ಅಥವಾ

ಒಟ್ಟು 4 ಕಡೆಗಳಲ್ಲಿ , 4 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪದ್ಮಾಸನದಲ್ಲಿ ಕುಳ್ಳಿರ್ದು ಆಧಾರಮಂ ಬಲಿದು ವಾಯುವ ಊಧ್ರ್ವಕ್ಕೆ ತಿದ್ದಿ ಮನ ಪವನ ಬಿಂದುವ ತ[ರ]ಹರವಂ ಮಾಡಿ ಷಡಾಧಾರ ಕಮಲವನೂಧ್ರ್ವಮುಖವಂ ಮಾಡಿ ಮೇಲಣ ಸಹಸ್ರಕಮಲಮಧ್ಯದೊಳಿಪ್ಪ ಜ್ಯೋತಿರ್ಲಿಂಗದಲ್ಲಿ ಮನವ ನಿಲಿಸಿ, ನೆನೆನೆನೆದು ಕೀಟಭೃಂಗನ್ಯಾಯದಂತಪ್ಪುದೆ ಯೋಗ ರೇಕಣ್ಣಪ್ರಿಯ ನಾಗಿನಾಥ.
--------------
ಬಹುರೂಪಿ ಚೌಡಯ್ಯ
ಅಂಗಸ್ಥಲ ಮೂವತ್ತಾರು ಕಲ್ಪನಾಡಿಭೇದಮಂ ಭೇದಿಸುತ್ತ ವಾಕು ಪಾಣಿ ಪಾದ ಪಾಯು ಗುಹ್ಯವೆಂಬ ಕರ್ಮೇಂದ್ರಿಯಂಗಳ ವರ್ಮದಲ್ಲಿರಿಸಿ ಶಬ್ದ ಸ್ಪರ್ಶ ರೂಪ ರಸ ಗಂಧವೆಂಬ ಪಂಚೇಂದ್ರಿಯ[ವಿಷಯಂ]ಗಳ ಪೂರ್ವನಾಮವಿಮೋಚನೆಯಂ ಮಾಡುವ ಪರಿ : ಶ್ರೋತ್ರ, ತ್ವಕ್ಕು, ನೇತ್ರ, ಜಿಹ್ವೆ, ಘ್ರಾಣವೆಂಬ ಪಂಚೇಂದ್ರಿಯಂಗಳ ಬಾಹ್ಯಾಭ್ಯಂತರವನರಿವ ಪರಿ, ಆದ್ಯಕ್ಷರವೊಂದಾದಡೆ ಅಂತ್ಯಕ್ಷರ ಶೂನ್ಯ, ಅದಕ್ಕೆ ಶಾಸ್ತ್ರಕ್ರಮದೊಳಗಾಡುವ ಭೇದಖಂಡದಿಂದ ಲಿಂಗಪ್ರಸಾದವ ಛೇದಿಸಿ, ಆ ಲಿಂಗವಂ ಭೂಮಿಯ ಬಿಡಿಸುವುದು. ಕಳಾವಿಧಸ್ಥಾನಕ್ಕೆ ತಂದಲ್ಲಿ ಸರ್ಪನು ಹಲವ ರುಚಿಸುವುದು. ಆ ರುಚಿಸುವ ಸರ್ಪನನು ತನ್ನಿಚ್ಛೆಗೆ ಹರಿಯಲೀಯದೆ ಅರಿವೆ ಪ್ರಾಣವಾಗಿ ಆ ಅರಿವಿನಿಂ ದೃಢವಿಡಿದು, ಹರಿವ ಹತ್ತುವ ಪರಿಯನೊಡೆದು ಮೂವತ್ತೆರಡು ಜವೆಯ ತೊರೆದಲ್ಲಿ ತೋರುವ, ನಾಡಿ ಮಧ್ಯಮಸ್ವರ ಮಹಿತಸ್ವರ, ಭೂಸ್ವರವೆಂಬ ಮಧ್ಯನಾಡಿ ಮಥನಂಗಳಂ ಮಥಿಸುವುದು. ಅಂಗಕ್ಕೆ ಲಿಂಗ ಬಂದಡೆ ಅಂಗದಾಪ್ಯಾಯನವನರಿವುದು. ಗುರುವಿನಿಂದ ಕರಣಾದಿಗಳು ಶುದ್ಧವಹವು, ಆದಿಪ್ರಭೆಯ ಕಿರಣಂಗಳು ಶುದ್ಧವಹವು, ಕರಣಂಗಳ ಆರತವಡಗುವುದು, ಕಾದ್ರಮಾ ಕಾದು ಕಾವುದು; ಆ ಲಿಂಗವನು ಉದಯದಲ್ಲಿ ನಾಲ್ಕು ಘಳಿಗೆ ತನಕ ಲಿಂಗಾರ್ಚನೆಯಂ ಮಾಡುವುದು. ಆ ಲಿಂಗವನು ವಾಮಕ್ಕೆ ಆ ಲಿಂಗವನು ದಕ್ಷಿಣಕ್ಕೆ ಆ ಲಿಂಗವನು ಪೂರ್ವಕ್ಕೆ, ಆ ಲಿಂಗವನು ಪಶ್ಚಿಮಕ್ಕೆ ಆ ಲಿಂಗವನು ಅಧಕ್ಕೆ, ಆ ಲಿಂಗವನು ಊಧ್ರ್ವಕ್ಕೆ ಆ ಲಿಂಗವನು ಜಡಿವುದು. ಪ್ರಭಾಲಿಂಗವೆಂಬ ಭಾವವನು ಭಾವಿಸಿ, ವಾತ ಪಿತ್ತ ಶ್ಲೇಷ್ಮವೆಂಬ ತ್ರಿಧಾತುವನರಿವುದು. ವಾತೋದ್ರೇಕವಾದಡೆ ಶೀತೋಷ್ಣಂಗಳ ಲಿಂಗಕ್ಕೆ ಸಮ ಮಾಡುವುದು, ಪಿತ್ತೋದ್ರೇಕವಾದಡೆ ಶೈತ್ಯವಂ ಮಾಡಿ ಕಾವುದು. ಶ್ಲೇಷ್ಮೋದ್ರೇಕವಾದಡೆ ಬಿಗಿದು ಲಿಂಗಾರ್ಚನೆಯಂ ಮಾಡುವುದು. ವಾತಪ್ರಕೃತಿಯಲ್ಲಿ ಲಿಂಗದ ಮೊದಲು ದೊಡ್ಡ ತುದಿ ಸಣ್ಣದಾಗಿಹುದು ಪಿತ್ತಪ್ರಕೃತಿಯಲ್ಲಿ ತುದಿ ಮೊದಲು ಸಣ್ಣದಾಗಿ ನಡು ದೊಡ್ಡದಾಗಿಹುದು. ಶ್ಲೇಷ್ಮಪ್ರಕೃತಿಯಲ್ಲಿ ಲಿಂಗತುದಿ ಮೊದಲೊಂದಾಗಿ ದೊಡ್ಡದಾಗಿಹುದು. ಇಂತು ತ್ರಿಧಾತುವನರಿದು ಲಿಂಗಾರ್ಚನೆಯ ಮಾಡುವುದು- ಇದು ವರ್ತನಾಕ್ರಮ. ಆದಿಕ್ರಮ ಅಂತ್ಯಕ್ರಮ ಅನ್ವಯಕ್ರಮ ನಿನಾದಾದಿಕ್ರಮವೆಂಬ ಭೇದಾದಿ ಭೇದಂಗಳಂ ಭೇದಿಸುವುದು. ಶಾಸ್ತ್ರಸಂಧಿಯಲ್ಲಿ ಬಾಹ್ಯಂಗಳನರಿವುದು, ಕ್ರಮಾದಿಕ್ರಮಂಗ?ಂ ತಿಳಿವುದು. ವಿನಾದದಲ್ಲಿ ಚಿತ್ರಪತ್ರಂಗಳನರಿವುದು, ಕರಣಂಗಳಂ ಶುದ್ಧಮಂ ಮಾಡುವುದು. ಹಿರಿದು ನಡೆಯದೆ, ಹಿರಿದು ನುಡಿಯದೆ ಹಿರಿದುಂ ದಿವಾರಾತ್ರಿಯಲ್ಲಿ ಶೀತೋಷ್ಣಾದಿಗಳಂ ಮುಟ್ಟಿಸಿಕೊ?್ಳದೆ ಮಹಾಮಾರ್ಗವ ತಿಳಿವುದು. ಇದರಿಂಗೆ ತನ್ನ ಮಾರ್ಗಮಂ ತೋರದೆ ಮಹಾಮಾರ್ಗದಲ್ಲಿ ಮಾರ್ಗಿಯಾಗಿ ಇದರ ಭೇದಸಂಬಂಧದಲ್ಲಿ ಉಚ್ಛ್ವಾಸ ನಿಶ್ವಾಸಕ್ರಮವನು ಓದಿ ಭರತಕ್ರಮವನು ಅನುಕ್ರಮಿಸಿ ಮೂಲಕಸ್ಥಾನದಲ್ಲಿ ಹೊರೆಹೊಗದೆ ಇಕ್ಕುವ ಚಿತ್ರಕ್ರಮದಲ್ಲಿ ಹೊರೆಹೊಗದೆ ಇಂತಿವನರಿತು ಲಿಂಗಾರ್ಚನೆಯಂ ಮಾಡುವ ಪ್ರಕರಣ : ಭ್ರಾಹ್ಮೀ ಮಹಾಮುಹೂರ್ತದಲ್ಲಿ ಎದ್ದು, ಅಂಗಪ್ರಕ್ಷಾಲನಮಂ ಮಾಡಿ ಕಂಬುವಂ ವಿಸರ್ಜಿಸಿ, ಶಿಶು ಪ್ರಕಾರವಂ ಮಾಡಿ ಶಮೆಯೆಂಬ ಸಮಾಧಿಯಲ್ಲಿ ಕುಳ್ಳಿರ್ದು, ದಮೆಯೆಂಬ ಪೀಠವನಿಕ್ಕಿ, ಶಾಂತಿಯೆಂಬ ನಿಜವಸ್ತ್ರವ ತಂದು, ಆದಿ ಶಿಶುವಿಂಗೆ ಅನುಬಂಧವಂಮಾಡಿ ತಲೆವಲದಲ್ಲಿ ಶಿಶುವಂ ತೆಗೆದು ಕರವೆಂಬ ತೊಟ್ಟಿಲಲ್ಲಿಕ್ಕಿ ಜೋಗೈಸಿ ಕೈಗೆ ಬಾಯಿಗೆ ಬಂದಿತ್ತು ನೋಡಾ, ಬಾಯಿಗೆ ಬಂದಲ್ಲಿ ಭಾವ ಶುದ್ಧವಾಯಿತ್ತು, ಕೈಗೆ ಬಂದಲ್ಲಿ ಆದಿ ಶುದ್ಧವಾಯಿತ್ತು, ಭಾವಲಿಂಗ ಜೀವಕರವಾಯವೆಂಬ ಪಟ್ಟಣದಲ್ಲಿ ಸೀಮೆ ಸಂಬಂಧವಂ ಮೀರಿ, ಮಂತ್ರಮಯವಾಯಿತ್ತು ನೋಡಾ ! ಮಂತ್ರಲಿಂಗವೊ ! ಅಮಂತ್ರ ಲಿಂಗವೊ ಹೇಳಾ ! ಮತ್ರದಿಂ ವಸ್ತ್ರ, ಅಮಂತ್ರದಿಂ ಹಸ್ತ ಇಂತು ಮಂತ್ರ ಆಮಂತ್ರಗಳೆರಡನು ಕೂಡಿ ರಕ್ಷಿಸುತ್ತಿದ್ದಿತ್ತು ನೋಡಾ ! ಶಿರಸ್ಸೆಂಬ ಧೇನು ಲಿಂಗವೆಂಬ ಮೊಲೆಯ ಕರವೆಂಬ ವತ್ಸ ತೊರೆಯಿತ್ತು ನೋಡಾ! ಮಂತ್ರವೆಂಬ ಅಮೃತವ ಕರೆಯಿತ್ತು ನೋಡಾ ! ಬಸವಯ್ಯ ನೋಡಾ ಊಡದ ಹಸು, ಉಣ್ಣದ ಕರು, ಆರೂಢದ ಭಾಂಡ ! ಅಂಗದಲ್ಲಿ ಹುಟ್ಟಿದ ಅಮೃತಜಲವನು ಲಿಂಗಕ್ಕೆ ಕೊಡದೆ ಧರೆಯಲ್ಲಿ ಬಿಟ್ಟಡೆ ಎಂತೊ ಲಿಂಗೋದಯವಹುದು ? ಎಂತೋ ಪಾದೋದಕ ಪ್ರಸಾದಜೀವಿಯಹನು ? ಜೀವ ಪರಮರ ಐಕ್ಯಬಾವವನರಿದ(ವ?)ಡೆ ಲಿಂಗೋದಯದಲಲ್ಲದೆ ಅರಿಯಬಾರದು ನಿಜಭಾವ ನಿಜಭಕ್ತಿ ನಿಜಸಮರಸವಾದಲ್ಲದೆ ಲಿಂಗೋದಯವಾಗದು. ನಿಜಮತ್ರ್ಯದಲ್ಲಿ ಜನಿಸಿದ ಅಂಗ ಅಂಗಿಗಳೆಲ್ಲರು ಪ್ರಾಣಲಿಂಗ ಸಂಬಂಧವನರಿಯರು. ಅಂತು ಅಂಗಲಿಂಗಿಗಳು ಪ್ರಾಣಲಿಂಗಿಗಳಿಗೆ ಭವಿಗಳು ಅಂತು ಪ್ರಾಣಲಿಂಗಿಗಳು ಅಂಗಲಿಂಗಿಗಳನೊಲ್ಲರು. ಅದು ಹೇಗೆಂದಡೆ: ಅವರಿಗೆ ಪ್ರಸಾದ ಪ್ರಾಣಲಿಂಗವಾಗಿ ನಾಮಗೋಪ್ಯ ಮಂತ್ರಗೋಪ್ಯಂಗಳಲ್ಲಿ ಆ ಮಹಾಮಾರ್ಗವನರಿಯರಾಗಿ, ಅಂಗಲಿಂಗಿಗಳಲ್ಲದೆ ಪ್ರಾಣಲಿಂಗಿಗಳಲ್ಲ ಪ್ರಸಾದಸೇವನಧ್ಯಾನಾದರ್ಚನಾದರ್ಪಣಾತ್ ಶುಚಿಃ ಪ್ರಸಾದಹೀನಸ್ಯಾಂಗೇ ತು ಲಿಂಗಂ ನಾಸ್ತಿ ಪುನಃ ಪುನಃ ಎಂದುದಾಗಿ ಇಂತು ಲಿಂಗಾರ್ಚನೆಯಂ ಮಾಡುವುದು ಲಿಂಗಪಾದೋದಕ ಪ್ರಸಾದವನು ಬಾಹ್ಯಾಂತರಂಗದಲ್ಲಿ ವಿರ?ವಿಲ್ಲದೆ ಅವಿರಳಭಾವಸಂಬಂಧದಲ್ಲಿ ಧರಿಸುವುದು; ಧರಿಸುವಾತ ಲಿಂಗವಂತನು. ಅಂಗಲಿಂಗಿ ಪ್ರಾಣಲಿಂಗಿ ಪ್ರಸಾದಲಿಂಗಿ ನಿಜನಿಂದ ಮಾರ್ಗವಿರಳ ಪಂಚಕನಾಡಿಯಲ್ಲಿ ಹೊರಹೊಗದೆ ನಿರ್ನಾದಮಂ ಆಶ್ರಯಿಸುವುದು. ಇದು ಮಹಾಮಾರ್ಗ ಪುರಾತನರ ಪೂರ್ವ; ಅಪರದಲ್ಲಿ ಅಂಥ ಲಿಂಗವನರಿ, ಆದಿಯಲ್ಲಿ ಅನಾಹತಲಿಂಗವನರಿ. ಲಿಂಗವಾರು ಅಂಗಾಂಗಲಿಂಗ ಸರ್ವಾಂಗಲಿಂಗ, ಲಿಂಗಸನುಮತವಾಯಿತ್ತು, ಮಹಾವೃತ್ತಿಗೆ ಅನುಮತವಾಯಿತು, ನಿರ್ವಿಕಲ್ಪ ಪರಮಪದಕ್ಕೆ ತಾನೆ ಆಯಿತ್ತು. ಇನ್ನು ಮಾನಸ ವಾಚಕ ಕಾಯಕದಲ್ಲಿ ಅವಿತಥವಿಲ್ಲದೆ ಲಿಂಗಾರ್ಚನೆಯಂ ಮಾಡುವರ ತೋರಿ ಬದುಕಿಸಾ ಕೂಡಲಚೆನ್ನಸಂಗಮದೇವಯ್ಯ.
--------------
ಚನ್ನಬಸವಣ್ಣ
ದೇಹದ ವಾಸನೆ ಹರಿದು ಆತ್ಮನ ಭವಬಂಧನದ ಕೀಲಮುರಿದು ಪರಾತ್ಪರವಾದ ಪ್ರಾಣಲಿಂಗವನೊಡಗೂಡುವುದಕ್ಕೆ ಆವುದು ಸಾಧನವೆಂದೊಡೆ : ಎಲ್ಲ ಗಣಂಗಳು ತಿಳಿವಂತೆ ಹೇಳುವೆ ಕೇಳಿರಯ್ಯಾ. ಎಂಬತ್ತೆಂಟು ಆಸನದೊಳಗೆ ಮುಖ್ಯವಾಗಿರ್ಪುದು ಶಿವಸಿದ್ಧಾಸನವು. ಆ ಸಿದ್ಧಾಸನದ ವಿವರವೆಂತೆಂದೊಡೆ : ಗುದಗುಹ್ಯಮಧ್ಯಸ್ಥಾನವಾದ ಯೋನಿಮಂಡಲವೆಂಬ ಆಧಾರದ್ವಾರಕ್ಕೆ ಎಡದ ಹಿಮ್ಮಡವನಿಕ್ಕಿ, ಬಲದಹಿಮ್ಮಡವ ಮೇಢ್ರಸ್ಥಾನದಲ್ಲಿರಿಸಿ, ಅತ್ತಿತ್ತಲುಕದೆ ಬೆನ್ನೆಲವು ಕೊಂಕಿಸದೆ ನೆಟ್ಟನೆ ಕುಳ್ಳಿರ್ದು ಉಭಯಲೋಚನವನೊಂದು ಮಾಡಿ ಉನ್ಮನಿಯ ಸ್ಥಾನದಲ್ಲಿರಿಸಿ, ಘ್ರಾಣ ಜಿಹ್ವೆ ನೇತ್ರ ಶ್ರೋತ್ರ ತ್ವಕ್ ಹೃದಯವೆಂಬ ಆರು ದ್ವಾರಂಗಳನು ಆರಂಗುಲಿಗಳಿಂದೊತ್ತಲು ಮೂಲಾಧಾರದಲ್ಲಿರ್ದ ಮೂಲಾಗ್ನಿ ಪಟುತರಮಾಗಿ, ಪವನವನೊಡಗೂಡಿ ಮನವ ಸುತ್ತಿಕೊಂಡು ಊಧ್ರ್ವಕ್ಕೆ ಹೋಗಿ, ಉಭಯದಳದಲ್ಲಿರ್ದ ಮಹಾಲಿಂಗವನೊಡಗೂಡಿ ಅನಂತಕೋಟಿ ಸೂರ್ಯಚಂದ್ರಾಗ್ನಿ ಪ್ರಕಾಶವನೊಳಗೊಂಡು ಅತಿಸೂಕ್ಷ್ಮವಾಗಿ ಅಂಗುಲಪ್ರಮಾಣವಾಗಿ ಶುದ್ಧತಾರೆಯಂತೆ ಕಂಗಳ ನೋಟಕ್ಕೆ ಕರತಲಾಮಲಕವಾಗಿ ಕಾಣಿಸುತಿರ್ಪ ಪ್ರಾಣಲಿಂಗದಲ್ಲಿ ಪ್ರಾಣನ ಸಂಯೋಗವ ಮಾಡಬಲ್ಲಾತನೆ ಪ್ರಾಣಲಿಂಗಸಂಬಂಧಿ. ಆತನೇ ಪ್ರಳಯವಿರಹಿತನಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ನಾವು ಮೀರಿದ ಸ್ಥಲದ ವಿರಕ್ತರೆಂದು ಹೇಳುವ ಅಣ್ಣಗಳಿರಾ ನೀವು ಮೀರಿದ ಸ್ಥಲದ ವಿರಕ್ತರಾದ ಬಗೆಯ ಹೇಳಿರಣ್ಣ. ಅರಿಯದಿರ್ದಡೆ ಹೇಳಿಹೆ ಕೇಳಿರಣ್ಣ, ಮೀರಿನಿಂದ ವಿರಕ್ತನ ವಿಚಾರದ ಭೇದವ. ಅನಾದಿ ಚಿದ್ಬಿಂದುವ ಅಧೋದ್ವಾರದಲ್ಲಿ ಬೀಳಗೊಡದೆ, ಸದ್ಗುರು ಕರುಣಕಟಾಕ್ಷೆಯಿಂದ ಮಹಾಮಂತ್ರವ ಪಡೆದು, ಆ ಚಿನ್ಮಂತ್ರ ಬಲದಿಂದ ಊಧ್ರ್ವಕ್ಕೆ ಮುಖವ ಮಾಡಿ, ಮೇಲುಗಿರಿ ಸಿಂಹಾಸನದಲ್ಲಿ ಮೂರ್ತಗೊಂಡಿರುವ ಪರಶಿವಲಿಂಗದ ಮಹಾಬೆಳಗಿನೊಳಗೆ ಏಕಾರ್ಥವ ಮಾಡಬೇಕು. ಜಿಹ್ವೆಯ ತುದಿಯ ಅಜ್ಞಾನದ ಹುಸಿ ಕುಶಬ್ದ ಕುರುಚಿಯ ನೀಗಬೇಕು. ಸದ್ಗುರುಮುಖದಿಂದ ನಿಜನುಡಿ, ಘನಪಾದೋದಕ, ಪ್ರಸಾದಮಂತ್ರವ ಪಡೆದು, ಸದ್ಭರ್ಮರೂಪದಿಂದಿರಬೇಕು. ಸರ್ವಾಚಾರಸಂಯುಕ್ತವಾದ ಭಕ್ತನೆ ನಿಜಮುಕ್ತಿಮಂದಿರವೆಂದು, ಭಾವ ಮನ ಕಾಯ ತುಂಬಿ, ಪರಿಪೂರ್ಣ ತೃಪ್ತನಾದಾತನೆ ಮೀರಿದ ಸ್ಥಲದ ವಿರಕ್ತ ನೋಡಾ, ಕಲಿದೇವರದೇವ.
--------------
ಮಡಿವಾಳ ಮಾಚಿದೇವ
-->