ಆ ಅಖಂಡಮಹಾಜ್ಯೋತಿಪ್ರಣವದ ತಾರಕಸ್ವರೂಪವಾಗಿಹ
ಮೂರ್ತಿಬ್ರಹ್ಮದಲ್ಲಿ ಬ್ರಹ್ಮ, ಪೃಥ್ವಿ, ಗಂಧ, ಚಿತ್ತ, ಘ್ರಾಣ,
ಗುದವೆಂಬ ಈ ಆರು ತತ್ವಂಗಳು ಉತ್ಪತ್ಯವಾಯಿತ್ತು ನೋಡಾ.
ಇದಕ್ಕೆ ನಿರಂಜನಾತೀತಾಗಮೇ :
``ಧಾತಾ ಧಾತ್ರೀ ಚ ಗಂಧಶ್ಚ ಚಿತ್ತ ಂ ಘ್ರಾಣಗುದಸ್ತಥಾ |
ಏತೇಷಾಂ ಮಿಶ್ರಿತಂ ಷಟ್ಕಂ ಮೂರ್ತಿಬ್ರಹ್ಮೇತಿ ಕಥ್ಯತೇ ||''
ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.