ಅಥವಾ

ಒಟ್ಟು 4 ಕಡೆಗಳಲ್ಲಿ , 2 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪ್ರಾಣಲಿಂಗಸಂಬಂದ್ಥಿಯಾದ ಮಹಾತ್ಮನು ಅರಿಷಡ್ವರ್ಗಂಗಳರಿಯ, ಕ್ಷುತ್ತು ಪಿಪಾಸು ಶೋಕ ಮೋಹ ಜರೆ ಮರಣ ಗುಣತ್ರಯದೊಳೊಂದಿ ನಿಲ್ಲ. ತನುತ್ರಯ ಮಲತ್ರಯ ಈಷಣತ್ರಯ ಜೀವತ್ರಯ ಅವಸ್ಥಾತ್ರಯವೆಂಬ ಪಂಚದಶ ಮಾಯಾಪಟಲ ಹರಿದು ಮರೆದು ಮಹಾಘನ ಬೆಳಗಿನ ಸುಖವ ಸುಗ್ಗಿಯೊಳಿರ್ದು ಪ್ರಾಣಲಿಂಗವನರ್ಚಿಸುತ್ತಿಹನು ಭಕ್ತಿತ್ರಯಗೂಡಿ ಗುರುನಿರಂಜನ ಚನ್ನಬಸವಲಿಂಗದಲ್ಲಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ಅಂಗ ಮನ ಪ್ರಾಣ ಹುಸಿಯೆಂಬುದ ಕಂಡೆಯಲ್ಲ ಮೂಗಣ್ಣಿಂದೆ. ಗುಣವರ್ಗ ಊರ್ಮಿ ಭೂತೇಂದ್ರಿಯ ಕರಣವಿಷಯಾದಿ ಸಕಲನಿಃಕಲವೆಲ್ಲ ಹುಸಿಯೆಂಬುದ ಕಂಡೆಯಲ್ಲ ಮೂಗಣ್ಣಿಂದೆ. ತನುತ್ರಯ ಮಲತ್ರಯ ಈಷಣತ್ರಯ ಜೀವತ್ರಯ ಅವಸ್ಥಾತ್ರಯವೆಂಬ ಪಂಚಾದಶ ಮಾಯಾಪಟಲಾದಿ ತಾಮಸವೆಲ್ಲ ಹುಸಿಯೆಂಬುದ ಕಂಡೆಯಲ್ಲ ಮೂಗಣ್ಣಿಂದೆ. ಕಂಡೆ ಕಾಣೆ ಬೇಕು ಬೇಡ ನಾನು ನೀನೆಂಬ ದ್ವಂದ್ವಕರ್ಮದ ಕತ್ತಲೆ ಹುಸಿಯೆಂಬುದ ಕಂಡೆಯಲ್ಲ ಮೂಗಣ್ಣಿಂದೆ. ಇಂತಿವೆಲ್ಲ ಕಂಡ ಕಾಣಿಕೆ ನಿಶ್ಚಯವಾದಲ್ಲಿ ನಿಜ ನಿರ್ವಾಣದ ನಿಲವು ನೀನೆಂಬೆ ಗುರುನಿರಂಜನ ಚನ್ನಬಸವಲಿಂಗದಲ್ಲಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ಪರಮಪವಿತ್ರ ನಿರ್ಮಲಲಿಂಗ ತನ್ನ ಅಂಗದ ಮೇಲಿರುತ್ತಿರಲು, ಅಂಗಶುದ್ಧ ಸೌಕರ್ಯವಿಲ್ಲದವನ ಮುಖವ ನೋಡಲಾಗದು. ಅವನ ಮುಟ್ಟಲೆಂತೂ ಆಗದು. ಮನದ ಮಲಿನವ ಕಳೆದು ಪ್ರಾಣಲಿಂಗವ ಧರಿಸಬೇಕು. ತನುವಿನ ಮಲವ ಕಳೆದು ಇಷ್ಟಲಿಂಗವ ಧರಿಸಬೇಕು. ಜೀವತ್ರಯಂಗಳ ಮಲವ ಕಳೆದು ಪ್ರಸಾದವ ಧರಿಸಬೇಕು. ಮನದ ಮಲಿನವಾವುದೆಂದಡೆ ಮನವ್ಯಾಕುಲ. ತನುವಿನ ಮಲಿನವಾವುದೆಂದಡೆ ತನುಗುಣವ್ಯಾಪ್ತಿ ತನುತ್ರಯದ ಮಲಿನವಾವುದೆಂದಡೆ ಈಷಣತ್ರಯ. ಜೀವತ್ರಯದ ಮಲವಾವುದೆಂದಡೆ ಅವಸ್ಥಾತ್ರಯ. ಕರಣಂಗಳ ಮಲವಾವುದೆಂದಡೆ ಸಂಕಲ್ಪ ವಿಕಲ್ಪ. ಅಸತ್ಯ ನಿಂಧ್ಯ ಮಿಥ್ಯವಾದ ಸತ್ಕಿರಿಸುತಿಹ, ಅನ್ಯರಿಗೆ ಕೈಯನಾನುಹ. `ನಿರ್ಮಲಸ್ಯ ತು ನಿರ್ಮಾಲ್ಯಂ ಮಲದೇಹೀ ನ ಧಾರಯೇತ್' ಎಂದುದಾಗಿ, ಲಿಂಗವಿಪ್ಪ ಸುಕ್ಷೇತ್ರ ಕಾಯದ ಮಲಿನವ ಕಳೆದು, ಪ್ರಸಾದವ ಧರಿಸದಿದ್ದಡೆ, ಭವಮಾಲೆ ಹಿಂಗದು, ನರಕ ತಪ್ಪದಯ್ಯಾ, ಮಹಾಲಿಂಗ ಕಲ್ಲೇಶ್ವರಾ.
--------------
ಹಾವಿನಹಾಳ ಕಲ್ಲಯ್ಯ
ಕಾಮನಾಸ್ತಿಯಾದಲ್ಲಿ ಅಷ್ಟವಿಧಾರ್ಚನೆಯ ಭಾವನಾಸ್ತಿ. ಕ್ರೋಧನಾಸ್ತಿಯಾದಲ್ಲಿ ಸುವಿಚಾರ ಭಾವನಾಸ್ತಿ. ಲೋಭನಾಸ್ತಿಯಾದಲ್ಲಿ ತನುಮನಪ್ರಾಣಭಾವನಾಸ್ತಿ. ಮೋಹನಾಸ್ತಿಯಾದಲ್ಲಿ ಈಷಣತ್ರಯ ಭಾವನಾಸ್ತಿ. ಮದನಾಸ್ತಿಯಾದಲ್ಲಿ ತ್ರಿಪುಟಿಭಾವನಾಸ್ತಿ. ಮತ್ಸರನಾಸ್ತಿಯಾದಲ್ಲಿ ಕೂಟದ ಭಾವನಾಸ್ತಿ. ಗುರುನಿರಂಜನ ಚನ್ನಬಸವಲಿಂಗನಾಸ್ತಿಯಾದಲ್ಲಿ ತಾನೆಂಬ ಭಾವನಾಸ್ತಿ.
--------------
ದೇಶಿಕೇಂದ್ರ ಸಂಗನಬಸವಯ್ಯ
-->