ಅಥವಾ

ಒಟ್ಟು 20 ಕಡೆಗಳಲ್ಲಿ , 14 ವಚನಕಾರರು , 16 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತನಗೆ ಉಂಟಾಗಿ ಶಿಷ್ಯನ ಮನೆಗೆ ಹೋಗಿ ಕಟ್ಟಳೆಯ ವರುಷಕ್ಕೆ ತಪ್ಪದೆ ಅಂಗವಸ್ತ್ರವೆಂದು ಲಿಂಗವಸ್ತ್ರವೆಂದು ಕನಕ ಪರಿಮಳವೆಂದು ಅಂದಣ ಛತ್ರ ಚಾಮರ ಕರಿ ತುರಗಂಗಳೆಂದು ಇವು ಬಂದುದಿಲ್ಲ ಎಂದು ಸಂದಣಿ ಲಂದಣಗಾರರ ಕೈಯಲ್ಲಿಹೇಳಿಸಿ ಅವು ಬಾರದಿರೆ ತಾ ಸಂದ್ಥಿಸಿ ಸೂಚಿಸುವ ಲಿಂಗ ಲಿಂಗಮಾರಿಗೆ ಗುರುಸ್ಥಲ ಎಂದಿಗೂ ಇಲ್ಲ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 39 ||
--------------
ದಾಸೋಹದ ಸಂಗಣ್ಣ
ಭಕ್ತಿಸ್ಥಲ ವರ್ತುಳರೂಪಾಗಿಹುದು. ಮಾಹೇಶ್ವರಸ್ಥಲ ಖಂಡಿಕಾವರಣವಾಗಿಹುದು. ಪ್ರಸಾದಿಸ್ಥಲ ತ್ರಿರೇಖೆಯಾಗಿಹುದು. ಪ್ರಾಣಲಿಂಗಿಸ್ಥಲ ಶಕ್ತಿನಾಭಿಸ್ವರೂಪವಾಗಿಹುದು. ಶರಣಸ್ಥಲ ಪಂಚಸೂತ್ರಪ್ರಕಾರವ ಕೂಡಿಕೊಂಡು ಪೀಠಿಕಾಸಂಬಂಧವಾಗಿ, ಗೋಳಕಾಕಾರಮೂರ್ತಿಯಾಗಿಹುದು. ಐಕ್ಯಸ್ಥಲ ದಿಗ್ವಳಯಂಗಳಿಲ್ಲದೆ ಭೇದನಾಮಶೂನ್ಯವಾಗಿ ತಿಳಿವೆಡೆಯಲ್ಲಿ ಉಂಟಾಗಿ, ತಿಳಿದ ಮತ್ತೆ ಇದಿರೆಡೆಯಿಲ್ಲವಾಗಿ ಇಂತೀ ಪಂಚಬ್ರಹ್ಮಮೂರ್ತಿ ನೀವಾಗಿ ಲೀಲೆಗೆ ಉಮಾಪತಿಯಾಗಿ, ಲೀಲೆ ನಿಂದಲ್ಲಿ ಸ್ವಯಂಭುವಾಗಿ ಇಂತೀ ಐದರಲ್ಲಿ ಭೇದಿಸಿ ಆರರಲ್ಲಿ ವೇಧಿಸಿನಿಂದ ನಿಜಸಂಬಂಧಸೂತ್ರ ಆ ಭೇದನಿಂದಲ್ಲಿ ನಿರತಿಶಯ ಸ್ವಾನುಭಾವ. ಉಭಯದ ಭಾವ ನೀನಾದೆಯಲ್ಲಾ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವೆ.
--------------
ಪ್ರಸಾದಿ ಭೋಗಣ್ಣ
ರತ್ನ ಪಾಷಾಣದ ಕುಲದಲ್ಲಿದ್ದು ಸ್ವಜಾತಿಗೆ ಸಿಕ್ಕದಂತೆ, ಗಂಧ ಕುಸುಮದಲ್ಲಿದ್ದು ಅದರೊಳಗೆ ಬಂಧಿತವಾಗದಂತೆ, ವಾಯುಸಕಲ ಚೇತನದೊಳಗಿದ್ದು ರೂಪಿಂಗೊಡಲಿಲ್ಲದೆ ಅಲೆಯಲಿಕ್ಕೆ ಉಂಟಾಗಿ, ಆ ತೆರದಂತೆ, ಹಿಡಿವಲ್ಲಿ ಬಿಡುವಲ್ಲಿ ಒಡಗೂಡುವ ಸುಖವನರಿತಡೆ; ಕಾಲಾಂತಕ ಭೀಮೇಶ್ವರಲಿಂಗವು ತಾನೆ.
--------------
ಡಕ್ಕೆಯ ಬೊಮ್ಮಣ್ಣ
ಸತ್ಯಸಹಜವುಳ್ಳ ಶಿವಶರಣರ ಕಂಡಲ್ಲಿ ಮನಮಚ್ಚಿ ಹರುಷವಡೆದು ಪ್ರೇಮದಿಂದ ಗುರುಚರಲಿಂಗ ಪೂಜೆಯ ಕ್ರಿಯೆಯಲ್ಲಿ ತನಮನವಚನ ಬೆರಗಾ[ಗಿ] ಸನ್ಮಾರ್ಗಕ್ರಿಯೆಯಲ್ಲಿಪ್ಪವಂಗೆ ಗುರುವುಂಟು. ಗುರು ಉಂಟಾಗಿ ಲಿಂಗ ಉಂಟು, ಲಿಂಗ ಉಂಟಾಗಿ ಜಂಗಮ ಉಂಟು ಜಂಗಮ ಉಂಟಾಗಿ ಪ್ರಸಾದ ಉಂಟು, ಪ್ರಸಾದ ಉಂಟಾಗಿ ಸದ್ಯೋನ್ಮುಕ್ತಿ. ಇಂತಲ್ಲದೆ ಭಕ್ತಿಯಿಲ್ಲದವಂಗೆ ಗುರುವಿಲ್ಲ, ಗುರುವಿಲ್ಲದವಂಗೆ ಲಿಂಗವಿಲ್ಲ, ಲಿಂಗವಿಲ್ಲದವಂಗೆ ಜಂಗಮವಿಲ್ಲ, ಜಂಮವಿಲ್ಲದವಂಗೆ ಪ್ರಸಾದವಿಲ್ಲ, ಪ್ರಸಾದವಿಲ್ಲದವಂಗೆ ನಿರ್ವಾಣವಿಲ್ಲ. ಇಂತಾಗಿ ಗೆಲ್ಲತನಕ್ಕೆ ಬಲ್ಲೆವೆಂದು ಹೋರಿ ಬರಿದಪ್ಪ ದುರಾಚಾರಿಗಳಿಗೆ ಸೌರಾಷ್ಟ್ರ ಸೋಮೇಶ್ವರಲಿಂಗವಂದೇ ದೂರ.
--------------
ಆದಯ್ಯ
ಸರ್ವಶೀಲದ ವ್ರತದಾಯತವೆಂತುಟೆಂದಡೆ ತನ್ನ ವ್ರತವಿಲ್ಲದ ಗುರುವ ಪೂಜಿಸಲಾಗದು. ವ್ರತವಿಲ್ಲದ ಜಂಗಮದ ಪ್ರಸಾದವ ಕೊಳಲಾಗದು. ವ್ರತವಿಲ್ಲದವರ ಅಂಗಳವ ಮೆಟ್ಟಲಾಗದು. ಅದೆಂತೆಂದಡೆ ಗುರುವಿಗೂ ಗುರು ಉಂಟಾಗಿ, ಲಿಂಗಕ್ಕೂ ಉಭಯಸಂಬಂಧ ಉಂಟಾಗಿ. ಆ ಜಂಗಮಕೂ ಗುರುಲಿಂಗ ಉಭಯವುಂಟಾಗಿ ಜಂಗಮವಾದ ಕಾರಣ. ಇಂತೀ ಗುರುಲಿಂಗಜಂಗಮಕ್ಕೂ ಪಂಚಾಚಾರ ಶುದ್ಧವಾಗಿರಬೇಕು. ಪುರುಷನ ಆಚಾರದಲ್ಲಿ ಸತಿ ನಡೆಯಬೇಕಲ್ಲದೆ ಸತಿಗೆ ಸ್ವತಂತ್ರ ಉಂಟೆ ? ಇಂತೀ ಉಭಯದ ವ್ರತವೊಡಗೂಡಿದಲ್ಲಿ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗಕ್ಕೆ ವ್ರತವೆ ವಸ್ತು.
--------------
ಅಕ್ಕಮ್ಮ
'ಷಟುಸ್ಥಲದ ಬ್ರಹ್ಮಿಗಳೆ'ಂದು ಹೇಳಿಕೊಂಬಿರಿ, ನೀವು ಕೇಳಿರಯ್ಯಾ : ನಿಮ್ಮ ಷಟುಸ್ಥಲದ ಬ್ರಹ್ಮಿಗಳ ಲಕ್ಷಣ ದಾವುದೆಂದಡೆ, ಅಂಗಲಿಂಗ ಸಂಬಂಧವಾದುದೇ ಷಟುಸ್ಥಲ. ಅಂಗ ಲಿಂಗವಾದ ಪರಿ ಎಂತೆಂದಡೆ, ಲಿಂಗ ಪೋದುದೇ ಷಟುಸ್ಥಲ: ಗ್ರಂಥ || ಅನಾದಿ ಸಂಸಿದ್ಧಸ್ಯ ಆತ್ಮಪರೀಕ್ಷಣಂ ಜಗತಾರಾ[ಧ್ಯಸ್ಯ] | ಸತ್ಯಂ ಜನನಮರಣವಿರಹಿತಂ [ಇತಿ]ಷಟ್‍ಸ್ಥಲಂ || ಇಂತೀ ಸಾಕ್ಷಿ ಉಂಟಾಗಿ, ಪರಾನ್ನ ಅಪೇಕ್ಷಿತನಾಗದೆ, ಪರಸ್ತ್ರೀಯಂ ನೋಡದೆ, ಪರರೊಡವೆಯ ಹಂಗು ಹಚ್ಚದೆ, ಪರಾತ್ಪರವಾಗಿಪ್ಪುದೆ ಜಂಗಮ ಲಿಂಗ. ಪರಮ ಹರುಷದಿಂದ ಪಾತಕವನೀಡಾಡಿ, ಪರ[ಮ] ಪುರುಷಾರ್ಥವನೇ ಗ್ರಹಿಸಿ, ಪಾವನಚರಿತನಾಗಿ, ಭಕ್ತನ ಮನೆಗೆ ನಡೆದು ಬಂದು ಬೀಯೆಂಬೋ ಪಾಪವು ಕ್ಷಯವಾಗಲೆಂದು 'ಭಿಕ್ಷಾ' ಎಂದು ನಿಂದಡೆ, ಅರಿದ ಭಕ್ತ ನೀಡಿದರೂ ಸಂತೋಷ ಅರಿಯದಿದ್ದ ಭಕ್ತ ನೀಡದಿದ್ದರೂ ಸಂತುಷ್ಟನಾಗಿ 'ಹಳ್ಳಿಗೇಕರಾತ್ರಿ ಪಟ್ಟಣಕ್ಕೆ ಪಂಚರಾತ್ರಿ' ಸಂಚರಿಸುತಿರ್ಪುದೇ ಷಟುಸ್ಥಲದ ಬ್ರಹ್ಮಿ ಎಂದು ನಮೋ ಎಂಬುವೆನಯ್ಯಾ ಬರಿದೆ 'ನಾ ಷಟುಸ್ಥಲದ ಬ್ರಹ್ಮಿ' 'ನೀ ಷಟುಸ್ಥಲದ ಬ್ರಹ್ಮಿ' ಎಂದು ತಿರುಗುವ ಮೂಳ ಹೊಲೆಯರ ಮುಖವ ನೋಡಲಾಗದು ಕಾಣೋ ಕೂಡಲಾದಿ ಚನ್ನಸಂಗಮದೇವಾ.
--------------
ಕೂಡಲಸಂಗಮೇಶ್ವರ
ಆ ಪರಶಿವನೇ ತಾನೇ ಆದ ಆತ್ಮನೋರ್ವಗೆ ಕರ್ಮ ಎರಡು, ಮೂರು ಗುಣ, ಕರಣ ನಾಲ್ಕು, ಇಂದ್ರಿಯ ಐದು, ವರ್ಗ ಆರು, ವ್ಯಸನ ಏಳು, ಮದ ಎಂಟು, ನಾಳ ಒಂಬತ್ತು, ವಾಯು ಹತ್ತು, ಎಪ್ಪತ್ತೆರಡು ಸಾವಿರ ನಾಡಿ, ಅರವತ್ತಾರುಕೋಟಿ ಗುಣ, ಆರುವರೆಕೋಟಿ ರೋಮ- ಇವು ಮೊದಲಾದ ಅನಂತ ತತ್ವಯುಕ್ತವೆನಿಸಿದ ತೊಂಬತ್ತಾರು ಅಂಗುಲ ದೇಹದೊಳಗೆ ನಿರ್ದೇಹಿಯಾಗಿ, ಕರ್ಮ ಎರಡರೊಳಗೆ ದುಷ್ಕರ್ಮಮಾಡುವದೆಂತೆನೆ : ಜಾರ ಚೋರ ಹುಸಿ ಹಾಸ್ಯ ಡಂಭಕ ಜೀವಹಿಂಸಾ ಪರಪೀಡಾ ಕ್ಷುದ್ರ ಧೂರ್ತ ಕ್ರೋಧಿ ವಿಕಾರಿ ಪರದ್ರವ್ಯಾಪಹಾರಕ ಅಹಂಕಾರ ಅಜ್ಞಾನ ಅನಾಚಾರ ಪಂಚಪಾತಕ ವಿಶ್ವಾಸಘಾತಕ ಇವು ಮೊದಲಾದ ಅನಂತ ದುರ್ಗುಣದಿಂದ ತನ್ನ ತಾ ಮರೆತು ತಾ ಮಾಡಿದ ದುಷ್ಕರ್ಮದಿಂದೆ ಪಾಪಹತ್ತಿ, ದುಃಖಗೊಂಡು ಯಮನೊಳಗಾಗಿ ನರಕ ಉಂಡು ಎಂಬತ್ತುನಾಲ್ಕುಲಕ್ಷ ಜೀವರಾಶಿಯೋನಿಯಲ್ಲಿ ಅನಂತಕಾಲ ತಿರುತಿರುಗಿ ಬಳಲುವದು. ಆ ಬಳಲುವ ದುಷ್ಕರ್ಮವೇ ಕಾಲೋಚಿತಕ್ಕೆ ಸತ್ಕರ್ಮವಾಯಿತು. ಅದು ಎಂತಾಯಿತೆಂದರೆ : ಚೋರರಿಗೆ ಪರದ್ರವ್ಯಾಪಹಾರ ವಿಯೋಗದಲ್ಲಿ, ದೇಗುಲ ದೀಪದಕುಡಿ ಕಡಿದಂತೆ : ಆ ಸತ್ಕರ್ಮ ಮಾಡುವದೆಂತೆನೆ : ದಯ, ಧರ್ಮ, ನಯ, ನೀತಿ ಶಾಂತಿ, ದಾಂತಿ, ಕ್ಷಮೆ, ದಮೆ, ಭಕ್ತಿ , ಜ್ಞಾನ, ವೈರಾಗ್ಯ, ನಿರಹಂಕಾರ, ನಿರಾಶ, ಅಷ್ಟಾಂಗಯೋಗ, ಅಷ್ಟವಿಧಾರ್ಚನೆ, ಅಷ್ಟಾವರಣನಿಷೆ* - ಇವು ಮೊದಲಾದ ಅನಂತ ಸುಗುಣದಿಂದೆ ಪುಣ್ಯವೊದಗಿ ಸುಖಗೊಂಡು ಇಂದ್ರನೊಳಗಾಗಿ ಸ್ವರ್ಗ ಅನುಭವಿಸಿ ಅಥವಾ ಬಹು ಸತ್ಕರ್ಮವಾದಡೆ ಸದಾಶಿವನ ಚೌಪದ ಬಹುಪದದೊಳಗಾಗಿ ಕೈಲಾಸಕ್ಕೆ ಹೋಗಿ ಸತ್ಕರ್ಮದಿಂದ ಒದಗಿದ ಪುಣ್ಯದ ಫಲವನ್ನು ಅನುಭವಿಸಿ ಮರಳಿ ಎಂಬತ್ನಾಲ್ಕುಲಕ್ಷ ಜೀವರಾಶಿ ಯೋನಿಯ ದ್ವಾರದಲ್ಲಿ ಅನಂತಕಾಲ ತಿರುತಿರುಗಿ ಅಷ್ಟಭೋಗಸುಖದೊಳಗೆ ತೊಳಲುವದು, ಆ ತೊಳಲುವ ಸತ್ಕರ್ಮವೇ ಕಾಲೋಚಿತಕ್ಕೆ ದುಷ್ಕರ್ಮವಾಗುವದು. ಅದೆಂತೆನೆ : ಶಿವಗಡ ಬಿದ್ದು ಗಂಧರ್ವ ಕರಿನಾಯಿ ಆದಂತೆ `ಅತಿದಾನಾದ್ ಬಲೇರ್ಬಂಧಃ' ಎಂಬ ನೀತಿ ಉಂಟಾಗಿ, ಇದಕ್ಕೆ ದುಷ್ಟಮಾರಿ ಚೌಡಾಪೂರ ವಿರೂಪಾಕ್ಷಿಗೆ ಜಂಗಮದಾಸೋಹದಲ್ಲಿ ಜಂಗಮದೋಷ ಘಟಿಸಿದಂತೆ. ಅದುಕಾರಣ ಸತ್ಕರ್ಮಕ್ಕೆ ಬೀಜ ದುಷ್ಕರ್ಮ, ದುಷ್ಕರ್ಮಕ್ಕೆ ಬೀಜ ಸತ್ಕರ್ಮ. ಹೀಗಾದ ಮೇಲೆ ಸತ್ಕರ್ಮವೇ ದುಷ್ಕರ್ಮ, ದುಷ್ಕರ್ಮವೇ ಸತ್ಕರ್ಮ, ಪಾಪವೇ ಪುಣ್ಯ ಪುಣ್ಯವೇ ಪಾಪ, ಸುಖವೇ ದುಃಖ ದುಃಖವೇ ಸುಖ, ಇವು ಎರಡರೊಳಗೆ ಹೆಚ್ಚು ಕಡಿಮೆ ಎಂಬುದೇನೋ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಜಂಗಮದ ಗುಣವನು, ಜಂಗಮದ ಭೇದವನು ಜಂಗಮದ ರೂಪವನು ಹೇಳಿಹೆ ಕೇಳಿರಣ್ಣ. ಜಂಗಮವೆಂದರೆ ಪರಮಜ್ಞಾನ ಸ್ವರೂಪನು. ಒಂದಿನ ಉಂಟಾಗಿ, ಒಂದಿನ ಇಲ್ಲ[ವಾಗಿಪ್ಪ] ಉಪಜೀವನಕನಲ್ಲ ಕಾಣಿರಣ್ಣ. ಉಪಾಧಿ[ಕ], ನಿರೂಪಾಧಿಕನೆಂಬ ಸಂದೇಹಭ್ರಾಂತನಲ್ಲ ಕಾಣಿಭೋ. ಸತ್ತು ಚಿತ್ತಾನಂದಭರಿತನು. ಭಕ್ತನ ಪ್ರಾಣವೇ ತಾನಾಗಿಪ್ಪ ನಿತ್ಯ ಪರಿಪೂರ್ಣನೆ, ಜಂಗಮದೇವನೆಂದರಿಯಲು ಯೋಗ್ಯ ಕಾಣಿಭೋ. ಆ ಘನ ಚೈತನ್ಯವೆಂಬ ಜಂಗಮವ ಮನೋಭಾವದಲ್ಲಿ ಆರಾಧಿಸಿ ಸುಖಿಯಾದೆನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ತನಗೆ ಉಂಟಾಗಿ ಶಿಷ್ಯನ ಮನೆಗೆ ಹೋಗಿ ಕಟ್ಟಳೆಯ ವರುಷಕ್ಕೆ ತಪ್ಪದೆ ಅಂಗವಸ್ತ್ರವೆಂದು ಲಿಂಗವಸ್ತ್ರವೆಂದು ಕನಕ ಪರಿಮಳವೆಂದು ಅಂದಣ ಛತ್ರ ಚಾಮರ ಕರಿ ತುರಗಂಗಳೆಂದು ಇವು ಬಂದುದಿಲ್ಲ ಎಂದು ಸಂದಣಿ ಲಂದಣಗಾರರ ಕೈಯಲ್ಲಿಹೇಳಿಸಿ ಅವು ಬಾರದಿರೆ ತಾ ಸಂಧಿಸಿ ಸೂಚಿಸುವ ಲಿಂಗ ಲಿಂಗಮಾರಿಗೆ ಗುರುಸ್ಥಲ ಎಂದಿಗೂ ಇಲ್ಲ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.
--------------
ತುರುಗಾಹಿ ರಾಮಣ್ಣ
ಲಿಂಗಸ್ವರೂಪದಲ್ಲಿ ನಿಜವಸ್ತುವಿನ ಕಳೆಯದೆ, ಮತ್ತಿಲ್ಲದುದ ಕಂಡೆ. ರುದ್ರನ ವೇಷದಲ್ಲಿ ಪರಮನ ಪರಮ ವಿರಕ್ತಿಯದೆ, ಮತ್ತಿಲ್ಲಾ ಎಂದೆ. ಉಂಟಾದುದು ಇಲ್ಲವಾಗಿ, ಇಲ್ಲವಾದುದು ಉಂಟಾಗಿ, ಈ ಉಭಯದ ಬೆಡಗಿನ ಬಿನ್ನಾಣವ, ಒಲವರದಿಂದಲ್ಲದೆ ತಿಳಿಯಬಾರದು, ನಿಃಕಳಂಕ ಮಲ್ಲಿಕಾರ್ಜುನಲಿಂಗವ.
--------------
ಮೋಳಿಗೆ ಮಾರಯ್ಯ
ಭೂಚರಿಯಮುದ್ರೆಯ ದೇವರೆಂಬರು, ಆ ಭೂಚರಿಯಮುದ್ರೆಯು ದೇವರಲ್ಲ. ಖೇಚರಿಯಮುದ್ರೆಯ ದೇವರೆಂಬರು, ಆ ಖೇಚರಿಯಮುದ್ರೆಯು ದೇವರಲ್ಲ. ಶಾಂಭವಮುದ್ರೆಯ ದೇವರೆಂಬರು, ಆ ಶಾಂಭವಮುದ್ರೆಯು ದೇವರಲ್ಲ ನೋಡಾ. ಸ್ವಸ್ಥಪದ್ಮಾಸನದಲ್ಲಿ ಕುಳ್ಳಿರ್ದು ಶ್ರೋತ್ರ ನೇತ್ರ ಜಿಹ್ವೆ ಘ್ರಾಣವೆಂಬ ಸಪ್ತದ್ವಾರಂಗಳನೊತ್ತಿ ನೋಡಲು ಆ ಒತ್ತಿದ ಪ್ರಭೆಯಿಂದ ಕುಂಬಾರನ ಚಕ್ರದ ಹಾಂಗೆ ಶ್ವೇತ ಪೀತ ಕಪೋತ ಹರಿತ ಮಾಂಜಿಷ* ವರ್ಣವಾಗಿ ತೋರುವ ಷಣ್ಮುಖೀಮುದ್ರೆಯ ದೇವರೆಂಬರು ; ಅಲ್ಲಲ್ಲ ನೋಡಾ. ಇವೆಲ್ಲಕ್ಕೂ ಉತ್ಪತ್ತಿ ಸ್ಥಿತಿ ಲಯ ಉಂಟಾಗಿ ದೇವರಲ್ಲ ನೋಡಾ. ದೇವರಿಗೆ ಉತ್ಪತ್ತಿ ಸ್ಥಿತಿ ಲಯ ಉಂಟೆ ಹೇಳಾ ? ಈ ಉತ್ಪತ್ತಿ ಸ್ಥಿತಿ ಲಯವಿಲ್ಲದ ಪರಾಪರತತ್ವ ತಾನೆಂದರಿದಡೆ, ತಾನೇ ದೇವ ನೋಡಾ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಮರ್ಕಟನ ಲಾಗು ಶಾಕೆಯುಳ್ಳನ್ನಕ್ಕ, ವಿಹಂಗನ ಪಥ ಬಯಲುಳ್ಳನ್ನಕ್ಕ, ಪಿಪೀಲಿಕನ ಜ್ಞಾನ ಮಧುರರಸವುಳ್ಳನ್ನಕ್ಕ, ಇಂತೀ ತ್ರಿವಿಧ ಗುಣ ಇದಿರುಳ್ಳನ್ನಕ್ಕ ಇಂತೀ ವಸ್ತು ಉಂಟಾಗಿ ದೃಷ್ಟ ಇದಿರಿಟ್ಟವು. ಉರಿ ಕರ್ಪೂರವ ಸುಡಿಲಿಕ್ಕೆ ಘಟದ ತಿಟ್ಟವಳಿದಂತೆ ವಸ್ತು ದೃಷ್ಟದ ಅಂಗದಲ್ಲಿ ಬಂದು ಪ್ರತಿಷೆ*ಯಾಗಲಾಗಿ ಘಟದ ಸರ್ವೇಂದ್ರಿಯಂಗಳು ಅಲ್ಲಿಯೇ ನಷ್ಟ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 70 ||
--------------
ದಾಸೋಹದ ಸಂಗಣ್ಣ
ಆದಿ ಪರಶಿವ ಬಿಂದುವಿನಿಂದ ಮಾದೇವಿ ಹುಟ್ಟಿ ತ್ರೆ ೈಜಗದ ಜನನಿ ನೋಡಾ. ಆಕೆ ಜಾತಿ ವರ್ಣಾಶ್ರಮ ಕುಲ ಗೋತ್ರ ನಾಮ ಸೀಮೆಯ ಕೂಡಿಕೊಂಡಿಪ್ಪ ಭ್ರಾಂತು ಲಕ್ಷಣೆ ನೋಡಾ. ಆಕೆಯ ಬಲೆಯಲ್ಲಿ ಲೋಕಾಧಿಲೋಕಂಗಳೆಲ್ಲವೂ ಸಿಕ್ಕಿ, ಕಾಕಾಗಿ, ಆಕೆಯ ಒಡನೆ ಹುಟ್ಟಿ ಒಡನೆ ಬೆಳೆದು ಆಕೆಯ ಒಡನೆ ಲಯವಾಗುತಿಪ್ಪವು. ಆಕೆ ಉಂಟಾಗಿ ಲೋಕಾಧಿಲೋಕಂಗಳ ತೋರಿಕೆ. ಆಕೆ ಲಯವಾದಲ್ಲಿಯೆ, ಲೋಕಾಧಿಲೋಕಂಗಳೆಲ್ಲವು ಲಯ ನೋಡಾ. ಆಕೆಯ ಕೈಕಾಲ ಕಡಿದು, ಮೊಲೆ ಮೂಗನುತ್ತರಿಸಿ ಆಕೆಯ ವಿಕಾರಸಂಗವನಳಿದು ಆದಿ ಪರಶಿವಬಿಂದುವನೆಯ್ದಬಲ್ಲರೆ ಆತನು ಲೋಕಾಧಿಲೋಕಂಗಳ ಪ್ರಪಂಚುವ ಗೆಲಿದ ನಿಃಪ್ರಪಂಚಿ ಮಾಹೇಶ್ವರನು ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಶ್ರುತ್ಯಾಗಮ ಶಾಸ್ತ್ರಾದಿಗಳು ದೈವವಲ್ಲದಿರಲಾ, ಸ್ವರ್ಗಮೋಕ್ಷಂಗಳಿಗೆ ಶ್ರುತ್ಯಾಗಮ ಶಾಸ್ತ್ರಪ್ರಮಾಣ ಸಾಧನವೆಂಬ ಕರ್ಮವಾದಿಗಳಿಗೆ ನಿರುತ್ತರೋತ್ತರವ ಕೇಳಿರೆ : || ಶ್ರುತಿ || `ಜ್ಯೋತಿಷೊ*ೀಮೇನ ಸ್ವರ್ಗಕಾಮೋ ಯಜಜೇತ' ಎಂಬ ವೇದವಾಕ್ಯದ ಬಲುಮೆವಿಡಿದು ನುಡಿವರೆ, ಯಜ್ಞದಿಂದ ಸ್ವರ್ಗಾಪೇಕ್ಷಿತನು ಅಗ್ನಿಯನೆ ಪೂಜಿಸುವಯೆಂದು, ಕ್ರಿಯಾಕರ್ಮವೆ ದೈವವೆಂದು, ತಾನು ಮಾಡಿದ ಕರ್ಮ ಫಲವು ತನಗೆ ಅನುಭವಿಸಲುಳ್ಳದೆಂದು, ಕರ್ಮಕ್ಕೆ ಕರ್ತೃತ್ವವನ್ನು ಕೆಲಬರು ಕರ್ಮವಾದಿಗಳು ಹೇಳುತ್ತಿಹರು. ಅಹಂಗಲ್ಲ, ಕರ್ಮವೆ ಶರೀರದಿಂದನುಭವಿಸಲುಳ್ಳರಾಗಿ ವರ್ತಿಸುತ್ತಿಹುದೊ, ಅಲ್ಲ, ಮತ್ತಾ ಶರೀರಕ್ಕೆ ಕರ್ಮವೆ ಅನಾದಿಯಹುದೊ, ಈ ಕರ್ಮಕ್ಕೆ ಕಾಯಂಗಳೆರಡು ಜೀವಾತ್ಮನನು ಒಂದೆಬಾರಿಯಯಿದಿದೊ. ಈಹಿಂಗೆಂದು ಕೆಲಬರು ತರ್ಕಿಸುವರು. ಅದು ಹಂಗಾಗದಿಹುದಲ್ಲದೆ, ಆ ಕರ್ಮವು ಕ್ಷಣಿಕವಾಗಿಯೂ ಅಚೇತನವಾಗಿಯೂ ನಿರ್ಗುಣವಾಗಿಯೂ ಕಾಣಲುಳ್ಳದಾಗಿ, ಅದು ಮಾಡುವಾತನನುಯೆ ಹಾಂಗೆಯಿಹುದು. ಆಕರ್ತನು ಆವನೊಬ್ಬನು ಅಪರಾಧವ ಮಾಡಿದವ, ಮಾಡಿದ ಪುರುಷನು ಆ ಅಪರಾಧಕ್ಕೆ ತಕ್ಕುದಾದ ಶಿಕ್ಷೆಯನು ತನಗೆ ತಾನೆ ಮಾಡಿದನೊಯೇನು ಅಲ್ಲ. ಮತ್ತೆ ಆ ಅಪರಾಧವೆ ಸಂಕಲಿಯಾಗಿ, ಆ ಅಪರಾಧಿಯ ಕಾಲ ಬಂದಿಸುಹವನು. ಮಾಡೊದೊಯೇನು ಅಲ್ಲ. ಮತ್ತೆ ಆ ಅಪರಾಧಿಗೆ ಕರ್ಮಿಗೆ ಆ ಕರ್ಮವನು ಸಂಘಟಿಸಲು, ಕರ್ಮಾಧೀನನಲ್ಲದಾತನಾಗಿ, ಸ್ವತಂತ್ರನಾಗಿ, ಸರ್ವೇಶ್ವರ ಎಲ್ಲದಕ್ಕೂ ಒಡೆಯನಾಗಿ, ಸರ್ವಗತನಾಗಿ ಸರ್ವಗತನಾದ ಶಿವನು ಉಂಟಾಗಿ ಕರ್ಮಕ್ಕೆವೂ ಕರ್ಮಿಗೆವೂ ಕರ್ತೃತ್ವವಾಗದು. ಈಹಿಂಗಾಂಗದಿಹುದೆ ಪೂರ್ವಮೀಮಾಂಸವನು ಹೇಳುವ ಒಬ್ಬುಳಿಯ ಕರ್ಮಂಗಳು ಬೇರೆ ಬೇರೆ ಆರು ಕೆರಂಗಳಾಗುತಿಹವು. ಅವಾವೆನಲು, ಅಮಾವಾಸ್ಯೆ ಹುಣ್ಣಿಮೆಗಳಲಿ ಪಿತೃಕಾರ್ಯ ಮೊದಲಾದ ಕರ್ಮಂಗಳ ಮಾಡಬೇಕಾದುದರಿಂದ ಒಂದಾನೊಂದು ಸಂಸ್ಕಾರವನ್ನು ಸಂಘಟಿಸುತ್ತಿಹವು. ಆ ಸಂಸ್ಕಾರರೂಪಂಗಳಾದ ಆರು ಅಪೂರ್ವಂಗಳಾಗುತ್ತಿಹವು. ಅವು ಬೇರೊಂದು ಪ್ರಮಾಣದಿಂದ ಪೂರ್ವಮಾಗಿ ಉತ್ಕøಷ್ಟವಾದ ಅಪೂರ್ವವನ್ನು ಹುಟ್ಟಿಸುತ್ತಿಹವು. ಆ ಉತ್ಕøಷ್ಟವಾದ ಪೂರ್ವದಿಂದ ಮಾತಲುಳ್ಳ ಫಲದ ಕಡೆವು. ಅದೇ ದೈವವೆಂದು ಕಾಣಬಾರದೆಂದು, ಕರ್ಮವೆಂದು ನಾಮ ಮೂರಾರದವರಿಂದ ದೇಹಾಂತರ ಲೋಕಾಂತರ ದೇಶಾಂತರ ಕಾಲಾಂತರಗಳಲ್ಲಿ ಅದು ಆತಂಗೆ ಅನುಭವಿಸಬೇಕಾದ ಫಲಂಗಳನು ಕೊಡುತ್ತಿಹುದೆಂಬ ವಚನ ವ್ಯರ್ಥವು. ಅದು ಹೇಗೆಂದಡೆ, ಜಡಸ್ವರೂಪವಾದ ಕರ್ಮವು ದೇಹಾಂತರ ಮೊದಲಾದವರಲ್ಲಿ ಆ ಫಲವನು ಕೊಡಲು ಸಮರ್ಥವಲ್ಲದಿಹುದೆ. ಈಹಿಂಗಾಗಿ ಒಡೆಯನನು ತೊಲಗಿಸಿ, ಕರ್ಮಫಲವನು ಕೊಡವದಹುದೆ. ಅಹಂಗಾದಡೆ, ಜೈನ ಬೌದ್ಧ ಭಾಷಾದಿ (?) ಕರ್ಮವಾದಿಗಳ ಜಪತಪದಾನಧರ್ಮಫಲಂಗಳು ವ್ಯರ್ಥಂಗಳಾಗುತಿರಲು, ಅವು ಪುಷ್ಟಿವರ್ಧನಭೂತವಾದ ಭೋಜನಕ್ರಿಯೆಗಳಿಂದಯೆಹಾಹಂಗೆ ಮರಣವು ಆಯಿತ್ತು. ಅಹಂಗೆ ಒಂದೆ ಕರ್ಮವು ಫಲವು ಕೊಡಲು ಸಮರ್ಥವಲ್ಲ. ಅಹಂಗಾಗದಿಹುದೆ ಭೋಜನವ ಮಾಡಿದ ಮಾತ್ರವೆ ಪುಷ್ಟಿಯಾಗುತ್ತಿಹುದು ಮರಣವಿಲ್ಲದಿಹುದು. ಹಿಂಗಲ್ಲವೊ ಎಂದಡೆ, ಕೆಟ್ಟ ಕರ್ಮವುಯೆಯ್ದಿತ್ತು. ಉಂಡದರೊಳಗೆ ಸಿಲ್ಕಿದ ಅನ್ನವು ವಿಷವಹುದಲಾ. ಪುಷ್ಟಿಯ ತೊಲಗಿಸಿ ಮರಣವನು ಅಹಂಗೆ ಕೊಡುತ್ತಿರದು. ಇದು ಕಾರಣ, ಸರ್ವಗತನಾದ ಶಿವನು ಅರಿಕರ್ಮಕ್ಕೆ ತಕ್ಕ ಫಲವ ಕೊಡುವಾತನು. ಹಿಂಗಾಗಿರಲಿ, ಕರ್ಮಕ್ಕೆ ತಾನೆ ಕರ್ತೃತ್ವವಾಗುಹವು, ಆಗುತ್ತಿರದು. ಮತ್ತೆಯೂ ದೃಷ್ಟಾಂತರ ಸರಳು ಬಿಲ್ಲಕಾರನಿಲ್ಲದೆ ತಾನು ಗುರಿಯ ತಾಗೂದೆಯೇನು ? ಅಹಂಗೆ, ಕರ್ಮವು ಶಿವಪ್ರೇರಣೆಯಿಲ್ಲದೆ ಅಕರ್ಮಿಗೆ ಮೇಲುಕೀಳಾದ ಕರ್ಮಫಲವನು ತಾನೆ ಕೊಡಲು ಸಾಮಥ್ರ್ಯವಿಲ್ಲ, ತಪ್ಪದು. ವಾಯುವ್ಯದಲ್ಲಿ : ಅಜ್ಞೋ ಜಂತುರನೀಶೋಯಮಾತ್ಮನಃ ಸುಖದುಃಖಯೋಃ | ಈಶ್ವರಃ ಪ್ರೇರಿತೋ ಗಚ್ಛೇತ್ಸ್ವರ್ಗಂ ವಾ ಶ್ವಭ್ರಮೇವ ವಾ || ಅದು ಕಾರಣ, ಅರಿಯದವನಾಗಲಿ ಅಯಂ ಜಂತು-ಈ ಪ್ರಾಣಿ, ಆತ್ಮನಃ-ತನ್ನ, ಸುಖದುಃಖಯೋಃ-ಸುಖದುಃಖಂಗಳಿಗೆ, ಅನಿಶಃ-ಒಡೆಯನಲ್ಲ. ಈಶ್ವರ ಪ್ರೇರಿತ ಶಿವನು ಪ್ರೇರಿಸಲುಳ್ಳವನಾಗಿ, ಸ್ವರ್ಗವನಾದಡೂ ನರಕವನಾದಡೂ ಎಯ್ದುವನು. ನಾಭುಕ್ತ ಕ್ರಿಯತೇ ಕರ್ಮ ಕಲ್ಪಕೋಟಿಶತೈರಪಿ | ಅವಶ್ಯಮನುಭೋಕ್ತವ್ಯಂ ಕೃತಂ ಕರ್ಮ ಶುಭಾಶುಭಂ || ಇವು ಮೊದಲಾದ ವಚನ ಪ್ರಮಾಣದಿಂದ ಕರ್ಮವು ಕಲ್ಪಕೋಟಿ ಶತಂಗಳಿಂದಡಾ ಅನುಭವಿ.....ತಿರದು. ಮಾಡಲುಳ್ಳದಾಗಿ ಮೇಲು ಕೀಳಾದವು. ಏನ ಮಾಡಿಯೂ ಅನುಭವಿಸಬೇಕಾದುದು, ಈಹಿಂಗೆಂಬ ವಚನವು ವ್ಯರ್ಥ ಪೋಗುತ್ತಿಹುದು. ಅದು ಹೇಂಗೆಯಾಯೆಂದಡೆ :ವಾಯವ್ಯದಲ್ಲಿ- ಅಹೋವಿಪರ್ಯಾಸಶ್ಚೇ ಮೇದೋ ಯಾವದ್ವರಂ ಯಜಮಾನ ಸ್ವಯಂ ದಕ್ಷಃ | ಬ್ರಹ್ಮಪುತ್ರ ಪ್ರಜಾಪತಿಃ ಧರ್ಮಾದಯಃ ಸದಸ್ಯಾಶ್ಚ ರಕ್ಷಿತಾ ಗರುಡಧ್ವಜಃ ಭಾನಾಶ್ಯಪ್ರತಿಗ್ರುಣ್ವಂಕ್ತಿ ಸಾಕ್ಷಾದಿಂದ್ರಾದಯಸ್ವರಾಃ ತಥಾಪಿ ಯಜಮಾಸ್ಯದಕ್ಷಸ್ಯಾ ದಾಹಂರ್ತಿಜಃ ಸದ್ಯಯೇವ ಶಿರಶ್ಛೇದ ಸಾದುಸಂಪದ್ಯತೇ ಫಲಂ ಕೃತ್ವಾತು ಸಮಹತ್ಪುರಣ್ಯಾಮಿಷ್ಟ ಯಶಶತೈರಪಿ ನ ತತ್ಫಲಮವಾಪ್ನೋತಿ ಭಕ್ತಿಹೀನೋ ಯದೀಶ್ವರೇ | ಈ ಅರ್ಥದಲ್ಲಿ ಸತ್ಪುರುಷರ ವೇದದಿಂದರಿಯಲು, ತಕ್ಕುದಾದ ಆಚಾರವನು ಬಿಟ್ಟು ಒಡನೆ ಹುಟ್ಟಿದುದಾದ ತನ್ನವರೆಂಬ ಸ್ನೇಹದಲ್ಲಿ ಹುಟ್ಟಿದುದಾ[ದ] ಚರಣವನ್ನು ಬಿಟ್ಟು, ಅಪಾಯರಹಿತವಾಗಿ ಪ್ರಮಥಪದವಿಯನು ಎಯ್ದಿದನು. ಈಹಿಂಗಾಗಿಯೇ, ಬರಿಯ ಕರ್ಮಕ್ಕೆ ಕರ್ತೃತ್ವವುಂಟಾಗುತಿಹುದೆ ? ಚಂಡೇಶ್ವರನಿಂದ ತನ್ನ ತಂದೆಯಾದ ಬ್ರಾಹ್ಮಣನ ಕಾಲುಗಳ ತರಿದಲ್ಲಿ, ಆ ದೋಷಫಲವುಯಹಂಗೆ ಇಲ್ಲವಾಯಿತ್ತು. ಮಾಮನಾದೃತ್ಯ ಪುಣ್ಯಂ ವಸ್ಯಾಂತ್ಪ್ರತಿಪಾದಿನಃ | ಮನ್ನಿ ಮಿತ್ತಕೃತಂ ಪಾಪಂ ಪುಣ್ಯಂ ತದಪಿ ಜಾಯತೇ || ಇದು ಶಿವನ ನುಡಿ, ಮಾರಿಯೆನ್ನನು ಕೈಕೊಳ್ಳದ ಪುಣ್ಯವಾದಡೆಯು, ಮಾಡುವವಂಗೆ ಪಾಪವು ಅಹುದು. ನಾನು ನಿಮಿತ್ತ ಮಾಡಿದ ಪಾಪವಾಯಿತ್ತಾದಡೆಯು ಸುಕೃತವಾಗುತ್ತಿಹುದು. `ಉಪಕ್ರಮ್ಯ ಕರ್ಮಾದಿ ಪತಿತ್ವ ವಿರುಪಾಕ್ರೋಸ್ಥಿತಿ ಸರ್ವಕರ್ಮಾದಿ ಪತಿಃ' ಮತ್ತೆ ಉಪಕ್ರಮಿಸಿ ಕರ್ಮಂಗಳಿಗೊಡೆಯನು ಪರಮೇಶ್ವರನು ಉಂಟೆಂಬ ವೇದವು ಮೊದಲಾದ ವಾಕ್ಯಪ್ರಮಾಣದಿಂದ, ನಾನಾ ಪುರಾಣ ವಚನ ಪ್ರಮಾಣದಿಂದ ಸಮಸ್ತ ಕರ್ಮಂಗಳಿಗೊಡೆಯನು ಶಿವನು. ಆ ಶಿವನ ತೊಲಗಿಸಿ, ಬರಿಯ ಕರ್ಮಕ್ಕೆ ಕರ್ತನಾಗುಹವು ಇಲ್ಲದಿರುತ್ತಿಹುದು. ಇದನರಿದು, ಎಲೆ ಕರ್ಮವಾದಿಗಳಿರಾ, ಸಕಲಕರ್ಮಕ್ಕೆ ಶಿವನೆ ಕರ್ತುವೆಂದರಿದಿರಾದಡೆ, ಬಸವಪ್ರಿಯ ಕೂಡಲಚೆನ್ನಸಂಗ ನಿಮಗೆ ಸುಕರ್ಮ ಫಲವನು ಕೊಡುವ ಕಂಡಿರೆ.
--------------
ಸಂಗಮೇಶ್ವರದ ಅಪ್ಪಣ್ಣ
ಹಲವು ಮಕ್ಕಳ ತಾಯಂತೆ, ಹೇಸದೆ ಅವರನಾರೈದ ತನುಸಮರ್ಥವು ನಿಮಗಲ್ಲದೆ ಇನ್ನಾರಿಗೆ ಅಳವಡುವದು ? ಮುನ್ನಾರಿಗೆ ಅಳವಡುವದು ? ಇನ್ನು ಎನ್ನಳವೆ ನಿಮ್ಮುವನು ತಿಳಿಯಲು ? ಮುನ್ನಿನ ಸುಕೃತ ಉಂಟಾಗಿ ನಿಮ್ಮ ಪಾದ ದೊರೆಕೊಂಡಿತ್ತು ! ಇನ್ನು ನಮ್ಮನಿಳಿಯ ಬಿಡದೆ, ಎನ್ನುವನು ಇವನೆಂದು ವಿವರಿಸಿ, ಎನ್ನ ನಿಮ್ಮತ್ತ ತೆಗೆ ಕರುಣಿಸಿ. ಎನ್ನ ಮಾತಾಪಿತ_ಗುಹೇಶ್ವರಾ, ನಿಮ್ಮ ಶರಣ ಮಡಿವಳ ಮಾಚಯ್ಯನಿಂದ ಬಯಲಾದೆನು, ಮುಕ್ತನಾದೆನು ನಿಮ್ಮ ಕರುಣದಿಂದ !
--------------
ಅಲ್ಲಮಪ್ರಭುದೇವರು
ಇನ್ನಷ್ಟು ... -->