ಅಥವಾ

ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾತಿನಲ್ಲಿ ಬಲ್ಲೋತ್ತರವಂತರೆಲ್ಲರೂ ಆತನನರಿದುದಿಲ್ಲ ಆತ ಏತರೊಳಗೂ ಸಿಕ್ಕದ ಅಜಾತ ಶಂಭು. ಆತನ ನೀತಿಯನರಿವುದಕ್ಕೆ ಅಸುರ ಕರ್ಮವ ಬಿಟ್ಟು ವೇಷದಿಂದಾದ ಘಾತಕತನವನೊಲ್ಲದೆ ಭಕ್ತಿಯೆಂಬ ಆಶೆ ಕುರಿತು ಪೋಷಣವ ಹೊರೆಯದೆ ನಿಜ ತತ್ವದ ಆಶೆಯೇ ಸಾಕಾರವಾಗಿ ಅರಿದ ಆತ್ಮ ಕರಿಗೊಂಡಲ್ಲಿ ಹರಿಪ್ರಿಯ ಅಘೋರನಾಶನ ರಾಮನಾಥಾ.
--------------
ಗುಪ್ತ ಮಂಚಣ್ಣ
ನೋಡುವ ನೋಟ ಕೂಡಿ ಬಯಲಲ್ಲಿ ಸಿಕ್ಕಿ, ಆಡಲೀಯದೆ ಅಲುಗದೆ ಅಗಲಿ, ಆಕಾಶದಲ್ಲಿ ಕೀಲಿಸಿ, ಲೋಕಾದಿಲೋಕವ ನೋಡುತ್ತ, ಬೇಕಾದ ಠಾವಿಂಗೆ ಹೋಗುತ್ತ, ಆತ್ಮನೊಳು ಬೆರೆವುತ್ತ, ಮಾತಿನ ಕೀಲನರಿವುತ್ತ, ಪರಂಜ್ಯೋತಿಯ ಬೆಳಗಿನೊಳಗೆ ಅಜಾತನಾಗಿ ಏತರೊಳಗೂ ಸಿಲುಕದೆ ಆಡುವ ಶರಣ ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ ತಾನೆ ನೋಡಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
-->