ಒಟ್ಟು 3 ಕಡೆಗಳಲ್ಲಿ , 3 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಏನೆಂದೂ ಎನಲಿಲ್ಲ; ನುಡಿದು ಹೇಳಲಿಕ್ಕಿಲ್ಲ.ನಿಜದಲ್ಲಿ ನಿಂದ ಬೆರಗ ಕುರುಹ ಹರಿವುದೆ ಮರುಳೆ?ಹರಿದು ಹತ್ತುವುದೆ ಮರುಳೆ ಬಯಲು?ಅದು ತನ್ನಲ್ಲಿ ತಾನಾದ ಬಯಲು; ತಾನಾದ ಘನವು.ಇನ್ನೇನನರಸಲಿಲ್ಲ.ಅದು ಮುನ್ನವೆ ತಾನಿಲ್ಲ.ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ.
ಅಂಗಸಂಗದಲ್ಲಿ ಲಿಂಗಸಂಗಿಯಾದೆನು. ಲಿಂಗಸಂಗದಲ್ಲಿ ಅಂಗಸಂಗಿಯಾದೆನು. ಉಭಯಸಂಗವನೂ ಅರಿಯದೆ ಪರಿಣಾಮಿಯಾದೆನು. ನುಡಿಯ ಗಡಣವ ಮರೆದು ತೆರಹಿಲ್ಲದಿದ್ದೆನು. ಎನ್ನ ದೇವ ಚೆನ್ನಮಲ್ಲಿಕಾರ್ಜುನನ ಬೆರಸಿದ ಬಳಿಕ ಎನ್ನ ನಾನು ಏನೆಂದೂ ಅರಿಯೆನಯ್ಯಾ.
ಚಿತ್ತುವೆಂಬ ಬಿತ್ತು ಬಲಿದು ಎರಡಾದಲ್ಲಿ,ಲಿಂಗವೆಂಬ ಕಳೆ ಅಂಕುರಿಸಿ ಮೂರ್ತಿಯಾಯಿತ್ತು.ಆ ಮೂರ್ತಿಯ ಘನತೆಯ ಏನೆಂದೂ ಉಪಮಿಸಬಾರದು !ನೋಡಿದಡೆ ಮೂರ್ತಿ ಹಿಡಿದಡೆ ಬಯಲು !ಆ ಮೂರ್ತಿಯೊಳಗದೆ ಈರೇಳು ಲೋಕದ ಪ್ರಾಣಕಳೆ.ಆ ಕಳೆಯ ಬೆಳಗು ತಾನೆ ನಮ್ಮ ಗುಹೇಶ್ವರಲಿಂಗದಲ್ಲಿಲೀಲಾಮೂಲದ ಪ್ರಥಮ ಭಿತ್ತಿ.