ಒಟ್ಟು 5 ಕಡೆಗಳಲ್ಲಿ , 2 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಜ್ಞಾನದ ಗಮನವ ಸಹಜದ ಉದಯದಲ್ಲಿ ಏನೆಂದರಿಯೆನು.ಲಿಂಗದ ಬೆಳಗು ಒಳಕೊಂಡುದಾಗಿ ಏನೆಂದರಿಯೆನು.ಕೂಡಲಸಂಗಮದೇವನ ಧ್ಯಾನದಿಂದ ಏನೆಂದರಿಯೆನು.
ನಲ್ಲನ ಕೂಡುವ ಭರದಲ್ಲಿ ಎನ್ನುವನಿದಿರುವನೇನೆಂದರಿಯೆನು.ನಲ್ಲನ ಕೂಡುವಾಗಳೂ ಎನ್ನುವ ನಲ್ಲನನೇನೆಂದರಿಯೆನು.ಉರಿಲಿಂಗದೇವನ ಕೂಡಿದ ಬಳಿಕನಾನೊ ತಾನೊ ಏನೆಂದರಿಯೆನು.
ಎಮ್ಮ ನಲ್ಲನ ಕೂಡಿದ ಕೂಟವ ಇದಿರಿಗೆ ಹೇಳಬಾರದವ್ವಾ.ನೀವೆಲ್ಲಾ ನಿಮ್ಮ ನಲ್ಲನ ಕೂಡಿದ ಸುಖವ ಬಲ್ಲಂತೆ ಹೇಳಿ.ಉರಿಲಿಂಗದೇವ ಬಂದು ನಿರಿಯ ಸೆರಗ ಸಡಿಲಿಸಲೊಡನೆನಾನೊ ತಾನೊ ಏನೆಂದರಿಯೆನು.