ಅಥವಾ

ಒಟ್ಟು 3 ಕಡೆಗಳಲ್ಲಿ , 3 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜೀವನ ಬಾಗಿಲಲ್ಲಿ ಭ್ರಮೆಯ ತಡೆದು, ಆತ್ಮನ ಬಾಗಿಲಲ್ಲಿ ಪ್ರಕೃತಿಯ ತಡೆದು, ಪರಮನ ಬಾಗಿಲಲ್ಲಿ ಚಿತ್ತವ ತಡೆದು, ಮಿಕ್ಕಾದ ವಾಯುಗಳ ದಿಸೆಯಿಂದ ಇಂದ್ರಿಯಂಗಳ ತಿಳಿದು, ಇಂತೀ ಜೀವಾತ್ಮ ಪರಮ ತ್ರಿವಿಧಗುಣಂಗಳು ತಲೆದೋರದೆ ಕರ್ಮೇಂದ್ರಿಯ ಭಾವೇಂದ್ರಿಯ ಜ್ಞಾನೇಂದ್ರಿಯ ಇಂತೀ ತ್ರಿವಿಧಸ್ವಾನುಭಾವದಲ್ಲಿ ಅಡಗಿ, ಓಂಕಾರದ ಉಲುಹು ನಷ್ಟವಾಗಿ ಷಡಕ್ಷರ ಪಂಚಾಕ್ಷರ ಮೂಲದ ಉಭಯದ ಮೂಳೆ ಮುರಿದು ಐವತ್ತೊಂದು ಭೇದದ ಸೂತಕದ ಸುಳುಹಡಗಿ ಹಿಂದುಮುಂದಣ ಎಚ್ಚರಿಕೆ ಸುಮ್ಮಖ ತಿರುಗಲಾಗೆನುತ್ತಿದ್ದೆನು. ಕೂಡಲಸಂಗಮದೇವರಲ್ಲಿ ಬಸವಣ್ಣನ ಮುಂದಣ ಎಚ್ಚರಿಕೆ ಕುಂದದಂತೆ ಉಗ್ಗಡಿಸುತ್ತಿದ್ದೆನು.
--------------
ಉಗ್ಘಡಿಸುವ ಗಬ್ಬಿದೇವಯ್ಯ
ಅಕಟಕಟಾ ಬೆಡಗು ಬಿನ್ನಾಣ ಒಂದೇ ನೋಡಾ. ಓಂ ನಮಃ ಶಿವಾಯ ಓಂ ನಮಃ ಶಿವಾಯ ಓಂ ನಮಃ ಶಿವಾಯ ಎಂಬುದೆ ಯಂತ್ರ. ಓಂ ನಮಃ ಶಿವಾಯ ಓಂ ನಮಃ ಶಿವಾಯ ಓಂ ನಮಃ ಶಿವಾಯ ಎಂಬುದೆ ತಂತ್ರ. ಓಂ ನಮಃ ಶಿವಾಯ ಓಂ ನಮಃ ಶಿವಾಯ ಓಂ ನಮಃ ಶಿವಾಯ ಎಂಬುದೆ ಮಂತ್ರ. ಪ್ರಣಮಪಂಚಾಕ್ಷರಿಯ ಮಂತ್ರವನುಚ್ಚರಿಸುವರೆಲ್ಲರೂ ಅಪ್ರಮಾಣಿಕರು ನೋಡಾ, ಅಪ್ರಣಮ ಪಂಚಾಕ್ಷರ ಮಂತ್ರವ ವಿಶ್ವಾಸದಿಂದವಗ್ರಹಿಸಿ ಮಂತ್ರಾರ್ಥವ ತಿಳಿದು ಉಚ್ಚರಿಸಲರಿಯದ ಕಾರಣ ಮತ್ತೆ ಆಕಾರ ಉಕಾರ ಮಕಾರದ ಮೂಲವಂ ಭೇದಿಸಿ, ಓಂಕಾರದ ನೆಲೆಯಂ ತಿಳಿದು, ಆ ಓಂಕಾರದಲ್ಲಿ ಪಂಚವರ್ಣದ ಲಕ್ಷಣವನರಿದು, ಓಂ ನಮಃ ಶಿವಾಯ ಓಂ ನಮಃ ಶಿವಾಯ, ಓಂ ನಮಃ ಶಿವಾಯ ಎಂದು ಸ್ಮರಿಸಬಲ್ಲಡೆ ಇದೆ ಜಪ, ಇದೇ ತಪ, ಇದೇ ಸರ್ವಸಿದ್ಧಿಯಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.
--------------
ಉರಿಲಿಂಗಪೆದ್ದಿ
ಓಂಕಾರದ ಪೀಠದ ಮೇಲೆ ನಿಶ್ಶಬ್ದವೆಂಬ ಲಿಂಗವ ನೆಲೆಗೊಳಿಸಿ, ನಿರಾಮಯದಲ್ಲಿ ನಿಂದು ನಿರಾಳನಾಗಿಹುದೇ ನಿರಾಧಾರಪೂಜೆ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
-->