ಅಥವಾ

ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸರ್ವಸಂಗಪರಿತ್ಯಾಗ ಮಾಡಿದ ಶಿವಶರಣನ ಲೋಕದ ಸಂಸಾರಿಗಳೆಂತು ಮೆಚ್ಚುವರಯ್ಯಾ ? ಊರೊಳಗಿರ್ದಡೆ [ಸಂಸಾರಿ] ಎಂಬರು, ಅಡವಿಯೊಳಗಿರ್ದಡೆ ಮೃಗನೆಂಬರು ಹೊನ್ನ ಬಿಟ್ಟಡೆ ದರಿದ್ರನೆಂಬರು, ಹೆಣ್ಣ ಬಿಟ್ಟಡೆ ನಪುಂಸಕನೆಂಬರು, ಮಣ್ಣ ಬಿಟ್ಟಡೆ ಪೂರ್ವಕರ್ಮಿ ಎಂಬರು, ಮಾತನಾಡದಿರ್ದಡೆ ಮೂಗನೆಂಬರು ಮಾತನಾಡಿದಡೆ ಜ್ಞಾನಿಗೇಕಯ್ಯಾ ಮಾತೆಂಬರು ನಿಜವನಾಡಿದಡೆ ನಿಷು*ರಿಯೆಂಬರು, ಸಮತೆಯನಾಡಿದಡೆ ಅಂಜುವನೆಂಬರು. ಇದು ಕಾರಣ ಕೂಡಲಚೆನ್ನಸಂಗಯ್ಯಾ ನಿಮ್ಮ ಶರಣ ಲೋಕದಿಚ್ಛೆಯ ನುಡಿಯ ಲೋಕದಿಚ್ಛೆಯ ನಡೆಯ !
--------------
ಚನ್ನಬಸವಣ್ಣ
ಉಂಡಡೆ ಭೂತವೆಂಬರು, ಉಣ್ಣದಿರ್ದಡೆ ಚಕೋರಿಯೆಂಬರು. ಊರೊಳಗಿರ್ದಡೆ ಸಂಸಾರಿಕನೆಂಬರು, ಅಡವಿಯೊಳಗಿರ್ದಡೆ ಮರ್ಕಟನೆಂಬರು. ಮಾತನಾಡಿದಡೆ ಪಾಪಕರ್ಮಿಯೆಂಬರು, ಮಾತನಾಡದಿರ್ದಡೆ ಮುಸುಕರ್ಮಿಯೆಂಬರು. ಮಲಗದಿರ್ದಡೆ ಚೋರನೆಂಬರು, ಮಲಗಿರ್ದಡೆ ಜಡದೇಹಿಯೆಂಬರು. ಇಂತೀ ವಸುಧೆಯೊಳಗೆ ಎಂಟುವಿಧ ಕಳೆಯಲು ವಶವಲ್ಲ ಕಾಣಾ ಕಲಿದೇವರದೇವ.
--------------
ಮಡಿವಾಳ ಮಾಚಿದೇವ
-->