ಅಥವಾ

ಒಟ್ಟು 4 ಕಡೆಗಳಲ್ಲಿ , 4 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಾಸ-ದುಗ್ಗಳೆಯವರ ತವನಿದ್ಥಿಪ್ರಸಾದವ ಕೊಂಡೆನಯ್ಯಾ. ಸಿರಿಯಾಳ-ಚೆಂಗಳೆಯವರ ಪ್ರಾಣಪ್ರಸಾದವ ಕೊಂಡೆನಯ್ಯಾ. ಸಿಂಧು-ಬಲ್ಲಾಳವರ ಸಮತಾಪ್ರಸಾದವ ಕೊಂಡೆನಯ್ಯಾ. ಬಿಬ್ಬಬಾಚಯ್ಯಗಳ ಸಮಯಪ್ರಸಾದವ ಕೊಂಡೆನಯ್ಯಾ. ಮಹಾದೇವಿಯಕ್ಕಗಳ ಜ್ಞಾನಪ್ರಸಾದವ ಕೊಂಡೆನಯ್ಯಾ. ನೀಲಲೋಚನೆಯಮ್ಮನವರ ನಿರ್ವಯಲಪ್ರಸಾದವ ಕೊಂಡೆನಯ್ಯಾ. ಇಂತೀ ಏಳ್ನೂರೆಪ್ಪತ್ತಮರಗಣಂಗಳ ಒಕ್ಕುಮಿಕ್ಕ ಬಯಲಪ್ರಸಾದವ ಕೊಂಡು ಬದುಕಿದೆನು ಕಾಣಾ ಗಾರುಡೇಶ್ವರಾ.
--------------
ಉಪ್ಪರಗುಡಿಯ ಸೋಮಿದೇವಯ್ಯ
ಅಮೃತದ ಸವಿ ಸ್ವಾದಿಸುವರಿಗಲ್ಲದೆ ಅಮೃತ ತನ್ನ ತಾ ಸ್ವಾದಿಸದ ಪರಿಯಂತೆ ನಿತ್ಯತೃಪ್ತಂಗೆ ಅಪ್ಯಾಯನ ಉಂಟೇ ಬಸವಣ್ಣಾ ? ಏಳ್ನೂರೆಪ್ಪತ್ತಮರಗಣಂಗಳ ಕಟ್ಟಳೆಯ ನೇಮದ ಕಟ್ಟು ನಿನ್ನದು ಬಸವಣ್ಣಾ. ನಿನಗೆ ಭಾವ ನಿರ್ಭಾವವೆಂಬುದುಂಟೇ ಬಸವಣ್ಣಾ ? ಅಮರೇಶ್ವರಲಿಂಗದಲ್ಲಿ ಸಂಗನಬಸವಣ್ಣಾ, ನಿನ್ನ ಪಾದಕ್ಕೆ ನಮೋ ನಮೋ ಎಂಬೆನು.
--------------
ಆಯ್ದಕ್ಕಿ ಮಾರಯ್ಯ
ಎಲೆ ಸಿದ್ಧರಾಮಯ್ಯಾ, ಬಸವಣ್ಣನೆ ಶಿವನು, ಶಿವನೆ ಬಸವಣ್ಣನಾದನಯ್ಯಾ. ಬಸವಣ್ಣ ಚನ್ನಬಸವಣ್ಣ ಪ್ರಭುದೇವರು ಮಡಿವಾಳಯ್ಯ ಮುಖ್ಯವಾದ ಏಳ್ನೂರೆಪ್ಪತ್ತಮರಗಣಂಗಳ ಶ್ರೀಪಾದಕ್ಕೆ ಅಹೋರಾತ್ರಿಯಲ್ಲಿ ನಮೋ ನಮೋ ಎನುತಿರ್ದೆನಯ್ಯಾ, ಬಸವಣ್ಣಪ್ರಿಯ ಕೂಡಲಚೆನ್ನಸಂಗಮದೇವಾ.
--------------
ಸಂಗಮೇಶ್ವರದ ಅಪ್ಪಣ್ಣ
ಘೃತ ಘೃತವ ಬೆರಸಿದಂತೆ ನಿಮ್ಮ ಶ್ರೀಪಾದವ ಬೆರಸಿದನಯ್ಯಾ ಬಸವಣ್ಣ. ಕ್ಷೀರ ಕ್ಷೀರವ ಬೆರಸಿದಂತೆ ನಿಮ್ಮ ಶ್ರೀಪಾದವ ಬೆರಸಿದನಯ್ಯಾ ಚೆನ್ನಬಸವಣ್ಣ. ಜ್ಯೋತಿ ಜ್ಯೋತಿಯ ಬೆರಸಿದಂತೆ ನಿಮ್ಮ ಶ್ರೀಪಾದವ ಬೆರಸಿದನಯ್ಯಾ ಪ್ರಭು[ದೇವ]. ಬಯಲು ಬಯಲ ಬೆರಸಿದಂತೆ ನಿಮ್ಮ ಶ್ರೀಪಾದವ ಬೆರಸಿದನಯ್ಯಾ ಮಡಿವಾಳಯ್ಯ. ಬೆಳಗು ಬೆಳಗ ಬೆರಸಿದಂತೆ ನಿಮ್ಮ ಶ್ರೀಪಾದವ ಬೆರಸಿದನಯ್ಯಾ ಸಿದ್ಧರಾಮಯ್ಯ. ಇವರು ಮುಖ್ಯವಾದ ಏಳ್ನೂರೆಪ್ಪತ್ತಮರಗಣಂಗಳ ಶ್ರೀಪಾದದಲ್ಲಿ ಉರಿ ಕರ್ಪುರ ಬೆರಸಿದಂತೆ ಬೆರಸಿದೆನಯ್ಯಾ, ಭಕ್ತಿಪ್ರಿಯ ಸತ್ಯಕರಂಡಮೂರ್ತಿ ಸದಾಶಿವಲಿಂಗವೆ.
--------------
ಸತ್ಯ ಕರಂಡಮೂರ್ತಿ ಸದಾಶಿವಲಿಂಗ
-->