರು, ಅಷ್ಟವಸುಗಳಾದ ವಿವರ : ಕ ಕಾರವೆ ಅನಂತ, ಖ ಕಾರವೆ ಇಂದ್ರ, ಗಕಾರವೆ ಧರ, ಘಕಾರವೆ ಸೂಕ್ಷ್ಮ , ಓಂಕಾರವೆ ಅಗ್ನಿ, ಚಕಾರವೆ ಧ್ರುವ, ಛಕಾರವೆ ಶಿವೋತ್ತಮ, ಜಕಾರವೆ ಯಮ, ಝಕಾರವೆ ಸೋಮ, ಞಕಾರವೆ ಏಕನೇತ್ರ, ಟಕಾರವೆ ನಿರುತಿ, ಠಕಾರವೆ ಆಪು, ಡಕಾರವೆ ರುದ್ರ, ಢಕಾರವೆ ವರುಣ, ಣಕಾರವೆ ಅನಿಲ, ತಕಾರವೆ ತ್ರಿಮೂರ್ತಿ, ಥಕಾರವೆ ವಾಯು, ದಕಾರವೆ ಅನಲ, ಧಕಾರವೆ ಶ್ರೀಕಂಠ, ನಕಾರವೆ ಕುಬೇರ, ಪಕಾರವೆ ಪ್ರತ್ಯೂಷ, ಫಕಾರವೆ ಶಿಖಂಡಿ, ಬಕಾರವೆ ಈಶಾನ, ಬಕಾರವೆ ಪ್ರಭಾಸ. ಇಂತೀ [ಅಷ್ಟ] ವಿಧೇಶ್ವರಾದಿಗಳಿಗಬ್ಥಿವಂದಿಸಿ, ಅದರಿಂದೊಳಗಿರ್ಪ ಚಂದ್ರವೀಥಿಯೆನಿಪ ದ್ವಿತೀಯಾವರಣದ ಷೋಡಶದಳದಲ್ಲಿರುವ ಷೋಡಶ ಸ್ವರಾಕ್ಷರಂಗಳೆ ಷೋಡಷರುದ್ರರಾದ ವಿವರ : ಅಕಾರವೆ ಉಮೇಶ್ವರ, ಆಕಾರವೆ ಭವ, ಇಕಾರವೆ ಚಂಡೇಶ್ವರ, ಈಕಾರವೆ ಶರ್ವ, ಉಕಾರವೆ ನಂದಿಕೇಶ್ವರ, ಊಕಾರವೆ ರುದ್ರ, ಋಕಾರವೆ ಮಹಾಕಾಳ, Iೂಕಾರವೆ ಉಗ್ರ, ಲೃಕಾರವೆ ಭೃಂಗಿರೀಟಿ, ಲೂೃಕಾರವೆ ಬ್ಥೀಮ, ಏಕಾರವೆ ಗಣೇಶ್ವರ, ಐಕಾರವೆ ಈಶಾನ, ಓಕಾರವೆ ವೃಷಭೇಶ್ವರ, ಔಕಾರವೆ ಪಶುಪತಿ, ಅಂ ಎಂಬುದೆ ಷಣ್ಮುಖಿ, ಅಃ ಎಂಬುದೆ ಮಹಾದೇವನು. ಇಂತಪ್ಪ ಷೋಡಶರುದ್ರರಿಗೆ ಸಾಷ್ಟಾಂಗವೆರಗಿ ಬಿನ್ನವಿಸಿಕೊಂಡು, ಅದರಿಂದೊಳಗಿರ್ಪ ಅಗ್ನಿವೀಥಿಯೆನಿಸುವ ಪ್ರಥಮಾವರಣ ಅಷ್ಟದಳಗಳಲ್ಲಿರ್ಪ ಅಷ್ಟವ್ಯಾಪಕಾಕ್ಷರಂಗಳೆ ಅಷ್ಟಶಕ್ತಿಯರಾದ ವಿವರ : ಸಕಾರವೆ ಉಮೆ, ಷಕಾರವೆ ಜ್ಯೇಷ್ಠೆ, ಶಕಾರವೆ ರೌದ್ರೆ, ವಕಾರವೆ ಕಾಳೆ, ಲಕಾರವೆ ಬಾಲೆ, ರಕಾರವೆ ಬಲಪ್ರಮಥಿನಿ, ಯಕಾರವೆ ಸರ್ವಭೂತದಮನೆ, ಮಕಾರವೆ ಮನೋನ್ಮನಿ. ಇಂತಪ್ಪ ಶಿವಶಕ್ತಿಯರ ಪಾದಪದ್ಮಂಗಳಿಗೆ ಸಾಷ್ಟಾಂಗವೆರಗಿ, ಪೊಡಮಟ್ಟು ಅದರಿಂದೊಳಗಿರ್ಪ ಅತಿರಹಸ್ಯವಾದ ಮೂವತ್ತೆರಡು ಕ್ಲೇಶಂಗಳಿಗಾಶ್ರಯವಾದ ಶಾಂತಿಬಿಂದುಮಯವಾದ ಅಂತರ್ಮಂಡಲದ ಚತುರ್ದಳದಲ್ಲಿರುವ ಚತುರಕ್ಷರಂಗಳೇ ಚತುಃಶಕ್ತಿಯರಾದ ವಿವರ : ಸಂ ಎಂಬುದೆ ಅಂಬಿಕೆ, ಅಂ ಎಂಬುದೆ ಗಣಾನಿ, ಡಿಂ ಎಂಬುದೆ ಈಶ್ವರಿ, ಕ್ಷುಂ ಎಂಬುದೇ ಉಮೆ. ಇಂತಪ್ಪ ಪರಶಕ್ತಿಯರ ಪಾದಾರವಿಂದವನು ಅನೇಕ ಪ್ರಕಾರದಿಂ ಸ್ತುತಿಮಾಡಿ ಬೇಡಿಕೊಂಡು ಅವರಪ್ಪಣೆವಿಡಿದು ಒಳಪೊಕ್ಕು, ಅಲ್ಲಿ ಕದಂಬಗೋಳಕಾಕಾರ ಸ್ಫುರಶಕ್ತಿದೀದ್ಥಿಕಾಯೆಂದುಂಟಾಗಿ ರಹಸ್ಯಕ್ಕೆ ರಹಸ್ಯವಾದ ಷಡಧ್ವಜನ್ಮಭೂಮಿಯಾದ ಶಕ್ತಿಶಿರೋಗ್ರದಲ್ಲಿ ಪಂಚಾಕಾಶ ಷಟ್ತಾರಕ ತ್ರಿವಿಧಲಿಂಗಾಂಗಗಳೆ ಕಕಾರವಾದ ಪರಬ್ರಹ್ಮದ ನೆಲೆಯನರಿಯುವುದೇ ಮುದ್ವೀರಪ್ರಿಯ ಸಂಗಮೇಶ್ವರನಲ್ಲಿ ಬೆರೆವಂಥ ನಿಜಯೋಗ ಕಾಣಿರೊ.
--------------
ಮುದ್ವೀರ ಸ್ವಾಮಿ
ಇಂದ್ರ ಕಪಾಲ, ಅಗ್ನಿ ನಯನ, ಯಮ ಬಾಯಿ, ನೈಋತ್ಯ ಕರ, ವರುಣ ಹೃತ್ಕಮಲ, ವಾಯವ್ಯ ನಾಬ್ಥಿ, ಕುಬೇರ ಗುಹ್ಯ, ಈಶಾನ ಜಂಘೆ, ಇಂತೀ ಅಷ್ಟತನುಮೂರ್ತಿ ರೋಹವಾಹ ಪ್ರಮಾಣು. ಅವರೋಹವಾಗಿ ಮುಮುಕ್ಷುವಾಗಿ ಅಷ್ಟತನುವಿನಲ್ಲಿ ಆತ್ಮನು ನಿಶ್ಚಯವಾದುದನರಿದು ಸದ್ಯೋಜಾತಲಿಂಗವ ಹೊರೆಯಿಲ್ಲದೆ ಕೂಡಬೇಕು.
--------------
ಅವಸರದ ರೇಕಣ್ಣ
ಓಂಕಾರವೇ ಶಿವ, ಯಕಾರವೇ ಸದಾಶಿವ, ವಾಕಾರವೇ ಈಶ್ವರ, ಶಿಕಾರವೇ ಮಹೇಶ್ವರ, ಮಃಕಾರವೇ ಈಶ್ವರ, ನಕಾರವೇ ಈಶಾನ. ಈ ಷಡಕ್ಷರವೆ ಷಡ್ವಿಧಮಂತ್ರಮೂರ್ತಿಯಾಗಿ ಒಪ್ಪುತಿಪ್ಪುದಯ್ಯ, ಮತ್ತೆ-ನಕಾರವೇ ಮೂರ್ತಿಬ್ರಹ್ಮ, ಮಃಕಾರವೇ ಪಿಂಡಬ್ರಹ್ಮ, ಶಿಕಾರವೇ ಕಲಾಬ್ರಹ್ಮ, ವಾಕಾರವೇ ಆನಂದಬ್ರಹ್ಮ, ಯಕಾರವೇ ವಿಜ್ಞಾನಬ್ರಹ್ಮ, ಓಂಕಾರವೇ ಪರಬ್ರಹ್ಮ, ಈ ಷಡಕ್ಷರವೆ ಷಡ್ವಿಧಬ್ರಹ್ಮವೆಂದು ಹೇಳಲ್ಪಟ್ಟಿತ್ತು ನೋಡಾ. ಮತ್ತೆ-ನಕಾರವೇ ಕ್ರಿಯಾಶಕ್ತಿ:ಮಕಾರವೇ ಜ್ಞಾನಶಕ್ತಿ, ಶಿಕಾರವೇ ಇಚ್ಛಾಶಕ್ತಿ, ವಾಕಾರವೇ ಆದಿಶಕ್ತಿ, ಯಕಾರವೇ ಪರಶಕ್ತಿ, ಓಂಕಾರವೇ ಚಿಚ್ಛಕ್ತಿ, ಇಂತಿವು ಮಂತ್ರಶಕ್ತಿಸ್ವರೂಪೆಂದರಿವುದು ನೋಡಾ. ಮತ್ತೆ-ನಕಾರವೇ ಕರ್ಮಸಾದಾಖ್ಯ, ಮಃಕಾರವೇ ಕರ್ತೃಸಾದಾಖ್ಯ, ಶಿಕಾರವೇ ಮೂರ್ತಿಸಾದಾಖ್ಯ, ವಾಕಾರವೇ ಅಮೂರ್ತಿಸಾದಾಖ್ಯ; ಯಕಾರವೇ ಶಿವಸಾದಾಖ್ಯ, ಓಂಕಾರವೇ ಮಹಾಸಾದಾಖ್ಯ ನೋಡ. ಮತ್ತೆ-ನಕಾರವೇ ಪೀತವರ್ಣ, ಮಃಕಾರವೇ ನೀಲವರ್ಣ, ಶಿಕಾರವೇ ಕುಂಕುಮವರ್ಣ, ವಾಕಾರವೇ ಶ್ವೇತವರ್ಣ, ಯಕಾರವೇ ಸ್ಫಟಿಕವರ್ಣ, ಓಂಕಾರವೇ ಜ್ಯೋತಿರ್ಮಯಸ್ವರೂಪು ನೋಡಾ. ಇಂತಿವು ಮಂತ್ರಮೂರ್ತಿಯ ವರ್ಣಭೇದವೆಂದರಿವುದಯ್ಯ. ಮತ್ತೆ-ನಕಾರವೇ ಸದ್ಯೋಜಾತಮಂತ್ರಮೂರ್ತಿ. ಮಃಕಾರವೇ ವಾಮದೇವಮಂತ್ರಮೂರ್ತಿ. ಶಿಕಾರವೇ ಅಘೋರಮಂತ್ರಮೂರ್ತಿ. ವಾಕಾರವೇ ತತ್ಪುರುಷಮಂತ್ರಮೂರ್ತಿ. ಯಕಾರವೇ ಈಶಾನ್ಯಮಂತ್ರಮೂರ್ತಿ. ಓಂಕಾರವೇ ಮಹಾಮಂತ್ರಮೂರ್ತಿ. ಇಂತಿವು ಮಂತ್ರಮೂರ್ತಿಯ ವದನಭೇದವೆಂದರಿವುದು ನೋಡಾ. ಮತ್ತೆ-ನಕಾರವೇ ಸತ್ತು, ಮಃಕಾರವೇ ಚಿತ್ತು, ಶಿಕಾರವೇ ಆನಂದ ವಾಕಾರವೇ ನಿತ್ಯ, ಯಕಾರವೇ ಪರಿಪೂರ್ಣ, ಓಂಕಾರವೇ ನಿರಂಜನಸ್ವರೂಪವೆಂದರಿವುದಯ್ಯ. ಮತ್ತೆ-ನಕಾರವೇ ಆಚಾರಲಿಂಗ, ಮಃಕಾರವೇ ಗುರುಲಿಂಗ, ಶಿಕಾರವೇ ಶಿವಲಿಂಗ, ವಾಕಾರವೇ ಜಂಗಮಲಿಂಗ, ಯಕಾರವೇ ಪ್ರಸಾದಲಿಂಗ, ಓಂಕಾರವೇ ಮಹಾಲಿಂಗ ಇಂತಿವು ಷಡಕ್ಷರ ಮಂತ್ರಲಿಂಗವೆಂದರಿವುದಯ್ಯ. ಇಂತಿವು ಲಿಂಗಷಡಕ್ಷರವೆಂದು ಹೇಳಲ್ಪಟ್ಟವು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಪ್ರಥಮದಲ್ಲಿ ವಾಙ್ಮನಕ್ಕೆ ಬಾರದ ಸಚ್ಚಿದಾನಂದ ನಿತ್ಯಪರಿಪೂರ್ಣ ಲಕ್ಷಣವನುಳ್ಳ ನಿಃಕಲದೇವರು. ದ್ವಿತೀಯದಲ್ಲಿ `ಪರಂ ಗೂಢಂ ಶರೀರಸ್ಥಂ ಲಿಂಗಕ್ಷೇತ್ರಮನಾದಿವತ್' ಎಂಬ ಪಂಚಸಂಜ್ಞೆಯನ್ನುಳ್ಳ ಮಹಾಲಿಂಗದೇವರು. ತೃತೀಯದಲ್ಲಿ ಕರ್ಮ ಕರ್ತೃ ಮೂರ್ತಿ ಅಮೂರ್ತಿ ಶಿವಸಾದಾಖ್ಯವನುಳ್ಳ ಸದಾಶಿವದೇವರು. ಚತುರ್ಥದಲ್ಲಿ ಭವ ಶರ್ವ ರುದ್ರ ಭೀಮ ಸದಾಶಿವ ಉಗ್ರ ಸೋಮ ಪಶುಪತಿ ಎಂಬ ಎಂಟು ಪ್ರಕಾರವನುಳ್ಳ ಈಶ್ವರದೇವರು. ಪಂಚಮದಲ್ಲಿ ಶರ್ವ ಶಿವ ಮಹಾದೇವರು ನೀಲಕಂಠ ವೃಷಭದ್ವಜ ಈಶಾನ ಶಂಕರ ಭೀಮ ಪಿನಾಕಿ ಚಂದ್ರಶೇಖರ ಕಪರ್ದಿ ವಿರೂಪಾಕ್ಷ ವಾಮದೇವ ಮೃಡ ಭೂತೇಶ ಶೂಲಿ ಸರ್ವಜ್ಞ ಸ್ಥಾಣು ಪಾರ್ವತಿಪ್ರಿಯ ಮಹಾಂಕಾಳ ಮಹಾದೀರ್ಘ ಮಹಾತಾಂಡವ ಗಂಗಾಧರ ಗಣೇಶ್ವರ ಗಜಧ್ವಂಸಿ ಎಂಬ ಇಪ್ಪತ್ತೆ ೈದು ಪ್ರಕಾರವನುಳ್ಳ ಮಾಹೇಶ್ವರದೇವರು. ಷಷ*ಮದಲ್ಲಿ ಶಿವ ಮಾಹೇಶ್ವರ ರುದ್ರ ಶ್ರೀಕಂಠ ಶಂಭು ಈಶ್ವರ ಮಹಾದೇವರು ಪಶುಪತಿ ನೀಲಕಂಠ ವೃಷಭಧ್ವಜ ಪರಮೇಶ್ವರನೆಂಬ ಹನ್ನೊಂದು ಪ್ರಕಾರವನುಳ್ಳ ರುದ್ರದೇವರು. ಸಪ್ತಮದಲ್ಲಿ ಭವ ಮೃಡ ಹರನೆಂಬ ಮೂರು ಪ್ರಕಾರವನುಳ್ಳ ತ್ರಯಾವಯದೇವರು. ಅಷ್ಟಮದಲ್ಲಿ ಭಯಂಕರವನುಳ್ಳ ವಿರಾಟಮೂರ್ತಿದೇವರು. ನವಮದಲ್ಲಿ ಸರ್ವಚೈತನ್ಯಾತ್ಮಕವನುಳ್ಳ ಹಿರಣ್ಯದೇವರು. ದಶಮದಲ್ಲಿ ಸುಷುಪ್ತಾವಸ್ಥೆಯನುಳ್ಳ ಪ್ರಾಜ್ಞದೇವರು. ದ್ವಾದಶದಲ್ಲಿ ಜಾಗ್ರಾವಸ್ಥೆಯನುಳ್ಳ ವಿಶೇಶ್ವರದೇವರು. ಇಂತೀ ನಾಮ ಪರಿಯಾಯಂಗಳನೆಲ್ಲವನು ಬಸವೇಶ್ವರನೆ ಅಲಂಕರಿಸಿ `ಏಕಮೂರ್ತಿಸ್ತ್ರಯೋರ್ಭಾಗಂ' ಎಂಬ ಶ್ರುತಿ ಪ್ರಮಾಣದಿಂದ ಎನ್ನ ಸಾಕಾರ ಮೂರು ಮೂರು ನವವಿಂಶತಿ ನವವಿಂಶತಿ ಸ್ವರೂಪವನೊಳಕೊಂಡು ಎನ್ನ ಬಹಿರಂಗದಲ್ಲಿ ಮೂರ್ತಿಗೊಂಡನಯ್ಯ ಬಸವಣ್ಣ. ಎನ್ನ ನಿರಾಕಾರ ಮೂರು ಮೂರು ವಿಂಶತಿ ವಿಂಶತಿ ಸ್ವರೂಪವನೊಳಕೊಂಡು ಎನ್ನ ಅಂತರಂಗದಲ್ಲಿ ಮೂರ್ತಿಗೊಂಡನಯ್ಯ ಬಸವಣ್ಣ. ನಾಮ ರೂಪು ಕ್ರೀ ಏನೂ ಏನೂ ಇಲ್ಲದ ಸಚ್ಚಿದಾನಂದ ಲಕ್ಷಣವನುಳ್ಳ ಬ್ರಹ್ಮವೇ ಉಭಯಸಂಗದಲ್ಲಿ ಸನ್ನಿಹಿತವಾದನಯ್ಯ ಪ್ರಭುದೇವರು. ಇಂತೀ ಪಿಂಡಾದಿ ಜ್ಞಾನಶೂನ್ಯಾಂತ ಸ್ಥಲ ಕುಳ ಭೇದವನು ಸಿದ್ಧೇಶ್ವರನೆನಗೆ ಅರುಹಿ ತನ್ನ ನಿಜಪದದೊಳಗೆ ಇಂಬಿಟ್ಟುಕೊಂಡ ಕಾರಣ ಪರಂಜ್ಯೋತಿ ಮಹಾಲಿಂಗಗುರು ಸಿದ್ಧಲಿಂಗಪ್ರಭುವಿನಲ್ಲಿ ಸಿದ್ಧೇಶ್ವರನ ಘನವು ಎನಗೆ ವಾರಿಕಲ್ಲ ಪುತ್ಥಳಿಯನಪ್ಪಿಕೊಂಡಂತಾಯಿತ್ತಯ್ಯಾ, ಬೋಳಬಸವೇಶ್ವರ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಗುಮ್ಮಳಾಪುರದ ಸಿದ್ಧಲಿಂಗ
ಸಾಕಾರವಿಡಿದು ಪರಬ್ರಹ್ಮ, ನಿರಾಕಾರವಿಡಿದು ಪರಬ್ರಹ್ಮವೆಂಬಿರಿ. ಪರಬ್ರಹ್ಮವ ನುಡಿವಿರಿ, ಪರಬ್ರಹ್ಮವನರಿದಿಹೆವೆಂಬಿರಿ, ಅರಿಹಿಸಿಹೆವೆಂಬಿರಿ, ಆನೆ ಪರಬ್ರಹ್ಮವೆಂಬಿರಿ, ಪರಬ್ರಹ್ಮವನರಿಯದೆ ನುಡಿವಿರಿ, ಬ್ರಹ್ಮದೊಡಕು ಅರಿದು ಕಂಡಿರಣ್ಣಾ. ಈ ಬ್ರಹ್ಮದೊಡಕಿಂದ ಮುನ್ನೊಮ್ಮೆ ದೇವಜಾತಿಗಳು ಋಷಿಜನಂಗಳು ಬ್ರಹ್ಮನನು, ಪರಬ್ರಹ್ಮವ ಬೆಸಗೊಳಲು ಅಹಂ ಬ್ರಹ್ಮವೆಂದು ತಲೆಯ ಹೋಗಾಡಿಕೊಂಡುದು ಸರ್ವಪುರಾಣಪ್ರಸಿದ್ಧ, ಇನ್ನೂ ತಲೆಯ ಮೋಟು ಕಾಣಬರುತ್ತದೆ. ಬ್ರಹ್ಮನ ಶಿರ ಪರಬ್ರಹ್ಮದ ಕೈಯಲ್ಲಿದೆ. ಆನೆ ಪರಬ್ರಹ್ಮವೆಂದು ಸನತ್ಕುಮಾರ ಒಟ್ಟೆಯಾದುದು ಸ್ಕಂದ ಪುರಾಣಪ್ರಸಿದ್ಧ. ಅವರಂತಾಗದೆ, ಪರಬ್ರಹ್ಮದ ನೆಲೆಯ ಕೇಳಿರಣ್ಣಾ: ಲಿಂಗವೇ ಪರಬ್ರಹ್ಮವೆಂದು ಅಥರ್ವಣ ಹೇಳುತ್ತದೆ, `ಏಕೋ ರುದ್ರಸ್ಸ ಈಶಾನಃ ಸ ಭಗವಾನ್ ಸ ಮಹೇಶ್ವರೋ ಮಹಾದೇವ ಇತಿ ಈ ಪ್ರಕಾರದಲೆ ಯಜುರ್ವೇದ ಹೇಳುತ್ತಿದ್ದಿತ್ತು. ಋತಂ ಸತ್ಯಂ ಪರಂ ಬ್ರಹ್ಮ ಪುರುಷಂ ಕೃಷ್ಣ ಪಿಂಗಲಂ ಊಧ್ರ್ವರೇತಂ ವಿರೂಪಾಕ್ಷಂ ವಿಶ್ವರೂಪಾಯ ವೈ ನಮಃ ಈ ಪ್ರಕಾರದಲ್ಲಿ ಶಿವಸಂಕಲ್ಪೋಪನಿಷತ್ ಹೇಳುತ್ತಿದೆ. ಋತಂ ಸತ್ಯಂ ಪರಂ ಬ್ರಹ್ಮಪುರುಷಂ ಕೃಷ್ಣ ಪಿಂಗಲಂ ಊಧ್ರ್ವರೇತಂ ವಿರೂಪಾಕ್ಷಂ ತನ್ಮೇ ಮನಶ್ಶಿವಸಂಕಲ್ಪಮಸ್ತು ಎಂದುದಾಗಿ ಲಿಂಗವೇ ಪರಬ್ರಹ್ಮ. ಮುನ್ನೊಮ್ಮೆ ಹರಿಬ್ರಹ್ಮರ ಸಂವಾದದಲ್ಲಿ ಉರಿಲಿಂಗ ಉದ್ಭವವಾದಲ್ಲಿ ಹರಿಬ್ರಹ್ಮಾದಿಗಳು ಸ್ತೋತ್ರವ ಮಾಡಿದರು. ಲೈಂಗ್ಯ ಪುರಾಣದಲ್ಲಿ, ಜ್ವಾಲಾಮಾಲಾವೃತಾಂಗಾಯ ಜ್ವಲನಸ್ತಂಭರೂಪಿಣೇ ನಮಶ್ಶಿವಾಯ ಶಾಂತಾಯ ಬ್ರಹ್ಮಣೇ ಲಿಂಗಮೂರ್ತಯೇ ಇದು ಮುನ್ನೊಮ್ಮೆ ಬ್ರಹ್ಮಕಾರಣ ಲಿಂಗವೇ ಪರಬ್ರಹ್ಮ, ಶಿವನೇ ಪರಬ್ರಹ್ಮವೆಂದು ಮತ್ತೆ ಯಜುರ್ವೇದ ನುಡಿಯುತ್ತಿದೆ. ಈಶಾನಸ್ಸರ್ವವಿದ್ಯಾನಾಮೀಶ್ವರಸ್ಸರ್ವಭೂತಾನಾಂ ಬ್ರಹ್ಮಾಧಿಪತಿ ಬ್ರಹ್ಮಣೋ[s]ಧಿಪತಿಬ್ರ್ರಹ್ಮಾ ಶಿವೋ ಮೇ[s]ಸ್ತು ಸದಾಶಿವೋಂ ಆದಿತ್ಯ ಪುರಾಣದಲೂ ಮಹಾಪುರುಷ ಆದಿತ್ಯ ಹೇಳುತ್ತಿದ್ದಾನೆ: ಪರಬ್ರಹ್ಮಾ ಚ ಈಶಾನ ಏಕೋ ರುದ್ರಸ್ಸ ಏವ ಚ ಭಗವಾನ್ ಮಹೇಶ್ವರಸ್ವಾಕ್ಷಾನ್ಮಹಾದೇವೋ ನ ಸಂಶಯಃ ಯಸ್ಯಾಂತಸ್ಥಾನಿ ಭೂತಾನಿ ಯೇನೇದಂ ಧಾರ್ಯತೇ ಜಗತ್ ಬ್ರಹ್ಮೇತಿ ಯಂ ಜಹುರ್ವೇದಾಃ ಸರ್ವೇ ತಂ ಶರಣಂ ವ್ರಜೇತ್ ಕೂರ್ಮ ಈಶ್ವರಗೀತೆಯಲ್ಲಿ, ಆವ್ಯಕ್ತಂ ಕಾರಣಂ ಪ್ರಾಹುರಾನಂದಂ ಜ್ಯೋತಿರಕ್ಷರಂ ಅಹಮೇವ ಪರಬ್ರಹ್ಮ ಮತ್ತೋ[s]ನ್ಯಂ ಹಿ ನ ವಿದ್ಯತೇ ಅಹಂ ತತ್ಪರಮಂ ಬ್ರಹ್ಮ ಪರಮಾತ್ಮಾ ಸನಾತನಃ ಮಹಾಪುರುಷ ಮನು ಮಾನವಪುರಾಣದಲ್ಲೂ ಹೇಳಿದನು: ಋತಂ ಸತ್ಯಂ ಪರಬ್ರಹ್ಮಪುರುಷಂ ಸೋಮವೀಶ್ವರಂ ಊಧ್ರ್ವರೇತಂ ಸಮುತ್ಪತ್ತಿಸ್ಥಿತಿಸಂಹಾರಕಾರಣಂ ವಿಶ್ವರೂಪಂ ವಿರೂಪಾಕ್ಷಂ ಚಂದ್ರಮೌಳಿಂ ಘೃಣಾನಿಧಿಂ ಹರಣ್ಯಬಾಹುಮದ್ವಂದ್ವಂ ಹಿರಣ್ಯಪತಿಮೀಶ್ವರಂ ಅಂಬಿಕಾಯಾಃ ಪತಿಂ ಸಾಕ್ಷಾದುಮಾಯಾಃ ಪತಿಮಕ್ರಿಯಂ ಪರತತ್ವಂ ಸಮಾಖ್ಯಾತಂ ಶಿವಂ ಧ್ಯಾಯಂತಿ ಸಂತತಂ ತೈತ್ತಿರೀಯ ಶ್ರುತಿ, `ಸದ್ವಿಪ್ರಾಹಿ..... ಎಂದುದಾಗಿ, ಬಹಳ ಬಹಳ ಚಕ್ಷು, ಬಹಳ ಬಹಳ ಮುಖನು, ಬಹಳ ಬಹಳ ಬಾಹು, ಬಹಳ ಪಾದನು, ಇಂತಹ ಬಹಳ ಲಿಂಗವೆ, ಬ್ರಹ್ಮ ಕಾಣಿರಣ್ಣಾ. `ಅಣೋರಣೀಯಾನ್ ಮಹತೋ ಮಹೀಯಾನ್' ಎಂದುದಾಗಿ, ಬಹಳಕ್ಕೆ ಬಹಳ, ಮಹಾಬಹಳ ಲಿಂಗವೆ ಬಹಳಬ್ರಹ್ಮ ಕಾಣಿರಣ್ಣಾ. ಯತೋ ವಾಚೋ ನಿವರ್ತಂತೇ ಅಪ್ರಾಪ್ಯ ಮನಸಾ ಸಹ ನಾದಬಿಂದುಕಳಾತೀತಂ ಗುರುಣಾ ಲಿಂಗಮುದ್ಭವಂ ಎಂದುದಾಗಿ, ಮನೋವಾಕ್ಕಾಯ ನಾದಬಿಂದುಕಳೆಗೆ ಅತೀತನಾದ ಮಹಾಬಹಳ ಲಿಂಗವನು ಶ್ರೀಗುರು ನಿರೂಪಿಸಿ ಕೊಟ್ಟನಾಗಿ ಈ ಲಿಂಗವೇ ಪರಬ್ರಹ್ಮ ಕಾಣಿರಣ್ಣಾ. ಇದು ಕಾರಣ, ಪರಬ್ರಹ್ಮಲಿಂಗವೆಂದು ಧ್ಯಾನಿಸಿ ಪೂಜಿಸಿ ಮಹಾನಂದ ಪರಮುಕ್ತಿಯನೈದಿದರು ಪೂರ್ವದಲ್ಲಿ ದೇವಜಾತಿಗಳು ಹಲಬರು, ಇದು ಪುರಾಣ ಪ್ರಸಿದ್ಧ. ಕಲಿಯುಗದಲ್ಲಿ ದೃಷ್ಟ: ಬಸವರಾಜದೇವರು ಮೊದಲಾದ ಅಸಂಖ್ಯಾತ ಮಾಹೇಶ್ವರರು ಇದನರಿದು ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಲಿಂಗವೆ ಪರಬ್ರಹ್ಮವೆಂದು ಅರಿದು ಧ್ಯಾನಿಸಿ ಪೂಜಿಸಿ ಮಹದಾನಂದಮುಕ್ತಿಯನೈದಿದರಣ್ಣಾ.
--------------
ಉರಿಲಿಂಗಪೆದ್ದಿ
ಇಂತು ಪಂಚಪ್ರಣವ ನಿರೂಪಣಾನಂತರದಲ್ಲಿ ಬ್ರಹ್ಮಭೇದವಿಧಿಯಂ ಪೇಳ್ವೆನೆಂತೆನೆ- ಬ್ರಹ್ಮವೆಂದೊಡೆ ದೊಡ್ಡಿತ್ತಹತನದಿಂದೆಯುಂ ಪೂರ್ಣವಹಣದಿಂದೆಯುಂ `ಸರ್ವಂ ಖಲ್ವಿದಂ ಬ್ರಹ್ಮ'ವೆಂಬ ವಚನಾರ್ಥ ಸಾರ್ಥಕವಾಗಿಯಾ ಆದ್ವಿತೀಯ ಶಿವತತ್ವ ಬ್ರಹ್ಮವೆ ಪಂಚಪ್ರಕಾರವಾದವಾ ಪಂಚಬ್ರಹ್ಮವೊಂದೊಂದೈದೈದಾಗುತ್ತಿರ್ಪತ್ತೈದಾದುದೆಂತೆನೆ ಮೂರ್ತಿಬ್ರಹ್ಮ, ತತ್ವಬ್ರಹ್ಮ, ಭೂತಬ್ರಹ್ಮ ಪಿಂಡಬ್ರಹ್ಮ, ಕಲಾಬ್ರಹ್ಮಗಳೆಂಬೀವೈದುಂ ಪಂಚಬ್ರಹ್ಮಂಗಳಿವಕ್ಕೆ ವಿವರವೆಂತೆನೆ ಅಕಾರೋಕಾರಮಕಾರಾಧಿದೇವತೆಗಳಾದ ಸೃಷ್ಟಿಸ್ಥಿತ್ಯಂತ್ಯಕಾರಿಗಳಾದ ಬ್ರಹ್ಮ ವಿಷ್ಣು ರುದ್ರರುಂ ಸಾಕಲ್ಯಾದಿ ಪಂಚಪ್ರಣವಾಂಗರೂಪ ಸಮಸ್ತಾಕ್ಷರಂಗಳು- ಮಿವೆಲ್ಲವಾದ ಬ್ರಹ್ಮ ಸಂಜ್ಞಿತವಾದ ಹಕಾರಾಂತಸ್ಥವಾದುದರಿಂದೀ ಸರ್ವವುಂ ಮೂರ್ತಿಬ್ರಹ್ಮವೆನಿಕುಂ. ಮತ್ತವಿೂ ತ್ರಿವರ್ಣಸಂಭೂತವಾದ ಸಮಸ್ತ ವರ್ಣತತ್ವಂಗಳ್ಗೆಯು ಶಿವತತ್ವವೆ ಪ್ರಭುವಾದುದರಿಂ ಶಿವಬೀಜ ಸಂಜ್ಞಿತವಾದ ಹ ಎಂಬ ಶುದ್ಧ ಪ್ರಸಾದಾಧ್ಯಾತ್ಮಪ್ರಸಾದಾಂತವಾದ ಪಂಚಪ್ರಸಾದಮಂತ್ರವೆ ತತ್ವಬ್ರಹ್ಮವೆನಿಕುಂ. ಬಳಿಕ್ಕಂ ಮಾಂಸ ಸಂಜ್ಞಿತವಾದ ಲಕಾರವೆ ಪೃಥ್ವೀಭೂತ ಬೀಜಂ. ಮೇದಸ್ಸಂಜ್ಞಿತವಾದ ವಕಾರವೆ ಜಲಭೂತ ಬೀಜಂ. ಷಷ* ್ಯ ಸಂಜ್ಞಿತವಾದ ರಕಾರವೆ ತೇಜೋಭೂತ ಬೀಜಂ. ಸಪ್ತಮಸಂಜ್ಞಿತವಾದ ಹಕಾರವೆ ಆಕಾಶಭೂತ ಬೀಜವೀ ಪ್ರಕಾರದಿಂ ಪಂಚಭೂತಾತ್ಮಕವಾದುದೆ ಭೂತಬ್ರಹ್ಮವೆನಿಕುಂ. ಮರಲ್ದುಂ, ಪ್ರಕೃತಿಸಂಜ್ಞಿತವಾದ ಅ ಇ ಉ ಋ ಒ ಎ ಒಯೆಂಬೀ ಪ್ರಕೃತಿಗಳಲ್ಲಿ ಋ ಒ ದ್ವಯಂಮಂ ಬಿಟ್ಟುಳಿದ ಅ ಇ ಉ ಎ ಒ ಯೆಂಬೀಯೈದಕ್ಕರಮಂ ಪಂಚಸಂಜ್ಞಿತವಾದ ಹಕಾರದೊಡನೆ ಕೂಡೆ, ಬಿಂದುನಾದ ಸೌಂಜ್ಞಿತವಾದ ಸೊನ್ನೆಯೊಳ್ಬೆಸೆ, ಹ್ರಂ ಹ್ರೀಂ ಹ್ರುಂ ಹ್ರೇಂ ಹ್ರೌಂ ಎಂಬೀ ಬ್ರಹ್ಮಬೀಜಂಗಳೈದಂ ಪೇಳ್ದು, ಮತ್ತವಿೂ ಬೀಜಗಳೊಳ್ವಾಚಕವಾದ ಪಂಚಬ್ರಹ್ಮಂಗಳಂ ಪೇಳ್ವೆನೆಂತೆನೆ- ಸದ್ಯೋಜಾತ ವಾಮದೇವಾಘೋರ ತತ್ಪುರುಷೇಶಾನಂಗಳೆಂಬಿವೆ ಪಂಚಬ್ರಹ್ಮಂಗಳಿವಕ್ಕೆ ಪ್ರಣವವಾದಿಯಾಗಿ ನಮಃ ಪದಂ ಕಡೆಯಾಗಿ ಚತುಥ್ರ್ಯಂತಮಂ ಪ್ರಯೋಗಿಸೆ ಆ ಪಂಚಬ್ರಹ್ಮ ಮಂತ್ರೋದ್ಧರಣೆಯಾದುದೆಂತನೆ- ಓಂ ಹ್ರಂ ಸದ್ಯೋಜಾತಾಯ ನಮಃ ಓಂ ಹ್ರೀಂ ವಾಮದೇವಾಯ ನಮಃ ಓಂ ಹ್ರುಂ ಅಘೋರಾಯ ನಮಃ ಓಂ ಹ್ರೇಂ ತತ್ಪುರುಷಾಯ ನಮಃ ಓಂ ಹ್ರೌಂ ಈಶಾನಾಯ ನಮಃ ಎಂದು ಶಿವಬೀಜದೋಳ್ವೀವ ಪ್ರಕೃತಿ ಪಂಚಾಕ್ಷರಂಗಳಂ ಕೂಡಿಸಿ ಸಬಿಂದುವಾಗುಚ್ಚರಿಸೆ, ಪಂಚಬ್ರಹ್ಮವೆನಿಸಿದ ಕರ್ಮಸಾದಾಖ್ಯ ಸ್ವರೂಪಮೆ ಪಿಂಡಬ್ರಹ್ಮವೆನಿಕುಂ. ಮತ್ತಂ, ಪಿಂಡಬ್ರಹ್ಮವೆಂಬ ಪಂಚಬ್ರಹ್ಮ ನಿರೂಪಣಾನಂತರದಲ್ಲಿಯಾ ಪಂಚಬ್ರಹ್ಮಮಂತ್ರಕ್ಕೆ ಮೂವತ್ತೆಂಟು ಕಳೆಗಳುಂಟದೆಂತೆನೆ- ಈಶಾನ ತತ್ಪುರುಷಾಘೋರ ವಾಮದೇವ ಸದ್ಯೋಜಾತಂಗಳಿವಕ್ಕೆ ವಿವರಂ ಈಶಾನಕ್ಕೆದು ಕಲೆ. ತತ್ಪುರುಷಕ್ಕೆ ನಾಲ್ಕು ಕಲೆ. ಅಘೋರಕ್ಕೆಂಟು ಕಲೆ. ವಾಮದೇವಕ್ಕೆ ಪದಿರ್ಮೂಕಲೆ. ಸದ್ಯೋಜಾತಕ್ಕೆಂಟು ಕಲೆ. ಅಂತು, ಮೂವತ್ತೆಂಟು ಕಲೆ. ಇವಕ್ಕೆ ವಿವರಂ, ಮೊದಲೀಶಾನಕ್ಕೆ- `ಈಶಾನಸ್ಸರ್ವ ವಿದ್ಯಾನಾಂ' ಇದು ಮೊದಲ ಕಲೆ. `ಈಶಾನಾಸ್ಸರ್ವ ಭೂತಾನಾಂ' ಇದೆರಡನೆಯ ಕಲೆ. `ಬ್ರಹ್ಮಣಾಧಿಪತಿ ಬ್ರಹ್ಮಣಾಧಿಪತಿ ಬ್ರಹ್ಮ' ಇದು ಮೂರನೆಯ ಕಲೆ. `ಶಿವೋಮೇಸ್ತು' ಇದು ನಾಲ್ಕನೆಯ ಕಲೆ. `ಸದಾ ಶಿವೋಂ' ಇದು ಐದನೆಯ ಕಲೆ. ತತ್ಪುರುಷಕ್ಕೆ- `ತತ್ಪುರುಷಾಯ ವಿದ್ಮಹೆ' ಇದು ಮೊದಲ ಕಲೆ. `ಮಹಾದೇವಾಯ ಧೀಮಹಿತನ್ನೋ' ಇದೆರಡನೆಯ ಕಲೆ. `ರುದ್ರಃ' ಇದು ಮೂರನೆಯ ಕಲೆ. `ಪ್ರಚೋದಯಾತ್' ಇದು ನಾಲ್ಕನೆಯ ಕಲೆ. ಅಘೋರಕ್ಕೆ `ಅಘೋರೇಭ್ಯಃ' ಇದು ಮೊದಲ ಕಲೆ. `ಘೋರೇಭ್ಯಃ' ಇದು ಎರಡನೆಯ ಕಲೆ. `ಘೋರಘೋರ' ಇದು ಮೂರನೆಯ ಕಲೆ. `ತರೇಭ್ಯ' ಇದು ನಾಲ್ಕನೆಯ ಕಲೆ. `ಸರ್ವತಃ' ಇದೈದನೆಯ ಕಲೆ. `ಸರ್ವ' ಇದಾರನೆಯ ಕಲೆ. `ಸರ್ವೇಭ್ಯೇ ನಮಸ್ತೇಸ್ತು' ಇದೇಳನೆಯ ಕಲೆ. `ರುದ್ರ ರೂಪೇಭ್ಯಃ' ಇದೆಂಟನೆಯ ಕಲೆ. ವಾಮದೇವಕ್ಕೆ- `ವಾಮದೇವಾಯ' ಇದು ಮೊದಲ ಕಲೆ. `ಜೇಷಾ*ಯ' ಇದೆರಡನೆಯ ಕಲೆ. `ರುದ್ರಾಯ ನಮಃ' ಇದು ಮೂರನೆಯ ಕಲೆ. `ಕಲಾಯ' ಇದು ನಾಲ್ಕನೆಯ ಕಲೆ. `ಕಲಾ' ಇದೈದನೆಯ ಕಲೆ. `ವಿಕರಣಾಯ ನಮಃ' ಇದಾರನೆಯ ಕಲೆ. `ಬಲಂ' ಇದೇಳನೆಯ ಕಲೆ. `ವಿಕರಣಾಯ' ಇದೆಂಟನೆಯ ಕಲೆ. `ಬಲಂ' ಇದೊಂಬತ್ತನೆಯ ಕಲೆ. `ಪ್ರಮಥನಾಥಾಯ' ಇದು ಪತ್ತನೆಯ ಕಲೆ. `ಸರ್ವಭೂತ ದಮನಾಯ ನಮಃ' ಇದು ಪನ್ನೊಂದನೆಯ ಕಲೆ `ಮನ' ಇದು ಪನ್ನೆರಡನೆಯ ಕಲೆ. `ಉನ್ಮನಾಯ' ಇದು ಪದಿಮೂರನೆಯ ಕಲೆ. ಸದ್ಯೋಜಾತಕ್ಕೆ- `ಸದ್ಯೋಜಾತಂ ಪ್ರಪದ್ಯಾಮಿ' ಇದು ಮೊದಲ ಕಲೆ. `ಸದ್ಯೋಜಾತಾಯವೈ ನಮಃ' ಇದೆರಡನೆಯ ಕಲೆ. `ಭವೆ' ಇದು ಮೂರನೆಯ ಕಲೆ. `ಭವೇ' ಇದು ನಾಲ್ಕನೆಯ ಕಲೆ. `ನಾತಿಭವೆ' ಇದೈದನೆಯ ಕಲೆ. `ಭವಸ್ವ ಮಾಂ' ಇದಾರನೆಯ ಕಲೆ. `ಭವ' ಇದೇಳನೆಯ ಕಲೆ. `ಉದ್ಭವ' ಇದೆಂಟನೆಯ ಕಲೆ. ಇದು ಕಲಾಬ್ರಹ್ಮವಿಂತು ಮೂರ್ತಿಬ್ರಹ್ಮ ತತ್ವಬ್ರಹ್ಮ ಭೂತಬ್ರಹ್ಮ ಪಿಂಡಬ್ರಹ್ಮ ಕಲಾಬ್ರಹ್ಮಗಳೆಂಬ ಪಂಚಬ್ರಹ್ಮಗಳಂ ನಿರವಿಸಿದೆಯಯ್ಯಾ, ಪರಮ ಶಿವಲಿಂಗಯ್ಯ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಮತ್ತಂ, ಆ ಪ್ರಣವದ ದರ್ಪಣಾಕಾರದಲ್ಲಿ ಈಶಾನ್ಯಮುಖ ಉತ್ಪತ್ಯವಾಯಿತ್ತು. ಆ ಪ್ರಣವದ ಅರ್ಧಚಂದ್ರಕದಲ್ಲಿ ತತ್ಪುರುಷಮುಖ ಉತ್ಪತ್ಯವಾಯಿತ್ತು. ಆ ಪ್ರಣವದ ಕುಂಡಲಾಕಾರದಲ್ಲಿ ಅಘೋರಮುಖ ಉತ್ಪತ್ಯವಾಯಿತ್ತು. ಆ ಪ್ರಣವದ ದಂಡಸ್ವರೂಪದಲ್ಲಿ ವಾಮದೇವಮುಖ ಉತ್ಪತ್ಯವಾಯಿತ್ತು. ಆ ಪ್ರಣವದ ತಾರಕಸ್ವರೂಪದಲ್ಲಿ ಸದ್ಯೋಜಾತಮುಖ ಉತ್ಪತ್ಯವಾಯಿತ್ತು ನೋಡಾ. ಇದಕ್ಕೆ ಮಹಾವಾತುಲಾಗಮೇ : ``ಓಂಕಾರ ತಾರಕಾರೂಪೇ ಸದ್ಯೋಜಾತಂ ಚ ಜಾಯತೇ | ಓಂಕಾರ ದಂಡರೂಪೇ ಚ ವಾಮದೇವಂ ಚ ಜಾಯತೇ || ಓಂಕಾರ ಕುಂಡಲಾಕಾರೇ ಅಘೋರಂ ಚಾಪಿ ಜಾಯತೇ | ಓಂಕಾರ ಅರ್ಧಚಂದ್ರೇ ಚ ತತ್ಪುರುಷಂ ಚ ಜಾಯತೇ || ಓಂಕಾರ ದರ್ಪಣಾಕಾರೇ ಈಶಾನಂ ಚ ಜಾಯತೇ | ಇತಿ ಪಂಚಮುಖಂ ದೇವೀ ಸ್ಥಾನಸ್ಥಾನೇಷು ಜಾಯತೇ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಲೋಕದ ನಚ್ಚಮಚ್ಚನೆ ನೀಗಿ ನಿಚ್ಚಟನಾಗಿ ಜ್ಞಾನ ಕ್ರೀಗಳಿಂದಾಚರಿಸಿ ಅಂಗಲಿಂಗದ ಸಂಬಂಧಿಗಳಾದ ಶಿವಲಿಂಗಮೋಹಿಗಳು ನೀವು ಕೇಳಿರಯ್ಯ. ಶರಣರು ಮುಕ್ತಿಪುರಕ್ಕೆ ಹೋಗುವ ಬಟ್ಟೆಯ ಬೆಡಗು ಬಿನ್ನಾಣದ ಪರಿಯ. ಆ ಮುಕ್ತಿಪುರಕ್ಕೆ ಹೋಗುವ ಹಾದಿಯಲ್ಲಿ ಒಂದು ಪಂಚವರ್ಣದ ಕಣ್ಣು ಮನಕ್ಕೆ ಮುಟ್ಟದ ಮಹಾಪಟ್ಟಣವೊಂದೇ. ಆ ಪಟ್ಟಣವ ಕಟ್ಟಿದುದು ಮೊದಲಾಗಿ ಊರು ಹಾಳಾಗಿಪ್ಪುದು. ಆ ಪಟ್ಟಣದ ನಡುವೆ ಹೋಗುತಿಪ್ಪ ಹಾದಿಯಲ್ಲಿ ಅಹಂಕಾರ ಮಮಕಾರಂಗಳೆಂಬ ಎರಡು ಪಟ್ಟಣಂಗಳು ತುಂಬಿ ತುಳುಕುತ್ತಿವೆ. ಆ ಎರಡು ಪಟ್ಟಣಕ್ಕೆ ಹೋದ ಹಾದಿ ಹೆಬ್ಬಟ್ಟೆಗಳಾಗಿಪ್ಪವು. ಆ ಎರಡು ಪಟ್ಟಣದ ವಿದಿಕ್ಕಿನಲ್ಲಿ ಒಂದು ಭಕ್ತಿಪುರವಿದೆ. ಆ ಭಕ್ತಿಪುರಕ್ಕೆ ಹಾದಿಯಿಲ್ಲ. ಆ ಭಕ್ತಿಪುರಕ್ಕೆ ಹೋದಲ್ಲದೆ ಮುಂದಣ ಮುಕ್ತಿಪುರದ ಬಟ್ಟೆಯ ಕಾಣಬಾರದು. ಆ ಮುಂದಣ ಪಯಣಗತಿಯ ಸಂಚುವರಿಯುವ ಸಂಬಂಧಮಂ ಶರಣ ಮನದಲ್ಲಿ ತಿಳಿದು ಆ ಹೆಬ್ಬಟ್ಟೆಗಳಲ್ಲಿ ಹೋದರೆ ಎಂಬತ್ತುನಾಲ್ಕುಲಕ್ಷ ಪ್ರಕಾರದ ಪರಮಂಡಲದಲ್ಲಿ ಸುಳಿವುದು ತಪ್ಪದೆಂದು ಅದಕ್ಕೆ ಹೇಹಮಂ ಮಾಡಿ ತಮ್ಮವರು ಹೋದ ನಸುದೋಯಲ ಬೆಂಬಳಿವಿಡಿದು ಹೋಗಿ ಭಕ್ತಿಪುರಮಂ ಕಂಡು ಆ ಭಕ್ತಿಪುರದ ನಡುವೆ ಹೋಗುತಿಪ್ಪ ಹಾದಿಯಲ್ಲಿ ಹೆಬ್ಬುಲಿ ಕರಡಿ ಕಳ್ಳ ರಕ್ಕಸಿ ಕರಿಘಟೆಯಿಪ್ಪ ಮಹಾಸರೋವರದ ಅರಣ್ಯವಿದೆ. ಆ ಸರೋವರದ ಮಧ್ಯದಲ್ಲಿ ಎಂಟುಕಲಶದ ಚೌಕಾಮಂಟಪದ ಸುವರ್ಣದ ದೇಗುಲವಿದೆ. ಆ ದೇಗುಲದಲ್ಲಿ ಮುಕ್ತಿರಾಜ್ಯಕ್ಕೆ ಪಟ್ಟುವ ಕಟ್ಟುವ ಸಮರ್ಥಿಕೆಯನುಳ್ಳ ಜಂಗಮಲಿಂಗವಿದೆ. ಆ ಜಂಗಮಲಿಂಗಮಂ ಶರಣ ಕಂಡು ಹರುಷಗೊಂಡು ಭಾವದಲ್ಲಿಯೇ ಷೋಡಶೋಪಚಾರ ಅಷ್ಟವಿಧಾರ್ಚನೆಗಳಿಂದ ಪೂಜೆಯಂಮಾಡಿ ತನ್ನ ಮನದಭೀಷ್ಟೆಯಂ ನೆನೆದಂತೆ ಮನದಲ್ಲಿ ಬೇಡಿ ದೇಹ ಮನ ಪ್ರಾಣಕುಳ್ಳ ಸಮಸ್ತ ಕರಣಾದಿ ಗುಣಗಳೆಲ್ಲಮಂ ಸುಟ್ಟು ಬೊಟ್ಟಿಕ್ಕಿ ನಿರ್ಮಲ ಸ್ವರೂಪನಾಗಿ ಅಲ್ಲಿಂದ ಮುಂದೆ ನಡೆವುತಿಪ್ಪಾಗ ಊಧ್ರ್ವದಿಕ್ಕಿನ ಆಕಾಶದಲ್ಲಿ ಅನೇಕ ಚೋದ್ಯವನೊಳಕೊಂಡಿಪ್ಪ ತ್ರಿಪುರಮಂ ಕಂಡು ಆ ತ್ರಿಪುರವ ಮೇಲೆ ಬ್ರಹ್ಮರಂಧ್ರವೆಂಬ ಕೈಲಾಸದ ಕಡೆಯ ಬಾಗಿಲೊಳಿಪ್ಪ ಐಕ್ಯಸ್ಥಲವೆನಿಸುವ ಆರುನೆಲೆಯ ಮಾಣಿಕ್ಯವರ್ಣದ ಉಪ್ಪರಿಗೆ ತಳಮಂ ಕಂಡು ಪತಿಯಿದ್ದ ಮನೆಯ ಬಾಗಿಲಂ ಸತಿ ಸಾರುವಂತೆ ಆ ಶರಣ ಆ ಉಪ್ಪರಿಗೆಯ ಬಾಗಿಲಂ ಸಾರೆ ಆ ಬಾಗಿಲಿನಲ್ಲಿ ಡಾಕಿನಿ ಶಾಕಿನಿ ರಾಕಿನಿ ಲಾಕಿನಿ ಕಾಕಿನಿ ಹಾಕಿನಿಯರೆಂಬ ಷಡ್ವಿಧಶಕ್ತಿಗಳಿಗೆ ಆದಿನಾಯಕಿಯಾಗಿಪ್ಪಳು, ಊಧ್ರ್ವಕುಂಡಲಿನಿಯೆಂಬ ಜ್ಞಾನಶಕ್ತಿ. ಆ ಶಕ್ತಿ ಆ ಬಾಗಿಲಿಗೆ ದ್ವಾರಪಾಲಕಿಯಾಗಿಪ್ಪಳು. ಅವಳು ಅಂಗರ ತಡೆವಳು ನಿರಂಗರ ಬಿಡುವಳೆಂಬುದ ಶರಣ ತನ್ನ ಮನದಲ್ಲಿ ತಾನೆ ತಿಳಿದು ಅಲ್ಲಿಪ್ಪ ಮಹಾಲಿಂಗಮಂ ಶರಣ ಮಂತ್ರಮಾಲೆಯಂ ಮಾಡಿ ಮನದಲ್ಲಿ ಧರಿಸಿ ಸೋಮ ಸೂರ್ಯರ ಕಲಾಪಮಂ ನಿಲಿಸಿ ಕುಂಭಮಂ ಇಂಬುಗೊಳಿಸಿ ರೆುsುೀಂ ರೆುsುೀಂ ಎಂದು ರೆುsುೀಂಕರಿಸುತಿಪ್ಪ ಪೆಣ್ದುಂಬಿಯ ನಾದಮಂ ಚಿಣಿಮಿಣಿ ಎಂದು ಸಣ್ಣರಾಗದಿಂದ ಮನವ ಸೋಂಕುತಿಪ್ಪ ವೀಣಾನಾದಮಂ ಲಿಂಗ ಲಿಂಗವೆಂದು ಕರೆವುತಿಪ್ಪ ಘಂಟಾನಾದಮಂ ಢಮ್ಮ ಢಮ್ಮ ಎನುತಿಪ್ಪ ಪೂರಿತವಾದ ಭೇರಿನಾದಮಂ ಚಿಟಿಲು ಪಿಟಿಲು ಧಿಗಿಲು ಭುಗಿಲೆನುತಿಪ್ಪ ಮೇಘನಾದಮಂ ಓಂ ಓಂ ಎಂದು ಎಲ್ಲಿಯೂ ಎಡೆವಿಡದೆ ಉಲಿವುತಿಪ್ಪ ಪ್ರಣವನಾದಮಂ ಓಂ ಹ್ರಾಂ ಹ್ರೀಂ ಹ್ರೂಂ ಹ್ರೇಂ ಹ್ರೆ ೈಂ ಹ್ರೌಂ ಹ್ರಂ ಹ್ರಃ ಎಂದು ಬೆಳಗ ಬೀರುತಿಪ್ಪ ದಿವ್ಯನಾದಮಂ ಅರಣ್ಯ ಘೋಳಿಡುವಂತೆ ಹೂಂಕರಿಸುತಿಪ್ಪ ಸಿಂಹನಾದಮಂ ಈ ಪ್ರಕಾರದ ನಾದಂಗಳಂ ಶರಣ ಕೇಳಿ ಮನದಣಿದು ಹರುಷಂ ಮಿಕ್ಕು ಆ ಬಾಗಿಲು ದಾಂಟಿ ಪಶ್ಚಿಮ ದಿಕ್ಕಿಗೆ ಮುಖವಾಗಲೊಡನೆ ಚೌಕಮಧ್ಯದಲ್ಲಿ ವಜ್ರ ವೈಡೂರ್ಯ ಪುಷ್ಯರಾಗ ಗೋಮೇಧಿಕ ಇಂತಿವರೊಳಗಾದ ನವರತ್ನಂಗಳ ಕಂಭ ಬೋದಿಗೆ ಹಲಗೆಗಳಿಂದ ಅನುಗೈದು ತೀರಿಸಿದ ಮಹಾ ಶ್ರೀ ಗುರುವಿನ ಒಡ್ಡೋಲಗದ ಹಜಾರದ ಪ್ರಭೆಯು ಆಕಾಶವನಲೆವುತಿಪ್ಪುದಂ ಕಂಡು ಬಹಿರಾವರಣವ ಸೇರಿಪ್ಪ ಪ್ರಾಕಾರದ ಗೋಡೆಯ ಎರಡು ಹದಿನಾರು ಗೊತ್ತುಗಳಲ್ಲಿ ಈಶಾನ ಪರ್ಜನ್ಯ ಜಯಂತರೊಳಗಾದ ಮೂವತ್ತೆರಡು ತಂಡದ ಅನಂತ [ವಾ]ಸ್ತುದೇವತೆಗಳ ಕಾವಲ ಅತ್ಯುಗ್ರವಂ ಕಂಡು ಶರಣರ್ಗೆ ತಡೆಹಿಲ್ಲವೆಂಬುದಂ ತನ್ನ ಮನಜ್ಞಾನದಿಂದವೇ ಅರಿದು ಕಾವಲಾಗಿಪ್ಪ [ವಾ]ಸ್ತುದೇವತೆಗಳ ಕೃಪಾದೃಷ್ಟಿಯಿಂದ ಸಂತೈಸಿ ಮುಕ್ತಿಪುರಕ್ಕೆ ಮೂಲ ಸೂತ್ರವಾದ ಬ್ರಹ್ಮರಂಧ್ರದ ಪೂರ್ವ ದಿಕ್ಕಿನ ಚಂದ್ರಮಂಡಲದಲ್ಲಿಪ್ಪ ಬಾಗಿಲ ಬೀಗಮಂ ತೆಗೆದು ಶರಣನು ಒಳಹೊಗಲೊಡನೆ ಬಹಿರಾವರಣದ ವೀಥಿ ಓಲಗದೊಳಿಪ್ಪ ಹರಿ ಸುರ ಬ್ರಹ್ಮಾದಿ ದೇವತೆಗಳು ಮನು ಮುನಿ ಗರುಡ ಗಂಧರ್ವ ಇಂದ್ರ ಚಂದ್ರರೊಳಗಾದ ಅನಂತರೆಲ್ಲರು ಬೆದರಿ ಕೆಲಸಾರೆ ಸೋಮವೀಥಿಯೊಳಿಪ್ಪ ಅನಂತರುದ್ರರೊಳಗಾದ ಇಪ್ಪತ್ತನಾಲ್ಕುತಂಡದ ಅನಂತರು ಶಿವನ ಒಡ್ಡೋಲಗದ ವೈಭವವ ನಡೆಸುವ ಪರಿಚಾರಕರು ಬಂದು ಶರಣ ಲಿಂಗದೃಷ್ಟಿ ಸಂಧಾನವಾಗಲೆಂದು ಸಮ್ಮುಖವಂ ಮಾಡೆ ಸೂರ್ಯವೀಥಿಯೊಳಿಪ್ಪ ಉಮೆ ಚಂಡೇಶ್ವರ ನಂದಿಕೇಶ್ವರರೊಳಗಾದ ಹದಿನಾರುತಂಡದ ಅನಂತರುದ್ರರು ಬಂದು ಶರಣನ ಸನ್ಮಾನವಂ ಮಾಡೆ ಅಗ್ನಿವೀಥಿಯೊಳಿಪ್ಪ ವಾಮೆ ಜ್ಯೇಷೆ*ಯರೊಳಗಾದ ಎಂಟುತಂಡದ ಅನಂತಶಕ್ತಿಯರು ಬಂದು ಶರಣನ ಇದಿರ್ಗೊಳೆ ಕರ್ನಿಕಾವೀಥಿಯೊಳಿಪ್ಪ ಅಂಬಿಕೆ ಗಣಾನಿಯರೊಳಗಾದ ನಾಲ್ಕುತಂಡದ ಶಕ್ತಿಯರು ಬಂದು ಶರಣನ ಕೈವಿಡಿದು ಕರೆತರೆ ಈ ಸಿಂಹಾಸನಕ್ಕೆ ಮೇಲುಗದ್ದಿಗೆಯೆನಿಪ ಸಿಂಹಾಸನ ಶುಭ್ರವರ್ಣದ ಹತ್ತುನೂರುದಳವ ಗರ್ಭೀಕರಿಸಿಕೊಂಡು ಬೆಳಗುತಿಪ್ಪ ಒಂದು ಮಹಾಕಮಲ. ಆ ಕಮಲದಳಂಗಳೊಳಗಿಪ್ಪ ಪ್ರಣವ. ಆ ಪ್ರಣವ ಸ್ವರೂಪರಾದ ಬಸವಾದಿ ಅಸಂಖ್ಯಾತ ಪ್ರಮಥಗಣಂಗಳು ಆ ಪ್ರಮಥಗಣಂಗಳಿಗೆ ಶರಣಭಾವದಲ್ಲಿಯೇ ಸಾಷ್ಟಾಂಗವೆರಗಿ ನಮಸ್ಕಾರವ ಮಾಡೆ ಆ ಗಣಂಗಳು ಕೃಪಾದೃಷ್ಟಿಯಿಂದ ಶರಣನ ಮೈದಡವಿ ಅನಂತಕೋಟಿ ಸೋಮ ಸೂರ್ಯ ಕಾಲಾಗ್ನಿ ಮಿಂಚು ನಕ್ಷತ್ರಂಗಳು ತಮ್ಮ ತಮ್ಮ ಪ್ರಕಾಶಮಂ ಒಂದೇ ವೇಳೆ ತೋರಿದ ಬೆಳಗಿನೊಡ್ಡವಣೆ ಪಂಚಪತ್ರಂಗಳಾವರಣಂಗಳಾಗಿ ತೋರ್ಪ ಹದಿನಾರುದಳಂಗಳೊಳಿಪ್ಪ ಷೋಡಶಕಳಾಪುಂಜವೆನಿಸುವ ಪದ್ಮಿನಿ ಚಂದ್ರಿಣಿಯರೊಳಗಾದ ಷೋಡಶ ಲಾವಣ್ಯಶಕ್ತಿನಿಯರ ಬೆಳಗಂ ಕಂಡು ಆ ಬೆಳಗಿನೊಡ್ಡವಣೆ ಬಯಲಾಯಿತ್ತು. ಈ ಕರ್ಣಿಕಾಪ್ರದೇಶದ ಪಂಚಪತ್ರಂಗಳೊಳಗಿಪ್ಪ ಪಂಚಪ್ರಣವಂಗಳ ಬೆಳಗಂ ಕಂಡು ಆ ಲಾವಣ್ಯಶಕ್ತಿನಿಯರ ಬೆಳಗು ತೆಗೆದೋಡಿತ್ತು. ಕರ್ಣಿಕಾಗ್ರದೊಳು ನಿಜನಿವಾಸವಾಗಿ ಮೂರ್ತಿಗೊಂಡಿಪ್ಪ ನಿಷ್ಕಲಬ್ರಹ್ಮದ ಚರಣದಂಗುಲಿಯ ನಖದ ಬೆಳಗಂ ಕಂಡು ಆ ಪ್ರಣವಂಗಳ ಬೆಳಗು ತಲೆವಾಗಿದವು. ಇಂತಪ್ಪ ಘನಕ್ಕೆ ಘನವಾದ ಮಹಾಲಿಂಗವಂ ಶರಣಂ ನಿಟ್ಟಿಸಿ ಕಟ್ಟಕ್ಕರಿಂ ನೋಡಿ ಮನಂ ನಲಿದು ಆನಂದಾಶ್ರುಜಲಂ ಸುರಿದು ಪುಳಕಂಗಳುಣ್ಮೆ ರೋಮಾಂಚನಂ ಗುಡಿಗಟ್ಟೆ ಪ್ರಣವದ ನುಡಿ ತಡೆಬಡಿಸಿ ನಡೆ ದಟ್ಟಡಿಸುವ ಕಾಲದಲ್ಲಿ ಕರ್ಪೂರದ ಪುತ್ಥಳಿ ಬಂದು ಉರಿಯ ಪುತ್ಥಳಿಯನಾಲಂಗಿಸಿದಂತೆ ಶರಣಂ ಬಂದು ಆ ಘನಲಿಂಗಮಂ ಅಮರ್ದಪ್ಪಿ ಪುಷ್ಪ ಪರಿಮಳದಂತೆ ಏಕವಾಗಿ ಘನಲಿಂಗ ತಾನೆಯಾದ, ಮಹಾಗುರು ಸಿದ್ಧೇಶ್ವರಪ್ರಭುವಿನ ಚರಣಮಂ ನಾನು ಕರಸ್ಥಲದಲ್ಲಿ ಪಿಡಿದು ಪೂಜೆಯಂ ಮಾಡಲೊಡನೆ ಎನ್ನ ತನುವೇ ಪಂಚಬ್ರಹ್ಮ ಪ್ರಾಣವೇ ಪರಬ್ರಹ್ಮವಾಯಿತು. ಪ್ರವೃತ್ತಿಯ ಬಟ್ಟೆ ಹುಲ್ಲು ಹುಟ್ಟಿತು. ನಿವೃತ್ತಿಯ ಬಟ್ಟೆ ನಿರ್ಮಲವಾಯಿತು. ಉಯ್ಯಾಲೆಯ ಮಣೆ ನೆಲೆಗೆ ನಿಂದಂತೆ ಆದೆನಯ್ಯಾ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ಪೃಥ್ವಿ ಅಪ್ಪು ತೇಜ ವಾಯು ಆಕಾಶ ಆತ್ಮ ಮೊದಲಾದ ಷಡುಸ್ಥಲಂಗಳ ವಿವರವೆಂತೆಂದೆಡೆ: ಪೃಥ್ವಿ ಭಕ್ತ, ಅಪ್ಪು ಮಾಹೇಶ್ವರ, ಅಗ್ನಿ ಪ್ರಸಾದಿ, ವಾಯು ಪ್ರಾಣಲಿಂಗಿ, ಆಕಾಶ ಶರಣ, ಆತ್ಮನೈಕ್ಯ. ಇದಕ್ಕೆ ಶ್ರುತಿ: ಸದ್ಯೋಜಾತಂ ತಥಾ ಭಕ್ತಂ ವಾಮದೇವಂ ಮಹೇಶ್ವರಂ ಪ್ರಸಾದಿನಮಘೋರಂಚ ಪುರುಷಂ ಪ್ರಾಣಲಿಂಗಿನಂ ಈಶಾನಂ ಶರಣಂ ವಿಂದ್ಯಾದೈಕ್ಯಮಾತ್ಮಮಯಂ ತಥಾ ಷಡಂಗಂ ಲಿಂಗಮೂಲಂ ಹಿ ದೇವದೈಹಿಕ ಭಕ್ತಯೋ: ಇಂತೆಂದುದಾಗಿ, ಷಡಂಗಕ್ಕೆ ಲಿಂಗಂಗಳಾವಾವೆಂದಡೆ: ಭಕ್ತಂಗೆ ಆಚಾರಲಿಂಗ, ಮಾಹೇಶ್ವರಂಗೆ ಗುರುಲಿಂಗ, ಪ್ರಸಾದಿಗೆ ಶಿವಲಿಂಗ, ಪ್ರಾಣಲಿಂಗಿಗೆ ಜಂಗಮಲಿಂಗ, ಶರಣಂಗೆ ಪ್ರಸಾದಲಿಂಗ, ಐಕ್ಯಂಗೆ ಮಹಾಲಿಂಗ. ಇಂತೀ ಷಡ್ವಿಧಲಿಂಗಂಗಳಿಗೆ ಕಳೆಯಾವೆಂದಡೆ: ಆಚಾರಲಿಂಗಕ್ಕೆ ನಿವೃತ್ತಿಕಳೆ, ಗುರುಲಿಂಗಕ್ಕೆ ಪ್ರತಿಷಾ*ಕಳೆ, ಶಿವಲಿಂಗಕ್ಕೆ ವಿದ್ಯಾಕಳೆ, ಜಂಗಮಲಿಂಗಕ್ಕೆ ಶಾಂತಿಕಳೆ, ಪ್ರಸಾದಲಿಂಗಕ್ಕೆ ಶಾಂತ್ಯತೀತಕಳೆ, ಮಹಾಲಿಂಗಕ್ಕೆ ಶಾಂತ್ಯತೀತೋತ್ತರ ಕಳೆ. ಇಂತೀ ಷಡ್ವಿಧಲಿಂಗಂಗಳಿಗೆ ಮುಖಂಗಳಾವಾವೆಂದಡೆ: ಆಚಾರಲಿಂಗಕ್ಕೆ ನಾಸಿಕ ಮುಖ, ಗುರುಲಿಂಗಕ್ಕೆ ಜಿಹ್ವೆ ಮುಖ, ಶಿವಲಿಂಗಕ್ಕೆ ನೇತ್ರ ಮುಖ, ಜಂಗಮಲಿಂಗಕ್ಕೆ ತ್ವಕ್ಕು ಮುಖ, ಪ್ರಸಾದಲಿಂಗಕ್ಕೆ ಶ್ರೋತ್ರಮುಖ, ಮಹಾಲಿಂಗಕ್ಕೆ ಹೃನ್ಮುಖ. ಇಂತೀ ಷಡ್ವಿಧಲಿಂಗಂಗಳಿಗೆ ಹಸ್ತಂಗಳಾವಾವೆಂದಡೆ: ಆಚಾರಲಿಂಗಕ್ಕೆ ಸುಚಿತ್ತ ಹಸ್ತ, ಗುರುಲಿಂಗಕ್ಕೆ ಸುಬುದ್ಧಿ ಹಸ್ತ, ಶಿವಲಿಂಗಕ್ಕೆ ನಿರಹಂಕಾರ ಹಸ್ತ, ಜಂಗಮಲಿಂಗಕ್ಕೆ ಸುಮನ ಹಸ್ತ, ಪ್ರಸಾದಲಿಂಗಕ್ಕೆ ಸುಜ್ಞಾನ ಹಸ್ತ, ಮಹಾಲಿಂಗಕ್ಕೆ ಸದ್ಭಾವ ಹಸ್ತ. ಇಂತೀ ಷಡ್ವಿಧ ಲಿಂಗಂಗಳಿಗೆ ತೃಪ್ತಿಯಾವಾವೆಂದಡೆ: ಆಚಾರಲಿಂಗಕ್ಕೆ ಗಂಧತೃಪ್ತಿ, ಗುರುಲಿಂಗಕ್ಕೆ ರಸತೃಪ್ತಿ, ಶಿವಲಿಂಗಕ್ಕೆ ರೂಪುತೃಪ್ತಿ, ಜಂಗಮಲಿಂಗಕ್ಕೆ ಪರುಶನ ತೃಪ್ತಿ, ಪ್ರಸಾದಲಿಂಗಕ್ಕೆ ಶಬ್ದತೃಪ್ತಿ, ಮಹಾಲಿಂಗಕ್ಕೆ ಪಂಚೇಂದ್ರಿಯ ಪ್ರೀತಿಯೇ ತೃಪ್ತಿ. ಇಂತೀ ಷಡ್ವಿಧಲಿಂಗಂಗಳಿಗೆ ಶಕ್ತಿಗಳಾವಾವೆಂದಡೆ: ಆಚಾರಲಿಂಗಕ್ಕೆ ಕ್ರಿಯಾಶಕ್ತಿ, ಗುರುಲಿಂಗಕ್ಕೆ ಜ್ಞಾನಶಕ್ತಿ, ಶಿವಲಿಂಗಕ್ಕೆ ಇಚ್ಛಾಶಕ್ತಿ, ಜಂಗಮಲಿಂಗಕ್ಕೆ ಆದಿಶಕ್ತಿ, ಪ್ರಸಾದಲಿಂಗಕ್ಕೆ ಪರಾಶಕ್ತಿ, ಮಹಾಲಿಂಗಕ್ಕೆ ಚಿಚ್ಛಕ್ತಿ. ಇಂತೀ ಷಡ್ವಿಧಲಿಂಗಂಗಳಿಗೆ ಭಕ್ತಿ ಯಾವಾವೆಂದಡೆ: ಆಚಾರಲಿಂಗಕ್ಕೆ ಶ್ರದ್ಧಾಭಕ್ತಿ, ಗುರುಲಿಂಗಕ್ಕೆ ನಿಷಾ*ಭಕ್ತಿ, ಶಿವಲಿಂಗಕ್ಕೆ ಅವಧಾನಭಕ್ತಿ, ಜಂಗಮಲಿಂಗಕ್ಕೆ ಅನುಭವಭಕ್ತಿ, ಪ್ರಸಾದಲಿಂಗಕ್ಕೆ ಆನಂದಭಕ್ತಿ, ಮಹಾಲಿಂಗಕ್ಕೆ ಸಮರಸಭಕ್ತಿ. ಇಂತೀ ಷಡ್ವಿಧಲಿಂಗಂಗಳಿಗೆ ವಿಷಯಂಗಳಾವಾವೆಂದಡೆ: ಎಳಸುವುದು ಆಚಾರಲಿಂಗದ ವಿಷಯ, ಎಳಸಿ ಮೋಹಿಸುವುದು ಗುರುಲಿಂಗದ ವಿಷಯ, ಮೋಹಿಸಿ ಕೂಡುವುದು ಶಿವಲಿಂಗದ ವಿಷಯ, ಕೂಡಿ ಸುಖಂಬಡುವುದು ಜಂಗಮಲಿಂಗದ ವಿಷಯ, ಸುಖಂಬಡೆದು ಪರಿಣಾಮತೆಯನೆಯಿದೂದು ಪ್ರಸಾದಲಿಂಗದ ವಿಷಯ, ಪರಿಣಾಮತೆಯನೆಯ್ದಿ ನಿಶ್ಚಯಬಡೆವುದು ಮಹಾಲಿಂಗದ ವಿಷಯ. ಇನ್ನು ಆಚಾರಲಿಂಗದಲ್ಲಿಯ ಮಿಶ್ರಾರ್ಪಣದ ವಿವರವೆಂತೆಂದಡೆ: ಬೇರು ಗೆಡ್ಡೆ ಗೆಣಸು ಮೊದಲಾದವರಲ್ಲಿಯ ಗಂಧವನರಿವುದು ಆಚಾರಲಿಂಗದಲ್ಲಿಯ ಆಚಾರಲಿಂಗ. ಮರ ತಿಗುಡು ಹಗಿನ ಮೊದಲಾದವರಲ್ಲಿಯ ಗಂಧವನರಿವುದು ಆಚಾರಲಿಂಗದಲ್ಲಿಯ ಗುರುಲಿಂಗ. ಚಿಗುರು ತಳಿರು ಪತ್ರೆ ಮೊದಲಾದವರಲ್ಲಿಯ ಗಂಧವನರಿವುದು ಆಚಾರಲಿಂಗದಲ್ಲಿಯ ಶಿವಲಿಂಗ. ನನೆ ಮೊಗ್ಗೆ ಅರಳು ಮೊದಲಾದವರಲ್ಲಿಯ ಗಂಧವನರಿವುದು ಆಚಾರಲಿಂಗದಲ್ಲಿಯ ಜಂಗಮಲಿಂಗ. ಕಾಯಿ ದೋರೆ ಹಣ್ಣು ಮೊದಲಾದವರಲ್ಲಿಯ ಗಂಧವನರಿವುದು ಆಚಾರಲಿಂಗದಲ್ಲಿಯ ಪ್ರಸಾದಲಿಂಗ. ಇಂತಿವರಲ್ಲಿಯ ಗಂಧತೃಪ್ತಿಯನರಿವುದು, ಆಚಾರಲಿಂಗದಲ್ಲಿಯ ಮಹಾಲಿಂಗ. ಇನ್ನು ಗುರುಲಿಂಗದಲ್ಲಿಯ ಮಿಶ್ರಾರ್ಪಣದ ವಿವರವೆಂತೆಂದಡೆ: ಮಧುರವಾದ ರುಚಿಯನರಿವುದು ಗುರುಲಿಂಗದಲ್ಲಿಯ ಆಚಾರಲಿಂಗ, ಒಗರವಾದ ರುಚಿಯನರಿವುದು ಗುರುಲಿಂಗದಲ್ಲಿಯ ಗುರುಲಿಂಗ, ಖಾರವಾದ ರುಚಿಯನರಿವುದು ಗುರುಲಿಂಗದಲ್ಲಿಯ ಶಿವಲಿಂಗ, ಆಮ್ರವಾದ ರುಚಿಯನರಿವುದು ಗುರುಲಿಂಗದಲ್ಲಿಯ ಜಂಗಮಲಿಂಗ, ಕಹಿಯಾದ ರುಚಿಯನರಿವುದು ಗುರುಲಿಂಗದಲ್ಲಿಯ ಪ್ರಸಾದಲಿಂಗ, ಲವಣವಾದ ರುಚಿಯನರಿವುದು ಗುರುಲಿಂಗದಲ್ಲಿಯ ಮಹಾಲಿಂಗ. ಇನ್ನು ಶಿವಲಿಂಗದಲ್ಲಿಯ ಮಿಶ್ರಾರ್ಪಣದ ವಿವರವೆಂತೆಂದಡೆ: ಪೀತವರ್ಣವಾದ ರೂಪನರಿವುದು ಶಿವಲಿಂಗದಲ್ಲಿಯ ಆಚಾರಲಿಂಗ, ಶ್ವೇತವರ್ಣವಾದ ರೂಪನರಿವುದು ಶಿವಲಿಂಗದಲ್ಲಿಯ ಗುರುಲಿಂಗ, ಹರಿತವರ್ಣವಾದ ರೂಪನರಿವುದು ಶಿವಲಿಂಗದಲ್ಲಿಯ ಶಿವಲಿಂಗ, ಮಾಂಜಿಷ್ಟವರ್ಣವಾದ ರೂಪನರಿವುದು ಶಿವಲಿಂಗದಲ್ಲಿಯ ಜಂಗಮಲಿಂಗ, ಕಪೋತವರ್ಣವಾದ ರೂಪನರಿವುದು ಶಿವಲಿಂಗದಲ್ಲಿಯ ಪ್ರಸಾದಲಿಂಗ, ಇಂತಿವರ ಸಂಪರ್ಕಸಂಯೋಗವರ್ಣವಾದ ರೂಪನರಿವುದು ಶಿವಲಿಂಗದಲ್ಲಿಯ ಮಹಾಲಿಂಗ. ಇನ್ನು ಜಂಗಮದಲ್ಲಿಯ ಮಿಶ್ರಾರ್ಪಣದ ವಿವರವೆಂತೆಂದಡೆ: ಕಠಿಣವಾದ ಪರುಶನವನರಿವುದು ಜಂಗಮಲಿಂಗದಲ್ಲಿಯ ಆಚಾರಲಿಂಗ, ಮೃದುವಾದ ಪರುಶನವನರಿವುದು ಜಂಗಮಲಿಂಗದಲ್ಲಿಯ ಗುರುಲಿಂಗ, ಉಷ್ಣವಾದ ಪರುಶನವನರಿವುದು ಜಂಗಮಲಿಂಗದಲ್ಲಿಯ ಶಿವಲಿಂಗ, ಶೈತ್ಯವಾದ ಪರುಶನವನರಿವುದು ಜಂಗಮಲಿಂಗದಲ್ಲಿಯ ಜಂಗಮಲಿಂಗ, ಇಂತೀ ಪರುಶನ ನಾಲ್ಕರ ಮಿಶ್ರಪರುಶನವನರಿವುದು ಜಂಗಮಲಿಂಗದಲ್ಲಿಯ ಪ್ರಸಾದಲಿಂಗ, ಪರುಶನೇಂದ್ರಿಯ ತೃಪ್ತಿಯನರಿವುದು ಜಂಗಮಲಿಂಗದಲ್ಲಿಯ ಮಹಾಲಿಂಗ. ಇನ್ನು ಪ್ರಸಾದಲಿಂಗದಲ್ಲಿಯ ಮಿಶ್ರಾರ್ಪಣದ ವಿವರವೆಂತೆಂದಡೆ: ಘಂಟೆ ಜಯಘಂಟೆ ತಾಳ Põ್ಞಸಾಳ ಮೊದಲಾದ ವಾದ್ಯವನರಿವುದು ಪ್ರಸಾದಲಿಂಗದಲ್ಲಿಯ ಆಚಾರಲಿಂಗ, ವೀಣೆ ರುದ್ರವೀಣೆ ತುಂಬುರುವೀಣೆ ಕಿನ್ನರವೀಣೆ ಕೈಲಾಸವೀಣೆ ಮೊದಲಾದ ತಂತಿಕಟ್ಟಿ ನುಡಿವ ವಾದ್ಯವನರಿವುದು ಪ್ರಸಾದಲಿಂಗದಲ್ಲಿಯ ಗುರುಲಿಂಗ, ಪಟಹ ಪಡಡಕ್ಕೆ ಡಿಂಡಿಮ ಆವುಜ ಪಟಾವುಜ ಮೃದಂಗ ಮುರಜ ಭೇರಿ ಮೊದಲಾದ ವಾದ್ಯವನರಿವುದು ಪ್ರಸಾದಲಿಂಗದಲ್ಲಿಯ ಶಿವಲಿಂಗ, ಕಹಳೆ ಹೆಗ್ಗಹಳೆ ಶಂಖ ವಾಂಸ ನಾಗಸರ ಉಪಾಂಗ ಮೊದಲಾದ ವಾದ್ಯವನರಿವುದು ಪ್ರಸಾದಲಿಂಗದಲ್ಲಿಯ ಜಂಗಮಲಿಂಗ, ಸಂಗೀತ ಸಾಹಿತ್ಯ ಶಬ್ದಾರ್ಥ ಮೊದಲಾದ ವಾದ್ಯವನರಿವುದು ಪ್ರಸಾದಲಿಂಗದಲ್ಲಿಯ ಪ್ರಸಾದಲಿಂಗ, ಪಂಚಮಹಾವಾದ್ಯಂಗಳ ತೃಪ್ತಿಯನರಿವುದು ಪ್ರಸಾದಲಿಂಗದಲ್ಲಿಯ ಮಹಾಲಿಂಗ. ಇನ್ನು ಮಹಾಲಿಂಗದಲ್ಲಿಯ ಮಿಶ್ರಾರ್ಪಣದ ವಿವರವೆಂತೆಂದಡೆ: ಆಚಾರಲಿಂಗದಲ್ಲಿಯ ಮಿಶ್ರಾರ್ಪಣದ ತೃಪ್ತಿಯನರಿವುದು ಮಹಾಲಿಂಗದಲ್ಲಿಯ ಆಚಾರಲಿಂಗ, ಗುರುಲಿಂಗದಲ್ಲಿಯ ಮಿಶ್ರಾರ್ಪಣದ ತೃಪ್ತಿಯನರಿವುದು ಮಹಾಲಿಂಗದಲ್ಲಿಯ ಗುರುಲಿಂಗ, ಶಿವಲಿಂಗದಲ್ಲಿಯ ಮಿಶ್ರಾರ್ಪಣದ ತೃಪ್ತಿಯನರಿವುದು ಮಹಾಲಿಂಗದಲ್ಲಿಯ ಶಿವಲಿಂಗ, ಜಂಗಮಲಿಂಗದಲ್ಲಿಯ ಮಿಶ್ರಾರ್ಪಣದ ತೃಪ್ತಿಯನರಿವುದು ಮಿಶ್ರಾರ್ಪಣದ ತೃಪ್ತಿಯನರಿವುದು ಮಹಾಲಿಂಗದಲ್ಲಿಯ ಪ್ರಸಾದಲಿಂಗ, ಅವಿರಳಭಾವ ಭಾವೈಕ್ಯ ನಿರ್ದೇಶನತೃಪ್ತಿಯನರಿವುದು ಮಹಾಲಿಂಗದಲ್ಲಿಯ ಮಹಾಲಿಂಗ. ಇನ್ನು ಆಚಾರಲಿಂಗ ಮೋಹಿತನಾದಡೆ ಸತಿ ಸುತ ಬಾಂಧವರಲ್ಲಿಯ ಮೋಹವಿಲ್ಲದಿರಬೇಕು. ಆಚಾರಲಿಂಗ ಭಕ್ತನಾದಡೆ ಸ್ವಯ ಕಾಯಕದಲ್ಲಿರಬೇಕು. ಆಚಾರಲಿಂಗ ವೀರನಾದಡೆ ಪೂರ್ವವನಳಿದು ಪುನರ್ಜಾತನಾಗಬೇಕು. ಆಚಾರಲಿಂಗ ಪ್ರಾಣಿಯಾದಡೆ ಭವಿಗಳಿಗೆ ತಲೆವಾಗದಿರಬೇಕು. ಆಚಾರಲಿಂಗ ಪ್ರಸಾದಿಯಾದಡೆ ಜಿಹ್ವೆ ಲಂಪಟವಿಲ್ಲದಿರಬೇಕು. ಆಚಾರಲಿಂಗ ತೃಪ್ತನಾದಡೆ ಭಕ್ತಕಾಯ ಮಮಕಾಯನಾಗಿರಬೇಕು. ಇನ್ನು ಗುರುಲಿಂಗ ಮೋಹಿತನಾದಡೆ ತನುಗುಣ ನಾಸ್ತಿಯಾಗಿರಬೇಕು. ಗುರುಲಿಂಗ ಭಕ್ತನಾದಡೆ ತನು ಗುರುವಿನಲ್ಲಿ ಸವೆಯಬೇಕು. ಗುರುಲಿಂಗ ವೀರನಾದಡೆ ಭವರೋಗಂಗಳಿಲ್ಲದಿರಬೇಕು. ಗುರುಲಿಂಗ ಪ್ರಾಣಿಯಾದಡೆ ಪ್ರಕೃತಿಗುಣರಹಿತನಾಗಿರಬೇಕು. ಗುರುಲಿಂಗ ಪ್ರಸಾದಿಯಾದಡೆ ಗುರುಪ್ರಸಾದವನಲ್ಲದೆ ಸ್ವೀಕರಿಸದಿರಬೇಕು. ಗುರುಲಿಂಗ ತೃಪ್ತನಾದಡೆ ಅರಸುವ ಅರಕೆಯಿಲ್ಲದಿರಬೇಕು. ಇನ್ನು ಶಿವಲಿಂಗ ಮೋಹಿತನಾದಡೆ ಮನಗುಣ ನಾಸ್ತಿಯಾಗಿರಬೇಕು. ಶಿವಲಿಂಗ ಭಕ್ತನಾದಡೆ ಲಿಂಗದ ಏಕೋಗ್ರಾಹಕತ್ವವಳವಟ್ಟಿರಬೇಕು. ಶಿವಲಿಂಗ ವೀರನಾದಡೆ ಕಾಲಕರ್ಮಾದಿಗಳಿಗಳುಕದಿರಬೇಕು. ಶಿವಲಿಂಗ ಪ್ರಾಣಿಯಾದಡೆ ಜನನಮರಣಂಗಳಿಗೊಳಗಾಗದಿರಬೇಕು. ಶಿವಲಿಂಗ ಪ್ರಸಾದಿಯಾದಡೆ ಶಿವಪ್ರಸಾದವನಲ್ಲದೆ ಸ್ವೀಕರಿಸದಿರಬೇಕು. ಶಿವಲಿಂಗ ತೃಪ್ತನಾದಡೆ ದ್ವೈತಾದ್ವೈತವಳಿದಿರಬೇಕು. ಇನ್ನು ಜಂಗಮಲಿಂಗ ಮೋಹಿತನಾದಡೆ ಪ್ರಾಣಗುಣನಾಸ್ತಿಯಾಗಿರಬೇಕು. ಜಂಗಮಲಿಂಗ ಭಕ್ತನಾದಡೆ ಜಂಗಮದಲ್ಲಿ ಧನಮನವ ಮುಟ್ಟಿ ಸವೆಯಬೇಕು. ಜಂಗಮಲಿಂಗ ವೀರನಾದಡೆ ಭಯಭಂಗವಿಲ್ಲದಿರಬೇಕು. ಜಂಗಮಲಿಂಗ ಪ್ರಾಣಿಯಾದಡೆ ತಥ್ಯಮಿಥ್ಯರಾಗದ್ವೇಶಂಗಳಿಲ್ಲದಿರಬೇಕು. ಜಂಗಮಲಿಂಗ ಪ್ರಸಾದಿಯಾದಡೆ ಭೋಗಭೂಷಣಂಗಳಾಸೆಯಿಲ್ಲದಿರಬೇಕು. ಜಂಗಮಲಿಂಗ ತ್ರಪ್ತನಾದಡೆ ದೇಹೋಹಮ್ಮಿಲ್ಲದಿರಬೇಕು. ಇನ್ನು ಪ್ರಸಾದಲಿಂಗ ಮೋಹಿತನಾದಡೆ ಶಬ್ದಜಾಲಂಗಳಿಗೆ ಕಿವಿಯೊಡ್ಡದಿರಬೇಕು. ಪ್ರಸಾದಲಿಂಗ ಭಕ್ತನಾದಡೆ ದಾಸೋಹಮ್ಮಿಲ್ಲದಿರಬೇಕು. ಪ್ರಸಾದಲಿಂಗ ವೀರನಾದಡೆ ಚಿದಹಮ್ಮಿಲ್ಲದಿರಬೇಕು. ಪ್ರಸಾದಲಿಂಗ ಪ್ರಾಣಿಯಾದಡೆ ಪ್ರಾಣಲಿಂಗದೊಳಭಿನ್ನನಾಗಿರಬೇಕು. ಪ್ರಸಾದಲಿಂಗ ಪ್ರಸಾದಿಯಾದಡೆ ಪ್ರಸಾದಪ್ರಸನ್ನನಾಗಿರಬೇಕು. ಪ್ರಸಾದಲಿಂಗ ತೃಪ್ತನಾದಡೆ ಇಂದ್ರಿಯಂಗಳಿಚ್ಛೆಯಿಲ್ಲದಿರಬೇಕು. ಇನ್ನು ಮಹಾಲಿಂಗ ಮೋಹಿತನಾದಡೆ ಅಣಿಮಾದಿ ಅಷ್ಟಮಹದೈಶ್ವರ್ಯಂಗಳ ಬಯಸದಿರಬೇಕು. ಮಹಾಲಿಂಗ ಭಕ್ತನಾದಡೆ ಅಷ್ಟಮಹಾಸಿದ್ಧಿಗಳ ನೆನೆಯದಿರಬೇಕು. ಮಹಾಲಿಂಗ ವೀರನಾದಡೆ ಚತುರ್ವಿಧ ಪದವಿಯ ಹಾರದಿರಬೇಕು. ಮಹಾಲಿಂಗ ಪ್ರಾಣಿಯಾದಡೆ ಇಹಪರಂಗಳಾಸೆ ಇಲ್ಲದಿರಬೇಕು. ಮಹಾಲಿಂಗ ಪ್ರಸಾದಿಯಾದಡೆ ಅರಿವು ಮರಹಳಿದು ಚಿಲ್ಲಿಂಗಸಂಗಿಯಾಗಿರಬೇಕು. ಮಹಾಲಿಂಗ ತೃಪ್ತನಾದಡೆ ಭಾವಸದ್ಭಾವನಿರ್ಭಾವನಳಿದು ಭಾವೈಕ್ಯವಾಗಿ ತಾನಿಃದಿರೆಂಬ ಭಿನ್ನಭಾವ ತೋರದಿರಬೇಕು. ಇಂತೀ ನೂರೆಂಟು ಸ್ಥಲದಲ್ಲಿ ನಿಪುಣನಾಗಿ ಮಿಶ್ರಷಡ್ವಿಧಸ್ಥಲ ಷಡುಸ್ಥಲ ತ್ರಿಸ್ಥಲ ಏಕಸ್ಥಲವಾಗಿ ಸ್ಥಲ ನಿಃಸ್ಥಲವನೆಯ್ದಿ ಸೌರಾಷ್ಟ್ರ ಸೋಮೇಶ್ವರಲಿಂಗ ತಾನು ತಾನಾಗಿರಬೇಕಯ್ಯಾ.
--------------
ಆದಯ್ಯ
ಭವಿತನಕ್ಕೆ ಹೇಸಿ ಭಕ್ತನಾಗಬೇಕೆಂಬಾತನು ಸದ್ಗುರುವನರಸಿಕೊಂಡು ಬಂದು ಅವರ ಕಾರುಣ್ಯದಿಂದ ಮುಕ್ತಿಯಂ ಪಡೆದೆನೆಂದು ಆ ಶ್ರೀಗುರುವಿಂಗೆ ದಂಡಪ್ರಣಾಮಂ ಮಾಡಿ ಭಯಭಕ್ತಿಯಿಂದ ಕರಂಗಳಂ ಮುಗಿದು ನಿಂದಿರ್ದು ಎಲೆ ದೇವಾ ! ಎನ್ನ ಭವಿತನಮಂ ಹಿಂಗಿಸಿ ನಿಮ್ಮ ಕಾರುಣ್ಯದಿಂದೆನ್ನ ಭಕ್ತನಂ ಮಾಡುವುದೆಂದು ಶ್ರೀಗುರುವಿಂಗೆ ಬಿನ್ನಹವಂ ಮಾಡಲು ಆ ಶ್ರೀಗುರುವು ಅಂತಪ್ಪ ಭಯಭಕ್ತಿ ಕಿಂಕರತೆಯೊಳಿಪ್ಪ ಶಿಶುವಂ ಕಂಡು ತಮ್ಮ ಕೃಪಾವಲೋಕನದಿಂ ನೋಡಿ ಆ ಭವಿಯ ಪೂರ್ವಾಶ್ರಯಮಂ ಕಳೆದು ಪೂನರ್ಜಾತನಂ ಮಾಡಿ ಆತನ ಅಂಗದ ಮೇಲೆ ಲಿಂಗಪ್ರತಿಷೆ*ಯಂ ಮಾಡುವ ಕ್ರಮವೆಂತೆಂದಡೆ_ ಓಂ ಅಗ್ನಿರಿತಿ ಭಸ್ಮ ಓಂ ವಾಯುರಿತಿ ಭಸ್ಮ ಓಂ ಜಲಮಿತಿ ಭಸ್ಮ ಓಂ ಸ್ಥಲಮಿತಿ ಭಸ್ಮ ಓಂ ವ್ಯೋಮೇತಿ ಭಸ್ಮ ಓಂ ಸೋಮೇತಿ ಭಸ್ಮ ಓಂ ಸೂರ್ಯೇತಿ ಭಸ್ಮ ಓಂ ಆತ್ಮೇತಿ ಭಸ್ಮ ಎಂಬೀ ಮಂತ್ರದಿಂದ ಆತನ ಅಷ್ಟತನುವಂ ಶುದ್ಧವ ಮಾಡುವುದು ಇನ್ನು ಆತನ ಜೀವ ಶುದ್ಧವ ಮಾಡುವ ಕ್ರಮವೆಂತೆಂದಡೆ_ ಓಂ ಅಸ್ಯ ಪ್ರಾಣಪ್ರತಿಷಾ* ಮಂತ್ರಸ್ಯ ಬ್ರಹ್ಮವಿಷ್ಣು ಮಹೇಶ್ವರಾ ಋಷಯಃ ಋಗ್ಯಜುಃ ಸಾಮಾಥರ್ವಣಾ ಶ್ಫಂದಾಂಸಿ ಸದಾಶಿವ ಮಹಾಪ್ರಾಣ ಇಹಪ್ರಾಣ ಮಮ ಜೀವ ಅಯಂ ತಥಾ ಮಮಾಸಕ್ತ ಸರ್ವೇಂದ್ರಿಯಾಣಿ ವಾಙ್ಮನಶ್ಚಕ್ಷುಃ ಶ್ರೋತ್ರ ಜಿಹ್ವಾಘ್ರಾಣ ಮನೋಬುದ್ಧಿ ಚಿತ್ತ ವಿಜ್ಞಾನವ? ಮಮ ಶರೀರೇ ಅಂಗಸ್ಯ ಸುಖಂ ಸ್ಥಿರಿಷ್ಯತಿ ಜೀವಃ ಶಿವಃ ಶಿವೋ ಜೀವಃ ಸಜೀವಃ ಕೇವಲಃ ಶಿವಃ ಪಾಶಬದ್ಧೋ ಭವೇಜ್ಜೀವಃ ಪಾಶಮುಕ್ತಃ ಶದಾಶಿವಃ ಎಂದೀ ಮಂತ್ರದಿಂದ ಆತನ ಜೀವನ ಶುದ್ಧವಂ ಮಾಡುವುದು. ಇನ್ನು ಆತ್ಮಶುದ್ದವ ಮಾಡುವ ಕ್ರಮವೆಂತೆಂದಡೆ_ ಓಂ ಶಿವಾತ್ಮಕಸುಖಂ ಜೀವೋ ಜೀವಾತ್ಮಕಸುಖಂ ಶಿವಃ ಶಿವಜೀವಾತ್ಮಸಂಯೋಗೇ ಪ್ರಾಣಲಿಂಗಂ ತಥಾ ಭವೇತ್ ಎಂದೀ ಮಂತ್ರದಿಂದ ಆತನ ಆತ್ಮನ ಶುದ್ಧವಂ ಮಾಡುವುದು. ಇನ್ನು ವಾಕ್ಕು ಪಾಣಿ ಪಾದ ಗುಹ್ಯ ಪಾಯುವೆಂಬ ಕರ್ಮೇಂದ್ರಿಯಂಗಳ ಮೇಲಣ ಇಂದ್ರಿಯ ಲಿಖಿತವಂ ತೊಡೆದು ಲಿಂಗಲಿಖಿತವಂ ಮಾಡುವ ಕ್ರಮವೆಂತೆಂದಡೆ_ ಓಂ [ಮೇ] ನೇತ್ರೇ ತ್ರ್ಯಂಬಕಃ ಪಾತು ಮುಖಂ ಪಾತು ಮಹೇಶ್ವರಃ ಕuõ್ರ್ಞ ಪಾತು ಶಂಭುರ್ಮೇ ನಾಸಿ ಕಾಯಾಂ ಭವೋದ್ಭವಃ ವಾಗೀಶಃ ಪಾತು ಮೇ ಜಿಹ್ವಾಮೋಷ*ಂ ಪಾತ್ವಂಬಿಕಾಪತಿಃ ಎಂದೀ ಮಂತ್ರದಿಂದ ಆತನ ಪಂಚೇಂದ್ರಿಯಂಗಳ ಮೇಲಣ ಇಂದ್ರಿಯ ಲಿಖಿತಮಂ ತೊಡೆದು ಲಿಂಗಲಿಖಿತವಂ ಮಾಡುವುದು. ಇನ್ನು ಮನ ಬುದ್ಧಿ ಚಿತ್ತ ಅಹಂಕಾರವೆಂಬ ಅಂತಃಕರಣ ಚತುಷ್ಟಯಂಗಳ ನಿವರ್ತನೆಯ ಮಾಡುವ ಕ್ರಮವೆಂತೆಂದಡೆ_ ಮನದಲ್ಲಿ ಧ್ಯಾನವಾಗಿ ಬುದ್ಧಿಯಲ್ಲಿ ವಂಚನೆಯಿಲ್ಲದೆ ಚಿತ್ತವು ದಾಸೋಹದಲ್ಲಿ ಅಹಂಕಾರವು ಜ್ಞಾನದಲ್ಲಿ ಈ ಮರ್ಯಾದೆಯಲ್ಲಿ ಚತುರ್ವಿಧಮಂ ನಿವರ್ತನೆಯಂ ಮಾಡುವುದು. ಇನ್ನು ಆತಂಗೆ ಪಂಚಗವ್ಯಮಂ ಕೊಟ್ಟು ಏಕಭುಕ್ತೋಪವಾಸಂಗಳಂ ಮಾಡಿಸಿ ಪಂಚಭೂತಸ್ಥಾನದ ಅಧಿದೇವತೆಗಳಂ ತೋರುವುದು ಅವಾವೆಂದಡೆ_ ಬ್ರಹ್ಮಾ ವಿಷ್ಣುಶ್ಚ ರುದ್ರಶ್ಚ ಈಶ್ವರಶ್ಚ ಸದಾಶಿವಃ ಏತೇ ಗರ್ಭಗತಾ ಯಸ್ಯ ತಸ್ಮೈ ಶ್ರೀಗುರವೇ ನಮಃ ಎಂದೀ ಮಂತ್ರದಿಂದ ಆತನ ಪಂಚಭೂತ ಶುದ್ಧಿಯಂ ಮಾಡುವುದು. ಈ ಕ್ರಮದಲ್ಲಿ ಶುದ್ಧಾತ್ಮನಂ ಮಾಡಿದ ಬಳಿಕ ಆತನನ್ನು ಗಣತಿಂಥಿಣಿಯ ಮುಂದೆ ನಿಂದಿರಿಸುವುದು. ನಿಂದಿರ್ದಾತನಂ ದಂಡಪ್ರಣಾಮಮಂ ಮಾಡಿಸುವ ಕ್ರಮವೆಂತೆಂದಡೆ_ ಅನಂತ ಜನ್ಮಸಂಪ್ರಾಪ್ತ ಕರ್ಮೇಂಧನವಿದಾಹಿನೇ ಜ್ಞಾನಾನಲಪ್ರಭಾವಾಯ ತಸ್ಮೈ ಶ್ರೀಗುರವೇ ನಮಃ ಕರ್ಮಣಾ ಮನಸಾ ವಾಚಾ ಗುರು ಭಕ್ತೈತುವತ್ಸಲಃ ಶರೀರಂ ಪ್ರಾಣಮರ್ಥಂ ಚ ಸದ್ಗುರುಭ್ಯೋ ನಿವೇದಯೇತ್ ಪ್ರಣಮ್ಯ ದಂಡವದ್ಭೂಮೌ ಅಷ್ಟಮಂತ್ರೈಃ ಸಮರ್ಚಯೇತ್ ಶ್ರೀಗುರೋಃ ಪಾದಪದ್ಮಂಚ ಗಂಧಪುಷ್ಪಾಕ್ಷತಾದಿಭಿಃ ಅನ್ಯಥಾ ವಿತ್ತಹೀನೋ[s]ಪಿ ಗುರುಭಕ್ತಿಪರಾಯಣಃ ಕೃತ್ವಾ ದಂಡನಮಸ್ಕಾರಂ ಸ್ವಶರೀರಂ ನಿವೇದಯೇತ್ ಎಂದೀ ಮಂತ್ರದಿಂದ ದಂಡಪ್ರಣಾಮವಂ ಮಾಡಿಸುವುದು ಆತನ ರೈವಿಡಿದೆತ್ತುವ ಕ್ರಮವೆಂದರೆ ಗುರುಃ ಪಿತಾ ಗುರುರ್ಮಾತಾ ಗುರುರೇವ ಹಿ ಬಾಂಧವಃ ಗುರುದೈವಾತ್ಪರಂ ನಾಸ್ತಿ ತಸ್ಮೈ ಶ್ರೀಗುರವೇ ನಮಃ ಓಂ ಗುರುದೇವೋ ಭವ, ಓಂ ಪಿತೃದೇವೋ ಭವ, ಓಂ ಆಚಾರ್ಯದೇವೋ ಭವ ಎಂದೀ ಮಂತ್ರದಿಂದ ಆತನ ಕೈವಿಡಿದೆತ್ತುವುದು ಇನ್ನು ಭೂಶುದ್ಧಿಯಂ ಮಾಡುವ ಕ್ರಮವೆಂತೆಂದಡೆ_ ಓಂ ಶಿವಶಿವ ಶಿವಾಜ್ಞಾ ವಿಷ್ಣುಪ್ರವರ್ತಮಾನುಷಾ ಅಪವಿತ್ರಃ ಪವಿತ್ರೋವಾ ಸರ್ವಾವಸ್ಥಾಂಗತೋ[s]sಪಿ ವಾ ಯಃ ಸ್ಮರೇತ್ ಪುಂಡರೀಕಾಕ್ಷಂ ಸ ಬಾಹ್ಯಾಭ್ಯಂತರಃ ಶುಚಿಃ ಪ್ರಥ್ವಿ ತ್ವಯಾ ಧೃತಾ ದೇವಿ ದೇವತ್ವಂ ವಿಷ್ಣುನಾ ಧೃತಾ ಪಂಚದಾರಾಮಯೋ ದೇವಿ ಪವಿತ್ರಂ ಕುರು ಚಾಸನಮ್ ಸಮ್ಮಾರ್ಜನಂ ಶತಂ ಪುಣ್ಯಂ ಸಹಸ್ರಮನುಲೇಪನಮ್ ರೇಖಾಶತಸಹಸ್ರೇಷು ಅನಂತಂ ಪದ್ಮಮುಚ್ಯತೇ ಬಂಧೋ ಭವಹರಶ್ಚೈವ ಸ್ವಸ್ತಿಕಂ ಶತ್ರುನಾಶನಮ್ ಪದ್ಮಂ ಪುಣ್ಯಂ ಫಲಂ ಚೈವ ಮುದ್ರಾ ತು ಮೋಕ್ಷಸಾಧನಮ್ ಎಂದೀ ಮಂತ್ರದಿಂದ ಭೂಶುದ್ಧಿಯ ಮಾಡುವದು. ಇನ್ನು ಆತನ ಚೌಕಮಧ್ಯದಲ್ಲಿ ಕುಳ್ಳಿರಿಸುವ ಕ್ರಮವೆಂತೆಂದಡೆ- ಓಂ ನಮೋ ರುದ್ರೇಭ್ಯೋ ಯೇ ಪೃಥ್ವಿವ್ಯಾಂ ಯೇ[s]ಂತರಿಕ್ಷೇ ಯೇ ದಿವಿ ಯೇಷಾಮನ್ನಂ ವಾತೋ ವರ್ಷಮಿಷವಸ್ತೇಭ್ಯೋ ದಶಪ್ರಾಚೀರ್ದಶ ದಕ್ಷಿಣಾ ದಶ ಪ್ರತೀಚೀರ್ದಶೋದೀಚೀರ್ದಶೋಧ್ರ್ವಾಸ್ತೇಭ್ಯೋ ನಮಸ್ತೇನೋ ಮೃಡಯಂತು ತೇ ಯಂ ದ್ವಿಷ್ಟೋ ಯಶ್ಚನೋ ದ್ವೇಷ್ಟಿ ತಂ ವೊ ಜಂಬೇ ದಧಾಮಿ ಚಾಂ ಪೃಥಿವ್ಯಾ ಮೇರು ಪೃಷ* ಋಷಿಃ ಕೂರ್ಮೋ ದೇವತಾ ಜಗತೀ ಛಂದಃ ಆಸನೇ ವಿನಿಯೋಗಃ ಎಂದೀ ಮಂತ್ರದಿಂದ ಶ್ರೀಗುರು ಆತನ Zõ್ಞಕಮಧ್ಯದಲ್ಲಿ ಕುಳ್ಳಿರಿಸುವುದು. ಇನ್ನು ನಾಲ್ಕೂ ಕಲಶದ ಪ್ರತ್ಯೇಕ ಪ್ರಧಾನ ದೇವತೆಗಳಂ ಕುಳ್ಳಿರಿಸಿ ಗುರುಕಲಶವಂ ಸ್ಥಾಪ್ಯವಂ ಮಾಡುವ ಕ್ರಮವೆಂತೆಂದಡೆ- ಚೌಕಮಧ್ಯೇ ಸುಮಾಂಗಲ್ಯಂ ಷೋಡಶಂ ಕಲಶಂ ತಥಾ ಭಾಸುರಂ ತಂಡುಲಂ ತಸ್ಯ ಪಂಚಸೂತ್ರಂ ತಥೈವ ಚ ತೇಷು ತೀರ್ಥಾಂಬುಪೂರ್ಣೇಷು ನಿದಧ್ಯಾದಾಮ್ರಪಲ್ಲವಾನ್ ದೂರ್ವಾಂಕುರಸುಪೂಗಾನಿ ನಾಗವಲ್ಲೀದಲಾನ್ಯಪಿ ಓಂ ತತ್ಪುರುಷಾಯ ನಮಃ ತತ್ಪುರುಷವಕ್ತ್ರಾಯ ನಮಃ ಓಂ ಅಘೋರರಾಯ ನಮಃ ಅಘೋರವಕ್ತ್ರಾಯ ನಮಃ ಓಂ ಸದ್ಯೋಜಾತಾಯ ನಮಃ ಸದ್ಯೋಜಾತವಕ್ತ್ರಾಯ ನಮಃ ಓಂ ವಾಮದೇವಾಯ ನಮಃ ವಾಮದೇವವಕ್ತ್ರಾಯ ನಮಃ ಓಂ ಈಶಾನಾಯ ನಮಃ ಈಶಾನವಕ್ತ್ರಾಯ ನಮಃ ಓಂ ತತ್ಪುರುಷ ಅಘೋರ ಸದ್ಯೋಜಾತ ವಾಮದೇವ ಈಶಾನ ವಕ್ತ್ರೇಭ್ಯೋ ನಮಃ ಎಂದು ಈ ಮಂತ್ರದಿಂದ ಗುರುಕಲಶಕ್ಕೆ ಪಂಚಸೂತ್ರಂಗಳನಿಕ್ಕಿ ಪಂಚಪಲ್ಲವಂಗಳನಿಕ್ಕಿ ಪಂಚಮುಖಂಗಳನಿಕ್ಕಿ ಗುರುಕಲಶವಂ ಸ್ಥಾಪ್ಯವಂ ಮಾಡುವುದು. ಇನ್ನು ಜಲಶುದ್ಧವಂ ಮಾಡುವ ಕ್ರಮವೆಂತೆಂದಡೆ - ಓಂ ನಮಃ ಶಿವಾಯ ನಮಸ್ತೇ ಅಸ್ತು ಭಗವನ್ ವಿಶ್ವೇಶ್ವರಾಯ ಮಹಾದೇವಾಯ ತ್ರ್ಯಂಬಕಾಯ ತ್ರಿಪುರಾಂತಕಾಯ ತ್ರಿಕಾಲಾಗ್ನಿಕಾಲಾಯ ಕಾಲಾಗ್ನಿರುದ್ರಾಯ ನೀಲಕಂಠಾಯ ಮೃತ್ಯುಂಜಯಾಯ ಸರ್ವೇಶ್ವರಾಯ ಸದಾಶಿವಾಯ ಶ್ರೀಮನ್ಮಹಾದೇವಾಯ ನಮಃ ಓಂ ನಿಧನಪತಯೇ ನಮಃ ನಿಧನಪತಾಂತಿಕಾಯ ನಮಃ ಓಂ ಊಧ್ರ್ವಾಯ ನಮಃ ಊಧ್ರ್ವಲಿಂಗಾಯ ನಮಃ ಓಂ ಹಿರಣ್ಯಾಯ ನಮಃ ಹಿರಣ್ಯಲಿಂಗಾಯನಮಃ ಓಂ ಸುವರ್ಣಾಯ ನಮಃ ಸುವರ್ಣಲಿಂಗಾಯ ನಮಃ ಓಂ ದಿವ್ಯಾಯ ನಮಃ ದಿವ್ಯಲಿಂಗಾಯ ನಮಃ ಓಂ ಭವಾಯ ನಮಃ ಭವಲಿಂಗಾಯ ನಮಃ ಓಂ ಶಿವಾಯ ನಮಃ ಶಿವಲಿಂಗಾಯ ನಮಃ ಓಂ ಜ್ಯೇಷಾ*ಯ ನಮಃ ಜ್ಯೇಷ*ಲಿಂಗಾಯ ನಮಃ ಓಂ ಶ್ರೇಷಾ*ಯ ನಮಃ ಶ್ರೇಷ*ಲಿಂಗಾಯ ನಮಃ ಓಂ ಜ್ವಲಾಯ ನಮಃ ಜ್ವಲಲಿಂಗಾಯ ನಮಃ ಓಂ ಸ್ಥೂಲಾಯ ನಮಃ ಸ್ಥೂಲಲಿಂಗಾಯ ನಮಃ ಓಂ ಸೂಕ್ಷ್ಮಾಯ ನಮಃ ಸೂಕ್ಷ್ಮಲಿಂಗಾಯ ನಮಃ ಓಂ ಶೂನ್ಯಾಯ ನಮಃ ಶೂನ್ಯಲಿಂಗಾಯ ನಮಃ ಓಂ ನೇತ್ರಾಯ ನಮಃ ನೇತ್ರಲಿಂಗಾಯ ನಮಃ ಓಂ ಶ್ರೋತ್ರಾಯ ನಮಃ ಶ್ರೋತ್ರಲಿಂಗಾಯ ನಮಃ ಓಂ ಘ್ರಾಣಾಯ ನಮಃ ಘ್ರಾಣಲಿಂಗಾಯ ನಮಃ ಓಂ ಪ್ರಾಣಾಯ ನಮಃ ಪ್ರಾಣಲಿಂಗಾಯ ನಮಃ ಓಂ ವ್ಯೋಮಾಯ ನಮಃ ವ್ಯೋಮಲಿಂಗಾಯ ನಮಃ ಓಂ ಆತ್ಮಾಯ ನಮಃ ಆತ್ಮಲಿಂಗಾಯ ನಮಃ ಓಂ ಪರಮಾಯ ನಮಃ ಪರಮಲಿಂಗಾಯ ನಮಃ ಓಂ ಶರ್ವಾಯ ನಮಃ ಶರ್ವಲಿಂಗಾಯ ನಮಃ ಓಂ ಶಾಂತಾಯ ನಮಃ ಶಾಂತಲಿಂಗಾಯ ನಮಃ ಓಮೇತತ್ಸೋಮಸ್ಯ ಸೂರ್ಯಸ್ಯ ಸರ್ವಲಿಂಗಂ ಸ್ಥಾಪಯತಿ ಪಾಣಿಮಂತ್ರಂ ಪವಿತ್ರಮ್ ಓಂ ನಮಸ್ತೇ ಸರ್ವೋ ವೈ ರುದ್ರಸ್ತಸ್ಮೈ ರುದ್ರಾಯ ನಮೋsಸ್ತು ನಮೋ ಹಿರಣ್ಯಬಾಹವೇ ಹಿರಣ್ಯವರ್ಣಾಯ ಹಿರಣ್ಯರೂಪಾಯ ಹಿರಣ್ಯಪತಯೇ ಅಂಬಿಕಾಪತಯೇ ಉಮಾಪತಯೇ ಪಶುಪತಯೇ ನಮೋ ನಮಃ ಋತಂ ಸತ್ಯಂ ಪರಬ್ರಹ್ಮ ಪುರುಷಂ ಕೃಷ್ಣಪಿಂಗಲಂ ಊಧ್ರ್ವರೇತಂ ವಿರೂಪಾಕ್ಷಂ ವಿಶ್ವರೂಪಾಯ ವೈ ನಮೋ ನಮಃ ಓಂ ಸದ್ಯೋಜಾತಂ ಪ್ರಪದ್ಯಾಮಿ ಸದ್ಯೋಜಾತಾಯ ವೈ ನಮೋ ನಮಃ ಭವೇ ಭವೇ ನಾತಿಭವೇ ಭವಸ್ವ ಮಾಂ ಭವೋದ್ಭವಾಯ ನಮಃ ಓಂ ವಾಮದೇವಾಯ ನಮೋ ಜ್ಯೇಷಾ*ಯ ನಮಃ ಶ್ರೇಷಾ*ಯ ನಮೋ ರುದ್ರಾಯ ನಮಃ ಕಾಲಾಯ ನಮಃ ಕಲವಿಕರಣಾಯ ನಮೋ ಬಲವಿಕರಣಾಯ ನಮೋ ಬಲಾಯ ನಮೋ ಬಲಪ್ರಮಥನಾಥಾಯ ನಮಃ ಸರ್ವಭೂತದಮನಾಯ ನಮೋ ಮನೋನ್ಮನಾಯ ನಮಃ ಓಂ ಅಘೋರೇಭ್ಯೋsಥ ಘೋರೇಭ್ಯೋ ಘೋರಘೋರತರೇಭ್ಯಃ ಸರ್ವೇಭ್ಯಸ್ಯರ್ವ ಸರ್ವೇಭ್ಯೋ ನಮಸ್ತೇ ಅಸ್ತು ರುದ್ರರೂಪೇಭ್ಯಃ ಶ್ರೀ ಸದಾಶಿವಾಯ ನಮಃ ಓಂ ತತ್ಪುರುಷಾಯ ವಿದ್ಮಹೇ ಮಹಾದೇವಾಯ ಧೀಮಹಿ ತನ್ನೋ ರುದ್ರಃ ಪ್ರಚೋದಯಾತ್ ಓಮೀಶಾನಃ ಸರ್ವವಿದ್ಯಾನಾಮೀಶ್ವರಃ ಸರ್ವಭೂತಾನಾಂ ಬ್ರಹ್ಮಾಧಿಪತಿಬ್ರಹ್ಮಣೋsಧಿಪತಿಬ್ರ್ರಹ್ಮಾ ಶಿವೋ ಮೇ ಅಸ್ತು ಸದಾಶಿವೋಂ ಕದ್ರುದ್ರಾಯ ಪ್ರಚೇತಸೇ ಮೀಡುಷ್ಟಮಾಯ ತವ್ಯಸೇ ವೋಚೇಮ ಶಂತಮಗ್‍ಂ ಹೃದೇ ಏಕಃ ಶಿವ ಏವಾನ್ಯರಹಿತಾಯ ತೇ ನಮೋ ನಮಃ ಓಂ ವಿಶ್ವಂ ಭೂತಂ ಭುವನಂ ಚಿತ್ರಂ ಬಹುಧಾಜಾತಂ ಜಾಯಮಾನಂ ಚ ಯತ್ ಓಂ ಶಂ ಚ ಮೇ ಮಯಶ್ಚ ಮೇ ಪ್ರಿಯಂ ಚ ಮೇ[s] ಸುಕಾಮಶ್ಚ ಮೇ ಕಾಮಶ್ಚ ಮೇ ಸೌಮನಶ್ಚ ಮೇ ಭದ್ರಂ ಚ ಮೇ ಶ್ರೇಯಶ್ಚ ಮೇ ವಸ್ಯಶ್ಚ ಮೇ ಯಶಶ್ಚ ಮೇ ಭಗಶ್ಚ ಮೇ ದ್ರವಿಣಂ ಚ ಮೇ ಯಂತಾ ಚ ಮೇ ಧರ್ತಾ ಚ ಮೇ ಕ್ಷೇಮಶ್ವಮೇ ಧೃತಿಶ್ಚಮೇ ವಿಶ್ವಂ ಚ ಮೇ ಮಹಶ್ಚಮೇ ಸಂವಿಚ್ಚ ಮೇ ಜ್ಞಾತ್ರಂ ಚ ಮೇ ಸೂಶ್ಚ ಮೇ ಪ್ರಸೂಶ್ಚ ಮೇ ಸೀರಂ ಚ ಮೇ ಲಯಶ್ಚಯ ಮೇ ಅಮೃತಂ ಚ ಮೇ ಯಕ್ಷ್ಮಂಚ ಮೇ[s] ಮೃತಂ ಚ ಮೇ ನಾಮಯಶ್ಚ ಮೇ ಜೀವಾತು ಶ್ಚ ಮೇ ದೀರ್ಘಾಯುತ್ವಂ ಚ ನಮಿತ್ರಂ ಚ ಮೇS ಭಯಂ ಚಮೇ ಸುಗಂಧಂ ಚ ಮೇ ಶಯನಂ ಚ ಮೇ ಸೂಷಾ ಚ ಮೇ ಸುದಿನಂ ಚ ಮೇ ಓಂ ಸಹನಾವವತು ಸಹ £õ್ಞ ಭುನಕ್ತು ಸಹ ವೀರ್ಯಂ ಕರವಾವಹೈ ತೇಜಸ್ವಿನಾವಧೀತಮಸ್ತು ಮಾ ವಿದ್ವಿಷಾವಹೈ ಓಂ ಶಾಂತಿಃ ಶಾಂತಿಃ ಶಾಂತಿಃ ಎಂದೀ ಮಂತ್ರದಿಂದ ಜಲಶುದ್ಧವಂ ಮಾಡುವುದು. ಇನ್ನು ಜಂಗಮಕ್ಕೆ ಪಾದಾರ್ಚನೆಯಂ ಮಾಡುವ ಕ್ರಮವೆಂತೆಂದಡೆ_ ಅಂಗುಷಾ*ಗ್ರೇ ಅಷ್ಟಷಷ್ಟಿ ತೀರ್ಥಾನಿ ನಿವಸಂತಿ ವೈ ಸಪ್ತಸಾಗರಪಾದಾಧಸ್ತದೂಧ್ರ್ವೇ ಕುಲಪರ್ವತಾಃ ಚರಸ್ಯ ಪಾದತೀರ್ಥೇನ ಲಿಂಗಮಜ್ಜನಮುತ್ತಮವಮ್ ತತ್ಪ್ರಸಾದಂ ಮಹಾದೇವಿ ನೈವೇದ್ಯಂ ಶುಭಮಂಗಲಮ್ ಈ ಮಂತ್ರದಿಂದ ಪಾದಾರ್ಚನೆಯಂ ಮಾಡುವುದು. ಇನ್ನು ಕುಮಾರಠಾವನು ಜಲಾಭಿವಾಸವ ಮಾಡುವ ಕ್ರಮವೆಂತೆಂದಡೆ_ ಜ್ವಾಲಾಮಾಲಾವೃತಾಂಗಾಯ ಜ್ವಲನಸ್ತಂಭರೂಪಿಣೇ ನಮಃ ಶಿವಾಯ ಶಾಂತಾಯ ಬ್ರಹ್ಮಣೇ ಲಿಂಗಮೂರ್ತಯೇ ಎಂದೀ ಮಂತ್ರದಿಂದ ಕುಮಾರಠಾವನ್ನು ಜಲಾಧಿವಾಸವ ಮಾಡಿಸುವುದು. ಇನ್ನು ಆ ಶಿಷ್ಯನ ಹಸ್ತವಂ ಶೋಧಿಸುವ ಕ್ರಮವೆಂತೆಂದಡೆ_ ಓಂ ತ್ರಾತ್ವಿಯಂ ಶಕ್ತಿಃ ಶ್ರೀಕರಂ ಚ ಪವಿತ್ರಂ ಚ ರೋಗಶೋಕಭಯಾಪಹವರಿï ಮನಸಾ ಸಹ ಹಸ್ತೇಭ್ಯೋ ಪದ್ಭ್ಯಾಮುದ್ಧರಣಾಯ ಚ ಎಂದೀ ಮಂತ್ರದಿಂದ ಶಿಷ್ಯನ ಹಸ್ತವಂ ಶೋಧಿಸುವುದು. ಇನ್ನು ವಿಭೂತಿಯ ಧರಿಸುವ ಕ್ರಮವೆಂತೆಂದಡೆ_ ಮೂಧ್ರ್ನಿ ಲಲಾಟೇ ಕರ್ಣೇ ಚ ಚಕ್ಷುಷೋಘ್ರ್ರಾಣಕೇ ತಥಾ ಆಸ್ಯೇ ದ್ವಾಭ್ಯಾಂ ಚ ಬಾಹುಭ್ಯಾಂ ತನ್ಮೂಲತನವಸ್ತಥಾ ಮಣಿಬಂಧೇ ಚ ಹೃತ್ಪಾಶ್ರ್ವೇ ನಾಭೌ ಮೇಢ್ರೇ ತಥೈವ ಚ ಉರೌ ಚ ಜಾನುಕೇ ಚೈವ ಜಂಘಾ ಪೃಷೆ*ೀ ತಥೈವ ಚ ಪಾದೇ ದ್ವಾತ್ರಿಂಶತಿಶ್ಚೈವ ಪಾದಸಂಧೌ ಯಥಾ ಕ್ರಮಾತ್ ಇತ್ಯುದ್ಧೂಳನಂ ಸ್ನಾನಂ ಧಾರಣಂ ಮೋಕ್ಷಕಾರಣಮ್ ಎಂದೀ ಮಂತ್ರದಿಂದ ಆ ಶಿಷ್ಯನ ಮೂವತ್ತೆರಡು ಸ್ಥಾನಗಳಲ್ಲಿ ವಿಭೂತಿಯಂ ಧರಿಸುವುದು. ಇನ್ನು ರುದ್ರಾಕ್ಷಿಯಂ ಧರಿಸುವ ಕ್ರಮವೆಂತೆಂದಡೆ_ ಓಂ ಹ್ರೂಂ ಶ್ರೂಂ ಭ್ರೂಂ ರೂಂ ಬ್ರೂ_ ಪ್ರರೂಮಪಿ ಸ್ರೀಯಂ ಕ್ಷೇಕ್ಷಮಪಿಕ್ಷೂ ಹ್ರೀಂ ನಮೋಂತಿ ಮಯಯೇ ಇತಿ ಪೂರ್ವೋಕ್ತ ಮಂತ್ರಾನಂತರೇ ಪ್ರಾಣನಾಯಮ್ಯ ಸಮಸ್ತ ಪಾಪಕ್ಷಯಾರ್ಥಂ ಶಿವಜ್ಞಾನಾವಾಪ್ತ್ಯರ್ಥಂ ಸಮಷ್ಟಿಮಂತ್ರೈಃ ಸಹ ಧಾರಣಂ ಕರಿಷ್ಯೇ ಇತಿ ಸಂಕಲ್ಪ್ಯ_ ಶಿರಸಾ ಧಾರಯೇತ್ಕೋಟಿ ಕರ್ಣಯೋರ್ದಶಕೋಟಿಭಿಃ ಶತಕೋಟಿ ಗಳೇ ಬದ್ಧಂ ಸಹಸ್ರಂ ಬಾಹುಮೂಲಯೋಃ ಅಪ್ರಮಾಣಫಲಂ ಹಸ್ತೇ ರುದ್ರಾಕ್ಷಂ ಮೋಕ್ಷಸಾಧನವರಿï ಎಂದೀ ಮಂತ್ರದಿಂದ ಆ ಶಿಷ್ಯನ ಹಸ್ತಂಗಳಲ್ಲಿ ರುದ್ರಾಕ್ಷಿಯಂ ಧರಿಸುವುದು, ಇನ್ನು ಜಲಾಧಿವಾಸದೊಳಗಣ ಕುಮಾರಠಾವಂ ತೆಗೆಯುವ ಕ್ರಮವೆಂತೆಂದಡೆ_ ಮಹಾದೇವಾಯ ಮಹತೇ ಜ್ಯೋತಿಷೇSನಂತತೇಜಸೇ ನಮಃ ಶಿವಾಯ ಶಾಂತಾಯ ಬ್ರಹ್ಮಣೇ ಲಿಂಗಮೂರ್ತಯೇ ಎಂದೀ ಮಂತ್ರದಿಂದ ಜಲಾಧಿವಾಸದೊಳಗಣ ಕುಮಾರಠಾವಂ ತೆಗೆಯುವದು. ಇನ್ನು ಶಿಲೆಯ ಪೂವಾಶ್ರಯವಂ ಕಳೆವ ಪರಿಯೆಂತೆಂದಡೆ_ ವಿಶ್ವತಶ್ಚಕ್ಷುರುತ ವಿಶ್ವತೋಮುಖೋ ವಿಶ್ವತೋಬಾಹುರುತ ವಿಶ್ವತಃಸ್ವಾತ್ ಸಂಬಾಹುಭ್ಯಾಂ ದಮತಿ ಸಂಪದಂ ತ್ರಯೀ_ ದ್ರ್ಯಾವಾಭೂಮೀ ಜನಯನ್ ದೇವ ಏಕಃ ಎಂದೀ ಮಂತ್ರದಿಂದ ಆ ಶಿಲೆಯ ಪೂರ್ವಾಶ್ರಯವಂ ಕಳೆವುದು. ಇನ್ನು ಆ ಶಿಲೆಗೆ ಪ್ರಾಣ ಪ್ರತಿಷೆ*ಯಂ ಮಾಡುವ ಕ್ರಮವೆಂತೆಂದಡೆ_ ಓಂ ವಿಶ್ವಾಧಿಕೋ ರುದ್ರೋ ಮಹರ್ಷಿಃ ಸರ್ವೋ ಹ್ಯೇಷ ರುದ್ರ ಸ್ತಸ್ಮೈ ರುದ್ರಾಯ ತೇ ಅಸ್ತು ನಮೋ ರುದ್ರೋ ವೈ ಕ್ರೂರೋ_ ರುದ್ರಃ ಪಶುನಾಮಧಿಪತಿಸ್ತಥಾ ದೇವಾ ಊಧ್ರ್ವಬಾಹವೊ_ ರುದ್ರಾ ಸ್ತುನ್ವಂತಿ ಯಸ್ಮಾತ್ಪರಂ ನಾಪರಮಸ್ತಿ ಕಿಂಚಿದ್ಯಸ್ಯಾನಾ ಣೀಯೋ ನ ಧ್ಯೇಯಃ ಕಿಂಚಿತ್ ಶಿವ ಏಕೋ ಧ್ಯೇಯಃ ಎಂದೀ ಮಂತ್ರದಿಂದ ಆ ಶಿಲೆಗೆ ಪ್ರಾಣಪ್ರತಿಷೆ*ಯಂ ಮಾಡುವುದು. ಇನ್ನು ದೇವರಿಗೆ ಸ್ನಪನಕ್ಕೆರೆಯುವ ಕ್ರಮವೆಂತೆಂದಡೆ_ ಸಪುಷ್ಪಶೀರ್ಷಕಂ ಲಿಂಗಂ ತಥಾ ಸ್ನಪನಮಾಚರೇತ್ ಪಯೋಧಧ್ಯಾಜಮಧ್ವಿಕ್ಷುರಸೈರ್ಮೂಲೇನ ಪಂಚಭಿಃ ಓಮನಂತ ಶುಚಿರಾಯುಕ್ಷ ಭಕ್ತಂ ತಿಸ್ತರತಾತ್ ಪರಮಂ ನಿಯಮುಚ್ಯತೇರ್ಮರಾತಸ್ಯ ಅವಿರಸ ಭುವನಂ ಜ್ಯೋತಿರೂಪಕವರಿï ಎಂದೀ ಮಂತ್ರದಿಂದ ದೇವರಿಗೆ ಸ್ನಪನಕ್ಕೆರೆವುದು. ಇನ್ನು ದೇವರಿಗೆ ವಸ್ತ್ರವಂ ಸಮರ್ಪಿಸುವುದೆಂತೆಂದಡೆ - ವ್ಯೋಮರೂಪ ನಮಸ್ತೇSಸ್ತು ವ್ಯೋಮತ್ಮಾಯ ಪ್ರಹರ್ಷಿಣೇ ವಾಸಾಂಸಿ ಚ ವಿಚಿತ್ರಾಣಿ ಸರವಂತಿ ಮೃದೂನಿ ಚ ಶಿವಾಯ ಗುರವೇ ದತ್ತಂ ತಸ್ಯ ಪುಣ್ಯಫಲಂ ಶೃಣು ಏವಂ ತದ್ವಸ್ತ್ರತಂತೂನಾಂ ಪರಿಸಂಖ್ಯಾತ ಏವ ಹಿ ತಾವದ್ವರ್ಷಸಹಸ್ರಾಣಿ ರುದ್ರಲೋಕೇ ಮಹೀಯತೇ ಎಂದೀ ಮಂತ್ರದಿಂದ ದೇವರಿಗೆ ವಸ್ತ್ರವಂ ಸಮರ್ಪಿಸುವುದು. ಇನ್ನು ದೇವರಿಗೆ ಗಂಧವಂ ಸಮರ್ಪಿಸುವ ಕ್ರಮವೆಂತೆಂದಡೆ- ಚಂದನಾಗರುಕರ್ಪೂರತಮಾಲದಳಕುಂಕುಮಂ ಉಶೀರಕೋಷ*ಸಂಯುಕ್ತಂ ಶಿವಗಂಧಾಷ್ಟಕಂ ಸ್ಮೃತವಮ್ ಆಚಮಾನಸ್ತು ಸಿದ್ಧಾರ್ಥಂ ಅವಧಾರ್ಯ ಯಥೈವ ಚ ಅಷ್ಟಗಂಧಸಮಾಯುಕ್ತಂ ಪುಣ್ಯಪ್ರದಸಮನ್ವಿತವಮ್ ಎಂದೀ ಮಂತ್ರದಿಂದ ದೇವರಿಗೆ ಗಂಧಮಂ ಸಮರ್ಪಿಸುವುದು. ಇನ್ನು ದೇವರಿಗೆ ಅಕ್ಷತೆಯನರ್ಪಿಸುವ ಕ್ರಮವೆಂತೆಂದಡೆ ಅಭಿನ್ನಶಂಖವಚ್ಚೈವ ಸುಶ್ವೇತವ್ರೀಹಿತಂಡುಲವಮ್ ಸ್ಮೃತಂ ಶಿವಾರ್ಚನಾಯೋಗ್ಯಂ ನೇತರಂ ಚ ವರಾನನೇ ಗಂಧಾಕ್ಷತಸಮಾಯುಕ್ತಂ ಶಿವಮುಕ್ತೇಶ್ಚಕಾರಣಮ್ ಸರ್ವವಿಘ್ನವಿನಿರ್ಮುಕ್ತಂ ಶಿವಲೋಕೇ ಮಹೀಯತೇ ಎಂದೀ ಮಂತ್ರದಿಂದ ದೇವರಿಗೆ ಅಕ್ಷತೆಯಂ ಸಮರ್ಪಿಸುವುದು. ಇನ್ನು ದೇವರಿಗೆ ಪುಷ್ಪವಂ ಸಮರ್ಪಿಸುವ ಕ್ರಮವೆಂತೆಂದಡೆ - ಮಲ್ಲಿಕೋತ್ಪಲಪುನ್ನಾಗಕದಂಬಾಶೋಕಚಂಪಕಮ್ ಸೇವಂತಿಕರ್ಣಿಕಾರಾಖ್ಯಂ ತ್ರಿಸಂಧ್ಯಾರಕ್ತಕೇಸರೀ ಕದಂಬವನಸಂಭೂತಂ ಸುಗಂಧಿಂ ಚ ಮನೋಹರಮ್ ತತ್ವತ್ರಯಾತ್ಮಕಂ ದಿವ್ಯಂ ಪುಷ್ಪಂ ಶಂಭೋSರ್ಪಯಾಮಿ ತೇ ಎಂದೀ ಮಂತ್ರದಿಂದ ದೇವರಿಗೆ ಪುಷ್ಪವ ಸಮರ್ಪಿಸುವದು. ಇನ್ನು ದೇವರಿಗೆ ಧೂಪವ ಸಮರ್ಪಿಸುವ ಕ್ರಮವೆಂತೆಂದಡೆ- ಗುಗ್ಗುಲಂ ಘೃತಸಂಯುಕ್ತಂ ಲಿಂಗಮಭ್ಯಚ್ರ್ಯ ಸಂದಹೇತ್ ವನಸ್ಪತಿವಾಸನೋಕ್ತಂ ಗಂಧಂ ದದ್ಯಾತ್ತಮುತ್ತಮಮ್ ಅರ್ಪಣಾದೇವ ದೇವಾಯ ಭಕ್ತಪಾಪಹರಾಯ ಚ ಎಂಬೀ ಮಂತ್ರದಿಂದ ದೇವರಿಗೆ ಧೂಪವನರ್ಪಿಸುವುದು. ಇನ್ನು ದೇವರಿಗೆ ದೀಪವ ಸಮರ್ಪಿಸುವ ಕ್ರಮವೆಂತೆಂದಡೆ- ಸ್ವಪ್ರಕಾಶ ಮಹಾತೇಜ ಸರ್ವಾಂತಸ್ತಿಮಿರಾಪಹೆ ಸ ಬಾಹ್ಯಾಭ್ಯಂತರಂ ಜ್ಯೋತಿರ್ದೀಪೊSಯಂ ಪ್ರತಿಗೃಹ್ಯತಾಮ್ ಎಂಬೀ ಮಂತ್ರದಿಂದ ದೇವರಿಗೆ ದೀಪವನರ್ಪಿಸುವುದು. ಇನ್ನು ದೇವರಿಗೆ ನೈವೇದ್ಯವನರ್ಪಿಸುವ ಕ್ರಮವೆಂತೆಂದಡೆ- ಕ್ಷೀರವಾರಿದಿ[s]ಸಂಭೂತಮಮೃತಂ ಚಂದ್ರಸನ್ನಿಭಮ್ ನೈವೇದ್ಯಂ ಷಡ್ರಸೋಪೇತಂ ಶಾಶ್ವತಾಯ ಸಮರ್ಪಿತಮ್ ಎಂಬೀ ಮಂತ್ರದಿಂದ ದೇವರಿಗೆ ನೈವೇದ್ಯವ ಸಮರ್ಪಿಸುವುದು. ಇನ್ನು ದೇವರಿಗೆ ತಾಂಬೂಲವ ಸಮರ್ಪಿಸುವ ಕ್ರಮವೆಂತೆಂದಡೆ- ಪೂಗಸಂಭೂತಕರ್ಪೂರ ಚೂರ್ಣಪರ್ಣದ್ವಿಸಂಯುತಃ ತ್ರಯೋದಶಕಲಾತ್ಮಾನಂ ತಾಂಬೂಲಂ ಫಲಮುಚ್ಯತೇ ಎಂದೀ ಮಂತ್ರದಿಂದ ದೇವರಿಗೆ ತಾಂಬೂಲವ ಸಮರ್ಪಿಸುವುದು. ಇನ್ನು ದೇವರಿಗೆ ಮಂತ್ರಪುಷ್ಪವ ಸಮರ್ಪಿಸುವ ಕ್ರಮವೆಂತೆಂದಡೆ ತ್ರಿಯಂಬಕಂ ಯಜಾಮಹೇ ಸುಗಂಧಿಂ ಪುಷ್ಟಿವರ್ಧನವಮ್ ಉರ್ವಾರುಕಮಿವ ಬಂಧನಾನ್ಮುೃತ್ಯೋರ್ಮುಕ್ಷೀಯ ಮಾಮೃತಾತ್ ಎಂಬೀ ಮಂತ್ರದಿಂದ ದೇವರಿಗೆ ಮಂತ್ರಪುಷ್ಪವಂ ಸಮರ್ಪಿಸುವುದು. ಇನ್ನು ದೇವರಿಗೆ ನಮಸ್ಕಾರವಂ ಮಾಡುವ ಕ್ರಮವೆಂತೆಂದಡೆ- ಪಿÀಠಂ ಯಸ್ಯಾ ಧರಿತ್ರೀ ಜಲಧರಕಲಶಂ ಲಿಂಗಮಾಕಾಶಮೂರ್ತಿಂ ನಕ್ಷತ್ರಂ ಪುಷ್ಪಮಾಲ್ಯಂ ಗ್ರಹಗಣಕುಸುಮಂ ನೇತ್ರಚಂದ್ರಾರ್ಕವಹ್ನಿಮ್ ಕುಕ್ಷಿಂ ಸಪ್ತ ಸಮುದ್ರಂ ಭುಜಗಿರಿಶಿಖರಂ ಸಪ್ತಪಾತಾರಿಪಾದಂ ವೇದಂ ವಕ್ತ್ರಂ ಷಡಂಗಂ ದಶದಿಶಸನಂ ದಿವ್ಯಲಿಂಗಂ ನಮಾಮಿ ಎಂಬೀ ಮಂತ್ರದಿಂದ ದೇವರಿಗೆ ನಮಸ್ಕಾರವಂ ಮಾಡುವುದು. ಇನ್ನು ದೇವರಿಗೆ ಅನುಷಾ*ನವಂ ಮಾಡುವ ಕ್ರಮವೆಂತೆಂದಡೆ- ``ಏತೇಷಾಂ ಪುರುಷೋsಸ್ತು'' ಎಂದೀ ಮಂತ್ರದಿಂದ ದೇವರಿಗೆ ಅನುಷಾ*ನವಂ ಮಾಡುವುದು. ಇನ್ನು ಅನುಷಾ*ನವಂ ಮಾಡಿದ ಬಳಿಕ ಶ್ರೀಗುರುವು ಶಿಷ್ಯಂಗೆ ಉರಸ್ಥಲದ ಸಜ್ಜೆಯಲ್ಲಿ ಲಿಂಗವ ಧರಿಸುವ ಕ್ರಮವೆಂತೆಂದಡೆ- ಅಯಂ ಮೇ ಹಸ್ತೊ ಭಗವಾನ್ ಅಯಂ ಮೇ ಭಗವತ್ತರಃ ಅಯಂ ಮೇ ವಿಶ್ವಭೇಷಜಃ ಅಯಂ ಶಿವಾಭಿಮರ್ಶನಃ ಅಯಂ ಮಾತಾ ಅಯಂ ಪಿತಾ ಅಯಂ ಜೀವಾತುರಗಮತ್ ಇದಂ ತವ ಸಮರ್ಪಣಂ ಸುಬಂಧವೇ ನಿರೀಹಿ ಎಂದೀ ಮಂತ್ರದಿಂದ ಆ ಶಿಷ್ಯನ ಅಂಗದ ಮೇಲೆ ಲಿಂಗಪ್ರತಿಷೆ*ಯಂ ಮಾಡುವುದು. ಇನ್ನು ಆ ಶಿಷ್ಯನ ವಾಯುಪ್ರಾಣಿತ್ವವಂ ಕಳೆದು ಲಿಂಗಪ್ರಾಣಿಯ ಮಾಡುವ ಕ್ರಮವೆಂತೆಂದಡೆ- ಓಂ ಅಪಿ ಚ ಪ್ರಾಣಾಪಾನವ್ಯಾನೋದಾನಸಮಾನಾದಿ ತಚ್ಚೈತನ್ಯ ಸ್ವರೂಪಸ್ಯ ಪರಮೇಶ್ವರಸ್ಯ ಓಂ ಶ್ರದ್ಧಾಯಾಂ ಪ್ರಾಣೇನ ವಿಷ್ಣೋSಮೃತಂ ಜುಹೋಮಿ ಶಿವೋ ಮಾಂ ವಿಷಪ್ರದಾಹಾಯ ಪ್ರಾಣಾಯ ಸ್ವಾಹಾ ಓಂ ಶ್ರದ್ಧಾಯಾಮಪಾನೇನ ವಿಷ್ಣೋSಮೃತಂ ಜುಹೋಮಿ ಶಿವೋ ಮಾಂ ವಿಷಪ್ರದಾಹಾಯ ಅಪಾನಾಯ ಸ್ವಾಹಾ ಓಂ ಶ್ರದ್ಧಾಯಾಂ ವ್ಯಾನೇನ ವಿಷ್ಣೋSಮೃತಂ ಜುಹೋಮಿ ಶಿವೋ ಮಾಂ ವಿಷಪ್ರದಾಹಾಯ ವ್ಯಾನಾಯ ಸ್ವಾಹಾ ಓಂ ಶ್ರದ್ಧಾಯಾಮುದಾನೇನ ವಿಷ್ಣೋSಮೃತಂ ಜುಹೋಮಿ ಶಿವೋ ಮಾಂ ವಿಷಪ್ರದಾಹಾಯ ಉದಾನಾಯ ಸ್ವಾಹಾ ಓಂ ಶ್ರದ್ಧಾಯಾಂ ಸಮಾನೇನ ವಿಷ್ಣೋSಮೃತಂ ಜುಹೋಮಿ ಶಿವೋ ಮಾಂ ವಿಷಪ್ರದಾಹಾಯ ಸಮಾನಾಯ ಸ್ವಾಹಾ ಎಂದೀ ಮಂತ್ರದಿಂದ ಆ ಶಿಷ್ಯನ ವಾಯುಪ್ರಾಣಿತ್ವವ ಕಳೆದು ಲಿಂಗ ಪ್ರಾಣಿಯಂ ಮಾಡುವುದು. ಇನ್ನು ಆ ಶಿಷ್ಯಂಗೆ ಅಗ್ರೋದಕವನ್ನು ಸರ್ವಾಂಗದ ಮೇಲೆ ತಳಿವ ಕ್ರಮವೆಂತೆಂದಡೆ- ಶಿವಃ ಪಶ್ಯತಿ ಶಿವೋ ದೃಶ್ಯತೇ ಅಹೋರಾತ್ರಂ ಶಿವಸನ್ನಿಧಾವೈಕಮೇನಂ ಪ್ರಯುಜ್ಯತೇ ತ್ರೈಜಾತಾಮಿ ಯಜೇಕಂ ಆ ಸರ್ವೇಭ್ಯೋಹಿ ಕಾಮೇಭ್ಯೋ ಅಗ್ನೀನಾಂ ಪ್ರಯುಜ್ಯತೇ ಸರ್ವೇಭ್ಯೋ ಹಿ ಕಾಮೇಭ್ಯೋ ಅಗ್ನೀನಾಂ ಪ್ರಯುಜ್ಯತೇ ತ್ರೈಜಾತಾಮಿಯಜೇಕಂ ಅಭಿಚಾರನ್ ಇತಿ ಸರ್ವೋ ವೈ ಏಷ ಯಜ್ಞಃ ಯತ್ರೋಪಾತ್ತಯಜ್ಞಃ ಸರ್ವೇಷಾಮೇನಂ ಯಜ್ಞೇನ ಜಾಯತೇ ನ ದೇವತಾಭ್ಯಾಂ ಆ ಉಚ್ಯತೇ ದ್ವಾದಶಕಪಾಲ ಪೂರುಷೋ ಭವತಿ ತಂ ತೇ ಯಜೇತ ಕಪಾಲ ಸ್ತ್ರೀಸಾಮುದ್ರೈ- ತ್ರಯಂ ತ್ರಯೀ ಮೇ ಲೋಕಾ ಏಷಾಮ್- ಲೋಕಾನಾಮಪ್ಯುತ್ತರೋತ್ತರ ಜ್ಞೇಯೋ ಭವತಿ ಎಂದೀ ಮಂತ್ರದಿಂದ ಆ ಶಿಷ್ಯಂಗೆ ಸರ್ವಾಂಗದಲ್ಲಿ ಅಗ್ರೋದಕವಂ ತಳೆವುದು. ಇನ್ನು ಆ ಶಿಷ್ಯನ ಭಾಳದಲ್ಲಿವಿಭೂತಿಯ ಪಟ್ಟವಂ ಕಟ್ಟುವ ಕ್ರಮವೆಂತೆಂದಡೆ ಓಂ ತ್ರಿಪುಂಡ್ರಂ ಸತತಂ ತ್ರಿಪುಂಡ್ರಂ ಸರ್ವದೇವಲಲಾಟಪಟ್ಟತ್ರಿಪುಂಡ್ರಂ ಸಪ್ತಜನ್ಮಕೃತಂ ಪಾಪಂ ಭಸ್ಮೀಭೂತಂ ತತಃ ಕ್ಷಣಮ್ ಎಂದೀ ಮಂತ್ರದಿಂದ ಆ ಶಿಷ್ಯನ ಭಾಳದಲ್ಲಿ ವಿಭೂತಿ ಪಟ್ಟವಂ ಕಟ್ಟುವುದು. ಇನ್ನು ಆ ಶಿಷ್ಯನ ದುರಕ್ಷರವ ತೊಡೆವ ಕ್ರಮವೆಂತೆಂದಡೆ- ಐಶ್ವರ್ಯಕಾರಣಾಧ್ಭೂತಿರ್ಭಾಸನಾದ್ಭಸಿತಂ ತಥಾ ಸರ್ವಾಂಗಾಭ್ಯರ್ಚನಾದ್ಭಸ್ಮ ಚಾಪದಕ್ಷರಣಾತ್ ಕ್ಷರಂ ತತೋಭೂತಪ್ರೇತಪಿಶಾಚಬ್ರಹ್ಮರಾಕ್ಷಸ - ಅಪಸ್ಮಾರಭವಭೀತಿಭ್ಯೋ ಭೀಕಾರಣಾದ್ರಕ್ಷಾ ರಕ್ಷತೇ ಏತಾನಿ ತಾನಿ ಶಿವಮಂತ್ರ ಪವಿತ್ರಿತಾನಿ ಭಸ್ಮಾನಿ ಕಾಮದಹನಾಂಗ ವಿಭೂಷಿತಾನಿ ತ್ರೈಪುಂಡ್ರಕಾನಿ ರಚಿತಾನಿ ಲಲಾಟಪಟ್ಟೇ ಲುಂಪಂತಿ ದೈವಲಿಖಿತಾನಿ ದುರಕ್ಷರಾಣಿ ಎಂದೀ ಮಂತ್ರದಿಂದ ಆ ಶಿಷ್ಯನ ದುರಕ್ಷರವಂ ತೊಡೆವುದು. ಇನ್ನು ಆ ಶಿಷ್ಯನ ಲಲಾಟದಲ್ಲಿ ಲಿಂಗಲಿಖಿತವಂ ಬರೆವ ಕ್ರಮವೆಂತೆಂದಡೆ- ``ಓಂ ಓಂ ಓಂ ನಮಃ ಶಿವಾಯ ಸರ್ವಜ್ಞಾನಧಾಮ್ನೇಱಱ ಎಂದೀ ಮಂತ್ರದಿಂದ ಆ ಶಿಷ್ಯನ ಲಲಾಟದಲ್ಲಿ ಶಿವಲಿಖಿತಮಂ ಬರೆವುದು. ಇನ್ನು ಆ ಶಿಷ್ಯನ ಮಸ್ತಕದಲ್ಲಿ ಹಸ್ತವನಿರಿಸುವ ಕ್ರಮವೆಂತೆಂದಡೆ- ಉದ್ಯದ್ಭಾಸ್ಕರ ಕೋಟಿ ಪ್ರಕಾಶ ಮಹಾದರ್ಶನ ದಿವ್ಯಮೂರ್ತಿಭೀಷಣಮ್ ಭುಜಂಗಭೂಷಣಂ ಧ್ಯಾಯೇತ್ ದಿವ್ಯಾಯುಧಂ ರುದ್ರವರಿï ಸರ್ವೈಸ್ತಪಸ್ವಿಭಿಃ ಪ್ರೋಕ್ತಂ ಸರ್ವಜ್ಞೇಷು ಭಾಗಿನಮ್ ರುದ್ರಭಕ್ತಂ ಸ್ಮೃತಾಃ ಸರ್ವೇ ತ್ರಿಪುಂಡ್ರಾಂಕಿತಮಸ್ತಕಮ್ ಎಂದೀ ಮಂತ್ರದಿಂದ ಆ ಶಿಷ್ಯನ ಮಸ್ತಕದ ಮೇಲೆ ಹಸ್ತವನ್ನಿರಿಸುವುದು. ಇನ್ನು ಆ ಶಿಷ್ಯನ ಕರ್ಣದಲ್ಲಿ ಶಿವಮಂತ್ರವಂ ನಿರೂಪಿಸುವ ಕ್ರಮವೆಂತೆಂದಡೆ - ಕರ್ಣದ್ವಾರೇ ಯಥಾವಾಕ್ಯಂ ಸದ್ಗುರೋರ್ಲಿಂಗಮೀರ್ಯತೇ ಇಷ್ಟಪ್ರಾಣಸ್ತಥಾಭಾವೋ ತ್ರಿಧಾಮ್ನೈಕ್ಯಮಿದಂ ಶೃಣು ಕರ್ಣೇ ಶಿಷ್ಯಸ್ಯ ಶನಕೈಃ ಶಿವಮಂತ್ರಮುದೀರಯೇತ್ ಸ ತು ಬದ್ಧಾಂಜಲಿಃ ಶಿಷ್ಯೋ ಮಂತ್ರತದ್ಧ್ಯಾನಮಾನಸಃ ಎಂದೀ ಮಂತ್ರದಿಂದ ಆ ಶಿಷ್ಯನ ಕರ್ಣದಲ್ಲಿ ಶಿವಮಂತ್ರವಂ ನಿರೂಪಿಸುವುದು. ಇನ್ನು ಶತಪತ್ರದೊಳಗಣ ಮನಪ್ರಾಣದೊಳಗಿಪ್ಪ ಪ್ರಾಣಲಿಂಗಕ್ಕೊಂದು ಇಷ್ಟಲಿಂಗ ಸ್ಥಲಮಂ ತೋರಿಸಿ ಆ ಶಿಷ್ಯನಂ ಕೃತಕೃತ್ಯನಂ ಮಾಡಿದ ಶ್ರೀಗುರುವಿಂಗೆ ನಮೋ ನಮಃ ಎಂದು ಬದುಕಿದನಯ್ಯಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಓಂ ವಿಶ್ವನಿರಾಕಾರ ನಿರವಯನಿರ್ವಿಕಾರ ಅವಗತವಾಗ್ಮನವಾಗತ ಆಕಾಶ ಸಭಾಮೂರ್ತಿ ನಿರಾಕಾರವೆಂಬ ನಿಜಲಿಂಗವಪ್ಪ ಪರಶಿವಾನಂದ ಮೂರ್ತಿ ತನ್ನೊಳು ತ್ರಿಗುಣಾತ್ಮಕನಾಗಿಹ. ಅದೆಂತೆಂದಡೆ : ಶಿವ ಸದಾಶಿವ ಮಹೇಶ್ವರನೆಂದು ಪರಶಿವನ ತ್ರಿಗುಣಾತ್ಮಕ ಭೇದಂಗಳು, ಇಂತಪ್ಪ ಪರಶಿವನು ವಿಶ್ವದುತ್ಪತ್ಯಕಾರಣನಾಗಿ ಪಂಚಸಾದಾಖ್ಯ ರೂಪಗಳಂ ಪ್ರತ್ಯೇಕ ತ್ರಿಗುಣಾತ್ಮಕರಾಗಿ ಜ್ಯೋತಿಯಿಂ ಪೊತ್ತಿಸಲಾಪುದು. ಘನವಾದುದು ಉಪಮಿಸಬಾರದ ಮಹಾಘನದಂತೆ ಆ ಮಹಾಬೆಳಗು ತನ್ನೊಳೈದು ರೂಪಾಯಿತ್ತು. ಅದೆಂತೆಂದಡೆ : ಶಿವ ಅಮೂರ್ತಿ ಮೂರ್ತಿ ಕರ್ತೃ ಕರ್ಮರೆಂಬ ಪಂಚಬ್ರಹ್ಮ ಹುಟ್ಟಿದವು; ಅದಕೈವರು ಶಕ್ತಿಯರುದಯಿಸಿದರು, ಅವರ ನಾಮಂಗಳು:ಪರಾಶಕ್ತಿ, ಆದಿಶಕ್ತಿ, ಇಚ್ಛಾಶಕ್ತಿ ಜ್ಞಾನಶಕ್ತಿ ಕ್ರಿಯಾಶಕ್ತಿ. ಇಂತಿಂತು ಐವರನು ಪಂಚಬ್ರಹ್ಮರಿಗೆ ವಿವಾಹಂ ಮಾಡಿದೊಡಾ ಶಿವಶಕ್ತಿ ಪಂಚಕದಿಂದೊಂದು ಓಂಕಾರವೆಂಬ ಬೀಜವಂ ನಿರ್ಮಿಸಿದಡಾ, ಓಂಕಾರ ಬೀಜದಿಂದೊಂದು ವಿರಾಟಸ್ವರೂಪಮಪ್ಪ ಮಹಾಘನ ತೇಜೋಮಯವಪ್ಪ ಅನಾದಿರುದ್ರಸಹಸ್ರಾಂಶುವಿಂಗೆ ಸಾವಿರ ಶಿರ ಸಾವಿರ ನಯನ ಸಾವಿರ ದೇಹ ಸಾವಿರಪಾದವುಳ್ಳ ಸ್ವಯಂಭುಮೂರ್ತಿ ಪುಟ್ಟಿದ ಆ ಸ್ವಯಂಭುಮೂರ್ತಿಯ ಮುಖದಲ್ಲಿ ಈಶ್ವರಪುಟ್ಟಿದ, ಈಶ್ವರನ ವಾಮಭಾಗದಲ್ಲಿ ವಿಷ್ಣುಪುಟ್ಟಿದ. ದಕ್ಷಿಣಭಾಗದಲ್ಲಿ ಬ್ರಹ್ಮಪುಟ್ಟಿದ. ಇಂತು ತ್ರಿದೇವತೆಯರೊಳಗಗ್ರಜನಪ್ಪ ಮಹಾಮಹಿಮ ಈಶ್ವರನ ಪಂಚಮುಖದಲ್ಲಿ ಪಂಚಬ್ರಹ್ಮ ತೇಜೋಮಯ ರುದ್ರರು ಪುಟ್ಟಿದರು. ಅವರ ನಾಮಂಗಳು : ಸದ್ಯೋಜಾತ ವಾಮದೇವ ಅಘೋರ ತತ್ಪುರುಷ ಈಶಾನ್ಯರೆಂದಿಂತು. ಅವರೋಳ್ಸದ್ಯೋಜಾತನೆಂಬ ಅಗ್ರಜರುದ್ರ ಪುಟ್ಟಿದನು. ಆ ಸದ್ಯೋಜಾತಂಗೆ ಮಹಾರುದ್ರ ಪುಟ್ಟಿದನು. ಆ ಮಹಾರುದ್ರಂಗೆ ಶ್ರೀರುದ್ರ ಪುಟ್ಟಿದನು. ಆ ಶ್ರೀರುದ್ರಂಗೆ ರುದ್ರ ಪುಟ್ಟಿದನು. ಆ ರುದ್ರಂಗೆ ಅಗ್ನಿಯು ಅವಗತ ಪುಟ್ಟಿದವು. ಆ ಅಗ್ನಿಗೆ ಕಾಶ್ಶಪಬ್ರಹ್ಮ ಪುಟ್ಟಿದನು. ಅವಗತಕ್ಕೆ ಮಾಯಾಸ್ವಪ್ನಬ್ರಹ್ಮ ಪುಟ್ಟಿದನು. ಅದೆಂತೆಂದಡೆ : ಮಾಯವೆ ಮೃತ್ಯು, ಬ್ರಹ್ಮವೆ ಸತ್ಯ ಅದು ಮಾಯಾಸ್ವವಪ್ನಬ್ರಹ್ಮವೆನಿಸಿತ್ತು. ಇಂತಿಪ್ಪ ಬ್ರಹ್ಮವು ಮಾಯಾ ಅವಲಂಬಿಸಿಹುದಾಗಿ ಅದು ಮಾಯಾಸ್ವಪ್ನಬ್ರಹ್ಮವೆನಿಸಿತ್ತು. ಇಂತಪ್ಪ ಮಾಯಾ ಸ್ವಪ್ನಬ್ರಹ್ಮಂಗೆ ತ್ರಯೋದಶಕುಮಾರಿಯರು ಪುಟ್ಟಿದರು. ಅವರ ನಾಮಂಗಳು : ಬೃಹತಿ, ಅದಿತಿ, ದಿತಿ, ವಿನುತಾದೇವಿ, ಕದ್ರು, ಸುವರ್ಣಪ್ರಭೆ, ಕುಮುದಿನಿ, ಪ್ರಭಾದೇವಿ, ಕಾಳಿದಂಡಿ, ಮೇಘದಂಡಿ, ದಾತೃಪ್ರಭೆ, ಕುಸುಮಾವತಿ, ಪಾರ್ವಂದಿನಿ ಎಂದಿಂತು ತ್ರಯೋದಶಕುಮಾರಿಯರು ಪುಟ್ಟಿದರು. ಇದಕ್ಕೆ ಆದಿ ಪರಮೇಶ್ವರನು ಸೃಷ್ಟಿ ನಿರ್ಮಿತ ಜಗದುತ್ಪತ್ಯ ಸ್ಥಿತಿ ಲಯಗಳಾಗಬೇಕೆಂದು, ಆ ಕಾಶ್ಯಪಬ್ರಹ್ಮಗು ತ್ರಯೋದಶ ಸ್ತ್ರೀಯರಿಗೆಯು ವಿವಾಹವ ಮಾಡಿದನು. ಆ ಕಾಶ್ಯಪಬ್ರಹ್ಮನ ಮೊದಲ ಸ್ತ್ರೀಯ ಪೆಸರು ಬೃಹತಿ. ಆ ಬೃಹತಿಗೆ ಪುಟ್ಟಿದ ಮಕ್ಕಳ ಪೆಸರು ಹಿರಣ್ಯಕಾಂಕ್ಷ. ಹಿರಣ್ಯಕಾಂಕ್ಷನ ಮಗ ಪ್ರಹರಾಜ, ಪ್ರಹರಾಜ ಮಗ ಕುಂಭಿ, ಆ ಕುಂಭಿಯ ಮಗ ನಿಃಕುಂಭಿ, ನಿಃಕುಂಭಿಯ ಮಗ ದುಂದುಭಿ, ಆ ದುಂದುಭಿಯ ಮಗ ಬಲಿ, ಬಲಿಯ ಮಗ ಬಾಣಾಸುರ. ಇಂತಿವರು ಮೊದಲಾದ ಛಪ್ಪನ್ನಕೋಟಿ ರಾಕ್ಷಸರು ಪುಟ್ಟಿದರು. ಎರಡನೆಯ ಸ್ತ್ರೀಯ ಪೆಸರು ಅದಿತಿ. ಆ ಅದಿತಿಗೆ ಸೂರ್ಯ ಮೊದಲಾದ ಮೂವತ್ತುಕೋಟಿ ದೇವರ್ಕಳು ದೇವಗಣ ಪುಟ್ಟಿದವು. ಮೂರನೆಯ ಸ್ತ್ರೀಯ ಪೆಸರು ದಿತಿದೇವಿ. ಆ ದಿತಿದೇವಿಗೆ ಕೂರ್ಮ ಮೊದಲಾದ ಜಲಚರಂಗಳು ಪುಟ್ಟಿದವು. ನಾಲ್ಕನೆಯ ಸ್ತ್ರೀಯ ಪೆಸರು ವಿನುತಾದೇವಿ. ಆ ವಿನುತಾದೇವಿಗೆ ಸಿಡಿಲು, ಮಿಂಚು, ವರುಣ, ಗರುಡ ಮೊದಲಾದ ಖಗಜಾತಿಗ?ು ಪುಟ್ಟಿದವು. ಐದನೆಯ ಸ್ತ್ರೀಯ ಪೆಸರು ಕದ್ರುದೇವಿ. ಆ ಕದ್ರುವಿಗೆ ಶೇಷ, ಅನಂತ, ವಾಸುಗಿ, ಶಂಬವಾಳ, ಕಕ್ಷರ, ಕರ್ಕೋಟ, ಕರಾಂಡ, ಭುಜಂಗ, ಕುಳ್ಳಿಕ, ಅಲ್ಲಮಾಜಾರ್ಯ ಇಂತಿವು ಮೊದಲಾದ ನವಕುಲನಾಗಂಗಳು ಪುಟ್ಟಿದವು. ಆರನೆಯ ಸ್ತ್ರೀಯ ಪೆಸರು ಸುವರ್ಣಪ್ರಭೆ. ಆ ಸುವರ್ಣಪ್ರಭೆಗೆ ಚಂದ್ರ, ತಾರಾಗಣ, ನಕ್ಷತ್ರಂಗಳು ಪುಟ್ಟಿದವು. ಏಳನೆಯ ಸ್ತ್ರೀಯ ಪೆಸರು ಕುಮುದಿನಿ. ಆ ಕುಮುದಿನಿಗೆ ಐರಾವತ, ಪುಂಡರೀಕ, ಪುಷ್ಪದಂತ, ವಾಮನ, ಸುಪ್ರದೀಪ, ಅಂಜನ, ಸಾರ್ವಭೌಮ, ಕುಮುದ, ಭಗದತ್ತ ಇಂತಿವು ಮೊದಲಾದ ಮೃಗಕುಲಾದಿ ವ್ಯಾಘ್ರ ಶರಭ ಶಾರ್ದೂಲಂಗಳು ಪುಟ್ಟಿದವು. ಎಂಟನೆಯ ಸ್ತ್ರೀಯ ಪೆಸರು ಪ್ರಭಾದೇವಿ. ಆ ಪ್ರಭಾದೇವಿಗೆ ಕನಕಗಿರಿ, ರಜತಗಿರಿ, ಸೇನಗಿರಿ, ನೀಲಗಿರಿ, ನಿಷಧಗಿರಿ, ಮೇರುಗಿರಿ, ಮಾನಸಗಿರಿ ಇಂತಿವು ಮೊದಲಾದ ಪರ್ವತಂಗಳು ಪುಟ್ಟಿದವು. ಒಂಬತ್ತನೆಯ ಸ್ತ್ರೀಯ ಪೆಸರು ಕಾಳಿದಂಡಿ. ಆ ಕಾಳಿದಂಡಿಗೆ ಸಪ್ತಋಷಿಯರು ಮೊದಲಾದ ಅಷ್ಟಾಸೀತಿ ಸಹಸ್ರ ಋಷಿಯರು ಪುಟ್ಟಿದರು. ಹತ್ತನೆಯ ಸ್ತ್ರೀಯ ಪೆಸರು ಮೇಘದಂಡಿ. ಆ ಮೇಘದಂಡಿಗೆ ನೀಲಮೇಘ, ಕುಂಭಮೇಘ, ದ್ರೋಣಮೇಘ, ಧೂಮಮೇಘ, ಕಾರ್ಮೇಘ ಇಂತಿವು ಮೊದಲಾದ ಮೇಘಂಗಳು ಪುಟ್ಟಿದವು. ಹನ್ನೊಂದನೆಯ ಸ್ತ್ರೀಯ ಪೆಸರು ದಾತೃಪ್ರಭೆ. ಆ ದಾತೃಪ್ರಭೆಗೆ ಚಿಂತಾಮಣಿ ಮೊದಲಾದ ನವರತ್ನಂಗಳು ಪುಟ್ಟಿದವು. ಹನ್ನೆರಡನೆಯ ಸ್ತ್ರೀಯ ಪೆಸರು ಕುಸುಮಾವತಿ. ಆ ಕುಸುಮಾವತಿಗೆ ಕಾಮಧೇನು, ಕಲ್ಪವೃಕ್ಷಂಗಳು ಪುಟ್ಟಿದವು. ಹದಿಮೂರನೆಯ ಸ್ತ್ರೀಯ ಪೆಸರು ಪಾರ್ವಂದಿನಿ. ಆ ಪಾರ್ವಂದಿನಿಗೆ ಅಷ್ಟದಿಕ್ಪಾಲಕರು ಪುಟ್ಟಿದರು. ಇಂತಿವರುಗಳ ರಜಸ್ಸೀಲಾಶೋಣಿತದಿಂದ ಸಹಸ್ರವೇದಿ ಮೊದಲಾದ ಅಷ್ಟ ಪಾಷಾಣಂಗಳು ಪುಟ್ಟಿದವು. ಇವರುಗಳ ಮಲಮೂತ್ರದಿಂದ ಪರುಷರಸ ಸಿದ್ಧರಸ ನಿರ್ಜರೋದಕ ಪುಟ್ಟಿದವು. ಇಂತಿವರುಗಳ ಬೆಚ್ಚು ಬೆದರಿಂದ ದೇವಗ್ರಹ, ಯಕ್ಷಗ್ರಹ, ನಾಗಗ್ರಹ, ಗಾಂಧರ್ವಗ್ರಹ, ಪಿಶಾಚಗ್ರಹ, ಪೆಂತರಗ್ರಹ, ಬ್ರಹ್ಮರಾಕ್ಷಸಗ್ರಹ ಶತಕೋಟಿ ದೇವಗ್ರಹ, ಸರ್ವದರ್ಪಗ್ರಹ, ಶಾಕಿನಿ, ಡಾಕಿನಿ ಮೊದಲಾದ ಗ್ರಹಭೂತ ಪ್ರೇತ ಪಿಶಾಚಂಗಳು ಪುಟ್ಟಿದವು. ಇವರುಗಳ ಪ್ರಸೂತಿಕಾಲ ಮಾಸಿನಿಂದ ಅಷ್ಟಲೋಹ ಪಾಷಾಣಂಗಳು ಪುಟ್ಟಿದವು. ಕಾಲರಾಶಿ, ಕರಣರಾಶಿ, ಭೂತರಾಶಿ, ಮೂಲರಾಶಿ, ಪ್ರಾಣರಾಶಿಗಳು ಮೊದಲಾದ ಕೀಟಕ ಜಾತಿಗಳು ಪುಟ್ಟಿದವು. ಇಂತು ಚತುರ್ದಶ ಭುವನಂಗಳು, ಐವತ್ತಾರುಕೋಟಿ ರಾಕ್ಷಸರು, ದ್ವಾದಶಾದಿತ್ಯರು, ಮೂವತ್ತುಮೂರುಕೋಟಿದೇವರ್ಕಗಳು, ದೇವಗಣ ಸುರಪತಿ, ಖಗಪತಿ, ಸಿಡಿಲು, ಮಿಂಚು, ವರುಣ, ಗರುಡ, ನವಕುಲ ನಾಗಂಗಳು, ಚಿಂತಾಮಣಿನವರತ್ನಂಗಳು, ಕಾಮಧೇನು, ಕಲ್ಪವೃಕ್ಷ ಪರುಷರಸ, ಸಿದ್ದರಸ ನಿರ್ಜರೋದಕ, ದಿಕ್ಕರಿಗಳು, ಕೂರ್ಮ ಮೊದಲಾದ ಜಲಚರಂಗಳು, ಚಂದ್ರತಾರಾಗಣ ನಕ್ಷತ್ರಂಗಳು ಪುಟ್ಟಿದವು. ಇದಕ್ಕೆ ಶ್ರುತಿ : ಓಂ ವಿಶ್ವಕರ್ಮಹೃದಯೇ ಬ್ರಹ್ಮಚಂದ್ರಮಾ ಮನಸೋ ಜಾತಃ ಚಕ್ಷೋಸ್ಸೂರ್ಯದಯಾಭ್ಯೋ ಸರ್ವಾಂಗ ಭೂಷಿಣಿ ದೇವಸ್ಯ ಬಾಹುದ್ವಯಾಂಶಕಃ ಪ್ರತಿಬಾಹು ವಿಷ್ಣುಮೇವಚ ಮಣಿಬಂಧೇ ಪಿತಾಮಹಃ ಜ್ಯೇಷಾ*ಂಗುಲೇ ದೇವೇಂದ್ರ ತರ್ಜಂನ್ಯಂಗುಲೇ ಈಶಾನಃ ಪ್ರೋಕ್ತಃ ಮಾಧ್ಯಮಾದಂಗುಲೇ ಮಾಧವಃ ಅನಾಮಿಕಾಂಗುಲೇ ಅಗ್ನಿ ದೇವಃ ಕನಿಷ್ಟಾಂಗುಲೇ ಭಾಸ್ಕರಃ ಅಚಲಕುಚಿತಮಧ್ಯೇ ವನರ್ಚಪಾದ ಆಹ್ವಾನಾಂತು ಜಗತ್ ನಿರ್ಮಿತ ವಿಶ್ವಕರ್ಮಣಾಂ ಇಂತು ಕಾಶ್ಯಪಬ್ರಹ್ಮನ ಹದಿಮೂರು ಸ್ತ್ರೀಯರುಗಳಿಗೆ ಸಚರಾಚರಂಗಳು ಪುಟ್ಟಿದವಾಗಿ, ಇವರ ಪರಿಪ್ರಮಾಣ ನಮ್ಮ ಶರಣಸ್ಥಲದಲ್ಲಿದ್ದವರು ಬಲ್ಲರು. ಸದ್ಯೋಜಾತ, ವಾಮದೇವ, ಅಘೋರ, ತತ್ಪುರುಷ, ಈಶಾನ್ಯ, ಪಂಚವಕ್ತ್ರ, ಆದಿಲಿಂಗ, ಅನಾದಿಶರಣ ಇವರೆಲ್ಲರು ಸಾಕ್ಷಿಯಾಗಿ ಕೂಡಲಚೆನ್ನಸಂಗಯ್ಯನೆ ವಿಶ್ವಕರ್ಮ ಜಗದ್ಗುರು
--------------
ಚನ್ನಬಸವಣ್ಣ
-->