ಅಥವಾ

ಒಟ್ಟು 7 ಕಡೆಗಳಲ್ಲಿ , 4 ವಚನಕಾರರು , 7 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬ್ರಹ್ಮಂಗೆ ಇಚ್ಫಾಶಕ್ತಿಯಾಗಿದ್ದಲ್ಲಿ, ವಿಷ್ಣುವಿಂಗೆ ಕ್ರಿಯಾಶಕ್ತಿಯಾಗಿದ್ದಲ್ಲಿ, ರುದ್ರಂಗೆ ಜ್ಞಾನಶಕ್ತಿಯಾಗಿದ್ದಲ್ಲಿ, ಇಂತಿವರು ದಂಪತಿ ಸಹಜವಾಗಿ ಯುಗಜುಗಂಗಳ ಜೋಗೈಸುತ್ತಿದ್ದರು. ಬ್ರಹ್ಮಂಗೆ ಸರಸ್ವತಿಯೆಂದಾರು ! ವಿಷ್ಣುವಿಗೆ ಲಕ್ಷ್ಮೀದೇವಿಯೆಂದಾರು ! ರುದ್ರಂಗೆ ಉಮಾದೇವಿಯೆಂದಾರು ! ಬ್ರಹ್ಮ ಅಂಗವಾಗಿ, ವಿಷ್ಣು ಪ್ರಾಣವಾಗಿ, ರುದ್ರ ಉಭಯಜ್ಞಾನವಾಗಿ, ಅಂದು ತಾಳಿದ ಸಾಕಾರದ ಗುಡಿಯ ಐಕ್ಯನಾದ ಕಾರಣ, ಗುಮ್ಮಟನೆಂಬ ನಾಮವ ತಾಳಿ, ಅಗಮ್ಯೇಶ್ವರಲಿಂಗ ಗುಹೇಶ್ವರನಾದ.
--------------
ಮನುಮುನಿ ಗುಮ್ಮಟದೇವ
ಅಂಗಭವಿ, ಭಕ್ತಂಗೆ ಮನಭವಿ ಮಹೇಶ್ವರಂಗೆ. ರುಚಿಭವಿ ಪ್ರಸಾದಿಗೆ, ಕುರುಹುಭವಿ ಪ್ರಾಣಲಿಂಗಿಗೆ. ತ್ರಿವಿಧನಾಮಭವಿ ಶರಣಂಗೆ, ಕೂಟಸ್ಥಭವಿ ಐಕ್ಕಂಗೆ. ಇಂತೀ ಸ್ಥಲಂಗಳಲ್ಲಿ, ಕುರುಹ ಕುರುಹಿನಲ್ಲಿ ಕಂಡು, ಅರಿವ ಅರಿವಿನಲ್ಲಿ ತಿಳಿದು, ಐಕ್ಯ ಐಕ್ಯನಾದ ಮತ್ತೆ, ಅದು ಕಲ್ಲಿನೊಳಗಣ ಬೆಳಗು, ಮುತ್ತಿನೊಳಗಣ ಅಪ್ಪು, ಕರ್ಪುರದೊಳಗಣ ಉರಿಯಂತೆ, ದೃಷ್ಟವಿದ್ದು ನಿಃಪತಿಯಾಗಬೇಕು, ನಿಃಕಳಂಕ ಮಲ್ಲಿಕಾರ್ಜುನಾ
--------------
ಮೋಳಿಗೆ ಮಾರಯ್ಯ
ಓಂ ನಮೋ ಶಿವಾಯವೆಂಬ ಮಂತ್ರವು ನೆನಹಿಂಗೆ ಬಾರದಂದು. ತಾನುತಾನೆಂಬುದು ಭಾವಕೆ ತೋರದಂದು. ಎಂತಿರ್ದ ಬ್ರಹ್ಮವು ತಾನೇ ನೋಡಾ ! ಆ ಬ್ರಹ್ಮದ ಚಿದ್ವಿಲಾಸದಿಂದ ಚಿದಾತ್ಮನಾದ. ಆ ಚಿದಾತ್ಮನ ಭಾವದಿಂದ ಜ್ಞಾನಾತ್ಮನಾದ. ಆ ಜ್ಞಾನಾತ್ಮನ ಭಾವದಿಂದ ಆಧ್ಯಾತ್ಮನಾದ. ಆ ಆಧ್ಯಾತ್ಮನ ಭಾವದಿಂದ ನಿರ್ಮಲಾತ್ಮನಾದ. ಆ ನಿರ್ಮಲಾತ್ಮನ ಭಾವದಿಂದ ಶುದ್ಧಾತ್ಮನಾದ. ಆ ಶುದ್ಧಾತ್ಮನ ಭಾವದಿಂದ ಬದ್ಧಾತ್ಮನಾದ. ಆ ಬದ್ಧಾತ್ಮನ ಭಾವಕೆ ಭಕ್ತನಾದ. ಆ ಶುದ್ಧಾತ್ಮನ ಭಾವಕೆ ಮಹೇಶ್ವರನಾದ. ಆ ನಿರ್ಮಲಾತ್ಮನ ಭಾವಕೆ ಪ್ರಸಾದಿಯಾದ ಆ ಆಧ್ಯಾತ್ಮನ ಭಾವಕೆ ಪ್ರಾಣಲಿಂಗಿಯಾದ. ಆ ಜ್ಞಾನಾತ್ಮನ ಭಾವಕೆ ಶರಣನಾದ. ಆ ಚಿದಾತ್ಮನ ಭಾವಕೆ ಐಕ್ಯನಾದ. ಆ ಐಕ್ಯನ ಕರಕಮಲಕೆ ಮಹಾಲಿಂಗನಾದ. ಆ ಶರಣನ ಕರಕಮಲಕೆ ಪ್ರಸಾದಲಿಂಗನಾದ. ಆ ಪ್ರಾಣಲಿಂಗಿಯ ಕರಕಮಲಕೆ ಜಂಗಮಲಿಂಗನಾದ. ಆ ಪ್ರಸಾದಿಯ ಕರಕಮಲಕೆ ಶಿವಲಿಂಗನಾದ. ಆ ಮಹೇಶ್ವರನ ಕರಕಮಲಕೆ ಗುರುಲಿಂಗನಾದ. ಆ ಭಕ್ತನ ಕರಕಮಲಕೆ ಆಚಾರಲಿಂಗನಾದ. ಆ ಆಚಾರಲಿಂಗಕೆ ಕ್ರಿಯಾಶಕ್ತಿ, ಆ ಗುರುಲಿಂಗಕೆ ಜ್ಞಾನಶಕ್ತಿ, ಆ ಶಿವಲಿಂಗಕೆ ಇಚ್ಫಾಶಕ್ತಿ, ಆ ಜಂಗಮಲಿಂಗಕೆ ಆದಿಶಕ್ತಿ, ಆ ಪ್ರಸಾದಲಿಂಗಕೆ ಪರಾಶಕ್ತಿ, ಆ ಮಹಾಲಿಂಗಕೆ ಚಿಚ್ಭಕ್ತಿ. ಆ ಚಿಚ್ಫಕ್ತಿಸಂಗದಿಂದ ಚಿದ್ಬ್ರಹ್ಮವ ಕೂಡಿ ಚಿದಾನಂದಸ್ವರೂಪವಾದನಯ್ಯ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಕಕ್ಷದಲ್ಲಿ ಅಂಗವ ಧರಿಸಿದ ಮತ್ತೆ ಕುಕ್ಷಿಯ ವರ್ತನೆ ಬಿಡಬೇಕು. ಕರಸ್ಥಲದಲ್ಲಿ ಲಿಂಗವ ಧರಿಸಿದ ಮತ್ತೆ ಪರದ್ರವ್ಯಕ್ಕೆ ಕೈಯಾನದಿರಬೇಕು. ಉತ್ತಮಾಂಗದಲ್ಲಿ ಲಿಂಗವ ಧರಿಸಿದ ಮತ್ತೆ ಮತ್ರ್ಯರುಗಳಿಗೆ ನೆಟ್ಟನೆ ಇರಬೇಕು. ಅಮಳೋಕ್ಯದಲ್ಲಿ ಲಿಂಗವ ಧರಿಸಿದ ಮತ್ತೆ ತುತ್ತಿನಿಚ್ಫೆಯ ಬಿಡಬೇಕು. ಉರಸೆಜ್ಜೆಯಲ್ಲಿ ಲಿಂಗವ ಧರಿಸಿದ ಮತ್ತೆ ಪರಸ್ತ್ರೀಯರ ಸಂಗವ ಬಿಡಬೇಕು, ಮುಖಸೆಜ್ಜೆಯಲ್ಲಿ ಲಿಂಗವ ಧರಿಸಿದ ಮತ್ತೆ ಸಕಲಗುಣವನರಿಯಬೇಕು. ಇಂತಿವನರಿಯದೆ ಸತ್ಕ್ರಿಯೆಯಲ್ಲಿ ನಡೆವ ನಡೆ ಎಂತುಟಯ್ಯಾ ? ಭಕ್ತನಾದ ಮತ್ತೆ ಮತ್ರ್ಯರ ಸಂಗ ಬಿಡಬೇಕು. ಮಾಹೇಶ್ವರನಾದ ಮತ್ತೆ ಮಹಾವಿಚಾರವ ತಿಳಿಯಬೇಕು. ಪ್ರಸಾದಿಯಾದ ಮತ್ತೆ ಪರದೂಷಣೆಯ ಕೇಳದಿರಬೇಕು. ಪ್ರಾಣಲಿಂಗಿಯಾದಮತ್ತೆಜಾಗ್ರ ಸ್ವಪ್ನಸುಷುಪ್ತಿಯಲ್ಲಿ ಮತ್ತತ್ವವಿಲ್ಲದಿರಬೇಕು. ಶರಣನಾದ ಮತ್ತೆ ಸರ್ವಾವಧಾನಿಯಾಗಿರಬೇಕು. ಐಕ್ಯನಾದ ಮತ್ತೆ ಸತ್ತುಚಿತ್ತಾನಂದವೆಂಬ ತ್ರಿವಿಧದ ಗೊತ್ತು ಮುಟ್ಟದಿರಬೇಕು. ಹೀಂಗಲ್ಲದೆ ಷಟ್‍ಸ್ಥಲಕ್ಕೆ ಸಲ್ಲ, ಪರಬ್ರಹ್ಮಕ್ಕೆ ನಿಲ್ಲ, ನಿಃಕಳಂಕ ಮಲ್ಲಿಕಾರ್ಜುನನಲ್ಲಿ ನಿರ್ಲೇಪವಾದ ಶರಣ.
--------------
ಮೋಳಿಗೆ ಮಾರಯ್ಯ
ಆಚಾರ ಪ್ರಾಣವಾದಡೆ ಅನ್ಯಕ್ಕೆರಗದಿರಬೇಕು. ಪ್ರಾಣಂಗ ಸಂಬಂಧಿಯಾದ ಬಳಿಕ ಕಾಯಕ್ಕಳಿವಿಲ್ಲರಬೇಕು. ಐಕ್ಯನಾದ ಬಳಿಕ ಸಕಲ ನಿಷ್ಕಲದ್ಲ ಪೂರ್ಣನಾಗಿರಬೇಕು. ಇನಿತು ಉಳ್ಳಡೆ ಅವನೈಕ್ಯ, ಅಲ್ಲದ್ದಡೆ ಆತನಭ್ಯಾಸಿ. ಕಪಿಲಸಿದ್ಧ ಮಲ್ಲಿಕಾರ್ಜುನಯ್ಯ ಇಂಥವರನೊಲಿವ ಅಂಥವರನೊಲ್ಲ.
--------------
ಸಿದ್ಧರಾಮೇಶ್ವರ
ಭಕ್ತಿವಿಡಿದು ಭಕ್ತನಾದ ಪ್ರಸಾದಿ. ಮೋಕ್ಷವಿಡಿದು, ಧೈರ್ಯವಿಡಿದು ಆ ಭಕ್ತಂಗೆ ಮಾಹೇಶ್ವರನಾದ ಪ್ರಸಾದಿ; ಕಾರಣವಿಡಿದು ಅವಧಾನ ತಪ್ಪದ ಆ ಭಕ್ತಂಗೆ ಪ್ರಸಾದಿಯಾದ ಪ್ರಸಾದಿ; ಕರ್ಮರಹಿತನಾಗಿ ಕಾಲಕಲ್ಪಿತವಿಲ್ಲದ ಆ ಭಕ್ತಂಗೆ ಪ್ರಾಣಲಿಂಗಿಯಾದ ಪ್ರಸಾದಿ. ಪತಿಭಕತ್ತಿವಿಡಿದು ಧರ್ಮಾರ್ಥಕಾಮಮೋಕ್ಷಂಗಳಾಸೆಯ ನಿವೃತ್ತಿಯಂ ಮಾಡಿದ ಆ ಭಕ್ತಂಗೆ ಶರಣನಾದ ಪ್ರಸಾದಿ. ಈ ಉಭಯ ಸಮರಸವೇಕವೆಂದು ತಿಳಿದು, ಉಭಯಭಾವ ಉರಿಕರ್ಪೂರ ಸಂಯೋಗವಾದ ಆ ಭಕ್ತಂಗೆ ಐಕ್ಯನಾದ ಪ್ರಸಾದಿ. ನಮ್ಮ ಕಪಿಲಸಿದ್ದ ಮಲ್ಲಿನಾಥನಲ್ಲಿ, ಸರ್ವಕ್ಕೆ ಚೈತನ್ಯವಾದ ನಮ್ಮ ಚೆನ್ನಬಸವಣ್ಣನೆಂಬ ಅಚ್ಚಪ್ರಸಾದಿ.
--------------
ಸಿದ್ಧರಾಮೇಶ್ವರ
ಭಕ್ತನಾದ ಬಳಿಕ ಜಂಗಮದ ಗುಣವನರಸಲೇಕೊ? ಮಹೇಶನಾದ ಬಳಿಕ ವಿಷಯಕ್ಕೆಳಸುವುದದೇಕೊ? ಪ್ರಸಾದಿಯಾದ ಬಳಿಕ ಕಂಡುದಕ್ಕೆ ಕೈದುಡುಕುವುದೇಕೋ? ಪ್ರಾಣಲಿಂಗಿಯಾದ ಬಳಿಕ ಪ್ರಪಂಚದ ಹಂಗದೇಕೊ? ಶರಣನಾದ ಬಳಿಕ ಮೋಕ್ಷದ ಹಂಗೇಕೊ? ಐಕ್ಯನಾದ ಬಳಿಕ ಕಪಿಲಸಿದ್ಧಮಲ್ಲಯ್ಯನ ನಾಮಸ್ಮರಣೆಯದೇಕೊ?
--------------
ಸಿದ್ಧರಾಮೇಶ್ವರ
-->