ಅಥವಾ

ಒಟ್ಟು 8 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರುಷ ಸೋಂಕಿಯೂ ಪಾಷಾಣ ಶುದ್ಧವಾಗದಿದ್ದರೆ ಆ ಪರುಷದ ಗೊಡವೆ ಏತಕಯ್ಯ? ಅಗ್ನಿ ಸೋಂಕಿಯೂ ಕಾಷ*ದ ಗುಣವಳಿಯದಿದ್ದರೆ ಆ ಅಗ್ನಿಯ ಗೊಡವೆ ಏತಕಯ್ಯ? ಗರುಡನಿದ್ದೂ ಸರ್ಪದ ಭಯ ಹಿಂಗದಿದ್ದರೆ ಆ ಗರುಡನ ಗೊಡವೆ ಏತಕಯ್ಯ? ವಜ್ರಾಂಗಿಯ ತೊಟ್ಟಿರ್ದೂ ಬಾಣದ ಭಯ ಹಿಂಗದಿದ್ದರೆ ಆ ವಜ್ರಾಂಗಿಯ ಗೊಡವೆ ಏತಕಯ್ಯ? ಆನೆಯನೇರಿಯೂ ಶ್ವಾನನ ಭಯಹಿಂಗದಿದ್ದರೆ ಆ ಆನೆಯ ಗೊಡವೆ ಏತಕಯ್ಯ? ಜ್ಯೋತಿಯಿದ್ದೂ ಕತ್ತಲೆ ಹರೆಯದಿದ್ದರೆ ಆ ಜ್ಯೋತಿಯ ಗೊಡವೆ ಏತಕಯ್ಯ? ಅಂಗದ ಮೇಲೆ ಚಿದ್ಘನಲಿಂಗವ ಧರಿಸಿದ್ದು ತನುಮನದ ಅವಗುಣ ಹಿಂಗದಿದ್ದರೆ ಆ ಲಿಂಗದ ಗೊಡವೆ ಏತಕಯ್ಯ? ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ, ನೀವು ಸೋಂಕಿಯೂ ಭವ ಹಿಂಗದಿದ್ದರೆ ನಿಮಗೆ ಕುಂದಯ್ಯ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
`ಇಕ್ಕಿದ ಹರಿಗೆ ತೊಲದ ಕಂಭ'ವೆಂದು ಬಿರಿದನಿಕ್ಕಿ ಹುಯ್ಯಲ ಕಂಡು ಓಡಿ ಬರುವಂಗೆ ಆ ಬಿರಿದೇತಕಯ್ಯ? ಬತ್ತೀಸಾಯುಧದ ಸಾಧನೆಯ ಕಲಿತು ಕಾಳಗದಲ್ಲಿ ಕೈಮರೆದು ಘಾಯವಡೆದಂಗೆ ಆ ಸಾಧನೆ ಏತಕಯ್ಯ? ಕತ್ತಲೆಗಂಜಿ ಕರದಲ್ಲಿ ಜ್ಯೋತಿಯಂ ಪಿಡಿದು ಹಾಳುಗುಳಿಯಲ್ಲಿ ಬೀಳುವಂಗೆ ಆ ಜ್ಯೋತಿಯೇತಕಯ್ಯ? ಆದ್ಯರ ವಚನಂಗಳ ಸದಾಕಾಲದಲ್ಲಿ ಓದಿ ಶಿವತತ್ವ ಆತ್ಮತತ್ವ ವಿದ್ಯಾತತ್ವವನರಿದು ಆರಕ್ಕೆ ಆರ ನೆಲೆಮಾಡಿ ಮೂರಕ್ಕೆ ಮೂರ ಸಂಬಂಧಿಸಿ ಐದಕ್ಕೆ ಇನ್ನು ಪ್ರತಿಯಿಲ್ಲವೆಂದು ಅರಿದ ವಿರಕ್ತರು ಪುರಾತನರಂತೆ ಸಮ್ಯಜ್ಞಾನ ಕ್ರೀಯಿಂದಲೆ ಆದರಿಸುವುದು, ಭಕ್ತ ವಿರಕ್ತರ ಆಚರಣೆಯೆಲ್ಲಾ ಒಂದೇ. ಅದು ಹೇಗೆಂದರೆ ಭಕ್ತಂಗೆ ಬಹಿರಂಗದ ದಾಸೋಹ. ವಿರಕ್ತಂಗೆ ಅಂತರಂಗದ ದಾಸೋಹ. ಈ ಆಚರಣೆಯನತಿಗಳೆದು ಮನ ಬಂದ ಪರಿಯಲ್ಲಿ ನಡೆದು ಕೆಡುವಂಗೆ ಆದ್ಯರ ವಚನವೇತಕಯ್ಯ? ಆದ್ಯರ ವಚನವೆಂಬುದು ಸಂತೆಯಮಾತೆ? ಪುಂಡರ ಪುರಾಣವೇ? ಲೋಕದ ಜನರ ಮೆಚ್ಚಿಸುವ ಬೀದಿಯ ಮಾತೆ? ಶಿವ ಶಿವ ನೀವು ಶಿವಶರಣರ ಕೂಡಾಡಿ ವಚನಂಗಳ ಕಲಿತು ಆ ವಚನಂಗಳ ನಿಮ್ಮ ಊಟದ ವೆಚ್ಚಕ್ಕೆ ಈಡು ಮಾಡಿಕೊಂಡಿರಲ್ಲದೆ ಮುಂದಣ ಮುಕ್ತಿಯ ಪದವ ಕಾಣದೇ ಹೋದಿರಲ್ಲಾ? ಇದು ಕಾರಣ- ಶಿವಜ್ಞಾನೋದಯವಾದ ಲಿಂಗಾಂಗಿಗಳಿಗೆ ಎನ್ನ ನುಡಿ ಮೈಗಂದೆಯಂ ತುರಿಸಿದಂತೆ ಹಾಲು ಸಕ್ಕರೆಯನುಂಡಂತೆ ಸವಿದೋರುತ್ತದೆ. ವೇಷಧಾರಿ ವಿಶ್ವಾಸಘಾತುಕರಿಗೆ ಎನ್ನ ನುಡಿ ಅಲಗಿನ ಮೊನೆಯಂತೆ ಇರಿಯುತ್ತಿದೆಯಯ್ಯಾ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
-->