ಅಥವಾ

ಒಟ್ಟು 13 ಕಡೆಗಳಲ್ಲಿ , 11 ವಚನಕಾರರು , 13 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪೂರ್ವದಿಂದ ಉತ್ತರಕ್ಕೆ ಬಂದ ಸೂರ್ಯನು ಅಸ್ತಮಯವಾಯಿತ್ತೆಂದು ಜಾಹ್ಯಗೆ ಒಡಲಾಗಿ, ಮತ್ತಾ ವರುಣಪ್ರದಕ್ಷಿಣದಿಂದ ಬಂದು ಪೂರ್ವದಲ್ಲಿ ಹುಟ್ಟಲಿಕ್ಕೆ ನಿನ್ನಿಂಗೆ ಇಂದಿಂಗೆಯೆಂಬುದು ಒಂದೊ ಎರಡೊ ? ಅಂದಿಗೆ ಜಾÕನ, ಇಂದಿಗೆ ಮರವೆ, ಎಂಬುದು ಒಂದೊ ಎರಡೊ ? ಅದು ಘಟದ ಪ್ರವೇಶದಿಂದ. ಪೂರ್ವ ಉತ್ತರಕ್ಕೆ ಬಂದಾತ್ಮನನರಿದು ಉಭಯವ ತಿಳಿದು ಸಂದು ನಾಶನವಾದಲ್ಲಿ ಸದ್ಯೋಜಾತಲಿಂಗವು ವಿನಾಶವಾದ.
--------------
ಅವಸರದ ರೇಕಣ್ಣ
ಬೇಡಿ ಮಾಡುವ ಭಕ್ತನ ಇರವೆಂತೆಂದಡೆ: ಆ ಗಳಿಗೆಯಲ್ಲಿ ಆ ದ್ರವ್ಯ ಸಂದು ಈಗ-ಆಗವೆಂಬ ಬೈಕೆಯ ಮರೆದು, ಸತಿಸುತರಿಗೆಂದೆನ್ನದೆ, ಇಂತೀ ಭಕ್ತಿಯೆ ಗತಿಯಾಗಿ, ಸತ್ಯವೆ ಒಡಲಾಗಿ, ಇಂತೀ ಗುಣದಲ್ಲಿ ನಿತ್ಯ-ಅನಿತ್ಯವ ಅಳಿದು ಮಾಡುವ ಸದ್ಭಕ್ತ ಬೇಡಿ[ದ]ನೆಂಬ ಭಾವವಿಲ್ಲ. ಆ ದ್ರವ್ಯ ಏಲೇಶ್ವರಲಿಂಗದ ಬೈಚಿಟ್ಟ ಬಯಕೆ.
--------------
ಏಲೇಶ್ವರ ಕೇತಯ್ಯ
ಸುಖ ದುಃಖ ಭೋಗಾದಿ ಭೋಗಂಗಳೆಲ್ಲವೂ ಗುರು ಲಿಂಗ ಜಂಗಮದ ಒಡಲಾಗಿ ಬೆಳೆವುತ್ತಿಹವು. ತಾನವ ಒಡಲುಗೊಂಡು ಮಾಡುವ ಕಾರಣ ತನ್ನ ಬೆಂಬಳಿಯ ಮಾಯೆ. ಅವ ಹಿಂಗಿ ತನ್ನ ತಾನರಿತಲ್ಲಿ ಚನ್ನಬಸವಣ್ಣಪ್ರಿಯ ಚಂದೇಶ್ವರಲಿಂಗವ ಕಾಣಬಂದಿತ್ತು.
--------------
ನುಲಿಯ ಚಂದಯ್ಯ
ಒಂದಂಗಕ್ಕೆ ಮೂರು ಯುಕ್ತಿ ಬ್ಥಿನ್ನವಾದಂತೆ, ಬ್ಥಿನ್ನವೊಂದಂಗದಲ್ಲಿ ಕೂಡಿ ಚಕ್ಷುವಿನಲ್ಲಿ ಕಂಡು ನಡೆವಂತೆ, ಅದೆಂತೆಂದಡೆ: ನಡೆವ ಚರಣ ಗುರುಮಾರ್ಗವಾಗಿ, ಕೊಡುವ ಕರ ಚರಮಾರ್ಗವಾಗಿ, ಕೊಂಬ ಜಿಹ್ವೆ ಲಿಂಗದ ಒಡಲಾಗಿ, ನೋಡುವ ಚಕ್ಷು ತ್ರಿವಿಧವ ಕೂಡಿದ ಪರಮಪ್ರಕಾಶವಾಗಿ, ಇಂತಿವನೊಡಗೂಡಿ ಕಾಬ ಸದ್ಭಕ್ತನಂಗ ಸದಾಶಿವಮೂರ್ತಿಲಿಂಗವು ತಾನೆ.
--------------
ಅರಿವಿನ ಮಾರಿತಂದೆ
ಕಡದ ಕಂಬದ ನಡುವೆ ಮೃಡ ನಿನ್ನ ಒಡಲಾಗಿ ಕಂಬ ನೀರಾಯಿತಯ್ಯಾ. ಅಯ್ಯಾ, ಸಾಕಲ್ಯವ ನಿಃಕರಿಸಿ ಅನೇಕ ನಿರವಯವನೆಯ್ದಿ, ಆಕಾರಕ ಸಿದ್ಧ ದೇವರ ದೇವನೆ ಕೇಳು ಕಪಿಲಸಿದ್ಧಮಲ್ಲಿನಾಥಯ್ಯಾ.
--------------
ಸಿದ್ಧರಾಮೇಶ್ವರ
ಜ್ಞಾನಾದ್ವೈತದ ಹೆಚ್ಚುಗೆ, ಭಾವಾದ್ವೈತಕ್ಕೆ ಸಂಬಂಧವಾಗಿಹುದು. ಭಾವಾದ್ವೆ ೈತದ ಹೆಚ್ಚುಗೆ, ಕ್ರಿಯಾದ್ವೈತವ ಸಂಬಂದ್ಥಿಸಿಕೊಂಡಿಹುದು. ಕ್ರಿಯಾದ್ವೈತದ ಹೆಚ್ಚುಗೆ, ಸರ್ವಮಯವಾಗಿ ಘನಲಿಂಗವ ಗಬ್ರ್ಥೀಕರಿಸಿಕೊಂಡಿಪ್ಪುದು. ಇಂತೀ ಭೇದ. ಕ್ರೀ ಜ್ಞಾನಕ್ಕೆ ಒಡಲಾಗಿ, ಮಥನದಿಂದ ವಹ್ನಿ ಕುರುಹಿಗೆ ಬಂದಂತೆ, ಕ್ರೀಯಿಂದ ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವು, ಸ್ವಯಂಭುವಾಯಿತ್ತು.
--------------
ಶಿವಲೆಂಕ ಮಂಚಣ್ಣ
ದೀಕ್ಷಾಮೂರ್ತಿರ್ಗುರುರ್ಲಿಂಗಂ ಪೂಜಾಮೂರ್ತಿಃ ಪರಶ್ಶಿವಃ | ದೀಕ್ಷಾಂ ಪೂಜಾಂ ಚ ಶಿಕ್ಷಾಂ ಚ ಸರ್ವಕರ್ತಾ ಚ ಜಂಗಮಃ || ಎಂದುದಾಗಿ, ಪಂಚಭೂತ ಅರಿಷಡ್ವರ್ಗದುರವಣೆಯ ನಿಲಿಸಿ, ಭೀತಿ ಪ್ರೀತಿ ಪ್ರೇಮ ಕಾಲೋಚಿತವನರಿದು, ಕಿಂಕಿಲನಾಗಿ, ನಿರುಪಾಧಿಕನಾಗಿ ದಾಸೋಹ ಮಾಡುವಲ್ಲಿ ಭಕ್ತನು. ಅನ್ಯದೈವ ಪರವಧು ಪರಧನವಂ ಬಿಟ್ಟು, ಇಹಪರದಲ್ಲಿಯ ಭೂಕ್ತಿ ಮುಕ್ತಿಗಳಾಶೆಇಲ್ಲದೆ, ಏಕೋನಿಷೆ* ಗಟ್ಟಿಗೊಂಡು ಮಾಹೇಶ್ವರನಾಗಿರಬೇಕು. ಕಾಯದ ಮರದಲ್ಲಿ ಇಷ್ಟಲಿಂಗಾರ್ಪಿತ. ಮನ ಮೊದಲಾದ ಕರಣಂಗಳನು ಒಂದೆ ಮುಖದಲ್ಲಿ ನಿಲಿಸಿ, ಅವಧಾನವಳವಟ್ಟ ರುಚಿಯನು ಜಿಹ್ವೆಯ ಕರದಿಂದಲರ್ಪಿಸುವಲ್ಲಿ ಪ್ರಾಣಲಿಂಗಾರ್ಪಿತ. ತಟ್ಟುವ ಮುಟ್ಟುವ ನಿರೂಪವಹ ಸರ್ವವನು ಜಾನುಮುಖದಲ್ಲಿ ಭಾವದ ಕರದಿಂದ ಲಿಂಗ ಮುಂದು ಭಾವ ಹಿಂದಾಗಿ, ತೃಪ್ತಿಲಿಂಗಕ್ಕರ್ಪಿಸುವಲ್ಲಿ ಭಾವಲಿಂಗಾರ್ಪಿತ. ಇಂತೀ ಅರ್ಪಿತತ್ರಯದ ಅನುಭಾವ ವತ್ಸಲನಾಗಿ, ಅರ್ಪಿತವನರಿತು ಅನರ್ಪಿತ ನಷ್ಟವಾದಲ್ಲಿ ಪ್ರಸಾದಿ. ಮನ ಬದ್ಧಿ ಚಿತ್ತ ಅಹಂಕಾರದ ಗುಣವಳಿದು, ಪ್ರಾಣಚೈತನ್ಯದೊಳು ವಾಯುವಿನೊಳಡಗಿದ ಪರಿಮಳದಂತೆ, ಲಿಂಗಚೈತನ್ಯ ನೆಲೆಗೊಂಡಿಪ್ಪಲ್ಲಿ ಪ್ರಾಣಲಿಂಗಿ. ಪಂಚೇಂದ್ರಿಯಂಗಳ ಸಂಚವ ನಿಲಿಸಿ, ಲಿಂಗೇಂದ್ರಿಯವೆನಿಸಿತ್ತು. ಸಪ್ತಧಾತುವಿನ ಉರವಣೆಯಂ ಮೆಟ್ಟಿ, ಪ್ರಸನ್ನ ಲಿಂಗದ ಪರಮಸುಖಕ್ಕೆ ರತಿಭೋಗದಲ್ಲಿ ಸತಿಯಾಗಿರಲು ಶರಣ. ಕಾಯಜೀವ, ಪುಣ್ಯಪಾಪ, ಇಹಪರವೆಂಬ ಭ್ರಮೆಯಳಿದು, ಮಹಾಲಿಂಗದಲ್ಲಿ ಅವಿರಳಸಂಬಂಧವಾದಲ್ಲಿ ಲಿಂಗೈಕ್ಯನು. ಈ ಷಡುಸ್ಥಲದ ಆದಿಕುಳವು ಆರಿಗೆಯೂ ಅಳವಡದು. ಘನಕ್ಕೆ ಘನವು, ಲೋಕ ಲೌಕಿಕರಿಗಸಾಧ್ಯ. ನಿಮ್ಮ ಶರಣರಿಗೆ ಸುಲಭ ಕಾಣಾ, ಮಹಾಲಿಂಗ ಕಲ್ಲೇಶ್ವರಾ. ಈ ಷಡುಸ್ಥಲಕ್ಕೆ ಒಡಲಾಗಿ, ಭಕ್ತಿಭಂಡಾರಿ ಬಸವಣ್ಣಂಗೆ ಅಳವಡಿಸಿ ಮರೆದಿರಿ.
--------------
ಹಾವಿನಹಾಳ ಕಲ್ಲಯ್ಯ
ಆದಿ ಅನಾದಿಯೆಂಬವು ನಾದಕ್ಕೆ ಬಾರದ ಮುನ್ನ, ಶೂನ್ಯ ನಿಃಶ್ಶೂನ್ಯ ಸುರಾಳವೆಂಬವು ಸುಳುಹುದೋರದ ಮುನ್ನ, ಬೆಳಗು ಕತ್ತಲೆಯಿಲ್ಲದ ಮುನ್ನ, ಅಳಿವು ಉಳಿವು ಸುಳುವು ಸೂತ್ರ ಜಂತ್ರ ಜಡ ಅಜಡವಿಲ್ಲದ ಮುನ್ನ, ಕಡೆ ನಡು ಮೊದಲಿಲ್ಲದ ಅಡಿಯಲಾಧಾರ ಹಿಡಿವರೆ ರೂಹಿಲ್ಲದ ಮುನ್ನ, ಒಡೆಯನಿಲ್ಲ ಬಂಟನಿಲ್ಲ ನಡೆಯಿಲ್ಲ ನುಡಿಯಿಲ್ಲ ಬೆಡಗಿಲ್ಲ ಒಡಲಿಲ್ಲದ ಮುನ್ನ, ಪೃಥ್ವಿ, ಅಪ್ಪು, ತೇಜ, ವಾಯು, ಆಕಾಶ, ಚಂದ್ರ, ಸೂರ್ಯರು ತಲೆದೋರದ ಮುನ್ನ, ದೇವನಿಲ್ಲ ಭಕ್ತನಿಲ್ಲದ ಮುನ್ನ, ನೀನು ನಾನುಯಿಲ್ಲದ ಮುನ್ನ, ಆಕಾರ ನಿರಾಕಾರವೇನೂಯಿಲ್ಲದ ಮುನ್ನ, ತಾನು ತಾನೆಂಬ ತಲ್ಲಣವಿಲ್ಲದಂದು, ಆ ಬಟ್ಟಬಯಲ ಬ್ರಹ್ಮವೆ ಘಟ್ಟಿಯಾದ ಘನವೆಂತೆಂದಡೆ: ನಿಮ್ಮನುವ ನೀವರಿದ ಘನಮಹಿಮರು ತಿಳಿದು ನೋಡಿರಣ್ಣ. ಆ ಬಟ್ಟಬಯಲೆಂದಡಾರು ಬಸವ, ಆ ಬಸವನೆಂದಡಾರು ಬಟ್ಟಬಯಲು. ಆ ಬ್ರಹ್ಮನೆಂದಡಾರು ಬಸವ, ಬಸವನೆಂದಡಾರು ಬ್ರಹ್ಮ. ಅಂತಪ್ಪ ಬಸವನ ಆ ಮೂಲವ ಬಲ್ಲವರು ನೀವು ಕೇಳಿರಣ್ಣ. ಬಸವ ಎಂಬ ಮೂರಕ್ಷರವೆ ಮೂಲಪ್ರಣವ. ಅದೆಂತೆಂದಡೆ:ಬಯೆಂಬುದೆ ಚಿನ್ನಾದ ಆಕಾರವಾಯಿತ್ತು, ಸಯೆಂಬುದೆ ಚಿದ್ಬಿಂದುವಾಯಿತ್ತು, ಮತ್ತಂ ಬಯೆಂಬುದೆ ಅಕಾರವಾಯಿತ್ತು, ಸ ಎಂಬುದೆ ಉಕಾರವಾಯಿತ್ತು. ವಾ ಯೆಂಬುದೆ ಚಿತ್ಕಳೆಯಾಯಿತ್ತು. ಮತ್ತಂ ಬಯೆಂಬುದೆ ಆಕಾರವಾಯಿತ್ತು, ಸ ಎಂಬುದೆ ಉಕಾರವಾಯಿತ್ತು. ವಾಯೆಂಬುದೆ ಮಕರವಾಯಿತ್ತು. ಮತ್ತೆ ಬಯೆಂಬುದೆ ನಾದವಾಯಿತ್ತು, ಸಯೆಂಬುದೆ ಬಿಂದುವಾಯಿತ್ತು, ವಾಯೆಂಬುದೆ ಕಳೆಯಾಯಿತ್ತು. ಮತ್ತೆ ಬ ಎಂಬುದೆ ಗುರುವಾಯಿತ್ತು, ಸಯೆಂಬುದೆ ಅಂಗವಾಯಿತ್ತು, ವಾ ಎಂಬುದೆ ಜಂಗಮವಾಯಿತ್ತು. ಬ ಎಂಬ ನಾದವೆತ್ತಲು, ಸ ಎಂಬ ಬಿಂದು ಕೂಡಲು, ವಾಯೆಂಬ ಕಳೆ ಬೆರೆಯಲು, ಗೋಳಕಾಕಾರವಾಗಿ ಆದಿಪ್ರಣಮವೆನಿಸಿತ್ತು. ಆದಿಪ್ರಣಮ, ಅನಾದಿಪ್ರಣಮ, ಅಂತ್ಯಪ್ರಣಮವೆಂಬವು ನಮ್ಮ ಬಸವಣ್ಣನ ಸ್ಥೂಲ ಸೂಕ್ಷ್ಮ ಕಾರಣ ಕಾಣಿರೆ. ಇಂತಪ್ಪ ಬಸವಣ್ಣ ಬಯಲಬ್ರಹ್ಮವನೆ ಮೆಯಿದು, ಮೆಲುಕಿರಿದು ಗೋಮಯವಿಕ್ಕಲು ಪೃಥ್ವಿಯಾಯಿತ್ತು. ಇಂತಪ್ಪ ಬಸವಣ್ಣ ಜಲವ ಬಿಡಲು ಅಪ್ಪುಮಯವಾಯಿತ್ತು. ಇಂತಪ್ಪ ಬಸವಣ್ಣನ ತೇಜವೆ ಅಗ್ನಿಯಾಯಿತ್ತು. ಇಂತಪ್ಪ ಬಸವಣ್ಣನ ಉಚ್ಛ್ವಾಸ ನಿಶ್ವಾಸವೆ ವಾಯುವಾಯಿತ್ತು. ಇಂತಪ್ಪ ಬಸವಣ್ಣನ ಶಬ್ದವೆ ಆಕಾಶವಾಯಿತ್ತು. ಇಂತಪ್ಪ ಬಸವಣ್ಣನ ಕಂಗಳ ಬೆಳಗೆ ಚಂದ್ರ ಸೂರ್ಯರಾದರು. ಇಂತಪ್ಪ ಬಸವಣ್ಣನ ಬುದ್ಧಿಯೆ ಆತ್ಮವೆನಿಸಿ, ಅಷ್ಟತನುಮೂರ್ತಿಯೆ ತನುವೆನಿಸಿ, ಪಿಂಡ ಬ್ರಹ್ಮಾಂಡ ಕೋಟ್ಯಾನುಕೋಟಿ ಅಂಡಪಿಂಡಾಂಡಂಗಳಿಗೆ ಒಡಲಾಗಿ, ಅಡಿಮುಡಿಗೆ ತಾನೆ ಆದಿಯಾಗಿ, ಸರ್ವವೂ ನಮ್ಮ ಬಸವಣ್ಣನ ಒಡಲಲ್ಲಿ ಹುಟ್ಟುತ್ತ ಬೆಳೆಯುತ್ತ ಅಳಿವುತಿಪ್ಪವು ಕಾಣಿರೆ. ಇಂತಪ್ಪ ಸಕಲಪ್ರಾಣಿಗಳಿಗೆ ನಮ್ಮ ಬಸವಣ್ಣನ ಗೋಮಯದಲ್ಲಿ ಹುಟ್ಟಿದ ಪೃಥ್ವಿಯೆ ಪದಾರ್ಥವೆ ಆದಿಜಲದಿಂದ ಹುಟ್ಟಿದ ಉದಕವೆ ಸಾರ. ತೇಜದಿಂದ ಹುಟ್ಟಿದ ಅಗ್ನಿಯೆ ಕಳೆ. ಉಚ್ಛ್ವಾಸ ನಿಶ್ವಾಸದಿಂದ ಹುಟ್ಟಿದ ಚಂದ್ರಸೂರ್ಯರೇ ಅರಿವು ಮರವೆ. ಬುದ್ಧಿಯಿಂದ ಹುಟ್ಟಿದ ಆತ್ಮನೆ ಚೈತನ್ಯಾತ್ಮ. ಇಂತೀ ಸರ್ವಪ್ರಾಣಿಗಳಿಗೆ ನಮ್ಮ ಬಸವಣ್ಣನೆ ಆದಿ ಕಾಣಿರೇ. ಆದಿಯಲ್ಲಿ ಹುಟ್ಟಿ, ಮಧ್ಯದಲ್ಲಿ ಬೆಳೆದು, ಅಂತ್ಯದಲ್ಲಿ ಲಯವನೆಯ್ದಿದರೆ, ಮತ್ತೆ ನಿಲ್ಲುವದಕ್ಕೆ ನಮ್ಮ ಬಸವಣ್ಣನೆ ಆದಿ ಕಾಣಿರೆ. ಇಂತೀ ಒಳ ಹೊರಗೆ ಕೈಕೊಂಬರೆ, ದೇವರು ಬೇರೊಬ್ಬರುಂಟಾದರೆ ಬಲ್ಲರೆ ನೀವು ಹೇಳಿ ತೋರಿರೆ. ಅಲ್ಲದಿರ್ದರೆ ನಿಮ್ಮ ವೇದಾಗಮಶಾಸ್ತ್ರಪುರಾಣಗಳ ಕೈಯಲ್ಲಿ ಹೇಳಿಸಿರೆ. ಇಂತೀ ಅನಾದಿಸಂಸಿದ್ಧ ಬಟ್ಟಬಯಲಬ್ರಹ್ಮವೆ ಬಸವನೆಂಬುದಂ ಕಾಣುತಿರ್ದು ಕೇಳುತಿರ್ದು ಹೇಳುತಿರ್ದು ಅರಿದಿರ್ದು, ಮತ್ತೆ ಕೀಳುದೈವಂಗಳನಾರಾಧಿಸಿ ಅರ್ಚನೆ ಪೂಜೆಯ ಹಲವು ಚಂದದಲ್ಲಿ ಮಾಡಿ, ಹಲವು ಜಾತಿ ಹಲವುದರುಶನವೆನಿಸಿಕೊಂಡುಸ ಹೊಲಬುದಪ್ಪಿದಿರಿ, ಹುಲುಮನುಜರಿರಾ. ಇನ್ನಾದರೂ ಅರಿದು ನೆನದು ಬದುಕಿ, ನಮ್ಮ ಬಸವಪ್ರಿಯ ಕೂಡಲ[ಚೆನ್ನ]ಸಂಗಮದೇವನ ಶ್ರೀಪಾದಪದ್ಮವ.
--------------
ಸಂಗಮೇಶ್ವರದ ಅಪ್ಪಣ್ಣ
ಆದಿಯಲ್ಲಿ ಪ್ರಸಾದ, ಏಕಮುಖ ಸಾಧಕರ ಮುಖದಿಂದ ಅನಂತಮುಖವಾದುದು. ಎಯ್ದಿ ನಿಂದಲ್ಲಿ ಮತ್ತೆ ಏಕಮುಖವಾದುದು. ಇದರ ಭೇದವ ಬಸವಣ್ಣ ಚೆನ್ನ ಬಸವಣ್ಣನ ಸಂಪಾದನೆಯಿಂದಲಾನರಿದೆನು. ಅರಿದಡೇನು ಎನಗಾಯತವಾಗದು. ಆಯತವಾದಡೇನು ಸನ್ನಹಿತವಾಗದು. ಗುರುಲಿಂಗ ಜಂಗಮದನುವನರಿರದ ವಿಶ್ವಾಸ, ಜಾನಿಗಲ್ಲದೆ ಅಳವಡದು. ಆ ಪರಮ ವಿಶ್ವಾಸ ಸತ್ಸದಯದಿಂದಲ್ಲದೆ ಸಮನಿಸದು. ಇದು ಕಾರಣ, ಪ್ರಸಾದದಾದಿಕುಳವ ನಾನೆತ್ತ ಬಲ್ಲೆನಯ್ಯಾ? ಪ್ರಸಾದವೆಂಬುದು ಅನಿಂದ್ಯ, ಅಮಲ ಅಗೋಚರ, ನಿರಂಜನ, ನಿತ್ಯಸತ್ಯ, ಜ್ಞಾನಾನಂದ, ಪರಬ್ರಹ್ಮ, ನಿಶ್ಚಯ. ಅದು ತನ್ನ ತಾನೆ ನುಡಿವುತ್ತಿಹುದು. ಆ ನುಡಿಯೆ ಸುನಾದ, ಆ ಸುನಾದವೆ ಓಂಕಾರ. ಆ ಓಂಕಾರ ತಾನೆ ಮಹಾಜ್ಞಾನ, ಪರಮಚೈತನ್ಯ, ಪ್ರಸಿದ್ಧ ಪಂಚಾಕ್ಷರ. ಅದೆಂತೆಂದಡೆ : `ಪ್ರಣವೋ ಹಿ ಪರಬ್ರಹ್ಮ ಪ್ರಣವೋ ಹಿ ಪರಂ ಪರದಂ' ಎಂದುದಾಗಿ, ಆ ಪ್ರಸಿದ್ಧ ಪಂಚಾಕ್ಷರವು ತನ್ನಿಂದ ತಾನೆ ಸಕಲ ನಿಷ್ಕಲವಾಯಿತ್ತು. ಆ ಪರಮನಿಷ್ಕಲವೇ ಶ್ರೀಗುರು, ಸಕಲವೇ ಲಿಂಗ, ಸಕಲನಿಷ್ಕಲವೇ ಜಂಗಮ. ಅದೆಂತೆಂದಡೆ : `ಏಕಮೂರ್ತಿಸ್ತ್ರೀಧಾ ಭೇದಾ ಗುರುರ್ಲಿಂಗಂತು ಜಂಗಮ' ಎಂದುದಾಗಿ, ಆ ಜಂಗಮಪ್ರಸಾದÀÀವೆ ಮೂಲವಾದ ಕಾರಣ, ಆ ಜಂಗಮವನಾರಾಧಿಸಿ, ಅನಂತ ಪ್ರಮಥಗಣಂಗಳು ಪ್ರಸಾದವ ಪಡೆದು, ತಮ್ಮ ಸದ್ಭಾವವೆಂತಂತೆ ಸ್ವೀಕರಿಸಿದ ಕಾರಣ, ಅನಂತಮುಖವಾಯಿತ್ತು. ಅವೆಲ್ಲವನೊಳಕೊಂಡು ತಾನೆ ನಿಂದ ಕಾರಣ ಎಂದಿನಂತಾಯಿತ್ತು. ಇದೇ ಪ್ರಸಾಧಾದಿ ಮಧ್ಯಾಂತದರಿವು ಕಾಣಿರೆ. ಇಂತಪ್ಪ ಪ್ರಸಾದವ ಕೊಂಬ ಪ್ರಸಾದಿಯ ನಿಲವೆಂತೆಂದಡೆ : ವಿಶ್ವಾಸವೆ ಒಡಲಾಗಿ, ಲಿಂಗನಿಷೆ*ಯೆ ಇಂದ್ರಿಯಂಗಳಾಗಿ, ಸಾವಧಾನವೆ ಕರಣಂಗಳಾಗಿ, ಶಿವಾನುಭಾವವೆ ಪ್ರಾಣವಾಗಿ, ಮಹದಾನಂದವೆ ತಾನಾಗಿ, ಲಿಂಗಸಮರಸವೆ ಭರಿತವಾಗಿರ್ಪ ಮಹಾಜ್ಞಾನಿಯೆ ಪ್ರಸಾದಿ. ಆ ಪ್ರಸಾದಿಯ ಪ್ರಸಾದವೆ ಎನ್ನ ಲಿಂಗಕ್ಕೆ ಕಳೆಯಾಯಿತ್ತು. ಅದೆ ಎನಗೆ ತಿಳಿವಾಯಿತ್ತು, ಮಹಾಲಿಂಗ ಕಲ್ಲೇಶ್ವರಾ.
--------------
ಹಾವಿನಹಾಳ ಕಲ್ಲಯ್ಯ
ಚಂದ್ರ ಸೂರ್ಯಾದಿಗಳು ಭವಿಯೆಂದಲ್ಲಿ ಅವೆರಡರ ಸಂಸಂಧಿಯ ಜಗದಲ್ಲಿ ಇರಬಹುದೆ? ಇದರಂದವ ಹೇಳಿರಯ್ಯಾ. ತಾ ಕೊಂಡ ನೇಮದ ಸಂದೇಹವಲ್ಲದೆ, ಅವರಂದದ ಇರವ ವಿಚಾರಿಸಲಿಲ್ಲ, ಅದೆಂತೆಂದದಡೆ : ತಾನಿಹುದಕ್ಕೆ ಮುನ್ನವೆ ಅವು ಪುಟ್ಟಿದವಾಗಿ, ನೀರು ನೆಲ ಆರೈದು ಬೆಳೆವ ದ್ರವ್ಯಂಗಳೆಲ್ಲವು ಆಧಾರ ಆರೈಕೆ. ಇಂತೀ ಗುಣವ ವಾರಿಧಿಯನೀಜುವನಂತೆ ತನ್ನಿರವೆ ತನ್ನ ಸಂದೇಹಕ್ಕೆ ಒಡಲಾಗಿ ನಿಂದುದೆ ತನ್ನ ನೇಮ. ತನ್ನ ಹಿಂಗಿದುದೆ ಜಗದೊಳಗು ಎಂಬುದನರಿದ ಮತ್ತೆ ಸಂದೇಹದ ವ್ರತವ ಸಂದೇಹಕ್ಕಿಕ್ಕಲಿಲ್ಲ. ತಾ ಕೊಂಡುದೆ ವ್ರತ, ಮನನಿಂದುದೆ ನೇಮ. ಇದಕ್ಕೆ ಸಂದೇಹವೆಂದು ಒಂದನೂ ಕೇಳಲಿಲ್ಲ. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವೆ ನೀನೆ ಬಲ್ಲೆ.
--------------
ಅಕ್ಕಮ್ಮ
ಇಂತೀ ಭೇದಂಗಳಲ್ಲಿ ಅರ್ಪಿಸಿಕೊಂಬ ವಸ್ತು ಗುರುಲಿಂಗಕ್ಕೆ ಒಡಲಾಗಿ, ಆದಿಯಾಗಿಪ್ಪ ಶಿವಲಿಂಗವನರಿತು, ಶಿವಲಿಂಗಕ್ಕಾದಿಯಾಗಿಪ್ಪ ಚರಲಿಂಗವನರಿತು, ಆ ಚರಲಿಂಗಕ್ಕಾಗಿಯಪ್ಪ ಪ್ರಸಾದಲಿಂಗವನರಿತು, ಪ್ರಸಾದಲಿಂಗಕ್ಕಾದಿಯಾಗಿಪ್ಪ ಮಹಾಲಿಂಗವನರಿತು, ಆ ಮಹಾಲಿಂಗ ಮಹದೊಡಗೂಡುವ ಬೆಳಗಿನ ಕಳೆಯನರಿತು ಸದ್ಯೋಜಾತಲಿಂಗದ ಜಿಹ್ವೆಯನರತಿವಂಗಲ್ಲದೆ ಅರ್ಪಿಸಬಾರದು.
--------------
ಅವಸರದ ರೇಕಣ್ಣ
ಇನ್ನು ಪ್ರಸೂತಿಕಾಲದಲ್ಲಿ ವಾಯುವಶದಿಂದ ಜನನಿಯ ಜಠರಮಂ ಪೊರಮಡುವನು. ಪೊರಮಡಲೊಳಗಾಗಿ ಆದಿಮಾಯೆಯೆಂಬ ಗಾಳಿಬೀಸಿ. ಮಲವೇ ಒಡಲಾಗಿ ನೆನವೆಲ್ಲವ ಮರದುದು, ಮುನ್ನ ಮಾಡಿದ ಕರ್ಮಫಲದಿಂದ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಲಿಂಗವಿದ್ದು ಇದಿರಿಂಗೆ ಕೊಟ್ಟ ಕಾರಣ ಗುರುವಾದ. ಆ ಗುರು ಸನ್ಮತವಾಗಿ ಹರಸ್ವರೂಪವ ಮಾಡಲಾಗಿ ಜಂಗಮವಾದ. ಇಂತೀ ಲಿಂಗ ಬೀಜ ಅಂಕುರಿಸಿ ಎರಡಾಯಿತ್ತು. ತಾ ಕುರಿತು ಮೂರಾಯಿತ್ತು. ಮೂರು ಆರಾದ ಭೇದವ ಉಪಮಿಸಲಿಲ್ಲ. ವಿಶ್ವಮಯನಾಗಿ, ವಿಶ್ವಾಸಕ್ಕೆ ಒಡಲಾಗಿ, ಪ್ರಣವ ಬೀಜವಾಗಿ, ಉತ್ಪತ್ಯ ಲಯಕ್ಕೆ ಕರ್ತರ ಕೊಟ್ಟು, ಮಿಕ್ಕಾದ ತತ್ವಗಳಿಗೆ ಎಲ್ಲರಿಗೆ ಹಂಚಿ ಹಾಯಿಕಿ, ಅವು ಯಂತ್ರವಾಗಿ, ಯಂತ್ರವಾಹಕವಾಗಿ, ಜಲದಿಂದಾದ ಮಲವ ಮತ್ತೆ ಜಲ ತೊಳೆವಂತೆ, ನಿನ್ನ ಲೀಲೆಗೆ ನೀನೆ ಹಂಗಾದೆಯಲ್ಲ. ಅ[ಲ್ಲಿಗೆ] ಮಲವಾಗಿ ಎನ್ನಲ್ಲಿಗೆ ಅಮಲವಾಗಿ, ಪಾಶಬದ್ಧ ವಿರಹಿತನಾದ, ನಿಃಕಳಂಕ ಮಲ್ಲಿಕಾರ್ಜುನ.
--------------
ಮೋಳಿಗೆ ಮಾರಯ್ಯ
-->