ಅಥವಾ

ಒಟ್ಟು 4 ಕಡೆಗಳಲ್ಲಿ , 3 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಊರೆಲ್ಲರು ಬೇಟೆಗೆ ಹೋಗಿ ಕೊಂದರು ಕಾಡೆಮ್ಮೆಯ. [ಅದು] ಸಂದಿಗೆ ಸಾವಿರ ರೂಪು, ಕೊಂಬಿಗೆ ಹಿಂಗದ ವೆಜ್ಜ, ಅದರಂಗದ ಕಂಗಳು ಕಪ್ಪು. ಅದ ಕೊಂದವ[ರ] ತಂದು ಕೂಡಿದೆ ನನ್ನಂಗಳದಲ್ಲಿ. ಆ ಅಂಗಳ, ಅವರ ತಿಂದು ನುಂಗಿತ್ತು. ಮೂರು ಭುವನವ ನುಂಗಿದವರ ಕಂಡು, ಹಿಂಗಲಾರೆ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಕಾಲ ವೇಳೆಯನರಿತು ಕೂಗಿದ ಕೋಳಿಯ ಕಂಡು ಊರೆಲ್ಲರು ಬೆಳಗಾಯಿತ್ತೆಂದು ಏಳುವರಿಂದ ಕಡೆಯೆ ? ಹೇಳುವ ಕೇಳುವ ಮಾತ ಕೇಳಿ ಆರ ಮರೆದು ಮೂರನರಿದು ಈರೈದು ಕಂಡು ಬೇರೈದರಲ್ಲಿ ಗಾರಾಗದೆ, ಸಾರಿದೆ, ಕೆಡಬೇಡೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಹೊಲಕ್ಕೆ ಹೋಗುತಿರ್ಪವನ ಕಂಡು, ಊರೆಲ್ಲರು ನೆರೆದು, ಬೇಡ ಬದುಕೆಂದಡೆ ಆರೆನೆಂದ. ಅದೇತಕ್ಕೆ ಆಕೆಯ ದೂರೆಂದಡೆ ಅವ ಬಾತಿಗೇಡಿ. ಅವಳ ತಾಯ ಕೊಟ್ಟಡೆ ಇರ್ಪೆನೆಂದು ಕೂಡಿಕೊಂಡ. ಅಜಾತರೊಂದಿಗೆ ಹೇಳೆ, ನೀತಿ ಲೇಸಾಯಿತ್ತು ಅತ್ತೆ ಅಳಿಯಂಗೆ. ಅತ್ತೆ ಅಳಿಯನ ಒಲ್ಲೆನೆಂದು ಹೊತ್ತುಹೋರುತ್ತಿರಲಾಗಿ, ಅಳಿಯ ಅತ್ತೆಯ ಹಿಡಿದು ಅಳಿದನುಟ್ಟ ಸೀರೆಯ. ಮೊತ್ತದ ಭಗವ ಕಂಡು ಒತ್ತಿಹಿಡಿಯಲಾಗಿ, ಸತ್ತಳು ಅತ್ತೆ ಅಳಿಯನ ಕೈಯಲ್ಲಿ. ಅತ್ತೆಯ ಕಾಲುದೆಸೆಯಲ್ಲಿ ಕುಳಿತು, ಎತ್ತಿ ನೋಡಲಾಗಿ, ನಿಶ್ಚಯವಾಯಿತ್ತು ಅತ್ತೆಯ ಭಗ. ಹುಟ್ಟಿದರು ಮೂವರಲ್ಲಿ, ಕೆಲದಲ್ಲಿ ಇಬ್ಬರು, ನಡುವೆ ಒಬ್ಬನಾಗಿ. ಇಬ್ಬರ ಬಿಟ್ಟು, ಒಬ್ಬನ ಹಿಡಿದು ಅಬ್ಬರಿಸಲಾಗಿ, ಅವನೆದ್ದು ಬೊಬ್ಬೆಯ ಹೊಯ್ದ. ಹೊಯ್ದ ಹೊಯ್ಗಳಿನಲ್ಲಿ ಅತ್ತೆಯ ತಂದ ಅಳಿಯ, ನಾಮನಷ್ಟವಾದ. ಇಂತಿದನೆತ್ತಲೆಂದರಿಯೆ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಖ್ಯಾತಿಯ ಲಾಭಕ್ಕೆ ವ್ರತವ ಮಾಡಿಕೊಂಡವನ ನೇಮವ ನೋಡಾ ! ಊರಿಗೆ ಬಲುಗಯ್ಯ ಬಂದುಣ್ಣಬೇಕೆಂದು ದಾರಿದಾರಿಯ ಕಾಯ್ದು ಮತ್ತಾರನು ಏನೆಂದರಿಯದೆ. ಮತ್ತಾರು ಆರೈಕೆಗೊಂಡಡೆ ದೇವರೆಂದು, ಬಂದವರ ದಾರಿಗರೆಂದು ಕಾಣುತ್ತ ಇಂತೀ ಗಾರಾದ ಮನಕ್ಕೆ ಇನ್ನಾರು ಹೇಳುವರಯ್ಯಾ ! ಮುಂದೆ ಬಸುರಾಗಿ ಹೆರುವಾಗ ಊರೆಲ್ಲರು ಅವಳಂಗವ ಕಂಡಂತೆ ಜಗಭಂಡ ಶೀಲವಂತನಾಗಿ, ತನ್ನ ಕೊಂಡಾಡುವ ಸತ್ತ ಮತ್ತೆ ಮೂರು ಹೆಂಡಗುಡಿ ಹೇಯಶೀಲ ಕಂಡವರಿಗೆ ನಗೆಯಾಯಿತ್ತು ಇದರಂದಕಂಜಿ, ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವು ಕಂಡೂ ಕಾಣದಂತಿದ್ದ.
--------------
ಅಕ್ಕಮ್ಮ
-->