ಅಥವಾ

ಒಟ್ಟು 8 ಕಡೆಗಳಲ್ಲಿ , 2 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

``ದಂಡಶ್ಚ ತಾರಕಾಕಾರೋ ಭವತಿ | ಓಂ ಸಾರ್ವತ್ಮಾ ದೇವತಾ | ಮಕಾರೇ ಚ ಲಯಂ ಪ್ರಾಪ್ತೇ ಪಂಚದಶಮೇ ಪ್ರಣವಾಂಶಕೇ ||'' ಅಕಾರವೆಂಬ ಪ್ರಣವದಲ್ಲಿ- ``ಕುಂಡಲಶ್ಚ ಅರ್ಧಚಂದ್ರೋ ಭವತಿ | ಓಂ ಪರಮಾತ್ಮಾ ದೇವತಾ | ಅಕಾರೇ ಚ ಲಯಂ ಪ್ರಾಪ್ತೇ ಷೋಡಶೇ ಪ್ರಣವಾಂಶಕೇ ||'' ಉಕಾರವೆಂಬ ಪ್ರಣವದಲ್ಲಿ- ``ಜ್ಯೋತಿಶ್ಚ ದರ್ಪಣಾಕಾರೋ ಭವತಿ | ಓಂ ಶಿವಾತ್ಮಾ ದೇವತಾ | ಉಕಾರೇ ಚ ಲಯಂ ಪ್ರಾಪ್ತೇ ಸಪ್ತದಶ ಪ್ರಣವಾಂಶಕೇ ||'' ``ಮಕಾರೇ ಚ ಅಕಾರೇಚ ಉಕಾರೇಚ ನಿರಾಮಯಂ | ಇದಮೇಕಂ ಸಮುತ್ಪನ್ನಂ ಓಂ ಇತಿ ಜ್ಯೋತಿರೂಪಕಂ || ಪ್ರಥಮಂ ತಾರಕಾರೂಪಂ ದ್ವಿತೀಯಂ ದಂಡ ಉಚ್ಯತೇ | ತೃತೀಯಂ ಕುಂಡಲಾಕಾರಂ ಚತುರ್ಥಂ ಅರ್ಧಚಂದ್ರಕಂ || ಪಂಚಮಂ ದರ್ಪಣಾಕಾರಂ ಷಷ್ಠಂ ಜ್ಯೋತಿರೂಪಕಂ | ಇತಿ ಪ್ರಣವಃ ಜ್ಞೇಯಂ ಏತದ್ಗೋಪ್ಯಂ ವರಾನನೇ || ಓಂಕಾರ ಪ್ರಭವೋ ವೇದಃ ಓಂಕಾರಂ ಪ್ರಭವ ಸ್ವರಃ | ಓಂಕಾರಪ್ರಭವಾ ಭೂಃ ಓಂಕಾರಪ್ರಭವಾ ಭುವಃ || ಓಂಕಾರಪ್ರಭವಾ ಸ್ವಹಃ ಓಂಕಾರ ಪ್ರಭವಾ ಮಹಃ | ಓಂಕಾರಪ್ರಭವೋ ಜನಃ ಓಂಕಾರ ಪ್ರಭವಂ ತಪಃ || ಓಂಕಾರಪ್ರಭವಂ ಸತ್ಯಂ ಓಂಕಾರ ಪ್ರಭವೋ ರವಿ ಃ | ಓಂಕಾರಪ್ರಭವಸ್ಸರ್ವಂ ತ್ರೈಲೋಕ್ಯಂ ಸಚರಾಚರಂ || ಸರ್ವವ್ಯಾಪಕಮೋಂಕಾರಂ ಮಂತ್ರಸ್ಯಾತ್ರ ನ ಸಂಭವೇತ್ | ಪ್ರಣವೋಹಿ ಪರಬ್ರಹ್ಮ ಪ್ರಣವಃ ಪರಮಂ ಪದಂ || ಓಂಕಾರಂ ನಾದರೂಪಂ ಚ ಓಂಕಾರಂ ಬಿಂದುರೂಪಕಂ | ಓಂಕಾರಂ ಚ ಕಲಾರೂಪಂ ಓಂಕಾರಂ ಮಂತ್ರರೂಪಕಂ || ಓಂಕಾರಂ ವ್ಯಾಪಿ ಸರ್ವತ್ರ ಓಂಕಾರಂ ಗೋಪ್ಯಮಾನನಂ | ಇತಿ ಪ್ರಣವಃ ವಿಜ್ಞೇಯಃ ದುರ್ಲಭಂ ಕಮಲಾನನೇ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಇದಕ್ಕೆ ಓಂಕಾರೋಪನಿಷತ್ : ಮಕಾರವೆಂಬ ಪ್ರಣವದಲ್ಲಿ - ``ದಂಡಶ್ಚ ತಾರಕಾಕಾರೋ ಭವತಿ ಓಂ ಸರ್ವಾತ್ಮಾ ದೇವತಾ | ಮಕಾರೇ ಚ ಲಯಂ ಪ್ರಾಪ್ತೇ ದ್ವಿತೀಯಂ ಪ್ರಣವಾಂಶಕೇ ||'' ಅಕಾರವೆಂಬ ಪ್ರಣವದಲ್ಲಿ - ``ಕುಂಡಲಶ್ಚ ಅರ್ಧಚಂದ್ರೋ ಭವತಿ ಓಂ ಪರಾತ್ಪರಾತ್ಮೋ ದೇವತಾ | ಅಕಾರೇ ಚ ಲಯಂ ಪ್ರಾಪ್ತೇ ತ್ರಿಮಿಶಪ್ರಣವಾಂಶಕೇ ||'' ಉಕಾರವೆಂಬ ಪ್ರಣವದಲ್ಲಿ- ``ದರ್ಪಣಶ್ಚ ಜ್ಯೋತಿರೂಪೋ ಭವತಿ ಓಂ ಶಿವಾತ್ಮಾ ದೇವತಾ | ಉಕಾರೇ ಚ ಲಯಂ ಪ್ರಾಪ್ತೇ ಚತುರ್ವಿಂಶ ಪ್ರಣವಾಂಶಕೇ ||'' ಮಕಾರೇ ಚ ಅಕಾರೇ ಚ ಉಕಾರೇ ಚ ನಿರಾಮಯಂ | ಇದಮೇಕಂ ಸಮುತ್ಪನ್ನಂ ಓಮಿತಿ ಜ್ಯೋತಿರೂಪಕಂ || ಪ್ರಥಮಂ ತಾರಕರೂಪಂ ದ್ವಿತೀಯಂ ದಂಡಉಚ್ಯತೇ | ತೃತೀಯಂ ಕುಂಡಲಾಕಾರಂ ಚತುರ್ಥಶ್ಚಾರ್ಧಚಂದ್ರಕಂ || ಪಂಚಮಂ ದರ್ಪಣಾಕಾರಂ ಷಷ*ಂ ಜ್ಯೋತಿಸ್ವರೂಪಕಂ | ಇತಿ ಪ್ರಣವಾ ವಿಜ್ಞೇಯಂ ಏತದ್ಗೌಪ್ಯಂ ವರಾನನೇ || ಓಂಕಾರಪ್ರಭವಾ ವೇದಾಃ ಓಂಕಾರ ಪ್ರಭವಾತ್ ಸ್ವರಾಃ | ಓಂಕಾರಪ್ರಭವಾ ಭೂಃ ಓಂಕಾರ ಪ್ರಭವಾ ಭುವಃ || ಓಂಕಾರಪ್ರಭವಾ ಸ್ವಹಃ ಓಂಕಾರ ಪ್ರಭವೋ ಮಹಃ | ಓಂಕಾರ ಪ್ರಭವೋ ಜನಃ ಓಂಕಾರ ಪ್ರಭವೋ ತಪಃ || ಓಂಕಾರಪ್ರಭವಂ ಸತ್ಯಂ ಓಂಕಾರಪ್ರಭವೋ ರವಿಃ | ಓಂಕಾರ ಪ್ರಭವಾತ್ಸರ್ವಂ ತ್ರೈಲೋಕ್ಯಂ ಸಚರಾಚರಂ || ಸರ್ವವ್ಯಾಪಕಮೋಂಕಾರಂ ಮಂತ್ರಾನ್ಯತ್ರ ನ ಶೋಭಯೇತ್ | ಪ್ರಣವೋಹಿ ಪರಬ್ರಹ್ಮ ಪ್ರಣವೋಹಿ ಪರಮಂ ಪದಂ || ಓಂಕಾರಂ ನಾದರೂಪಂ ಚ ಓಂಕಾರಂ ಬಿಂದುರೂಪಕಂ | ಓಂಕಾರಂ ಚ ಕಲಾರೂಪಂ ಓಂಕಾರಂ ಮಂತ್ರರೂಪಕಂ || ಓಂಕಾರಂ ವ್ಯಾಪಿಸರ್ವತ್ರ ಓಂಕಾರಂ ಗೌಪ್ಯಮಾನನಂ | ಇತಿ ಪ್ರಣವಂ ವಿಜ್ಞೇಯಂ ದುರ್ಲಭಂ ಕಮಲಾನನೇ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಚ್ಚಭವಿತನದಿಂದ ನಿಚ್ಚನರಕಕ್ಕಿಳಿವ ಕರ್ಮಚಾಂಡಾಲವಿಪ್ರರು ನೀವು ಕೇಳಿರೇ ! ಈಶಭಕ್ತರ ಕಂಡು ದೂಷಿಸಿ ನರಕಕ್ಕಿಳಿವ ಶಾಪಹತರು ನೀವು ಕೇಳಿರೇ ! ವಿಭೂತಿಯನೊಲ್ಲದೆ ಬಿಳೆಯ ಮಣ್ಣನಿಡುವ ಶ್ವಪಚರೆಲ್ಲಾ ನೀವು ಕೇಳಿರೇ ! ಹರಿಯೂ ಹರನೂ ಹರಿಯೆಂದು ಗಳುಹುವ ಮರುಳವಿಪ್ರರರು ನೀವು ಕೇಳಿರೇ ! ಆದಿಯಲ್ಲಿ ಶ್ರೀವಿಷ್ಣು ಮೇದಿನಿಯರಿಯೆ ಒಂದು ನಯನವನು ಪುಷ್ಪಮಾಗಿತ್ತು ಪಡೆಯನೇ ವೈಕುಂಠವನು ? ವೇದಕ್ಕೆ ನೆಲಗಟ್ಟಾವುದೆಂದು ಬಲ್ಲಡೆ ನೀವು ಹೇಳಿರೆ ! ಬ್ರಾಹ್ಮಣಿಕೆಗೆ ನೆಲೆಗಟ್ಟಾವುದೆಂಬುದು ಬಲ್ಲಡೆ ನೀವು ಹೇಳಿರೆ ! ವೇದಕ್ಕೆ ನೆಲೆಗಟ್ಟು ಓಂಕಾರ, ಬ್ರಾಹ್ಮಣಕ್ಕೆ ನೆಲಗಟ್ಟು ಗಾಯತ್ರೀ. ಓಂಕಾರವೇನ ಹೇಳಿತ್ತು, ಗಾಯತ್ರಿಯೇನ ಹೇಳಿತ್ತೆಂಬುದ ತಿಳಿದು ವಿಚಾರಿಸಿಕೊಳ್ಳಿರೇ ಶ್ರುತಿಗಳೊಳಗೆ. ಅದೆಂತೆಂದಡೆ: ಓಂಕಾರಪ್ರಭವಾ ವೇದಾ ಓಂಕಾರಪ್ರಭವಾಸ್ಸ್ವರಾಃ ಓಂಕಾರಪ್ರಭವಂ ಸರ್ವಂ ತ್ರೈಲೋಕ್ಯಂ ಸಚರಾಚರಂ ಇನ್ನು ಗಾಯತ್ರಿ: ಓಂ ಮಹಃ ಓಂ ಜನಃ ಓಂ ತಪಃ ಓಂ ಸತ್ಯಂ ಓಂ ತತ್ಸವಿತುರ್ವರೇಣ್ಯಂ ಭರ್ಗೋ ದೇವಸ್ಯ ಧೀಮಹಿ ಧಿಯೋ ಯೋ ನಃ ಪ್ರಚೋದಯಾತ್' ಎಂದು ಶ್ರಾದ್ಧ ತದ್ದಿನ ಪಿತ್ಯಕಾರ್ಯವ ಮಾಡುವಲ್ಲಿ ವಿಶ್ವದೇವರ ಸ್ಥಾಪನೆಯಂ ಮಾಡುವಿರಿ. `ವಿಶ್ವದೇವಾಯ ಸ್ವಾಹಾ' ಎಂದು ಅರ್ಚನೆ ವಂದನೆಯಂ ಮಾಡುವಿರಿ ಯಥೋಕ್ತವಾಗಲಿ ಯಥಾಕಾಲವಾಗಲೆಂದು ಬೇಡಿಕೊಂಬಿರಿ. `ಗಯಾಯಾಂ ಶ್ರೀರುದ್ರಪಾದೇ ದತ್ತಮಸ್ತು' ಎಂದೆಂಬಿರಲ್ಲಾ `ಗಯಾಯಾಂ ಶ್ರೀವಿಷ್ಣುಪಾದೇ ದತ್ತಮಸ್ತು' ಎಂದೆಂದುಂಟಾದಡೆ ಹೇಳಿರೇ. ಸತಿಗೆ ಪಿಂಡವ ಕೊಡುವಲ್ಲಿ ವಸುರುದ್ರಾದಿತ್ಯರೂಪೇಭ್ಯೋ ಮಧ್ಯಪಿಂಡಸ್ತು ಪುತ್ರದಃ ವೇದೋಕ್ತರುದ್ರನಿರ್ಮಾಲ್ಯಂ ಉರಸ್ಥಾನ್ಯಪವಿತ್ರಕಂ ಆದಿಪಿಂಡಾಂತ್ಯಪಿಂಡಂ ಚ ವರ್ಜಯೇತ್ ಸತತಂ ಬುಧಃ ಎಂದು ರುದ್ರಪಿಂಡದಿಂದ ಉತ್ಪತ್ಯವಾಗಿ ಮರಳಿ ಭಕ್ತರ ಜರಿದು ಗಳಹುವಾ ಪಾತಕರೆಲ್ಲರೂ ನೀವು ಕೇಳಿರೇ ಭಕ್ತರು ಕೊಂಬುದೇ ಪಾದೋದಕ ಪ್ರಸಾದ, ನೀವು ಉಂಬುದೇ ಭೂತಶೇಷ. ಅದೆಂತೆಂದೊಡೆ ಮಂತ್ರ: `ಪ್ರಾಣಾಯ ಸಾಹಾ ಅಪಾನಾಯ ಸ್ವಾಹಾ ವ್ಯಾನಾಯ ಸ್ವಾಹಾ ಉದಾನಾಯ ಸ್ವಾಹಾ ಸಮನಾಯ ಸ್ವಾಹಾ' ಎಂದು ಪಂಚಭೂತಕ್ಕೆ ಬಲಿಯನಿಕ್ಕಿ ಆ ಭೂತಶೇಷವ ತಿಂಬ ಭೂತಪ್ರಾಣಿಯ ಲಿಂಗಪ್ರಾಣಿಗೆ ಸರಿಯೆಂಬವನ ಬಾಯಲ್ಲಿ ಕೆರ್ಪನಿಕ್ಕಿ ಈಶಭಕ್ತಿಯ ಮೆರೆವ ನಮ್ಮ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಐವತ್ತೆರಡು ಅಕ್ಷರಕ್ಕೆ ಈ ಪ್ರಣವವೇ ಉತ್ಪತ್ತಿ-ಸ್ಥಿತಿ-ಲಯಸ್ಥಾನ. ಅಜಪೆ ಗಾಯತ್ರಿ ಪ್ರಾಣಾಯಾಮನಕ್ಕೆ ಪ್ರಣವವೇ ಉತ್ಪತ್ತಿ-ಸ್ಥಿತಿ-ಲಯಸ್ಥಾನ. ಅನೇಕ ವೇದಾಗಮ ಶಾಸ್ತ್ರಪುರಾಣಂಗಳಿಗೆ ಪ್ರಣವವೇ ಉತ್ಪತ್ತಿ-ಸ್ಥಿತಿ-ಲಯಸ್ಥಾನ. ಬ್ರಹ್ಮ ವಿಷ್ಣು ರುದ್ರ ಈಶ್ವರ ಸದಾಶಿವ ಮೊದಲಾದ ಸಮಸ್ಥ ದೇವರ್ಕಳಿಗೆ ಪ್ರಣವವೇ ಉತ್ಪತ್ತಿ-ಸ್ಥಿತಿ-ಲಯಸ್ಥಾನ. ಪ್ರಣವವೇ ಪರಂಜ್ಯೋತಿ, ಪ್ರಣವವೇ ಪರಮಾನಂದ, ಪ್ರಣವವೇ ಪರಬ್ರಹ್ಮ, ಪ್ರಣವವೇ ಅಖಂಡ ಲೋಕಾದಿಲೋಕಕ್ಕೆ ಮೂಲಪ್ರಣವ ಓಂ ನಮಃಶಿವಾಯ ಪ್ರಣವ. ಓಂ ನಮಃ ಶಿವಾಯ ಪ್ರಣವ ಸಪ್ತಕೋಟಿ ಮಂತ್ರಗಳ ಸಾರ ; ಅನಂತಕೋಟಿ ವೇದಾಗಮಶಾಸ್ತ್ರಪುರಾಣಂಗಳ ಸಾರ. ಇದಕ್ಕೆ ಈಶ್ವರ ಉವಾಚ : ``ಸಪ್ತಕೋಟಿ ಮಹಾಮಂತ್ರ ಚಿತ್ತವ್ಯಾಕುಲ ಕಾರಣಂ | ಏಕಯೇಕಾಕ್ಷರಂ ದೇವೀ ತೂರ್ಯಾತೀತಂ ಮನೋಲಯಃ || ಸಪ್ತಕೋಟಿ ಮಹಾಮಂತ್ರಂ ಉಪಮಂತ್ರಂ ಸನೇಕತಾ | ಓ ಮಿತ್ಯೇಕಾಕ್ಷರಂ ಮೂಲಂ ಇತಿ ಭೇದಂ ವರಾನನೇ ||'' ಇಂತೆಂದುದಾಗಿ, ಇದಕ್ಕೆ ಚಿತ್ಪಿಂಡಾಗಮೇ : ``ಓಂಕಾರೇ ಬೀಜರೂಪಂ ಚ ವೃಕ್ಷಂ ವಿಶ್ವವಿಶಾಲಯೋಃ | ಓಮಿತ್ಯೇಕಾಕ್ಷರಂ ಬ್ರಹ್ಮ ಓಂಕಾರೇ ವಿಶ್ವಮೂರ್ತಯೇ ||'' ಇಂತೆಂದುದಾಗಿ, ಇದಕ್ಕೆ ಈಶ್ವರ ಉವಾಚ : ``ಅಕಾರೋಕಾರ ಸಂಯೋಗ ಓಂಕಾರಃ ಸ್ವರ ಉಚ್ಯತೇ | ಓಮಿತ್ಯೇಕಾಕ್ಷರಂ ಬ್ರಹ್ಮ ವದಂತಿ ಶಿವಯೋಗಿನಃ ||'' ಇಂತೆಂದುದಾಗಿ, ಇದಕ್ಕೆ ಮಹಾಗಮಸಾರೇ : ``ಓಂಕಾರೇ ತ್ರಿಗುಣಾತ್ಮಾ ಚ ತದರ್ಭೇತಿ ತ್ರಿಯಕ್ಷರಂ | ಅಕಾರೇ ಚ ಉಕಾರೇ ಚ ಮಕಾರೇ ಚ ತ್ರಿಯಕ್ಷರಂ || ಅಕಾರಂ ನಾದರೂಪೇಣ ಉಕಾರಂ ಬಿಂದುರುಚ್ಯತೇ | ಮಕಾರಂತು ಕಲಾಚೈವ ನಾದಬಿಂದುಕಲಾತ್ಮನೇ | ನಾದಬಿಂದುಕಲಾಯುಕ್ತೋ ಓಂಕಾರೋ ಪರಮೇಶ್ವರಃ ||'' ಇಂತೆಂದುದಾಗಿ, ಇದಕ್ಕೆ ಗೀತಸಾರೇ : ``ಪೃಥಿವಿಶ್ಚಾಗ್ನಿಶ್ಚ ಋಗ್ವೇದೋ ಭೂರಿತ್ಯೇವ ಪಿತಾಮಹಃ | ಅಕಾರೇ ತು ಲಯಂ ಪ್ರಾಪ್ತೇ ಪ್ರಥಮೇ ಪ್ರಣವಾಂಶಿಕೈಃ || ಅಂತರಿಕ್ಷಂ ಯಜುರ್ವೇದಂ ಭುಜೋವಿಷ್ಣುಃ ಸನಾತನವಃ | ಉಕಾರೇತು ಲಯಂ ಪ್ರಾಪ್ತೇ ದ್ವಿತಿಯೈೀ ಪ್ರಣವಾಂಶಿಕೇ || ದಿವಿ ಸೂರ್ಯಂ ಸಾಮವೇದಸ್ಸ್ಯೋರಿತ್ಯೇವ ಮಹೇಶ್ವರಃ | ಮಕಾರೇ ತು ಲಯಂ ಪ್ರಾಪ್ತೇ ತೃತೀಯೇ ಪ್ರಣವಾಂಶಿಕೇ | ಅಕಾರೇ ಚ ಉಕಾರೇ ಚ ಮಕಾರೇ ಚ ತ್ರಿಯಕ್ಷರಂ | ಇದಮೇಕಂ ಸಮುತ್ಪನ್ನಂ ಓಮಿತಿ ಜ್ಯೋತಿರೂಪಕಂ || ಒಂಕಾರ ಪ್ರಭವಾತ್ಸರ್ವಂ ತ್ರೈಲೋಕ್ಯಂ ಸಚರಾಚರಂ | ಓಮಿತ್ಯೇಕಾಕ್ಷರಂ ಬ್ರಹ್ಮ ಹೃತ್ಪದ್ಮೇಪಿ ವ್ಯವಸ್ಥಿತಂ | ಸದ್ಯೋದಹತಿ ಪಾಪಾನಿ ದೀರ್ಘೋ ಮೋಕ್ಷಂ ಪ್ರಯಚ್ಛತಿ ||'' ಇಂತೆಂದುದಾಗಿ, ಇದಕ್ಕೆ ಪ್ರಣವೋಪನಿಷತ್ : ಅಕಾರವೆಂಬ ಪ್ರಣವದಲ್ಲಿ - ``ಅಗ್ನಿಶ್ಚ ಋಗ್ವೇದೋ ಭವತಿ | ಒಂ ರುದ್ರೋ ದೇವತಾ | ಅಕಾರೇಚ ಲಯಂ ಪ್ರಾಪ್ತೇ ಪ್ರಥಮಂ ಪ್ರಣವಾಂಶಿಕೇ ||'' ಉಕಾರವೆಂಬ ಪ್ರಣಮದಲ್ಲಿ- ``ಅಂತರಿಕ್ಷಜುರ್ವೇದಾದ್ಭವತಿ | ಓಮೀಶ್ವರೋ ದೇವತಾ | ಉಕಾರೇ ಚ ಲಯಂ ಪ್ರಾಪ್ತೇ ದ್ವಿತೀಯಂ ಪ್ರಣವಾಂಶಿಕೇ ||'' ಮಕಾರವೆಂಬ ಪ್ರಣವದಲ್ಲಿ- ``ವಿದ್ಯೇಸ್ಸಾಮವೇದಾ ಭವತಿ | ಓಂ ಸದಾಶಿವೋ ದೇವತಾ | ಮಕಾರೇ ಚ ಲಯಂ ಪ್ರಾಪ್ತೇ ತೃತೀಯಂ ಪ್ರಣವಾಂಶಿಕೇ || ಅಕಾರೇ ಚ ಉಕಾರೇ ಚ ಮಕಾರೇ ಚ ತೃತೀಯಕಂ | ಇದಮೇಕಂ ಸಮುತ್ಪನ್ನಂ ಓಮಿತಿ ಜ್ಯೋತಿರೂಪಕಂ || ಓಂಕಾರಪ್ರಭವಾ ವೇದಾ ಓಂಕಾರ ಪ್ರಭವಾತ್ಸ್ವರಾಃ | ಓಂಕಾರಪ್ರಭವಾತ್ಸರ್ವಂ ತ್ರೈಲೋಕ್ಯಂ ಸಚರಾಚರಂ || ಸರ್ವವ್ಯಾಪಕಮೋಂಕಾರಂ ಮಂತ್ರನ್ಯತ್ರ ನ ಭವೇತ್ | ಪ್ರಣವಂ ಹಿ ಪರಂ ಬ್ರಹ್ಮಂ ಪ್ರಣವಂ ಪರಮಂ ಪದಂ | ಓಂಕಾರಂ ನಾದರೂಪಂ ಚ ಓಂಕಾರಂ ಮಂತ್ರರೂಪಕಂ | ಓಂಕಾರಂ ವ್ಯಾಪಿ ಸರ್ವತ್ರ ಓಂಕಾರಂ ಗೋಪ್ಯಮಾನನಂ ||'' ಇಂತೆಂದುದಾಗಿ, ಇದಕ್ಕೆ ಈಶ್ವರ ಉವಾಚ : ``ಪ್ರಣಮಂ ನಕಾರರೂಪಂ ಚ | ಓಂಕಾರಂ ಮಂತ್ರರೂಪಕಂ | ಓಂಕಾರಂ ವ್ಯಾಪಿ ಸರ್ವತ್ರ | ಪ್ರಣವಂ ಮಕಾರರೂಪಕಂ || ಪ್ರಣವಂ ಶಿಕಾರರೂಪಂ ಚ | ಪ್ರಣವಂ ವಕಾರರೂಪಕಂ | ಪ್ರಣವಂ ಯಕಾರರೂಪಂ ಚ | ಪ್ರಣವಂ ಷಡಕ್ಷರಮಯಂ | ಇತಿ ಪ್ರಣವ ವಿಜ್ಞೇಯಂ | ಗುಹ್ಯಾದ್ಗುಹ್ಯಂ ವರಾನನೇ ||'' ಇಂತೆಂದುದಾಗಿ, ಇದಕ್ಕೆ ಯರ್ಜುವೇದೋಪನಿಷತ್ : ``ಓಮಿತ್ಯೇಕಾಕ್ಷರಂ ಬ್ರಹ್ಮ ನಮಃ ಶಿವಾಯೇತ್ಯ ಜಾಯತ ||'' ಇಂತೆಂದುದಾಗಿ, ಇದಕ್ಕೆ ಶ್ರೀರುದ್ರೇ : ``ಓಂ ನಮಃ ಶಿವಾಯ ಚ ಶಿವ ತರಾ ಯ ಚ ||'' ಇಂತೆಂದುದಾಗಿ, ಇದಕ್ಕೆ ಅಥರ್ವಣವೇದೇ : ``ಓಂಕಾರೋಭ್ಯೋ ಜಗಕ್ಷೇತ್ರಾ | ಯಜಿತಾಂ ಪತಯೇ ನಮೋ ನಮೋ | ಅಕಾರೇಭ್ಯೋ ಬ್ರಹ್ಮಕ್ಷೇತ್ರಾಯ | ಕ್ಷೇತ್ರಾನಾಂ ಪತಯೇ ನಮೋ ನಮೋ | ಉಕಾರೇಭ್ಯೋ ವಿಷ್ಣುಕ್ಷೇತ್ರಾಯ | ಕ್ಷೇತ್ರಾನಾಂ ಪತಯೇ ನಮೋ ನಮೋ | ಮಕಾರೇಭ್ಯೋ ರುದ್ರಕ್ಷೇತ್ರಾಯ | ಕ್ಷೇತ್ರಾನಾಂ ಪತಯೇ ನಮೋ ನಮೋ | ಓಂಕಾರೇಭ್ಯೋ ಅಧ್ವಕ್ಷೇತ್ರಾಯ | ಕ್ಷೇತ್ರಾನಾಂ ಪತಯೇ ನಮೋ ನಮೋ | ನಮಃ ಶಿವಾಯೇಭ್ಯೋ ಸರ್ವ | ಕ್ಷೇತ್ರಾನಾಂ ಪತಯೇ ನಮೋ ನಮೋ ||'' ಇಂತೆಂದುದಾಗಿ, ಪ್ರಣವವ ಬಲ್ಲಾತನೆ ಬ್ರಾಹ್ಮಣನು. ಪ್ರಣವವ ಬಲ್ಲಾತನೆ ವೇದಾಧ್ಯಾಯಿ. ಪ್ರಣವವ ಬಲ್ಲಾತನೆ ಆಗಮಿಕನು. ಪ್ರಣವವ ಬಲ್ಲಾತನೆ ಶಾಸ್ತ್ರಿಕನು. ಪ್ರಣವವ ಬಲ್ಲಾತನೆ ಪುರಾಣಿಕನು. ಪ್ರಣವವ ಬಲ್ಲಾತನೆ ದಿವ್ಯಯೋಗಿ. ಪ್ರಣವವ ಬಲ್ಲಾತನೆ ನಿಜಾನಂದಯೋಗಿ. ಪ್ರಣವವ ಬಲ್ಲಾತನೆ ಪರಮಜ್ಞಾನಿ. ಪ್ರಣವವ ಬಲ್ಲಾತನೆ ಪರಮಯೋಗಿ. ಪ್ರಣವವ ಬಲ್ಲಾತನೆ ಪರಮಾನಂದಯೋಗಿ. ಪ್ರಣವವ ಬಲ್ಲಾತನೆ ನಿಜಯೋಗಿ. ಪ್ರಣವವ ಬಲ್ಲಾತನೆ ಶಿವಯೋಗಿ. ಪ್ರಣವವ ಬಲ್ಲಾತನೆ ಶಿವಾನಂದಯೋಗಿ. ಪ್ರಣವವ ಬಲ್ಲಾತನೆ ಜ್ಞಾನಯೋಗಿ. ಪ್ರಣವವ ಬಲ್ಲಾತನೆ ಜ್ಞಾನಾನಂದಯೋಗಿ. ಪ್ರಣವವ ಬಲ್ಲಾತನೆ ನಮ್ಮ ಅಪ್ರಮಾಣಕೂಡಲಸಂಗಮದೇವ.
--------------
ಬಾಲಸಂಗಯ್ಯ ಅಪ್ರಮಾಣ ದೇವ
-->