ಅಥವಾ

ಒಟ್ಟು 3 ಕಡೆಗಳಲ್ಲಿ , 1 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಯ್ಯಾ, ನಾನು ಊರ ಮರೆದು ಆಡ ಹೋದಡೆ, ಒಕ್ಕಲು ಹೆಚ್ಚಿ ಸೊಕ್ಕಾಟ ಘನವಾಯಿತ್ತು. ಇದ ಕಂಡು ಊರ ಹೊಕ್ಕೆ, ಸ್ಥಾನದಲ್ಲಿ ನಿಂದೆ, ಒಂಬತ್ತು ಬಾಗಿಲ ಕದವನಿಕ್ಕಿದೆ. ಆ ಜ್ಞಾನಾಗ್ನಿಯ ಹೊತ್ತಿಸಲು, ಉರಿ ಎದ್ದಿತ್ತು, ಉಷ್ಣ ಊರ್ದ್ವಕ್ಕೇರಿತ್ತು. ತಲೆಯೆತ್ತಿ ನೋಡಲು, ಒಕ್ಕಲು ಓಡಿತ್ತು, ಊರು ಬಯಲಾಯಿತ್ತು. ಆ ಬಯಲನೆ ನೋಡಿ, ನಿರಾಳದೊಳಗಾಡಿ ಮಹಾಬೆಳಗನೆ ಕೂಡಿ, ಸುಖಿಯಾದರಯ್ಯಾ ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣನ ಶರಣರು.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ತನು ಕರಗಿತ್ತು, ಮನ ನಿಂದಿತ್ತು, ಉಲುಹು ಅಡಗಿತ್ತು, ನೆಲೆ ನಿಂದಿತ್ತು, ಮನ ಪವನ ಬಿಂದು ಒಡಗೂಡಿತ್ತು, ಉರಿ ಎದ್ದಿತ್ತು, ಊರ್ದ್ವಕ್ಕೇರಿತ್ತು, ಶರಧಿ ಬತ್ತಿತ್ತು, ನೊರೆ ತೆರೆ ಅಡಗಿತ್ತು, ಅಷ್ಟಮದವೆಲ್ಲ ಹಿಟ್ಟುಗುಟ್ಟಿತ್ತು. ಕರಣಂಗಳೆಲ್ಲ ಹುರಿದು ಹೋದವು, ಸಪ್ತಧಾತು ಕೆಟ್ಟಿತ್ತು, ರಸವರತಿತ್ತು, ಅಪ್ಪುಬರತಿತ್ತು. ಕೆಟ್ಟುಹೋದ ಬಿದಿರಿನಂತೆ ತೊಟ್ಟು ಬಿಟ್ಟು ಬಯಲೊಳಗೆ ಬಿದ್ದು, ನಾನೆತ್ತ ಹೋದೆನೆಂದರಿಯೆನಯ್ಯಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಆಧಾರವ ಬಲಿಯೆ ಬೇಗೆವರಿಯಿತ್ತು; ಕಿಚ್ಚು ಆವರಿಸಿ ಊರ್ದ್ವಕ್ಕೇರಿತ್ತು. ಸಾಸಿರದಳದ ಅಮೃತದ ಕೊಡ ಕಾಯಿತ್ತು. ಕಾಯ್ದ ಅಮೃತ ಉಕ್ಕಿ ತೊಟ್ಟಿಕ್ಕೆ, ಅಮೃತವನುಂಡು ಹಸಿವು ಕೆಟ್ಟಿತ್ತು; ತೃಷೆಯಡಗಿತ್ತು ನಿದ್ರೆಯರತಿತ್ತು; ಅಂಗಗುಣವಳಿಯಿತ್ತು ಲಿಂಗಗುಣ ನಿಂದಿತ್ತು ಸಂಗಸುಖ ಹಿಂಗಿತ್ತು. ಅಂಗಲಿಂಗವೆಂಬ ಉಭಯವಳಿದು, ಮಂಗಳ ಮಹಾಬೆಳಗಿನಲ್ಲಿಯೇ ಓಲಾಡಿ ಸುಖಿಯಾದೆನಯ್ಯಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
-->