ಅಥವಾ

ಒಟ್ಟು 6 ಕಡೆಗಳಲ್ಲಿ , 6 ವಚನಕಾರರು , 6 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಲೆ ಅಯ್ಯಾ ಬಸವಾ ಎಲೆ ಪ್ರಣವ ಬಸವಾ ಏನಯ್ಯಾ ಸಂಗಯ್ಯಾ, ಬಸವಾ.
--------------
ನೀಲಮ್ಮ
ಏನಯ್ಯಾ, ಏನಯ್ಯಾ! ಮಕ್ಕಳಿಗೆ ಜನಕರು ಕಾಡುವರೊ? ನಾನು ಗುರುಸ್ಥಲಕ್ಕೆ ಯೋಗ್ಯನಲ್ಲ, ಲಿಂಗಸ್ಥಲಕ್ಕೆ ಯೋಗ್ಯನಲ್ಲ, ಜಂಗಮಸ್ಥಲಕ್ಕೆ ಯೋಗ್ಯನಲ್ಲ, ನಾ ನಿಮ್ಮ ರಾಜಾಂಗಣದ ಕೂಲಿಕಾರ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಏನಯ್ಯಾ, ವಿಪ್ರರು ನುಡಿದಂತೆ ನಡೆಯರು, ಇದೆಂತಯ್ಯಾ ತಮಗೊಂದು ಬಟ್ಟೆ, ಶಾಸ್ತ್ರಕೊಂದು ಬಟ್ಟೆ ! ಕೂಡಲಸಂಗಮದೇವಯ್ಯಾ, ಹೊಲೆಯರ ಬಸುರಲ್ಲಿ ವಿಪ್ರರು ಹುಟ್ಟಿ ಗೋಮಾಂಸ ತಿಂಬರೆಂಬುದಕ್ಕೆ ಇದೆ ದೃಷ್ಟ.
--------------
ಬಸವಣ್ಣ
ತನು ಹೊರಗಿರಲು, ಪ್ರಸಾದ ಒಳಗಿರಲು ಏನಯ್ಯಾ ನಿಮ್ಮ ಮನಕ್ಕೆ ಮನ ನಾಚದು? ಪ್ರಾಣಕ್ಕೆ ಲಿಂಗದಲ್ಲಿ ಪ್ರಸಾದವ ಕೊಂಡಡೆ, ವ್ರತಕ್ಕೆ ಭಂಗ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಎಲಾ, ಶಿವಪೂಜೆಯ ಮಾಡುವ ಶಿವಪೂಜಕರು ನೀವು ಕೇಳಿರಯ್ಯಾ ; ನಿಮ್ಮ ಶಿವಪೂಜೆ[ಯ]ವಿಧ ಯಾವುದೆಲಾ ? ಜಲದಿಂದ ಮಜ್ಜನವ ನೀಡುವಿರಿ ; ಜಲ ಮೀನಿನೆಂಜಲು. ಅಡವಿಯಂ ತಿರುಗಿ, ಪುಷ್ಪವಂ ತಂದು, ಶಿವಗಂ ಅರ್ಪಿ[ಸುವಿರಿ]; ಪುಷ್ಪ ಭೃಂಗದೆಂಜಲು. ಪಂಚಾಭಿಷೇಕ[ವ]ಮಾಡುವಿರಿ; ಕ್ಷೀರ ಕರುವಿನೆಂಜಲು. ಮಧು[ವ] ಅಭಿಷೇಕವ ಮಾಡುವಿರಿ; [ಮಧು] ಮಧು[ಕ]ರಮಯಂ. [ಇಂ]ತೀ ನೈವೇದ್ಯವಂ ಮಾಡುವೆಯಲ್ಲದೆ ಶಿವಪೂಜೆಯ ವಿಧವ ಬಲ್ಲೆ ಏನಯ್ಯಾ ? ಅದು ಎಂತೆಂದಡೆ: ಮಾನಸ ಪೂ[ಜಕ]ಸ್ಯ ಸರ್ವಪಾಪಃ [ಪರಿಹರತಿ] | ಸಾ[ಮೀ]ಪ್ಯ[ಂ] ಸದ್ಗು[ರೋಃ] ಪ್ರಾ[ಪ್ಯ] ಪುನರ್ಭವ ವಿನಶ್ಯತಿ || ಇಂತೀ ಆಗಮ ಗ್ರಂಥವುಂಟಲ್ಲಾ ಇದನ್ನರಿತು ಮಾನಸವೆಂಬೋ ಕಲ್ಲಿನ ಮೇಲೆ ಮದಮಚ್ಚರವೆಂಬೋ ಗಂಧ ಕೊರಡಿನಿಂದ ತೇಯ್ದು, ಸತ್ಯವೆಂಬೋ ಗಂಧವಂ ಹಚ್ಚಿ, ನಿತ್ಯತ್ವ ಎಂಬೋ ಅಕ್ಷತೆಯನಿಟ್ಟು, ಗುರುಕೀಲೆಂಬೋ ಒರಳಿನಲ್ಲಿ ಮದಮಚ್ಚರವೆಂಬೋ ತಂಡಿಲಂ ಕುಟ್ಟಿ, ಬುದ್ಧಿಯೆಂಬೋ ಮೊರದಿಂದ ಝಾಡಿಸಿ ಕೇರಿ, ನಿಜವೆಂಬೋ ಅನ್ನವಂ ಮಾಡಿ, ನಿರ್ಮಳ ಚಿತ್ತವೆಂಬೋ ತುಪ್ಪವಂ ನೀಡಿ, ನಿರುಪಮ ಅವಸ್ಥೆಗಳಿಂದ ನೈವೇದ್ಯವಂ ಕೊಟ್ಟು, ಕಾಮಕ್ರೋಧವೆಂಬೋ ಬತ್ತಿಯ ಹೊಸೆದು, ಗುರುಪ್ರಣುತವೆಂಬೋ ಪಣತಿಯೊಳಗೆ ನಿರ್ಮಳವೆಂಬೋ ತೈಲವಂ ಎರೆದು ಜ್ಯೋತಿಯ ಮುಟ್ಟಿಸಿ, ನಿರ್ಮಳ ಲಿಂಗಕ್ಕಂ ಅರ್ಪಿಸಿ ಮೋಕ್ಷವ ಕಂಡಡೆ ಶಿವಪೂಜಕನೆಂದು ನಮೋ ಎಂಬುವೆನಯ್ಯಾ ಬರಿದೆ 'ನಾ ಶಿವಪೂಜೆ' 'ನೀ ಶಿವಪೂಜಕ'ನೆಂದು ತಿರುಗುವ ಮೂಳ ಹೊಲೆಯರ ಮುಖವ ನೋಡಲಾಗದು ಕಾಣಾ ಕೂಡಲಾದಿ ಚನ್ನಸಂಗಮದೇವಾ.
--------------
ಕೂಡಲಸಂಗಮೇಶ್ವರ
ಗುರುಶಿಷ್ಯ ಸಂಬಂಧಕೆ ಹೋರಾಡಿ, ಧರೆಯೆಲ್ಲ ಬಂಡಾದರು ನೋಡಾ. ಗುರುವಿನ ಭವವ ಶಿಷ್ಯನರಿಯ, ಶಿಷ್ಯನ ಭವವ ಗುರುವರಿಯ. ಜ್ಞಾನಹೀನ ಗುರುವಿಂಗೆ ಜ್ಞಾನಹೀನ ಶಿಷ್ಯನಾದರೆ ಅವರ ಪಾತಕಕೆ ಕಡೆ ಏನಯ್ಯಾ ? ಸಾಕ್ಷಿ :``ಜ್ಞಾನಹೀನಗುರೋ ಪ್ರಾಪ್ತಂ ಶಿಷ್ಯಜ್ಞಾನಂ ನ ಸಿದ್ಧತಿ | ಮೂಲಚ್ಛಿನ್ನೇ ಯಥಾವೃಕ್ಷೇ ಗಂಧಃ ಪುಷ್ಪಂ ಫಲಂ ತಥಾ ||'' ಎಂದುದಾಗಿ, ಹೀಗೆಂಬುದನರಿಯದೆ, ಹೊನ್ನು ವಸ್ತ್ರದಾಸೆಗೆ ಲಿಂಗವ ಮಾರಿಕೊಂಡುಂಬ ಗುರು ಶಿವದ್ರೋಹಿ, ಲಿಂಗವ ಕೊಂಬ ಶಿಷ್ಯ ನರದ್ರೋಹಿ. ಇಂತಪ್ಪ ಗುರು ಶಿಷ್ಯ ಸಂಬಂಧವ ನೋಡಿ ನೋಡಿ ನಗುತಿದ್ದ ನಮ್ಮ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
-->