ಅಥವಾ

ಒಟ್ಟು 3 ಕಡೆಗಳಲ್ಲಿ , 3 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಓಂಕಾರದಲ್ಲಿ ಉಗ್ಘಡಿಸುತ್ತಿರಲಾಗಿ, ಕೆಲಬಲದವರು ಓಡರಿನ್ನೆಂತೊ ? ಅದು ಎನ್ನಾಜ್ಞೆಯಲ್ಲ; ಎನ್ನೊಡೆಯನ ಹಂದೆತನ. ಸುಮ್ಮನಿರ್ದಡೆ ಎನ್ನ ಕೇಡು, ಹೇಳಿದಡೆ ಒಡೆಯಂಗೆ ಹಾನಿ. ಕೂಡಲಸಂಗಮದೇವರಲ್ಲಿ ಬಸವಣ್ಣಾ ಹಿಂಗದಿರು ನಿನ್ನ ಭೃತ್ಯನೆಂದು.
--------------
ಉಗ್ಘಡಿಸುವ ಗಬ್ಬಿದೇವಯ್ಯ
ಅಕಟಕಟಾ ಬೆಡಗು ಬಿನ್ನಾಣ ಒಂದೇ ನೋಡಾ. ಓಂ ನಮಃ ಶಿವಾಯ ಓಂ ನಮಃ ಶಿವಾಯ ಓಂ ನಮಃ ಶಿವಾಯ ಎಂಬುದೆ ಯಂತ್ರ. ಓಂ ನಮಃ ಶಿವಾಯ ಓಂ ನಮಃ ಶಿವಾಯ ಓಂ ನಮಃ ಶಿವಾಯ ಎಂಬುದೆ ತಂತ್ರ. ಓಂ ನಮಃ ಶಿವಾಯ ಓಂ ನಮಃ ಶಿವಾಯ ಓಂ ನಮಃ ಶಿವಾಯ ಎಂಬುದೆ ಮಂತ್ರ. ಪ್ರಣಮಪಂಚಾಕ್ಷರಿಯ ಮಂತ್ರವನುಚ್ಚರಿಸುವರೆಲ್ಲರೂ ಅಪ್ರಮಾಣಿಕರು ನೋಡಾ, ಅಪ್ರಣಮ ಪಂಚಾಕ್ಷರ ಮಂತ್ರವ ವಿಶ್ವಾಸದಿಂದವಗ್ರಹಿಸಿ ಮಂತ್ರಾರ್ಥವ ತಿಳಿದು ಉಚ್ಚರಿಸಲರಿಯದ ಕಾರಣ ಮತ್ತೆ ಆಕಾರ ಉಕಾರ ಮಕಾರದ ಮೂಲವಂ ಭೇದಿಸಿ, ಓಂಕಾರದ ನೆಲೆಯಂ ತಿಳಿದು, ಆ ಓಂಕಾರದಲ್ಲಿ ಪಂಚವರ್ಣದ ಲಕ್ಷಣವನರಿದು, ಓಂ ನಮಃ ಶಿವಾಯ ಓಂ ನಮಃ ಶಿವಾಯ, ಓಂ ನಮಃ ಶಿವಾಯ ಎಂದು ಸ್ಮರಿಸಬಲ್ಲಡೆ ಇದೆ ಜಪ, ಇದೇ ತಪ, ಇದೇ ಸರ್ವಸಿದ್ಧಿಯಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.
--------------
ಉರಿಲಿಂಗಪೆದ್ದಿ
ಮಹಾಘನಲಿಂಗದ ನಿಜಘನವೆಂಬ ಚಿದ್ಘನಾತ್ಮಕ ಶರಣನ ಲೀಲೆಯಿಂದ ಮಹಾಜ್ಯೋತಿ ಹುಟ್ಟಿತ್ತು, ಆ ಜ್ಯೋತಿಯ ಬೆಳಗಿನಲ್ಲಿ ಅರಿವು ಮರವೆಂಬ ಭೂತಾತ್ಮ ಮಹಾತ್ಮಂಗಳು ಹುಟ್ಟಿದವು. ಆತ್ಮಂಗಳಿಂದ ಜ್ಞಾನಾತ್ಮಕ, ಶುದ್ಧಾತ್ಮಕ, ನಿರ್ಮಲಾತ್ಮಕ, ಪರಮಾತ್ಮ, ಅಂತರಾತ್ಮ, ಜೀವಾತ್ಮಂಗಳು ಹುಟ್ಟಿದವು. ಆ ಜ್ಞಾನಾತ್ಮಕನಲ್ಲಿ ಮಹಾನುಭಾವಜ್ಞಾನಂಗಳು ಹುಟ್ಟಿ ತ್ರಿಯಕ್ಷರಾದವು. ಆ ತ್ರಿಯಕ್ಷರಂಗಳಲ್ಲಿ ಓಂಕಾರ ಹುಟ್ಟಿತ್ತು. ಆ ಓಂಕಾರದಲ್ಲಿ ಪಂಚಾಕ್ಷರಂಗಳು ಹುಟ್ಟಿದವು. ಆ ಪಂಚಾಕ್ಷರಂಗಳಲ್ಲಿ ಅಯಿವತ್ತೆರಡು ಅಕ್ಷರಂಗಳು ಹುಟ್ಟಿದವು. ಇಂತೀ ಅಕ್ಷರಂಗಳೆಲ್ಲವನು ಷಡಾತ್ಮಕರ ಪ್ರಾಣವೆಂದಾತ ನಮ್ಮ ಅಂಬಿಗರ ಚೌಡಯ್ಯ.
--------------
ಅಂಬಿಗರ ಚೌಡಯ್ಯ
-->