ಅಥವಾ

ಒಟ್ಟು 5 ಕಡೆಗಳಲ್ಲಿ , 2 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವ್ಯಸನವುಳ್ಳನ್ನಕ್ಕ ಪ್ರಸಾದಿಯಲ್ಲ . ವಿಷಯವುಳ್ಳನ್ನಕ್ಕ ಪಾದೋದಕಸಂಬಂಧಿಯಲ್ಲ . ಭಾವವುಳ್ಳನ್ನಕ್ಕ ಭವವಿರಹಿತನಲ್ಲ , ಬಯಕೆಯುಳ್ಳನ್ನಕ್ಕ ಐಕ್ಯನಲ್ಲ . ಇಂತೀ ಐಕ್ಯಸ್ಥಲವೆಲ್ಲರಿಗೆಲ್ಲಿಯದೊ ? ಐಕ್ಯನಾದರೆ ಅನ್ನಪಾನಾದಿಗಳ ಇಚ್ಛೆ ನಿಂದು, ಅನಲ, ಪವನನ ಗುಣ ಕೆಟ್ಟು, ಆಕಾಶದ ಗುಣವರತು, ಆತ್ಮನೊಳು ಬೆರೆದವರ ಐಕ್ಯರೆಂಬೆ. ಆತ್ಮ ಅನಾತ್ಮನೊಳು ಅಡಗಿದರೆ ನಿರವಯಲನೆಂಬೆ. ಇಂತಪ್ಪ ಶರಣ ಬಯಲು ಬಯಲಾಗಿಪ್ಪನಲ್ಲದೆ, ವಿವರಿಸಿ ನೋಡಿದರೆ ಏನೆಂದರಿಯಬಾರದು, ಬಸವಪ್ರಿಯ ಕೂಡಲಚೆನ್ನಬಸವಣ್ಣಾ .
--------------
ಹಡಪದ ಅಪ್ಪಣ್ಣ
ಭಕ್ತನಾದರೆ ಭಕ್ತಿಸ್ಥಲವನರಿದು ಅರಿಯದಂತಿರಬೇಕು, ಮಹಾಹೇಶ್ವರನಾದರೆ ನಿಷೆ*ಯ ಕುಳವನರಿದು ಅರಿಯದಂತಿರಬೇಕು, ಪ್ರಸಾದಿಯಾದರೆ ಪ್ರಸಾದಿಸ್ಥಲವನರಿದು ಅರಿಯದಂತಿರಬೇಕು, ಪ್ರಾಣಲಿಂಗಿಯಾದರೆ ಸ್ಥಿತಿ-ಗತಿಯನರಿದು ಅರಿಯದಂತಿರಬೇಕು, ಶರಣನಾದರೆ ಸತಿಪತಿಯೆಂದರಿದು ಅರಿಯದಂತಿರಬೇಕು, ಐಕ್ಯನಾದರೆ ತಾನು ತಾನಾಗಿ ಆಗದಂತಿರಬೇಕು,_ ಇಂತೀ ಷಡುಸ್ಥಲವನರಿಯದೆ ಮಾಡಿದೆನೆಂಬ ಲಜ್ಜೆಗೆಟ್ಟ ಲಾಂಛನಧಾರಿಯನೇನೆಂಬೆ, ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಭಕ್ತನಾದರೆ ಮುಕ್ತಿಪಥಗತಿಗೆ ನಿಲುಕದಂತಿರಬೇಕು. ಮಹೇಶ್ವರನಾದರೆ ಮನದಲ್ಲಿ ಮನ್ಮಥ ಹೊಗದಂತಿರಬೇಕು. ಪ್ರಸಾದಿಯಾದರೆ ತನ್ನ ಪ್ರಾಣವೇ ಅಗ್ನಿಸ್ವರೂಪವೆಯಾಗಿರಬೇಕು. ಪ್ರಾಣಲಿಂಗಿಯಾದರೆ ಪ್ರಾಣವ ನಿಲ್ಲಿಸಿ ಲಿಂಗಪ್ರಾಣಿಯಾಗಿರಬೇಕು. ಶರಣನಾದರೆ ತನ್ನ ಮರಣಬಾಧೆಯ ಗೆಲಿದಿರಬೇಕು. ಐಕ್ಯನಾದರೆ ಅನ್ನ ಪಾನಾದಿಗೆ ಇಚ್ಛೆ ಇಲ್ಲದಿರಬೇಕು. ನಿರ್ವಯಲಾದರೆ ಸರ್ವರ ಕಣ್ಣಿಗೆ ಬಯಲು ಬಯಲಾಗಿರಬೇಕು. ಈ ಷಟ್‍ಸ್ಥಲಸಂಪನ್ನತೆಯಲ್ಲಿ ಇರಬಲ್ಲಡೆ, ಎಮ್ಮ ಬಸವಪ್ರಿಯ ಕೂಡಲಚೆನ್ನಬಸವಣ್ಣ.
--------------
ಹಡಪದ ಅಪ್ಪಣ್ಣ
ಭಕ್ತನಾದರೆ ಪೃಥ್ವಿಸಾರದಲಾದ ಪದಾರ್ಥವ ಲಿಂಗಕ್ಕೆ ಕೊಡದ ಭಾಷೆ. ಮಹೇಶ್ವರನಾದರೆ ಅಪ್ಪುವಿನ ಸಾರದಿಂದ ಉದಕವ ಲಿಂಗಕ್ಕೆ ಮಜ್ಜನಕ್ಕೆರೆಯದ ಭಾಷೆ. ಪ್ರಸಾದಿಯಾದರೆ ಅಗ್ನಿಯಿಂದಾದ ಕಳೆಯ ಲಿಂಗಕ್ಕೆ ವೇದಿಸದ ಭಾಷೆ. ಪ್ರಾಣಲಿಂಗಿಯಾದರೆ ವಾಯುವಿನಿಂದಾದ ಧ್ಯಾನವ ಲಿಂಗದಲ್ಲಿ ನೋಡದ ಭಾಷೆ. ಐಕ್ಯನಾದರೆ ಆತ್ಮದಿಂದಾದ ಅಹಂ ಮಮತೆಯಲಿ ಲಿಂಗವ ಭಾವಿಸದ ಭಾಷೆ. ಇಂತೀ ಆರರಿಂದ ವಿೂರಿ ತೋರುವ ಘನವು, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಭಕ್ತನಾದರೆ ಕಿಂಕಿಲನಾಗಿರಬೇಕು. ಮಾಹೇಶ್ವರನಾದರೆ ಆದಿ ಅನಾದಿಯನರಿಯದಿರಬೇಕು. ಪ್ರಸಾದಿಯಾದರೆ ಒಡಲಗುಣವಿರಹಿತನಾಗಿರಬೇಕು. ಪ್ರಾಣಲಿಂಗಿಯಾದರೆ ಪ್ರಸಾದ(ಬಾಹ್ಯವಿಚಾರ?)ವಿಲ್ಲದಿರಬೇಕು. ಶರಣನಾದರೆ ನಿಸ್ಸಂಗಿಯಾಗಿರಬೇಕು. ಐಕ್ಯನಾದರೆ ಬಯಲು ಬಯಲಾಗಿರಬೇಕು. ಇಂತೀ ಸ್ಥಲವನರಿದಲ್ಲದೆ, ಕೂಡಲಚೆನ್ನಸಂಗನಲ್ಲಿ ಸುಸಂವೇದ್ಯನೆಂದೆನಿಸಬಾರದು.
--------------
ಚನ್ನಬಸವಣ್ಣ
-->