ಅಥವಾ

ಒಟ್ಟು 7 ಕಡೆಗಳಲ್ಲಿ , 5 ವಚನಕಾರರು , 7 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹತ್ತು ಮತ್ತರ ಭೂಮಿ, ಬತ್ತದ ಹಯನು, ನಂದಾದೀವಿಗೆಯ ನಡೆಸಿಹೆವೆಂಬವರ ಮುಖವ ನೋಡಲಾಗದು, ಅವರ ನುಡಿಯ ಕೇಳಲಾಗದು. ಅಂಡಜ, ಸ್ವೇದಜ, ಉದ್ಭಿಜ, ಜರಾಯುಜವೆಂಬ ಪ್ರಾಣಿಗಳಿಗೆ ಭವಿತವ್ಯವ ಕೊಟ್ಟವರಾರೊ ಒಡೆಯರಿಗೆ ಉಂಡಲಿಗೆಯ ಮುರಿದಿಕ್ಕಿದಂತೆ ಎನ್ನಿಂದಲೆ ಆುತ್ತು, ಎನ್ನಿಂದಲೆ ಹೋುತ್ತು ಎಂಬವನ ಬಾಯಲ್ಲಿ ಮೆಟ್ಟಿ ಹುಡಿಯ ಹೊಯ್ಯದೆ ಮಾಬನೆ ಕೂಡಲಸಂಗಮದೇವ 225
--------------
ಬಸವಣ್ಣ
ತನುವರ್ಪಿತವೆಂದಡೆ ಗುರುದ್ರೋಹ. ಮನವರ್ಪಿತವೆಂದಡೆ ಲಿಂಗದ್ರೋಹ. ಧನವರ್ಪಿತವೆಂದಡೆ ಜಂಗಮದ್ರೋಹ_ ಇಂತೀ ತನುಮನಧನಗಳೆಂಬ ಅನಿತ್ಯವನು ನಿತ್ಯಕ್ಕರ್ಪಿಸಿ ಭಕ್ತನಾದೆನೆಂದಡೆ, ಅದು ಅಜ್ಞಾನ ನೋಡಾ. ಒಡೆಯರಿಗೆ ಉಂಡೆಯ ಮುರಿದಿಕ್ಕಿ ನಾ ಭಕ್ತನೆಂಬ ಮಾತ ಸಮ್ಯಕ್ ಶರಣರು ಮೆಚ್ಚುವರೆ ? ನಮ್ಮ ಗುಹೇಶ್ವರಲಿಂಗಕ್ಕೆ, ನೀನು ಆವುದರಲ್ಲಿ ಏನನರ್ಪಿಸಿ ಭಕ್ತನಾದೆ ಹೇಳಾ ಸಂಗನಬಸವಣ್ಣಾ ?
--------------
ಅಲ್ಲಮಪ್ರಭುದೇವರು
ಜಂಗಮಪ್ರಸಾದ ಮುಂತಾಗಿಯಲ್ಲದೆ ಒಲ್ಲೆನೆಂಬ ಭಕ್ತನ ಕಟ್ಟಳೆಯ ವಿವರ: ಶಿಶು, ಬಂಧುಗಳು, ಚೇಟಿ, ಬೆವಸಾಯವ ಮಾಡುವವರು ಮುಂತಾದ ಇವರಿಗೆಲ್ಲಕ್ಕೂ ಒಡೆಯರಿಗೆ ಸಲುವುದಕ್ಕೆ ಮುನ್ನವೆ ಸೀತಾಳ ಶಿವದಾನವೆಂದು ಇಕ್ಕಬಹುದೆ? ಒಡೆಯರ ಕಟ್ಟಳೆಯಠಾವಿನಲ್ಲಿ ನಿಮ್ಮ ಕೃತ್ಯಕ್ಕೆ ನಿಮ್ಮ ಮನವೆ ಸಾಕ್ಷಿ. ಇದು ದಂಡವಲ್ಲ, ನೀವು ಕೊಂಡ ಅಂಗದ ನೇಮ. ಇದಕ್ಕೆ ನಿಮ್ಮ ಏಲೇಶ್ವರಲಿಂಗವೆ ಸಾಕ್ಷಿ.
--------------
ಏಲೇಶ್ವರ ಕೇತಯ್ಯ
ಒಡೆಯರು ದೇವರಿಗೆ ಕೊಟ್ಟಲ್ಲದೆ, ಕೊಳ್ಳೆನೆಂಬ ಮೃಡನ ಭಕ್ತರ ನೋಡಾ. ಒಡೆಯರಿಗೊಂದು ಪರಿ, ತನಗೊಂದು ಪರಿ ಮಾಡುವ ಸಡಗರವ ನೋಡಾ. ಒಡೆಯಂಗೆ ಭೆಟ್ಟಿ, ಮನೆಯೊಡಯಂಗೆ ತುಪ್ಪ ಕಟ್ಟು ಮೊಸರು ಮೃಷ್ಟಾನ್ನ. ಒಡೆಯರಿಗೆ ಕುರುಹ ತೋರಿ, ತಾ ಹಿರಿದಾಗಿ ಉಂಬ ಕಡುಗಲಿಯ ನೋಡಾ. ಇವರಡಿಯಲ್ಲಿ ಬಂದಡೆ, ಇವರನೊಡಗೂಡಿ ನುಡಿದೆನಾದಡೆ, ಜೇನಗಡಿಗೆಯಲ್ಲಿ ಬಿದ್ದ ಗುದಿಮಕ್ಷಿಕನಂತೆ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಒಡೆಯರ ಕಟ್ಟಳೆಯಾದ ಮತ್ತೆ, ಒಡಗೂಡಿ ಸಹಪಂಙÂ್ತಯಲ್ಲಿ ಮೃಡಶರಣನ ಪ್ರಸಾದವ ಕೊಳಲೊಲ್ಲದೆ, ತುಡುಗುಣಿನಾಯಂತೆ ತೊಗಲಗಡಿಗೆಯ ತುಂಬುವ, ಗುರುಪಾತಕರಿಗೆಲ್ಲಿಯದೊ ಒಡೆಯರ ಕಟ್ಟಳೆ? ಒಡೆಯನ ನಿರೀಕ್ಷಣೆಯಲ್ಲಿ ಸರಿಗದ್ದುಗೆಯನೊಲ್ಲದೆ, ಒಡೆಯಂಗೆ ಮನೋಹರವಾಗಿ ಸಡಗರಿಸಿ ಸಮರ್ಪಿಸಿದ ಮತ್ತೆ, ತನ್ನೊಳಗಿಪ್ಪ ಆತ್ಮಂಗೆ ತೃಪ್ತಿ, ಕೂರ್ಮನ ಶಿಶುವಿನ ಸ್ನೇಹದಂತೆ. ಹೀಂಗಲ್ಲದೆ ಭಕ್ತಿ ಸಲ್ಲ. ಎನಗೆ ಪರಸೇವೆ ಪರಾಙ್ಮುಖವೆಂದು, ಒಡೆಯರಿಗೆ ಎಡೆಮಾಡೆಂದು ಎನಗೆ ತಳುವೆಂದಡೆ, ಒಪ್ಪುವರೆ ನಿಜಶರಣರು? ಸತಿ ಕೋಣೆಯಲ್ಲಿದ್ದು, ಪತಿ ನಡುಮನೆಯಲ್ಲಿದ್ದಡೆ ರತಿಕೂಟವುಂಟೆ? ಇದರ ಗಸಣೆಗಂಜಿ, ವಿಶೇಷವನರಿಯದ ಪಶುಗಳಿಗೆಲ್ಲಿಯೂ, [ಐಕ್ಯಾನುಭಾವ], ನಿಃಕಳಂಕ ಮಲ್ಲಿಕಾರ್ಜುನಾ?
--------------
ಮೋಳಿಗೆ ಮಾರಯ್ಯ
ವ್ರತ ನೇಮ ಶೀಲಮಂ ಮಾಡಿಕೊಂಡು, ಸಮಯಾಚಾರದಲ್ಲಿ ನಡೆದೆನೆಂಬ ಭಕ್ತನ ಕ್ರಮವೆಂತೆಂದಡೆ ; ತಾನು ಭೋಗಿಸುವಂತಹ ಸಕಲದ್ರವ್ಯಂಗಳೆಲ್ಲವನು, ಜಂಗಮಕ್ಕೆ ಕೊಟ್ಟು ತಾನು ಕೊಳಬೇಕು. ಅವಾವೆಂದಡೆ ಮಜ್ಜನ ಭೋಜನ ಅಂದಣ ಸತ್ತಿಗೆ ಚಾಮರ ಆನೆ ಕುದುರೆ ಕನ್ನಡಿ ಪರಿಮಳ ಲೇಪನ ಗಂಧ ಅಕ್ಷತೆ ವಸ್ತ್ರ ರತ್ನಾಭರಣ ತಾಂಬೂಲ ಮೆಟ್ಟಡಿ ಮಂಚ ಸುಪ್ಪತ್ತಿಗೆ ಒಡೆಯರಿಗೆ ಆಯಿತೆಂಬುದ ಕೇಳಿ, ಆ ಒಡೆಯನ ವಾಕ್ಯಪ್ರಸಾದದಿಂದ, ಮಹಾಪ್ರಸಾದವೆಂದು ಎಲ್ಲ ವ್ರತಂಗಳಿಗೆಯೂ ಜಂಗಮಪ್ರಸಾದವೆ ಪ್ರಾಣ; ಎಲ್ಲ ನೇಮಕ್ಕೆಯೂ ಜಂಗಮದರ್ಶನವೆ ನೇಮ; ಎಲ್ಲ ಶೀಲಕ್ಕೆಯೂ ಜಂಗಮದ ಮಾಟವೆ ಶೀಲ; ಎಲ್ಲ ವ್ರತ ನೇಮ ಶೀಲಂಗಳೆಲ್ಲವು ಜಂಗಮವ ಮುಂದಿಟ್ಟು ಶುದ್ಧತೆಯಹ ಕಾರಣ, ಆ ಜಂಗಮದಲ್ಲಿ ಅರ್ಥ, ಪ್ರಾಣ, ಅಭಿಮಾನ ಮುಂತಾದ ಈ ಮೂರಕ್ಕು ಕಟ್ಟು ಮಾಡಿದೆನಾದಡೆ ಎನಗೆ ದ್ರೋಹ. ಆ ಜಂಗಮದ ದರ್ಶನದಿಂದವೆ ಸಕಲದ್ರವ್ಯಂಗಳು ಪವಿತ್ರವು ; ಆ ಜಂಗಮಪ್ರಸಾದದಿಂದವೆ ಮಹಾಘನಲಿಂಗಕ್ಕೆ ತೃಪ್ತಿ. ಇಷ್ಟನರಿದ ಬಳಿಕ ಜಂಗಮಲಿಂಗಕ್ಕೆ ಸಂದೇಹವ ಮಾಡಿದೆನಾದಡೆ ಎನಗೆ ಕುಂಭೀಪಾತಕ ನಾಯಕನರಕ ತಪ್ಪದು. ಈ ಜಂಗಮದ ಭಕ್ತಿ ಕಿಂಚಿತ್ತು ಕೊರತೆ ಇಲ್ಲದ ಹಾಗೆ ಜೀವವುಳ್ಳ ಪರಿಯಂತರ ಇದೆ ಆಚಾರವಾಗಿ, ಇದೇ ಪ್ರಾಣವಾಗಿ ನಡೆದು, ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವನೊಡಗೂಡುವೆನು.
--------------
ಅಕ್ಕಮ್ಮ
ಒಡೆಯರಿಗೆ ಒಡವೆಯನೊಪ್ಪಿಸಲಾರದೆ ಮೊರೆುಡುವ ಮನವ ನಾನೇನೆಂಬೆ ನೆತ್ತಿಯಲ್ಲಿ ಆಲಗ ತಿರುಹುವಂತಪ್ಪ ವೇದನೆಯಹುದೆನಗೆ. ಕೊಯ್ದ ಮೂಗಿಂಗೆ ಕನ್ನಡಿಯ ತೋರುವಂತಪ್ಪ ವೇದನೆಯಹುದೆನಗೆ. ಬೆಂದ ಹುಣ್ಣ ಕಂಬಿಯಲ್ಲಿ ಕೀಸುವಂತಪ್ಪ ವೇದನೆಯಹುದೆನಗೆ. ಕೂಡಲಸಂಗಮದೇ[ವಾ] ನೀ ಮಾಡಿ ನೋಡುವ ಹಗರಣವ ನಾ ಮಾಡಿಹೆನೆಂದಡೆ, ಮನಕ್ಕೆ ಮನ ನಾಚದೆ ಅಯ್ಯಾ 304
--------------
ಬಸವಣ್ಣ
-->