ಅಥವಾ

ಒಟ್ಟು 3 ಕಡೆಗಳಲ್ಲಿ , 3 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಜಕಲ್ಪನೆಗೊಳಗಾದ ಊರೊಳಗೆ ಮುನ್ನೂರು ಅರುವತ್ತು ಮಂದಿ ಅಸಾಸುರರು ನಿಚ್ಚ ನಿಚ್ಚ ಊರಿಗುಪಟಳ ಮಾಡುತ್ತಿರ್ದರಲ್ಲಯ್ಯಾ. ಅಚ್ಯುತನ ಆಜ್ಞೆಯಲ್ಲಿ ಅಡಗಿದ ಕಪಿಯೊಳಗೆ ಬಾವನ್ನ ವೀರರು ಮುಳುಗಿ ಬಂಧಮೋಕ್ಷಂಗಳ ಬಗೆವುತಿರ್ದರಲ್ಲಯ್ಯಾ. ಮೇಲೆ ರುದ್ರನೂಳಿಗದ ದಾಳಿ ಹತ್ತಿ ಘೋಳಿಟ್ಟು ಹಾಳಾಯಿತಲ್ಲಾ, ಮೂರು ಲೋಕವೆಲ್ಲ. ಇಂತೀ ಮೂವರ ಮುಂದುಗೆಡಿಸಿ ಅಯಿವತ್ತಿಬ್ಬರನಣಕಿಸಿ ಮೂನ್ನೂರ ಅರುವತ್ತು ಮಂದಿ ಅಸಾಸುರರನಡಿಗದ್ದಿದ ಸ್ವತಂತ್ರರು ಸೌರಾಷ್ಟ್ರ ಸೋಮೇಶ್ವರಾ, ನಿಮ್ಮ ಶರಣರು.
--------------
ಆದಯ್ಯ
ಒಡಲೆಂಬಾರಣ್ಯದ ಪಡುವಣ ಕಾಳುಗಟ್ಟದ ಗಹ್ವರದ ನವದ್ವಾರದೊಳಗೆ ಅಡಗಿಪ್ಪ ಐವರ ಕಳ್ಳರ ತಿಳಿದು ನೋಡಿರಯ್ಯಾ. ಆ ಕಳ್ಳರು ಇಹನ್ನಕ್ಕರ ಊರಿಗುಪಟಳ ಮನೆಗೆ ಮಾರಿ, Zõ್ಞಕ ಗ್ರಾಮದ ಮಧ್ಯದವರಿಗುಳುಹಿಲ್ಲ. ತನುಪ್ರಪಂಚಿಗಳು ಮನಪ್ರಪಂಚಿಗಳು ಧನಪ್ರಪಂಚಿಗಳು ವಾದಿಗಳು ತರ್ಕಿಗಳು ನಾನಾ ಕುಟಿಲ ಕುಹಕ ಬಹುಪಾಪಿಗಳೆಲ್ಲ ನೆರೆದು, ಆ ಕ?್ಳರ ಹಿಡಿದಿಹೆವೆನುತ್ತಿಹರಯ್ಯಾ. ಅದಕ್ಕೆಂಟು ಬೀದಿ ಒಂಬತ್ತು ಓಡುಗಂಡಿ ಕಾಣಬಾರದ ಕತ್ತಲೆ, ಹೆಜ್ಜೆಯ ಹೊಲಬ ಕಂಡೆಹೆನೆಂಬನು ಭ್ರಾಂತ ನೋಡಾ ! ಓಂ ಬ್ರಹ್ಮಸ್ನಾನಂ ಪವನಜ್ಞಾನಂ ಲಿಂಗಧ್ಯಾನಂ ಸುಜ್ಞಾನದರ್ಶನಂ ಪ್ರಭಾಕರಂ ದಿವಾಕರಂ ಇಂತೀ ಶ್ರುತಿಮತದಲ್ಲಿ ತಿಳಿದು ನೋಡಲಿಕೆಯಾಗಿ ಆ ಹೆಜ್ಜೆ ಹೋಯಿತು ! ಅಂಗಸಂಗನ ಹಳ್ಳಿಯ ಒಳಗೆರೆಯ ಒಸರುಬಾವಿಯ ಲಿಂಗಗೂಡಿನ ಶಿವಪುರದ ಸೀಮೆಯ, ನಿಟಿಲಪುರದ ತಲೆವಲದಲ್ಲಿ ಸಿಕ್ಕಿದ ಕ?್ಳರ ಅಂಗದ ಮೇಲೆ ಕಟ್ಟಿತಂದು ಎನ್ನೊಡೆಯ ಪ್ರಭುರಾಯಂಗೊಪ್ಪಿಸಲು ಆ ಪ್ರಭುರಾಯ ತನ್ನವರೆಂದು ಒಕ್ಕುದ ಮಿಕ್ಕುದನಿಕ್ಕಿ ರಕ್ಷಿಸುವ ಕಾಣಿರೆ ! ಇಂತಪ್ಪ ಘಟ ಪಂಚಭೂತಂಗ? ಕಟ್ಟಿ ನಿಲಿಸಿ, ಆತ್ಮಜ್ಞಾನ ಭಕ್ತಿರಸಾಮೃತಸಾರಾಯವನುಣಬಲ್ಲವರಾರೆಂದಡೆ ಪ್ರಭುವಿನ ಬಳಿಯ ಬಸವಸಂತತಿಗಲ್ಲದೆ ಅ?ವಡದು ಮಿಕ್ಕಿನ ಪ್ರಪಂಚಿಗಳಿಗೆ ಅಸಾಧ್ಯ ಕಾಣಾ ಕೂಡಲಚೆನ್ನಸಂಗಮದೇವಯ್ಯಾ.
--------------
ಚನ್ನಬಸವಣ್ಣ
ಸಟೆ ದಿಟವಾದಲ್ಲಿ ಮುಟ್ಟಿಯೂ ಮುಟ್ಟದೆ ಇರಬೇಕು. ಅತಿರತಿ ಗತಿಮತಿಗೆ ಮಂದವಾಯಿತ್ತು. ಎಂಟು ಹಿಟ್ಟು ಪಂಚಮಠವುಂಟು ಧರೆಯ ಮೇಲೆ. ನರಸುರಾದಿಗಳೆಲ್ಲ ಸಭಾರವ ಹೊತ್ತು ಬಂದೈದಾರೆ. ಹಿಟ್ಟು ನಷ್ಟ, ಮಠ ಹಾಳು, ಊರಿಗುಪಟಳ, ಮಠವ ಸುಟ್ಟು ಗುಹೇಶ್ವರ ಬೀದಿಗರುವಾದ.
--------------
ಅಲ್ಲಮಪ್ರಭುದೇವರು
-->