ಅಥವಾ

ಒಟ್ಟು 7 ಕಡೆಗಳಲ್ಲಿ , 7 ವಚನಕಾರರು , 7 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಒಡಲಿಲ್ಲದ ಭಕ್ತಂಗೆ ನಿರ್ಜೀವಿ ಜಂಗಮ ಸುಳಿದ ನೋಡಯ್ಯಾ. ಆ ಜಂಗಮ ಸುಳಿದಡೆ, ಆ ಭಕ್ತನೋಡಲು ತುಂಬಿ ಜೀವವಾಯಿತ್ತು. ಆ ಜಂಗಮದ ಭೇದವನರಿಯಲಾಗಿ, ಆ ಜೀವವಳಿದು, ನೀ ನಾನೆಂಬ ಭಾವಕ್ಕೆ ನೆಲೆಯಾಯಿತ್ತು. ಆ ಜಂಗಮದ ಕಳಾಪರಿಪೂರ್ಣವನರಿಯಲಾಗಿ, ಆ ಭಾವ ಮಹತ್ವವನೊಳಕೊಂಡಿತ್ತಯ್ಯಾ. ಆ ಒಳಕೊಂಡ ಮಹತ್ವವೆ ಮಹದೊಡಗೂಡಿ ಹೋಯಿತ್ತು. ಹೋದ ಮತ್ತೆ ನಾ ನೀನೆಂಬುದಿಲ್ಲ. ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಸರ್ಪನ ಹೆಡೆಯ ಮೇಲೆಪ್ಪತ್ತೇಳುಲೋಕವ ಕಂಡೆನಯ್ಯಾ. ಎಪ್ಪತ್ತೇಳುಲೋಕದೊಳಗಿಪ್ಪ ಎಪ್ಪತ್ತೇಳು ಕರ್ಪುರದ ಗಿರಿಗಳ ಕಂಡೆನಯ್ಯಾ. ಎಪ್ಪತ್ತೇಳು ಕರ್ಪುರದ ಗಿರಿಗಳ ಮೇಲಿಪ್ಪ ಎಪ್ಪತ್ತೇಳು ಉರಿಯ ಕಂಬವ ಕಂಡೆನಯ್ಯಾ. ಆ ಎಪ್ಪತ್ತೇಳು ಉರಿಯ ಕಂಬದ ಮೇಲಿಪ್ಪ ಎಪ್ಪತ್ತೇಳು ಅರಗಿನ ಪುತ್ಥಳಿಯ ಕಂಡೆನಯ್ಯಾ. ಆ ಎಪ್ಪತ್ತೇಳು ಅರಗಿನ ಪುತ್ಥಳಿಯು ಕರಗಿಹೋದವು. ಆ ಎಪ್ಪತ್ತೇಳು ಕರ್ಪುರದ ಗಿರಿಗಳೆಲ್ಲಾ ಉರಿದುಹೋದವು. ಆ ಎಪ್ಪತ್ತೇಳುಲೋಕವೆಲ್ಲವು ಹಾಳಾಗಿಹೋದವು. ಆ ಸರ್ಪ ಬೆಂದು ಸತ್ತುಹೋಯಿತ್ತು. ಇನ್ನು ನಿಃಪತಿ ನಿರಾಳವೆಂಬ ನಿಜ ಒಳಕೊಂಡ ಬಳಿಕ, ನಾನೆತ್ತ ಹೋದೆನೆಂದರಿಯೆನಯ್ಯಾ. ಶುದ್ಧಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುನದೇವಯ್ಯಾ, ನಿಮ್ಮ ಸರ್ಪನ ಪರಿಯ ನೀವೇ ಬಲ್ಲಿರಲ್ಲದೆ ನಾನೆತ್ತ ಬಲ್ಲೆನಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಮರುಳಶಂಕರದೇವ
ಉರಗನ ಫಣಾಮಣಿಯ ಬೆಳಗಿನಲ್ಲಿ ನಿಂದ ಪ್ರಸದಿ ಕರಿಯ ಕೊಂದು ಹರಿಯ ಬೆಳಗಿನಲ್ಲಿ ನಿಂದ ಪ್ರಸಾದಿ. ಶಿರದ ಮೇಲೆ ನಿಂದ ಗಂಗೆಯ ಬೆಳಗಿನಲ್ಲಿ ನಿಂದ ಪ್ರಸಾದಿ. ಉರಮಧ್ಯದಲ್ಲಿಪ್ಪ ಪರಂಜ್ಯೋತಿಯ ಬೆಳಗಿನಲ್ಲಿ ನಿಂದ ಪ್ರಸಾದಿ. ಪೂರ್ವಪಶ್ಚಿಮ ಏಕವಾದ ಬೆಳಗಿನಲ್ಲಿ ನಿಂದ ಪ್ರಸಾದಿ. ಇಂತೀ ಘನವನೆಲ್ಲ ಒಳಕೊಂಡ ಮಹಾಬೆಳಗಿನಲ್ಲಿ ನಿಂದ ಪ್ರಸಾದಿ. ಅಯ್ಯಾ ಚೆನ್ನಮಲ್ಲೇಶ್ವರಾ, ಆ ಪ್ರಸಾದಿಯ ಪ್ರಸಾದವ ಕೊಂಡು ನಾ ಉರಿಯುಂಡ ಕರ್ಪುರದಂತಾದೆನಯ್ಯಾ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಗೃಹ ಗ್ರಾಮ ನಾಡು ದೇಶಂಗಳೆಂಬ ಭೂಮಿಯ ಆಗು_ಚೇಗೆಯ ರಾಗ_ದ್ವೇಷ, ಮರಳಿ ಭೂಮಿಯ ಆಶೆ, ಅಲ್ಪಭೂಮಿಯ ಆಶೆ. ಅಲ್ಪಭೂಮಿ ಅಲ್ಪಂಗಲ್ಲದೆ ಪಂಚಾಶತಕಕೋಟಿ ಯೋಜನ ಭೂಮಿಯನೂ ಒಳಕೊಂಡ ಬ್ರಹ್ಮಾಂಡ ಅಂತಹ ಬ್ರಹ್ಮಾಂಡವನೇಕವನೂ ಆಭರಣವ ಮಾಡಿಯಿಟ್ಟುಕೊಂಡಿಪ್ಪ, ಅಂತಹ ಆಭರಣದಿಂದ ಪೂಜೆಗೊಂಡಿಪ್ಪ, ಲಿಂಗವೇ ಪ್ರಾಣವಾಗಿ ಭೂಮಿಯಲ್ಲಿ ನಿಂದ ಲಿಂಗೈಕ್ಯಂಗೆ ಭೂಮಿಯ ಚಿಂತೆ ಇನ್ನೆಲ್ಲಿಯದೋ ? ಕಾಣೆ. ಕೋಟಿ ಕ್ಷಿತಿಪರಿಯಂತರ ಧನದಾಗುನಿರೋಧ ಆಗುಚೇಗೆಯ ನಿರೋಧಸುಖದುಃಖ ತನುಮನಧನಕಾಂಕ್ಷೆ ಅಲ್ಪಂಗಲ್ಲದೆ ಮಹಾಲಕ್ಷ್ಮಿಯೊಡೆಯನಾಗಿ, ಮಹದೈಶ್ವರ್ಯಸಂಪನ್ನನಾಗಿ, ಹಿರಣ್ಯಪತಿಯೇ ಪ್ರಾಣವಾಗಿ, ಹಿರಣ್ಯಪತಿಯೇ ಕಾಯವಾದ ಮಹಾಲಿಂಗೈಕ್ಯಂಗೆ ಧನದ ಚಿಂತೆ ಇನ್ನೆಲ್ಲಿಯದು ? ಉತ್ತಮ ಮಧ್ಯಮ ಕನಿಷ* ನಿಕೃಷ್ಟ ಹಸ್ತಿನಿ ಚಿತ್ತಿನಿ ಶಂಕಿನಿ ಪದ್ಮಿನಿಯರೆಂಬ ನಾಲ್ಕು ತೆರದ ಸ್ತ್ರೀಯರ ಸಂಗ; ಪಾತರ, ದಾಸಿ, ವೇಶ್ಯಾಗಮನ, ಪರಸ್ತ್ರೀ ಪರಸಂಗ ಅವಿಚಾರ ಅನ್ಯಜಾತಿಯ ಸಂಗ ಇವುಗಳಿಗಾಶಿಸುವ ಕ್ರೂರಾತ್ಮಂಗೆ ಹೆಣ್ಣಿನ ಚಿಂತೆಯಲ್ಲದೆ, ಇಚ್ಛಾಶಕ್ತಿ ಜ್ಞಾನಶಕ್ತಿ ಕ್ರಿಯಾಶಕ್ತಿಯ ವರ್ತನೆಯ ಮೀರಿ ಮಹಾಶಕ್ತಿ ತಾನಾಗಿ(ಹ) ಮಹಾಪುರುಷನಲ್ಲಿ ಮಹಾಸಂಗವಾದ ಮಹಾಶರಣಂಗೆ ಹೆಣ್ಣಿನ ಚಿಂತೆ ಇನ್ನೆಲ್ಲಿಯದೋ ? ವೇದಶಾಸ್ತ್ರ ಪುರಾಣಾಗಮಾದಿಯಾಗಿ ಅಷ್ಟಾದಶವಿದ್ಯಂಗಳನೋದುವ ಕೇಳುವ ವಿಚಾರಿಸುವ ತಿಳಿವ ವಿದ್ಯದ ಚಿಂತೆ ಅಲ್ಪಮತಿಯ ಅಲ್ಪಂಗಲ್ಲದೆ ವಾಗ್ದೇವತೆಗೆ ಅಧಿದೈವಮಪ್ಪ ಮಹಾವಿದ್ಯೆಯೇ ದೇಹವಪ್ಪ ವಿದ್ಯಾರೂಪ ಮಹಾದೇವನೇ ಪ್ರಾಣವಾಗಿ, ಮಹಾದೇವನೇ ಕಾಯವಾಗಿ ಮಹಾದೇವನೇ ಜಿಹ್ವೆಯಾಗಿ, ಮಹಾದೇವನೇ ಮನವಾಗಿಹ ಮಹಾಲಿಂಗೈಕ್ಯಂಗೆ ಇನ್ನುಳಿದ ಚಿಂತೆ ಇನ್ನೆಲ್ಲಿಯದೋ ? ಭಕ್ತಕಾಯ ಶಿವನಾಗಿ ಶಿವನೇ ಪ್ರಾಣವಾಗಿ ನಿಂದ ಸದ್ಭಕ್ತಂಗೆ ಆವ ಚಿಂತೆಯೂ ಇಲ್ಲ, ಆತ ನಿಶ್ಚಿಂತ, ಪರಮಸುಖಪರಿಣಾಮಿ ಸತ್ಯನು ನಿತ್ಯನು ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಆಕಾರವೆಂಬೆನೆ ನಿರಾಕಾರವಾಗಿದೆ ನಿರಾಕಾರವೆಂಬೆನೆ ಅತ್ತತ್ತ ತೋರುತ್ತದೆ. ತನ್ನನಳಿದು ನಿಜವುಳಿದ ಮಹಾಲಿಂಗ ತ್ರಿಪುರಾಂತಕನ ನಿಲವ ಕಂಡು ಒಳಕೊಂಡ ಮರುಳಶಂಕರದೇವರ ಮೂರ್ತಿಯ ನಿಮ್ಮಿಂದ ಕಂಡು ಬದುಕಿದೆನು ಕಾಣಾ ಸಂಗನಬಸವಣ್ಣಾ.
--------------
ಕಿನ್ನರಿ ಬ್ರಹ್ಮಯ್ಯ
ಬಸವಣ್ಣನೆ ಪ್ರಾಣಲಿಂಗವೆಂದು ಭಾವಿಸಿ, ದೃಷ್ಟಿನಟ್ಟು ಸೈವೆರಗಾದುದ ಕಂಡೆ_ಕಲ್ಪಿಸಿ ಮನ ನಟ್ಟು ನಿಬ್ಬೆರಗಾಯಿತ್ತಯ್ಯಾ ! ಗುಹೇಶ್ವರಾ ನಿಮ್ಮಲ್ಲಿ, ಸರ್ವನಿರ್ವಾಣಿ ಸಂಗನಬಸವಣ್ಣನೆ ಎನ್ನ ಪ್ರಾಣಲಿಂಗವೆಂದರಿದು ನೀನೆನ್ನ ಒಳಕೊಂಡ ಗುರುವೆಂದು ಕಂಡೆನಯ್ಯಾ ನಿಮ್ಮ ಧರ್ಮ ನಿಮ್ಮ ಧರ್ಮ
--------------
ಅಲ್ಲಮಪ್ರಭುದೇವರು
ಕಾಯ ಲಿಂಗಕ್ಕರ್ಪಿತವಾದಡೆ ಕರ್ಮವಿಲ್ಲ, ಜೀವ ಲಿಂಗಕ್ಕರ್ಪಿತವಾದಡೆ ಜನಿತವಿಲ್ಲ, ಭಾವಲಿಂಗಕ್ಕರ್ಪಿತವಾದಡೆ ಭ್ರಮೆಯಿಲ್ಲ, ಅರಿವು ಲಿಂಗಕ್ಕರ್ಪಿತವಾದ ಬಳಿಕ ಪ್ರಸಾದವ ಗ್ರಹಿಸಿದನಾಗಿ, ಕುರುಹಿಲ್ಲ, ಮಾಯಾಪ್ರಪಂಚನತಿಗಳೆದು ನಿಮಗರ್ಪಿಸಬಲ್ಲನಾಗಿ, ಆತನು ಶರಣನು- ಬೆಚ್ಚಂತೆ, ಬೆರಸಿ ಅಚ್ಚೊತ್ತಿದಂತೆ, ಅಪ್ಪು ಒಳಕೊಂಡ ವಾರಿಕಲ್ಲಂತೆ, ಜ್ಯೋತಿಯುಂಡ ತೈಲದಂತೆ, ಜಲವುಂಡ ಮುತ್ತಿನಂತೆ, ಬಯಲುಂಡ ಬೆಳಗಿನಂತೆ ಇರ್ದನಾಗಿ ಮಹಾಘನ ಸದ್ಗುರು ಸಿದ್ಧಸೋಮನಾಥಾ ನಿಮ್ಮ ಶರಣರ ಹೆಸರಡಗಿದ ಲಿಂಗೈಕ್ಯರೆಂದೆ.
--------------
ಅಮುಗಿದೇವಯ್ಯ
-->