ಅಥವಾ

ಒಟ್ಟು 3 ಕಡೆಗಳಲ್ಲಿ , 2 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಯ್ಯಾ, ಜಗತ್ಪಾವನ ನಿಮಿತ್ಯರ್ಥವಾಗಿ ಸಾಕಾರೀಲೆಯ ಧರಿಸಿದ ಸ್ವಯಚರಪರಗುರುಚರಮೂರ್ತಿಗಳ ಅರ್ಪಿತಾವಧಾನದ ನಿಲುಕಡೆಯೆಂತೆಂದೆಡೆ: ಲಿಂಗಾಚಾರ ಮೊದಲಾದ ಸದ್ಭಕ್ತ ಶರಣಗಣಂಗಳಲ್ಲಿ ಲಿಂಗಾರ್ಪಿತಭಿಕ್ಷಲೀಲೆಯ ಧರಿಸಿ ಹೋದ ವ್ಯಾಳ್ಯದೊಳು ಆ ಭಕ್ತಗಣಂಗಳು ಶರಣುಹೊಕ್ಕು ಸಮಸ್ತ ಆಚರಣೆಯ ಒದಗಿಸಿಕೊಟ್ಟ್ಲ ದಶವಿಧ ಪಾದೋದಕ ಏಕಾದಶ ಪ್ರಸಾದದಾಚರಣೆಯಾಗುವದಯ್ಯಾ. ಇಂತು ಲಿಂಗಾಚಾರ ಭಕ್ತಗಣಂಗಳು ದೊರೆಯದಿರ್ದಡೆ ವೇದಾಂತಿ ಸಿದ್ಧಾತಿ ತಿನ್ನಯೋಗಿ ಮೊದಲಾದ ಸಮಸ್ತಮತದಿಂದ ಏಕಶಬ್ದಭಿಕ್ಷವ ಸಪ್ತಗೃಹವ ಬೇಡಿ ದುರ್ಗುಣಯುಕ್ತವಾದ ಅಯೋಗ್ಯದ್ರವ್ಯವನುಳಿದು ಸದ್ಗುಣಯುಕ್ತವಾದ ಯೋಗ್ಯದ್ರವ್ಯವ ಕೈಕೊಂಡು, ಧೂಳಪಾದಜಲದಿಂದ ಭವಿತನವ ಕಳೆದು ಭಕ್ತಪದಾರ್ಥವೆನಿಸಿ ಅಘ್ರ್ಯಪಾದ್ಯಾಚಮನವ ಮಾಡಿ ಧಾನ್ಯವಾದಡೆ ಪರಿಣಾಮಜಲಂ ಶೋಧಿಸಿ ಪಾಕವ ಮಾಡಿ, ಫಲಾಹಾರವಾದಡೆ ಶೋಧಿಸಿ ಪಕ್ವವ ಮಾಡಿಟ್ಟು ಆಮೇಲೆ, ಅಯ್ಯಾ, ನಿನಗೆ ಭಕ್ತಗಣಂಗಳು ದೊರೆಯದ ಸಮಯದಲ್ಲಿ ಚತುರ್ವಿಧ ಪಾದೋದಕವೆಂತುಟೆಂದಡೆ: ಏಕಾಂತವಾಸದಲ್ಲಿ ಪರಿಣಾಮತರವಾದ ಹಳ್ಳ ಹೊಳೆ ಕೆರೆ ಬಾವಿ ಮಡು ಹೊಂಡ ಚಿಲುಮೆ ಕೊಳ ಮೊದಲಾದ ಸ್ಥಾನಕ್ಕೆ ಹೋಗಿ ಪ್ರಥಮದಲ್ಲಿ `ಶಿವ ಶಿವ! ಹರಹರ! ಗುರುಬಸವಲಿಂಗ!' ಎಂಬ ಮಂತ್ರಧ್ಯಾನದಿಂದ ಪಾದವನಿಟ್ಟು ಚರಣಸೋಂಕಿನಿಂ ಪವಿತ್ರವಾದುದಕವೆ ಧೂಳಪಾದೋದಕವೆನಿಸುವದಯ್ಯ; ಆ ಮೇಲೆ ತಂಬಿಗೆಯೊಳಗೆ ಶೋಧಿಸಿ ಬಸವಾಕ್ಷರವ ಲಿಖಿಸುವದೆ ಗುರುಪಾದೋದಕವೆನಿಸುವದಯ್ಯ; ಆ ಮೇಲೆ ಅರ್ಚನಾಕ್ರಿಯೆಗಳ ತೀರ್ಚಿಸಿಕೊಂಡು ನಿಚ್ಚಪ್ರಸಾದಿ ಸಂಬಂಧಾಚರಣೆಯಂತೆ ಮುಗಿದಲ್ಲಿ ಜಂಗಮ ಪಾದೋದಕವೆನಿಸುವದಯ್ಯ. ಇಂತು ಚತುರ್ವಿಧ ಪಾದೋದಕದೊಳಗೆ ಷಡ್ವಿಧ ಪಾದೋದಕ ಉಂಟಯ್ಯ. ಅದೆಂತೆಂದಡೆ: ಹಸ್ತವಿಟ್ಟು ಸ್ಪರ್ಶನವ ಮಾಡೆ ಸ್ಪರ್ಶನೋದಕವೆನಿಸುವದಯ್ಯ; ಲಿಂಗಕ್ಕೆ ಧಾರೆಯಿಂದ ಅಭಿಷೇಕವ ಎರೆದಲ್ಲಿ ಅವಧಾರೋದಕವೆನಿಸುವದಯ್ಯ; ಲಿಂಗಾರ್ಪಿತವ ಮಾಡಬೇಕೆಂಬ ಆನಂದವೆ ಆಪ್ಯಾಯನೋದಕವೆಂದೆನಿಸುವದಯ್ಯ; ಅರ್ಪಿತಮುಖದಲ್ಲಿ ಹಸ್ತವ ಪ್ರಕ್ಷಾಸಿ ಖಂಡಿತವ ಮಾಡಿದಲ್ಲಿಗೆ ಹಸ್ತೋದಕವೆನಿಸುವದಯ್ಯ; ಲಿಂಗಕ್ಕೆ ಸಂತೃಪ್ತಿಪರಿಯಂತರವು ಅರ್ಪಿತವ ಮಾಡಿ[ದಲ್ಲಿ] ಪರಿಣಾಮೋದಕವೆನಿಸುವದಯ್ಯ; ತಟ್ಟೆ ಬಟ್ಟಲ ಲೇಹವ ಮಾಡಿದಲ್ಲಿ ನಿರ್ನಾಮೋದಕವೆನಿಸುವದಯ್ಯ; ಲೇಹವ ಮಾಡಿದ ಮೇಲೆ ದ್ರವ್ಯವನಾರಿಸಿ ಸರ್ವಾಂಗದಲ್ಲಿ ಲೇಪಿಸುವದೆ ಸತ್ಯೋದಕವೆನಿಸುವದಯ್ಯ. ಇಂತೀ ದಶವಿಧ ಪಾದೋದಕದ ವಿಚಾರವ ತಿಳಿದು ಆ ಮೇಲೆ ನಿಚ್ಚಪ್ರಸಾದಿಯ ಸಂಬಂಧಾಚರಣೆಯಂತೆ ಪ್ರಸಾದವ ಮುಗಿವದಯ್ಯ. ಅದರೊಳಗೆ ಏಕಾದಶಪ್ರಸಾದದ ವಿಚಾರವೆಂತೆಂದಡೆ: ಪ್ರಥಮದಲ್ಲಿ ಹಸ್ತಸ್ಪರ್ಶ ಮಾಡಿದಂತಹದೆ ಗುರುಪ್ರಸಾದವೆನಿಸುವದಯ್ಯ; ಇಷ್ಟ ಮಹಾಲಿಂಗಕ್ಕೆ ಮಂತ್ರಸ್ಮರಣೆಯಿಂದ ಮೂರು ವೇಳೆ ರೂಪನರ್ಪಿಸಿದಲ್ಲಿಗೆ ಲಿಂಗಪ್ರಸಾದವೆನಿಸುವದಯ್ಯ; ಎರಡು ವೇಳೆ ಇಷ್ಟಮಹಾಂಗದೇವಂಗೆ ರೂಪನರ್ಪಿಸಿದಲ್ಲಿಗೆ ಲಿಂಗಪ್ರಸಾದವೆನಿಸುವದಯ್ಯ; ಎರಡುವೇಳೆ ಇಷ್ಟಮಹಾಂಗದೇವಂಗೆ ರೂಪನರ್ಪಿಸಿ ಜಿಹ್ವೆಯಲ್ಲಿಟ್ಟ್ಲ ಜಂಗಮ ಪ್ರಸಾದವೆನಿಸುವದಯ್ಯ; ಆ ಮೇಲೆ ಲಿಂಗದೇವರಿಗೆ ತೋರಿ ಬೋಜೆಗಟ್ಟಿ ಲಿಂಗದೇವಂಗೆ ತೋರಿ ಜಿಹ್ವೆಯ್ಲಟ್ಟಂತಹದೆ ಪ್ರಸಾದಿಯ ಪ್ರಸಾದವೆನಿಸುವದಯ್ಯ; ಆ ಭೋಜ್ಯರೂಪಾದ ಪ್ರಸಾದಿಯ ಪ್ರಸಾದದೊಳಗೆ ಮಧುರ ಒಗರು ಕಾರ ಆಮ್ಲ ಕಹಿ ತೃಪ್ತಿ-ಮಹಾತೃಪ್ತಿಯೆ ಆಪ್ಯಾಯನ, ಸಮಯ, ಪಂಚೇಂದ್ರಿಯವಿರಹಿತ, ಕರಣಚತುಷ್ಟಯವಿರಹಿತ, ಸದ್ಭಾವ, ಸಮತೆ, ಜ್ಞಾನಪ್ರಸಾದ ಮೊದಲಾದವು ಸಪ್ತವಿಧಪ್ರಸಾದವೆನಿಸುವದಯ್ಯ. ಇಂತು ಪರಾಧೀನತೆಯಿಂ ಭಿಕ್ಷವ ಬೇಡಲಾರದಿರ್ದಡೆ, ಅರಣ್ಯದಲ್ಲಿ ಫಲರಸಯುಕ್ತವಾದ ಹಣ್ಣು ಕಾಯಿಗಳ ಲಿಂಗಾರ್ಪಿತ ಭಿಕ್ಷೆಯೆಂದು ಆ ಫಲಾದಿಗಳ ತೆಗೆದುಕೊಂಡು ಶೋಧಿಸಿ, ಪವಿತ್ರವ ಮಾಡಿ ಲಿಂಗಾರ್ಪಿತ ಭೋಗಿಯಾದಾತನೆ ಸ್ವಯಂಭು ಪ್ರಸಾದ ಭಕ್ತನಾದ ಚಿತ್ಕಲಾಪ್ರಸಾದಿ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಬಸವ ಮೊದಲಾದ ಮಹಾಪ್ರಮಥಣಂಗಳ ಸಮೂಹಕ್ಕೆ ಕಾರಣರಾದ, ಮತ್ರ್ಯಲೋಕದ ಮಹಾಗಣಂಗಳ ಅಂಶೋದ್ಧಾರಕರಾದ, ಲಿಂಗಾಚಾರ ಭಕ್ತಮಾಹೇಶ್ವರರ ಪಾಣಿಗ್ರಹಣ ಕ್ರಿಯಾಶಕ್ತಿಯರು ಸದಾವಾಸ ಪರಿಯಂತರ ಇಷ್ಟಮಹಾಲಿಂಗವ ತಮ್ಮ ಅಂಗವ ಬಿಟ್ಟು ಅಗಲಿಸಲಾಗದು. ನಿರಂತರ ಶ್ರೀಗುರುಲಿಂಗಜಂಗಮದ ಚರಣೋದ್ಧೂಳನವನ್ನು ಲಲಾಟದಲ್ಲಿ ತ್ರಿಪುಂಡ್ರ ರೇಖೆಗಳ ಧರಿಸಿ, ಮಂತ್ರಸ್ಮರಣೆಯಿಂದ ಲಿಂಗಜಂಗಮಕ್ಕೆ ಪಾಕವ ಮಾಡಿ ಸಮರ್ಪಿಸಿ, ಕುಶಬ್ದವನಳಿದು ಆಚರಿಸುವದೆ ಸತ್ಯಸದಾಚಾರ. ಈಸನ್ಮಾರ್ಗವ ಬಿಟ್ಟು, ಭವಿಪ್ರಾಣಿಗಳಂತೆ ಸರ್ವಾಂಗಕ್ಕೆ ಹಚ್ಚೆಯನೂರಿಸಿಕೊಂಡು, ಲಲಾಟದಲ್ಲಿ ಕುಂಕುಮಗಂಧದ ಬೊಟ್ಟು, ಏಕಾಂತವಾಸದಲ್ಲಿ ಹಲವುಪ್ರಸಂಗ. ಭವಿಜನ್ಮಾತ್ಮರು ತೊಳೆದು ಹೊದಿಕೆ, ಅವರ ಸಂಸರ್ಗ ಮೊದಲಾದ ದುಃಕೃತ್ಯವ ಮಾಡಿದಲ್ಲಿ ಕಂಡು ಸುಮ್ಮನಿರಲಾಗದು. ಭಕ್ತಮಾಹೇಶ್ವರರು ಆ ಸ್ತ್ರೀಯರಿಗೆ ಪ್ರತಿಜ್ಞೆಯ ಮಾಡುವದು. ಅದ ಮೀರಿದಡೆ ಅವರಿಂದ ಪಾಕವ ಕೊಳ್ಳಲಾಗದು. ಈ ಮಾರ್ಗವನಾಚರಿಸದಿರ್ದಂಥ ಭಕ್ತನಲ್ಲಿ, ಗುರುಚರಮೂರ್ತಿಗಳು, ಅವನ ಮನೆಯ ಹೊಕ್ಕು, ಲಿಂಗಾರ್ಚನೆ ಲಿಂಗಾರ್ಪಣವ ಮಾಡಲಾಗದು. ಗುರುವಾಕ್ಯವ ಮೀರಿ, ಅರ್ಥದಿಚ್ಫೆಗೆ ಹೊಕ್ಕು ಬೆರಸಿದಡೆ, ಅನಾದಿ ಗುರುಲಿಂಗಜಂಗಮ ಭಕ್ತಪ್ರಸಾದಕ್ಕೆ ಹೊರಗಾಗಿ, ಅಂತ್ಯದಲ್ಲಿ ಶತಸಹಸ್ರ ವೇಳೆ ಶುನಿಸೂಕರಾದಿಗಳಲ್ಲಿ ಬಪ್ಪುದು ತಪ್ಪದು ನೋಡಾ, ಕಲಿದೇವರದೇವ.
--------------
ಮಡಿವಾಳ ಮಾಚಿದೇವ
ಸತ್ಯಸದ್ಭಕ್ತಿಸದಾಚಾರ ಸತ್ಕಿøಯಾ ಸಮ್ಯಗ್‍ಜ್ಞಾನ ಸದ್ವರ್ತನೆ ಸದ್ಭಾವ ಷಟ್ಸ್ಥಲಮಾರ್ಗಸದ್ಭಕ್ತ ಮಾಹೇಶ್ವರಶರಣಗಣಂಗಳು ಸದಾವಾಸ ಪರಿಯಂತರ ನೀಚಾಶ್ರಯಗಳ ಹೊದ್ದಲಾಗದು. ಅದೆಂತೆಂದಡೆ, ಈಚಲಮರದಿಂದ ಮನೆಯ ಕಟ್ಟಲಾಗದು. ಆ ಗಿಡದ ನೆರಳಲ್ಲಿ ಅರ್ಚನೆ ಅರ್ಪಣ ಶಯನ ಆಸನ ಮೊದಲಾದ ಕೃತ್ಯಗಳ ಮಾಡಲಾಗದು. ಪಾಕವ ಮಾಡುವಲ್ಲಿ ಅದರ ಕಾಷ*ದಲ್ಲಿ ಅಡಿಗೆಯ ಮಾಡಲಾಗದು. ಅಣಬೆ ಇಂಗು ಹಾಕಿ ಭವಿಜನ್ಮಾತ್ಮರ ದರ್ಶನ ಸ್ಪರ್ಶನ ಸಂಭಾಷಣೆಯಿಂದ ಪಾಕವ ಮಾಡಲಾಗದು. ತಥಾಪಿಸಿ ಮಾಡಿದ ಪಾಕವ ಶರಣಗಣಂಗಳು ಲಿಂಗಾರ್ಪಿತವ ಮಾಡಲಾಗದು. ಲಿಂಗಬಾಹ್ಯರು ಆಚಾರಭ್ರಷ್ಟರು ಭವಿಸಂಪರ್ಕರು ಗುರುಲಿಂಗಜಂಗಮದ್ರೋಹಿಗಳು ಮೊದಲಾದವರ ಸಮ್ಮುಖದಲ್ಲಿ ಅರ್ಚನೆ ಅರ್ಪಣಕ್ರಿಯೆಗಳ ಮಾಡಲಾಗದು. ಅವರು ಮಾಡಿದ ಪಾಕವ ಪರಶಿವಲಿಂಗಕ್ಕೆ ಅರ್ಪಿಸಲಾಗದು. ಪಾದೋದಕಪ್ರಸಾದದ್ರೋಹಿಗಳ ಸಮಪಙÂ್ತಯ ಮಾಡಲಾಗದು. ಅವರಾರಾರೆಂದಡೆ, ಗಣಸಮೂಹದಲ್ಲಿ ಪ್ರಸಾದವ ಕೈಕೊಂಡು, ಸಾವಧಾನ ಭಕ್ತಿಯಿಂದ ಮುಗಿದು, ತಾನೊಬ್ಬನೆ ಏಕಾಂತವಾಸದಲ್ಲಿ ಸಾವಧಾನ ಭಕ್ತಿಯನುಳಿದು, ಲಿಂಗಕ್ಕೆ ಕೊಡದೆ, ತನ್ನ ಅಂಗವಿಕಾರದಿಂದ, ಮನಬಂದಂತೆ ಸೂಸಾಡಿ ಭುಂಜಿಸುವನೊಬ್ಬ ಪಾದೋದಕಪ್ರಸಾದದ್ರೋಹಿ. ಸಮಪಙÂ್ತಯಲ್ಲಿ ತನ್ನ ಅಂಗವಿಕಾರದಿಂದ ನನಗೆ ಓಗರವಾಯಿತ್ತೆಂದು, ಪ್ರಸಾದಿಸ್ಥಲಹೀನರ ಕರದು ಕೊಡುವನೊಬ್ಬ ಪಾದೋದಕಪ್ರಸಾದದ್ರೋಹಿ. ತಾ ಮುಗಿದ ಸಮಯದಲ್ಲಿ ಮಧುರ ಒಗರು ಕಾರ ಹುಳಿ ಕಹಿ ಅತಿಯಾಸೆಯಿಂದ ನೀಡಿಸಿಕೊಂಡು, ಜಿಗುಪ್ಸೆ ಹುಟ್ಟಿ, ಕಡೆಗೆ ಬಿಸುಟನೊಬ್ಬ ಪಾದೋದಕ ಪ್ರಸಾದದ್ರೋಹಿ. ಗುರುಲಿಂಗಜಂಗಮದಿಂದ ಪಾದೋದಕಪ್ರಣಮ ಪ್ರಸಾದಪ್ರಣಮವ ಪಡೆದು, ಮತ್ತಾ ಗುರುಲಿಂಗಜಂಗಮನಿಂದೆಯ ಮಾಡುವನೊಬ್ಬ ಪಾದೋದಕಪ್ರಸಾದದ್ರೋಹಿ. ಇಂತಪ್ಪ ಪರಮದ್ರೋಹಿಗಳ ದರ್ಶನದಿಂದ ಪಾದಾರ್ಚನೆ ಅರ್ಪಣಗಳ ಮಾಡಲಾಗದು ನೋಡಾ, ಕಲಿದೇವರದೇವ.
--------------
ಮಡಿವಾಳ ಮಾಚಿದೇವ
-->