ಅಥವಾ

ಒಟ್ಟು 268 ಕಡೆಗಳಲ್ಲಿ , 64 ವಚನಕಾರರು , 235 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆವ ವ್ರತ ನೇಮವ ಹಿಡಿದಡೂ ಆ ವ್ರತ ನೇಮದ ಭಾವಶುದ್ಧವಾಗಿರಬೇಕು. ಅಸಿ ಕೃಷಿ ಯಾಚಕ ವಾಣಿಜ್ಯತ್ವದಿಂದ ಬಂದ ದ್ರವ್ಯಂಗಳಲ್ಲಿ ಬಾಹ್ಯದ ಬಳಕೆ ಅಂತರಂಗದ ನಿರಿಗೆ ಉಭಯ ಶುದ್ಧವಾಗಿಪ್ಪ ಭಕ್ತನಂಗವೆ ಏಲೇಶ್ವರಲಿಂಗದಂಗ.
--------------
ಏಲೇಶ್ವರ ಕೇತಯ್ಯ
ಇಷ್ಟಲಿಂಗ ಸಂಬಂಧವಾದ ಬಳಿಕ ಕಾಯಗುಣ ಕೆಟ್ಟು ಲಿಂಗವಾಯಿತ್ತು. ಪ್ರಾಣಲಿಂಗ ಸಂಬಂಧವಾದ ಬಳಿಕ ಕರಣಗುಣ ಕೆಟ್ಟು ಲಿಂಗಕರಣಂಗಳಾದುವು. ಭಾವಲಿಂಗ ಸಂಬಂಧವಾದ ಬಳಿಕ ಇಂದ್ರಿಯಗುಣ ಕೆಟ್ಟು ಲಿಂಗೇಂದ್ರಿಯಗಳಾದುವು. ಇದು ಕಾರಣ- ಶರಣಂಗೆ ಬೇರೆ ಲಿಂಗವಿಲ್ಲ, ಬೇರೆ ಅಂಗವಿಲ್ಲ. ಅರ್ಪಿತ ಅನರ್ಪಿತವೆಂಬ ಉಭಯ ಶಂಕೆ ಹಿಂಗಿತ್ತು, ಕೂಡಲಚೆನ್ನಸಂಗಯ್ಯಾ ನಿನ್ನೊಳಡಗಿದ ನಿಜೈಕ್ಯಂಗೆ
--------------
ಚನ್ನಬಸವಣ್ಣ
ಪ್ರಥಮಪಾದದಲ್ಲಿ ಒಂಕಾರಕ್ಕೆ ನಕಾರ ಬೀಜಾಕ್ಷರ. ಆ ನಕಾರ ಉಭಯ ಕೂಡಿದ ಮತ್ತೆ ಮಕಾರ ಬೀಜಾಕ್ಷರ. ಇಂತೀ ತ್ರಿವಿಧಾಕ್ಷರ ಒಡಗೂಡಿ ಒಡಲಾದ ಮತ್ತೆ ಶಿಕಾರ ಬೀಜಾಕ್ಷರ. ಇಂತೀ ಶಿಕಾರ ಮೂರನೊಡಗೂಡಿ ನಾಲ್ಕೆಂಬಲ್ಲಿಗೆ ಯಕಾರ ಬೀಜಾಕ್ಷರ. ಇಂತೀ ಪಂಚಾಕ್ಷರಿಯ ಮೂಲಮಂತ್ರ ಸಂಬಂಧವಾಗಲಾಗಿ ಪ್ರಣಮದ ಬೀಜ. ಆ ಪ್ರಣಮವು `ಒಂ ಭರ್ಗೋ ದೇವಃ' ಜಗಕ್ಕೆ ಕರ್ತೃ ನೀನಲಾ ಎಂದು. ಸಾಮ ಅರ್ಥವಣ ಯಜಸ್ಸು ಋಕ್ಕು ಉತ್ತರ ಖಂಡನ. ಇಂತೀ ಪಂಚವೇದಂಗಳಲ್ಲಿ ಚತುರ್ವೇದಿಗಳಪ್ಪರಲ್ಲದೆ, ಐಕ್ಯೋತ್ತರ ಚಿಂತನೆಯನೀ ವಿಪ್ರಕುಲ ಮಿಥ್ಯವಂತರು ಬಲ್ಲರೆ ? ಕಣ್ಣಿನಲ್ಲಿ ನೋಡುತ್ತ ಕಣ್ಗಾಣೆನೆಂಬವನಂತೆ ಶಾಪಹತರಿಗೆಲ್ಲಕ್ಕೂ ಲಲಾಮಬ್ಥೀಮಸಂಗಮೇಶ್ವರಲಿಂಗವು ಅಸಾಧ್ಯ ನೋಡಾ.
--------------
ವೇದಮೂರ್ತಿ ಸಂಗಣ್ಣ
ಕಾಬುದಕ್ಕೆ ಮೊದಲೆ ಬಯಕೆ ಅರತು, ಕೂಡುವುದಕ್ಕೆ ಮುನ್ನವೆ ಸುಖವರತು, ಉಭಯ ನಾಮಧೇಯ ನಷ್ಟವಾದಲ್ಲಿ, ಮನಸಂದಿತ್ತು ಮಾರೇಶ್ವರಾ.
--------------
ಮನಸಂದ ಮಾರಿತಂದೆ
ಭವಬಂಧನಂಗಳ ಹಿಂಗಿಸಬೇಕೆಂಬಣ್ಣಗಳು ನೀವು ಬಲ್ಲರೆ ಹೇಳಿರಿ, ಅರಿಯದಿದ್ದರೆ ಕೇಳಿರಿ. ಶ್ರೀಗುರುಪುತ್ರನಾಗಿ ಅವರು ತಮ್ಮ ಅಂತಃಕರಣ ಕೃಪೆಯಿಂದ ಪೇಳಿದ ಪ್ರಸಾದವಾಕ್ಯವನು ಅವರ ದಯದಿಂದ ಪೇಳುತಿರ್ದೆನು ಕೇಳಿರಯ್ಯ. ಅದೆಂತೆಂದಡೆ : ಆಶೆ ಆಮಿಷ ತಾಮಸದೊಡನೆ ಕೂಡಿ ಕ್ಲೇಶಪಡುತಿರ್ದಂತೆ ಗುರುಗಳಲ್ಲಿ ಅಥವಾ ಜಂಗಮಲಿಂಗಿಗಳಲ್ಲಿ ಇಂತೀ ಉಭಯ ಪಾಶಬದ್ಧರ ಕೈಯಿಂದ ಅಹಂಕಾರ ಮಮಕಾರದಲ್ಲಿ ಆಣವಮಲ, ಮಾಯಾಮಲ, ಕಾರ್ಮಿಕಮಲವೆಂಬ ಮಲತ್ರಯಂಗಳ ಕಚ್ಚಿ, ಸಂಸಾರವಿಷಯದಲ್ಲಿ ಲಂಪಟರಾದ ಭಕ್ತಜನಂಗಳು ಅಥವಾ ಶಿಷ್ಯೋತ್ತಮನಾದಂಥವರು ಇಂತಪ್ಪವರು ಲಿಂಗವ ಪಡೆದು, ಉಪದೇಶವ ಹಡದು, ಆಚರಿಸುವರ ಆಚರಣೆಯೆಂತಾಯಿತ್ತೆಂದಡೆ, ತಲೆಯಿಲ್ಲದ ಪುರುಷನ ಸಂಗ, ಕಣ್ಣಿಲ್ಲದ ಸ್ತ್ರೀ ಸಂಯೋಗವ ಮಾಡಿ, ಜೀವವಿಲ್ಲದೊಂದು ಮಗನ ಹಡದಂತಾಯಿತ್ತಯ್ಯ. ಅಂತಪ್ಪ ದೇವ ಭಕ್ತ ಗುರು ಶಿಷ್ಯರೆಂಬ ಈ ಚತುರ್ವಿಧ ಪುರುಷರಿಗೆ ಭವಹಿಂಗದು, ಮುಕ್ತಿ ಎಂದಿಗೂ ತೋರದು. ಅದೇನು ಕಾರಣವೆಂದಡೆ : ತಾವ್ಯಾರು, ತಮ್ಮ ಸ್ವರೂಪವಾವುದು ಎಂಬ ನಿಲುಕಡೆಯ ತಿಳಿಯದ ಕಾರಣ. ಮತ್ತಂ ಪೇಳ್ವೆ : ತಮ್ಮ ನಿಜವ ತಾವರಿದು, ಸರ್ವಾಚಾರಸಂಪತ್ತು ಅಳವಟ್ಟು, ಸರ್ವಾಂಗಲಿಂಗಮಯವಾಗಿರುವಂಥ ನಿಃಕಲ ಸದ್ರೂಪಸ್ವರೂಪರಾದ ಆಚಾರ್ಯಂಗಳಲ್ಲಾಗಲಿ, ಅಥವಾ ಸತ್ತುಚಿತ್ತಾನಂದ ನಿತ್ಯಪರಿಪೂರ್ಣಭರಿತನಾದ ನಿಃಕಲಪರಮಾನಂದಸ್ವರೂಪರಾದ ನಿರಂಜನಜಂಗಮದಲ್ಲಾಗಲಿ ಇಂತೀ ಉಭಯ ಪರಮೂರ್ತಿಗಳ ಕರುಣಕೃಪೆಯಿಂದ ಶಿವಜ್ಞಾನೋದಯವಾಗಿ ಸಕಲಪ್ರಪಂಚವನೆಲ್ಲವ ನಿವೃತ್ತಿಯ ಮಾಡಿ ಲಿಂಗಾಂಗಸಮರಸದನುಭವವಳವಟ್ಟು ತ್ರಿವಿಧ ವಂಚನೆಯಿಲ್ಲದೆ ಕ್ಷಮೆ, ದಮೆ, ಶಾಂತಿ, ಸೈರಣೆ ಗುಣವುಳ್ಳಂಥ ಸದ್ಭಕ್ತ ಶರಣಜನಂಗಳಲ್ಲಾಗಲಿ ಅಥವಾ ಶಿಷ್ಯೋತ್ತಮನಾದಂಥವರುಗಳಲ್ಲಾಗಲಿ ಇಂತೀ ಉಭಯ ಭಕ್ತಗಣಂಗಳು ಚಿದ್ಘನಮಹಾಲಿಂಗವೆಂಬ ಇಷ್ಟಲಿಂಗವ ಕರಸ್ಥಲಕ್ಕೆ ಪಡಕೊಂಡು, ತಾರಕಮಂತ್ರವೆಂಬ ಮಂತ್ರೋಪದೇಶವ ಹಡಕೊಂಡು, ಆಚರಿಸುವ ಸದ್ಭಕ್ತ ಶರಣಜನಂಗಳ ಆಚರಣೆಯೆಂತಾಯಿತ್ತಯ್ಯಯೆಂದಡೆ: ಸೂರ್ಯಪ್ರಕಾಶವನುಳ್ಳಂಥ ಕನ್ಯಕುಮಾರ ರಾಜನಸಂಗ ಚಂದ್ರಕಾಂತಿಪ್ರಕಾಶವನುಳ್ಳಂಥ ಕನ್ಯಸ್ತ್ರೀಯಳು ಸಂಯೋಗವ ಮಾಡಿ ಅಗ್ನಿಕಾಂತಿಪ್ರಕಾಶವನುಳ್ಳಂಥ ಪುತ್ರನ ಹಡೆದಂತಾಯಿತ್ತಯ್ಯ. ಇಂತಪ್ಪ ಆಚಾರವನುಳ್ಳ ಗುರು ಶಿಷ್ಯರು ದೇವ ಭಕ್ತರೆಂಬ ಈ ನಾಲ್ಕು ಪರಪುರುಷರಿಗೆ ಭವಹಿಂಗುವುದು. ಮುಕ್ತಿಯೆಂಬುದು ಕರತಳಾಮಳಕವಾಗಿ ತೋರುವುದು. ಮತ್ತಂ, ಲಿಂಗಾಂಗಸಂಬಂದ್ಥಿಯಾಗಿ ಸರ್ವಾಚಾರ ನೆಲೆಗೊಂಡು ಸರ್ವಾಗಲಿಂಗಿಯಾದಂಥ ವೀರಮಾಹೇಶ್ವರರಾಗಲಿ, ಅಥವಾ ಗುರುಗಳಾಗಲಿ, ಸದ್ಭಕ್ತ ಶರಣಜನಂಗಳಾಗಲಿ, ಇಂತಪ್ಪ ತ್ರಿವಿಧಶಿವಜ್ಞಾನಿಗಳ ಚರಣಕಮಲಕ್ಕೆ ದೀರ್ಘದಂಡನಮಸ್ಕಾರಮಂ ಮಾಡಿ ಸುಜ್ಞಾನೋದಯವಾಗಿ ಮೋಕ್ಷವ ಹಡೆಯಬೇಕೆಂಬ ಜ್ಞಾನಕಲಾತ್ಮರಾದಂಥವರು ಲಿಂಗಾಂಗಸಮರಸದನುಭಾವವ ವಿಚಾರಿಸಿಕೊಳ್ಳಬೇಕು. ಅಂತಪ್ಪ ಪರಶಿವಮೂರ್ತಿಗಳಾದ ಗುರುಗಳಲ್ಲಾಗಲಿ, ಅಥವಾ ಜಂಗಮಲಿಂಗಿಗಳಲ್ಲಾಗಲಿ, ಅಥವಾ ಇಂತಹ ಶಿವಜ್ಞಾನಿಗಳಾದ ಭಕ್ತರಲ್ಲಾಗಲಿ, ಶಿಷ್ಯೋತ್ತಮರಲ್ಲಾಗಲಿ, ಇಂತಪ್ಪವರಿಗೆ ಲಿಂಗಾಂಗಸಮರಸವ ತೋರಬೇಕು, ತೋರದಿದ್ದರೆ ಪ್ರಮಥರು ಮೆಚ್ಚರು. ಇಂತಪ್ಪ ತ್ರಿಮೂರ್ತಿಗಳು ಹೇಳಿದ ಹಾಂಗೆ ಕೇಳಿ ವಿಶ್ವಾಸದಿಂದ ಆಚರಿಸದಿದ್ದರೆ ಭವಹಿಂಗದು ಮುಕ್ತಿಯೆಂಬುದು ಎಂದೆಂದಿಗೂ ತೋರದು ಎಂದನಯ್ಯಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಅಕ್ಕಿ ಬೇಳೆ ಬೆಲ್ಲ ಉಪ್ಪು ಮೆಣಸು ಅಡಕೆ ಫಲ ರಸ ದ್ರವ್ಯ ಮುಂತಾದ ದ್ರವ್ಯಕ್ಕೆ ವ್ರತವೊ ? ಮುಟ್ಟುವ ತಟ್ಟುವ ಸೋಂಕುವ ಚಿತ್ತಕ್ಕೆ ವ್ರತವೊ ? ಇವು ಬಾಹ್ಯದಲ್ಲಿ ಮಾಡುವ ಸೌಕರಿಯವಲ್ಲದೆ ವ್ರತಕ್ಕೆ ಸಲ್ಲ. ವ್ರತವಾವುದೆಂದಡೆ ತನ್ನಯ ಸ್ವಪ್ನದಲ್ಲಿ ತನಗಲ್ಲದುದ ಕಂಡಡೆ, ತಾ ಮುಟ್ಟದುದ ಮುಟ್ಟಿದಡೆ, ತಾ ಕೊಳ್ಳದುದ ಕೊಂಡಡೆ, ಆ ಸೂಕ್ಷ್ಮತನುವಿನಲ್ಲಿ ಆ ತನುವಂ ಬಿಟ್ಟು ನಿಂದುದು ವ್ರತ. ಸ್ಥೂಲತನುವಿನಲ್ಲಿ ಸರ್ವರ ನಿಂದೆಗೊಡಲಾಗದೆ, ಮಾಡಿಕೊಂಡ ನೇಮಕ್ಕೆ ಕೇಡುಬಂದಲ್ಲಿ ಆ ಅಂಗಕ್ಕೆ ಓಸರಿಸದೆ ನಿಂದುದು ಆಚಾರ. ಇಂತೀ ಅಂತರಂಗದಲ್ಲಿ ವ್ರತ, ಬಹಿರಂಗದಲ್ಲಿ ಆಚಾರ, ಇಂತೀ ಉಭಯ ಸಿದ್ಭವಾಗಿ ನಡೆವುದೆ ವ್ರತ ಆಚಾರz ಇಂತಿವನರಿದು ಮರೆದಲ್ಲಿ, ತಾ ಮಾಡಿಕೊಂಡ ಕುತ್ತಕ್ಕೆ ಹಾಡಿ ಮದ್ದನರೆದಂತೆ, ಜಗಕ್ಕೆ ಭಕ್ತನಾಗಿ ಆತ್ಮಂಗೆ ಅನುಸರಣೆಯಾದಲ್ಲಿ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗಕ್ಕೆ ಸಲ್ಲದ ನೇಮ.
--------------
ಅಕ್ಕಮ್ಮ
ರೂಪಿನ ದರ್ಪಣವ ಹಿಡಿದು, ತನ್ನಯ ರೂಪ ನೋಡಿದಲ್ಲಿ, ನಿಹಿತದ ಇರವಾಯಿತ್ತು. ಆ ರೂಪ ಕಂಡ ನಿರೂಪಿನ ದೃಷ್ಟಿ, ಅದರೊಳಗೆ ಕೂರ್ತು ತೋರುವ ಬೆಳಗಿನ ಮರೆ. ಉಭಯವ ಹಿಡಿದು ನೋಡುವ ಘಟಪಟನ್ಯಾಯ, ಉಪದೃಷ್ಟಭೇದ. ಹಿಡಿದ ಇಷ್ಟಾಚರಣೆ ಕುರುಹಿನ ಲಕ್ಷಣ. ಪಡಿಬ್ಥಿನ್ನ ಭೇದವಿಲ್ಲದೆ ತೋರಿ ತೋರದಿಪ್ಪ ಉಭಯ ಅಂಗವು ನೀನೆ, ಸಗರದ ಬೊಮ್ಮನೊಡೆಯ ತನುಮನ [ಸಂಗ]ಮೇಶ್ವರಲಿಂಗದಲ್ಲಿ ಲೇಪವಾದ ಶರಣಂಗೆ.
--------------
ಸಗರದ ಬೊಮ್ಮಣ್ಣ
ಶಮೆ ದಮೆ ತಿತಿಕ್ಷೆ ಉಪರತಿ ಶ್ರದ್ಧೆ ಸಮಾಧಿ ಸಾಧನಸಂಪನ್ನನಾಗಿ ಸದ್ಗುರುವನರಸುತ್ತ ಬಪ್ಪ ಶಿಷ್ಯನ ಸ್ಥೂಲತನುವಿನ ಕಂಗಳ ಕೊನೆಯಲ್ಲಿ ಇಷ್ಟಲಿಂಗವ ಧರಿಸಿ; ಸೂಕ್ಷ್ಮತನುವಿನ ಮನದ ಕೊನೆಯಲ್ಲಿ ಪ್ರಾಣಲಿಂಗವ ಧರಿಸಿ; ಕಾರಣ ತನುವಿನ ಭಾವದ ಕೊನೆಯಲ್ಲಿ ತೃಪ್ತಿಲಿಂಗವ ಧರಿಸಿ, `ಸರ್ವೇಂದ್ರಿಯಾಣಾಂ ನಯನಂ ಪ್ರಧಾನಂ, ಎಂಬ ಕಂಗಳ ಇಷ್ಟಲಿಂಗಕ್ಕೆ ಸಮರ್ಪಿಸಿ, `ಇಂದ್ರಿಯಾಣಾಂ ಮನೋನಾಥಃ? ಎಂಬ ಮನವನು ಪ್ರಾಣಲಿಂಗಕ್ಕೆ ಸಮರ್ಪಿಸಿ; ಪ್ರಾಣ ಭಾವವ ತೃಪ್ತಿಲಿಂಗಕ್ಕೆ ಸಮರ್ಪಿಸಿ `ಮನೋದೃಷ್ಟ್ಯಾ ಮರುನ್ನಾಶಾದ್ರಾಜಯೋಗಫಲಂ ಭವೇತ್, ಎಂಬ ರಾಜಯೋಗ ಸಮರಸವಾದಲ್ಲಿ_ ಅಂಗ ಲಿಂಗ, ಲಿಂಗವಂಗವಾಗಿ ಶಿಖಿ ಕರ್ಪೂರಯೋಗದಂತೆ ಪೂರ್ಣಾಪೂರ್ಣ ದ್ವೈತಾದ್ವೈತ ಉಭಯ ವಿನಿರ್ಮುಕ್ತವಾಗಿ `ಯತೋ ವಾಚೋ ನಿವರ್ತಂತೇ ಅಪ್ರಾಪ್ಯ ಮನಸಾ ಸಹ, ಎಂಬ ನಿಜದಲ್ಲಿ ನಿವಾಸಿಯಾದರು, ಕೂಡಲಚೆನ್ನಸಂಗಾ ನಿಮ್ಮ ಶರಣರು.
--------------
ಚನ್ನಬಸವಣ್ಣ
ಸರ್ವ ಇಂದ್ರಿಯಗಳ ಒಂದು ಮುಖವ ಮಾಡಿ ಸರ್ವ ಮೋಹಂಗಳಲ್ಲಿ ನಿರ್ಮೋಹಿತನಾಗಿ, ಅಂಗದಿಚ್ಫೆಯ ಮರೆದು ವ್ರತವೆಂಬ ಆಚಾರಲಿಂಗವ ಧರಿಸಬೇಕಲ್ಲದೆ ತನುವಿಗೆ ಬಂದಂತೆ ಮುಟ್ಟಿ, ಮನಕ್ಕೆ ಬಂದಂತೆ ಹರಿದು, ನಾನಿಲ್ಲಿ ಒಬ್ಬ ಶೀಲವಂತನಿದ್ದೇನೆ ಎಂದು ಕಲಹಟ್ಟಿಯಂತೆ ಕೂಗುತ್ತ ಕೊರಚುತ್ತ ಅಲ್ಲಿ ಬೊಬ್ಬಿಡುತ್ತ ಶೂಲವನೇರುವ ಕಳ್ಳನಂತೆ ಬಾಹ್ಯದಲ್ಲಿ ಬಾಯಾಲುವ, ಮನದಲ್ಲಿ ಸತ್ತೆಹೆನೆಂಬ ಸಂದೇಹದವನಂತೆ ಸಾಯದೆ, ಹೊರಗಣ ಕ್ರೀ ಶುದ್ಭವಾಗಿ, ಒಳಗಳ ಆತ್ಮ ಶುದ್ಧವಾಗಿ, ಉಭಯ ಶುದ್ಧವಾಗಿಪ್ಪುದು ಪಂಚಾಚಾರ ನಿರುತ, ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದಲ್ಲಿ ಸರ್ವಾಂಗಭರಿತನು
--------------
ಅಕ್ಕಮ್ಮ
ಉಭಯ ಕಾಮ, ಉಭಯ ಶಕ್ತಿ, ಉಭಯ ಆಶ್ರಮವು_ ಅನಾಶ್ರಮವು, ಉಭಯ ತಾನೆ ಪ್ರಸಾದಿ ಉಭಯನಾಮದ ಮೇಲೆ ನಾಮವಾದುದನು ಲಿಂಗದೇಹಿಯೆಂಬಾತಂಗರಿಯಬಾರದು. ಇದು ಕಾರಣ, ಕೂಡಲಚೆನ್ನಸಂಗಾ ನಿಮ್ಮ ಪ್ರಸಾದಿಗಲ್ಲದೆ ಅರಿಯಬಾರದು.
--------------
ಚನ್ನಬಸವಣ್ಣ
ಅಟ್ಟುದನಡಲುಂಟೆ ? ಸುಟ್ಟುದ ಸುಡಲುಂಟೆ ? ಜ್ಞಾನಾಗ್ನಿಯಲ್ಲಿ ದಗ್ಧವಾದ ಪರಮಶಿವಯೋಗಿಗೆ ಹುಟ್ಟು ಹೊಂದೆಂಬ ಉಭಯ ಜಡತೆಯುಂಟೆ ? ಅದೆಂತೆಂದಡೆ: ``ದಗ್ಧಸ್ಯ ದಹನಂ ನಾಸ್ತಿ ಪಾಕಸ್ಯ ಪಚನಂ ನ ಹಿ ಜ್ಞಾನಾಗ್ನಿರ್ದಗ್ಧದೇಹಸ್ಯ ನ ಚ ದಾಹೋ ನ ಚ ಕ್ರಿಯಾ '' ಎಂದುದಾಗಿ_ ನಮ್ಮ ಗುಹೇಶ್ವರಲಿಂಗವನೊಡಗೂಡಿ, ಎರಡಳಿದು ನಿಂದ, ಮಹಾಮಹಿಮಂಗೆ ಪರಿಭವವಿಲ್ಲ ಕಾಣಿರೊ.
--------------
ಅಲ್ಲಮಪ್ರಭುದೇವರು
ದ್ವೆ ೈತಿಯಲ್ಲ ಅದ್ವೆ ೈತಿಯಲ್ಲ ಕಾಣಿಭೋ ಶರಣ. ದ್ವೆ ೈತಾದ್ವೆ ೈತವೆಂಬ ಉಭಯ ಕಲ್ಪನೆಯನಳಿದುಳಿದ ವೀರಮಾಹೇಶ್ವರನು ಪರಶಿವನ ನಿರುತ ಸ್ವಯಾನಂದಸುಖಿ. ಪರಶಿವನ ಪರಮ ತೇಜದಾದಿ ಬೀಜ. ಪರಶಿವನ ಪರಮಜ್ಞಾನಪ್ರಕಾಶಮಯ ಪರಮಾನಂದದ, ನಿರುಪಮಲಿಂಗದ ಪ್ರಭಾಕಿರಣವೇ ತಾನಾದ ಶರಣನಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಘಟತತ್ವ ಪೃಥ್ವಿಭೇದವಾಗಿ, ಆತ್ಮತತ್ವ ಅಪ್ಪುಭೇದವಾಗಿ, ತೇಜಸ್ತತ್ವ ಅರಿವುಭೇದವಾಗಿ, ಇಂತೀ ತ್ರಿವಿಧಭೇದ ವರ್ತುಳ ಗೋಮುಖ ಗೋಳಕಾಕಾರ ಕೂಡಿ ಲಿಂಗವಾದಲ್ಲಿ, ಈಶ್ವರತತ್ವ ವಾಯುಭೇದವಾಗಿ, ಸದಾಶಿವತತ್ವ ಆಕಾಶಭೇದವಾಗಿ, ಉಭಯ ಏಕವಾಗಿ, ಅಗ್ನಿತತ್ವ ಕೂಡಲಿಕ್ಕೆ ಆ ತ್ರಿವಿಧ ಏಕವಾಗಿ, ಅಪ್ಪುತತ್ವವ ಕೂಡಲಿಕ್ಕೆ ಆ ಚತುರ್ಭಾವ ಏಕವಾಗಿ, ಪೃಥ್ವಿತತ್ವ ಕೂಡಲಾಗಿ, ಉತ್ಪತ್ಯವೆಲ್ಲಿ ಅಡಗಿತ್ತು ? ಸ್ಥಿತಿಯೆಲ್ಲಿ ನಡೆಯಿತ್ತು ? ಲಯವೆಲ್ಲಿ ಸತ್ತಿತ್ತು ? ಲಿಂಗ ಮಧ್ಯ ಸಚರಾಚರವೆಂದಲ್ಲಿ, ಕಂಡು ಕಾಣೆ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
>ಸಾವ ಜೀವ ಬಿಂದುವಿನ ಸಂಚ, ಸಾಯದ ನಾದ ಪ್ರಾಣದ ಸಂಚ. ಸಾವ ಜೀವದ, ಸಾಯದ ಪ್ರಾಣದ _ಎರಡರ ಭೇದವನರಿಯದಿರ್ದಡೆ ಲಾಂಛನಧಾರಿ, ಸಾವ ಜೀವದ, ಸಾಯದ ಪ್ರಾಣದ ಎರಡರ ಭೇದವ ಭೇದಿಸಿ ಅರಿವು ಕಣ್ದೆರೆದ ಪ್ರಾಣಲಿಂಗಸಂಬಂಧವಂತಿರಲಿ, ಮತ್ತೆಯೂ ಪ್ರಾಣಲಿಂಗಸಂಬಂಧವೇ ಬೇಕು. ಇಂತೀ ಉಭಯ ಸಂಬಂಧವಳಿದ ಸಂಬಂಧ ನಿಜವಾಯಿತ್ತು. ಕೂಡಲಚೆನ್ನಸಂಗಾ ನಿಮ್ಮ ಶರಣಂಗೆ
--------------
ಚನ್ನಬಸವಣ್ಣ
ಭಕ್ತಂಗೆ ತ್ರಿವಿಧಮಲ ನಾಸ್ತಿಯಾಗಿರಬೇಕು. ಮಾಹೇಶ್ವರಂಗೆ ಬಂಧ ಜಪ ನೇಮ ಕರ್ಮಂಗಳು ಹಿಂಗಿರಬೇಕು. ಪ್ರಸಾದಿಗೆ ಆಯತ ಸ್ವಾಯತ ಸನ್ನಹಿತವೆಂಬುದ ಸಂದೇಹಕ್ಕಿಕ್ಕದೆ ಸ್ವಯಸನ್ನದ್ಧವಾಗಿರಬೇಕು. ಪ್ರಾಣಲಿಂಗಿಯಾದಡೆ ಬಂದು ಸೋಂಕುವ ಸುಗುಣ ನಿಂದು ಸೋಂಕುವ ದುರ್ಗುಣ ಉಭಯ ಸೋಂಕುವುದಕ್ಕೆ ಮುನ್ನವೆ ಹಿಡಿವುದ ಹಿಡಿದು, ಬಿಡುವುದ ಬಿಟ್ಟು ಅರ್ಪಿಸಬೇಕು. ಶರಣನಾದಲ್ಲಿ ಆಗುಚೇಗೆಯೆಂಬುದನರಿಯದೆ ಸ್ತುತಿನಿಂದ್ಯಾದಿಗಳಿಗೆ ಮೈಗೊಡದೆ ರಾಗವಿರಾಗವೆಂಬುದಕ್ಕೆ ಮನವಿಕ್ಕದೆ ಜಿಹ್ವೆ ಗುಹ್ಯೇಂದ್ರಿಯಕ್ಕೆ ನಿಲುಕದೆ ಮದಗಜದಂತೆ ಇದಿರನರಿಯದಿಪ್ಪುದು. ಐಕ್ಯನಾದಲ್ಲಿ ಸುಗಂಧದ ಸುಳುಹಿನಂತೆ ಪಳುಕಿನ ರಾಜತೆಯಂತೆ, ಶುಕ್ತಿಯ ಅಪ್ಪುವಿನಂತೆ ಅಣೋರಣಿಯಲ್ಲಿ ಆವರಿಸಿ ತಿರುಗುವ ನಿಶ್ಚಯತನದಂತೆ ಬಿಂಬದೊಳಗಣ ತರಂಗದ ವಿಸ್ತರದಂಗದಂತೆ ಇಂತೀ ಷಟ್‍ಸ್ಥಲಕ್ಕೆ ನಿರ್ವಾಹಕವಾಗಿ ವಿಶ್ವಾಸದಿಂದ ಸಂಗನಬಸವಣ್ಣನ ಸಾಕ್ಷಿಯಾಗಿ ಬ್ರಹ್ಮೇಶ್ವರಲಿಂಗವನರಿದವರಿಗಲ್ಲದೆ ಸಾಧ್ಯವಲ್ಲ.
--------------
ಬಾಹೂರ ಬೊಮ್ಮಣ್ಣ
ಇನ್ನಷ್ಟು ... -->