ಅಥವಾ

ಒಟ್ಟು 5 ಕಡೆಗಳಲ್ಲಿ , 4 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮುನ್ನವೆ ಮುನ್ನವೆ ಮೂರರ ಹಂಬಲ ಹರಿದು, ಚರ ಪರ ವಿರಕ್ತನಾದ ಬಳಿಕ, ಇನ್ನು ಮೂರರ ಚಿಂತೆಯ ಹಂಬಲೇಕೆ? ಆವಾವ ಜೀವಂಗಳು ತಮ್ಮ ತಮ್ಮ ಮಲವ ಮುಟ್ಟವು. ತೊಂಡು ಮುಚ್ಚಿದ ಜೀವಧನದಂತೆ, ಊರೂರ ತಪ್ಪಲು ಹರಿದು, ಜೋಗಿಯ ಕಯ್ಯ ಕೋಡಗದಂತೆ ಅನ್ಯರಿಗೆ ಹಲ್ಲಕಿರಿದು, ವಿರಕ್ತನೆನಿಸಿಕೊಂಬ ಯುಕ್ತಿಹೀನರ ಕಂಡಡೆ, ಎನ್ನ ಮನ ನಾಚಿತ್ತು ಚೆನ್ನರಾಮ.
--------------
ಏಕಾಂತರಾಮಿತಂದೆ
ಮುನ್ನವೆ ಮೂರರ ಹಂಬಲ ಹರಿದು ಗುರು ಚರ ವಿರಕ್ತನಾದ ಬಳಿಕ ಇನ್ನೂ ಮೂರರ ಜಿಹ್ವೆಯ ಹಂಬಲೇಕೆ? ಆವಾವ ಜೀವಂಗಳು ತಮ್ಮವಲ್ಲದೆ ಮುಟ್ಟವಾಗಿ ತೊಂಡ ಮಚ್ಚಿದ ಜೀವದನದಂತೆ, ಊರೂರ ತಪ್ಪದೆ ಹರಿದು ಜೋಗಿಯ ಕೈಯ ಕೋಡಗದಂತೆ. ಅನ್ಯರಿಗೆ ಹಲುಗಿರಿದು ವಿರಕ್ತನೆನಿಸಿಕೊಂಬ ಯುಕ್ತಹೀನರ ಕಂಡಡೆ ಎನ್ನ ಮನ ನಾಚಿತ್ತು ಸಿಮ್ಮಲಿಗೆಯ ಚೆನ್ನರಾಮಾ.
--------------
ಚಂದಿಮರಸ
ವ್ರತವ ಹಿಡಿವಲ್ಲಿ, ವ್ರತವ ಉಪದೇಶ ಮಾಡುವಲ್ಲಿ, ಹಿಡಿವಾತನ ಯುಕ್ತಿ ಎಂತೆಂದಡೆ ಮನ, ವಚನ, ಕಾಯ, ತ್ರಿಕರಣಶುದ್ಧಾತ್ಮನಾಗಿ, ಸತಿ, ಸುತ, ಬಂಧುವರ್ಗಂಗಳೆಲ್ಲವು ಏಕತ್ರವಾಗಿ, ನಡೆವುದ ನಡೆಯದಿಹುದೆಂಬುದ ಸ್ಥಿರೀಕರಿಸಿ, ಶ್ರುತ, ದೃಷ್ಟ, ಅನುಮಾನ, ಮೂರನೊಂದುಮಾಡಿ ಮತ್ತೆ ಏನುವ ತೋರದ ವ್ರತವಸ್ತುವನಾದರಿಸಬೇಕು. ವ್ರತ ದೀಕ್ಷೆಯ ಮಾಡುವಲ್ಲಿ ಗುರುವಿನ ಇರವೆಂತೆಂದಡೆ ; ಅವನ ಆಗು ಚೇಗೆಯನರಿತು ಅರ್ತಿಕಾರರಿಗೆ ಇದಿರು ಮೆಚ್ಚುವಭೇದ. ಹಿರಣ್ಯದ ಒದಗಿನ ಲಾಗು, ಕೊಲೆ ಹಗೆಯಪ್ಪನ ರಾಗವಿರಾಗಗಳೆಂಬ ಭಾವವ ವಿಚಾರಿಸಿ, ಈ ವ್ರತ ನೇಮ ನಿನಗೆ ಲಾಗಲ್ಲ ಎಂದು ಅರೆಬಿರಿದಿನ ನೇಮ. ತೊಡಕಿನಂಬಿನ ಘಾಯ ತಪ್ಪಿದಡೆ ಇಹಪರದಲ್ಲಿ ಉಭಯದೋಷz ಹೀಗೆಂದು ಉಪದೇಶವಂ ಕೊಟ್ಟು ಸಂತೈಸುವುದು ಗುರುಸ್ಥಲ. ಆ ಗುಣಕ್ಕೆ ಮುಯ್ಯಾಂತು, ಪರಮಹರುಷಿತನಾಗಿ, ಗಣಸಮೂಹಂ ಕೂಡಿ, ಪರಮ ವಿರಕ್ತರಂ ಕರೆದು, ಮಹತ್ತು ನೆರಹಿ, ಗುರುಲಿಂಗಜಂಗಮಸಾಕ್ಷಿಯಾಗಿ ಮಾಡುವುದೆ ವ್ರತ. ಹೀಗಲ್ಲದೆ, ಮನಕ್ಕೆ ಬಂದಂತೆ, ತನು ಹರಿದಾಡುವಂತೆ, ಊರೂರ ದಾರಿಗರಲ್ಲಿ ವ್ರತವ ಮಾಡಿಕೊಳ್ಳಿಯೆಂದು ಸಾರಲಿಲ್ಲ. ಇಂತೀ ಉಭಯವನರಿತು ವ್ರತಕ್ಕೆ ಅರ್ಹನಾಗಬೇಕು. ಇಂತೀ ಸರ್ವಗುಣಸಂಪನ್ನ ಮಾಡಿಸಿಕೊಂಬವನೂ ತಾನೆ, ಮಾಡುವಾತನೂ ತಾನೆ. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವು ತಾನೆ.
--------------
ಅಕ್ಕಮ್ಮ
ಖಂಡಿತ ವ್ರತ ಅಖಂಡಿತ ವ್ರತ, ಸಂದ ವ್ರತ, ಸಲ್ಲದ ವ್ರತವೆಂದು ನೇಮವ ಮಾಡಿಕೊಂಡು ಊರೂರ ತಪ್ಪದೆ ಸಾರಿ ದೂರಿಕೊಂಡು ತಿರುಗಲೇತಕ್ಕೆ? ತಾ ಮಾಡಿಕೊಂಡ ವ್ರತ ನೇಮ ಊರೆಲ್ಲಕ್ಕೊ ತನಗೊ ಎಂಬುದ ತಾನರಿಯದೆ ನಿಕ್ಷೇಪವ ಕಂಡೆನೆಂದು ಸಾರಿದರುಂಟೆ? ಆ ಮನಜ್ಞಾನವ್ರತ ಕಳ್ಳನ ಚೇಳೂರಿದಂತೆ ಅಲ್ಲಿಯೆ ಅಡಗಬೇಕು. ಹೀಗಲ್ಲದೆ ಕಲಕೇತರಂತೆ ಊರಮಗನೆಂದು ಬಾಗಿಲಲ್ಲಿ ಇರಿದುಕೊಂಬನಂತೆ ಅವ ಮಾಡಿಕೊಂಡ ವ್ರತ ಅದಾರಿಗೆ ಯೋಗ್ಯ? ಅದು ಸಾಗದ ನೇಮ, ಶೀಲವಾಗದ ಅಕೃತ್ಯ. ಇಂತೀ ವ್ರತದ ಭೇದವನರಿಯಬೇಕು. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗಕ್ಕೆ.
--------------
ಅಕ್ಕಮ್ಮ
ಊರೂರ ಮಧ್ಯದಲಿ ಆತನಿಪ್ಪರಮನೆಯ ಆರು ಅರಿಯರು ಆರು ದ್ವಾರಂಗಳ. ಅಂಗ ಲಿಂಗದಲ್ಲಿದ್ದು ಸಂಗವಂ ತೊರೆದೀಗ ಸುಸಂಗ ಸಾನಂದವಾದವರರಿಯರು. ಅನಂಗವಿದಾರಣ ಕಪಿಲಸಿದ್ಧಮಲ್ಲಿಕಾರ್ಜುನ ಲಿಂಗವಿಪ್ಪರ ಮನೆ ಈ ಪರಿಯಯ್ಯಾ.
--------------
ಸಿದ್ಧರಾಮೇಶ್ವರ
-->