ಅಥವಾ

ಒಟ್ಟು 16 ಕಡೆಗಳಲ್ಲಿ , 15 ವಚನಕಾರರು , 16 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆನೆ ಕುದುರೆ ಭಂಡಾರವಿರ್ದಡೇನೊ? ತಾನುಂಬುದು ಪಡಿಯಕ್ಕಿ, ಒಂದಾವಿನ ಹಾಲು, ಮಲಗುವುದರ್ಧ ಮಂಚ. ಈ ಹುರುಳಿಲ್ಲದ ಸಿರಿಯ ನೆಚ್ಚಿ ಕೆಡಬೇಡ ಮನುಜಾ. ಒಡಲು ಭೂಮಿಯ ಸಂಗ, ಒಡವೆ ತಾನೇನಪ್ಪುದೊ? ಕೈವಿಡಿದ ಮಡದಿ ಪರರ ಸಂಗ, ಪ್ರಾಣ ವಾಯುವಿನ ಸಂಗ. ಸಾವಿಂಗೆ ಸಂಗಡವಾರೂ ಇಲ್ಲ ಕಾಣಾ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಹೊನ್ನು ಹೆಣ್ಣು ಮಣ್ಣನಾವರಿಸಿಕೊಂಡು, ಒಡವೆ ಆಭರಣಂಗಳ ಹಲ್ಲಣಿಸಿಕೊಂಡು ಬಂದು, ಸರ್ವರಿಗೆ ಶಾಸ್ತ್ರೋಪದೇಶವ ಹೇಳುವರು ವೇಷಧಾರಿಗಳು. ಸೂಳೆಯರಂತೆ ತಮ್ಮ ಉಪಾದ್ಥಿಕೆಗೆ ಒಡಲಾಸೆಗೆ ಹಿತವಚನ ನುಡಿವರು. ಇಂತಪ್ಪ ಪ್ರಪಂಚಿನ ವೇಷಡಂಭಕ ಧೂರ್ತಲಾಂಛನಧಾರಿಗಳಿಗೆ ಮಹಂತಿನ ದೇವರೆನ್ನಬಹುದೆ ? ಎನಲಾಗದು. ಅದೇನು ಕಾರಣವೆಂದಡೆ, ತಮ್ಮಾದಿಯ ನಿಲುವ ತಾವರಿಯರು. ಷಟ್‍ಸ್ಥಲದ ನಿರ್ಣಯವ ಏನೆಂದರಿಯರು. ಆಚಾರದನುಭಾವದಂತರಂಗದ ಮೂಲವ ಮುನ್ನವೇ ಅರಿಯರು. ಇಂತಿದನರಿಯದ ಪಶುಪ್ರಾಣಿಗಳಿಗೆ ಜಂಗಮವೆನ್ನಬಹುದೆ ? ಎನ್ನಲಾಗದಯ್ಯಾ, ಕಲಿದೇವರದೇವ.
--------------
ಮಡಿವಾಳ ಮಾಚಿದೇವ
ಅಂತರಂಗದನುವ ಬಹಿರಂಗಕ್ಕೆ ಬೆರಸಿತಂದು ಹಿಡಿ ಹಿಡಿದು ನಡೆವುದೊಂದು ಕಡುಜಾಣದಾಗು, ಈ ಕುರುಹಿನೊಳು ನಿಂದು ಹೊರಗಣನೆರವಿಯ ಗುದ್ದಾಟಕ್ಕೆ ಸೆರೆಸೂರೆಹೋಯಿತ್ತು ಒಳಗಣ ಒಡವೆ ಊರು ಹಾಳಾದಲ್ಲಿ ಕ್ಷೇತ್ರದ ಸುಖವಾರಿಗೆ ? ಗುರುನಿರಂಜನ ಚನ್ನಬಸವಲಿಂಗ ಒಳಹೊರಗೆ ತನ್ನ ತಾ ನೋಡುತಾಡುತಿರ್ಪನು.
--------------
ದೇಶಿಕೇಂದ್ರ ಸಂಗನಬಸವಯ್ಯ
ಒಡವೆ ವಸ್ತು ಧನ ಧಾನ್ಯವ ಲೋಭದಿಂದ ಗಳಿಸಿ, ಮಡದಿಮಕ್ಕಳಿಗೆಂದು ಮಡುಗಿಕೊಂಡು, ದಾನಧರ್ಮವ ಪರ ಉಪಕಾರಕ್ಕೆ ನೀಡದೆ, ಹೇಸಿಗುಣದಲ್ಲಿಪ್ಪ ಮಾನವರ ಆಯುಷ್ಯ ವ್ಯಯಿದು ಕಾಲಮೃತ್ಯು ಬಂದು ಹೊಡೆದೊಯ್ಯು[ವಾಗ], ಸುಖದಲ್ಲಿರುವಂದಿನ ಮಡದಿ-ಮಕ್ಕಳು ಒಡವೆ-ವಸ್ತು ಧನಧಾನ್ಯ ಕಾಯುವವೆ ? ಕಾಯವು. ಎರವಿನ ಸಿರಿ, ಎರವಿನ ಮನೆ, ಎರವಿನ ಮಡದೇರು, ಎರವಿನ ಮಕ್ಕಳ ನೆಚ್ಚಿಕೊಂಡು ಊರ ಸೀರಿಂಗೆ ಅಗಸ ಬಡದು ಸಾವಂತೆ, ಪರಾರ್ಥನರಕದೊಡವೆಯ ನೆಚ್ಚಿ ನನ್ನತನ್ನದೆಂದು ಲೋಭತ್ವದಿಂದ ಕೆಟ್ಟರು. ಬರುತೇನು ತರಲಿಲ್ಲ , ಹೋಗುತೇನು ಒಯ್ಯಲಿಲ್ಲ , ಹುಟ್ಟುತ್ತಲೆ ಬತ್ತಲೆ, ಹೋಗುತಲೆ ಬತ್ತಲೆ. ಈ ನಷ್ಟಸಂಸಾರವ ನಂಬಿ ಕೆಡದಿರಿ ಮನುಜರಿರ. ನಂಬಿ ನಮ್ಮ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವ.
--------------
ಹೇಮಗಲ್ಲ ಹಂಪ
ಗಂಡು ಮೋಹಿಸಿ ಹೆಣ್ಣ ಹಿಡಿದಡೆ ಅದು ಒಬ್ಬರ ಒಡವೆ ಎಂದು ಅರಿಯಬೇಕು. ಹೆಣ್ಣು ಮೋಹಿಸಿ ಗಂಡ ಹಿಡಿದಡೆ ಉತ್ತರವಾವುದೆಂದರಿಯಬೇಕು. ಈ ಎರಡರ ಉಭಯವ ಕಳೆದು ಸುಖಿ ತಾನಾಗಬಲ್ಲಡೆ ನಾಸ್ತಿನಾಥನು ಪರಿಪೂರ್ಣನೆಂಬೆ.
--------------
ಗೊಗ್ಗವ್ವೆ
ಒಡವೆ ಭಂಡಾರ ಕಡವರ ದ್ರವ್ಯವ ಬಡ್ಡಿ ಬೆವಹಾರಕ್ಕೆ ಕೊಟ್ಟು ಮನೆಯ ಗೋಂಟಿನಲ್ಲಿ ಹೊಯಿದುಕೊಂಡಿದ್ದೆನಾದಡೆ ಅದು ಎನ್ನರ್ಥವಲ್ಲ, ಅನರ್ಥವೆಂದೆಂಬೆ. ಸಂಗಮದೇವಾ, ನೀನು ಜಂಗಮರೂಪಾಗಿ ಬಂದು ಆ ಧನವನು ನೀನು ಬಲ್ಲಂತೆ ಎನ್ನ ಮುಂದೆ ಸೂರೆಗೊಳುತಿರ್ದಡೆ, ನಾನು ಬೇಕು ಬೇಡೆಂದು ಮನದಲ್ಲಿ ಮರುಗಿದೆನಾದಡೆ ನಿಮ್ಮಾಣೆ, ನಿಮ್ಮ ಪ್ರಮಥರಾಣೆ, ಮನದೊಡೆಯ ನೀನೆ ಬಲ್ಲೆ. ಕಾಮನೇಮವೆಂಬ ಸಿಂಧುಬಲ್ಲಾಳನ ವಧುವ ಸರ್ವಭುವನದೊಡೆಯ ಸಂಗಮದೇವರು ಬೇಡುವಂತಲ್ಲ. ಎನ್ನ ಸತಿ ನೀಲಲೋಚನೆ ಪೃಥ್ವಿಗಗ್ಗಳೆಯ ಚೆಲುವೆ, ಆಕೆಯನು ಸಂಗಮದೇವಾ, ನೀನು ಜಂಗಮರೂಪಾಗಿ ಬಂದು ಎನ್ನ ಮುಂದೆ ಸಂಗವ ಮಾಡುತ್ತಿರಲು ಎನ್ನೊಡನಿರ್ದ ಸತಿಯೆಂದು ಮಾಯಕ್ಕೆ ಮರುಗಿದೆನಾದಡೆ ನಿಮ್ಮಾಣೆ, ನಿಮ್ಮ ಪ್ರಮಥರಾಣೆ, ಮನದೊಡೆಯ ನೀನೆ ಬಲ್ಲೆ. ಪ್ರತ್ಯಕ್ಷವಾಗಿ ಸಿರಿಯಾಳಸೆಟ್ಟಿ ಚಂಗಳವ್ವೆಯ ಮನೆಗೆ ಬಂದು ಅವರ ಮಗನ ಬೇಡುವಂತಲ್ಲ. ಸಂಗಮದೇವಾ, ನಿಮ್ಮ ಹೆಸರ ಚಿಕ್ಕಸಂಗಯ್ಯನಿದ್ದಾನೆ. ನೀನು ಜಂಗಮರೂಪಾಗಿ ಬಂದು, ಆತನ ಹಿಡಿದು ಎನ್ನ ಮುಂದೆ ಹೆಡಗುಡಿಯ ಕಟ್ಟಿ, ಚಿನಿಖಂಡವ ಮಾಡಿ ಬಾಣಸವ ಮಾಡುವಲ್ಲಿ, ಎನ್ನ ಉದರದಲ್ಲಿ ಬಂದ ಪುತ್ರನೆಂದು ಮಾಯಕ್ಕೆ ನಾನು ಮರುಗಿದೆನಾದಡೆ ನಿಮ್ಮಾಣೆ, ನಿಮ್ಮ ಪ್ರಮಥರಾಣೆ, ಮನದೊಡೆಯ ನೀನೆ ಬಲ್ಲೆ. ಇಂತೀ ತ್ರಿವಿಧವೂ ಹೊರಗಣವು. ಎನ್ನ ನೋವಿನೊಳಗಲ್ಲ, ಎನ್ನ ಬೇನೆಯೊಳಗಲ್ಲ. ಇನ್ನು ನಾನಿದೇನೆ, ಕದ್ದ ಕಳ್ಳನ ಕಟ್ಟುವಂತೆ ಕಟ್ಟಿ, ನೀನು ಜಂಗಮರೂಪಾಗಿ ಬಂದು ಎನ್ನಂಗದ ಮೇಲೆ ಶಸ್ತ್ರವನಿಕ್ಕಿ ನೋಡು, ಬಸಿದ ಶೂಲಪ್ರಾಪ್ತಿಯ ಮಾಡಿ ನೋಡು, ಸೂಜಿಯ ಮೊನೆಯಂತಿರ್ದ ಶೂಲದ ಮೇಲಿಕ್ಕಿ ನೋಡು, ನವಖಂಡವ ಮಾಡಿ ಕಡಿಕಡಿದು ನೋಡು, ಆ ಶೂಲವೈದೈದು ಮುಖವಾಗಿ ಹಾಯುವಾಗ ಹರಿತಿನಿಸಿ ನೋಡು. ಈ ರೀತಿಯಲ್ಲಿ ಎನ್ನ ಭಂಗಬಡಿಸಿ ನೋಡಿದಡೆಯೂ ಲಿಂಗಾರ್ಚನೆಯ ಮಾಡುವುದ ಬಿಡೆ, ಜಂಗಮದಾಸೋಹವ ಮಾಡುವುದ ಬಿಡೆ, ಪಾದತೀರ್ಥಪ್ರಸಾದವ ಕೊಂಬುದ ಬಿಡೆ. ಇಂತೀ ತ್ರಿವಿಧಕ್ಕೆ ರೋಷವ ಮಾಡಿಬಿಟ್ಟೆನಾದಡೆ, ನಿಮ್ಮಾಣೆ, ನಿಮ್ಮ ಪ್ರಮಥರಾಣೆ. ಇಷ್ಟರೊಳಗೆ ತಪ್ಪುಳ್ಳಡೆ ಮೂದಲಿಸಿ ಮೂಗಕೊಯಿ, ಕೂಡಲಸಂಗಮದೇವಾ. ಬಡ್ಡಿ ಬೆವಹಾರಕ್ಕೆ ಕೊಟ್ಟು ಮನೆಯ ಗೋಂಟಿನಲ್ಲಿ ಹೊಯಿದುಕೊಂಡಿದ್ದೆನಾದಡೆ ಅದು ಎನ್ನರ್ಥವಲ್ಲ, ಅನರ್ಥವೆಂದೆಂಬೆ. ಸಂಗಮದೇವಾ, ನೀನು ಜಂಗಮರೂಪಾಗಿ ಬಂದು ಆ ಧನವನು ನೀನು ಬಲ್ಲಂತೆ ಎನ್ನ ಮುಂದೆ ಸೂರೆಗೊಳುತಿರ್ದಡೆ, ನಾನು ಬೇಕು ಬೇಡೆಂದು ಮನದಲ್ಲಿ ಮರುಗಿದೆನಾದಡೆ ನಿಮ್ಮಾಣೆ, ನಿಮ್ಮ ಪ್ರಮಥರಾಣೆ, ಮನದೊಡೆಯ ನೀನೆ ಬಲ್ಲೆ. ಕಾಮನೇಮವೆಂಬ ಸಿಂಧುಬಲ್ಲಾಳನ ವಧುವ ಸರ್ವಭುವನದೊಡೆಯ ಸಂಗಮದೇವರು ಬೇಡುವಂತಲ್ಲ. ಎನ್ನ ಸತಿ ನೀಲಲೋಚನೆ ಪೃಥ್ವಿಗಗ್ಗಳೆಯ ಚೆಲುವೆ, ಆಕೆಯನು ಸಂಗಮದೇವಾ, ನೀನು ಜಂಗಮರೂಪಾಗಿ ಬಂದು ಎನ್ನ ಮುಂದೆ ಸಂಗವ ಮಾಡುತ್ತಿರಲು ಎನ್ನೊಡನಿರ್ದ ಸತಿಯೆಂದು ಮಾಯಕ್ಕೆ ಮರುಗಿದೆನಾದಡೆ ನಿಮ್ಮಾಣೆ, ನಿಮ್ಮ ಪ್ರಮಥರಾಣೆ, ಮನದೊಡೆಯ ನೀನೆ ಬಲ್ಲೆ. ಪ್ರತ್ಯಕ್ಷವಾಗಿ ಸಿರಿಯಾಳಸೆಟ್ಟಿ ಚಂಗಳವ್ವೆಯ ಮನೆಗೆ ಬಂದು ಅವರ ಮಗನ ಬೇಡುವಂತಲ್ಲ. ಸಂಗಮದೇವಾ, ನಿಮ್ಮ ಹೆಸರ ಚಿಕ್ಕಸಂಗಯ್ಯನಿದ್ದಾನೆ. ನೀನು ಜಂಗಮರೂಪಾಗಿ ಬಂದು, ಆತನ ಹಿಡಿದು ಎನ್ನ ಮುಂದೆ ಹೆಡಗುಡಿಯ ಕಟ್ಟಿ, ಚಿನಿಖಂಡವ ಮಾಡಿ ಬಾಣಸವ ಮಾಡುವಲ್ಲಿ, ಎನ್ನ ಉದರದಲ್ಲಿ ಬಂದ ಪುತ್ರನೆಂದು ಮಾಯಕ್ಕೆ ನಾನು ಮರುಗಿದೆನಾದಡೆ ನಿಮ್ಮಾಣೆ, ನಿಮ್ಮ ಪ್ರಮಥರಾಣೆ, ಮನದೊಡೆಯ ನೀನೆ ಬಲ್ಲೆ. ಇಂತೀ ತ್ರಿವಿಧವೂ ಹೊರಗಣವು. ಎನ್ನ ನೋವಿನೊಳಗಲ್ಲ, ಎನ್ನ ಬೇನೆಯೊಳಗಲ್ಲ. ಇನ್ನು ನಾನಿದೇನೆ, ಕದ್ದ ಕಳ್ಳನ ಕಟ್ಟುವಂತೆ ಕಟ್ಟಿ, ನೀನು ಜಂಗಮರೂಪಾಗಿ ಬಂದು ಎನ್ನಂಗದ ಮೇಲೆ ಶಸ್ತ್ರವನಿಕ್ಕಿ ನೋಡು, ಬಸಿದ ಶೂಲಪ್ರಾಪ್ತಿಯ ಮಾಡಿ ನೋಡು, ಸೂಜಿಯ ಮೊನೆಯಂತಿರ್ದ ಶೂಲದ ಮೇಲಿಕ್ಕಿ ನೋಡು, ನವಖಂಡವ ಮಾಡಿ ಕಡಿಕಡಿದು ನೋಡು, ಆ ಶೂಲವೈದೈದು ಮುಖವಾಗಿ ಹಾಯುವಾಗ ಹರಿತಿನಿಸಿ ನೋಡು. ಈ ರೀತಿಯಲ್ಲಿ ಎನ್ನ ಭಂಗಬಡಿಸಿ ನೋಡಿದಡೆಯೂ ಲಿಂಗಾರ್ಚನೆಯ ಮಾಡುವುದ ಬಿಡೆ, ಜಂಗಮದಾಸೋಹವ ಮಾಡುವುದ ಬಿಡೆ, ಪಾದತೀರ್ಥಪ್ರಸಾದವ ಕೊಂಬುದ ಬಿಡೆ. ಇಂತೀ ತ್ರಿವಿಧಕ್ಕೆ ರೋಷವ ಮಾಡಿಬಿಟ್ಟೆನಾದಡೆ, ನಿಮ್ಮಾಣೆ, ನಿಮ್ಮ ಪ್ರಮಥರಾಣೆ. ಇಷ್ಟರೊಳಗೆ ತಪ್ಪುಳ್ಳಡೆ ಮೂದಲಿಸಿ ಮೂಗಕೊಯಿ, ಕೂಡಲಸಂಗಮದೇವಾ.
--------------
ಬಸವಣ್ಣ
ನಮ್ಮ ಗಣಂಗಳ ಸಹವಾಸದಿಂದೆ ಏನೇನು ಫಲಪದವಿಯಾಯಿತ್ತೆಂದಡೆ, ಅಷ್ಟಾವರಣಂಗಳು ಸಾಧ್ಯವಾದವು. ಸಾಧ್ಯವಾದ ಕಾರಣ, ಶ್ರೀಗುರುವು ಎನ್ನ ಕರಸ್ಥಲಕ್ಕೆ ಲಿಂಗವ ಕೊಟ್ಟ, ಎಂದೆಂದಿಗೂ ಸತಿ-ಪತಿ ಭಾವ ತಪ್ಪಬೇಡವೆಂದು ಗಣಂಗಳ ಸಾಕ್ಷಿಯ ಮಾಡಿ, ನೀನು ಅಂಗವಾಗಿ ಲಿಂಗವೇ ಪ್ರಾಣವಾಗಿರಿಯೆಂದು ಇಬ್ಬರಿಗೂ ಆಜ್ಞೆಯ ಮಾಡಿದ ಕಾರಣ ಎನ್ನಂಗವೇ ನಿನ್ನಂಗ, ಎನ್ನ ಪ್ರಾಣವೇ ನಿನ್ನ ಪ್ರಾಣ. ನಿನ್ನ ಪ್ರಾಣವೇ ಎನ್ನ ಪ್ರಾಣವಾದ ಮೇಲೆ ಎನ್ನ ಮಾನಾಪಮಾನ ನಿಮ್ಮದಯ್ಯಾ, ಎನ್ನ ಹಾನಿ ವೃದ್ಧಿ ನಿಮ್ಮದಯ್ಯಾ. ನೀವು ಈರೇಳು ಲೋಕದ ಒಡೆಯರೆಂಬುದ ನಾನು ಬಲ್ಲೆನಯ್ಯಾ. ಬಲ್ಲೆನಾಗಿ, ಪುರುಷರ ದೊರೆತನ ಹೆಂಡರಿಗಲ್ಲದೆ ಬೇರುಂಟೆ? ಎನ್ನ ಸುಖದುಃಖವೆ ನಿನ್ನದಯ್ಯ, ನಿನ್ನ ಸುಖದುಃಖವೆ ಎನ್ನದಯ್ಯ, ಅದಕ್ಕೆ ಎನ್ನ ತನುಮನಧನವ ಸೂಸಲೀಯದೆ ನಿಮ್ಮೊಡವೆ ನೀವು ಜೋಕೆಯ ಮಾಡಿಕೊಳ್ಳಿರಿ. ಜೋಕೆಯ ಮಾಡದಿದ್ದಡೆ ಗಣಂಗಳಿಗೆ ಹೇಳುವೆ, ಏಕೆಂದರೆ ಗಣಂಗಳು ಸಾಕ್ಷಿಯಾಗಿದ್ದ ಕಾರಣ. ಆಗ ಆ[ಣೆ]ಯ ಮಾತು ಹೇಳಬಹುದೆಯೆಂದಡೆ ಆಗ ಎನಗೆ ಪ್ರತ್ಯುತ್ತರವಿಲ್ಲ ಸ್ವಾಮಿ. ನಿಮ್ಮ ಒಡವೆ ನಿಮಗೆ ಒಪ್ಪಿಸುವೆನೆಂದರುಹಿದನು ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ಮುರಿಗಂಚು ತವರ ಹಿತ್ತಾಳೆ ತಾಮ್ರ ಇವು ಮೊದಲಾದ ಲೋಹವ ತನ್ನಿ. ಕಳ್ಳವಣ, ಕಂದುವೆಳ್ಳ ಮೊದಲಾದ ರೊಕ್ಕವ ತನ್ನಿ. ನಿಮಗಲ್ಲದ ಒಡವೆ ಎನಗೆ. ನಿಮಗೆ ಒಳ್ಳಿ[ತ]ಹ ಒಡವೆಯ ಕೊಡುವೆ. ಎನ್ನ ಕಂಬಳಿಯ [ಚೀಲವಂ] ಬಿಡುವೆ. ಅದರಲ್ಲಿದ್ದ ಸಂಬಾರದ್ರವ್ಯವ ಕೊಡುವೆನೆಂಬುದಕ್ಕೆನ್ನ ನಂಬಿ ಬನ್ನಿ. ಊಧ್ರ್ವರೇತೋಮೂರ್ತಿ ಶ್ವೇತಸ್ವಯಂಭು ಕಪಿಲೇಶ್ವರಲಿಂಗದಾಣತಿ.
--------------
ಮಹಾಲಿಂಗ ಶಶಿಮೌಳಿ ಸದಾಶಿವ
ಹೊಸ್ತಿಲೊಳಗಿರಿಸಿದ ಜ್ಯೋತಿಯಂತೆ ಒಳಗೆ ನೋಡುವನು ತಾನೆ, ಹೊರಗೆ ನೋಡುವನು ತಾನೆ. ಅರಿದೆನೆಂಬುವನು ತಾನೆ, ಮರೆದೆನೆಂಬುವನು ತಾನೆ. ಕಂಡೆನೆಂಬವನು ತಾನೆ, ಕಾಣೆನೆಂಬವನು ತಾನೆ. ದೃಷ್ಟ ದೃಕ್ಕು ದೃಶ್ಯವೆಂಬ ತ್ರಿಪುಟಿ ಭೇದವ ಮೀರಿ. ತ್ರಿಕೂಟವನೇರಿ, ಅತ್ತಲೆ ನೋಡುತ್ತಿರಲು, ಹಿತ್ತಲ ಕದವ ತೆರೆದು ಮತ್ತವಾಗಿ ಎತ್ತಲೆಂದರಿಯದೆ, ಸತ್ತುಚಿತ್ತಾನಂದದಲ್ಲಿ ಆಡುವ ಶರಣನ ಇರವೆಂತೆಂದಡೆ: ಬಿತ್ತಲಿಲ್ಲ ಬೆಳೆಯಲಿಲ್ಲ; ಒಕ್ಕಲಿಲ್ಲ ತೂರಲಿಲ್ಲ. ಇವನೆಲ್ಲಾ ಇಕ್ಕಲಿಸಿ ನಿಂದು ಮಿಕ್ಕು ಮೀರಿ ಕುಕ್ಕುಂಭೆ ಮೇಲೆ ಕುಳಿತುಕೊಂಡು ನೋಡುತ್ತಿರಲು, ಹಡಗೊಡೆಯಿತ್ತು; ಒಡವೆ - ವಸ್ತು, ಮಡದಿ -ಮಕ್ಕಳು ನೀರೊಳಗೆ ನೆರೆದು ಹೋಯಿತ್ತು. ಒಡನೆ ತಂಗಾಳಿ ಬಂದು ಬೀಸಲು, ತಂಪಿನೊಳಗೆ ನಿಂದು, ಗುಂಪು ಬಯಲಾಗಿ ಗೂಢವಾಗಿ ಆಡುವ ಶರಣ, ಅಪ್ಪಣ್ಣಪ್ರಿಯ ಚೆನ್ನಬಸವಣ್ಣ ತಾನೆ ನೋಡಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಶಿವಶಿವಾ, ಈ ಸಂಸಾರದಂದುಗ ದುಃಖ ನಾನೆಂತು ಪೇಳ್ವೆ. ಹೊನ್ನಿನ ವ್ಯಾಪಾರವ ಮಾಡಿ, ಧಾವತಿಯಿಂದ ಗಳಿಸುವದು ದುಃಖ. ಆ ಹೊನ್ನು ಜೋಕೆಮಾಡುವದು ದುಃಖ. ಆ ಹೊನ್ನು ಹೋದಮೇಲೆ ಅನೇಕ ದುಃಖ. ಹೆಣ್ಣು ತರುವದು ದುಃಖ; ಆ ಹೆಣ್ಣು ಆಳುವದು ದುಃಖ. ಹೆಣ್ಣು ಸತ್ತುಹೋದಮೇಲೆ ಅನೇಕ ದುಃಖ. ಮಣ್ಣು ದೊರಕಿಸುವದು ದುಃಖ. ಆ ಮಣ್ಣಿನ ಧಾವತಿ ಹೋರಾಟ ಮಾಡುವದು ದುಃಖ. ಆ ಮಣ್ಣು ನಾಶವಾದ ಮೇಲೆ ಅನೇಕ ದುಃಖ. ಇಂತೀ ತ್ರಿವಿಧವು ಮಲಸಮಾನವೆಂದರಿಯದೆ, ಹೊನ್ನೆನ್ನದು, ಹೆಣ್ಣೆನ್ನದು, ಮಣ್ಣೆನ್ನದು ಎಂಬಿರಿ. ಎಲೆ ಹುಚ್ಚು ಮರುಳು ಮಾನವರಿರಾ, ನೀವು ಮರಣವಾದ ಮೇಲೆ ಅವು ನಿಮ್ಮ ಕೂಡ ಬರ್ಪವೆ? ಬರ್ಪುದಿಲ್ಲ ಕೇಳಾ, ಎಲೆ ಹುಚ್ಚ ಮರುಳ ಮಾನವರಿರಾ, ಅವು ಆರ ಒಡವೆ ಎಂದರೆ ಬಲ್ಲರೆ ಹೇಳಿರಿ, ಅರಿಯದಿದ್ದರೆ ಕೇಳಿರಿ. ಹೊನ್ನು ರಾಜನದು, ಹೆಣ್ಣು ಅನ್ಯರದು, ಮಣ್ಣು ಬಲ್ಲಿದರದು. ಇಂತೀ ತ್ರಿವಿಧವು ಅನಿತ್ಯವೆಂದು ತನ್ನ ಸ್ವಾತ್ಮಜ್ಞಾನದಿಂದ ತಿಳಿದೆಚ್ಚತ್ತು ವಿಸರ್ಜಿಸಿ, ಗುರುಕಾರುಣ್ಯಮಂ ಪಡೆದು, ಲಿಂಗಾಂಗಸಂಬಂಧಿಯಾಗಿ, ಗುರೂಪಾವಸ್ತೆಯಂ ಮಾಡಿ, ಮುಂದೆ ಮೋಕ್ಷವ ಹಡೆಯಬೇಕೆಂಬ ಯುಕ್ತಿ ವಿವೇಕ ವಿಚಾರ ಬುದ್ಧಿಯನರಿಯದೆ ಅಶನಕ್ಕಾಗಿ ಮಣ್ಣ ಮೆಚ್ಚಿ, ವ್ಯಸನಕ್ಕಾಗಿ ಹೆಣ್ಣ ಮೆಚ್ಚಿ, ಅಂಗಸುಖಕ್ಕಾಗಿ ಹೊನ್ನ ಮೆಚ್ಚಿ- ಇಂತೀ ತ್ರಿವಿಧ ಆಶೆ ಆಮಿಷ ಮಮಕಾರದಿಂದ ಮನಮಗ್ನರಾಗಿ, ಮತಿಗೆಟ್ಟು ಮುಂದುಗಾಣದೆ, ಸಟೆಯ ಸಂಸಾರದಲ್ಲಿ ಹೊಡದಾಡಿ ಹೊತ್ತುಗಳೆದು ವ್ಯರ್ಥ ಸತ್ತುಹೋಗುವ ಕತ್ತೆಸೂಳೆಮಕ್ಕಳ ಬಾಳ್ವೆ ಶುನಿ ಸೂಕರ ಕುಕ್ಕುಟನ ಬಾಳ್ವೆಗಿಂದತ್ತತ್ತಯೆಂದಾತ ನಿಮ್ಮ ಶರಣ ವೀರಾಧಿವೀರ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಒಡಲು ಒಡವೆ ಧರೆ ನಿನಗಾಯಿತ್ತೆಂದು ಉಣಲೊಲ್ಲದಿಪ್ಪ ಮರುಳೆ ಕೇಳಾ! ಅಡವಿಯನೆ ಕೆಳೆಗೊಂಡು ನೆಲದೊಳಗೆ ಬೈಚಿಟ್ಟು. ಹೊಲಬುದಪ್ಪಿ ಭೂತ ಕೊಡಲೊಲ್ಲದವೆಯೊ. ಹಾಗಕ್ಕೆ ಹಾಗವ ಗಳಿಸಿ ಆಗಾಯಿತ್ತೆಂದು ಉಣಲೊಲ್ಲದಿಪ್ಪ ಮರುಳೆ ಕೇಳಾ! ಇದನರಿದು ಕಲ್ಯಾಣದ ತ್ರಿಪುರಾಂತಕ ಲಿಂಗದಲ್ಲಿ ಗಾವುದಿ ಮಾಚಯ್ಯ ಹೇಳಿದುದ ಕೇಳು ಮಾನವಾ.
--------------
ಗಾವುದಿ ಮಾಚಯ್ಯ
ಭೂಮಿ ನಿನ್ನದಲ್ಲ ಹೇಮ ನಿನ್ನದಲ್ಲ ಕಾಮಿನಿ ನಿನ್ನವಳಲ್ಲ_ ಅವು ಜಗಕ್ಕಿಕ್ಕಿದ ವಿಧಿ. ನಿನ್ನ ಒಡವೆ ಎಂಬುದು ಜ್ಞಾನರತ್ನ. ಅಂತಪ್ಪ ದಿವ್ಯರತ್ನವ ಕೆಡಗುಡದೆ ಆ ರತ್ನವ ನೀನು ಅಲಂಕರಿಸಿದೆಯಾದಡೆ ನಮ್ಮ ಗುಹೇಶ್ವರಲಿಂಗದಲ್ಲಿ ನಿನ್ನಿಂದ ಬಿಟ್ಟು ಸಿರಿವಂತರಿಲ್ಲ ಕಾಣಾ ಎಲೆ ಮನವೆ.
--------------
ಅಲ್ಲಮಪ್ರಭುದೇವರು
ತನುವ ಕೊಟ್ಟು ಭಕ್ತರಾದೆವೆಂಬರು, ಮನವ ಕೊಟ್ಟು ಭಕ್ತರಾದೆವೆಂಬರು, ಧನವ ಕೊಟ್ಟು ಭಕ್ತರಾದೆವೆಂಬರು. ತನು, ಮನ, ಧನವನೆಂತು ಕೊಟ್ಟಿರಿ ಹೇಳಿರಣ್ಣಾ? ನಿಮ್ಮ ಒಡವೆ ನಿಮ್ಮಲ್ಲಿ ಇದೆ. ಅದು ಹೇಗೆಂದರೆ, ಬಲ್ಲವರು ನೀವು ಕೇಳಿ, ತನುವ ನೀವು ಕೊಟ್ಟರೆ ನೀವು ರೂಪಾಗಿ ಇರುವದಕ್ಕೇನು? ಮನವ ನೀವು ಕೊಟ್ಟರೆ ನೀವು ನಿಮಗೆ ನಡೆನುಡಿ ಚೈತನ್ಯವೇನು? ಧನವ ನೀವು ಕೊಟ್ಟರೆ ಕ್ಷುತ್ತಿಂಗೆ ಭಿಕ್ಷ, ಸೀತಕ್ಕೆ ರಗಟೆ ಏನು? ಅಂತಲ್ಲ, ಕೇಳಿರಣ್ಣಾ ! ತನುವ ಕೊಟ್ಟುದಾವುದೆಂದರೆ, ಹುಸಿಮನವ ಕೊಟ್ಟುದಾವುದೆಂದರೆ, ವ್ಯಾಕುಳವನೆಲ್ಲ ಅಳಿದು ನಿರಾಕುಳವಾಗಿ ನಿಂದ ಮನವೆ ಲಿಂಗವಾಯಿತ್ತು ಧನವ ಕೊಟ್ಟಿಹೆನೆಂಬುದಾವುದೆಂದರೆ, ಇಂದಿಗೆ ನಾಳಿಗೆ ಎಂಬ ಸಂದೇಹದ ಭಾವಕ್ಕೆ, ಭಯಕ್ಕೆ ಭವವಳಿವುದುದೆ ಜಂಗಮವಾಯಿತ್ತು. ಇಂತಿದೀಗ ನಮ್ಮ ಮುನ್ನಿನ ಆದ್ಯರ ನಡೆನುಡಿ, ಮಾಟಕೂಟ. ಇದನರಿಯದೆ ಏನೊಂದು ಮಾಡಿದರೂ ನೀಡಿದರೂ ಕೊಟ್ಟರೂ ಕೊಂಡರೆಯೂ, ವಾಯಕ್ಕೆ ವಾಯ ಬಸವಪ್ರಿಯ ಕೂಡಲಚೆನ್ನಬಸವಣ್ಣ.
--------------
ಹಡಪದ ಅಪ್ಪಣ್ಣ
ಅಡಿಗಡಿಗೆ ಬಂದಡರುತಿರ್ಪೆ. ಕಡುಛಲ ನಿನಗೆ ಬೇಡ ಕಂಡಾ ! ಮೃಡನೆ, ಎನ್ನೊಡನೆ ನೀ ತೊಡರಿ ಸಸಿನೆ ಹೋಗಲಿರಯೆ. ಎಂತೆಂದಡೆ ನಾನಂಜುವನಲ್ಲ. ಸಂತತ ಘಾಸಿ ಮಾಡದೆ, ಕಂತುಹರ ಅಭಯಕರ, ಎನ್ನ ನೇಮಕ್ಕೆ ಅಡ್ಡ ಬರುತ್ತಿರದಿರು. ಒಡವೆ ಸವೆದರೊಡಲನೊಡ್ಡುವೆ. ಕಡಗುವಡೊಮ್ಮೆ ಹಳಚಿ ನೋಡು. ಬಡವನ ಕೈಯ ಕಡುಹ ನೋಡೆನ್ನೊಡೆಯ ಸಂಗಪ್ರಿಯ ಚೆನ್ನಬಂಕೇಶ್ವರಾ.
--------------
ಸುಂಕದ ಬಂಕಣ್ಣ
ಅಯ್ಯಾ, ಎನ್ನ ಮನದಲು ನಿಮಗೀ ಒಡವೆ ಕೆರೆಯೆಂದೂ ತಿದ್ದುವುದೆಂಬ ಚಿಂತೆಯೆನಗೆ ಹೋ! ವಾ! ಹಾ! ಅಯ್ಯಾ, ಇದ ಮಾಡಿಸು ಒಡೆಯಾ, ಕೇಳು, ಕೇಳು, ಸಿದ್ಧಮಲ್ಲಿನಾಥಯ್ಯ.
--------------
ಸಿದ್ಧರಾಮೇಶ್ವರ
ಇನ್ನಷ್ಟು ... -->