ಗುರುವಿನ ಉಪಾಧಿಕೆಯ ಶಿಷ್ಯನರಿತಲ್ಲಿ
ಆ ಗುರುವಿಂಗೆ ಹೇಳದೆ ಸುಮ್ಮನಿದ್ದಲ್ಲಿ ಗುರುದ್ರೋಹ ತನಗಾಯಿತ್ತು.
ಹೇಳಿದ ಮಾತ ಕೇಳಿ ಆ ಸ್ಥಲಕ್ಕೆ ಭಿನ್ನಭಾವಿಯಾಗಲಾಗಿ,
ಲಿಂಗಜಂಗಮದ ದ್ರೋಹ ಆ ಗುರುವಿಂಗಾಯಿತ್ತು.
ಆ ಭಕ್ತಂಗೆ ಚಿತ್ತ ಮುಟ್ಟಿದಲ್ಲಿ ಗುರುವೆಂದು ಪ್ರಮಾಳಿಸಲಿಲ್ಲ.
ಪ್ರಮಾಳಿಸದಿದ್ದಲ್ಲಿ ಆಚರಣೆಯ ತೊಡಕು.
ಇಂತೀ ಉಭಯದ ಏರಿನಲ್ಲಿ ನೋವುತ್ತಿದೇನೆರಿ
ಭಾವದ ಭ್ರಮೆಯ ಬಿಡಿಸು, ಸದಾಶಿವಮೂರ್ತಿಲಿಂಗವೆ.