ಅನಂತ ತಪಸ್ಸಿನ ಫಲ ಒದಗಿ,
ಗುರುಕರುಣದಿಂದ ಚಿದ್ಘನಲಿಂಗಾಂಗಸಂಬಂಧ
ವೀರಶೈವೋದ್ಧಾರಕರಾದ ಮಹಾಗಣ ಪ್ರಸನ್ನಪ್ರಸಾದವೆನಿಸುವ
ವಚನಸಾರಾಮೃತನುಭಾವಸುಖಮಂ
ಸವಿಸವಿದುಂಡುಪವಾಸಿ ಬಳಸಿಬ್ರಹ್ಮವಾಗಲರಿಯದೆ
ಒಬ್ಬರಿಗೆ ಹುಟ್ಟಿ,ಒಬ್ಬರಿಗೆ ಹೆಸರಹೇಳಿ,ಶಿವಾಚಾರಮಾರ್ಗಸಂಪನ್ನರೆನಿಸಿ,
ತಮ್ಮ ತಾವರಿಯದೆ, ಹಲವು ಮತದವರ ಎಂಜಲಶಾಸ್ತ್ರವಿಡಿದು,
ಶೈವಕರ್ಮೋಪವಾಸ ಕ್ರಿಯಾಚಾರವಿಡಿದು,
ಜ್ಞಾನವ ಬಳಕೆಯಾಗಿರ್ಪುದೆ ಅಂತರಂಗದ ಚತುರ್ಥಪಾತಕ ಕಾಣಾ
ನಿರವಯಪ್ರಭು ಮಹಾಂತ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.