ಒಟ್ಟು 4 ಕಡೆಗಳಲ್ಲಿ , 4 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ದಾಸ-ದುಗ್ಗಳೆಯವರ ತವನಿದ್ಥಿಪ್ರಸಾದವ ಕೊಂಡೆನಯ್ಯಾ.ಸಿರಿಯಾಳ-ಚೆಂಗಳೆಯವರ ಪ್ರಾಣಪ್ರಸಾದವ ಕೊಂಡೆನಯ್ಯಾ.ಸಿಂಧು-ಬಲ್ಲಾಳವರ ಸಮತಾಪ್ರಸಾದವ ಕೊಂಡೆನಯ್ಯಾ.ಬಿಬ್ಬಬಾಚಯ್ಯಗಳ ಸಮಯಪ್ರಸಾದವ ಕೊಂಡೆನಯ್ಯಾ.ಮಹಾದೇವಿಯಕ್ಕಗಳ ಜ್ಞಾನಪ್ರಸಾದವ ಕೊಂಡೆನಯ್ಯಾ.ನೀಲಲೋಚನೆಯಮ್ಮನವರ ನಿರ್ವಯಲಪ್ರಸಾದವ ಕೊಂಡೆನಯ್ಯಾ.ಇಂತೀ ಏಳ್ನೂರೆಪ್ಪತ್ತಮರಗಣಂಗಳಒಕ್ಕುಮಿಕ್ಕ ಬಯಲಪ್ರಸಾದವ ಕೊಂಡು ಬದುಕಿದೆನುಕಾಣಾ ಗಾರುಡೇಶ್ವರಾ.
ಅಮೃತದ ಸವಿ ಸ್ವಾದಿಸುವರಿಗಲ್ಲದೆಅಮೃತ ತನ್ನ ತಾ ಸ್ವಾದಿಸದ ಪರಿಯಂತೆನಿತ್ಯತೃಪ್ತಂಗೆ ಅಪ್ಯಾಯನ ಉಂಟೇ ಬಸವಣ್ಣಾ ?ಏಳ್ನೂರೆಪ್ಪತ್ತಮರಗಣಂಗಳ ಕಟ್ಟಳೆಯನೇಮದ ಕಟ್ಟು ನಿನ್ನದು ಬಸವಣ್ಣಾ.ನಿನಗೆ ಭಾವ ನಿರ್ಭಾವವೆಂಬುದುಂಟೇ ಬಸವಣ್ಣಾ ?ಅಮರೇಶ್ವರಲಿಂಗದಲ್ಲಿ ಸಂಗನಬಸವಣ್ಣಾ,ನಿನ್ನ ಪಾದಕ್ಕೆ ನಮೋ ನಮೋ ಎಂಬೆನು.
ಎಲೆ ಸಿದ್ಧರಾಮಯ್ಯಾ, ಬಸವಣ್ಣನೆ ಶಿವನು, ಶಿವನೆ ಬಸವಣ್ಣನಾದನಯ್ಯಾ.ಬಸವಣ್ಣ ಚನ್ನಬಸವಣ್ಣ ಪ್ರಭುದೇವರು ಮಡಿವಾಳಯ್ಯಮುಖ್ಯವಾದ ಏಳ್ನೂರೆಪ್ಪತ್ತಮರಗಣಂಗಳಶ್ರೀಪಾದಕ್ಕೆ ಅಹೋರಾತ್ರಿಯಲ್ಲಿ ನಮೋ ನಮೋಎನುತಿರ್ದೆನಯ್ಯಾ, ಬಸವಣ್ಣಪ್ರಿಯ ಕೂಡಲಚೆನ್ನಸಂಗಮದೇವಾ.
ಘೃತ ಘೃತವ ಬೆರಸಿದಂತೆನಿಮ್ಮ ಶ್ರೀಪಾದವ ಬೆರಸಿದನಯ್ಯಾ ಬಸವಣ್ಣ.ಕ್ಷೀರ ಕ್ಷೀರವ ಬೆರಸಿದಂತೆನಿಮ್ಮ ಶ್ರೀಪಾದವ ಬೆರಸಿದನಯ್ಯಾ ಚೆನ್ನಬಸವಣ್ಣ.ಜ್ಯೋತಿ ಜ್ಯೋತಿಯ ಬೆರಸಿದಂತೆನಿಮ್ಮ ಶ್ರೀಪಾದವ ಬೆರಸಿದನಯ್ಯಾ ಪ್ರಭು[ದೇವ].ಬಯಲು ಬಯಲ ಬೆರಸಿದಂತೆನಿಮ್ಮ ಶ್ರೀಪಾದವ ಬೆರಸಿದನಯ್ಯಾ ಮಡಿವಾಳಯ್ಯ.ಬೆಳಗು ಬೆಳಗ ಬೆರಸಿದಂತೆನಿಮ್ಮ ಶ್ರೀಪಾದವ ಬೆರಸಿದನಯ್ಯಾ ಸಿದ್ಧರಾಮಯ್ಯ.ಇವರು ಮುಖ್ಯವಾದ ಏಳ್ನೂರೆಪ್ಪತ್ತಮರಗಣಂಗಳಶ್ರೀಪಾದದಲ್ಲಿ ಉರಿ ಕರ್ಪುರ ಬೆರಸಿದಂತೆ ಬೆರಸಿದೆನಯ್ಯಾ,ಭಕ್ತಿಪ್ರಿಯ ಸತ್ಯಕರಂಡಮೂರ್ತಿ ಸದಾಶಿವಲಿಂಗವೆ.